ದಿನದ ಸುದ್ದಿ
ಎಎಚ್-64ಇ ಅಪಾಚೆ ಹೆಲಿಕಾಪ್ಟರ್
ಸುದ್ದಿದಿನ ಡೆಸ್ಕ್ : ದಾಳಿ ನಡೆಸುವ ಸಾಮರ್ಥ್ಯವೂ ಸೇರಿ ಬಹೂಪಯೋಗಿಯಾದ ಆರು ಎಎಚ್-64ಇ ಅಪಾಚೆ ಹೆಲಿಕಾಪ್ಟರ್ಗಳನ್ನು ಭಾರತಕ್ಕೆ ಪೂರೈಸುವ ಒಪ್ಪಂದಕ್ಕೆ ಅಮೆರಿಕ ಸರ್ಕಾರ ಒಪ್ಪಿಗೆ ನೀಡಿದ್ದು, ಅನುಮೋದನೆಗಾಗಿ ಕಾಂಗ್ರೆಸ್ಗೆ (ಸಂಸತ್) ಕಳುಹಿಸಲಿದೆ.
ಈ ಒಪ್ಪಂದದ ಬಗ್ಗೆ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಮೆರಿಕದ ತಮ್ಮ ಸಹವರ್ತಿಗಳಾದ ಮೈಕ್ ಪೊಂಪೇ ಮತ್ತು ಜೇಮ್್ಸ ಮಾಟಿಸ್ ಜತೆ ಮುಂದಿನ ತಿಂಗಳು ಚರ್ಚೆ ನಡೆಸಲಿದ್ದಾರೆ. ತದ ನಂತರ ಈ ಪ್ರಸ್ತಾವ ಅಮೆರಿಕ ಕಾಂಗ್ರೆಸ್ ಮುಂದೆ ಬರಲಿದೆ.
ಅಮೆರಿಕದ ಬೋಯಿಂಗ್ ಮತ್ತು ಭಾರತದ ಟಾಟಾ ಸಂಸ್ಥೆಗಳ ನಡುವಿನ ಒಪ್ಪಂದದ ಪ್ರಕಾರ ಹೆಲಿಕಾಪ್ಟರ್ನ ಕವಚ ತಯಾರಿಕೆ ಮತ್ತು ಜೋಡಣೆ ಭಾರತದ ಘಟಕದಲ್ಲಿ ಆಗಬೇಕಿತ್ತು. ಆದರೀಗ ಅಮೆರಿಕ ಸಂಪೂರ್ಣವಾಗಿ ಸಿದ್ಧಗೊಂಡ ಹೆಲಿಕಾಪ್ಟರ್ಗಳನ್ನೇ ಪೂರೈಸಲು ಸಮ್ಮತಿಸಿದೆ.
ಇದೇ ಮಾದರಿಯ ಅಪಾಚೆ ಹೆಲಿಕಾಪ್ಟರ್ಗಳನ್ನು ಗ್ರೀಸ್, ಜಪಾನ್, ಇಸ್ರೇಲ್, ನೆದರ್ಲೆಂಡ್, ಸಿಂಗಾಪುರ, ಯುಎಇ, ಬ್ರಿಟನ್ಗಳು ಬಳಸುತ್ತಿವೆ. ಅಮೆರಿಕದ ಎಎಚ್-64ಇ ಅಪಾಚೆ ಹೆಲಿಕಾಪ್ಟರ್ಗಳು ಪನಾಮ, ಪರ್ಷಿಯನ್ ಕೊಲ್ಲಿ, ಕೊಸೊವೊ, ಅಫ್ಘಾನಿಸ್ತಾನ, ಇರಾಕ್, ಲೆಬನಾನ್, ಗಾಜಾಪಟ್ಟಿಯಲ್ಲಿ ಸಂಘರ್ಷ ಉಂಟಾದಾಗ ಬಳಕೆಯಾಗಿದೆ.
ನಿರ್ಮಾಣ ಗುತ್ತಿಗೆ ಯಾರಿಗೆ?
ಈ ಹೆಲಿಕಾಪ್ಟರ್ ನಿರ್ವಣದ ಗುತ್ತಿಗೆಯನ್ನು ಲಾಕ್ಹೀದ್ ಮಾರ್ಟಿನ್, ಜನರಲ್ ಇಲೆಕ್ಟ್ರಾನಿಕ್ಸ್ ಮತ್ತು ರೇಥಿಯೋನ್ ಕಂಪನಿಗಳು ಪಡೆದುಕೊಂಡಿವೆ.
ಭಾರತಕ್ಕೇನು ಲಾಭ?
ಭಾರತೀಯ ಸೇನೆಯ ಬಲ ವೃದ್ಧಿ, ದೇಶದೊಳಗೆ ಮತ್ತು ಪ್ರಾದೇಶಿಕ ವ್ಯಾಪ್ತಿಯಲ್ಲಿ ಎದುರಾಗುವ ಬೆದರಿಕೆಯನ್ನು ಈ ಹೆಲಿಕಾಪ್ಟರ್ ಮೂಲಕ ಹೋಗಲಾಡಿಸಿಕೊಳ್ಳಬಹುದು.
ಹೆಲಿಕಾಪ್ಟರ್ ವಿಶೇಷವೇನು?
* ಎರಡು ಟರ್ಬೋಶಾಫ್ಟ್
* ಎರಡು ಗಾಲಿಗಳು
* ಟ್ಯಾಂಡಮ್ ಕಾಕ್ಪಿಟ್, ಇಬ್ಬರು ಪೈಲಟ್ ಕೂರಲು * ಅವಕಾಶ
* ಹೆಲಿಕಾಪ್ಟರ್ನ ಮುಂಭಾಗದ ತುದಿಯಲ್ಲಿ (ನೋಸ್) ಸೆನ್ಸಾರ್ ಸಾಧನ
ಹೆಲಿಕಾಪ್ಟರ್ನಲ್ಲಿ ಏನಿರಲಿದೆ?
ಬೆಂಕಿ ನಿರೋಧಕ ರಾಡರ್ಗಳು ರಾತ್ರಿ ಸಮಯದಲ್ಲಿ ಸ್ಪಷ್ಟ ವೀಕ್ಷಣೆಗೆ ಅನುಕೂಲವಾಗುವ ಸೆನ್ಸಾರ್ ದಿಕ್ಸೂಚಿ ನೀಡುವ ಜಿಪಿಎಸ್ ದಾಳಿ ತಡೆಯುವ ಸುರಕ್ಷಾ ಕವಚ
ಗಗನದಿಂದ ಗಗನಕ್ಕೆ ಚಿಮ್ಮುವ ಕ್ಷಿಪಣಿ (ಬ್ಲಾಕ್ ಐ-92ಎಚ್) ಹೆಲ್ಫೈರ್ ಲಾಂಗ್ಬೋ ಕ್ಷಿಪಣಿ ಹೈಡ್ರಾ ರಾಕೆಟ್ಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!