ದಿನದ ಸುದ್ದಿ
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಮೈತ್ರಿ ಸರ್ಕಾರದ ಪ್ರತಿಭಟನೆ
ಸುದ್ದಿದಿನ, ಬೆಂಗಳೂರು : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಹಾಗೂ ತಮ್ಮ ವಿರೋಧಿ ಪಕ್ಷಗಳ ನಾಯಕರುಗಳನ್ನು ಗುರಿಯಾಗಿಟ್ಟುಕೊಂಡು, ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ತನ್ನ ಏಜೆಂಟ್ ನಂತೆ ಬಳಸಿಕೊಂಡು, ಕರ್ನಾಟಕ ಸಮ್ಮಿಶ್ರ ಸರ್ಕಾರದ ಸಚಿವರು, ಶಾಸಕರು ಹಾಗೂ ಇತರ ಮುಖಂಡರ ಮನೆಗಳ ಮೇಲೆ ಐ. ಟಿ. ದಾಳಿ ಮಾಡುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಗುರುವಾರ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಜಿ. ಪರಮೇಶ್ವರ್, ಇತರ ಕಾಂಗ್ರಸ್ ಮುಖಂಡರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401