Connect with us

ನೆಲದನಿ

ಮುಚ್ಚಿಡಲ್ಪಟ್ಟ ಅಂಬೇಡ್ಕರ್‍ರ ಭವ್ಯ ಇತಿಹಾಸ..!

Published

on

ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ರವರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ, ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲ್ಲಿ ಹುಟ್ಟಿದರು, ಬಾಲ್ಯದಿಂದಲೆ ಅಸ್ಪøಶ್ಯತೆಯ ನೋವನ್ನು ಅನುಭವಿಸಿದರು, ತಮ್ಮ ತಂದೆಯನ್ನು ನೋಡಲು ಗಾಡಿಯಲ್ಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು… ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರರು ಮುಂದೆ ಉನ್ನತ ಜ್ಞಾನ ಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ’ ಎನಿಸಿಕೊಂಡರು, ಅಸ್ಪೃಶ್ಯರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ ದೇಶದ ಜನತೆಗೆ ಗೊತ್ತಿರುವುದು ಸಾಧ್ಯವಿಲ್ಲ ಅಥವಾ ಮೇಲೆ ಹೇಳಿರುವುದೇ ಹೆಚ್ಚಿರಬೇಕು! ದಲಿತರಿಗೆ ಮೀಸಲಾತಿ ತಂದುಕೊಟ್ಟದ್ದಷ್ಟೆ ಅವರ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ತನ್ಮೂಲಕ ಅಂಬೇಡ್ಕರ್ ಎಂಬ ‘ಮಹಾನ್ ಇತಿಹಾಸವನ್ನು’ ಮುಚ್ಚಲಾಗುತ್ತಿದೆ!

ಹಾಗಿದ್ದರೆ ಅಂಬೇಡ್ಕರ್‍ರವರ ಸಾಧನೆ ಇದಿಷ್ಟು ಮಾತ್ರವಾ? ಅಥವಾ ಇನ್ನೇನು ಇಲ್ಲವಾ? ಯಾಕೆಂದರೆ 2006ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಅಧ್ಯಕ್ಷ ಜಾರ್ಜ್‍ಬುಷ್ “ಗಾಂಧಿ, ಠಾಗೋರ್ ಮತ್ತು ನೆಹರೂ”ರವರುಗಳನ್ನು ನವಭಾರತದ ನಿರ್ಮಾತೃಗಳೆನ್ನುತ್ತಾರೆ. ಅಂಬೇಡ್ಕರ್‍ರವರನ್ನು ಈ ಪರಿಯಲ್ಲಿ ಇತಿಹಾಸದಲ್ಲಿ ಕುಬ್ಜರನ್ನಾಗಿಸುವ ಅಥವಾ ಮರೆಮಾಚುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವಾಗ ಬುಷ್‍ರಂತಹವರು ಇದಕ್ಕಿಂತ ಹೆಚ್ಚಿಗೆ ಇನ್ನೇನನ್ನು ತಾನೆ ಹೇಳಿಯಾರು? ಈ ಹಿನ್ನೆಲೆಯಲ್ಲಿ ಹೊರ ಜಗತ್ತಿಗೆ ಅಂಬೇಡ್ಕರರ ನೈಜ ಸಾಧನೆಗಳನ್ನು ಬಿಚ್ಚಿ ಹೇಳಬೇಕಾಗಿದೆ. ಇತಿಹಾಸದಲ್ಲಿ ಅವರನ್ನು ಮರೆಮಾಚಲು ನಡೆಯುತ್ತಿರುವ ದುಷ್ಟ ಪ್ರಯತ್ನವನ್ನು ತಡೆಯಬೇಕಾಗಿದೆ.

ಹಾಗಿದ್ದರೆ ಅಸ್ಪೃಶ್ಯರ ಉದ್ಧಾರವನ್ನು, ಸಂವಿಧಾನ ರಚನೆಯನ್ನು ಹೊರತುಪಡಿಸಿ ಅಂಬೇಡ್ಕರರ ಇನ್ನೇನೇನು ಸಾಧನೆಗಳಿವೆ? ಪಟ್ಟಿ ಮಾಡುತ್ತಾ ಹೋದರೆ ‘ಬಾಬಾಸಾಹೇಬ’ರ ವ್ಯಕ್ತಿತ್ವ ಗಾಂಧಿ ಎಂಬ ‘ಮಹಾತ್ಮ’ರನ್ನೂ , ಠಾಗೋರ್ ಎಂಬ ‘ಗುರುದೇವ’ರನ್ನೂ, ನೆಹರೂ ಎಂಬ ‘ಚಾಚಾ’ರನ್ನೂ ಮೀರಿ ಬೆಳೆಯುತ್ತದೆ. ಏಕೆಂದರೆ ಈ ದೇಶದಲ್ಲಿ ಪ್ರಪ್ರಥಮವಾಗಿ ರೈತರ ಪರ ದನಿ ಎತ್ತಿದ್ದು ಅಂಬೇಡ್ಕರ್. ಈ ದೇಶದ ಮಹಿಳೆಯರಿಗೆ ‘ಹಿಂದೂ ಸಂಹಿತೆ ಮಸೂದೆ’ಯ ಮೂಲಕ ನ್ಯಾಯ ದೊರಕಿಸಿಕೊಡಲು ಹೋರಾಡಿದ್ದು ಅಂಬೇಡ್ಕರ್.

ಅಚ್ಚರಿಯ ವಿಷಯವೆಂದರೆ ಈ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್.ಬಿ.ಐ) ಸ್ಥಾಪಿಸಲು ಕಾರಣರಾದದ್ದು ಕೂಡ ಅಂಬೇಡ್ಕರ್‍ರೆ. ಹಿಂದೂ ಸಾಮಾಜಿಕ ಸುಧಾರಣೆಗೆ ಯತ್ನಿಸಿದ್ದು, ಪಾಕಿಸ್ತಾನ ವಿಷಯ, ಕಾರ್ಮಿಕ ನೀತಿ, ವಿದ್ಯುತ್ ಮತ್ತು ನೀರಾವರಿ ನೀತಿ, ದಾಮೋದರ ಕಣಿವೆ ಯೊಜನೆ, ಹಿರಾಕುಡ್ ಯೋಜನೆ, ಸೋನ್ ಕಣಿವೆ ಯೋಜನೆ, ಎರಡನೆ ಮಹಾಯುದ್ಧದ ನಂತರ ದೇಶದ ಆರ್ಥಿಕ ನೀತಿ ರೂಪಿಸಿದ್ದು… ಅಬ್ಬಬ್ಬಾ ಪಟ್ಟಿ ಮಾಡುತ್ತಾ ಹೋದರೆ ಅಂಬೇಡ್ಕರ್‍ರು ಇದಕ್ಕೆಲ್ಲ ಕಾರಣರಾ ಎಂದೆನಿಸುತ್ತದೆ. ವಾಸ್ತವವೆಂದರೆ ಇವು ಅವರ ಮುಚ್ಚಿಟ್ಟ ಇತಿಹಾಸದ ಕೆಲವು ತುಣುಕುಗಳು ಅಷ್ಟೆ!

ಉದಾಹರಣೆಗೆ ಹೇಳುವುದಾದರೆ 1945ರಲ್ಲಿ ಎರಡನೇ ಮಹಾಯುದ್ಧದ ನಂತರ ಈ ದೇಶದ ಕೃಷಿ, ಕೈಗಾರಿಕೆ, ಆರ್ಥಿಕ ಸ್ಥಿತಿ, ಪುನರ್ವಸತಿ ಮತ್ತು ಸೈನಿಕರ ಕಲ್ಯಾಣಕ್ಕಾಗಿ ‘ಪುನರುಜ್ಜೀವನ ಸಮಿತಿ ಸಭೆ’ ಬ್ರಿಟಿಷ್ ಗವರ್ನರ್ ಜನರಲ್ ರವರಿಂದ ರಚಿಸಲ್ಪಟ್ಟಿತು. ಅಂಬೇಡ್ಕರ್‍ರವರು ಆ ಸಮಿತಿಯ ಸದಸ್ಯರಾಗಿದ್ದರು ಮತ್ತು ಅವರಿಗೆ “ನೀರಾವರಿ ಮತ್ತು ವಿದ್ಯುಚ್ಛಕ್ತಿ ನೀತಿ ನಿರೂಪಣಾ ಸಮಿತಿ’ಯ ಜವಾಬ್ದಾರಿಯನ್ನು ವಹಿಸಲಾಯಿತು. ಆಸಕ್ತಿದಾಯಕ ವಿಷಯವೇನೆಂದರೆ ಆ ಸಮಿತಿಯ ಅಧ್ಯಕ್ಷರಾಗಿ ಅಂಬೇಡ್ಕರ್‍ರವರು ಅದ್ಭುತವಾದ ಸಾಧನೆ ಮಾಡಿದ್ದಾರೆ. 1942 ರಿಂದ 1946 ರವರೆಗೆ ಗವರ್ನರ್ ಜನರಲ್‍ರವರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕ್ಯಾಬಿನೆಟ್ ಮಂತ್ರಿಯ ಸ್ಥಾನ ಪಡೆದಿದ್ದ ಅವರಿಗೆ ಕಾರ್ಮಿಕ, ನೀರಾವರಿ, ಮತ್ತು ವಿದ್ಯುಚ್ಛಕ್ತಿ ಇಲಾಖೆಗಳನ್ನು ವಹಿಸಲಾಗಿತ್ತು.

ಈ ನಾಲ್ಕು ವರ್ಷಗಳ ಅವಧಿಯಲ್ಲಿ ಅಂಬೇಡ್ಕರ್‍ರವರು ಮಾಡಿದ ಸಾಧನೆ ಬಹುತೇಕ ಜನರಿಗೆ ಗೊತ್ತಿಲ್ಲ! ಅಥವಾ ಗೊತ್ತಾಗಲು ಬಿಟ್ಟಿಲ್ಲ. ಕುತೂಹಲಕಾರಿ ವಿಷಯವೆಂದರೆ ಈ ಅವಧಿಯಲ್ಲಿಯೇ ಅವರು ಪ್ರಸಿದ್ಧ ದಾಮೋದರ್ ಕಣಿವೆ ಯೋಜನೆ, ಹಿರಾಕುಡ್ ಯೋಜನೆ ಮತ್ತು ಸೋನ್ ಕಣಿವೆ ಯೋಜನೆ ಜಾರಿಗೊಳಿಸಿದ್ದು ಮತ್ತು ಇಂತಹ ಬೃಹತ್ ನಿರಾವರಿ ಯೋಜನೆ, ವಿದ್ಯುತ್ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಅವರು 1944ರಲ್ಲೆ ’ಕೇಂದ್ರೀಯ ಜಲವಿದ್ಯುತ್ ಮತ್ತು ನೀರಾವರಿ ಆಯೋಗ’ವನ್ನು ಸ್ಥಾಪಿಸಿದ್ದು. ಇವತ್ತು ನಮ್ಮ ಮನೆಗಳೇನಾದರೂ ಬೆಳಗುತ್ತಿದ್ದರೆ, ನಮ್ಮ ಹೊಲಗಳೇನಾದರೂ ಹಸಿರಿನಿಂದ ಕಂಗೊಳಿಸುತ್ತಿದ್ದರೆ ಅದು ನೀರಾವರಿ ಮತ್ತು ವಿದ್ಯುತ್ ಕ್ಷೇತ್ರದಲ್ಲಿ ಅಂಬೇಡ್ಕರ್‍ರವರು ಮಾಡಿದ ಅದ್ಭುತ ಸಾಧನೆಯ ಫಲವಲ್ಲದೆ ಬೇರೆನೂ ಅಲ್ಲ. ದುರಂತವೆಂದರೆ ಇಂತಹ ಅದ್ಭುತ ಸಾಧನೆಯನ್ನು ಮುಚ್ಚಿಡಲಾಗಿದೆಯಲ್ಲ ಎಂಬುದು.

ಅಂದಹಾಗೆ ಅಂಬೇಡ್ಕರ್‍ರ ಮತ್ತೊಂದು ಸಾಧನೆಯನ್ನು ಹೇಳಲೇಬೇಕು. ಅದು ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ)ಗೆ ಸಂಬಂಧಿಸಿದ್ದು. ತಮ್ಮ ‘ಆರ್ಥಿಕ ಯೋಜನೆ, ನೀರಾವರಿ ಮತ್ತು ವಿದ್ಯುತ್ ಕ್ಷೇತ್ರದಲ್ಲಿ ಅಂಬೇಡ್ಕರ್ ಪಾತ್ರ’ ಎಂಬ ಕೃತಿಯಲ್ಲಿ ಖ್ಯಾತ ಚಿಂತಕ ಸುಖದೇವ್ ಥೋರಟ್‍ರವರು ಇದನ್ನು ದಾಖಲಿಸುತ್ತಾರೆ. “ಆರ್.ಬಿ.ಐ ಸ್ಥಾಪನೆಗೆ ಬ್ರಿಟಿಷ್ ಮಹಾರಾಣಿಯವರಿಂದ ನೇಮಿಸಲ್ಪಟ್ಟಿದ್ದ ‘ಹಿಲ್ಟನ್ ಯಂಗ್ ಆಯೋಗ’ದ ಮುಂದೆ ಅಂಬೇಡ್ಕರ್‍ರವರು ಆರ್.ಬಿ.ಐ.ನ ಮಾರ್ಗದರ್ಶಿಸೂತ್ರ, ಕಾರ್ಯಶೈಲಿ ಮತ್ತು ದೂರದೃಷ್ಟಿಯನ್ನು ಮಂಡಿಸುತ್ತಾರೆ. ತನ್ಮೂಲಕ ಆರ್.ಬಿ.ಐ.ನ ಸ್ಥಾಪನೆಗೆ ಕಾರಣರಾಗುತ್ತಾರೆ” ಎನ್ನುತ್ತಾರೆ ಸುಖದೆವ್ ಥೊರಟ್.

ಕುತೂಹಲಕಾರಿ ಅಂಶವೆಂದರೆ ‘ಹಿಲ್ಟನ್ ಯಂಗ್ ಅಯೋಗ’ದ ಪ್ರತಿಯೊಬ್ಬ ಸದಸ್ಯನ ಕೈಯಲ್ಲೂ ಅಂಬೇಡ್ಕರ್‍ರವರು ‘ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್’ಗಾಗಿ ‘ಡಿ.ಎಸ್‍ಸಿ’ ಪದವಿ ಪಡೆಯಲು ರಚಿಸಿದ್ದ ‘ರೂಪಾಯಿಯ ಸಮಸ್ಯೆ: ಅದರ ಮೂಲ ಮತ್ತು ಪರಿಹಾರ’ ಎಂಬ ಕೃತಿಯಿತ್ತು. ದೇಶದ ಹಣಕಾಸು ವ್ಯವಸ್ಥೆ ಪಟ್ಟಭದ್ರರ ಕೈಗೆ ಜಾರುತ್ತಿದ್ದನ್ನು ಗಮನಿಸಿ ಅಂಬೇಡ್ಕರ್ ರವರು ಆರ್.ಬಿ.ಐ.ನ ಅಗತ್ಯತೆ ಮತ್ತು ಅದರ ಭವಿಷ್ಯದ ಮಾರ್ಗಸೂಚಿಯ ಬಗ್ಗೆ ಆಯೋಗದ ಮುಂದೆ ಸಮಗ್ರವಾದ ವಾದ ಮಂಡಿಸುತ್ತಾರೆ ತನ್ಮೂಲಕ 1934ರಲ್ಲಿ ಅದರ ಸ್ಥಾಪನೆಗೆ ಕಾರಣರಾಗುತ್ತಾರೆ. ಮತ್ತೆ ಕೇಳುತ್ತಿರುವ ಪ್ರಶ್ನೆಯೇನೆಂದರೆ ಇಂತಹ ಅದ್ಭುತ ಇತಿಹಾಸ ಎಷ್ಟು ಜನರಿಗೆ ಗೊತ್ತು ಎಂಬುದು?

ಮತ್ತೋಂದು ವಿಷಯ ಇಲ್ಲಿ ಹೇಳಲೆಬೇಕಾಗಿದೆ. ಇತ್ತೀಚೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 150ನೇ ವರ್ಷಾಚರಣೆಯನ್ನು ನೆರವೇರಿಸಿಕೊಂಡಿತು. ಅದು ರಾಷ್ಟ್ರಗೀತೆಯ ಕರ್ತೃ ರವೀಂದ್ರನಾಥ್ ಠಾಗೋರ್‍ರವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಎಂದು ಬಿಂಬಿಸಿತು. ಪ್ರಶ್ನೆಯೇನೆಂದರೆ ಈ ದೇಶದ ಕರೆನ್ಸಿಯ ಬಗ್ಗೆ, ಹಣಕಾಸು, ಅರ್ಥಶಾಸ್ತ್ರದ ಬಗ್ಗೆ ಠಾಗೋರ್ ರವರ ಕೊಡುಗೆಯಾದರೂ ಏನು? ಎಂಬುದು. ಖಂಡಿತ ಏನೂ ಇಲ್ಲ. ಎಸ್.ಬಿ.ಐ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಕಾರಣಕರ್ತರಾದ, ಹಲವಾರು ಕೃತಿಗಳನ್ನು ರಚಿಸಿ ಈ ದೇಶದ ಆರ್ಥಿಕತೆ ಮತ್ತು ಹಣಕಾಸು ಕ್ಷೇತ್ರಕ್ಕೆ ಅದ್ಭುತ ಕೊಡುಗೆ ನೀಡಿರುವ, ನೊಬೆಲ್ ಪ್ರಶಸ್ತಿ ವಿಜೇತ ಖ್ಯಾತ ಅರ್ಥಶಾಸ್ತ್ರಜ್ಞ ಅಮಾತ್ರ್ಯ ಸೇನ್‍ರಿಂದ “ಅಂಬೇಡ್ಕರ್ ನನ್ನ ಅರ್ಥಶಾಸ್ತ್ರದ ಗುರು”ಎಂದು ಕರೆಸಿಕೊಂಡಿರುವ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‍ರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಎಂದು ಬಿಂಬಿಸಬೇಕಿತ್ತು! ದುರಂತವೆಂದರೆ ಅಸ್ಪೃಶ್ಯತೆಯ ಸೋಂಕು ತಗುಲಿಸಿಕೊಂಡ ಈ ದೇಶದ ಸ್ಥಾಪಿತ ಹಿತಾಸಕ್ತಿಗಳಿಗೆ ಅಂಬೇಡ್ಕರರ ಈ ಸಾಧನೆಗಳು ಕಾಣುತ್ತಿಲ್ಲ. ಇನ್ನು ಅವರು ಬ್ರಾಂಡ್ ಅಂಬಾಸಿಡರ್ ಆಗಲು ಹೇಗೆ ಸಾಧ್ಯ? ಅವರನ್ನು ಕೇವಲ ಒಂದು ಸಮುದಾಯದ ‘ಬ್ರಾಂಡ್’ ಆಗಿ ಬಿಂಬಿಸಲಾಗುತ್ತಿದೆ ಅಷ್ಟೇ!

ಇನ್ನು ಈ ನಡುವೆ ಅಂತರ್ ರಾಜ್ಯ ಸಮಸ್ಯೆಗಳ ಬಗ್ಗೆ ಅಂಬೇಡ್ಕರ್‍ರವರ ಅನಿಸಿಕೆಗಳನ್ನು ದಾಖಲಿಸಲೇಬೇಕು. ಯಾಕೆಂದರೆ 1955ರಲ್ಲೆ ಅಂಬೇಡ್ಕರ್‍ರವರು ತಮ್ಮ “ಭಾಷಾವಾರು ಪ್ರಾಂತ್ಯಗಳ ಬಗೆಗಿನ ಆಲೋಚನೆಗಳು’ ಎಂಬ ಕೃತಿಯಲ್ಲಿ ಮಧ್ಯಪ್ರದೇಶವನ್ನು ಉತ್ತರ ಮತ್ತು ದಕ್ಷಿಣ ರಾಜ್ಯಗಳಾಗಿ ವಿಂಗಡಿಸಲು ಮತ್ತು ಬಿಹಾರವನ್ನು ಎರಡು ರಾಜ್ಯವಾಗಿ ವಿಂಗಡಿಸಲು ಸಲಹೆ ನೀಡುತ್ತಾರೆ. ಅಚ್ಚರಿಯ ವಿಷಯವೇನೆಂದರೆ ಅವರು ಸಲಹೆ ನೀಡಿದ 45 ವರ್ಷಗಳ ನಂತರ ಅದು ಜಾರಿಯಾದದ್ದು. ಯಾಕೆಂದರೆ 2000ದಲ್ಲಿ ಮದ್ಯಪ್ರದೇಶದಿಂದ ಛತ್ತೀಸಗಢ ಮತ್ತು ಬಿಹಾರದಿಂದ ಜಾರ್ಖಂಡ್‍ಅನ್ನು ವಿಭಜನೆಗೊಳಿಸಿ ಪ್ರತ್ಯೇಕ ರಾಜ್ಯಗಳೆಂದು ಘೋಷಿಸಲಾಯಿತು. ತನ್ಮೂಲಕ ಅಂಬೇದ್ಕರ್‍ರ ದೂರದೃಷ್ಟಿಗೆ ಮನ್ನಣೆ ನೀಡಲಾಯಿತು. (ಅಂದಹಾಗೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಇರುವ ಹೊಗೇನಕಲ್ ವಿವಾದಕ್ಕೆ ಅಂಬೇಡ್ಕರರಲ್ಲಿ ಪರಿಹಾರವಿದೆಯೆಂದರೆ ಅತಿಶಯೋಕ್ತಿಯೆನಿಸದು. ಅದಕ್ಕಾಗಿ ಅಂಬೇಡ್ಕರ್ ಕೃತಿಗಳ ಮೋರೆ ಹೋಗಬೇಕಷ್ಟೆ.)

ಸಿಂಪಲ್ಲಾಗಿ ಹೇಳುವುದಾದರೆ ಅಂಬೇಡ್ಕರ್‍ರನ್ನು ಕೇವಲ ದಲಿತರ ಉದ್ಧಾರಕ ಎಂದು ಮಾತ್ರ ನೋಡಲಾಗಿದೆ. ತನ್ಮೂಲಕ ಅವರ ಇತರ ಅದ್ಭುತ ಸಾಧನೆಗಳನ್ನು ನಿಕೃಷ್ಟವಾಗಿ ಮುಚ್ಚಿಡಲಾಗಿದೆ. ಅಂತಹ ಮುಚ್ಚಿಡುವ ಪ್ರಕ್ರಿಯೆ ಈಗಲೂ ನಡೆಯುತ್ತಿದೆ ಎಂದರೆ ಅಚ್ಚರಿಯಾಗಬಹುದು. ಉದಾಹರಣೆಗೆ ರಾಜ್ಯಸರ್ಕಾರದ ಪಠ್ಯ ಪುಸ್ತಕವೊಂದರಲ್ಲಿ ಸಂವಿಧಾನ ರಚನೆ ಬಗೆಗಿನ ಅಧ್ಯಾಯದಲ್ಲಿ ಡಾ.ಬಾಬು ರಾಜೇಂದ್ರ ಪ್ರಸಾದರನ್ನು ಸಂವಿಧಾನ ರಚನಾಸಭೆಯ ಅಧ್ಯಕ್ಷರೆಂದೂ (ನೆನಪಿರಲಿ Constituent Assembly
ಎಂಬುದನ್ನು ‘ಸಂವಿಧಾನ ಸಭೆ’ ಎಂದು ಅನುವಾದಿಸಬೇಕಿತ್ತು.

ಆದರೆ ಗೊಂದಲ ಮೂಡಿಸಲು ಅದನ್ನು ‘ಸಂವಿಧಾನ ರಚನಾಸಭೆ’ ಎಂದು ಉದ್ದೇಶಪೂರ್ವಕವಾಗಿ ತಪ್ಪಾಗಿ ಅನುವಾದಿಸಲಾಗಿದೆ ಎಂದೆನಿಸುತ್ತದೆ!) ಮತ್ತು ಡಾ.ಬಿ.ಆರ್. ಅಂಬೇಡ್ಕರರನ್ನು ಕರಡು ಸಮಿತಿಯ (ಇದನ್ನು ಸರಿಯಾಗಿ ಅನುವಾದಿಸಲಾಗಿದೆ!) ಅಧ್ಯಕ್ಷರೆಂದು ಉಲ್ಲೇಖಿಸಲಾಗಿದೆ. ಅಚ್ಚರಿಯ ವಿಷಯವೆಂದರೆ ಇಲ್ಲಿ ಕೇವಲ ರಾಜೇಂದ್ರ ಪ್ರಸಾದರ ಚಿತ್ರವನ್ನು ಮಾತ್ರ ಮುದ್ರಿಸಲಾಗಿದೆ, ಅಂಬೇಡ್ಕರ್ ಭಾವಚಿತ್ರ ಮಾತ್ರ ಇಲ್ಲ! ರಾಜೇಂದ್ರಪ್ರಸಾದರ ಆ ಚಿತ್ರವನ್ನು ನೋಡಿದ ಯಾರಾದರೂ ಅಂಬೇಡ್ಕರರನ್ನು ‘ಸಂವಿಧಾನ ಶಿಲ್ಪಿ’ ಎನ್ನುತ್ತಾರೆಯೆ? ಖಂಡಿತ ಇಲ್ಲ. ‘ಬಾಬು ರಾಜೇಂದ್ರ ಪ್ರಸಾದರ ಚಿತ್ರದ ಹಿಂದೆ’ ಅಂಬೇಡ್ಕರರನ್ನು ‘ಮುಚ್ಚುª’ ಕ್ರೂರ ಪ್ರಯತ್ನವಿದಲ್ಲದೆ ಬೇರೆನೂ ಅಲ್ಲ!

ಹಾಗಿದ್ದರೆ ಅಂಬೇಡ್ಕರ್‍ರನ್ನು ಹೀಗೆ ಮುಚ್ಚಿಡುವ ಅವರ ಸಾಧನೆಗಳೆಲ್ಲವನ್ನು ಇಡೀ ಜಗತ್ತಿಗೆ ಹೇಳದಿರುವುದರ ಹಿಂದಿರುವ ಹುನ್ನಾರವಾದರೂ ಏನು? ಖಂಡಿತ ಒಂದು ಬೃಹತ್ ಸಮುದಾಯವನ್ನು ಅದರ ಭವ್ಯ ಇತಿಹಾಸವನ್ನು ಅದರಿಂದ ಮರೆಮಾಚಿ ಮಾನಸಿಕ ಗುಲಾಮಗಿರಿಗೆ ತಳ್ಳುವ ವ್ಯವಸ್ಥಿತ ಸಂಚಿದು. ಈ ನಿಟ್ಟಿನಲ್ಲಿ ಶೋಷಿತ ಸಮುದಾಯ ಅಂತಹ ವ್ಯವಸ್ಥಿತ ಸಂಚಿಗೆ ಬಲಿಯಾಗಬಾರದು. ‘ನಮಗೇಕೆ ಇದನ್ನು ಹೇಳಲಿಲ್ಲ’ ಎಂದು ಮುಂದಿನ ಪೀಳಿಗೆ ಕೇಳುವಂತಾಗಬಾರದು. ಆದಕಾರಣ ಶೋಷಿತ ಸಮುದಾಯ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ. ಅಂಬೇಡ್ಕರರ ಭವ್ಯ ಇತಿಹಾಸವನ್ನು, ಪ್ರತಿಯೊಂದು ಸಾಧನೆಯನ್ನು ಇಡೀ ಜಗತ್ತಿಗೆ ಸಾರಿಹೇಳಲು ಟೊಂಕಕಟ್ಟಿ ನಿಲ್ಲಬೇಕಿದೆ.

ರಘೋತ್ತಮ ಹೊ.ಬ

ನೆಲದನಿ

ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

Published

on

  • ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.

ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.

ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ‍್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.

ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.

ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ‍್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.

ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.

ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.

ಲೇಖಕರು : ಡಾ. ಸಿ ಬಿ ಅನ್ನಪೂರ್ಣ ಜೋಗೇಶ್‌, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು

ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.

ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.

ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.

ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.

ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.

ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.

ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.

ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.

ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ‍್ಮಿಕ ಜಗತ್ತಿನಲ್ಲಿ ಸರ‍್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

Published

on

ಡಾ.ಎಂ.ಜಿ. ಈಶ್ವರಪ್ಪ
  • ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ

ರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.

ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.

ಬಾಲ್ಯ ಮತ್ತು ಶಿಕ್ಷಣ

ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.

ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.

ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ

ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ

ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್‌ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ರಂಗಭೂಮಿ ಮತ್ತುಈಶ್ವರಪ್ಪ

ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್‌ಆಫ್‌ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.

ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.

1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.

1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.

1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಾಹಿತ್ಯ ಸೇವೆ

ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.

ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸಂದ ಪ್ರಶಸ್ತಿಗಳು

ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

  • 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
  • 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
  • 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
  • 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
  • 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ

    2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ

  • 2014ಮಹಲಿಂಗರಂಗ ಪ್ರಶಸ್ತಿ
  • 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ

ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ

ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.

ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.

[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಒಡಲುಗೊಂಡವ ಹುಸಿಯ: ಜಿ. ರಾಜಶೇಖರ

Published

on

  • ಎಚ್ ಪಟ್ಟಾಭಿರಾಮ ಸೋಮಯಾಜಿ, ಮಂಗಳೂರು

Beneath those rugged elms, that yew tree’s shade,
Where heaves the turf in many a moldering heap,
Each in his narrow cell forever laid,
The rude forefathers of the hamlet sleep.

Oft did the harvest to their sickle yield,
Their furrow oft the stubborn glebe has broke;
How jocund did they drive their team afield!
How bowed the woods beneath their sturdy stroke!

Let not Ambition mock their useful toil,
Their homely joys, and destiny obscure;
Nor Grandeur hear with a disdainful smile
The short and simple annals of the poor.

The boast of heraldry, the pomp of power,
And all that beauty, all that wealth e’er gave,
Awaits alike the inevitable hour.
The paths of glory lead but to the grave….

Full many a gem of purest ray serene,
The dark unfathomed caves of ocean bear:
Full many a flower is born to blush unseen,
And waste its sweetness on the desert air.

Yet even these bones from insult to protect
Some frail memorial erected nigh,
With uncouth rhymes and shapeless sculpture decked,
Implores the passing tribute of a sigh.

-(Thomas Gray: “Elegy Written in a Country Churchyard”; 1754/1751)

” ಬೋಳಿಮಗನೆ, ಬಹುವಚನ ಅಂತೆ ಬಹುವಚನ. ಏಕವಚನ ಮಾಡ್ತೇವೆ ನೋಡ್ತಾ ಇರು, ಸೂಳೆಮಗನೆ. ಇದು ಮಡಿಕೇರಿ, ತಿಳ್ಕೊ” ಎಂದು ವಿಕಾರವಾಗಿ ಕಿರುಚುತ್ತಾ ಸುಮಾರು ಮೂವತ್ತರಿಂದ ನಲವತ್ತರಷ್ಟು ಜನ ಸ್ಟೇಜಿಗೆ ನುಗ್ಗಿ ಕೈಯಲ್ಲಿದ್ದ ಟಿಪ್ಪಣಿ ಕಾಗದಗಳ ಕಟ್ಟನ್ನು ಬಲಾತ್ಕಾರದಿಂದ ಕಸಿದು ಹರಿದು ಬಿಸಾಡಿ, ಮೈಕನ್ನು ಕಿತ್ತು, ಕಾಲರನ್ನು ಹಿಡಿದು ಎಳೆದಾಡಿ ನನ್ನ ಮೇಲೆ ಏಕಾಏಕಿ ನುಗ್ಗಿದರು. ವಿವರವಾದ ಸುದೀರ್ಘ ಟಿಪ್ಪಣಿಗಳ ಆ ಕಾಗದದ ಕಟ್ಟಿನಲ್ಲಿ ಆ ಕಾಲದ ನನ್ನ ಯೋಚನೆಗಳನ್ನು ಭಟ್ಟಿಯಿಳಿಸುವ ಪ್ರಯತ್ನವಿತ್ತು; ಮಹಾತ್ಮಾ ಗಾಂಧಿ, ಮಾರ್ಟಿನ್ ಹೈಡೆಗರ್, ಸಾದತ್ ಹಸನ್ ಮಾಂಟೋ, ರಾಮಕೃಷ್ಣ ಪರಮಹಂಸ ಮುಂತಾದವರಿಂದ ನಾನು ತಯಾರಿಸಿಕೊಂಡ ಟಿಪ್ಪಣಿಗಳೂ ತರ್ಜುಮೆಗಳೂ ಅದರಲ್ಲಿ ಸೇರಿದ್ದವು; ಅದನ್ನು ಕಳೆದುಕೊಂಡ ನೋವು ಈಗಲೂ ನನ್ನನ್ನು ಮಾಯದ ಹಳೆಯ ಗಾಯದಂತೆ ಬಾಧಿಸುವುದು.

ಇದು ಈಗ ಇಪ್ಪತ್ತು ವರ್ಷಗಳ ಹಿಂದಿನ ಮಾತು. ಸ್ಥಳ, ಮಡಿಕೇರಿಯ ಕೋಟೆಯ (ಕೋಟೆ ಎಂದರೆ ನಿಜಕ್ಕೂ ಕೋಟೆಯೇ) ಆವರಣದೊಳಗಿರುವ ಜಿಲ್ಲಾಧಿಕಾರಿ ಕಛೇರಿಯ ಸೆನೆಟ್ ಸಭಾಂಗಣ. ಅಂದು ಭಾನುವಾರ. “ಬಹುವಚನ ಕೊಡಗು” ಎಂಬ ಹೆಸರಿನ ನಮ್ಮ ಪುಟ್ಟ ಬಳಗದಿಂದ ಆಯೋಜಿತವಾಗಿದ್ದ ಮಹತ್ವಾಕಾಂಕ್ಷೆಯ ಇಡೀ ಒಂದು ದಿನದ ನಿಬಿಡ ವಿಚಾರ ಸಂಕಿರಣ. “ಕೋಮುವಾದದ ಕರಾಳ ಮುಖಗಳು” ಎಂಬ ಶೀರ್ಷಿಕೆಯಲ್ಲಿ ನಡೆಯಬೇಕಾಗಿದ್ದ ಈ ಸಂಕಿರಣದ ಶೀರ್ಷಿಕೆಯ ಕುರಿತು ಆರಂಭದಲ್ಲೇ, ನಮ್ಮ ಪುಟ್ಟ ಬಳಗದ ಒಳಗೆಯೇ, ಒಬ್ಬರಿಂದ ಎದ್ದ ಅಪಸ್ವರದ ಕಾರಣದಿಂದಾಗಿ “ಕೋಮುವಾದದ ಹಲವು ಅವತಾರಗಳು” ಎಂದು ಮರುನಾಮಕರಣಗೊಂಡಿತ್ತು; ಆ ಕುರಿತು ನನಗೆ ಅಷ್ಟೇನೂ ಸಮಾಧಾನವಿರಲಿಲ್ಲ ಎಂಬುದು ಬೇರೆ ಮಾತು. ಜಿ ರಾಜಶೇಖರ, ರಹಮತ್ ತರೀಕೆರೆ ಮುಂತಾಗಿ ರಾಜ್ಯದ ಮುಂಚೂಣಿ ಚಿಂತಕ-ಹೋರಾಟಗಾರರು ನಮ್ಮ ಸಂಪನ್ಮೂಲ ವ್ಯಕ್ತಿಗಳು. ಹಾಗಾಗಿ, ಸಹಜವಾಗಿಯೇ ಈ ವಿಚಾರ ಸಂಕಿರಣಕ್ಕೆ ಬಹಳ ದೊಡ್ಡ ಸಂಖ್ಯೆಯ ಜನರು ಹಾಜರಾಗುವವರಿದ್ದರು. ಸಂಪನ್ಮೂಲ ವ್ಯಕ್ತಿಗಳು ಬಂದು ಅದಾಗಲೇ ಸಭಾಂಗಣದ ಮುಂದಿನ ಸಾಲಿನಲ್ಲಿ ಕುಳಿತಿದ್ದರು. ಮಡಿಕೇರಿ ಮತ್ತು ಸುತ್ತಮುತ್ತಲಿನ ಪತ್ರಕರ್ತ ಬಳಗ ಕೂಡಾ ಅದಾಗಲೇ ಹಾಜರಿತ್ತು.

ಸಭಿಕರು ಕೇವಲ ಬೆರಳೆಣಿಕೆಯಷ್ಟಿದ್ದರು; ಅವರಿನ್ನೂ ಬರುವುದರಲ್ಲಿದ್ದರು (ದೊಡ್ಡ ಸಂಖ್ಯೆಯಲ್ಲಿ ಆ ಮೇಲೆ ಬಂದರು ಕೂಡಾ). ಆದರೆ ಸಂಕಿರಣದ ಸುದೀರ್ಘ ಚರ್ಚೆಯು ಒತ್ತಡಕ್ಕೊಳಗಾಗಬಾರದು, ಹಾಗಾಗಿ ಸಮಯ ವ್ಯರ್ಥಮಾಡಬಾರದು ಎಂದು, “ಬಹುವಚನ ಕೊಡಗು” ಕುರಿತು, ದಿನದ ಕಾರ್ಯಕ್ರಮದ ಸ್ವರೂಪದ ಕುರಿತು, ಹಾಗೂ ಮುಖ್ಯವಾಗಿ ವಿಚಾರ ಸಂಕಿರಣದ ಆಶಯದ ಕುರಿತು– ಹತ್ತು ಗಂಟೆಗೆ ಸರಿಯಾಗಿ ನಾನು ವೇದಿಕೆಯಿಂದ ಮಾತನಾಡಲು ಪ್ರಾರಂಭ ಮಾಡಿದೆ. ಆಗ ಇದ್ದಕಿದ್ದಂತೆ ಸಾಲು ಸಾಲಾಗಿ ಆ ಮೂವತ್ತು ನಲವತ್ತರಷ್ಟು ಧಾಂಡಿಗರು ಸಭಾಂಗಣದೊಳಕ್ಕೆ ಲಗುಬಗೆಯಿಂದ ಬಂದರು. ಅವರ ವರ್ತನೆ ಹಾವಭಾವಗಳಾಗಲೀ ವೇಷಭೂಷಣಗಳಾಗಲೀ ಉತ್ತೇಜನಕಾರಿಯಾಗಿ ಕಂಡುಬರದಿದ್ದರೂ ಬಂದವರು ಕುಳಿತುಕೊಳ್ಳಲಿ ಎಂದು ಮಾತುಗಳನ್ನು ಅರ್ಧಕ್ಕೇ ನಿಲ್ಲಿಸಿ ನಾನು ಕಾದೆ. ಅವರು ಕೆಂಡದ ಮೇಲೆ ಕೂತವರಂತೆ ಕುರ್ಚಿಗಳಲ್ಲಿ ಕೂತರು. “ಬಹುವಚನ ಕೊಡಗು…” ಎಂದು ನಾನು ಮಾತುಗಳನ್ನು ಪುನರಾರಂಭಿಸುತ್ತಿದ್ದಂತೆ, ಅಷ್ಟೂ ಜನ ಏಕಾಏಕಿಯಾಗಿ ರಭಸದಿಂದ ನನ್ನ ಮೇಲೆ ನುಗ್ಗಿ ಬಂದರು.

ಆ ಕಾಲಕ್ಕೆ ಆ ರೀತಿ ಸಭೆಗಳಿಗೆ ಅನಾಗರಿಕವಾಗಿ ನುಗ್ಗಿ ನಿರ್ಲಜ್ಜವಾಗಿ ದಾಳಿ ಮಾಡುವುದು ಈಗಿನಷ್ಟು ವ್ಯಾಪಕವಾಗಲೀ, ಸಹಜವಾಗಲೀ, ಸುಲಭವಾಗಲೀ ಆಗಿರಲಿಲ್ಲ. ನಮ್ಮಂತೆ ಆ ಪುಂಡರಿಗೂ ಅದು ಹೊಸತೇ ಅನುಭವ. ನಮ್ಮ ಬಹುವಚನದ ಪುಟ್ಟ ಬಳಗದವರಿಗಂತೂ ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಈ ಅನಾಹುತ ಶುರುವಾಗಿತ್ತು. ಇದ್ದಬದ್ದ ವಿವೇಕವನ್ನು ಒಗ್ಗೂಡಿಸಿಕೊಂಡು, ಸಂಪನ್ಮೂಲ ವ್ಯಕ್ತಿಗಳ ಸುರಕ್ಷತೆಯೇ ತಮ್ಮ ತುರ್ತು ಆದ್ಯ ಕರ್ತವ್ಯವೆಂದು ಬಗೆದು ಸಂಪನ್ಮೂಲ ವ್ಯಕ್ತಿಗಳನ್ನು ಕ್ಷಿಪ್ರವಾಗಿ ಕರೆದುಕೊಂಡು ಅವರು ಕೋಟೆಯ ಆಚೆಗೆ ಹೊರಟುಹೋದರು. ಪತ್ರಕರ್ತರಿಗೆ ಈ ದಾಂಧಲೆಕೋರರ ಗುರುತು ಹತ್ತಿತು; ಸಂಭಾವ್ಯ ಘಟನಾವಳಿಗಳನ್ನು ಅವರು ಕ್ಷಣಮಾತ್ರದಲ್ಲಿ ಊಹಿಸಿ, ಅದನ್ನು ವರದಿ ಮಾಡಲೆಂದು ಅವರೂ ಎದ್ದು ಹೊರಟು ಹೋದರು. ಆಗಲೇ ಹೇಳಿದಂತೆ, ಸಭಿಕರು ಇನ್ನೂ ಅಷ್ಟಾಗಿ ಬಂದಿರಲಿಲ್ಲ, ಬಂದಿದ್ದವರೂ ಕಂಗಾಲಾಗಿ ದಿಕ್ಕಾಪಾಲಾಗಿ ಚದುರಿ ಹೋದರು; ಕೋಟೆಯ ಹೊರಬಾಗಿಲ ಬಳಿ ನಿಂತುಕೊಂಡು ನಮ್ಮ ಬಳಗದವರೊಬ್ಬರು ಸಂಕಿರಣಕ್ಕಾಗಿ ಒಳಗೆ ಬರುತ್ತಿದ್ದ ಜನರನ್ನು ತಡೆದು, “ಒಳಗೆ ದಾಂಧಲೆ ನಡೆಯುತ್ತಿದೆ, ಹೋಗಬೇಡಿ, ಸುರಕ್ಷಿತವಲ್ಲ” ಎಂದು ಹಿಂದೆ ಕಳುಹಿಸುತ್ತಿದ್ದರು. ಸರಿ ಸುಮಾರು ಮೂವತ್ತರಿಂದ ನಲವತ್ತು ನಿಮಿಷ ಒಳಾಂಗಣ-ಸಭಾಂಗಣ ರಣಾಂಗಣವಾಗಿ ಮಾರ್ಪಟ್ಟಿತ್ತು. ನಾನು ಒಬ್ಬಂಟಿ, ಆದರೆ ವಿಚಲಿತನಾಗಿರಲಿಲ್ಲ.

ಮಡಿಕೇರಿಯಲ್ಲಿ ಆಗ ‘ಪ್ರಜಾವಾಣಿ’ ಪತ್ರಿಕೆಯ ಮುಖ್ಯ ವರದಿಗಾರರಾಗಿದ್ದ, ಆರಡಿಗಿಂತ ಎತ್ತರದ ಆಜಾನುಬಾಹು ರಾಜೇಂದ್ರಪ್ರಸಾದ್ ರವರು, ಯಾರೂ ನನ್ನ ಮೈ ಮುಟ್ಟದಂತೆ ಧೀರೋದಾತ್ತವಾಗಿ ನನ್ನ ರಕ್ಷಣೆಗೆ ನಿಂತರು; ಅವರ ಪತ್ರಿಕಾ ವೃತ್ತಿ ವರ್ಚಸ್ವಿಯಾದುದಾಗಿತ್ತು; ಅಲ್ಲದೇ ದಿನಂಪ್ರತಿ ಎದುರು ಸಿಗುವ ಇಂಥ ಪ್ರಮುಖ ಪತ್ರಕರ್ತರೊಬ್ಬರನ್ನು ಕಡೆಗಣಿಸಿ ನನ್ನ ಮೇಲೆ ದೈಹಿಕ ಹಲ್ಲೆ ಮಾಡುವಷ್ಟು ಭಂಡ ಧೈರ್ಯವಾಗಲೀ ತರಬೇತಿಯಾಗಲೀ ಅಯಾಚಿತ ಸಾರ್ವಜನಿಕ ಬೆಂಬಲವಾಗಲೀ ಆ ಪುಂಡರಿಗೆ ಇರಲಿಲ್ಲ. ನಮ್ಮ ಮಾಧ್ಯಮಲೋಕದಲ್ಲಿ ರಾಜೇಂದ್ರಪ್ರಸಾದರಂಥ ವಿವೇಕಿಗಳಿದ್ದರೆ ಹೇಗೆ ಸಾಮಾಜಿಕ ದುಸ್ಥಿತಿ ಮತ್ತು ಅರಾಜಕತೆಗಳನ್ನು ಸ್ವಲ್ಪಕಾಲವಾದರೂ ತಹಬಂದಿಗೆ ತರಬಹುದು ಎಂಬುದು ಒಂದು ವಿರಳ ರೂಪಕದಂತೆ, ಈ ಘಟನೆಯಿಂದಾಗಿ, ನನ್ನ ಮನಸ್ಸಿನಲ್ಲಿ ಇವತ್ತಿಗೂ ನಾಟಿದೆ.ಇಷ್ಟೂ ಹೊತ್ತು, ಈ ದಾಂಧಲೆಕೋರ ಹುಳಪಾರ್ಟಿಗಳು ನನ್ನನ್ನು ಜಿ ರಾಜಶೇಖರ ಎಂದೇ ತಿಳಿದಿದ್ದರು.

ದಾಂಧಲೆ ಮಾಡುತ್ತಿರುವವರು ಯಾರು, ದಾಂಧಲೆಗೆ ಒಳಗಾಗುತ್ತಿರುವವರು ಯಾರು, ಯಾಕೆ? ಇದನ್ನು ತಡೆಯಬಲ್ಲವರು ಯಾರು, ಹೇಗೆ? ಎಂಬ ಗೆರೆಗಳೆಲ್ಲ ತೆಳುವಾಗುತ್ತ ಅಳಿಸಿಹೋಗಿ ಕಲಸುಮೇಲೋಗರವಾಗಿರುವ ದುರಂತಕ್ಕೆ ಈಗಂತೂ ನಾವೆಲ್ಲರೂ ಅಸಹಾಯಕ ಸಾಕ್ಷಿಗಳು. ಅದೇನಿದ್ದರೂ, ಕರಾವಳಿ ಕರ್ನಾಟಕದಲ್ಲಿ ಆಗಷ್ಟೇ ಉಲ್ಬಣಕ್ಕೆ ಬರುತ್ತಿದ್ದ ಹಿಂದೂತ್ವವಾದೀ ಹಿಂಸಾಚಾರವನ್ನು ಕ್ಲಿನಿಕಲ್ ಅಚ್ಚುಕಟ್ಟುತನದಿಂದ, ಇಲ್ಲಿನ ಕ್ರೂರ ಸತ್ಯವನ್ನು ಮುಕ್ಕಾಗದಂತೆ ವರದಿ ಮಾಡಿ ಆಗ ತಿಳಿಸುತ್ತಿದ್ದ ಏಕಮಾತ್ರ ವ್ಯಕ್ತಿ ಜಿ ರಾಜಶೇಖರ. ಕೋರೈಸುವ ಸತ್ಯ ಮತ್ತು ತರ್ಕಶುದ್ಧತೆಗಳ ಕಾರಣದಿಂದಾಗಿಯೇ ಅವರ ವರದಿಗಳು, ಹುಟ್ಟಾ ಅಜ್ಞಾನಿಗಳಾದ ಹಿಂದೂತ್ವವಾದಿಗಳಿಗೂ ಅಷ್ಟರಮಟ್ಟಿಗೆ ಅರ್ಥವಾಗುವಂತಿತ್ತು. ಆ ಕಾಲದ ವಿಷಯ ಸದ್ಯ ಒತ್ತಟ್ಟಿಗಿರಲಿ, ಕರಾವಳಿ ಕರ್ನಾಟಕದಲ್ಲಿ ಈಗ ಮೂರು ದಶಕಗಳಿಂದ ಹಗಲೂರಾತ್ರಿ ನಡೆಯುತ್ತಿರುವ ಹಿಂದೂತ್ವವಾದೀ ಬರ್ಬರ ಹಿಂಸಾಚಾರದ ಕುರಿತು ನಾನೋ ನೀವೋ ಆಡುವ ಮಾತುಗಳನ್ನು ಕರ್ನಾಟಕದ ಉಳಿದ ಕಡೆಯ ಜನರು, “ಇವರದ್ದೊಂದು ಉತ್ಪ್ರೇಕ್ಷಿತ ಕಟ್ಟುಕತೆ; ಕರ್ನಾಟಕವು ಲಾಗಾಯ್ತಿನಿಂದಲೂ ಸರ್ವಜನಾಂಗದ ಶಾಂತಿಯ ತೋಟ” ಎಂಬ ದೃಢ ನಂಬಿಕೆಯಲ್ಲೇ ಇತ್ತೀಚಿನವರೆಗೂ ವ್ಯವಹರಿಸುತ್ತ ಬಂದದ್ದಿದೆ. ಆ ಉದಾಸಿನಕ್ಕೆ ಮದ್ದಿಲ್ಲ. ಇದನ್ನು ನೆನೆದರೆ ಜಿ ರಾಜಶೇಖರ ಏಕಾಂಗಿಯಾಗಿ ನಡೆಸುತ್ತ ಬಂದ ಹೋರಾಟ ಇಮ್ಮಖವಾದುದು ಎಂಬುದೂ ತಿಳಿದೀತು: ಎದುರಾಳಿಗಳೂ, ಸಹಚರರೂ– ಇಬ್ಬಣಗಳೂ– ಅವರಿಗೆ ಎಡೆಬಿಡದ ಗಮನಕೇಂದ್ರಗಳು.

1998ರಲ್ಲಿ ಮಡಿಕೇರಿಯಲ್ಲಿ ನಾನು ಕೆಲಸಕ್ಕೆ ಸೇರಿದ ಹೊಸದರಲ್ಲಿ ಸುರತ್ಕಲ್ ನಲ್ಲಿ ನಡೆದ ಹಿಂದೂತ್ವವಾದೀ ಭೀಕರ ಹಿಂಸಾಚಾರದಿಂದಾಗಿ ನನಗೆ ಜಿ ರಾಜಶೇಖರರ ನಿಕಟ ಸಂಪರ್ಕ ಬೇಕೆನ್ನಿಸಿತು, ಉಂಟಾಯಿತು. ಆ ಕಾಲದಲ್ಲಿ ಅತ್ಯಂತ ಪ್ರಭಾವಶಾಲಿ ರಾಷ್ಟ್ರೀಯ ನಾಯಕಿಯಾಗಿದ್ದ ಶ್ರೀಮತಿ ಸೋನಿಯಾ ಗಾಂಧಿಯವರೇ ಸ್ವತಃ ಸುರತ್ಕಲ್ ಗೆ ಭೇಟಿಕೊಡಬೇಕಾಗಿ ಬರುವಷ್ಟು ಆ ಹಿಂಸಾಚಾರ ಢಾಳಾಗಿತ್ತು, ಕ್ರೂರವಾಗಿತ್ತು, ದೇಶದ ಗಮನ ಸೆಳೆದಿತ್ತು. ಗೊತ್ತಿರುವವರಿಗೆ ಗೊತ್ತಿರುವಂತೆ, ಈ ಹಿಂದೂತ್ವವಾದೀ ಭೀಕರ ಹಿಂಸಾಚಾರವನ್ನು “ಸುರತ್ಕಲ್ ಗಲಭೆ” ಎಂಬ ರಂಗಿನ ರಂಗೋಲಿಯ ಕೆಳಗೆ ಅಡಗಿಸುವ ಹೊಸ ಭಾಷೆ, ವ್ಯಾಪಕ ವ್ಯಾಕರಣ ಮತ್ತು ಮೀಮಾಂಸೆ ಹುರಿಗಟ್ಟುತ್ತಿದ್ದ ಕಾಲ ಅದು. ಇಲ್ಲಿ ನಡೆದಿರುವುದು ಸಾಂದರ್ಭಿಕ ಕೋಮು ಗಲಭೆಯಲ್ಲ, ಇವತ್ತು ಕಂಡು ನಾಳೆ ಮರೆಯಾಗುವ ಕ್ಷಣಿಕ ಅಪಭ್ರಂಶವಲ್ಲ, ಎರಡೂ ಕಡೆಯವರು ಸೇರಿ ನಡೆಸಿದ ಜೋಡಾಟವೋ ಜುಗಲ್ಬಂದಿಯೋ ಅಲ್ಲ; ಬದಲಾಗಿ, ವ್ಯವಸ್ಥಿತವಾದ, ವ್ಯಾಪಕವಾದ ಹಿಂದೂತ್ವವಾದೀ ದುಷ್ಟಕೂಟದ ಪ್ರಯೋಗವಾಗಿರುವ ಕ್ರೌರ್ಯ ಮತ್ತು ವಿಷ ಎಂದು ಸಾಧಾರವಾಗಿ, ನಿಖರವಾಗಿ, ವಿವರವಾಗಿ ದಾಖಲಿಸಿದವರು ಜಿ ರಾಜಶೇಖರ. ಹಾವನ್ನು ಹಗ್ಗ ಎಂದು ಅವರು ಎಂದೂ ಹೇಳಲಿಲ್ಲ: He had called the spade, the spade. ಎರಡಕ್ಕೆ ಎರಡು ಕೂಡಿಸಿದರೆ ನಾಲ್ಕು, ಎಂಬ ಸರಳಸತ್ಯವನ್ನು ಹೇಳುವುದು ಕೂಡಾ ಒಂದು ದಿಟ್ಟತನವೂ ಹೌದು, ಕಲೆಯೂ ಹೌದು.

ನಾನೊಬ್ಬ ಸಾಹಿತ್ಯದ ಅಧ್ಯಾಪಕ ಹಾಗೂ ವಿದ್ಯಾರ್ಥಿ. ವಿದ್ಯಾರ್ಥಿಯಾಗಿರುವಾಗಲೇ ನನ್ನ ಮೇಲೆ ಅತ್ಯಂತ ಪ್ರಭಾವ ಬೀರಿದ್ದ, ಈಗಲೂ ಸ್ಫೂರ್ತಿದಾಯಕವಾಗಿ ಉಳಿದುಬಂದಿರುವ ಬರಹಗಳಲ್ಲಿ ಬಹುಮುಖ್ಯವಾದ ಒಂದು ಕೃತಿ ಆಲ್ಬರ್ಟ್ ಕಮೂ ಬರೆದ “ದಿ ಔಟ್ ಸೈಡರ್” (1942). ಭಾಷೆ ಎಂಬುದು ಬರಿಯ ಪದವೋ ಪದಾರ್ಥವೋ ಅಲ್ಲ, ಎದುರು ಹರಡಿರುವ ವಸ್ತುಗಳಿಗೆ ಅಚ್ಚುಕಟ್ಟಾಗಿ ಮಾಡಿರುವ ನಾಮಕರಣವೂ ಅಲ್ಲ, ಅದು ಗರಗಸದಂತೆ ಹೋಗುತ್ತ ಕುಯ್ವುದು ಬರುತ್ತ ಕುಯ್ವುದು; ಭಾಷೆ ಎಂಬುದು, ಪ್ರಭುತ್ವವು ಹಲವು ಹೊಂಚುಗಳಲ್ಲಿ ಸ್ಥಿತಗೊಂಡಿರುವ, ಪ್ರಕಟಗೊಳ್ಳುವ, ಸ್ಥಿರೀಕರಣಗೊಳ್ಳುವ, ಬಗೆಬಗೆಯಾಗಿ ಪುನರಾವರ್ತನೆಗೊಳ್ಳುವ, ಏನನ್ನು ಬೇಕಾದರೂ ಲೋಕಜ್ಞಾನವೆಂಬಂತೆ– ಉಸಿರಾಡುವ ಗಾಳಿ, ನೋಟ ಒದಗಿಸುವ ಬೆಳಕಿನಂತೆ– ಸಹಜವಾದದ್ದು ಎಂದು ಯಶಸ್ವಿಯಾಗಿ ನಂಬಿಸಬಲ್ಲ ವ್ಯಾಪಕವಾದ ಜಾಲ. ಸ್ಥೂಲವಾಗಿ ಹೇಳುವುದಾದರೆ, ಇದು ಆ ಕೃತಿಯಲ್ಲಿ ಕಾಣುವ ಹೊಳಹು. ಇದು, ಯೂರೊಪ್ ಕಂಡ ಮಹಾಯುದ್ಧಗಳು ಹಾಗೂ ಫ್ಯಾಶಿಸ್ಮ್ ನ ವಿಕರಾಳ ಕ್ರೌರ್ಯಗಳ ಮೂಸೆಯಲ್ಲಿ ತಯಾರಾದ ಹೊಸ ತಿಳುವಳಿಕೆಯಾಗಿತ್ತು. ಕಮೂ ತನ್ನ ಈ ಕಾದಂಬರಿಯಲ್ಲಿ ನಮ್ಮ ದಿನನಿತ್ಯದ, ಸರ್ವಸಾಮಾನ್ಯವೆಂಬಂತೆ ಕಾಣುವ, ಭಾಷೆಯನ್ನು ಹಾಗೂ ವಿದ್ಯಮಾನಗಳನ್ನು ಸಂಪೂರ್ಣ ಬೆತ್ತಲೆಗೊಳಿಸಿ ನಿರ್ಭಾವುಕವಾಗಿ ಅದರ ಹುನ್ನಾರಗಳನ್ನು ಜಗಜ್ಜಾಹೀರು ಮಾಡಿದವನು.

ಮಡಿಕೇರಿಯಲ್ಲಿ ಕೆಲಸಕ್ಕೆ ಸೇರಿದ್ದ ಹೊಸತರಲ್ಲಿ, ಸುರತ್ಕಲ್ ನ ಹಿಂದೂತ್ವವಾದೀ ಹಿಂಸಾಚಾರದ ಕುರಿತು ಸುದೀರ್ಘವಾದ, ಸಣ್ಣಪುಟ್ಟ ವಿವರಗಳನ್ನೂ ಬಿಡದಂತೆ ಅಚ್ಚುಕಟ್ಟಾಗಿ ಒಳಗೊಂಡ ವರದಿಯನ್ನು ನಾನು ‘ಲಂಕೇಶ್ ಪತ್ರಿಕೆ’ಯಲ್ಲಿ ಓದಿದೆ. ಹಲವು ಕಂತುಗಳಲ್ಲಿ ಪ್ರಕಟವಾದ ಆ ವರದಿ ಈಗಲೂ ನನಗೆ ಕಣ್ಣಿಗೆ ಕಟ್ಟಿದಂತಿದೆ. ಅದರಲ್ಲಿ ಲೇಖಕನ ಸ್ವಂತ ಮಾತುಗಳಾಗಲೀ, ಅಭಿಪ್ರಾಯಗಳಾಗಲೀ, ವಾದಗಳಾಗಲೀ, ಸಮರ್ಥನೆ ಖಂಡನೆ ಮಂಡನೆಗಳಾಗಲೀ ಇರಲಿಲ್ಲ. ಬಲಿಪಶುಗಳಾದ, ಬಲಿ ತೆಗೆದುಕೊಂಡ, ನಮಗ್ಯಾಕೆ ಎಂದು ಕೈಚೆಲ್ಲಿ ಸಾಕ್ಷಿ ನಿಂತ ನಿರ್ಲಿಪ್ತ ವ್ಯಕ್ತಿಗಳ ಹೆಸರು, ವಯಸ್ಸು, ವರಮಾನ, ಉದ್ಯೋಗ, ಮನೆ, ಊರು, ನೆರೆಹೊರೆ, ದೈನಿಕ ಜೀವನ, ಈಗ ಅವರ ಕಣ್ಣೆದುರು ನಡೆದ ಘಟನೆಗಳು ಮುಂತಾಗಿ ಕರಾರುವಾಕ್ಕಾದ ಕ್ಲಿನಿಕಲ್ ವಿವರಗಳಷ್ಟೇ ಇದ್ದವು. ಲೇಖಕ ಸಂಪೂರ್ಣ ಮರೆಗೆ ಸಂದು, ಪಾತ್ರಗಳೇ ಮೈ ತಳೆದು ನಿಂತಿದ್ದವು. ಆ ಪಾತ್ರಗಳು ತಮಗೆ ಕಂಡಷ್ಟನ್ನೇ ಕಂಡಂತೆಯೇ ಭಯ ದಿಗಿಲು ಭರವಸೆಗಳ ಗೋಜಲಿನಲ್ಲಿ ಹೇಳಿದ್ದವು. ಕಮೂ ಕಾದಂಬರಿಯಲ್ಲಿ ನಾನು ಅಚ್ಚರಿಯಲ್ಲಿ ಏನನ್ನು ಕತೆಯಾಗಿ ಕಂಡಿದ್ದೆನೋ ಅದು ಇಲ್ಲಿ ನಮ್ಮದೇ ಕಾಲಬುಡದಲ್ಲಿ ಜೀವನವಾಗಿ ಮರುಕಳಿಸಿದ್ದನ್ನು ಕಂಡು ನಾನು ನಡುಗಿ ಹೋದೆ. ಈ ವರದಿ ಬರೆದವರು ಜಿ ರಾಜಶೇಖರ.

ತಾನು ಸಾಯುವ ಕಾಲಕ್ಕೆ ಬರೆದ ಕೊನೆಯ ಸಂಪಾದಕೀಯದಲ್ಲಿ ಲಂಕೇಶರು ಜಿ ರಾಜಶೇಖರರ ಕುರಿತು ಅಭಿಮಾನ ತೋರಿದ್ದು ಸುಖಾಸುಮ್ಮನೆ ಅಲ್ಲ. ಆ ಹೊತ್ತಲ್ಲಿ ಕೆ ಎನ್ ಫಣಿಕ್ಕರ್ ಸಂಪಾದಕರಾಗಿ ಪ್ರಕಟಿಸಿದ “ಕಾಮನ್ ಮ್ಯಾನ್ಸ್ ಗೈಡ್ ಟು ಕಮ್ಯೂನಲಿಸ್ಮ್” ಎಂಬ ಹೊಸ ಪುಸ್ತಕವನ್ನೂ ನಾನು ಓದಿದ್ದೆ; ಅದು ಬಹಳ ಪ್ರಭಾವಶಾಲಿಯಾದ ಪುಸ್ತಕ. ಈ ಕಾಕತಾಳೀಯಗಳು ಸೇರಿದ್ದರಿಂದಾಗಿ, “ಬಹುವಚನ ಕೊಡಗು” ಎಂಬ ಬಳಗ ಮತ್ತು ಅದರಿಂದ ಹಲವು ಕಾರ್ಯಕ್ರಮಗಳು ಘಟಿಸಿದವು. ಜಿ ರಾಜಶೇಖರ, ಹಾಗೂ ಅವರನ್ನು ಬಗ್ಗುಬಡಿಯುವ ಉದ್ದೇಶದ ಪುಂಡ ಪಟಾಲಂ ಮಡಿಕೇರಿಗೆ ಅವರನ್ನು ಹಿಂಬಾಲಿಸಿ ಬಂದದ್ದು ಹೀಗೆ.

2003ರಲ್ಲಿ ನಾನು ತಿರುಗಿ ಮಂಗಳೂರಿಗೆ ಬಂದು ಕೆಲಸಕ್ಕೆ ಸೇರಿದೆ. ದೂರದ ಗೋದ್ರಾ-ಗುಜರಾತ್ ಮಾತ್ರವಲ್ಲದೇ ಇಲ್ಲೇ ಆದಿ ಉಡುಪಿಯಲ್ಲೂ ಹಿಂದೂತ್ವವಾದೀ ಹಿಂಸಾಚಾರದ ಅಟ್ಟಹಾಸ ಉಲ್ಬಣಾವಸ್ಥೆಗೆ ಏರಿದ್ದ ಉಚ್ಛ್ರಾಯ ಕಾಲ. ಹಾಗಾಗಿ, ಕರಾವಳಿಯಾದ್ಯಂತ, ಮುಖ್ಯವಾಗಿ ಮಂಗಳೂರು ಉಡುಪಿಗಳಲ್ಲಿ, ಜಿ ರಾಜಶೇಖರ ಮತ್ತು ನಾನು ಹಲವು ಪ್ರತಿಭಟನಾ ಸಭೆಗಳಲ್ಲಿ ಪದೇಪದೇ, ಮತ್ತು ತನಿಖಾ ವರದಿಗಳಿಗಾಗಿ ಆಗಾಗ ಜೊತೆಯಾಗುವ ಸಂದರ್ಭಗಳು ಉಂಟಾದವು. ನಮ್ಮ ಈ ಒಡನಾಟಕ್ಕೆ ಸಂಬಂಧಿಸಿ, ಸಂಕ್ಷಿಪ್ತವಾಗಿ ನಾಲ್ಕು ವಿವರಗಳನ್ನಾದರೂ ನಾನಿಲ್ಲಿ ನೆನೆಯಬೇಕು: 2006ರ ಹಿಂದೂತ್ವವಾದೀ ಹಿಂಸಾಕಾಂಡ; ಉಡುಪಿಯ ಸೌಹಾರ್ದ ಸಾಹಿತ್ಯ ಸಮ್ಮೇಳನ; ಹತ್ತು ವರ್ಷಗಳ ಹಿಂದೆ ಮಂಗಳೂರಲ್ಲಿ ನನ್ನ ಮೇಲೆ ನಡೆದ ದೈಹಿಕ ಹಲ್ಲೆ; ಹಾಗೂ, ಮುಸ್ಲಿಮರು ಸಂಘಟಿತರಾಗಲು ಮಾಡಿದ ಪ್ರಯತ್ನದಲ್ಲಿ ನನ್ನ ಮತ್ತು ಜಿ ರಾಜಶೇಖರರ ಪಾಲುದಾರಿಕೆ.

2006ರಲ್ಲಿ, ಮುಖ್ಯವಾಗಿ ಮಂಗಳೂರು ನಗರ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಟ್ಟಲೆ ಹಿಂದೂತ್ವವಾದೀ ಹಿಂಸಾಚಾರ ನಡೆಯಿತು. ಇಬ್ಬರು ಮುಸ್ಲಿಮರ ಕೊಲೆಯಾಯಿತು. ಪ್ರಭುತ್ವ ಕಳ್ಳರಂತೆ ಅಡಗಿ ಕೂತು ಚಳಿ ಕಾಯಿಸಿಕೊಳ್ಳುತ್ತಿತ್ತು. ಮನುಷ್ಯತ್ವವೇ ಹೊತ್ತಿ ಹೋಗಿ ದಕ್ಷಿಣಕನ್ನಡ ರಕ್ತಸಿಕ್ತ ರಣರಂಗವಾಗಿತ್ತು. ಅಳಿದುಳಿದವರ ಆರ್ತನಾದದ ಆ ದಿನಗಳನ್ನು ನೆನೆಸಿಕೊಂಡರೆ ಈಗಲೂ ಮೈ ನಡುಗುತ್ತದೆ. ಒಂದು ದಿನ, ಜಿ ರಾಜಶೇಖರರವರು ಫೋನ್ ಮಾಡಿ, ಹಿಂಸಾಚಾರಕ್ಕೆ ಈಡಾದ ಪ್ರದೇಶಗಳು ಮತ್ತು ವ್ಯಕ್ತಿಗಳ ಕುರಿತು ವಿವರವಾದ ಮಾಹಿತಿ ಮತ್ತು ಸಂಪರ್ಕಗಳಿರುವ ಒಬ್ಬ ತರುಣನಿದ್ದಾನೆ; ಸಾಧ್ಯವಿದ್ದರೆ ಕೆಲಸಕ್ಕೆ ರಜೆ ಹಾಕಿ ಬಿಡುವು ಮಾಡಿಕೊಂಡು ಬನ್ನಿ, ಏನು ನಡೆದಿದೆ ಎಂಬುದನ್ನು ನೋಡಬೇಕು ಎಂದರು. ಹಾಗೆ, ನಾವಿಬ್ಬರು ಹರ್ಷದ್ ವರ್ಕಾಡಿ ಎಂಬ ತರುಣನ ಮಾರ್ಗದರ್ಶನದಲ್ಲಿ ಜೊತೆಯಾಗಿ, ಆದಷ್ಟೂ ಕೂಲಂಕಷವಾಗಿ ಭೇಟಿ, ಸಂದರ್ಶನ, ಸುತ್ತಾಟ, ಮಾಹಿತಿ ಸಂಗ್ರಹಣೆ ಮಾಡಿದೆವು. ಅಗತ್ಯ ಕಂಡ ಕಡೆಗಳಿಗೆ ಹಲವು ಬಾರಿ ಹೋಗಬೇಕಾಗಿ ಬಂತು. ಸಂತ್ರಸ್ತರು ಮತ್ತು ಅಪರಾಧಿಗಳು ಒಬ್ಬರ ದಾರಿ ಮತ್ತೊಬ್ಬರು ತೋರಿಸಿ ಈ ಕಗ್ಗಂಟಿನ ಹಿಂದೆ ಮುಂದೆ ಒಳಹೊರಗೆ ಸುತ್ತಿ ಸುದೀರ್ಘವಾದ ವರದಿಯನ್ನು ತಯಾರಿಸಿದೆವು. ಆ ವರದಿ ಕಂತು ಕಂತುಗಳಾಗಿ ‘ಲಂಕೇಶ್ ಪತ್ರಿಕೆ’ಯಲ್ಲಿ ಪ್ರಕಟವಾಯಿತು. ‘ಕರ್ನಾಟಕ ಕೋಮು ಸೌಹಾರ್ದ ವೇದಿಕೆ’ ಅದನ್ನು ಒಂದು ಪುಸ್ತಕವಾಗಿ ಪ್ರಕಟಿಸಿತು. ಅದನ್ನು ನನ್ನಿಂದ ಇಂಗ್ಲಿಷ್ ಗೆ ಅನುವಾದಿಸಿ ತೀಸ್ತಾ ಸೆಟಲ್ ವಾಡ್ ತಮ್ಮ ‘ಕಮ್ಯೂನಲಿಸ್ಮ್ ಕಾಂಬ್ಯಾಟ್’ ಪತ್ರಿಕೆಯಲ್ಲಿ ಪ್ರಕಟಿಸಿದರು. ಈ ಸಂಬಂಧವಾಗಿ ತೀಸ್ತಾ ಸೆಟಲ್ ವಾಡ್ ಸ್ವತಃ ಮಂಗಳೂರಿಗೆ ಬಂದು (ಮಾಧ್ಯಮಲೋಕ ಅದಾಗಲೇ ಕುಲಗೆಟ್ಟು ಹಿಂದೂತ್ವವಾದಿಯಾಗಿ ಮತಾಂತರಗೊಂಡಿದ್ದಾಗಲೂ) ಪತ್ರಿಕಾಗೋಷ್ಠಿ ಕರೆದು, ವಿವರಗಳನ್ನು ಸಾರ್ವಜನಿಕರ ಎದುರು ತೆರೆದಿಟ್ಟರು.

ಈ ವರದಿಯ ಉಳಿದ ಫಲಿತಗಳೇನೇ ಇರಲಿ, ನಾನು ಜಿ ರಾಜಶೇಖರರಿಂದ ಆಗ ಕಲಿತದ್ದು ಬಹಳ. ಅದು ಬಹಳ ಅಮೂಲ್ಯ ಕೂಡಾ. ಅಪರಾಧಿಗಳಿರಲಿ, ತಟಸ್ಥರಿರಲಿ, ಸಂತ್ರಸ್ತರಿರಲಿ, ಪ್ರಭುತ್ವವಿರಲಿ– ನಾವು ಭಾವಾವೇಶಕ್ಕೆ ಎಡೆಯಾಗದಂತೆ, ಸಣ್ಣಪುಟ್ಟದು ಎಂಬ ಅಸಡ್ಡೆಯಲ್ಲಿ ಯಾವ ವಿವರಗಳೂ ಕೈ ಜಾರದಂತೆ, ಸಂದರ್ಭದ ಕಗ್ಗಂಟಾದ ಮಗ್ಗುಲುಗಳಿಗೂ ಸಂಕೀರ್ಣತೆ ಸಂದಿಗ್ಧಗಳಿಗೂ ಕುರುಡಾಗದಂತೆ, ಹುಂಬ ಪಕ್ಷಪಾತಿಗಳಾಗದಂತೆ, ಆದರೆ ಸತ್ಯಕ್ಕೆ ಧಕ್ಕೆ ಬರದಂತೆ, ಪ್ರಭುತ್ವದ ಅಟ್ಟಹಾಸದಿಂದ ಕೊಂಕದಂತೆ ನಡೆದ ಈ ತನಿಖೆಯನ್ನು, ಅದರ ಒಂದು ಉದಾಹರಣೆಯ ಮುಖಾಂತರ ಹೇಳುವುದಾದರೆ: ಈ ವರದಿ ತಯಾರಾದ ನಂತರ ದೇಶದ ಬೇರೆ ಭಾಗಗಳಿಂದ ಹಾಗೂ ಹೊರದೇಶಗಳಿಂದ ಕೆಲವು ವರದಿಗಾರರು ಮತ್ತು ಮಾಧ್ಯಮ ಅಧ್ಯಯನ ವಿದ್ಯಾರ್ಥಿಗಳು ಆಗಾಗ ನನ್ನ ಬಳಿ ಬರುತ್ತಿದ್ದರು; ಅವರನ್ನು ಪದೇಪದೇ ನಾನೊಬ್ಬನೇ ಕರೆದುಕೊಂಡು ಹೋಗಬೇಕಾದ ಸಂದರ್ಭಗಳು ಬರುತ್ತಿದ್ದವು. ಆಗ ನನ್ನ ಬಳಿ, ನಾವು ತಯಾರಿಸಿದ ವರದಿಯ ಪುಸ್ತಕಗಳ ಪ್ರತಿಗಳು ಇರುತ್ತಿದ್ದವು. ಗೂಡಂಗಡಿಗಳು, ಬಟ್ಟೆ ಚಪ್ಪಲಿ ತರಕಾರಿ ಅಂಗಡಿಗಳು, ದೂರದೂರದ ಒಂಟಿ ಮನೆಗಳು– ಮುಂತಾದ ಎಲ್ಲ ಕಡೆ ಈ ಪುಸ್ತಕ ನೋಡಿ, ಅದರಲ್ಲಿ ತಮ್ಮ ಹೆಸರು ಮತ್ತು ನಡೆದ ಘಟನೆಗಳ ವಿವರಗಳನ್ನು ನೋಡಿ ಆ ನತದೃಷ್ಟ ಅಮಾಯಕರು ಸಂತಸಗೊಳ್ಳುತ್ತಿದ್ದರು. ಅವರ ಕಣ್ಣಂಚಲ್ಲಿ ತಮ್ಮ ಅಳಲು ನಿರರ್ಥಕವಲ್ಲವೇನೋ ಎಂಬ ಮಿಂಚು ಒಮ್ಮೊಮ್ಮೆ ಮೂಡುತ್ತಿತ್ತು. ಕ್ರೂರ ವ್ಯಂಗ್ಯವೋ ಎಂಬಂತೆ ನನಗೆ ಬೇಂದ್ರೆಯವರ “ಸಾಯೋ ಆಟ” ನಾಟಕದ ಈ ಸಾಲುಗಳು ಬೇಡಬೇಡವೆಂದರೂ ನೆನಪಾಗುತ್ತಿದ್ದವು: “ನಾಲ್ಕು ಜನ ನೋಡುವವರಿದ್ದರೆ ಅತ್ತರೂ ಚೆಂದ, ಸತ್ತರೂ ಚೆಂದ.” ಮನುಷ್ಯರು ಕಡೆಗೂ ಬದುಕಿ ಉಳಿಯುವುದು ಗೋಡೆಗಳಿಗಾದರೂ ಹೇಳಲ್ಪಡುವ ಕತೆಗಳಲ್ಲಿ. (ಹಾಗೊಂದು ಜನಪದ ಕತೆಯೂ– Tell It To The Walls: ಎ ಕೆ ರಾಮಾನುಜನ್– ಇದೆ). ಈ ಅಮಾಯಕರು ಯಾರೋ, ಜಿ ರಾಜಶೇಖರ ಯಾರೋ; ಒಂದರ್ಥದಲ್ಲಿ ಪರಸ್ಪರ ಅವರು ಅಪರಿಚಿತ ಅನಾಮಧೇಯರು. ರಾಜಶೇಖರರಂತೆ, ಅಳಿಸಿ ಹೋಗುವ ನಮ್ಮ ಹೆಜ್ಜೆ ಗುರುತಿಗೂ ಗುರುತು ಬರುವಂತೆ, ಮರೆಯಾಗುವುದು ಸುಲಭವಲ್ಲ.

ಪ್ರಭುತ್ವ ಮತ್ತು ಮಠಮಾನ್ಯಗಳ ಕೃಪೆಯಲ್ಲೂ, ಜಾಗತೀಕರಣವು ಮಂಗಳೂರಿನ ವಿಶೇಷ ಆರ್ಥಿಕ ವಲಯದ ಅವತಾರದಲ್ಲಿ ಸೃಷ್ಟಿಸುತ್ತಿರುವ ದುರಂತಗಳಲ್ಲೂ, ಇವುಗಳ ಹೆಣಿಗೆಯಾಗಿರುವ ದಿವ್ಯ ನಿರ್ಲಕ್ಷ್ಯಗಳ ಹಾಸುಹೊಕ್ಕಿನಲ್ಲೂ– ಕರಾವಳಿ ಕರ್ನಾಟಕದ ಹಿಂದೂತ್ವವಾದೀ ಅಟ್ಟಹಾಸವನ್ನು ಅದೃಶ್ಯಗೊಳಿಸಿ, ಸಾಹಿತ್ಯ-ಸಂಸ್ಕೃತಿ ಎಂಬ ಸುವರ್ಣ ಚೌಕಟ್ಟನ್ನು ಸಾಹಿತ್ಯ ಪರಿಷತ್ತು ಸಿದ್ಧಪಡಿಸುತ್ತಿರುವಾಗಲೇ, ಅದಕ್ಕೆ ಎದುರಾಗಿ ಉತ್ತರವಾಗಿ ಸವಾಲಾಗಿ ಉಡುಪಿಯಲ್ಲಿ ಸೌಹಾರ್ದ ಸಾಹಿತ್ಯ ಸಮ್ಮೇಳನ ನಡೆಯಿತು. ಅದು ಬಹಳ ಅರ್ಥಪೂರ್ಣವೂ ಆಗಿತ್ತು. ಜಿ ರಾಜಶೇಖರ ಮೆಚ್ಚಿಕೊಂಡ ನನ್ನ ಆಶಯ ಭಾಷಣ ಕೂಡಾ ಅದರ ಭಾಗವಾಗಿತ್ತು. ಮಂಗಳೂರಲ್ಲಿ ನನ್ನ ಮೇಲೆ ದೈಹಿಕ ಹಲ್ಲೆ ನಡೆದುದನ್ನು ಖಂಡಿಸಿ ಜಿ ರಾಜಶೇಖರ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಎದುರು ಸಾರ್ವಜನಿಕ ಭಾಷಣ ಮಾಡಿದರು. ‘ಲಂಕೇಶ್ ಪತ್ರಿಕೆ’ಗಾಗಿ ನನ್ನ ಕುರಿತು ಬರೆದರು. ಜೀವಂತ ಇರುವಾಗಲೇ ಶೃದ್ಧಾಂಜಲಿ ಲೇಖನ ಓದಿದಷ್ಟು ಸಂತೋಷವಾಯಿತು ಎಂಬ ನನ್ನ ಪ್ರತಿಕ್ರಿಯೆಗೆ ಮನಃಪುರ್ವಕವಾಗಿ ಅಪರೂಪದ ನಗೆ ನಕ್ಕರು.

ಮುಸ್ಲಿಮರು ಹಲವರು ತಾವು ಸಂಘಟಿತರಾಗಲು ಬಯಸಿ ನಡೆಸಿದ ಪ್ರಯತ್ನಗಳ ಕುರಿತು ಕೆಲವಾದರೂ ಮಾತುಗಳನ್ನು ನಾನು ಹೇಳುವುದಿದೆ. ಧರ್ಮವು ಉತ್ಸವಮೂರ್ತಿಯಾಗಿ, ಆರ್ಥಿಕತೆ ಬೇಕಾಬಿಟ್ಟಿ ಜಾಗತೀಕರಣವಾಗಿ ನಿರ್ದಯವಾಗಿ ಎದುರು ನಿಂತಿರುವ ಕಾಲ ನಮ್ಮದು. ಯಾವ ಕಡೆ ತಿರುಗಿದರೂ ಮನುಷ್ಯತ್ವದ ಪಸೆ ಕಾಣದಂತಾಗಿದೆ. ಸಂಘಪರಿವಾರದ ಅಟ್ಟಹಾಸ ಮೇರೆ ಮೀರಿದೆ. ಪ್ರಭುತ್ವವು ಹಿಂದೂತ್ವವಾದದಲ್ಲಿ ಪರೋಕ್ಷವಾಗಿಯಷ್ಟೇ ಅಲ್ಲದೇ ನೇರವಾಗಿ ಪಾಲುದಾರವಾಗಿದೆ. ಉಳಿದ ರಾಜಕೀಯ ಪಕ್ಷಗಳೂ ಜಾತ್ಯತೀತತೆ ಎಂಬುದನ್ನು ಅನುಕೂಲ ಶಾಸ್ತ್ರವನ್ನಾಗಿ ಮಾರ್ಪಡಿಸಿವೆ. ಒಂದು ಕಾಲಕ್ಕೆ ಬಹಳ ಪ್ರಭಾವಶಾಲಿಯಾಗಿದ್ದ ಎಡಪಕ್ಷಗಳ ವರ್ಚಸ್ಸು ಜಾಗತೀಕರಣದ ಬಂಡವಾಳಶಾಹಿಯ ದಾಳಿಗೆ ಪೇಲವಗೊಳ್ಳುತ್ತಿದೆ. ಕೋಮುವಾದ ಮತ್ತು ನವ ಬಂಡವಾಳಶಾಹಿಗಳ ನಾಗಾಲೋಟದ ಎದುರು, ಚಳುವಳಿಗಳು ಏದುಸಿರುಬಿಡುತ್ತಿವೆ. ನನ್ನನ್ನೇ ಉದಾಹರಣೆಯಾಗಿಟ್ಟು ಆತ್ಮಮರುಕವಿಲ್ಲದೇ ಇಷ್ಟಂತೂ ಹೇಳಬಲ್ಲೆ: ನಾನು ಉದ್ಯೋಗ ಮಾಡುತ್ತಿದ್ದ ಸಂಸ್ಥೆಗಳ ಆಡಳಿತ, ಬಹುಪಾಲು ನನ್ನ ವಿದ್ಯಾರ್ಥಿಗಳು, ಸಂಘಪರಿವಾರದ ಬೀದಿ ಪುಂಡರು ನೇತಾರರು, ಅಷ್ಟೇ ಏಕೆ ಬಸ್ಸು ರಿಕ್ಷಾ ಅಂಗಡಿ ಹೊಟೇಲು ನೆರೆಹೊರೆಯವರು ನನ್ನನ್ನು ಕಂಡದ್ದು ಒಬ್ಬ ಕ್ರಿಮಿನಲ್ ಮತ್ತು ಜನ ಶತ್ರು ಎಂಬಂತೆ. ಅವು ಅಸುರಕ್ಷಿತತೆಯ ಬೇತಾಳ ಹೆಗಲೇರಿದ ದಿನರಾತ್ರಿಗಳು. ಸವಲತ್ತುಗಳ ನಡುವೆಯೂ ನನ್ನ ಪರಿಸ್ಥಿತಿಯೇ ಹೀಗನ್ನಿಸಿದರೆ, ಉಳಿದವರ ಪಾಡು ಕರುಣಾಜನಕ. ಕರ್ನಾಟಕ ಫೋರಮ್ ಫಾರ್ ಡಿಗ್ನಿಟಿ ಹುಟ್ಟಿದ್ದು ಈ ಸಂಧಿಕಾಲದಲ್ಲಿ. ಆ ಆರಂಭದ ದಿನಗಳಿಂದಲೂ ನಾನು ಮತ್ತು ಜಿ ರಾಜಶೇಖರ ಹೆಚ್ಚೂಕಡಿಮೆ ಅವರ ಎಲ್ಲ ಕಾರ್ಯಕ್ರಮಗಳಲ್ಲೂ ಭಾಷಣಕಾರರು ಮತ್ತು ಬೆಂಬಲಿಗರು. ಕೋಮುಸೌಹಾರ್ದ ವೇದಿಕೆಯಲ್ಲಿ ಎಡೆಬಿಡದೇ ಸಕ್ರಿಯರಾಗಿದ್ದುಕೊಂಡೇ ಕೆ ಎಫ್ ಡಿ/ಪಿ ಎಫ್ ಐಗೆ ನಾವು ಜೊತೆಯಾದವರು. ನಮ್ಮದೇ ಸ್ನೇಹಿತರು ನಮ್ಮನ್ನು ಮುಸ್ಲಿಮ್ ಸಂಘಟನೆಗಳಿಂದ ಹೊರಗೆಳೆಯಲು ಮಾಡಿದ ಪ್ರಯತ್ನಗಳ ದೊಡ್ಡ ಕತೆಯೇ ಇದೆ. ಅದೇನೇ ಇದ್ದರೂ, ನನ್ನ ಮತ್ತು ರಾಜಶೇಖರರ ನಿಲುವು ಆಗಲೂ ಈಗಲೂ ಬದಲಾಗದೇ ಉಳಿಯಿತು.

ಕಾರಣ ಇಷ್ಟೇ. ನನ್ನ ವಾದ ಸರಳವಾದದ್ದು, ಆದರೆ ದೃಢವಾದದ್ದು. ಭೋಳೆ ಎನ್ನುವವರ ಬಾಯಿ ಮುಚ್ಚಿಸುವ ದರ್ದು ಅದಕ್ಕಿಲ್ಲ: (೧) ಉದಾರವಾದೀ ಪ್ರಜಾತಂತ್ರ ವ್ಯವಸ್ಥೆಯಲ್ಲಿ, ಎಲ್ಲ ವ್ಯಕ್ತಿಗಳೂ ವ್ಯಕ್ತಿಗಳಾಗಿ ಕೇವಲ ಒಂದು ವೋಟು ಮಾತ್ರ; ಅವರು ಸಂಘಟಿತ ಸ್ವರವಾಗದಿದ್ದರೆ ಅವರನ್ನು ಕೇಳುವವರಿಲ್ಲ. ಕೇಳಿದರೂ, ಕೇಳುವವರು ತೋರಿಸುವ ಕೃಪೆ-ಔದಾರ್ಯ ಬಹಳ ಉಪಯುಕ್ತವೂ ಅಲ್ಲ, ಬಾಳಿಕೆ ಬರುವಂಥದ್ದೂ ಅಲ್ಲ, ಪಡೆಯುವವರ ಘನತೆಗೆ ಹೊಂದುವಂಥದ್ದೂ ಅಲ್ಲ. ಹಾಗಾಗಿ, ಸಂಘಟಿತರಾದರೆ ಉಂಟಾಗಬಹುದಾದ ವಿಕಾರಗಳು ಮತ್ತು ಅಪಾಯಗಳನ್ನು ವಾದಗಳನ್ನಾಗಿ ಸದಾ ಕಾಲ ಚಾಲ್ತಿಯಲ್ಲಿಡಲು ಅವಕಾಶಗಳೂ ಇಲ್ಲ. (೨) ಎರಡನೆಯ ಆರೋಪ ಹೆಚ್ಚು ತೀಕ್ಷ್ಣವಾದದ್ದು, ಕಟುವಾದದ್ದು: ಇದು ಕೇವಲ ಮುಸ್ಲಿಮರ ಸಂಘಟನೆ; ಇದು ಸಂಘಪರಿವಾರದ್ದೇ ಪಡಿಯಚ್ಚು; ಇವರೂ ಕೋಮುವಾದಿಗಳು; ಇವರೂ ಹಲ್ಲೆ ದೊಂಬಿ ದಾದಾಗಿರಿ ನಡೆಸುತ್ತಾರೆ; ಮುಸ್ಲಿಮ್ ಹೆಣ್ಣುಮಕ್ಕಳನ್ನು ಸಂಘಟನೆಯಲ್ಲಿ ಸೇರಿಸಿಕೊಳ್ಳುವುದಿಲ್ಲ, ಅವರು ಸಮಾನತೆಯ ಹಕ್ಕುಗಳನ್ನು ಮಾನ್ಯಮಾಡುವುದಿಲ್ಲ, ಮುಂತಾಗಿ.

ಈ ವಿವರಗಳು ನನಗೆ ಅಷ್ಟು ಮುಖ್ಯವೆಂದು ಅನ್ನಿಸುವುದಿಲ್ಲ. ಅವರ ಘೋಷಿತ ನಿಲುವುಗಳೇನು ಎಂಬುದಷ್ಟೇ ನನಗೆ ಮುಖ್ಯವಾದುದು. ಏಕೆಂದರೆ, ತಪ್ಪುಗಳು ಸಂಭವಿಸಿದ ಸಂದರ್ಭಗಳಲ್ಲಿ ಅದೇ ಘೋಷಿತ ನಿಲುವುಗಳ ಮೂಲಕ ಅವರ ಜೊತೆ ವಾಗ್ವಾದ-ಸಂವಾದ ನಡೆಸಬಹುದಾದ ಬಾಗಿಲು ತೆರೆದೇ ಇದೆ. ಇದನ್ನು ಸಂಘಪರಿವಾರದ ವಿಷಯದಲ್ಲಿ ಹೇಳುವಂತಿಲ್ಲ. ಸಾವರ್ಕರ್, ಗೋಳ್ವಲ್ಕರ್ ಅಥವಾ ಇನ್ನಾವುದೇ ಸಂಘಪರಿವಾರದ ಮುಖವಾಣಿಗಳಾದ ಜನರನ್ನು ಹಾಗೂ ಅವರ ಘೋಷಿತ ನಿಲುವುಗಳನ್ನು ಯಾವ ನಾಗರಿಕ ಸಮಾಜವೂ ಸಮರ್ಥಿಸುವುದು ಸಾಧ್ಯವಿಲ್ಲ. ಅಲ್ಲದೇ, ಬಹುಸಂಖ್ಯಾತ ಕೋಮುವಾದವನ್ನು ಮಾಮೂಲು ತಕ್ಕಡಿಯಲ್ಲಿ ತೂಗುವುದು ಸರ್ವಥಾ ಸಾಧುವಲ್ಲ. ಇದು ನನ್ನ ಖಡಾಖಂಡಿತವಾದ ಲಾಗಾಯ್ತಿನ ನಿಲುವು. ನನಗೆ ತಿಳಿದಮಟ್ಟಿಗೆ ರಾಜಶೇಖರರ ನಿಲುವು ಕೂಡಾ ಇದೇ ಸ್ವರೂಪದ್ದು. ಹಾಗಲ್ಲದೇ, ಮುಸ್ಲಿಮರು ರಾಜಶೇಖರರನ್ನು ತಮ್ಮ ಆಪತ್ಬಾಂಧವ ಎಂದು ತಿಳಿಯಲು ವಿಶೇಷ ಕಾರಣಗಳಿಲ್ಲ.

ರಾಜಶೇಖರರು ಪಡೆಯಬಹುದಾಗಿದ್ದ ಪ್ರಶಸ್ತಿಗಳು ಸನ್ಮಾನಗಳು ಹಲವು. ಕಿರುಚು ಕಂಠದ ಕುಲಗೆಟ್ಟ ಮುಂಚೂಣಿ ಜನರು ಅದನ್ನು ತಡೆದರು. ಅದರಿಂದ ರಾಜಶೇಖರರಿಗೇನೂ ನಷ್ಟವಾಗಲಿಲ್ಲ. ಅಂಥ ಹಲವು ಪ್ರಶಸ್ತಿ ಸನ್ಮಾನಗಳು ಕೂಡಾ ಅವರು ಎದುರಾಳಿಯಾಗಿ ನಿಂತು ಹೋರಾಡಿದ ರಿವಾಜುಗಳ ಕೂಸುಗಳೇ ಆಗಿರುವುದರಿಂದ, ಅಪ್ಪಿ ತಪ್ಪಿ ಅಂಥದ್ದೊಂದು ಪ್ರಶಸ್ತಿ ಬಂದಾಗಲೂ ಅವರು ಅದನ್ನು ನಿರಾಕರಿಸಿದರು. ಆದರೆ ಉಡುಪಿಯಲ್ಲಿ ಮುಸ್ಲಿಮ್ ಸಂಘಟನೆಗಳವರು, ಮಂಗಳೂರಲ್ಲಿ ‘ಪ್ರಸ್ತುತ ಬಳಗ’ದವರು ಕೊಟ್ಟ ಪ್ರಶಸ್ತಿ-ಸನ್ಮಾನಗಳನ್ನು ತನ್ನ ಹೋರಾಟಗಳ ಮುಂದುವರಿಕೆಯಾಗಿಯೇ ಅವರು ಸಂತೋಷದಿಂದ ಸ್ವೀಕರಿಸಿದರು. ಪ್ರಶಸ್ತಿಯನ್ನು ಸ್ವೀಕರಿಸುವುದೂ ಪ್ರಶಸ್ತಿಯನ್ನು ನಿರಾಕರಿಸುವಷ್ಟೇ ಅರ್ಥಪೂರ್ಣವಾದುದು ಎಂಬುದನ್ನು, ಪ್ರಶಸ್ತಿ ಸ್ವೀಕರಿಸುವಾಗ ಅವರು ಆಡಿದ ಮಾತುಗಳು ಕೂಡಾ ಸ್ಪಷ್ಟಪಡಿಸಿವೆ. ಈ ನಿಸ್ಪೃಹತೆ ವಿರಳಾತಿವಿರಳವಾದುದು. ನಿಜವಾಗಿಯೂ ದೊಡ್ಡವರಾಗಿರುವ ನಮ್ಮ ನಡುವಿನ ಹಲವು ಹಿರಿಯರಲ್ಲಿ ಕೂಡಾ ಈ ಗುಣ ದುರ್ಲಭವಾದುದು. ಈ ವಿಷಯದಲ್ಲಿ ದಾಕ್ಷಿಣ್ಯಕ್ಕೆ ಬಸುರಾಗದೇ ಉಳಿದವರ ಸಂಖ್ಯೆ ಬಹಳ ಕಡಿಮೆ.

ಆದರೆ, ಅದಕ್ಕಿಂತ ಮುಖ್ಯವಾದ ವಿಶೇಷವೊಂದಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಾನು ಆರಂಭಿಸಿದ್ದು, ಮುಖ್ಯವಾಗಿ ನೃತ್ಯ, ಸಂಗೀತ ಮುಂತಾದ ಶಾಸ್ತ್ರೀಯ ಕಲೆಗಳ ಅತ್ಯುತ್ತಮ ವಕ್ತಾರರ ಮುಖಾಂತರ. ಆದರೆ ಅದು ಕೇವಲ “ಕಲೆಗಾಗಿ ಕಲೆ” ಎಂಬಂತಾಗುವ ಅಪಾಯಗಳನ್ನು ತಪ್ಪಿಸುವ ಕಷ್ಟಗಳೇನು ಎಂಬುದು ಅನುಭವದಿಂದ ನನ್ನ ತಿಳುವಳಿಕೆಗೆ ಬಂದಿದೆ. ಆದರೆ ನಾನು ಭಾಗವಹಿಸುವ ಸಾರ್ವಜನಿಕ ಹೋರಾಟ ಪ್ರತಿಭಟನೆ ಮುಂತಾದವು ಢಾಳಾಗಿ ರಾಜಕೀಯ ನಿಲುವುಗಳನ್ನು ಹೊಂದಿರುವಂಥವು. ಇಲ್ಲಿನ ಕೊರತೆಯೆಂದರೆ ಕಲೆಯ ನಯ ನವಿರು ನಾಜೂಕು ಸೂಕ್ಷ್ಮಗಳ ಗೈರುಹಾಜರಿ. ಸೂಕ್ಷ್ಮಗಳಿಗೆ ಒಡ್ಡಿಕೊಳ್ಳದೇ, ಎದುರಾಳಿಯ ಸಂಕಟ-ತಲ್ಲಣಗಳನ್ನು ಗ್ರಹಿಸದೇ, ಅದದೇ ಜನರೆದುರು ಅದದೇ ಮಾತುಗಳನ್ನಾಡುತ್ತ, ಘೋಷಣೆಗಳ ಬುರುಗು ಗೀಳಿನಲ್ಲಿ ಕರಗುತ್ತ ಹೋಗುವ ಅಪಾಯದಿಂದ ತಪ್ಪಿಸಿಕೊಂಡು ಸ್ತಿಮಿತದಲ್ಲಿ ಉಳಿಯುವುದು ಇಂಥಲ್ಲಿ ಕಡುಕಷ್ಟ. ರಾಜಶೇಖರರು ಈ ಇರುಸುಮುರುಸನ್ನು ಮೇಲಿಂದ ಮೇಲೆ ಅನುಭವಿಸಿದ್ದಾರೆ ಎಂದೇ ನನ್ನ ಭಾವನೆ. ಹೀಗಿದ್ದೂ ಗೊಡ್ಡಾಗದೇ ಉಳಿದದ್ದು ಅವರ ಇನ್ನೊಂದೇ ಅಂತರಂಗದ ಹೋರಾಟವಿದ್ದೀತು. ಏಕೆಂದರೆ, ನಿಜಕ್ಕಾದರೆ ದಿನನಿತ್ಯದ ಏಕತಾನದ ಬುರ್ನಾಸು ಸಾಮಾನ್ಯತೆಯಲ್ಲಿ ಕರಗಿಹೋಗದ ಸೂಕ್ಷ್ಮವೇ ಅವರ ಅಡಿಪಾಯ– langue. ದೈನಿಕದ ರಾಜಕೀಯ ಹೋರಾಟ ಮತ್ತು ನಿಲುವುಗಳಾಗಿ ಬೀದಿಗಳಲ್ಲಿ ಅವರು ನಮಗೆ ಕಾಣಿಸಿದ್ದು ಆ ಅಭಿಜಾತ ಅಭಿರುಚಿಯ ಒಂದು ಝಲಕ್– parole. ವಿಪರ್ಯಾಸವೆಂದರೆ, ಜಾರ್ಜ್ ಲುಕಾಕ್ಸ್ ಹೇಳುವಂತೆ, ಉಪಯುಕ್ತವಾದ ಒಂದು ಸರ್ವಸಾಮಾನ್ಯ ಮೇಜನ್ನು ತಯಾರಿಸುವುದಕ್ಕೂ, ನಮ್ಮ ಈ ದುಷ್ಕಾಲದಲ್ಲಿ, ಮೈಖೆಲ್ ಏಂಜೆಲೋನ ಪ್ರತಿಭೆಯೇ ಬೇಕು.

ಸಾಮಾನ್ಯರ ನಡುವೆ ಸಾಮಾನ್ಯರಾಗಿ ಇರುವುದೂ ಒಂದು ಅಸಾಮಾನ್ಯ ಸಾಧನೆ. ನನಗೆ ತಿಳಿದಮಟ್ಟಿಗೆ ರಾಜಶೇಖರರ ಜೀವನಪೂರ್ತಿಯ ಪ್ರಜ್ಞಾಪೂರ್ವಕ ಹುಡುಕಾಟವಿದ್ದುದು ಸಾಮಾನ್ಯ ಜೀವನದ ಸಹಜ ಅಸಾಮಾನ್ಯತೆಯಲ್ಲಿ. ಅನಾಮಧೇಯನಾಗಿ ಉಳಿಯಬೇಕೆಂಬ ಹಠದಲ್ಲಿ.

1992ರ ಡಿಸೆಂಬರ್ ಕೊನೆಯ ಭಾಗದ ಒಂದು ಭಾನುವಾರ. ‘ಸಾಪ್ತಾಹಿಕ ಪ್ರಭ’ದಲ್ಲಿ “ಅಕ್ಕರೆಯ ರಾಮಲಾಲನಿಗೆ ಅಕಾಲ ಮುಪ್ಪು” ಎಂಬ ನನ್ನ ಲೇಖನ ಪ್ರಕಟವಾಗಿತ್ತು. ಮಹಾತ್ಮಾ ಗಾಂಧಿ, ಮಾರ್ಟಿನ್ ಹೈಡೆಗರ್, ಸಾದತ್ ಹಸನ್ ಮಾಂಟೋ ಮತ್ತು ರಾಮಕೃಷ್ಣ ಪರಮಹಂಸರ ವಿಚಾರಗಳಿಗೆ ನಾನು ಮರುಳಾಗಿದ್ದ ಕಾಲ. ಧ್ವಂಸಗೊಂಡ ಬಾಬರೀ ಮಸೀದಿಯ ಕಲ್ಲು ಇಟ್ಟಿಗೆಗಳ ಸಂದಿಯಲ್ಲಿ ಅನಾಥವಾಗಿ ಬಿದ್ದಿದ್ದ ಅಯೋಧ್ಯೆಯ ರಾಮಲಲ್ಲಾನ ಚಿತ್ರವೊಂದನ್ನು ‘ಫ್ರಂಟ್ ಲೈನ್’ ಪತ್ರಿಕೆಯಲ್ಲಿ ಕಂಡಿದ್ದೆ. ರಾಮಕೃಷ್ಣ ಪರಮಹಂಸರ ರಾಮ, ರಾಮಲಾಲ, ಮುದ್ದಿನ ಹಸುಗೂಸು. ಬಿಲ್ಲುಬಾಣ ಹೆದೆಯೇರಿಸಿ, ಇಲ್ಲದ ಶತ್ರುವನ್ನು ನಿರ್ನಾಮ ಮಾಡಬೇಕೆನ್ನುವ ವ್ಯಗ್ರ ಉಮೇದಿನ ಸೆಟೆದು ನಿಂತ ರಾಮನಲ್ಲ. ಹಾಗೆಂದು ಬರೆದಿದ್ದೆ. ಎರಡೇ ದಿನದಲ್ಲಿ ರಾಜಶೇಖರರಿಂದ ಮೆಚ್ಚುಗೆಯ ಪತ್ರ ಹಾಗೂ ಇಂಗ್ಲಿಷ್ ಲೇಖನವೊಂದರ ಛಾಯಾಪ್ರತಿ ಅಂಚೆಯಲ್ಲಿ ಬಂತು. ಇಂಗ್ಲಿಷ್ ಲೇಖನದ ಛಾಯಾಪ್ರತಿ ‘ಇಂಡಿಯನ್ ಎಕ್ಸ್‌ಪ್ರೆಸ್‌’ ಪತ್ರಿಕೆಯಲ್ಲಿ ಮರುದಿನ ಮಹಾತ್ಮಾ ಗಾಂಧಿಯವರ ಮೊಮ್ಮಗ ರಾಮಚಂದ್ರ ಗಾಂಧಿ ಬರೆದದ್ದು. ರಾಮಕೃಷ್ಣ ಪರಮಹಂಸರ ರಾಮಲಲ್ಲಾನ ಸುತ್ತ ನಾನು ಬರೆದಿದ್ದ ಅದದೇ ವಿವರಗಳು ಅದರಲ್ಲಿದ್ದವು. ರಾಜಶೇಖರರು ತಮ್ಮ ಪತ್ರದಲ್ಲಿ, “ಇಲ್ಲಿ ನೋಡಿ, ನಿಮ್ಮ ಲೇಖನ ಒಂದು ದಿನ ತಡವಾಗಿ ಪ್ರಿಂಟಾಗಿದ್ದರೆ ನೀವು ರಾಮಚಂದ್ರ ಗಾಂಧಿಯವರ ಲೇಖನವನ್ನು ನಕಲು ಮಾಡಿದ್ದೀರಿ ಎಂಬ ಅಪವಾದವನ್ನು ಹೊರಬೇಕಾಗುತ್ತಿತ್ತು.”

ಮಾರ್ಟಿನ್ ಹೈಡೆಗರ್ ಹೇಳುವಂತೆ, “One is ready to die as soon as one is born.” ಸಾವೆಂಬುದು ಹುಟ್ಟಿನೊಂದಿಗೇ ಅಂಟಿಬರುವ ಮಾರಣಾಂತಿಕ ಶಾಪ ಎಂಬುದನ್ನು ತಿಳಿಯದವರು ಯಾರು? ತಿಳಿದು ನಡೆದವರು ಯಾರು? ಈ ಜೀವಜಗತ್ತು ಆಸೆಗಳ ಸ್ವರ್ಗವನ್ನೇ ನಮ್ಮೆದುರು ಹರಡಿದೆ. ಆದರೆ ಸಾವು ಎಲ್ಲ ಸಂಭ್ರಮಗಳನ್ನೂ ಕಸಿಯಲು ಅಲ್ಲೇ ಹೊಂಚಿ ಕೂತಿದೆ. ನಮ್ಮ ಅದಮ್ಯ ಆಸೆಗಳನ್ನು ನಿಷ್ಕರುಣ ಅಸಡ್ಡೆಯಿಂದ ತಿರಸ್ಕರಿಸುತ್ತದೆ ಎಂದಾದರೆ ಈ ಬದುಕಿಗೆ ಏನು ಅರ್ಥ? ಸಾವಿನಿಂದ ಶಪಿತವಾದ ಜೀವ ಸ್ವಹತ್ಯೆ ಮಾಡಿಕೊಳ್ಳದೇ ಬದುಕಿರಬೇಕಾದದ್ದಾದರೂ ಯಾಕೆ ಎಂಬುದೇ ಮೂಲಭೂತ ಪ್ರಶ್ನೆ ಎಂದು ಕಮೂ ಹೇಳುತ್ತಾನೆ. ಗುಡ್ಡದ ಬುಡದಿಂದ ಹಲ್ಲುಕಚ್ಚಿ ಪ್ರಯಾಸಪಟ್ಟು ಬಂಡೆಯೊಂದನ್ನು ದೂಡಿ ತುದಿ ಮುಟ್ಟಿಸಿ ಅದು ಉರುಳಿಬೀಳುವುದನ್ನು ಅಸಹಾಯಕತೆಯಲ್ಲಿ ನೋಡುವ, ಪುನರಪಿ ಬಂಡೆಯನ್ನು ಮೇಲಕ್ಕೆ ತಳ್ಳುವ ಸಿಸಿಫಸ್ ಪುರಾಣವೇ ಕಮೂವಿನ ಪ್ರಕಾರ ನಮ್ಮ ಜೀವನ. ಆದರೆ ಸಿಸಿಫಸ್-ಕಮೂ ಸಿನಿಕರಂತೆ ಕೈಚೆಲ್ಲುವುದಿಲ್ಲ. ಬಂಡೆಯನ್ನು ಮೇಲಕ್ಕೆ ದೂಡುವ ಅವಿರತ ಪ್ರಯಾಸ ಹಾಗೂ ಬಂಡೆ ಉರುಳಿ ಕೆಳಕ್ಕೆ ಬೀಳುವುದನ್ನು ನೋಡುತ್ತ ನಿಂತ ಅಸಹಾಯಕ ಸಾಕ್ಷಿತ್ವದ ನಡುವೆ ಸಂದು ಕಡಿಯುವ ಬೆಳ್ಳಿಯ ಗೆರೆಯೊಂದಿದೆ. ಇನ್ನೊಮ್ಮೆ ಬಂಡೆಯನ್ನು ಮೇಲಕ್ಕೆ ದೂಡಲು ಕೆಳಗಿಳಿಯುವ ಕ್ಷಿಪ್ರ ಬಿಡುವೊಂದಿದೆ. ಅದು ನಿರಾಳ ಕಾಲ. ಅದು ಶಾಪದಿಂದ ಕಸಿದ ನಮ್ಮದೇ ಪಾಲು. ಬಂಡೆಯ ನೂಕಾಟದ ನಡುವೆ ಅರ್ಥ ಹೀಗೆ ಹಠಾತ್ತನೆ ಜಿನುಗುವುದು. ಹಾಗಲ್ಲದೇ, ಪರರ ನೋವು ಸಂಕಟ ಸಾವುಗಳ ಸತತ ಧ್ಯಾನ ರಾಜಶೇಖರರಿಗೆ ಒದಗಲು ಸಾಧ್ಯವಿತ್ತೇ?

(ಎಚ್ ಪಟ್ಟಾಭಿರಾಮ ಸೋಮಯಾಜಿ
104ಸಿ, 4ನೇ ಅಡ್ಡರಸ್ತೆ, ಗಿರಿನಗರ
ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್
ದೇರೇಬೈಲ್ ಕೊಂಚಾಡಿ
ಮಂಗಳೂರು, 575008
ಫೋನ್:9448325705
ಇಮೆಯ್ಲ್:somayajihp@gmail.com)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ2 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ2 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ3 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ2 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending