Connect with us

ಸಿನಿ ಸುದ್ದಿ

ಆಲ್ ರೌಂಡರ್ ಸಹನಾಗೆ ಎಲ್ಲ ಕಲೆಯೂ ವರ

ಚಿತ್ರರಂಗಕ್ಕೆ ಬರಬೇಕೆಂದರೆ ನಟನೆ ಒಂದೇ ಅರ್ಹತೆಯಲ್ಲ. ಕ್ಷೇತ್ರಕ್ಕೆ ಕಾಲಿಟ್ಟ ಮೇಲೆ ಯಾವ ಕಲೆ ನಮಗೆ ವರವಾಗುತ್ತದೆಯೋ ಹೇಳಲು ಬರುವುದಿಲ್ಲ. ಬಹುಮುಖ ಪ್ರತಿಭೆಗಳಿಗೆ ಮಾತ್ರವೇ ಅದೃಷ್ಟ ಹುಡುಕಿಕೊಂಡು ಬರುತ್ತದೆ. ಇದೇ ನಿಟ್ಟಿನಲ್ಲಿ ತಯಾರಾಗುತ್ತಿರುವ ಕಲಾವಿದೆ ಸಹನಾ.

Published

on

ಚಿತ್ರರಂಗಕ್ಕೆ ಬರಬೇಕೆಂದರೆ ನಟನೆ ಒಂದೇ ಅರ್ಹತೆಯಲ್ಲ. ಕ್ಷೇತ್ರಕ್ಕೆ ಕಾಲಿಟ್ಟ ಮೇಲೆ ಯಾವ ಕಲೆ ನಮಗೆ ವರವಾಗುತ್ತದೆಯೋ ಹೇಳಲು ಬರುವುದಿಲ್ಲ. ಬಹುಮುಖ ಪ್ರತಿಭೆಗಳಿಗೆ ಮಾತ್ರವೇ ಅದೃಷ್ಟ ಹುಡುಕಿಕೊಂಡು ಬರುತ್ತದೆ. ಇದೇ ನಿಟ್ಟಿನಲ್ಲಿ ತಯಾರಾಗುತ್ತಿರುವ ಕಲಾವಿದೆ ಸಹನಾ.
ಸಹನ ಮೂಲತಃ ಕುಂದಾಪುರದವರು. ವೃತ್ತಿಯಲ್ಲಿ ಸಾಫ್ಟ್‍ವೇರ್ ಎಂಜಿನಿಯರ್. ಸಹನಾ ಅವರ ತಂದೆ ಒಬ್ಬ ಖ್ಯಾತ ಫೋಟೊಗ್ರಾಫರ್. ಚಿಕ್ಕಂದಿನಲ್ಲಿ ಅಪ್ಪನ ಜತೆ ಫೋಟೊ ಶೂಟ್‍ಗೆ ಹೋಗುತ್ತಿದ್ದ ಸಹನಾ ಅವರಿಗೆ, ಕ್ಯಾಮೆರಾ ಮುಂದೆ ಹೇಗೆ ಪೋಸ್ ಕೊಡಬೇಕು. ಗ್ಲಾಮರ್ ಲೋಕ ಹೇಗಿರುತ್ತದೆ ಎಂಬ ಪರಿಚಯವಾಗಿತ್ತು. ಓದಿನಲ್ಲಿ ಮೆರಿಟ್ ವಿದ್ಯಾರ್ಥಿನಿಯಾಗಿದ್ದ ಸಹನಾಗೆ ತಾನು ಯಾವಾಗ ಫ್ಯಾಷನ್ ಲೋಕಕ್ಕೆ ಕಾಲಿಡುತ್ತೇನೋ ಎಂಬ ತುಡಿತ ಇತ್ತು ಅಪ್ಪ ಅಮ್ಮನ ಬಲವಂತಕ್ಕೆ ಕಟ್ಟುಬಿದ್ದು ಓದು ಮುಂದುವರಿಸಿದರು.
ಎಂಜಿನಿಯರಿಂಗ್ ಪೂರೈಸಿರುವ ಅವರು ಸದ್ಯ ಸಾಫ್ಟ್‍ವೇರ್ ದಿಗ್ಗಜ ಎಚ್.ಪಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಫ್ಯಾಷನ್ ಮೋಹ ಇನ್ನಷ್ಟು ಹೆಚ್ಚಾಗಿದೆ.
ಫ್ಯಾಷನ್ ಫೋಟೊಗ್ರಫಿಗೆಂದು ಹೋಗುತ್ತಿದ್ದ ಸಹನಾ ಅವರಿಗೆ ತಾವ್ಯಾಕೆ ಫ್ಯಾಷನ್ ಡಿಸೈನರ್ ಆಗಬಾರದೆಂಬ ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂದು ಪ್ರಯತ್ನ ಮಾಡಿದರು. ನೋಡುಗರಿಂದ ವ್ಯಕ್ತವಾದ ಮೆಚ್ಚುಗೆ ಅವರ ಹುರುಪನ್ನು ಇನ್ನಷ್ಟು ಹೆಚ್ಚಿಸಿತು. ಪರಿಣಾಮವಾಗಿ ಅವರು ಫ್ಯಾಷನ್ ಡಿಸೈನರ್ ಆಗಬೇಕೆಂಬ ಕನಸು ಮೊಳೆಯಿತು. ಬ್ಯುಸಿ ಶೆಡ್ಯೂಲ್‍ನಲ್ಲಿ ಬಿಡುವಿದ್ದಾಗ ಸಹನಾ ಅವರು ತಮ್ಮ ಡಿಸೈನ್‍ಗಳ ಬಗ್ಗೆ ಹೆಚ್ಚುಆಸ್ಥೆ ವಹಿಸುತ್ತಾರೆ.
ಪ್ರತಿ ನಿಮಿಷವನ್ನೂ ಹೇಗೆ ಬಳಸಿಕೊಳ್ಳುವುದು ಎಂಬ ಹೊಸ ಆಲೋಚನೆಯಲ್ಲೇ ತೊಡಿಗಿರುವ ಅವರು ವಾರದಲ್ಲಿ ಸಿಗುವ ಎರಡು ದಿನ ರಜೆಯಲ್ಲಿ ತಮ್ಮ ಡಿಸೈನ್ ವರ್ಕ್‍ಗಳ ಬಗ್ಗೆ ಆಸಕ್ತಿ ವಹಿಸಿ, ವಸ್ತುಪ್ರದರ್ಶನಗಳನ್ನು ಏರ್ಪಡಿಸುತ್ತಾರೆ.
“ಸಾಫ್ಟ್‍ವೇರ್ ಎಂಜಿನಿಯರ್ ಆದ ಕಾರಣ ಸಮಯ ಹೆಚ್ಚು ಸಿಗುವುದಿಲ್ಲ. ವೀಕೆಂಡ್‍ಗಳಲ್ಲಿ ಸ್ನೇಹಿತರು, ಸಹೋದ್ಯೋಗಿಗಳು ಮನಶಾಂತಿಗಾಗಿ ಔಟಿಂಗ್ ಮೊದಲಾದ ಕಡೆ ಹೋಗುತ್ತಾರೆ. ಆದರೆ, ನನಗೆ ಡಿಸೈನಿಂಗ್‍ನಲ್ಲೇ ಹೆಚ್ಚು ಮನಶಾಂತಿ ಸಿಗುತ್ತದೆ,” ಎಂದು ಅವರು ಹೇಳುತ್ತಾರೆ.

ಸಂಗೀತದಲ್ಲೂ ಸೈ

ಸಹನಾ ಅವರು ಗಾಯಕಿಯೂ ಹೌದು. ಸೃಶ್ರಾವ್ಯವಾಗಿ ಹಾಡುವ ಸಹನಾ ಅವರು ಒಂದು ಮ್ಯೂಸಿಕ್ ಆಲ್ಬಂಗಾಗಿ ಹಾಡಿದ್ದಾರೆ. ಜತೆಗೆ ಆ ವಿಡಿಯೊದಲ್ಲಿ ಮುಖ್ಯ ಪಾತ್ರಧಾರಿಯಾಗಿಯೂ ಕಾಣಿಸಿಕೊಂಡಿದ್ದಾರೆ. ಹಾಡುವುದು ಅವರಲ್ಲಿ ಅಡಗಿರುವ ಒಂದು ಗುಪ್ತ ಪ್ರತಿಭೆಯೂ ಹೌದು.

ಮಿಸ್ ಉತ್ತರ ಕರ್ನಾಟಕ

ಫ್ಯಾಷನ್ ಲೋಕದಲ್ಲಿ ಆಸಕ್ತಿ ಇದ್ದರಿಂದ ಸಹನಾ ಅವರು ಸಿಲ್ವರ್ ಸ್ಟಾರ್ ಎಂಬ ಸಂಸ್ಥೆಯೊಂದಕ್ಕೆ ಸೇರಿ ರ್ಯಾಂಪ್ ವಾಕ್, ಮೊದಲಾದ ಕಲೆಗಳನ್ನು ಕರಗತ ಮಾಡಿಕೊಂಡರು. ರಾಜ್ಯ ಮಟ್ಟದ ಫ್ಯಾಷನ್ ಶೋನಲ್ಲಿ ಪಾಲ್ಗೊಂಡಿದ್ದ ಅವರಿಗೆ ಮಿಸ್ ಉತ್ತರ ಕರ್ನಾಟಕ ಎಂಬ ಕೀರ್ತಿಯೂ ಲಭ್ಯವಾಗಿದೆ.

ಮಗಳ ಬಗ್ಗೆ ಹೆಮ್ಮೆ

ಪ್ರಾರಂಭದಲ್ಲಿ ಮಗಳು ಫ್ಯಾಷನ್ ಲೋಕ ಸೇರುವುದನ್ನು ಒಲ್ಲದ ಸಹನಾರ ಪೋಷಕರು ಓದಿನ ಬಗ್ಗೆ ಗಮನ ವಹಿಸುವಂತೆ ತಿಳಿ ಹೇಳಿದ್ದರು. ಯಾವಾಗ ಸಹನಾ ಅವರು ಕೆಲಸದ ಜತೆಗೆ ಫ್ಯಾಷನ್‍ಅನ್ನು ಒಂಧು ಭಾಗವಾಗಿ ತೆಗೆದುಕೊಂಡು ಆಸಕ್ತಿಯಿಂದ ಕೆಲಸ ಮಾಡಲು ಪ್ರಾರಂಭಿಸಿದರೋ ಆಗ ಮಗಳ ಬಗ್ಗೆ ಪೋಷಕರಿಗೆ ಹೆಮ್ಮೆ ಅನಿಸಿದೆ. ತಮ್ಮ ಮಗಳ ಸಾಧನೆ ಬಗ್ಗೆ ಅವರು ಈಗಲೂ ಖುಷಿಪಡುತ್ತಾರೆ.

ನಟನೆ ಅವಕಾಶ ಬಂದರೆ ಬಿಡಲ್ಲ

ಸಹನಾ ಅವರಿಗೆ ನಟನೆಯ ಕಲೆಯೂ ತಕ್ಕಮಟ್ಟಿಗೆ ಗೊತ್ತಿದೆ. ಫ್ಯಾಷನ್, ಸಂಗೀತ, ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ಗುರುತು ಮೂಡಿಸಿರುವ ಸಹನಾ ಅವರು ನಟನೆಯ ಅವಕಾಶಕ್ಕಾಗಿ ಕಾಯುತ್ತಿದ್ದು, ಚಾನ್ಸ್ ಸಿಕ್ಕರೆ ಅದರಲ್ಲೂ ತಮ್ಮ ಪ್ರತಿಭೆ ಅನಾವರಣಗೊಳಿಸುವ ಭರವಸೆ ಹೊಂದಿದ್ದಾರೆ.
Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ

Published

on

ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.

ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ

Published

on

ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ

Published

on

ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.

ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.

ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್‌ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 mins ago

ಸಧ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ...

ದಿನದ ಸುದ್ದಿ6 hours ago

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ...

ದಿನದ ಸುದ್ದಿ9 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ9 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ24 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ1 day ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ1 day ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

Trending