ರಾಜಕೀಯ
ಆಲಮಟ್ಟಿ ಡ್ಯಾಂಗೆ ಸಿಎಂ ಬಾಗೀನ ಇಂದು
ಸುದ್ದಿದಿನ ಡೆಸ್ಕ್: ಸಿಎಂ ಹೆಚ್. ಡಿ. ಕುಮಾರಸ್ವಾಮಿ ಇಂದು ವಿಜಯಪುರಕ್ಕೆ ಭೇಟಿ ನೀಡಲಿದ್ದು, ಆಲಮಟ್ಟಿಯ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ.ಮುಖ್ಯಮಂತ್ರಿಯಾದ ಬಳಿಕ ವಿಜಯಪುರ ಜಿಲ್ಲೆಗೆ ಅವರ ಮೊದಲ ಬಾರಿಗೆ ಹೆಚ್. ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.
ಆಲಮಟ್ಟಿಯ ಡ್ಯಾಂ ತುಂಬಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿಎಂ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಿದ್ದಾರೆ. ಸಿಎಂ ಜತಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಶಿವಾನಂದ ಪಾಟೀಲ್, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಸ್ಥಳೀಯ ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.