Connect with us

ದಿನದ ಸುದ್ದಿ

ಅಂಬೇಡ್ಕರ್ ಚಿಂತನೆಗಳು ಮತ್ತು ಸಮಾಜವಾದ

Published

on

  • ಮ ಶ್ರೀ ಮುರಳಿ ಕೃಷ್ಣ, ಬೆಂಗಳೂರು

ಅಂಬೇಡ್ಕರ್, ಮಾರ್ಕ್ಸ್‌ವಾದ ಹಾಗೂ ಮಾರ್ಕ್ಸ್‌ವಾದಿಗಳ ಬಗೆಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರು ಎಂಬುದು ದಿಟ. ಅವರು ತಮ್ಮ ‘ಬುದ್ಧ ಅಥವಾ ಮಾರ್ಕ್ಸ್’ ಕೃತಿಯಲ್ಲಿ ಮೇಲೆ ಪುಸ್ತಾಪಿಸಿರುವ ಭಿನ್ನಾಭಿಪ್ರಾಯಗಳ ಬಗೆಗೆ ವಿಶದವಾಗಿ ಚರ್ಚಿಸಿದ್ದಾರೆ. ಸಂಘಟನಾತ್ಮಕವಾಗಿಯೂ ಅವರಿಗೆ ಭಾರತ ಕಮ್ಯುನಿಸ್ಟ್ ಪಕ್ಷ ಕುರಿತು ಭಿನ್ನಮತವಿತ್ತು. ಇದರ ಹಿನ್ನೆಲೆಯಲ್ಲೇ, ಅವರು 1936ರಲ್ಲಿ ಕಾರ್ಮಿಕ ಪಕ್ಷವನ್ನು ಸ್ಥಾಪಿಸಿದರು. ಆದರೆ ಈ ಎರಡೂ ಪಕ್ಷಗಳ ಗುರಿ ಒಂದೇ ಆಗಿತ್ತು.

ಅದೇ ಭಾರತದಲ್ಲಿ ಸಮಾಜವಾದಿ ವ್ಯವಸ್ಥೆಯ ಸ್ಥಾಪನೆ. ಅವರು 1938ರ ಮೇ 15ರಂದು ಮಹಾರಾಷ್ಟ್ರದ ದೇವರಖ ಎಂಬ ಸ್ಥಳದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡುತ್ತ, ” ನಮ್ಮ ದೇಶದಲ್ಲಿ ರೈತರು ಮತ್ತು ಕಾರ್ಮಿಕರೇ ಬಹುಸಂಖ್ಯಾತರು. ಈ ವರ್ಗದವರೇ ಆಡಳಿತ ವರ್ಗವಾಗಿ ಹೊರಹೊಮ್ಮಬೇಕು….” ಹೀಗಾಗಿ ಈ ಎರಡೂ ಪಕ್ಷಗಳ ನಡುವೆ ತಾತ್ವಿಕ ಭಿನ್ನಾಭಿಪ್ರಾಯಗಳು ಇರಲಿಲ್ಲ. ಆದರೆ ಮಾರ್ಗ ಮತ್ತು ಕಾರ್ಯತಂತ್ರಗಳ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳಿದ್ದವು.

ಅವರು ತಮ್ಮ ಅನೇಕ ಬರಹಗಳಲ್ಲಿ ಸ್ವಾತಂತ್ರ್ಯ ಮತ್ತು ಸಮಾನತೆ ಎರಡೂ ಸಾಂವಿಧಾನಿಕವಾಗಿ ನಮ್ಮ ಮೂಲಭೂತ ಹಕ್ಕಾಗಬೇಕು ಎಂಬ ವಿಷಯವನ್ನು ಮಂಡಿಸುತ್ತ ಇದಕ್ಕೆ ಸಂಬಂಧಿಸಿದ ಅನೇಕ ವಿಚಾರಗಳ ಬಗೆಗೆ ಬೆಳಕನ್ನು ಚೆಲ್ಲಿದ್ದಾರೆ. ಭೂ ಸುಧಾರಣೆ ಕುರಿತು ಸಂಸತ್ತಿನಲ್ಲಿ ಮಾತನಾಡುತ್ತ ನಮ್ಮ ದೇಶದಲ್ಲಿ ಸಮಾನತೆಯು ನೆಲಸಬೇಕಾದರೇ ರಷ್ಯಾದಲ್ಲಿ ಜರುಗಿದಂತೆ ಭೂಮಿಯ ರಾಷ್ಟ್ರೀಕರಣವಾಗಬೇಕು ಎಂದು ಬಲವಾಗಿ ತಮ್ಮ ವಾದವನ್ನು ಮುಂದಿಟ್ಟಿದ್ದರು.

ಅಂಬೇಡ್ಕರ್ ಅವರು ಒಮ್ಮೆ ಫ್ರೆಂಚ್ ಮತ್ತು ರಷ್ಯಾದಲ್ಲಿ ಜರುಗಿದ ಸಮಾಜವಾದಿ ಕ್ರಾಂತಿಗಳನ್ನು ಒಂದು ಸಿಹಿಖಾದ್ಯದ ಉದಾಹರಣೆಯ ಮೂಲಕ ವಿವರಿಸಿದ್ದರು. ” ಫ್ರೆಂಚ್ ಕ್ರಾಂತಿ ಹೋಳಿಗೆಯ ಹೊರಗಡೆಯ ಪದರಾದರೇ ರಷ್ಯಾದ ಕ್ರಾಂತಿ ಅದರ ಹೂರಣದಂತೆ, ಹೋಳಿಗೆಯ ರುಚಿಗೆ ಎರಡೂ ತುಂಬ ಮುಖ್ಯ. ಒಂದರ ಗೈರುಹಾಜರಿ ಇಡೀ ಹೋಳಿಗೆಯ ರುಚಿಗೆ ಧಕ್ಕೆಯಾಗುತ್ತದೆ.” ಎಂಬ ಮಾತುಗಳನ್ನು ಆಡಿದ್ದರು.

1848ರಲ್ಲಿ ಕಾರ್ಲ್ ಮಾರ್ಕ್ಸ್ ಮತ್ತು ಫುಡ್ರಿಕ್ ಏಂಗಲ್ಸ್ ‘ ಕಮ್ಯುನಿಸ್ಟ್ ಪುಣಾಳಿಕ ‘ (‘ ದಿ ಕಮ್ಯುನಿಸ್ಟ್ ಮ್ಯಾನಿಫೆಸ್ಕೊ) ಯನ್ನು ಪ್ರಕಟಿಸಿದರು. ಇದರಲ್ಲಿ ಒಂದು ಸಂಘಟಿತ ಶ್ರಮಜೀವಿ ವರ್ಗ ಆಳುವ ವರ್ಗವಾಗಿ ಪರಿವರ್ತನೆಯಾಗುವುದರ ನಿಟ್ಟಿನಲ್ಲಿ ಕ್ರಮಗಳನ್ನು ತಿಳಿಸಲಾಗಿದೆ. ಅಂಬೇಡ್ಕರ್ 1946ರಲ್ಲಿ ಘಟನಾ ಸಭೆಗೆ ಸಂವಿಧಾನದ ಕರಡನ್ನು ಸಲ್ಲಿಸಿದರು. ಇದನ್ನು ಅಖಿಲ ಭಾರತ ಪರಿಶಿಷ್ಟ ಜಾತಿಗಳ ಒಕ್ಕೂಟದ ಪರವಾಗಿ ನೀಡಲಾಯಿತು. ಮೇಲೆ ಪ್ರಸ್ತಾಪಿಸಿರುವ ಎರಡೂ ದಸ್ತಾವೇಜುಗಳ ನಡುವಿನ ಅನೇಕ ಅಂಶಗಳಲ್ಲಿ ಸಾಮ್ಯತೆಯಿದೆ.

ಕಾರ್ಲ್ ಮಾರ್ಕ್ಸ್ ಮತ್ತು ಫುಡ್ರಿಕ್ ಏಂಗೆಲ್ಸ್’ ಪತಿಪಾದಿಸಿದ್ದನ್ನು ‘ಸಮಾಜವಾದಿ ಪ್ರಭುತ್ವ’ ಎಂದು ಬಣ್ಣಿಸಬಹುದು. ಅಂಬೇಡ್ಕರ್ ಮಂಡಿಸಿದ್ದು ಪ್ರಭುತ್ವ ಸಮಾಜವಾದಿ’ ಆರ್ಥಿಕ ನೀತಿ ಇದನ್ನು ಅವರು 1947ರಲ್ಲಿ ಬರೆದ ಪಭುತ್ವ ಮತ್ತು ಅಲ್ಪಸಂಖ್ಯಾತರು’ ಎಂಬ ಪುಸ್ತಕದಲ್ಲಿ ಈ ನೀತಿಯ ಉಲ್ಲೇಖವಿದೆ.

ಫೇಬಿಯನ್ ಸಮಾಜವಾದಿಯಾಗಿದ್ದ (ಜವಹರ್ ಲಾಲ್ ನೆಹರೂರವರನ್ನೂ ಹೀಗೆಂದೇ ಕರೆಯಲಾಗುತ್ತದೆ) ಅಂಬೇಡ್ಕರ್, ಕೈಗಾರಿಕೆ, ಶಿಕ್ಷಣ, ಕೃಷಿ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಸರ್ಕಾರದ ಪಾತ್ರವೇ ಶಿಖರಪ್ರಾಯವಾಗಿರಬೇಕೆಂದು ಅಭಿಪ್ರಾಯಪಟ್ಟಿದ್ದರು. ಪುಸ್ತುತ ಕಾಲಘಟ್ಟದಲ್ಲಿ ಆಳುವ ಸರ್ಕಾರಗಳು ಖಾಸಗೀಕರಣಕ್ಕೆ ಮಣೆಯನ್ನು ಹಾಕುತ್ತಿವೆ. ನಮ್ಮ ದೇಶದಲ್ಲಿರುವ ಸಾರ್ವಜನಿಕ ಕ್ಷೇತ್ರದ, ಜನತೆಯ ಹಣದಿಂದ ರಚಿಸಿರುವ ಆಸ್ತಿಗಳನ್ನು ಖಾಸಗಿಶಕ್ತಿಗಳಿಗೆ ಎಗ್ಗಿಲ್ಲದೆ ಮಾರಾಟ ಮಾಡಲಾಗುತ್ತಿದೆ. ಹೀಗೆ, ಅಂಬೇಡ್ಕರ್ ಪ್ರತಿಪಾದಿಸಿದ ಪ್ರಭುತ್ವ ಸಮಾಜವಾದಿ,ಆರ್ಥಿಕ ನೀತಿ ಈಗ ಮೂಲೆಗುಂಪಾಗಿದೆ.

ಸ್ವಾತಂತ್ರವನ್ನು ಪಡೆದ ಮೊದಲ ವರ್ಷಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಒಂದು ಮನನಯೋಗ್ಯ ಹೇಳಿಕೆಯನ್ನು ನೀಡಿದ್ದರು. “1947ರಲ್ಲಿ ಭಾರತ ರಾಜಕೀಯ ಪುಜಾಪ್ರಭುತ್ವವನ್ನು ಗಳಿಸಿತು. ಆದರೆ ಸಾಮಾಜಿಕ ಮತ್ತು ಆರ್ಥಿಕ ಪಜಾಪಭುತ್ವವನ್ನು ಪಡೆದಾಗಲೇ ರಾಜಕೀಯ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ.”

ಇಂದು ನಮ್ಮ ದೇಶಾದ್ಯಂತ 131ನೇ ಅಂಬೇಡ್ಕರ್ ಜಯಂತಿಯನ್ನು ನಾನಾ ರೀತಿಗಳಲ್ಲಿ ಆಚರಿಸಲಾಗುತ್ತಿದೆ. ಪುಸ್ತುತ, ನಮ್ಮಲ್ಲಿ ಫ್ಯಾಸಿಸ್ಟ್ ಶಕ್ತಿಗಳು ಅಟ್ಟಹಾಸದಿಂದ ಮುನ್ನಡೆಯುತ್ತಿವೆ. ಇವುಗಳಿಗೆ ಎದುರಾಗಿ ಪ್ರತಿರೋಧದ ನಡೆಗಳೂ ಇವೆ. ಆದರೆ ಅವು ಒಗ್ಗಟ್ಟಿನ ದನಿಗಳಾಗಿಲ್ಲ; ಹಜ್ಜೆಗಳಾಗಿಲ್ಲ. ಅಂಬೇಡ್ಕರ್ ಆಶಯದ ಸಮಾಜವಾದಿ ಸಮಾಜವನ್ನು ಸಾಕಾರಗೊಳಿಸುವುದು ಸಮಸಮಾಜ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ಬದ್ಧತೆಯಿರುವ ಎಲ್ಲ ಜನಪರ ಸಂಘಟನೆಗಳ ಆದ್ಯತೆಯಾಗಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending