ದಿನದ ಸುದ್ದಿ
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಿಳೆ

- ಸಿದ್ದರಾಜು, ಶಿಕ್ಷಕರು, ಹಿರಿಸಾವೆ
ಬಾಬಾ ಸಾಹೇಬ್ ಡಾಕ್ಟರ್ ಅಂಬೇಡ್ಕರ್ ಶತಮಾನದ ಮಹಾಚೇತನ. ಅನೀತಿ, ಅನ್ಯಾಯ, ಅಜ್ಞಾನ, ಮೂಢನಂಬಿಕೆ ಇವುಗಳ ವಿರುದ್ಧ ಹೋರಾಟ ನಡೆಸುವವರಿಗೆ ಪ್ರೇರಕ ಶಕ್ತಿಯಾಗಿದ್ದಾರೆ, ಸ್ಫೂರ್ತಿಯಾಗಿದ್ದಾರೆ.
ಸಾವಿರಾರು ವರ್ಷಗಳಿಂದ ಸಮಾಜದಲ್ಲಿ ಬೇರು ಬಿಟ್ಟಿದ್ದ, ಸಾಮಾಜಿಕ ಪಿಡುಗಿನ ವಿರುದ್ಧ ಜನರಲ್ಲಿ ಜಾಗೃತಿಯನ್ನು, ಕ್ರಾಂತಿಯ ಕಿಡಿಯನ್ನು ಹಾಗೂ ಆತ್ಮಾಭಿಮಾನವನ್ನು ಮೂಡಿಸಲು ತಮ್ಮ ಜೀವನವನ್ನೇ ಸವೆಸಿದ ಮಹಾ ಪುರುಷರಲ್ಲಿ ಅಂಬೇಡ್ಕರ್ ಅವರ ಹೆಸರು ಹಚ್ಚ ಹಸಿರಾಗಿ ಉಳಿದಿದೆ.
ಜಾತಿ-ಕುಲ, ಸ್ತ್ರೀ-ಪುರುಷ ಎಂಬ ಭೇದಭಾವವಿಲ್ಲದೆ ಭಾರತೀಯರೆಲ್ಲರಿಗೂ ಮೂಲಭೂತ ಹಕ್ಕುಗಳನ್ನು ಕೊಡಬೇಕು, ಮಹಿಳೆಯರಿಗೆ ತಂದೆಯ ಆಸ್ತಿಯಲ್ಲಿ ಸಮಪಾಲು ದೊರೆಯಬೇಕು ಎಂದು ಪ್ರಪ್ರಥಮವಾಗಿ ಘೋಷಿಸಿದ ಮೊಟ್ಟಮೊದಲ ಭಾರತದ ರಾಜಕೀಯ ನೇತಾರ ಡಾಕ್ಟರ್ ಬಿಆರ್ ಅಂಬೇಡ್ಕರ್. ಹೆಣ್ಣು ಮಕ್ಕಳಿಗೆ, ಗಂಡು ಮಕ್ಕಳಂತೆಯೇ ಆಸ್ತಿಯಲ್ಲಿ ಸಮಪಾಲು ನೀಡಬೇಕು. ಮಹಿಳೆಯರು ದೈಹಿಕವಾಗಿ ಮಾನಸಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕ ವಾಗಿ ಉದ್ಧಾರವಾಗಿ, ಸಮಾಜದಲ್ಲಿ ತಲೆ ಎತ್ತಿ ನಡೆಯುವಂತೆ ಮಾಡಬೇಕೆಂದು ಕನಸುಕಂಡವರಲ್ಲಿ ಬಾಬಾ ಸಾಹೇಬರು ಮೊದಲಿಗರು.
ಮಹಿಳೆಯರ ಉದ್ಧಾರಕ್ಕಾಗಿ ಹಲವಾರು ಅನುಚ್ಛೇದಗಳನ್ನು ಸೇರಿಸಿ ಸಂವಿಧಾನಬದ್ಧವಾಗಿ ಮಹಿಳೆಗೆ ಸಿಗಬೇಕಾದ ಮಾನ್ಯತೆ ಸಿಗುವಂತೆ ನೋಡಿಕೊಂಡರು. ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಒದ್ದಾಡುತ್ತಿರುವ ಇಂದಿನ ಸರ್ಕಾರಗಳು ಡಾಕ್ಟರ್ ಅಂಬೇಡ್ಕರಿಂದ ಪಾಠ ಕಲಿಯಬೇಕು.
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಕಾಣೆಯಾಗಿರುವುದನ್ನು ನೋಡಿದರೆ ನಮ್ಮ ಪುರುಷ ರಾಜಕಾರಣಿಗಳು ಈಗಲೂ ಮಹಿಳೆಯರನ್ನು ತಮ್ಮ ಸಮಾನಳೆಂದು ಒಪ್ಪಿಕೊಂಡಿಲ್ಲ. ಡಾಕ್ಟರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಾರಿದ್ದು ಈಗಲೂ ಮಹಿಳೆಯರಿಗೆ ಅರ್ಥವಾಗದೆ ಇರುವುದು ದುರಂತ.
ಮಹಿಳೆಯ ಮೂಲಭೂತ ಹಕ್ಕುಗಳನ್ನು ಹಾಗೂ ಸಮಾನ ಬದುಕನ್ನು ಕಾನೂನುಬದ್ಧವಾಗಿ ನೀಡಲು ಸರ್ವ ಪ್ರಯತ್ನ ಮಾಡಿದ ಮಾನವತಾವಾದಿ, ತಮ್ಮ ಜೀವನ ಪರ್ಯಂತ ಮಾನವ ಹಕ್ಕುಗಳಿಗಾಗಿ ಹೋರಾಟ ನಡೆಸಿದರು.
ಎಲ್ಲ ವರ್ಗಗಳಿಂದ ತುಳಿತಕ್ಕೊಳಗಾದ ಮಹಿಳೆಯರ ಉದ್ಧಾರದ ಬಗ್ಗೆ ಅವರು ಮುಕ್ತಮನಸ್ಸು ಹೊಂದಿದ್ದರು. ಅದಕ್ಕಾಗಿ ಶತಶತಮಾನಗಳಿಂದ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರನ್ನು ಸ್ವತಂತ್ರ ಸಹಜ ಬದುಕಿಗೆ ತರಲು, ಮಹಿಳೆ ಪುರುಷನಿಗಿಂತ ಕಡಿಮೆಯೇನೂ ಇಲ್ಲ ಪುರುಷರಷ್ಟೇ ಸಬಲರು, ಬುದ್ಧಿವಂತರು ಆಗಿದ್ದಾರೆ ಎಂದು ಸಾರಿದರು.
ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಕಲ್ಪಿಸಿ ಕೊಡುವುದಕ್ಕಾಗಿ ಹಗಲಿರುಳು ಶ್ರಮಿಸಿದರು. ಪ್ರಾಮಾಣಿಕ ಪ್ರಯತ್ನದಿಂದ ಭಾರತೀಯ ಮಹಿಳೆಗೆ ಸಂವಿಧಾನಬದ್ಧವಾಗಿ ಅನೇಕ ಅಧಿಕಾರಗಳನ್ನು ಅನುಚ್ಛೇದ ಗಳ ಮೂಲಕ ದೊಕಿಸಿಕೊಟ್ಟಿದ್ದಾರೆ.
ಅನುಚ್ಛೇದ 14: ಸ್ತ್ರೀ-ಪುರುಷ ಕುಲ ಜಾತಿ ಭೇದ ಭಾವ ಮಾಡದೆ ಭಾರತದಲ್ಲಿ ವಾಸಿಸುವ ಎಲ್ಲಾ ಪ್ರಜೆಗಳು ಕಾನೂನಿನ ಮುಂದೆ ಸಮಾನರು.
ಅನುಚ್ಛೇದ 15: ಜಾತಿ, ಮತ, ಲಿಂಗ ಮತ್ತು ಹುಟ್ಟಿನ ಆಧಾರದ ಮೇಲೆ ಯಾವುದೇ ರೀತಿಯ ತಾರತಮ್ಯ ಮಾಡತಕ್ಕದ್ದಲ್ಲ.
ಅನುಚ್ಛೇದ 39: ಸ್ತ್ರೀ ಪುರುಷರಿಗೆ ಸರಿಸಮಾನವಾಗಿ ಜೀವನವನ್ನು ಒದಗಿಸತಕ್ಕದ್ದು ಪುರುಷ ಸ್ತ್ರೀ ಸೇವೆಗೆ ಸಮಾನ ವೇತನ ನೀಡಬೇಕು.
ಅನುಚ್ಛೇದ 42: ಉದ್ಯೋಗಸ್ಥ ಮಹಿಳೆಯರಿಗೆ ಹೆರಿಗೆ ಸಂದರ್ಭದಲ್ಲಿ ವೇತನ ಸಹಿತ ರಜೆ ಹಾಗೂ ಇನ್ನಿತರ ಸೌಲಭ್ಯ ಒದಗಿಸುವುದು. ಸರ್ಕಾರದ ಕರ್ತವ್ಯವಾಗಿದೆ.
ಡಾಕ್ಟರ್ ಅಂಬೇಡ್ಕರ್ ಅಸ್ಪೃಷ್ಯತೆ ನಿವಾರಣೆಯಷ್ಟೆ ಮಹತ್ವವನ್ನು ಮಹಿಳೆಯರ ಅಭಿವೃದ್ಧಿಗಾಗಿಯೂ ಸಹ ಕೊಟ್ಟಿದ್ದರು.
ಅವರ ಸುಧಾರಣೆಯಲ್ಲಿ ಅವರು ಮಾಡಿದ ಮತ್ತೊಂದು ಸಾಧನೆಯೆಂದರೆ ಮಹಿಳಾಪರ ನಾಲ್ಕು ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ಅವು ಸ್ವೀಕೃತವಾಗಿದ್ದು, ಮಹಿಳಾ ಸ್ವಾತಂತ್ರಕ್ಕೆ ಸಂಬಂಧಪಟ್ಟ ಪ್ರಮುಖ ಕಾಯ್ದೆಗಳು
1: ಹಿಂದೂ ವಿವಾಹ ಕಾಯ್ದೆ 1955.
2:ಹಿಂದೂ ಉತ್ತರಾಧಿಕಾರ ಕಾನೂನು 1956. ಮತ್ತು ಈ ಕಾಯ್ದೆ ಪ್ರಕಾರ ದತ್ತುಸ್ವೀಕಾರ ಸಂಬಂಧದಲ್ಲಿ ಹೆಣ್ಣು ಮತ್ತು ಗಂಡಿನ ನಡುವೆ ಯಾವುದೇ ತಾರತಮ್ಯ ಇರುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ಈ ಮೊದಲು ಹೆಣ್ಣುಮಕ್ಕಳಿಗೆ ಅವಕಾಶ ಇರಲಿಲ್ಲ.
3:ಪೋಷಕತ್ವ ಕಾನೂನು 1956 ಇವರಿಗೆ ಸಲ್ಲುತ್ತದೆ.
4: 1956 ಹಿಂದೂ ದತ್ತಕ ಕಾಯ್ದೆ ಗಂಡುಮಗನಷ್ಟೆ ಹೆಣ್ಣು ಮಗುವನ್ನು ದತ್ತು ಸ್ವೀಕರಿಸುವ ಆಕಾಶವನ್ನು ನೀಡಲಾಯಿತು. ಅಲ್ಲದೆ ಗಂಡ-ಹೆಂಡತಿಯರಿಬ್ಬರೂ ದತ್ತು ಸ್ವೀಕರಿಸುವ ಸಂಬಂಧದಲ್ಲಿ ಪರಸ್ಪರ ಒಪ್ಪಿಕೊಳ್ಳಬೇಕು.
ಹೀಗೆ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಹಾಗೂ ಕಾನೂನುಬದ್ಧವಾಗಿ ಮಹಿಳೆಯರಿಗೆ ಸಮಾನತೆ ಹಾಗೂ ಸ್ವಾತಂತ್ರ್ಯವನ್ನು ನೀಡುವುದರ ಮೂಲಕ ಶತಶತಮಾನಗಳಿಂದ ಶೋಷಣೆಗೊಳಗಾಗುತ್ತಾ ಬಂದಿದ್ದ ಮಹಿಳೆಯರಿಗೆ ಹೊಸ ಜೀವನ ನೀಡಿದರು. ಹೊಸ ಸ್ಪೂರ್ತಿ ತುಂಬಿದರು
ಮಾನ್ಯ ಅಂಬೇಡ್ಕರ್ ರವರ ಪರಿಶ್ರಮದಿಂದ ಭಾರತೀಯ ಮಹಿಳೆ ಸಂವಿಧಾನದ ಅವಕಾಶಗಳು ಹಕ್ಕುಗಳು ದೊರೆತಿರುವುದರಿಂದ ಮಹಿಳೆ ಇಷ್ಟೊಂದು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಅಮೇರಿಕಾದ ನ್ಯೂಯಾರ್ಕ್ ನ ಕೊಲಂಬಿಯಾ ವಿಶ್ವವಿದ್ಯಾಲಯವು ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಅವರಿಗೆ ಡಾಕ್ಟರೇಟ್ 1952ರಲ್ಲಿ ನೀಡಿ ಗೌರವಿಸಿದೆ.
ಸಮಾಜ ಸುಧಾರಕರು, ಮಾನವೀಯ ಹಕ್ಕುಗಳ ದಿಟ್ಟ ಪ್ರತಿಪಾದಕರು ಅವರು ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ, ಅಲ್ಲದೆ ತನ್ಮೂಲಕ ರಾಷ್ಟ್ರದ ಅಖಂಡತೆಯನ್ನು ಎತ್ತಿ ಹಿಡಿದು ಮಹಿಳೆಯನ್ನು ಸಮಾನ ಸ್ಥಾನದಲ್ಲಿ ಪ್ರತಿಷ್ಠಾಪಿಸುವ ಮೂಲಕ ಈ ನೆಲಕ್ಕೆ ಅಪೂರ್ವ ಸಮಾನತೆಯ ಹರಿಕಾರರಾಗಿ ನಿಂತಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ 131ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಹೃದಯತುಂಬಿ ಇಡೀ ಪ್ರಪಂಚದಾದ್ಯಂತ ಕೋರಲಾಗುತ್ತಿದೆ.
ಜೈ ಭೀಮ್ ಜೈ ಭಾರತ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ

ಸುದ್ದಿದಿನ,ಬೆಂಗಳೂರು:ಫೆ 10 ರಂದು ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸುವ ಬೃಹತ್ ಕಾರ್ಯ ಕ್ರಮವನ್ನು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಉದ್ಘಾಟಿಸಿದರು.
ರಾಜ್ಯದ ನಾನಾ ಭಾಗಗಳಿಂದ ಸುಮಾರು 650 ಕ್ಕಿಂತ ಹೆಚ್ಚು ಕವಿಗಳು ಆಗಮಿಸಿ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸಿದರು,ಇದೇ ಸಂಧರ್ಭದಲ್ಲಿ ಅನೇಕ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ, ಮಾವಳ್ಳಿ ಶಂಕರ್,ಮಿಮಿಕ್ರಿ ಗೋಪಿ, ಜನಸಿರಿ ಫೌಂಡೇಶನ್ ಮುಖ್ಯಸ್ಥರಾದ ನಾಗಲೇಖ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುಂಬಿದ ಕೊಡ ತುಳುಕಿತಲೇ ಪರಾಕ್..!

- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
“ತುಂಬಿದ ಕೊಡ ತುಳುಕಿತಲೇ ಪರಾಕ್” ಎಂದು ಕಾರ್ಣಿಕ ನುಡಿದ ಗೊರವಯ್ಯ, ಅದು ಮೈಲಾರ ಕೋಟ್ಯಾಂತರ ಭಕ್ತರ ಆರಾಧ್ಯದೈವ ಮೈಲಾರ ಲಿಂಗನ ಪುಣ್ಯ ಕ್ಷೇತ್ರ. ಈ ಪುಣ್ಯ ಕ್ಷೇತ್ರ ಪ್ರತಿ ವರ್ಷ ಕಾರ್ಣಿಕ ನುಡಿಗೆ ರಾಜ್ಯಾದ್ಯಂತ ಫೇಮಸ್. ನುಡಿ ಆಲಿಸಲು ಲಕ್ಷಾಂತರ ಜನ್ರು ಅಲ್ಲಿಗೆ ಆಗಮಿಸ್ತಾರೆ. ಇನ್ನು 18 ಅಡಿ ಬಿಲ್ಲನ್ನ ಏರಿ ಕಾರ್ಣಿಕ ನುಡಿ ನುಡಿಯುವ ಗೊರವಯ್ಯನ ನುಡಿಯನ್ನ ಮಳೆ, ಬೆಳೆ, ರಾಜಕೀಯ ಹೀಗೆ ಆಗು ಹೋಗಗಳ ಬಗ್ಗೆ ವಿಮರ್ಶೆ ಮಾಡ್ತಾರೆ ಹಾಗಾದ್ರೆ ಈ ವರ್ಷ ನುಡಿದ ಕಾರ್ಣಿಕ ನುಡಿ ಏನು…? ಅಂತಿರಾ ಈ ಸ್ಟೋರಿ ಓದಿ
ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯ ನುಡಿದ ಗೊರವಯ್ಯ ಸದ್ದಲೇ ಎಂದು ಭವಿಷ್ಯವಾಣಿ ನುಡಿದ ಕಾರ್ಣಿಕದ ಗೊರವಯ್ಯ ರಾಮಣ್ಣ , 18 ಅಡಿ ಬಿಲ್ಲನ್ನು ಏರಿ ಕಾರ್ಣಿಕ ನುಡಿದು ಕೆಳಗೆ ಬಿದ್ದ ಗೊರವಯ್ಯ.
ತುಂಬಿದ ಕೊಡ ತುಳುಕಿತಲೇ ಪರಾಕ್… ಹೌದು ಇದು ಈ ವರ್ಷದ ಶ್ರೀ ಕ್ಷೇತ್ರ ಮೈಲಾರದ ಕಾರ್ಣಿಕ ( 2025 ರ ವರ್ಷ ಭವಿಷ್ಯ) ಅದು ಜಿಲ್ಲೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ. ಮೈಲಾರದ ಮೈಲಾರ ಲೀಂಗೆಶ್ವರನ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಭರತ ಹುಣ್ಣಿಮೆಯ ಬಳಿಕ ಶ್ರೀ ಕ್ಷೇತ್ರ ಮೈಲಾರದ ಡಂಕನಮರಡಿಯಲ್ಲಿ ಕಾರ್ಣಿಕ ನುಡಿಯನ್ನ 11 ದಿನಗಳ ಕಾಲ ಉಪವಾಸ ವಿದ್ದು ಭಕ್ತಿ ಭಾವ ಮಡಿ, 18 ಅಡಿಯ ಬಿಲ್ಲನ್ನ ಏರಿ ಕಾರ್ಣಿಕ ನುಡಿ ಭವಿಷ್ಯ ನುಡಿದ ಗೊರವಯ್ಯ ರಾಮಣ್ಣ, ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯವಾಣಿ ನುಡಿದಿದ್ದಾರೆ ಸಂಪಾದೀತಲೇ ಪರಾಕ್.
|ವೆಂಕಪ್ಪಯ್ಯ ಒಡೆಯರ್, ಮೈಲಾರ ಕ್ಷೇತ್ರದ ಧರ್ಮದರ್ಶಿ
ಈ ಸಮಯದಲ್ಲಿ ಹೂವಿನಹಡಗಲಿ ಶಾಸಕ ಕೃಷ್ಣ ನಾಯಕ್
ಮಾತನಾಡಿದ ಅವರು ತುಂಬಿದ ಕೊಡಾ ತುಳುಕಿತಲೇ ಪರಾಕ್ ಎಂಬ ಎರಡೇ ಶಬ್ದದಲ್ಲಿ ಈ ವರ್ಷದ ದೈವವಾಣಿ ಹೇಳಿದ ಗೊರವಯ್ಯ ರಾಮಣ್ಣ, ಗೊರವಯ್ಯನ ಹೇಳಿಕೆಯಿಂದ ನೆರೆದಿದ್ದ ಲಕ್ಷಾಂತರ ಜನರಿಂದ ವ್ಯಕ್ತವಾದ ಹರ್ಷಾದ್ಘೋರ ಮುಗಿಲು ಮುಟ್ಟಿತು.ಈ ಬಾರಿ ಉತ್ತಮ ಮಳೆ,ಬೆಳೆಯಾಗಲಿದೆ. ದೇಶ ಸುಭಿಕ್ಷೆಯಾಗಿರಲಿದೆ ಎಂದು ಅರ್ಥೈಸಲಾಗುತ್ತಿದೆ.
ಇದಕ್ಕೂ ಮೊದಲು ಮೈಲಾರಲಿಂಗೇಶ್ವರನ ದೇವಸ್ಥಾನದಿಂದ ಶ್ರೀ ವೆಂಕಪ್ಪಯ್ಯ ಒಡೆಯರ್ ಕುದುರೆಯನ್ನೇರಿ ಡೆಂಕನಮರಡಿ ಪ್ರದೇಶದವರೆಗೆ ಮೆರವಣಿ ಮೂಲಕ ಸಾಗಿ ಬಂದು ಕಾರ್ಣಿಕ ನುಡಿಯುವ ಸ್ಥಳದ ಸುತ್ತ ಪ್ರದಕ್ಷಿಣೆ ಹಾಕಿ, ಭಕ್ತರಿಗೆ ಆಶೀರ್ವಾದ ನೀಡಿದರು. ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸೇರಿ ರಾಜ್ಯದ ಮೂಲೆ ಮೂಲೆಗಳಿಂದ ಬಂದ ಲಕ್ಷಾಂತ ಭಕ್ತರು ನೆರೆದಿದ್ದರು.
ಒಟ್ಟಾರೆ ಹೇಳುವುದಾದರೆ, ಈ ಬಾರಿಯ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವವು ದೇಶ ಸುಭಿಕ್ಷವಾಗಿರಲಿದೆ, ಮಳೆ ಬೆಳೆ ಚೆನ್ನಾಗಿ ಆಗಲಿದೆ.. ರೈತರು ಉತ್ತಮ ರೀತಿಯಲ್ಲಿ ಇರ್ತಾರೆ ಅನ್ನೋ ಸಂದೇಶ ನೀಡಿದಂತಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ4 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ5 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ7 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ2 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ1 day ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ5 hours ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ