ದಿನದ ಸುದ್ದಿ
ಭಾರತ ಭಾಗ್ಯವಿಧಾತರೊಟ್ಟಿಗೆ ಹಂಸಲೇಖರ ಅನುಸಂಧಾನ
- ಹಾರೋಹಳ್ಳಿ ರವೀಂದ್ರ
ಅಮರ್ತ್ಯ ಸೇನ್ ಅವರಿಗೆ ನೊಬೆಲ್ ಬಂದಾಗ ಅವರು “ನಾನು ಹೊಸತೇನನ್ನು ಮಾಡಿಲ್ಲ, ಬಾಬಾಸಾಹೇಬರ ಆರ್ಥಿಕ ಸಿದ್ಧಾಂತಗಳನ್ನು ವಿಸ್ತರಿಸಿದ್ದೇನಷ್ಟೆ ಎಂದು ಹೇಳಿದರು. ಅಮೇರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯವು ತನ್ನ 250 ವರ್ಷಗಳ ಚರಿತ್ರೆಯಲ್ಲಿ ಶ್ರೇಷ್ಠ ವಿದ್ಯಾರ್ಥಿ ಯಾರು? ಎಂದು ಹುಡುಕಿದಾಗ ಅವರ ಕಣ್ಣಿಗೆ ಕಂಡಿದ್ದು ಅಂಬೇಡ್ಕರ್”. ಹೀಗೆ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ದಲಿತರಷ್ಟೆ ಅಲ್ಲದೆ, ದಲಿತೇತರರು ಹಾಗೂ ಭಾರತೀಯೇತರರು ಕೂಡ ಅತಿ ಹೆಚ್ಚು ಹುಡುಕಾಟ ನಡೆಸಿದ್ದಾರೆ.
2017 ರಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವದಲ್ಲಿತ್ತು. ಆ ವರ್ಷ ಡಾ. ಬಿ. ಆರ. ಅಂಬೇಡ್ಕರ್ ಅವರಿಗೆ 125 ನೇ ಜನ್ಮದಿನ. ಅವರ ನೆನಪಿನಾರ್ಥಕವಾಗಿ ಸರ್ಕಾರವು ವಾರ್ತಾಇಲಾಖೆಯ ಮೂಲಕ ‘ಭಾರತ ಭಾಗ್ಯವಿಧಾತ’ ಎಂಬ ಶೀರ್ಷಿಕೆಯಡಿ ಅಂಬೇಡ್ಕರ್ ಅವರ ಜೀವನ ಸಾಧನೆ ಕುರಿತು 1 ಗಂಟೆ 29 ನಿಮಿಷಗಳ ಧ್ವನಿ ಬೆಳಕು ದೃಶ್ಯ ರೂಪವನ್ನು ನಿರ್ಮಾಣ ಮಾಡಲಾಯಿತು.
ಅಂದು ಆ ರಂಗ ರೂಪಕ್ಕೆ ಬಿ. ಎಂ. ಗಿರಿರಾಜ್ ಅವರು ನಿರ್ದೇಶಕರಾಗಿದರೆ, ಶೀರ್ಷಿಕೆ ಗೀತೆ ರಚನೆಯನ್ನು ಕೆ. ವೈ. ನಾರಾಯಣಸ್ವಾಮಿ ಮಾಡಿದ್ದರು. ಇದರೊಟ್ಟಿಗೆ ಒಟ್ಟು 80 ಮಂದಿ ರಂಗ ಕಲಾವಿದರು ಕೆಲಸ ಮಾಡಿದರು. ಈ ಭಾರತ ಭಾಗ್ಯವಿಧಾತ ಧ್ವನಿ ಮತ್ತು ಬೆಳಕು ದೃಶ್ಯ ರಂಗದಲ್ಲಿ ಅಂಬೇಡ್ಕರ್ ಅವರ ಹಲವು ಸಾಧನೆಗಳನ್ನು ಘನೀಕರಿಸಲಾಯಿತು. ಭಾಕ್ರಾನಂಗಲ್ ಅಣೆಕಟ್ಟು, ಹಿರಾಕುಡ್ ಯೋಜನೆ, ರಿಸರ್ವ್ ಬ್ಯಾಂಕ್ ಸ್ಥಾಪನೆ, ಅಸ್ಪೃಶ್ಯತೆ ವಿರುದ್ಧ ಹೋರಾಟ, ಹಿಂದೂ ಕೋಡ್ ಬಿಲ್, ಕಾರ್ಮಿಕ ಚಳವಳಿ ಹಾಗೂ ಕಾನೂನು ಮಂತ್ರಿ ಹೀಗೆ ಮುಂತಾದ ವಿಚಾರಗಳನ್ನು ಅಲ್ಲಿ ತರಲಾಯಿತು.
ಈ ದೃಶ್ಯ ರಂಗರೂಪಕವು ಕರ್ನಾಟಕದಾದ್ಯಂತ ನಡೆಯಿತು. ಅದರ ಹಿಂದೆ ದಲಿತರು, ದಲಿತೇತರರು ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರು. ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಅವರೊಟ್ಟಿಗೆ ದಲಿತೇತರರ ಪಾತ್ರ ಎಷ್ಟಿತ್ತೊ ಇಂದು ಅವರ ವಿಚಾರಗಳೊಟ್ಟಿಗೆ ದಲಿತರನ್ನು ಹೊರತುಪಡಿಸಿದ ಹಲವಾರು ಜನಾಂಗಗಳು ಇಂದಿಗೂ ಸಾಗುತ್ತಿವೆ.
ವಾರ್ತಾ ಇಲಾಖೆಯಿಂದ ಮಾಡಿದ ಭಾರತ ಭಾಗ್ಯವಿಧಾತಕ್ಕೆ ಕವಿ ಡಾ. ಸಿದ್ಧಲಿಂಗಯ್ಯ, ಎಲ್. ಹನುಮಂತಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿದ್ದ ಎನ್. ಆರ್. ವಿಶು ಕುಮಾರ್ ರವರಂತವರು ಸಲಹಾ ಮಂಡಳಿಯಲ್ಲಿದ್ದರು. ಆದರೆ ಒಟ್ಟಾರೆ ಕಾರ್ಯಕ್ರಮದ ಗೌರವ ಸಲಹೆಗಾರರಾಗಿ ಹೆಸರಾಂತ ಸಂಗೀತಗಾರ ಡಾ. ಹಂಸಲೇಖ ಮತ್ತು ಸಿ. ಬಸವಲಿಂಗಯ್ಯನವರಿದ್ದರು.
ಕರ್ನಾಟಕದಲ್ಲಿ ಪ್ರತಿ ಜಿಲ್ಲೆ, ತಾಲ್ಲೂಕು ಮೂಲೆ ಮೂಲೆಗೆ ಭಾರತ ಭಾಗ್ಯವಿಧಾತ ತಲುಪುವುದರ ಹಿಂದೆ ಸಂಗೀತ ವಿದ್ವಾಂಸ ಹಂಸಲೇಖ ಅವರ ಶ್ರಮವನ್ನೂ ಕೂಡ ನೆನೆಯಬೇಕು. ಅಂಬೇಡ್ಕರ್ ಅವರು ಸಂಗೀತ, ಸಾಹಿತ್ಯ, ಚಲನಚಿತ್ರ, ರಂಗ ಪ್ರಯೋಗ ಹೀಗೆ ಹಲವು ಮಾಧ್ಯಮಗಳ ಮೂಲಕ ತಲುಪುತಿರುವುದಕ್ಕೆ ದಲಿತೇತರರ ಪಾತ್ರ ಮಹತ್ತರವಾದದ್ದು. ಬಹುತೇಕ ಇಂತಹ ಮಹಾನ್ ಕಾರ್ಯಗಳನ್ನು ದಲಿತರಿಗಿಂತ, ದಲಿತ ನಾಯಕರಿಗಿಂತ ದಲಿತೇತರರು ಮಾಡಿದ್ದೇ ಹೆಚ್ಚು. ಆದರೆ ನಾವು ಅವರನ್ನು ಕನಿಷ್ಠ ಸೌಜನ್ಯವನ್ನು ತೋರಿಸದೆ ದೂಷಿಸುತ್ತಲೇ ಕಾಲ ಕಳೆಯುತಿದ್ದೇವೆ.
ಹಂಸಲೇಖ ಅವರು ಅಂಬೇಡ್ಕರ್ ಅವರ ಬಗೆ ಒಂದೆರಡು ಮಾತನಾಡಿ ಪ್ರಚಾರಕ್ಕಾಗಿ ನಿಂತವರಲ್ಲ. ಗೌರವ ಸಲಹೆಗಾರರಾಗಿ ಮನೆ ಮನೆಗೆ ಅಂಬೇಡ್ಕರ್ ಅವರನ್ನು ತಲುಪಿಸಿದವರು. ಒಬ್ಬ ದಲಿತೇತರಾಗಿ ಹಂಸಲೇಖ ಅವರು ಭಾರತ ಭಾಗ್ಯವಿಧಾತರೊಂದಿಗೆ ನಡೆಸಿದ ರಂಗ ರೂಪಕ ಅನುಸಂಧಾನ. ಅವರ ಬಗ್ಗೆ ಹೇಳಲು ಸಾಕಷ್ಟಿದೆ, ಸದ್ಯಕ್ಕೆ ಇಷ್ಟು ಸಾಕು.
ಸೌಜನ್ಯ : ಫೇಸ್ಬುಕ್ (ಲೇಖರ ವಾಲ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ