ದಿನದ ಸುದ್ದಿ

ಬಿಜೆಪಿ ಪ್ರಣಾಳಿಕೆಯಲ್ಲಿ ಕೃಷಿ, ನೀರಾವರಿಗೆ ಆದ್ಯತೆ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬೆಂಗಳೂರಿನಲ್ಲಿಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಕೃಷಿ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪಡಿತರ ವ್ಯವಸ್ಥೆಯಲ್ಲಿ ಈಗ ನೀಡಲಾಗುತ್ತಿರುವ 5 ಕೆ.ಜಿ. ಅಕ್ಕಿಯ ಜೊತೆಗೆ, 5 ಕೆ.ಜಿ. ಸಿರಿಧಾನ್ಯಗಳನ್ನು ನೀಡಲಾಗುವುದು. ಸಿರಿಧಾನ್ಯ ಮತ್ತು ಮೀನುಗಾರಿಕಾ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.

ಚುನಾವಣಾ ಪ್ರಣಾಳಿಕೆ ಸಿದ್ದಪಡಿಸುವ ಮುನ್ನ ವಿಷಯ ತಜ್ಞರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ. 170ಕ್ಷೇತ್ರಗಳಲ್ಲಿ ಸಲಹೆ ಪಡೆದ ಬಳಿಕ ಪ್ರಣಾಳಿಕೆಯನ್ನು ಅಂತಿಮಗೊಳಿಸಲಾಗಿದೆ. ಈ ಪ್ರಣಾಳಿಕೆಯು ರಾಜ್ಯದ ಶ್ರೇಯೋಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version