ದಿನದ ಸುದ್ದಿ
ಅಖಿಲ ಭಾರತ 84 ನೇ ಕನ್ನಡ ಸಾಹಿತ್ಯ ಸಮೇಳನಕ್ಕೆ ಭಾರೀ ಸಿದ್ಧತೆ..!
ಸುದ್ದಿದಿನ, ಧಾರವಾಡ : ಜನೇವರಿ 4, 5ಮತ್ತು 6 ರಂದು ಧಾರವಾಡ ಕೃಷಿ ವಿಶ್ವವಿದ್ಯಾಲದ ಆವರಣದಲ್ಲಿ ಆಯೋಜಿಸುತ್ತಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆ, ಪ್ರತಿನಿಧಿಗಳ ನೊಂದಣಿ ಕೇಂದ್ರ, ಪುಸ್ತಕ ಮಳಿಗೆ, ಊಟದ ಪೆಂಡಾಲ ನಿರ್ಮಿಸುವ ಸ್ಥಳಗಳಿಗೆ ಇಂದು ಮಧ್ಯಾಹ್ನ ಭೇಟಿ ನೀಡಿದ್ದ, ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜಿವನೋಪಾಯ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವ್ಹಿ.ದೇಶಪಾಂಡೆ ಅವರು ಸಮ್ಮೇಳನ ಸಿದ್ಧತೆಗಗಳನ್ನು ಪರಿಶೀಲಿಸಿದರು.
ಮುಖ್ಯ ವೇದಿಕೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ವೇದಿಕೆಯಲ್ಲಿ ಆಸಿನರಾಗುವ ಗಣ್ಯರ ಹೆಸರುಗಳನ್ನು ಮುಂಚಿತವಾಗಿ ಜಿಲ್ಲಾಡಳಿತಕ್ಕೆ ನೀಡುವಂತೆ ಕಸಾಪ ಪದಾಧಿಕಾರಿಗಳಿಗೆ ಸೂಚಿಸಿದರು.
ವೇದಿಕೆ ಅಲಂಕಾರ, ವೇದಿಕೆ ಸುತ್ತ ಮತ್ತು ಸಮ್ಮೇಳನದ ಸ್ಥಳದಲ್ಲಿ ಸ್ವಚ್ಚತೆ, ಧ್ವನಿವರ್ಧಕ ಅಳವಡಿಕೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳ ಸೌಲಭ್ಯದ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ದೀಪಾ ಚೋಳನ ಅವರು ಮಾತನಾಡಿ, ಮುಖ್ಯ ವೇದಿಕೆಯಲ್ಲಿ ಸುಮಾರು 50 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.ಸಮ್ಮೇಳನಕ್ಕೆ ಆಗಮಿಸುವ ಜನರಿಗೆ ತೊಂದರೆ ಆಗದಂತೆ ರಸ್ತೆ ಕೆಲಸ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಸಾಹಿತ್ಯ ಸಮ್ಮೇಳನ ಜನರ ಉತ್ಸವವಾಗಿ ನಡೆಯಬೇಕು. ಸರಕಾರ ಸಾಹಿತ್ಯ ಸಮ್ಮೇಳನಕ್ಕೆ ೮ ಕೋಟಿ ಅನುದಾನ ನೀಡಿದೆ. ಹೆಚ್ಚಿನ ಅನುದಾನ ಅಗತ್ಯವೆನಿಸಿದರೆ ಪರಿಶೀಲಿಸಿ ಸರಕಾರದಿಂದ ಬಿಡುಗಡೆ ಮಾಡಲು ಕ್ರಮಕೈಕೊಳ್ಳಲಾಗುವುದು. ಯಾವೂದೇ ರೀತಿಯಿಂದ ಅನವಶ್ಯಕ ವೆಚ್ಚವಾಗದಂತೆ ಜವಾಬ್ದಾರಿ ವಹಿಸಬೇಕಿದೆ. ಕೈಗಾರಿಕೆ, ಕಾರ್ಖಾನೆ, ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡಿದರೆ ಸ್ವೀಕರಿಸಲಾಗುವುದು. ಯಾವುದೇ ರೀತಿಯ ಒತ್ತಾಯವಿಲ್ಲ ಎಂದು ಸಚಿವರು ತಿಳಿಸಿದರು.
ಪ್ರತಿನಿಧಿಗಳ ನೊಂದಣಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಪೆಂಡಾಲ ನಿರ್ಮಾಣದ ಜೊತೆಗೆ ಅಲ್ಲಿನ ಕಟ್ಟಡಗಳಿಗೂ ಸುಣ್ಣ, ಬಣ್ಣದೊಂದಿಗೆ ಶೃಂಗಾರಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಜನವರಿ 4ರ ಬೆಳಿಗ್ಗೆ 8 ಗಂಟೆಗೆ ರಾಷ್ಟçಧ್ವಜಾರೋಹನ, ನಾಡಧ್ವಜಾರೋಹನ ಮತ್ತು ಪರಿಷತ್ತ ಧ್ವಜಾರೋಹನ ನೇರವೆರುತ್ತದೆ. ನಂತರ 8:30ಕ್ಕೆ ಕರ್ನಾಟಕ ಕಾಲೇಜು ಆವರಣದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭವಾಗಿ 11 ಗಂಟೆಗೆ ಸಮ್ಮೇಳನದ ಮುಖ್ಯ ವೇದಿಕೆ ಇರುವ ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣಕ್ಕೆ ಬಂದು ತಲುಪುತ್ತದೆ. ನಂತರ 84ನೇ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಸಮ್ಮೇಳನ ಮೂರು ದಿನಗಳ ಕಾಲ ಮುಖ್ಯ ವೇದಿಕೆ ಮತ್ತು ಎರಡು ಸಮನಾಂತರ ವೇದಕೆಗಳಲ್ಲಿ ಅರ್ಥಪೂರ್ಣವಾದ ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಅಧ್ಯತೆ ನೀಡವಂತೆ ಸೂಚಿಸಲಾಗಿದೆ.
ವಾಣಿಜ್ಯ ಮತ್ತು ಪುಸ್ತಕ ಮಳಿಗೆಗಳಲ್ಲಿ ಭಾಗವಹಿಸಲಿರುವ ಸರ್ಕಾರಿ ಇಲಾಖೆಯಡಿ ರಚನೆಗೊಂಡಿದರುವ ಮಹಿಳಾ ಸ್ವಸಹಾಯ ಗುಂಪುಗಳಿಗೆ ಅವರ ಉತ್ಪಾದಕತೆಗಳನ್ನು ಪ್ರದರ್ಶಿಸಲು ಮತ್ತು ಮಾರಾಟಕ್ಕೆ ಅನುಕೂಲವಾಗುವಂತೆ ಸುಮಾರು40 ಮಳಿಗೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಸಮ್ಮೇಳನದಲ್ಲಿ ಭಾಗವಹಿಸುವ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡುವಂತೆ ಸಂಬಂಧಿತ ಪೊಲೀಸ ಹಾಗೂ ಇತರ ಇಲಾಖೆಗಳಿಗೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.
ಸಾಹಿತ್ಯ, ಸಾಂಸ್ಕೃತಿಕ ತವರೂರಾಗಿರುವ ಧಾರವಾಡದಲ್ಲಿ ನಡೆಯುತ್ತಿರುವ ಈ ಸಮ್ಮೇಳನ ಅರ್ಥ ಪೂರ್ಣವಾಗಿ ಯಶಸ್ವಿಯಾಗಲು ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಮತ್ತು ಜಿಲ್ಲಾ ಕಸಾಪ ಪ್ರತಿನಿಧಿಗಳು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು, ತಮಗೆ ಖುಷಿ ತಂದಿದೆ. ಎಲ್ಲರೂ ಸೇರಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹಾಪೌರ ಸುಧೀರ ಸರಾಫ, ಜಿಲ್ಲಾಧಿಕಾರಿ ದೀಪಾ ಚೋಳನ, ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಜಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ಮಹಾನಗರ ಪಾಲಿಕೆ ಆಯುಕ್ತ ಶಕೀಲ್ ಅಹ್ಮದ, ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ಸೇರಿದಂತೆ ವಿವಿಧ ಸಮಿತಿಗಳ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಹಾಗೂ ಅಧಿಕಾರಿಗಳು, ಜಿಲ್ಲಾ ಕಸಾಪ ಪದಾಧಿಕಾರಿಗಳು, ಗುತ್ತಿಗೆದಾರರು, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

