ದಿನದ ಸುದ್ದಿ
ಗ್ರಾಹಕರಿಗೆ ಆನ್ಲೈನ್ ಪಯಣವನ್ನು ಹೆಚ್ಚು ಸುರಕ್ಷಿತವಾಗಿಸಲು ಕ್ಯಾಸ್ಪರ್ಸ್ಕೈ ಜತೆ ಕೈಜೋಡಿಸಿದ ಏರ್ಟೆಲ್
ಸುದ್ದಿದಿನ,ಬೆಂಗಳೂರು : ಜಾಗತಿಕ ಸೈಬರ್ ಸೆಕ್ಯುರಿಟಿ ಕಂಪನಿ ಕ್ಯಾಸ್ಪರ್ಸ್ಕೈ ಭಾರತದ ಅಂತರ್ಜಾಲ ಬಳಕೆದಾರರಿಗೆ ತ್ವರಿತ ಭದ್ರತೆ ಒದಗಿಸುವ ಸಲುವಾಗಿ ಭಾರತದ ಪ್ರಮುಖ ಸಂವಹನ ಪರಿಹಾರ ಪೂರೈಕೆದಾರ ಕಂಪನಿಯಾದ ಭಾರ್ತಿ ಏರ್ಟೆಲ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ.
ಎರಡು ಕಂಪನಿಗಳ ನಡುವಿನ ಸಹಯೋಗವು ಏರ್ಟೆಲ್ ಗ್ರಾಹಕರಿಗೆ ಕ್ಯಾಸ್ಪರ್ಸ್ಕೈನ ಒಟ್ಟು ಭದ್ರತಾ ಪರಿಹಾರವನ್ನು ಏರ್ಟೆಲ್ ಥ್ಯಾಂಕ್ಸ್ ಆ್ಯಪ್ನಿಂದ ನೇರವಾಗಿ ಕೆಲವು ಕ್ಲಿಕ್ಗಳಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಭಾರತೀಯ ಅಂತರ್ಜಾಲ ಬಳಕೆದಾರರಲ್ಲಿ ಸೈಬರ್ ಸುರಕ್ಷತೆಯ ಅರಿವನ್ನು ಹೆಚ್ಚಿಸುವ ಮತ್ತು ಸೈಬರ್ ಬೆದರಿಕೆಗಳ ಹಿನ್ನೆಲೆಯಲ್ಲಿ ಸೈಬರ್ ಸುರಕ್ಷತೆಯನ್ನು ಅಭ್ಯಾಸ ಮಾಡಲು ಪ್ರೋತ್ಸಾಹಿಸುವ ಗುರಿಯೊಂದಿಗೆ ಈ ಒಕ್ಕೂಟವನ್ನು ರಚಿಸಲಾಗಿದೆ.
ಸೈಬರ್ ಬೆದರಿಕೆಗಳು ನಿರಂತರವಾಗಿ ವಿಕಸನಗೊಳ್ಳುತ್ತಿವೆ ಮತ್ತು ಕಳೆದ 2 ವರ್ಷಗಳಲ್ಲಿ ಸೈಬರ್ ಅಪರಾಧಿಗಳು ಭಾರತದಲ್ಲಿ ಇಂಟರ್ನೆಟ್ ಬಳಕೆದಾರರನ್ನು ಸಕ್ರಿಯವಾಗಿ ಗುರಿಯಾಗಿಸಿಕೊಂಡಿದ್ದಾರೆ. 2021 ರ ಮೊದಲ ತ್ರೈಮಾಸಿPದಲ್ಲಿ ಕ್ಯಾಸ್ಪರ್ಸ್ಕೈ ಉತ್ಪನ್ನಗಳು 37,650,472 ವಿವಿಧ ಅಂತರ್ಜಾಲದಿಂದ ಹರಡುವ ಸೈಬರ್ ಬೆದರಿಕೆಗಳನ್ನು ಪತ್ತೆ ಮಾಡಿವೆ. ಮೊಬೈಲ್ ಬಳಕೆದಾರರು ಕೂಡ ಅಪಾಯದಲ್ಲಿದ್ದಾರೆ, ಏಕೆಂದರೆ ಸೈಬರ್ ಅಪರಾಧಿಗಳು ನಿರಂತರವಾಗಿ ಹಣಕಾಸಿನ ಲಾಭಕ್ಕಾಗಿ ಮತ್ತು ಪ್ರಮುಖ ಖಾಸಗಿ ಡೇಟಾವನ್ನು ಪಡೆಯಲು ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಭಾರತದಲ್ಲಿ ಮೊಬೈಲ್ ಬೆದರಿಕೆಗಳು 2019 ರಿಂದ ತೀವ್ರವಾಗಿ ಹೆಚ್ಚಾಗಿದೆ ಮತ್ತು ಈ ಬಗೆಯ ಗುರಿ ಹೆಚ್ಚು ಅತ್ಯಾಧುನಿಕ ಸ್ವರೂಪದ್ದಾಗುತ್ತಿದೆ. 2020 ರಲ್ಲಿ ಮೊಬೈಲ್ ಬೆದರಿಕೆಗಳಿಂದ ದಾಳಿಗೊಳಗಾದ ದೇಶಗಳಲ್ಲಿ ಭಾರತ 7ನೇ ಸ್ಥಾನದಲ್ಲಿದೆ.
ಜಾಗತಿಕವಾಗಿ ಸ್ಮಾರ್ಟ್ ಫೋನ್ ಬಳಕೆದಾರರನ್ನು ಪ್ರಮುಖ ಮೊಬೈಲ್ ಬೆದರಿಕೆಗಳು ಗುರಿ ಮಾಡಿದ್ದು, ಆ್ಯಡ್ವೇರ್ 57% (3,254,387 ಪತ್ತೆ) ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇತರ ಅಪಾಯಗಳ ಬಗ್ಗೆ ಮಾತನಾಡುತ್ತಾ, ಬ್ಯಾಕ್ಡೋರ್ಸ್ ಪ್ರಕರಣಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. 2019ರಲ್ಲಿ 28,889 ಇದ್ದುದು 2020 ರಲ್ಲಿ 84,495 ಕ್ಕೆ ಹೆಚ್ಚಿದೆ.
ಪತ್ತೆಯಾದ ಆಂಡ್ರಾಯ್ಡ್ ಶೋಷಣೆಗಳ ಸಂಖ್ಯೆ ಹದಿನೇಳು ಪಟ್ಟು ಹೆಚ್ಚಾಗಿದೆ ಮತ್ತು ಟ್ರೋಜನ್-ಪ್ರಾಕ್ಸಿ ಬೆದರಿಕೆಗಳ ಸಂಖ್ಯೆ ಹನ್ನೆರಡು ಪಟ್ಟು ಹೆಚ್ಚಾಗಿದೆ. ಕ್ಯಾಸ್ಪರ್ಸ್ಕೈ ಪರಿಹಾರಗಳು 2020 ರಲ್ಲಿ ಮೊಬೈಲ್ ಬ್ಯಾಂಕಿಂಗ್ ಟ್ರೋಜನ್ಗಳಿಗಾಗಿ 156,710 ಇನ್ಸ್ಟಾಲೇಶನ್ ಪ್ಯಾಕೇಜ್ಗಳನ್ನು ಪತ್ತೆ ಮಾಡಿವೆ, ಇದು 2019 ರಲ್ಲಿ ಪತ್ತೆಯಾದ ದಾಳಿಗಳ ಎರಡು ಪಟ್ಟು ಅಧಿಕ. ಆದಾಗ್ಯೂ, 2020 ರಲ್ಲಿ ರ್ಯಾನ್ಸಮ್ವೇರ್ ಟ್ರೋಜನ್ಗಳಿಗಾಗಿ 20,708 ಇನ್ಸ್ಟಾಲೇಶನ್ ಪ್ಯಾಕೇಜ್ಗಳನ್ನು ನಾವು ಕಂಡುಕೊಂಡಿದ್ದರಿಂದ ಹಿಂದಿನ ವರ್ಷಕ್ಕೆ ಹೋಲಿಸಿದರೆ ರ್ಯಾನ್ಸಮ್ವೇರ್ ಟ್ರೋಜನ್ಗಳು 3.5 ಪಟ್ಟು ಕುಸಿತ ಕಂಡಿವೆ.
ಕ್ಯಾಸ್ಪರ್ಸ್ಕೈ ಸಿಇಒ ಯುಜೀನ್ ಕಾಸ್ಪರ್ಸ್ಕೈ ಈ ಬಗ್ಗೆ ಮಾತನಾಡಿ, “ತಮ್ಮ ಗ್ರಾಹಕರಿಗೆ ಸುರಕ್ಷೆ ಒದಗಿಸುವ ಸಲುವಾಗಿ ಪ್ರಮುಖ ಜಾಗತಿಕ ದೂರಸಂಪರ್ಕ ಕಂಪನಿ ಮತ್ತು ಅತಿದೊಡ್ಡ ಮೊಬೈಲ್ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರ್ತಿ ಏರ್ಟೆಲ್ ಜತೆಗೆ ಹೆಚ್ಚು ಸುರಕ್ಷಿತ ಇಂಟರ್ನೆಟ್ ಅನ್ನು ಸೃಷ್ಟಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ, ಮತ್ತು ಕ್ಯಾಸಪರ್ಸ್ಕೈಯೊಂದಿಗೆ ಸುರಕ್ಷಿತ ಡಿಜಿಟಲ್ ಜಗತ್ತನ್ನು ನಿರ್ಮಿಸುವ ಮೂಲಕ ಈ ಪಾಲುದಾರಿಕೆಯು ಏರ್ಟೆಲ್ ಅನ್ನು ಹೊಸತನದ ಪ್ರವರ್ತಕ ಮತ್ತು ಅದರ ಉದ್ಯಮದಲ್ಲಿ ನಾಯಕನಾಗಿ ಸ್ಥಾಪಿಸಲು ಮತ್ತಷ್ಟು ಕೊಡುಗೆ ನೀಡುತ್ತದೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.
ಭಾರ್ತಿ ಏರ್ಟೆಲ್ ಸಿಇಓ ಪ್ರದೀಪ್ ಕಪೂರ್ ಮಾತನಾಡಿ, “ಗ್ರಾಹಕರ ಜೀವನ ಶೈಲಿಯು ಡಿಜಿಟಲ್ ಪ್ಲಾಟ್ಫಾರ್ಮ್ಗಳೊಂದಿಗೆ ಹೆಚ್ಚು ಸಂಯೋಜಿತವಾಗುತ್ತಿದ್ದಂತೆ, ಈ ಪಯಣವನ್ನು ಸರಿಯಾದ ಪರಿಹಾರಗಳೊಂದಿಗೆ ಭದ್ರಪಡಿಸುವುದು ನಮಗೆಲ್ಲರಿಗೂ ಅತಿಮುಖ್ಯವಾಗಿದೆ. ಏರ್ಟೆಲ್ ಜಾಗತಿಕ ಮಟ್ಟದ ಮೂಲಸೌಕರ್ಯ ಮತ್ತು ಪಾಲುದಾರಿಕೆಗಳ ಮೂಲಕ ಸುರಕ್ಷಿತ ನೆಟ್ವರ್ಕ್ ಅನುಭವವನ್ನು ನೀಡಲು ಹಗಲಿರುಳೂ ಕೆಲಸ ಮಾಡುತ್ತಿದೆ.
ಕ್ಯಾಸ್ಪರ್ಸ್ಕೈಯೊಂದಿಗೆ ಪಾಲುದಾರಿಕೆ ಹೊಂದಲು ಮತ್ತು ಅವರ ಪರಿಹಾರಗಳನ್ನು ಏರ್ಟೆಲ್ ಗ್ರಾಹಕರಿಗೆ ಸುಲಭವಾಗಿ ತಲುಪುವಂತೆ ಮಾಡಲು ನಾವು ಸಂತೋಷಪಡುತ್ತೇವೆ, ಅವರು ಇದನ್ನು ಕೆಲವೇ ನಿಮಿಷಗಳಲ್ಲಿ ಖರೀದಿಸಬಹುದು ಮತ್ತು ಸ್ಥಾಪಿಸಬಹುದು ಮತ್ತು ಸಂಪೂರ್ಣ ಮನಸ್ಸಿನ ಶಾಂತಿಯನ್ನು ಆನಂದಿಸಬಹುದು” ಎಂದು ಬಣ್ಣಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


