Connect with us

ದಿನದ ಸುದ್ದಿ

ಕಿಕಿ ಡ್ಯಾನ್ಸ್ ಆಯ್ತು ಈಗ ಸೂಜಿಗೆ ದಾರ ಪೋಣಿಸೋ ಚಾಲೆಂಜ್

Published

on

ಸುದ್ದಿದಿನ ಡೆಸ್ಕ್: ಯುವಕರನ್ನು ಹುಚ್ಚೆಬ್ಬಿಸಿದ ಕಿಕಿ ಡ್ಯಾನ್ಸ್ ನಂತರ ಈಗ ಸೂಜಿಗೆ ದಾರ ಪೋಣಿಸುವ ಚಾಲೆಂಜ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ದೊಡ್ಡ ದೊಡ್ಡ ನಟರು ಈ ಚಾಲೆಂಜ್‍ನಲ್ಲಿ ಸೋತಿದ್ದಾರೆ.

ಹಿಂದಿಯಲ್ಲಿ ಸುಯೀ ಧಾಗಾ ಹೆಸರಿನ ಈ ಚಾಲೆಂಜ್ ಸವೀಕರಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಹತ್ತು ಸೆಕೆಂಡ್‍ಗಳಲ್ಲಿ ಸೂಜಿಗೆ ದಾರ ಪೋಣಿಸುವ ಸವಾಲಿನಲ್ಲಿ ಸೊತಿದ್ದಾರೆ. ಫಿಲ್ಮ್ ಫೇರ್ ಸಂಪಾದಕ ಜಿತೇಶ್ ಸಬ್ಬಾದಿಯಾ ಅವರೂ ಕೂಡ ಈ ಸವಾಲು ಸ್ವೀಕರಿಸಿದ್ದರು. ಲಖನೌನಲ್ಲಿ ಕೆಲವು ಆರ್‍ಜೆಗಳಿಗೆ ನಟ ವರುಣ್ ಧವನ್ ಹಾಗೂ ನಟಿ ಅನುಷ್ಕಾ ಶರ್ಮಾ ಅವರು ಈ ಸವಾಲು ನೀಡಿದ್ದರು.

https://twitter.com/akshaykumar/status/1041910604070576128
ವರುಣ್ ಧವನ್ ಹಾಗೂ ಅನುಷ್ಕಾ ಶರ್ಮಾ ಜೋಡಿಯ ಸುಯಿ ಧಾಗಾ ಸಿನಿಮಾ ಇನ್ನೇನು ಬಿಡುಗಡೆಯಾಗಲಿದ್ದು. ಈ ಚಿತ್ರದಲ್ಲಿ ವರುಣ್ ಅವರು ಟೈಲರ್ ಪಾತ್ರ ನಿರ್ವಹಿಸಲಿದ್ದಾರೆ. ಲೇಡೀಸ್ ಟೈಲರ್‍ವೊಬ್ಬ ತನ್ನ ವೃತ್ತಿಯಲ್ಲಿ ಹೇಗೆ ಮುಂದೆಬರುತ್ತಾನೆ ಎಂಬ ಅಂಶವನ್ನು ಇಟ್ಟುಕೊಂಡು ಈ ಸಿನಿಮಾ ಚಿತ್ರಿಸಲಾಗಿದೆ.
ಸಿನಿಮಾದ ಪ್ರಮೋಶನ್‍ಗಾಗಿ ಚಿತ್ರತಂಡವು ಸುಯಿ ಧಾಗಾ ಚಾಲೆಂಜ್ ನೀಡುತ್ತಿದೆ. ಹತ್ತು ಸೆಕೆಂಡ್‍ಗಳಲ್ಲಿ ಸೂಜಿಯೊಳಗೆ ದಾರ ಪೋಣಿಸುವುದೇ ಈ ಸವಾಲು. ನಟ ಅಕ್ಷನ್ ಕುಮಾರ್ ಅವರು ಮೊದಲ ಹತ್ತು ಸೆಕೆಂಡ್‍ನಲ್ಲಿ ಸೂಜಿಯ ಕಣ್ಣಿನೊಳಗೆ ದಾರ ಪೋಣಿಸಲು ಹೋಗಿ ಅದ ಸಾಧ್ಯವಾಗದಿದ್ದಾಗ ಇನ್ನೂ ಹತ್ತು ಸೆಕೆಂಡ್ ಪಡೆದು ಅದರಲ್ಲೂ ಸೋತರು. ಈ ವಿಡಿಯೊವನ್ನು ಅಕ್ಷಯ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ವರುಣ್ ಹಾಗೂ ಅನುಷ್ಕಾ ಸಿನಿಮಾ ಬಾಕ್ಸ್ ಆಫೀಸ್ ಚಿಂದಿ ಮಾಡಲಿ ಎಂದು ಹರಸಿದ್ದಾರೆ.

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending