Connect with us

ದಿನದ ಸುದ್ದಿ

ಹಳೇಬಿಸಲೇರಿ ಎನ್ ಎಸ್ ಎಸ್ ಶಿಬಿರ | ಅಗ್ನಿಶಾಮಕದಳದಿಂದ ಅಣಕು ಪ್ರದರ್ಶನ

Published

on

ಸುದ್ದಿದಿನ, ದಾವಣಗೆರೆ : ಜಿಲ್ಲೆಯ ಹಳೇಬಿಸಲೇರಿ ಗ್ರಾಮದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಬುಧವಾರ ಅಗ್ನಿ ಅವಘಡ ತಡೆಗಟ್ಟುವಿಕೆಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿ ಮೂಡಿಸುವ ಕುರಿತು ಅಣಕು ಪ್ರದರ್ಶನ ನೀಡಿತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ, ಮುದಹದಡಿ ಗ್ರಾಮ ಪಂಚಾಯಿತಿ ಮತ್ತು ಹಳೆಬಿಸಲೇರಿ ಹಾಗೂ ದುರ್ಗಾಂಬಿಕ ಕ್ಯಾಂಪ್ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡಿರುವ ಶಿಬಿರದಲ್ಲಿ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿ ಮುನಿಸ್ವಾಮಿ ಅವರು ಮಾತನಾಡಿದರು.

ಅಗ್ನಿ ಶಾಮಕ ಇಲಾಖೆ ಸಿಬ್ಬಂದಿ ಮುನಿಸ್ವಾಮಿ ಮಾತನಾಡಿ, ರಾಸಾಯನಿಕ ಪ್ರಕ್ರಿಯೆಗಳಿಂದ ಹುಟ್ಟಿಕೊಳ್ಳುವುದನ್ನು ಬೆಂಕಿ ಎನ್ನಲಾಗುವುದು. ನಾನಾ ವಸ್ತುಗಳಿಗೆ ತಗಲುವ ಬೆಂಕಿಯನ್ನು ಬೇರೆ ಬೇರೆ ವಿಧಗಳಲ್ಲಿ ನಂದಿಸಲಾಗುತ್ತದೆ ಎಂದರು.

ಎಲ್ಲದಕ್ಕೂ ನೀರು ಬಳಕೆ ಮಾಡುವುದು ಯೋಗ್ಯವಲ್ಲ. ಕೆಲ ಬಾರಿ ನೀರಿನಿಂದ ಕೂಡ ಅಗ್ನಿ ಹೆಚ್ಚಾಗುವ ಸಂಭವ ಇರುತ್ತವೆ. ಸಾರ್ವಜನಿಕರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದರೆ 108ಗೆ ಕರೆ ಮಾಡಬಹುದು, ಅಲ್ಲಿಂದ ಅಗ್ನಿ ಶಾಮಕದಳಕ್ಕೆ ಮಾಹಿತಿ ದೊರೆಯುತ್ತದೆ ಎಂದರು. ಅಗ್ನಿ ಶಾಮಕ ಸಿಬ್ಬಂದಿ, ಅಣಕ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿತು.

ಸಹ ಪ್ರಾಧ್ಯಾಪಕ ಡಾ.ಕೆ ನಾರಾಯಣ ಸ್ವಾಮಿ ಅವರು ಪರಿಸರ ಜಾಗೃತಿ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಕುಂದೂರುಮುರಿಗೆಪ್ಪ ಸ.ಹಿ. ಪ್ರಾ. ಶಾಲಾ ಕಟ್ಟಡದ ಮೊದಲ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕಗಳು ಮತ್ತು ಲೇಖನಸಾಮಾಗ್ರಿಗಳ ವಿತರಿಸಲಾಯಿತು. ಎನ್ ಎಸ್ ಎಸ್ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ ಸವಿತಾ ಮೇಗಳಮನಿ, ಸಹಾಯಕ ಪ್ರಾಧ್ಯಾಪಕಿ ವಿಶಾಲಾಕ್ಷಿ ಸಿ.ಎಸ್, ಡಾ.ಪ್ರಭು ಹಾಗೂ ಬಿಸಲೇರಿ ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending