ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2023/04/ambedkar_hamsalekha_suddidina.jpg&description=ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2023/04/ambedkar_hamsalekha_suddidina.jpg&description=ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ', 'pinterestShare', 'width=750,height=350'); return false;" title="Pin This Post">
- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ5 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ6 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ6 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ6 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ


