ದಿನದ ಸುದ್ದಿ
ದಾವಣಗೆರೆಯಲ್ಲಿ ಆಕಾಶ್+ಬೈಜೂಸ್ ಮೊದಲ ಕ್ಲಾಸ್ರೂಂ ಸೆಂಟರ್ ಆರಂಭ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/05/akash_byjus_suddidina.jpg&description=ದಾವಣಗೆರೆಯಲ್ಲಿ ಆಕಾಶ್+ಬೈಜೂಸ್ ಮೊದಲ ಕ್ಲಾಸ್ರೂಂ ಸೆಂಟರ್ ಆರಂಭ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/05/akash_byjus_suddidina.jpg&description=ದಾವಣಗೆರೆಯಲ್ಲಿ ಆಕಾಶ್+ಬೈಜೂಸ್ ಮೊದಲ ಕ್ಲಾಸ್ರೂಂ ಸೆಂಟರ್ ಆರಂಭ', 'pinterestShare', 'width=750,height=350'); return false;" title="Pin This Post">
- ಪರೀಕ್ಷಾ ಸಿದ್ಧತಾ ಸೇವೆಗಳ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಆಕಾಶ್+ಬೈಜೂಸ್ 24 ರಾಜ್ಯಗಳಲ್ಲಿ 275 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ತರಬೇತಿ
- ವಾರ್ಷಿಕ 2.75 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ
- ದಾವಣಗೆರೆಯ ಆಕಾಶ್+ಬೈಜೂಸ್ ಕ್ಲಾಸ್ರೂಂ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಿಗೆ ತಯಾರಿ ನೀಡಲಾಗುತ್ತದೆ ನಡೆಸಲು ತರಬೇತಿ
- ಈ ಕೇಂದ್ರದಲ್ಲಿ 11 ಕ್ಲಾಸ್ರೂಂಗಳಲ್ಲಿ 1200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ
ಸುದ್ದಿದಿನ,ದಾವಣಗೆರೆ: ವೈದ್ಯರು ಮತ್ತು ಐಐಟಿಗಳಾಗಬೇಕೆಂದು ಸಾವಿರಾರು ವಿದ್ಯಾರ್ಥಿಗಳು ಹೊಂದಿರುವ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ದೇಶದಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿರುವ ಆಕಾಶ್+ಬೈಜೂಸ್ ಇದೀಗ ತನ್ನ ಜಾಲವನ್ನು ವಿಸ್ತರಣೆ ಮಾಡುವುದನ್ನು ಮುಂದುವರಿಸಿದ್ದು, ಕರ್ನಾಟಕದ ದಾವಣಗೆರೆಯಲ್ಲಿ ತನ್ನ ಮೊದಲ ಕ್ಲಾಸ್ರೂಂ ಸೆಂಟರ್ ಅನ್ನು ಆರಂಭ ಮಾಡಿದೆ. ಈ ಕ್ಲಾಸ್ರೂಂ ಸೆಂಟರ್ನಲ್ಲಿ 11 ಕ್ಲಾಸ್ರೂಂಗಳಿದ್ದು, ಇಲ್ಲಿ 1200 ವಿದ್ಯಾರ್ಥಿಗಳಿಗೆ ತರಗತಿ ಸೌಲಭ್ಯ ಕಲ್ಪಿಸಲು ಅವಕಾಶವಿದೆ.
ದಾವಣಗೆರೆಯ ನಂ:54/2, 9 ನೇ ಡಿವಿಷನ್, 5 ನೇ ವಾರ್ಡ್, ಎವಿಕೆ ಕಾಲೇಜು ರಸ್ತೆ, ಎವಿಕೆ ಕಾಲೇಜು ಎದುರು, ಜಯಚಾಮರಾಜ ಒಡೆಯರ್ ರಸ್ತೆ- ಇಲ್ಲಿ ಹೊಸ ಆಕಾಶ್+ಬೈಜೂಸ್ ಕ್ಲಾಸ್ರೂಂ ಸೆಂಟರ್ ಆರಂಭವಾಗಿದೆ. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಫೌಂಡೇಶನ್ ಮಟ್ಟದ ಕೋರ್ಸ್ಗಳು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಈ ಕ್ಲಾಸ್ರೂಂ ಸೆಂಟರ್ನಲ್ಲಿ ತರಬೇತಿ ನೀಡಲಾಗುತ್ತದೆ. ಇದಲ್ಲದೇ ಒಲಿಂಪಿಯಾಡ್ ಸೇರಿದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಸೂಕ್ತವಾದ ತರಬೇತಿಯನ್ನು ನೀಡಲಾಗುತ್ತದೆ.
ಈ ಕ್ಲಾಸ್ರೂಂ ಸೆಂಟರ್ ಅನ್ನು ಆಕಾಶ್+ಬೈಜೂಸ್ನ ಪ್ರಾದೇಶಿಕ ನಿರ್ದೇಶಕ ಧೀರಜ್ ಕುಮಾರ್ ಮಿಶ್ರಾ ಅವರು ಕಂಪನಿಯ ಅಧಿಕಾರಿಗಳ ಸಮ್ಮುಖದಲ್ಲಿ ಮಂಗಳವಾರ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆಕಾಶ್+ಬೈಜೂಸ್ನ ವ್ಯವಸ್ಥಾಪಕ ನಿರ್ದೇಶಕ ಆಕಾಶ್ ಚೌಧರಿ ಅವರು, “ಒಲಿಂಪಿಯಾಡ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಮತ್ತು ವೈದ್ಯರು ಹಾಗೂ ಐಐಟಿಯನ್ಗಳಾಗಬೇಕೆಂಬ ಮಹದಾಸೆಯನ್ನು ಹೊಂದಿರುವ ದಾವಣಗೆರೆ ಮತ್ತು ಸುತ್ತಮುತ್ತಲಿನ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಇಂದು ದೇಶಾದ್ಯಂತ ತರಬೇತಿ ಕೇಂದ್ರಗಳ ವಿಸ್ತಾರದ ಮೂಲಕ ಆಕಾಶ್+ಬೈಜೂಸ್ ಸಂಸ್ಥೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಮ್ಮ ಶೈಕ್ಷಣಿಕ ವಿಷಯದ ಗುಣಮಟ್ಟ ಮತ್ತು ನಮ್ಮ ಬೋಧನಾ ವಿಧಾನಗಳ ಪರಿಣಾಮಕಾರಿತ್ವವು ವಿದ್ಯಾರ್ಥಿಗಳ ಆಯ್ಕೆಗಳ ಸಂಖ್ಯೆಯಿಂದ ಸಾಕ್ಷಿಯಾಗಿದೆ. ಪದವಿಪೂರ್ವ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳಿಗೆ ಅರ್ಹತೆ ಪಡೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಆಕಾಶ್+ಬೈಜೂಸ್ ಅತ್ಯುತ್ತಮ ಆಯ್ಕೆಗಳಲ್ಲಿ ಒಂದಾಗಿದೆ” ಎಂದು ತಿಳಿಸಿದರು.
“ದಾವಣಗೆರೆಯಲ್ಲಿ ನಮ್ಮ ಮೊದಲ ಕ್ಲಾಸ್ರೂಂ ಸೆಂಟರ್ ಅನ್ನು ಆರಂಭಿಸುವ ಮೂಲಕ ಕರ್ನಾಟಕದಲ್ಲಿ ನಮ್ಮ ಫೂಟ್ಪ್ರಿಂಟ್ ಅನ್ನು ವಿಸ್ತಾರ ಮಾಡಿಕೊಳ್ಳುತ್ತಿರುವುದಕ್ಕೆ ನಮಗೆ ಸಂತಸವೆನಿಸುತ್ತಿದೆ. ನಮ್ಮ ರಾಷ್ಟ್ರೀಯ ಜಾಲಕ್ಕೆ ಈ ಶಾಖೆಯ ಸೇರ್ಪಡೆಯು ಪ್ರಮಾಣೀಕೃತ ಗುಣಮಟ್ಟದ ಬೋಧನೆ, ಆಧುನಿಕ ಮೂಲಸೌಕರ್ಯ ಮತ್ತು ತಂತ್ರಜ್ಞಾನ ಶಕ್ತಗೊಂಡ ವ್ಯವಸ್ಥೆಯನ್ನು ಬಳಸಿಕೊಂಡು ದೇಶಾದ್ಯಂತ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲಕರವಾದ ವಾತಾವರಣವನ್ನು ನೀಡುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಅವರು ಹೇಳಿದರು.
ಆಕಾಶ್ನಲ್ಲಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಪ್ರವೇಶ/ವಿದ್ಯಾರ್ಥಿ ವೇತನ ಪರೀಕ್ಷೆ(iACST) ಅಥವಾ ಎಎನ್ ಟಿ ಎಚ್ ಇ (ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ)ಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಆಕಾಶ್ನಲ್ಲಿ ನೀಡಲಾಗುವ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ವಿವಿಧ ಪರೀಕ್ಷೆಗಳಿಗೆ ವ್ಯಾಪಕವಾಗಿ ಮತ್ತು ಸಮಗ್ರವಾಗಿ ಸಿದ್ಧಪಡಿಸುತ್ತವೆ. ಇದಲ್ಲದೇ, ಅಳವಡಿಸಿಕೊಂಡ ಬೋಧನಾ ವಿಧಾನವು ಪರಿಕಲ್ಪನಾ ಮತ್ತು ಅಪ್ಲಿಕೇಶನ್-ಆಧಾರಿತ ಕಲಿಕೆಯ ಮೇಲೆ ಕೇಂದ್ರೀಕರಿಸುವ ಮೂಲಕ ಅದನ್ನು ಬ್ಯಾಂಡ್ ಆಗಿ ಪ್ರತ್ಯೇಕಿಸುತ್ತದೆ.
ಆಕಾಶ್ನಲ್ಲಿರುವ ಪರಿಣತ ಅಧ್ಯಾಪಕರು ವಿದ್ಯಾರ್ಥಿಗಳಿಗೆ ತಮ್ಮ ಗುರಿಗಳನ್ನು ಸಾಧಿಸಲು ಸಹಾಯ ಮಾಡುವ ನಿಟ್ಟಿನಲ್ಲಿ ಆಧುನಿಕ ಮತ್ತು ಸಂವಾದಾತ್ಮಕ ಬೋಧನಾ ವಿಧಾನಗಳನ್ನು ಅನುಸರಿಸುತ್ತಾರೆ. ಆಕಾಶ್ನ ಸಾಬೀತಾದ ಯಶಸ್ಸಿನ ದಾಖಲೆಯು ಅದರ ವಿಶಿಷ್ಟ ಶಿಕ್ಷಣ ವಿತರಣಾ ವ್ಯವಸ್ಥೆಗೆ ಕಾರಣವಾಗಿದೆ. ಇದು ಕೇಂದ್ರೀಕೃತ ಮತ್ತು ಫಲಿತಾಂಶ ಆಧಾರಿತ ಬೋಧನಾ ವಿಧಾನಕ್ಕೆ ಒತ್ತು ನೀಡುತ್ತಿದೆ ಎಂದು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ7 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ6 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ3 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ18 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ2 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

