Connect with us

ದಿನದ ಸುದ್ದಿ

ಕಲಬುರಗಿಯ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ‌ ಪತ್ರ ಅವಾಂತರ

Published

on

 

  • ಸುಮಾರು 50 ವರ್ಷಗಳಿಂದ ಕಸಾಪದ ಆಜೀವ ಸದಸ್ಯರಾಗಿರುವ ಎಲ್.ಎಸ್.ಶಾಸ್ತ್ರಿಯವರು ಕನ್ನಡದ‌ ಹಿರಿಯ ಸಾಹಿತಿಗಳು. ವಾಸ ಬೆಳಗಾವಿ. ಇವರಿಗೆ ಕಲಬುರಗಿಯಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಅಹ್ವಾನ ನೀಡದಿರುವ ಕುರಿತು ಕಸಾಪ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ ಪತ್ರವೊಂದನ್ನು ಬರೆದಿದ್ದಾರೆ. ಈ ಕೆಳಗಿನಂತೆ ಆ ಪತ್ರವಿದೆ.

ಲಬುರ್ಗಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ವಾಟ್ಸಪ್ ನಲ್ಲಿ ನೋಡಿದೆ. ನಮ್ಮಂಥವರಿಗೆ ಅವರು ಆಮಂತ್ರಣ ಕಳಿಸುವದಿಲ್ಲ. ನಾನು 50 ವರ್ಷಗಳಿಂದ ಕಸಾಪ ಆಜೀವ ಸದಸ್ಯ. ಮೂರುಸಲ ಜಿಲ್ಲಾ ಗೌರವ ಕಾರ್ಯದರ್ಶಿಯಾಗಿ ಕೆಲಸ ಮಾಡಿದವ.

ಆ ವಿಷಯ ಹಾಗಿರಲಿ. ಸಮ್ಮೇಳನದ ಆಮಂತ್ರಣ ಪತ್ರಿಕೆ ನೋಡಿದಾಗ ಒಂದೆರಡು ಅಂಶಗಳು ‌ಗಮನ ಸೆಳೆದವು. ಅದರ ಬಗ್ಗೆ ಹೇಳುತ್ತಿದ್ದೇನೆ.

ಉತ್ತರ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ ಶ್ರೀ ಮೋಹನ ಹಬ್ಬು ಅವರನ್ನು ಕವಿ ಗೋಷ್ಠಿಯಲ್ಲಿ ಕವನ ಓದುವವರ ನಡುವೆ ಸೇರಿಸಿದ್ದಾರೆ. ಇದು ಸರಿಯಲ್ಲ ಎಂದು ನನ್ನ ಭಾವನೆ. ಅವರು ಒಂದು ಗೋಷ್ಠಿ ಯ ಅಧ್ಯಕ್ಷ ಸ್ಥಾನ
ವಹಿಸಬೇಕಾದಂಥವರು. ವಯಸ್ಸು ಮತ್ತು ಸಾಧನೆ ಎರಡೂ ದೃಷ್ಟಿಯಿಂದ. ಹತ್ತರ ಕೂಡ ಹನ್ನೊಂದು ಎಂಬಂತೆ ಒಟ್ಟು ಎಲ್ಲೋ ಒಂದು ಕಡೆ ಸೇರಿಸುವದು ಅವರ ಅರ್ಹತೆಗೆ ತಕ್ಕದ್ದಲ್ಲ. ಜಿಲ್ಲಾಧ್ಯಕ್ಷರಿಗೆ ಇದು ತಿಳಿದಿರಬೇಕಿತ್ತು.

ನಾನು ಸಾಮಾನ್ಯವಾಗಿ ಗಮನಿಸಿದಂತೆ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳನ್ನು ಕಸಾಪ ಯಾವ ಲೆಕ್ಕಕ್ಕೂ ಹಿಡಿದಿಲ್ಲ. ಬೆಳಗಾವಿಯಲ್ಲೂ ಒಬ್ಬರನ್ನು ಒಂದು ಗೋಷ್ಠಿಯ ಭಾಷಣಕ್ಕೆ ಹಾಕಿದ್ದು ಬಿಟ್ಟರೆ ಅಧ್ಯಕ್ಷ ಸ್ಥಾನಕ್ಕೆ ಯಾರೂ ಇಲ್ಲಿ ಅರ್ಹರೇ ಇಲ್ಲ ಎಂದು ಕಸಾಪ ಅಧ್ಯಕ್ಷರು ಭಾವಿಸಿಕೊಂಡಂತಿದೆ. ಮೂರು ನಾಲ್ಕು ಜನರನ್ನು ಕವಿಗೋಷ್ಠಿಗಳಲ್ಲಿ ಸೇರಿಸಿ ಸಮಾಧಾನ ಪಡಿಸಲಾಗಿದೆ. ಒಂದಿಬ್ಬರು ಸನ್ಮಾನಿತರ ಯಾದಿಯಲ್ಲಿದ್ದಾರೆ. ಉತ್ತರ ಕನ್ನಡದ ಹಣೆಬರೆಹವೂ ಅಷ್ಟೇ. ಕೇಳುವವರ್ಯಾರು? ಹೇಳಿ ನಾವೆ ಕೆಟ್ಟವರಾಗಬೇಕು ಅಷ್ಟೇ.

ಈಗಿನ ಕಸಾಪದಿಂದ ನಾನು ಅಂತಹ ಯಾವ ಉನ್ನತ ಮಟ್ಟದ ವ್ಯವಹಾರವನ್ನೂ ನಿರೀಕ್ಷಿಸುತ್ತಿಲ್ಲ. ಅಲ್ಲಿರುವವರ ಯೋಗ್ಯತೆ ಎಲ್ಲರಿಗೂ ಗೊತ್ತಿರುವಂತಹದೆ. ಅವರಿಂದ ನನಗೇನೂ ಆಗಬೇಕಾದ್ದೂ ಇಲ್ಲ. ಹಿಂದೆ ಒಮ್ಮೆ ನನ್ನನ್ನೂ ಸನ್ಮಾನಕ್ಕೆ ಕರೆದಿದ್ದರು. ಅದು ಸನ್ಮಾನವೋ ಅವಮಾನವೋ ಒಂದೂ ಗೊತ್ತಾಗಲಿಲ್ಲ. ಅಷ್ಟು ಕೆಟ್ಟದ್ದಾಗಿ ನಡೆಸಿಕೊಂಡರು. ಅವ್ಯವಸ್ಥೆಗೆ ಕುಪ್ರಸಿದ್ಧವಾದದ್ದು ಈಗಿನ ಕಸಾಪ. ಕೋಟಿಗಟ್ಟಲೆ ಹಣದ ವ್ಯವಹಾರ ಅವರಿಗೆ ಮಹತ್ವದ್ದು. ಅಬ್ಬರ, ಆಡಂಬರ, ದುಂದು ವೆಚ್ಚ , ಒಂದಿಷ್ಟು ಸ್ವಾಹಾ ….ಅದೇ ಸಮ್ಮೇಳನ! ಸಾಹಿತ್ಯಕ್ಕೆ ಎರಡನೇ ಸ್ಥಾನ.

ಎಲ್.ಎಸ್.ಶಾಸ್ತ್ರಿ
94822 51696

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ ಶಟ್ಟಿ ಬಣ) ಮನವಿ ಸಲ್ಲಿಸಿತು.

ಜಲ್ಲಾಧ್ಯಕ್ಷ ಜಮ್ನಳ್ಳಿ ನಾಗರಾಜ್ ಮಾತನಾಡಿ, ದಾವಣಗೆರೆ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಗಳಲ್ಲಿ ಬಡ ಕುಟುಂಬಗಳ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದು, ಸದರಿ ಮಕ್ಕಳಿಗೆ ವಸತಿ ಶಾಲೆಯಲ್ಲಿ ಸರಿಯಾದ ಮೂಲಭೂತ ಸೌಲಭ್ಯ ಕಲ್ಪಿಸದೇ ಇರುವುದರಿಂದ ಮಕ್ಕಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.

ಮಕ್ಕಳಿಗೆ ಸ್ನಾನಕ್ಕೆ ಬಿಸಿ ನೀರು ಇರುವುದಿಲ್ಲ. ಅಲ್ಲದೇ ಮಕ್ಕಳಿಗೆ ಸರಿಯಾಗಿ ಊಟದ ವ್ಯವಸ್ಥೆ ಸಮರ್ಪಕವಾಗಿರುವುದಿಲ್ಲ, ಶೌಚಾಲಯ ಸೌಕರ್ಯಗಳಿರುವುದಿಲ್ಲ, ಮಕ್ಕಳ ಮೇಲ್ವಿಚಾರಣೆಗೆ ವಾರ್ಡನ್‌ಗಳು ರಾತ್ರಿ ಸಮಯದಲ್ಲಿ ಸ್ಥಳದಲ್ಲಿರುವುದಿಲ್ಲ, ಅಲ್ಲದೇ ವಿದ್ಯುತ್ ತೊಂದರೆಯಾದರೆ ಮಕ್ಕಳಿಗೆ ಯು.ಪಿ.ಎಸ್. ಸೌಲಭ್ಯವಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಮನವಿ ಸ್ವೀಕರಿಸಿದ ಸಿ.ಇ.ಒ ಮಾತನಾಡಿ, ಸಧ್ಯದಲ್ಲೇ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಈ ವಿಷಯದ ಬಗ್ಗೆ ಚರ್ಚೆ ನಡಿಸಿ ಸೂಕ್ತ ತೀರ್ಮಾನ ಕೈಗೂಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಜಮ್ನಳ್ಳಿ ನಾಗರಾಜ್, ಜಿಲ್ಲಾ ಕಾರ್ಯಧ್ಯಕ್ಷ ಸೈಯದ್ ನಜೀರ್, ನಾಗರಾಜ್ ಆದಾಪುರ್, ಸಂಘಟನಾ ಕಾರ್ಯದರ್ಶಿ ಸಂತೋಷ್ ಕುಮಾರ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಎಂ, ನಗರ ಘಟಕ ಅಧ್ಯಕ್ಷ ಅನೂಪ್ ಇಜಾರಿ, ಮಹಿಳಾ ಗೌರವಾಧ್ಯಕ್ಷೆ ವನಜ ಕರಿಯಪ್ಪ, ಉತ್ತರ ವಲಯದ ಯುವ ಘಟಕದ ಅಧ್ಯಕ್ಷ ಶಿವಕುಮಾರ ಬಿ ಬಿ, ನಾಗರಾಜ ಆಥಪುರ್, ಶಬ್ರಿನ್ ತಾಜ್, ಬಸವರಾಜ ಎಸ್, ಬಸವರಾಜ್ ಪಿ, ಮಂಜುಳಾ ಆರ್, ನಾಗರಾಜ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೆಬೆಸೈಟ್ https://ssc.nic.in ಅಥವಾ https://ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 18 ಕೊನೆಯದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-2527342, 25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending