Connect with us

ದಿನದ ಸುದ್ದಿ

ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ

Published

on

ಸುದ್ದಿದಿನ,ಬೆಂಗಳೂರು: ವಿಶ್ವಜ್ಞಾನಿ, ಭಾರತರತ್ನ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 130ನೇ ಜನ್ಮದಿನದ ಪ್ರಯುಕ್ತ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಂಶೋಧಕರು, “ಅಂಬೇಡ್ಕರ್ ಜೀವನ-ಸಾಧನೆಯಿಂದ ನಾವು ಕಲಿಯಬೇಕಾದುದೇನು?” ಎಂಬ ವಿಷಯದ ಕುರಿತು ಪ್ರಬಂಧವನ್ನು ಬರೆಯಬೇಕು.

ಆಯ್ಕೆಯಾದವರಿಗೆ, ಪ್ರಮಾಣ ಪತ್ರ ಮತ್ತು ಪ್ರಥಮ ಬಹುಮಾನ ರೂ. 3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ.1000 ಮತ್ತು ಉತ್ತೇಜನ ಬಹುಮಾನ ರೂ. 500 ನೀಡಲಾಗುವುದು ಎಂದು ಬೆಂಗಳೂರು ದಲಿತ್ ಫೋರಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ದಲಿತ್ ಫೋರಮ್ (ಬಿಡಿಎಫ್) ಎಂಬುದು ನಮ್ಮ ಸಂಸ್ಥೆ, ವಿಶ್ವಜ್ಞಾನಿ, ಭಾರತರತ್ನ, ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಚಿಂತನೆ ಮತ್ತು ಬೋಧನೆಯಿಂದ ನಮ್ಮ ಸಂಸ್ಥೆ ಸ್ಫೂರ್ತಿ ಪಡೆದುಕೊಂಡಿದೆ. ಈ ಚಿಂತನೆಯನ್ನು ವಿಶೇಷವಾಗಿ ವಿದ್ಯಾರ್ಥಿ-ಯುವಜನರಿಗೆ ತಲುಪಿಸುವುದಕ್ಕೆ ನಮ್ಮ ಸಂಸ್ಥೆ ತನ್ನನ್ನು ಅರ್ಪಿಸಿಕೊಂಡಿದೆ, ಹಾಗೆಯೆ, ದಲಿತ ಸಮುದಾಯಕ್ಕೆ ಸಂಬಂಧಿಸಿದ ವಿಭಿನ್ನ ವಿಷಯಗಳನ್ನು ಅರಿತುಕೊಳ್ಳಲು, ಅಧ್ಯಯನ ಮಾಡಲು ಮತ್ತು ವಿಶ್ಲೇಷಣೆ ಮಾಡಲು 5 ವರ್ಷಗಳಿಂದ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ.

ವಿದ್ಯಾರ್ಥಿ-ಯುವಜನರೊಂದಿಗೆ ಸಂವಾದ, ವಿಚಾರ ವಿನಿಮಯ, ಪ್ರಶ್ನೋತ್ತರದಂಥ ಅನೇಕ ಕಾರ್ಯಕ್ರಮಗಳನ್ನು ಬಿಡಿಎಫ್ ಇದುವರೆಗೆ ಹಮ್ಮಿಕೊಂಡು ಬಂದಿದೆ.
ಬಿಡಿಎಫ್ ಇದುವರೆಗೆ ಅನೇಕ ಕಿರುಪುಸ್ತಕಗಳನ್ನು ವಿದ್ಯಾರ್ಥಿ ಯುವಜನರಿಗೆ ಉಚಿತವಾಗಿ ನೀಡಿದೆ. ಡಾ. ಅಂಬೇಡ್ಕರ್ ಅವರು ಸಂವಿಧಾನದ ಕರಡು ಪ್ರತಿಯನ್ನು ಸಂವಿಧಾನ ರಚನಾ ಸಭೆಗೆ ಸಲ್ಲಿಸಿದ ನಂತರ ಮಾಡಿದ ಭಾಷಣದ ಕನ್ನಡ ಅನುವಾದದ 2000 ಪ್ರತಿಗಳನ್ನು ಕೂಡ ವಿದ್ಯಾರ್ಥಿಗಳಿಗೆ ಮತ್ತು ಯುವಜನರಿಗೆ ತಲುಪಿಸಿದೆ.

2019ರ ‘ಸಂವಿಧಾನ ಜಾರಿಗೊಂಡ ದಿನ’ ಅಂದರೆ ಜನವರಿ 26ರಂದು ಬೆಂಗಳೂರಿನ ಹತ್ತು ಮೆಟ್ರೋ ರೇಲ್ವೆ ನಿಲ್ದಾಣಗಳಲ್ಲಿ ಒಂದು ಗಂಟೆ ಕಾಲ ‘ಎಕ್ಸಿಟ್’ ಗೇಟ್ ಬಳಿ ನಿಂತು, ಮೆಟ್ರೋ ಪ್ರಯಾಣ ಮುಗಿಸಿಕೊಂಡು ತೆರಳುತ್ತಿದ್ದ 8000 ಮಂದಿ ಪ್ರಯಾಣಿಕರಿಗೆ ‘ಸಂವಿಧಾನದ ಪೀಠಿಕೆ’ ಕಾರ್ಡ್ಗಳನ್ನು ನೀಡಲಾಗಿದೆ.

ನಗರಮತ್ತು ಗ್ರಾಮೀಣ ಪ್ರದೇಶದ ನೂರಾರು ಕಾಲೇಜು ಗಳಿಗೆ ಈ ಕಾರ್ಡ್ಗಳನ್ನು ವಿತರಿಸಲಾಗಿದೆ. ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ (ಶಾಲೆ/ಕಾಲೇಜು)ಗಳ ಜೊತೆ ಸಂವಾದ ನಡೆಸಲಾಗಿದೆ.

ಈಗ, ಡಾ. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ, ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ವಿವಿಧ ವಿಭಾಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲು ಬಿಡಿಎಫ್ ಆಶಿಸಿದೆ. ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಬೇಕೆಂದು ಕೋರಲಾಗಿದೆ.

ನಿಬಂಧನೆಗಳು

1. ಪ್ರಬಂಧವು ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ 2000 – 3000 ಪದಗಳ ಒಳಗೆ ಇರಬೇಕು. ಕನ್ನಡ ಪ್ರಬಂಧವನ್ನು ಸಾಫ್ಟ್ ಕಾಪಿ ಕಳಿಸುವುದಾದರೆ, ಪ್ರಬಂಧವು ನುಡಿ ತಂತ್ರಾಂಶದಲ್ಲಿ ಇರಬೇಕು

2. ಪ್ರಬಂಧವನ್ನು ಈಮೇಲ್ ಮೂಲಕ ಅಥವಾ ರಿಜಿಸ್ಟರ್ಡ್ ಅಂಚೆ ಮೂಲಕ ಕಳಿಸಬಹುದು.

3. ಪ್ರಬಂಧದಲ್ಲಿ ಉಲ್ಲೇಖಗಳಿಗೆ, ಉದೃ ಭಾಗಗಳಿಗೆ ಅವಕಾಶ ಇದೆ; ಆದರೆ, ಕೃತಿಚೌರ್ಯಕ್ಕೆ ಅವಕಾಶ ಇಲ್ಲ.

4. ಪ್ರಬಂಧಕ್ಕೆ ಪುಟಸಂಖ್ಯೆಗಳನ್ನು ಹಾಕಿರಬೇಕು.

5. ಸ್ನಾತಕೋತ್ತರ ಅಥವಾ ಸಂಶೋಧನಾ ವಿದ್ಯಾರ್ಥಿ-ವಿದ್ಯಾರ್ಥಿನಿ ಆಗಿರುವ ಬಗ್ಗೆ ವಿಭಾಗ ಮುಖ್ಯಸ್ಥರಿಂದ/ಮಾರ್ಗದರ್ಶಕ ಪ್ರಾಧ್ಯಾಪಕರಿಂದ ಧೃಡೀಕರಣ ಪ್ರಮಾಣಪತ್ರವನ್ನು ಲಗತ್ತಿಸಿರಬೇಕು.

6. ಸ್ವೀಕರಿಸಿದ ಪ್ರಬಂಧಗಳನ್ನು ಹಿಂತಿರುಗಿಸಲಾಗುವುದಿಲ್ಲ.

7. ಈ ಎಲ್ಲಾ ಪ್ರಬಂಧಗಳನ್ನು ಪುಸ್ತಕದ ರೂಪದಲ್ಲಿ ಪ್ರಕಟಿಸುವ ಹಕ್ಕು ಬಿಡಿಎಫ್ ಬಳಿ ಇರುತ್ತದೆ.

8. ಪ್ರಬಂಧಗಳನ್ನು ಸ್ವೀಕರಿಸಲು ಕಡೇ ದಿನಾಂಕ 13 ಏಪ್ರಿಲ್ 2021 ರಾತ್ರಿ 8ಗಂಟೆವರೆಗೆ

ಪ್ರಬಂಧ ಕಳಿಸಬೇಕಾದ ವಿಳಾಸ

ಬೆಂಗಳೂರು ದಲಿತ್ ಫೋರಮ್, ಫ್ಲಾಟ್ ನಂಬರ್ 229, ರೇಡಿಯಂಟ್ ಕರೇಲ್ ಅಪಾರ್ಟ್ಮೆಂಟ್, ನಾಯಂಡಹಳ್ಳಿ, ಬೆಂಗಳೂರು-560 069 ಮೊಬೈಲ್ ನಂಬರ್ 9880412233, ಇಮೇಲ್: bdftim@gmail.com

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending