ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು


