ಅಂತರಂಗ
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
ಸುದ್ದಿದಿನ,ಭದ್ರಾವತಿ: ಆಕಾಶವಾಣಿ ಭದ್ರಾವತಿ ಕೇಂದ್ರದ 60ನೇ ವರ್ಷದ ವಜ್ರಮಹೋತ್ಸವದ ಅಂಗವಾಗಿ ಶಿವಮೊಗ್ಗದ ಕುವೆಂಪು ವಿ.ವಿ.ಯ ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರ ಸಹಯೋಗದಲ್ಲಿ ವಿಶ್ವ ಮಾನವ ಡಾ. ಅಂಬೇಡ್ಕರ್ ಅವರ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿಯನ್ನು ಪ್ರಸಾರ ಮಾಡಲಿದ್ದು, ಜೂನ್ 11 ರಂದು ಬೆಳಗ್ಗೆ 7.15 ಕ್ಕೆ ಕುವೆಂಪು ವಿವಿಯ ಕುಲಪತಿ ಡಾ. ಶರತ್ ಅನಂತಮೂರ್ತಿ ಅವರ ಮುನ್ನುಡಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.
ಈ ಸರಣಿಯಲ್ಲಿ ಒಟ್ಟು 52 ಕಾರ್ಯಕ್ರಮಗಳಿದ್ದು, ಪ್ರತೀ ಮಂಗಳವಾರ ಬೆಳಗ್ಗೆ 7.15 ಕ್ಕೆ ಪ್ರಸಾರ ಮಾಡಲಿದೆ. ಪ್ರಭಾವಿತ ಮಹನೀಯರ ಅನಿಸಿಕೆಯನ್ನು ಹಂಚಿಕೊಳ್ಳುವುದರೊಟ್ಟಿಗೆ ದೇಶವಿದೇಶದ ಕೇಳುಗರು ತಮ್ಮ ಮೇಲೆ ಅಂಬೇಡ್ಕರ್ ಅವರ ಪ್ರಭಾವನ್ನೂ ಆಕಾಶವಾಣಿಯಲ್ಲಿ ಹಂಚಿಕೊಳ್ಳಲು ವಾಟ್ಸ್ ಆಪ್ ಮೂಲಕ ಅವಕಾಶ ಕಲ್ಪಿಸಿದೆ.
ಕಾರ್ಯಕ್ರಮವು FM 103.05 ಹಾಗೂ MW 675 khz ನಲ್ಲಿ ಕೇಳುವುದರೊಟ್ಟಿಗೆ ಜಗತ್ತಿನಾದ್ಯಂತ Akashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಹಾಗೂ Akashavani Bhadravati YouTube ನಲ್ಲಿ ಪ್ರಸಾರದ ನಂತವೂ ಕೇಳಬಹುದು ಎಂದು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243