Connect with us

ದಿನದ ಸುದ್ದಿ

ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ

Published

on

ಸುದ್ದಿದಿನ,ಬೆಂಗಳೂರು: ವಿಶ್ವಜ್ಞಾನಿ, ಭಾರತರತ್ನ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 130ನೇ ಜನ್ಮದಿನದ ಪ್ರಯುಕ್ತ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಂಶೋಧಕರು, “ಅಂಬೇಡ್ಕರ್ ಜೀವನ-ಸಾಧನೆಯಿಂದ ನಾವು ಕಲಿಯಬೇಕಾದುದೇನು?” ಎಂಬ ವಿಷಯದ ಕುರಿತು ಪ್ರಬಂಧವನ್ನು ಬರೆಯಬೇಕು.

ಆಯ್ಕೆಯಾದವರಿಗೆ, ಪ್ರಮಾಣ ಪತ್ರ ಮತ್ತು ಪ್ರಥಮ ಬಹುಮಾನ ರೂ. 3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ.1000 ಮತ್ತು ಉತ್ತೇಜನ ಬಹುಮಾನ ರೂ. 500 ನೀಡಲಾಗುವುದು ಎಂದು ಬೆಂಗಳೂರು ದಲಿತ್ ಫೋರಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ದಲಿತ್ ಫೋರಮ್ (ಬಿಡಿಎಫ್) ಎಂಬುದು ನಮ್ಮ ಸಂಸ್ಥೆ, ವಿಶ್ವಜ್ಞಾನಿ, ಭಾರತರತ್ನ, ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಚಿಂತನೆ ಮತ್ತು ಬೋಧನೆಯಿಂದ ನಮ್ಮ ಸಂಸ್ಥೆ ಸ್ಫೂರ್ತಿ ಪಡೆದುಕೊಂಡಿದೆ. ಈ ಚಿಂತನೆಯನ್ನು ವಿಶೇಷವಾಗಿ ವಿದ್ಯಾರ್ಥಿ-ಯುವಜನರಿಗೆ ತಲುಪಿಸುವುದಕ್ಕೆ ನಮ್ಮ ಸಂಸ್ಥೆ ತನ್ನನ್ನು ಅರ್ಪಿಸಿಕೊಂಡಿದೆ, ಹಾಗೆಯೆ, ದಲಿತ ಸಮುದಾಯಕ್ಕೆ ಸಂಬಂಧಿಸಿದ ವಿಭಿನ್ನ ವಿಷಯಗಳನ್ನು ಅರಿತುಕೊಳ್ಳಲು, ಅಧ್ಯಯನ ಮಾಡಲು ಮತ್ತು ವಿಶ್ಲೇಷಣೆ ಮಾಡಲು 5 ವರ್ಷಗಳಿಂದ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ.

ವಿದ್ಯಾರ್ಥಿ-ಯುವಜನರೊಂದಿಗೆ ಸಂವಾದ, ವಿಚಾರ ವಿನಿಮಯ, ಪ್ರಶ್ನೋತ್ತರದಂಥ ಅನೇಕ ಕಾರ್ಯಕ್ರಮಗಳನ್ನು ಬಿಡಿಎಫ್ ಇದುವರೆಗೆ ಹಮ್ಮಿಕೊಂಡು ಬಂದಿದೆ.
ಬಿಡಿಎಫ್ ಇದುವರೆಗೆ ಅನೇಕ ಕಿರುಪುಸ್ತಕಗಳನ್ನು ವಿದ್ಯಾರ್ಥಿ ಯುವಜನರಿಗೆ ಉಚಿತವಾಗಿ ನೀಡಿದೆ. ಡಾ. ಅಂಬೇಡ್ಕರ್ ಅವರು ಸಂವಿಧಾನದ ಕರಡು ಪ್ರತಿಯನ್ನು ಸಂವಿಧಾನ ರಚನಾ ಸಭೆಗೆ ಸಲ್ಲಿಸಿದ ನಂತರ ಮಾಡಿದ ಭಾಷಣದ ಕನ್ನಡ ಅನುವಾದದ 2000 ಪ್ರತಿಗಳನ್ನು ಕೂಡ ವಿದ್ಯಾರ್ಥಿಗಳಿಗೆ ಮತ್ತು ಯುವಜನರಿಗೆ ತಲುಪಿಸಿದೆ.

2019ರ ‘ಸಂವಿಧಾನ ಜಾರಿಗೊಂಡ ದಿನ’ ಅಂದರೆ ಜನವರಿ 26ರಂದು ಬೆಂಗಳೂರಿನ ಹತ್ತು ಮೆಟ್ರೋ ರೇಲ್ವೆ ನಿಲ್ದಾಣಗಳಲ್ಲಿ ಒಂದು ಗಂಟೆ ಕಾಲ ‘ಎಕ್ಸಿಟ್’ ಗೇಟ್ ಬಳಿ ನಿಂತು, ಮೆಟ್ರೋ ಪ್ರಯಾಣ ಮುಗಿಸಿಕೊಂಡು ತೆರಳುತ್ತಿದ್ದ 8000 ಮಂದಿ ಪ್ರಯಾಣಿಕರಿಗೆ ‘ಸಂವಿಧಾನದ ಪೀಠಿಕೆ’ ಕಾರ್ಡ್ಗಳನ್ನು ನೀಡಲಾಗಿದೆ.

ನಗರಮತ್ತು ಗ್ರಾಮೀಣ ಪ್ರದೇಶದ ನೂರಾರು ಕಾಲೇಜು ಗಳಿಗೆ ಈ ಕಾರ್ಡ್ಗಳನ್ನು ವಿತರಿಸಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ (ಶಾಲೆ/ಕಾಲೇಜು)ಗಳ ಜೊತೆ ಸಂವಾದ ನಡೆಸಲಾಗಿದೆ.

ಈಗ, ಡಾ. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ, ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ವಿವಿಧ ವಿಭಾಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲು ಬಿಡಿಎಫ್ ಆಶಿಸಿದೆ. ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಬೇಕೆಂದು ಕೋರಲಾಗಿದೆ.

ನಿಬಂಧನೆಗಳು

1. ಪ್ರಬಂಧವು ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ 2000 – 3000 ಪದಗಳ ಒಳಗೆ ಇರಬೇಕು. ಕನ್ನಡ ಪ್ರಬಂಧವನ್ನು ಸಾಫ್ಟ್ ಕಾಪಿ ಕಳಿಸುವುದಾದರೆ, ಪ್ರಬಂಧವು ನುಡಿ ತಂತ್ರಾಂಶದಲ್ಲಿ ಇರಬೇಕು

2. ಪ್ರಬಂಧವನ್ನು ಈಮೇಲ್ ಮೂಲಕ ಅಥವಾ ರಿಜಿಸ್ಟರ್ಡ್ ಅಂಚೆ ಮೂಲಕ ಕಳಿಸಬಹುದು.

3. ಪ್ರಬಂಧದಲ್ಲಿ ಉಲ್ಲೇಖಗಳಿಗೆ, ಉದೃ ಭಾಗಗಳಿಗೆ ಅವಕಾಶ ಇದೆ; ಆದರೆ, ಕೃತಿಚೌರ್ಯಕ್ಕೆ ಅವಕಾಶ ಇಲ್ಲ.

4. ಪ್ರಬಂಧಕ್ಕೆ ಪುಟಸಂಖ್ಯೆಗಳನ್ನು ಹಾಕಿರಬೇಕು.

5. ಸ್ನಾತಕೋತ್ತರ ಅಥವಾ ಸಂಶೋಧನಾ ವಿದ್ಯಾರ್ಥಿ-ವಿದ್ಯಾರ್ಥಿನಿ ಆಗಿರುವ ಬಗ್ಗೆ ವಿಭಾಗ ಮುಖ್ಯಸ್ಥರಿಂದ/ಮಾರ್ಗದರ್ಶಕ ಪ್ರಾಧ್ಯಾಪಕರಿಂದ ಧೃಡೀಕರಣ ಪ್ರಮಾಣಪತ್ರವನ್ನು ಲಗತ್ತಿಸಿರಬೇಕು.

6. ಸ್ವೀಕರಿಸಿದ ಪ್ರಬಂಧಗಳನ್ನು ಹಿಂತಿರುಗಿಸಲಾಗುವುದಿಲ್ಲ.

7. ಈ ಎಲ್ಲಾ ಪ್ರಬಂಧಗಳನ್ನು ಪುಸ್ತಕದ ರೂಪದಲ್ಲಿ ಪ್ರಕಟಿಸುವ ಹಕ್ಕು ಬಿಡಿಎಫ್ ಬಳಿ ಇರುತ್ತದೆ.

8. ಪ್ರಬಂಧಗಳನ್ನು ಸ್ವೀಕರಿಸಲು ಕಡೇ ದಿನಾಂಕ 13 ಏಪ್ರಿಲ್ 2021 ರಾತ್ರಿ 8ಗಂಟೆವರೆಗೆ

ಪ್ರಬಂಧ ಕಳಿಸಬೇಕಾದ ವಿಳಾಸ

ಬೆಂಗಳೂರು ದಲಿತ್ ಫೋರಮ್, ಫ್ಲಾಟ್ ನಂಬರ್ 229, ರೇಡಿಯಂಟ್ ಕರೇಲ್ ಅಪಾರ್ಟ್ಮೆಂಟ್, ನಾಯಂಡಹಳ್ಳಿ, ಬೆಂಗಳೂರು-560 069 ಮೊಬೈಲ್ ನಂಬರ್ 9880412233, ಇಮೇಲ್: bdftim@gmail.com

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending