ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version