Connect with us

ಬಹಿರಂಗ

ಸಂವಿಧಾನ ಸಭೆಯಲ್ಲಿ ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣ

Published

on

ಭಾರತದ ಸ್ವಾತಂತ್ರ್ಯಕ್ಕೆ ಏನಾಗಲಿದೆ? 26ನೇ ಜನವರಿ 1950ರಂದು, ಭಾರತವು ಸಂಪೂರ್ಣ ಸ್ವತಂತ್ರ ರಾಷ್ಟ್ರವಾಗಲಿದೆ. ಆದರೆ ಅದರ ಸ್ವಾತಂತ್ರ್ಯಕ್ಕೆ ಏನಾಗಲಿದೆ? ಅದು ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲಿದೆಯೇ? ಅಥವಾ ಅದು ತನ್ನ ಸ್ವಾತಂತ್ರ್ಯವನ್ನು ಮತ್ತೊಮ್ಮೆ ಕಳೆದುಕೊಳ್ಳಲಿದೆಯೇ? ಇದು ನನ್ನ ಮನಸ್ಸಿನಲ್ಲಿ ಮೂಡಿದ ಮೊದಲ ವಿಷಯವಾಗಿರುತ್ತದೆ.

ಭಾರತವು ಹಿಂದೆಂದೂ ಸ್ವತಂತ್ರವಾಗಿರಲಿಲ್ಲವೆಂದು ಇದರ ಅರ್ಥವಲ್ಲ. ಅದು ತನ್ನ ಸ್ವಾತಂತ್ರ್ಯವನ್ನು ಮಧ್ಯೆ ಕಳೆದುಕೊಂಡಿತ್ತು. ಅದು ಎರಡನೆಯ ಬಾರಿಗೆ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತದೆಯೇ?
ಈ ಆಲೋಚನೆಯೇ ಭವಿಷ್ಯದ ಬಗ್ಗೆ ನನ್ನನ್ನು ಕಳವಳಗೊಳ್ಳು ವಂತೆ ಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯವನ್ನು ಹಿಂದೊಮ್ಮೆ ಕಳೆದುಕೊಂಡಿತ್ತೆಂಬ ಸಂಗತಿಯು ನನ್ನ ಮನಸ್ಸಿನ ಕ್ಷೋಭೆಗೆ ಕಾರಣ. ತನ್ನವರದೇ ಆದ ವಿಶ್ವಾಸಘಾತುಕದಿಂದ ಹಾಗೂ ದೇಶದ್ರೋಹಿಗಳಿಂದ ಸ್ವಾತಂತ್ರ್ಯವನ್ನು ಕಳೆದುಕೊಂಡಿತು ಎಂಬುವುದು ನನ್ನ ಮನಸ್ಸಿನ ಕ್ಷೋಭೆಗೆ ಮುಖ್ಯ ಕಾರಣವಾಗಿದೆ.

ಸಿಂಧ್ ಪ್ರಾಂತ್ಯದ ಮೇಲೆ ಮೊಹಮ್ಮದ್ ಬಿನ್ ಖಾಸಿಂ ದಂಡೆತ್ತಿ ಬಂದಾಗ ಅವನ ವಿರುದ್ಧ ಯುದ್ಧ ಘೋಷಣೆ ಮಾಡಬೇಕಿದ್ದ ಧಾರ್ ಅರಸನ ಸೈನಿಕ ಕಮಾಂಡರುಗಳು ಮೊಹಮದ್ ಬಿನ್ ಖಾಸಿಂ ಕಡೆಯ ಏಜೆಂಟರುಗಳು ಕೊಟ್ಟ ಲಂಚವನ್ನು ಸ್ವೀಕರಿಸಿ ರಾಜನ ಪರವಾಗಿ ಯುದ್ಧ ಮಾಡದೆ ಹೋದ ಉದಾಹರಣೆ ನನ್ನ ಮುಂದೆ ಇದೆ. ಭಾರತದ ಮೇಲೆ ಯುದ್ಧ ಮಾಡಲು ಮೊಹಮ್ಮದ್ ಘೋರಿ ಯನ್ನು ಭಾರತೀಯನೇ ಆಗಿದ್ದ ಜೈಚಂದರ್ ಎಂಬುವವನು ಸ್ವಾಗತಿ ಸಿದ್ದು, ಮತ್ತು ಪೃಥ್ವಿರಾಜನ ವಿರುದ್ಧ ಯುದ್ಧ ಮಾಡುವಂತೆ ಪ್ರೇರೇಪಿ ಸಿದ್ದು ಮತ್ತು ಆ ಯುದ್ಧದಲ್ಲಿ ತಾನು ಹಾಗೂ ಸೋಲಂಕಿಯ ರಾಜರು ಗಳು ಸಹಾಯ ಮಾಡುವುದಾಗಿ ಹೇಳಿದಂತಹ ಉದಾಹರಣೆಗಳು ನನ್ನ ಮುಂದೆ ಇವೆ.

ಶಿವಾಜಿ ಮಹಾರಾಜನು ಹಿಂದೂಗಳ ವಿಮೋಚನೆ ಗಾಗಿ ಯುದ್ಧ ಮಾಡುತ್ತಿದ್ದಾಗ, ಇತರೆ ಮರಾಠಾ ರಾಜರುಗಳು ಮತ್ತು ರಜಪೂತ್ ರಾಜರುಗಳು ಮೊಘಲ್ ಚಕ್ರವರ್ತಿಗಳ ಪರವಾಗಿ ಯುದ್ಧ ಮಾಡುತ್ತಿದ್ದರು. ಬ್ರಿಟಿಷರು ಸಿಖ್ ರಾಜರುಗಳ ಆಡಳಿತವನ್ನು ಧ್ವಂಸ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾಗ, ಸಿಖ್ ರಾಜರುಗಳ ಸೇನೆಯ ಮುಖ್ಯ ಕಮಾಂಡರ್ ಆದ ಗುಲಾಬ್‍ಸಿಂಗನು ಪ್ರೇಕ್ಷಕನಂತೆ ಮೌನ ವಹಿಸಿ ಕುಳಿತಿದ್ದನು. ಅವನು ಸಿಖ್ ಸಾಮ್ರಾಜ್ಯದ ರಕ್ಷಣೆಗಾಗಿ ಕಿಂಚಿತ್ತೂ ಸಹಾಯ ಮಾಡಲಿಲ್ಲ.

1857ರಲ್ಲಿ ಭಾರತದಾದ್ಯಂತ, ಬ್ರಿಟೀಷರ ವಿರುದ್ಧ, ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ಘೋಸಿದಾಗ, ಸಿಖ್ ಸಮುದಾಯ ಆ ಘಟನೆಯನ್ನು ಕೇವಲ ಪ್ರೇಕ್ಷಕರಂತೆ ನಿಂತು ನೋಡಿದ ಉದಾಹರಣೆ ನನ್ನ ಮುಂದೆ ಇದೆ.

ಇತಿಹಾಸ ಮರುಕಳಿಸುತ್ತದೆಯೇ? ಈ ವಿಷಯವೇ ನನ್ನ ಕಳವಳಕ್ಕೆ ಮುಖ್ಯ ಕಾರಣವಾಗಿದೆ. ನಮ್ಮ ಹಿಂದಿನ ವೈರಿಗಳಾದ ಜಾತಿ-ಪಂಗಡ ಗಳ ಜೊತೆಗೆ ಇನ್ನು ಮುಂದೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಗಡಗಳು ಸೇರಿಕೊಳ್ಳಲಿವೆ. ಭಾರತೀಯರು ತಮ್ಮ ಜಾತಿ, ಪಂಗಡಗ ಳನ್ನು ಬದಿಗೊತ್ತಿ ರಾಷ್ಟ್ರ ಮುಖ್ಯ ಎನ್ನುವರೋ, ಅಥವಾ ರಾಷ್ಟ್ರವನ್ನು ಬದಿಗೊತ್ತಿ ಜಾತಿ-ಪಂಗಡಗಳು ಮುಖ್ಯ ಎನ್ನುವರೋ, ನನಗೆ ಗೊತ್ತಿಲ್ಲ. ಆದರೆ ಇಷ್ಟಂತೂ ಸತ್ಯ. ದೇಶದಲ್ಲಿನ ರಾಜಕೀಯ ಪಕ್ಷಗಳು ಜಾತಿ ಪಂಗಡಗಳನ್ನೇ ಪ್ರಧಾನವಾಗಿ ಮಾಡಿಕೊಂಡರೆ ದೇಶದ ಸ್ವಾತಂತ್ರ್ಯಕ್ಕೆ ಗಂಡಾಂತರ ಒದಗುತ್ತದೆ ಮತ್ತು ನಮ್ಮ ಸ್ವಾತಂತ್ರ್ಯವನ್ನು ಎರಡನೆಯ ಬಾರಿಗೆ ಮತ್ತು ಶಾಶ್ವತವಾಗಿ ಕಳೆದುಕೊಳ್ಳುವ ಪ್ರಸಂಗ ಒದಗಬಹುದು.

ಇಂತಹ ಸಂಭಾವ್ಯ ಘಟನೆಯ ವಿರುದ್ಧ ನಾವು ದೃಢಸಂಕಲ್ಪದಿಂದ ಎಚ್ಚರ ವಹಿಸಬೇಕು. ನಮ್ಮ ಕಟ್ಟ ಕಡೆಯ ರಕ್ತದ ತೊಟ್ಟನ್ನು ಹರಿಸಿಯಾ ದರೂ, ದೇಶದ ಸ್ವಾತಂತ್ರ್ಯವನ್ನು ರಕ್ಷಿಸುತ್ತೇವೆ, ಎಂದು ನಾವು ಪ್ರತಿಜ್ಞೆಯನ್ನು ಕೈಗೊಳ್ಳಬೇಕಿದೆ.
26 ನೇ ಜನವರಿ 1950ರಂದು ಭಾರತವು ಸ್ವತಂತ್ರ ಗಣರಾಜ್ಯ ವಾಗಲಿದೆ. ಅಂದರೆ ಅದರ ಅರ್ಥ, ಆ ದಿನದಿಂದ ಭಾರತವು ತನ್ನ ಜನತೆುಂದ, ತನ್ನ ಜನರಿಗಾಗಿ, ತನ್ನ ಜನರಿಗೋಸ್ಕರ ಸರ್ಕಾರವನ್ನು ರೂಪಿಸಿಕೊಳ್ಳಲಿದೆ. ಇದೇ ವಿಷಯ ಮತ್ತೊಮ್ಮೆ ನನ್ನ ಮನಸ್ಸಿಗೆ ಬರುತ್ತಿದೆ. ಸಂವಿಧಾನವು ತನ್ನ ಪ್ರಜಾಸತ್ತಾತ್ಮಕ ಲಕ್ಷಣಗಳನ್ನು ಉಳಿಸಿ ಕೊಳ್ಳುತ್ತದೆಯೇ? ಅದು ಉಳಿಸಿಕೊಳ್ಳುತ್ತದೆಯೇ ಅಥವಾ ಮತ್ತೊಮ್ಮೆ ಕಳೆದುಕೊಳ್ಳುತ್ತದೆಯೇ? ಈ ಎರಡನೆಯ ವಿಚಾರವು ನನ್ನ ಮೊದಲನೆಯ ಪ್ರಶ್ನೆಯಷ್ಟೇ ನನಗೆ ಕಳವಳಕಾರಿಯಾಗಿದೆ.

ಭಾರತಕ್ಕೆ `ಪ್ರಜಾಪ್ರಭುತ್ವ’ ಎಂದರೆ ಏನು ಎಂಬುದು ತಿಳಿದಿರಲಿಲ್ಲ ಎಂದು ಹೇಳಲು ಬರುವುದಿಲ್ಲ. ಭಾರತವು ಒಂದಾನೊಂದು ಕಾಲಕ್ಕೆ ಅನೇಕ ಗಣರಾಜ್ಯಗಳನ್ನು ಹಾಗೂ ಅನೇಕ ರಾಜ-ಮಹಾರಾಜರುಗಳನ್ನು ಹೊಂದಿತ್ತು. ಇಂತಹ ಮಹಾರಾಜರುಗಳಲ್ಲಿ ಕೆಲವರು ಚುನಾಯಿತರಾಗು ತ್ತಿದ್ದರು ಅಥವಾ ಅವರು ಸೀಮಿತ ಅಧಿಕಾರ ಹೊಂದಿರುತ್ತಿದ್ದರು. ಆದರೆ ಅವರು ಎಂದೂ ನಿರಂಕುಶ ಪ್ರಭುಗಳಾಗಿರಲಿಲ್ಲ. ಭಾರತಕ್ಕೆ ಸಂಸತ್ತುಗಳು ಅಥವಾ ಸಂಸತ್ತುಗಳಲ್ಲಿ ನಡೆಯಬೇಕಾದ ವಿಧಿ ವಿಧಾನ ಗಳು ತಿಳಿದಿರಲಿಲ್ಲ ಎಂದಲ್ಲ.

ಬೌದ್ಧ ಭಿಕ್ಷು ಸಂಘಗಳ ರಚನೆಯನ್ನು ಅಧ್ಯಯನ ಮಾಡಿದರೆ, ನಮ್ಮಲ್ಲಿ ಸಂಘಗಳಿಗೆ ಪರ್ಯಾಯವಾಗಿ ಸಂಸತ್ತುಗಳು ಇದ್ದವು ಮತ್ತು ಅಂತಹ ಸಂಘಗಳು ಎಂದರೆ ಸಂಸತ್ತುಗಳೇ ಅಲ್ಲದೆ ಬೇರೆ ಏನೂ ಅಲ್ಲ ಎಂಬುದು ವೇದ್ಯವಾಗುತ್ತದೆ. ಅಂತಹ ಸಂಘಗಳು ಆಧುನಿಕ ಯುಗದಲ್ಲಿನ ಸಂಸತ್ತುಗಳು ಯಾವ ವಿಧಿ-ವಿಧಾನಗಳನ್ನು ಅನುಸರಿಸಿಕೊಂಡು ರಚನೆಯಾಗಿವೆಯೋ ಅಂತಹ ವಿಧಿ-ವಿಧಾನಗಳ ಮೇಲೆ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದವು. ಅವುಗಳಲ್ಲಿ ಆಸನಗಳ ಏರ್ಪಾಡು, ನಿರ್ಣಯಗಳನ್ನು ಕೈಗೊಳ್ಳಲು ಇದ್ದ ನಿಯಮಗಳು, ಕೋರಮ್, ಸಚೇತಕರು, ಮತಗಳ ಎಣಿಕೆ, ಮತ ಚೀಟಿಗಳ ಮೂಲಕ ಮತದಾನ, ಛೀಮಾರಿ ನಿರ್ಣಯ, ನಿಯಂತ್ರಿ ಸುವ ವಿಧಾನ, ಪೂರ್ವ ನ್ಯಾಯ ಇತ್ಯಾದಿ ಇದ್ದುದನ್ನು ನೋಡ ಬಹುದು. ಬುದ್ಧನು ಸಂಘಗಳ ಸಭೆಗಳ ನಿರ್ವಹಣೆಗಾಗಿ ಅನುಸರಿಸುತ್ತಿದ್ದ ಈ ಸಂಸದೀಯ ವಿಧಿ ವಿಧಾನಗಳನ್ನು, ತನ್ನ ಕಾಲಕ್ಕೆ ತನ್ನ ದೇಶದಲ್ಲಿದ್ದ ರಾಜಕೀಯ ಸಭೆಗಳಿಂದ ಅಥವಾ ರಾಜಕೀಯ ಪರಿಷತ್‍ಗಳಿಂದ, ತೆಗೆದುಕೊಂಡಿರಬೇಕೆಂದು ಕಂಡುಬರುತ್ತದೆ.

ಈ ಪ್ರಜಾಪ್ರಭುತ್ವ ಪದ್ದತಿಯನ್ನು ಭಾರತವು ಕಳೆದುಕೊಂಡಿತು. ಅದು ಎರಡನೇ ಬಾರಿಗೆ ಕಳೆದುಕೊಳ್ಳಲಿದೆಯೇ? ನನಗೆ ಗೊತ್ತಿಲ್ಲ. ಆದರೆ ಭಾರತದಂತಹ ದೇಶದಲ್ಲಿ ಪ್ರಜಾಪ್ರಭುತ್ವ ಪದ್ಧತಿಯು ಬಹಳ ಕಾಲದಿಂದ ಬಳಕೆಯಲ್ಲಿ ಇಲ್ಲದಿದ್ದ ಕಾರಣ ಈ ಪ್ರಜಾಪ್ರಭುತ್ವ ವ್ಯವಸ್ಥೆ ಹೊಸದೆನಿಸಬಹುದು ಮತ್ತು ಪ್ರಜಾಪ್ರಭುತ್ವ ಮರೆಯಾಗಿ ಸರ್ವಾಧಿಕಾರಕ್ಕೆ ಎಡೆ ಮಾಡಿಕೊಡುವ ಅಪಾಯವುಂಟು. ಈಗ ಹೊಸದಾಗಿ ಜನ್ಮ ತಳೆದ ಪ್ರಜಾಪ್ರಭುತ್ವ ತನ್ನ ಸ್ವರೂಪವನ್ನು ಉಳಿಸಿಕೊಳ್ಳದೇ ಅದರ ಜಾಗದಲ್ಲಿ ಸರ್ವಾಧಿಕಾರಕ್ಕೆ ಅವಕಾಶ ಮಾಡಿಕೊಡುವ ಸಂಭವ ವುಂಟು. ರಾಜಕೀಯದಲ್ಲಿ ಇಂಥÀ ಭೂಕಂಪವೇನಾದರೂ ನಡೆದಿದ್ದೆಯಾ ದರೆ ನನ್ನ ಎರಡನೇ ಅನುಮಾನವು ವಾಸ್ತವವಾಗುವ ಸಾಧ್ಯತೆಯುಂಟು.

ಪ್ರಜಾಪ್ರಭುತ್ವವನ್ನು ಅದರ ಸ್ವರೂಪವನ್ನಷ್ಟೇ ಅಲ್ಕದೆ, ಅದರ ತತ್ವವನ್ನು ಉಳಿಸಿಕೊಳ್ಳಬೇಕಾದರೆ ನಾವು ಏನು ಮಾಡಬೇಕು? ನನ್ನ ಅಭಿಪ್ರಾಯದ ಪ್ರಕಾರ, ನಮ್ಮ ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗ ಳನ್ನು ಈಡೇರಿಸಿಕೊಳ್ಳಲು ಸಂವಿಧಾನದ ವಿಧಾನಗಳನ್ನೇ ಅನುಸರಿಸ ಬೇಕಾಗುತ್ತದೆ. ಅಂದರೆ ನಾವು ಕ್ರಾಂತೀಯ ರಕ್ತಪಾತ ಮಾರ್ಗವನ್ನು ಕೈಬಿಡಬೇಕಾಗುತ್ತದೆ. ಅಂದರೆ ನಾವು ಶಿಸ್ತುಭಂಗ, ಅಸಹಕಾರ ಮತ್ತು ಸತ್ಯಾಗ್ರಹ ಈ ಮಾರ್ಗಗಳನ್ನು ಬಿಡಬೇಕಾಗುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗಳ ಈಡೇರಿಕೆಗೆ ಸಂವಿಧಾನ ಸಮ್ಮತ ಮಾರ್ಗಗಳ ಅವಕಾಶವಿಲ್ಲದಿದ್ದ ಸಂದರ್ಭದಲ್ಲಿ ಸಂವಿಧಾನ ಬಾಹಿರವಾದ ಮಾರ್ಗ ಗಳನ್ನು ಅನುಸರಿಸುವುದು ಬಹಳಷ್ಟು ಸಮರ್ಥನೀಯವಾಗಿತ್ತು.

ಆದರೆ ಎಲ್ಲಿ ಸಂವಿಧಾನದ ಸಮ್ಮತ ಮಾರ್ಗಗಳಿಗೆ ಅವಕಾಶವಿರುತ್ತದೆಯೋ, ಅಲ್ಲಿ ಸಂವಿಧಾನ ಬಾಹಿರವಾದ ಮಾರ್ಗಗಳಿಗೆ ಸಮರ್ಥನೆ ಇರುವು ದಿಲ್ಲ. ಈ ಮಾರ್ಗಗಳು ಅರಾಜಕತೆಯ ಧರ್ಮಗ್ರಂಥದ ನೀತಿ ಸೂತ್ರ ಗಳಾಗಿದ್ದು, ಇವುಗಳನ್ನು ಎಷ್ಟು ಬೇಗ ತೊರೆಯುತ್ತೇವೆಯೋ, ರಾಷ್ಟ್ರಕ್ಕೆ ಅಷ್ಟೂ ಕ್ಷೇಮ.
ಎರಡನೆಯದಾಗಿ ಜಾನ್ ಸ್ಪೋರಟ್ ಮಿಲ್ ಪ್ರಜಾಪ್ರಭುತ್ವವನ್ನು ಕುರಿತು ಹೇಳಿದ್ದ ಎಚ್ಚರಿಕೆ ಮಾತನ್ನು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಇರುವವರೆಲ್ಲರೂ ಗಮನಿಸಬೇಕಾಗುತ್ತದೆ. ಅಂದರೆ “ಎಂತಹ ಮಹಾನ್ ವ್ಯಕ್ತಿಯೇ ಆಗಿದ್ದರೂ ಅವನ ಪಾದದಡಿಯಲ್ಲಿ ತಮ್ಮ ಸ್ವಾತಂತ್ರ್ಯವನ್ನು ಎಸೆಯಬಾರದು. ಅಥವಾ ತಮ್ಮ ಯಾವುದೇ ಸಂಸ್ಥೆಗಳನ್ನು ಬುಡ ಮೇಲು ಮಾಡಲು ಅನುಕೂಲವಾಗುವ ಹಾಗೆ, ಅವರಿಗೆ ಅಧಿಕಾರವನ್ನು ಕೊಡಲೂಬಾರದು” ದೇಶಕ್ಕೆ ಜೀವಮಾನವೆಲ್ಲಾ ಸೇವೆ ಸಲ್ಲಿಸಿದ ಯಾವುದೇ ಮಹಾನ್ ವ್ಯಕ್ತಿಗೆ ಋಣಿಯಾಗಿರುವುದರಲ್ಲಿ ತಪ್ಪೇನೂ ಇಲ್ಲ, ಆದರೆ ಋಣಿಯಾಗಿರುವುದಕ್ಕೂ ಕೆಲವು ಮಿತಿಗಳಿರುತ್ತವೆ.

ಐರಿಷ್ ರಾಷ್ಟ್ರಪ್ರೇಮಿಯಾದ ಡೇನಿಲ್ ಓ ಕನ್ನೋಲ್ ಎಂಬುವವನು ಹೇಳಿ ದಂತೆ, “ಯಾವೊಬ್ಬ ವ್ಯಕ್ತಿಯು ತನ್ನ ಗೌರವವನ್ನು ಕಳೆದು ಕೊಂಡು ಮತ್ತೊಬ್ಬನಿಗೆ ಋಣಿ ಯಾಗಿರಬಾರದು. ಯಾವೊಬ್ಬ ಮಹಿಳೆಯು ತನ್ನ ಪಾವಿತ್ರ್ಯತೆ ಯನ್ನು ಬಲಿಗೊಟ್ಟು ಕೃತಜ್ಞತೆಯನ್ನು ತೋರಿಸಬೇಕಿಲ್ಲ. ಅದೇ ರೀತಿಯಲ್ಲಿ ಯಾವ ರಾಷ್ಟ್ರವೂ ತನ್ನ ಸ್ವಾತಂತ್ರ್ಯವನ್ನು ಬಲಿಗೊಟ್ಟು ಕೃತಜ್ಞವಾಗಿರ ಬೇಕಿಲ್ಲ”. ಈ ಎಚ್ಚರಿಕೆಯ ಮಾತು, ಇತರೆ ಯಾವುದೇ ದೇಶಕ್ಕಿಂತ ಭಾರತದ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿರುತ್ತದೆ.

ಭಾರತದಲ್ಲಿ ಭಕ್ತಿಪಂಥ ಅಥವಾ ವ್ಯಕ್ತಿಪೂಜೆ ರಾಜಕೀಯದಲ್ಲಿ ಮಹತ್ವದ ಪಾತ್ರಗಳನ್ನು ವಹಿಸುತ್ತಿವೆ. ಈ ವಿಷಯದಲ್ಲಿ ಪ್ರಪಂಚದ ಯಾವುದೇ ರಾಷ್ಟ್ರವು ಇದಕ್ಕೆ ಸರಿಸಾಟಿಯಾಗಲಾರದು. ಧಾರ್ಮಿಕವಾಗಿ ಭಕ್ತಿಯು ಆತ್ಮದ ಮೋಕ್ಷಕ್ಕೆ ದಾರಿ ಮಾಡಿಕೊಡಬಹುದು. ಆದರೆ ರಾಜಕೀಯದಲ್ಲಿನ ಭಕ್ತಿ ಅಥವಾ ವ್ಯಕ್ತಿ ಪೂಜೆಯು, ಖಂಡಿತವಾಗಿಯೂ, ಅವನತಿಗೆ ಮತ್ತು ನಿರಂಕುಶ ಪ್ರಭುತ್ವದ ಉದಯಕ್ಕೆ, ದಾರಿ ಮಾಡಿ ಕೊಡುತ್ತದೆ.

ಮೂರನೆಯದಾಗಿ ನಾವು ಮಾಡಬೇಕಾದುದು ಎಂದರೆ, ಕೇವಲ ರಾಜಕೀಯ ಪ್ರಜಾಪ್ರಭುತ್ವದಿಂದ ತೃಪ್ತಿ ಹೊಂದಿ ಸಮ್ಮನಾಗ ಬಾರದು. ನಾವು ನಮಗೆ ದೊರೆತ ಈ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾ ಜಿಕ ಪ್ರಜಾಪ್ರಭುತ್ವವನ್ನಾಗಿಯೂ ಮಾಡಬೇಕು. ರಾಜಕೀಯ ಪ್ರಜಾಪ್ರಭು ತ್ವಕ್ಕೆ ಸಾಮಾಜಿಕ ಪ್ರಜಾಪ್ರಭುತ್ವವು ಬುನಾದಿಯಾಗಿರದಿದ್ದರೆ ರಾಜಕೀಯ ಪ್ರಭುತ್ವಕ್ಕೆ ಉಳಿಗಾಲವಿಲ್ಲ. ಹಾಗಾದರೆ, ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಏನು? ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಅದೊಂದು ಜೀವನ ಪದ್ಧತಿ. ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತೃತ್ವ ಆದ ಈ ತ್ರಿವಳಿಗಳಲ್ಲಿ ಒಂದೊಂದನ್ನು ಪ್ರತ್ಯೇಕವೆಂದು ಪರಿಗಣಿಸು ವಂತಿಲ್ಲ. ಅವು ಒಂದಕ್ಕೊಂದು ಪೂರಕವಾಗಿರುತ್ತವೆ. ಅವುಗಳನ್ನು ಪ್ರತ್ಯೇಕಿಸುವು ದೆಂದರೆ ಪ್ರಜಾಪ್ರಭುತ್ವದ ಉದ್ದೇಶವು ವಿಫಲವಾಗುತ್ತದೆ.

ಸ್ವಾತಂತ್ರ್ಯ ವನ್ನು, ಸಮಾನತೆಯಿಂದ ಪ್ರತ್ಯೇಕಿಸಲು ಬರುವುದಿಲ್ಲ. ಸಮಾನತೆಯನ್ನು ಸ್ವಾತಂತ್ರ್ಯದಿಂದ ಪ್ರತ್ಯೇಕಿಸಲು ಬರುವುದಿಲ್ಲ. ಹಾಗೆಯೇ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು, ಭ್ರಾತೃತ್ವದಿಂದ ಪ್ರತ್ಯೇಕಿಸಲೂ ಬರುವುದಿಲ್ಲ. ಸ್ವಾತಂತ್ರ್ಯತೆ ಇಲ್ಲದ ಸಮಾನತೆಯು ವ್ಯಕ್ತಿಗತ ಸ್ವಾತಂತ್ರ್ಯವನ್ನು ನಾಶ ಗೊಳಿಸುತ್ತದೆ.
ಭ್ರಾತೃತ್ವವಿಲ್ಲದೆ ಸ್ವಾತಂತ್ರ್ಯ ಮತ್ತು ಸಮಾನತೆಗಳು ಸುಸೂತ್ರವಾಗಿ ನಡೆಯುವಂತಿಲ್ಲ. ಇವುಗಳನ್ನು ಜಾರಿಗೆ ತರಲು ಬಲಪ್ರಯೋಗ ಅಗತ್ಯವಾದೀತು! ಭಾರತೀಯ ಸಮಾಜದಲ್ಲಿ ಈ ಎರಡೂ ಸಂಗತಿಗಳು ಸಂಪೂರ್ಣ ಅಭಾವವಿದೆ ಎಂಬ ವಾಸ್ತವವನ್ನು ನಾವು ಒಪ್ಪಿಕೊಳ್ಳ ಬೇಕು. ಅಂತಹ ಎರಡು ಸಂಗತಿಗಳಲ್ಲಿ ಸಮಾನತೆ ಎಂಬುವುದೂ ಒಂದು. ಸಾಮಾಜಿಕ ಸ್ಥರದ ಮಟ್ಟಿಗೆ ಹೇಳಬೇಕಾದರೆ, ಭಾರತದಲ್ಲಿ ಸಾಮಾಜಿಕ ವ್ಯವಸ್ಥೆಯು ಅಸಮಾನತೆಯ ಶ್ರೇಣಿಗಳ ಮೇಲೆ ನಿಂತಿದೆ. ಅಂದರೆ ಕೆಲವರು ಮೇಲು ಮತ್ತು ಕೆಲವರು ಕೀಳು ಎಂಬ ಅರ್ಥದಲ್ಲಿ. ಆರ್ಥಿಕ ಸ್ಥರದಲ್ಲಿ ಹೇಳಬೇಕೆಂದರೆ, ನಮ್ಮ ಸಮಾಜದಲ್ಲಿ ಹೆಚ್ಚಿನ ಜನ ಕಡು ಬಡತನದಲ್ಲಿದ್ದರೆ, ಕೆಲವರಲ್ಲಿ ಮಾತ್ರ ಶ್ರೀಮಂತಿಕೆ ತುಂಬಿದೆ.

ಜನೆವರಿ 26, 1950ರಂದು ನಾವು ಇಂತಹ ಪರಸ್ಪರ ವೈರುಧ್ಯಗಳಿರುವ ಒಂದು ಹೊಸ ವ್ಯವಸ್ಥೆಗೆ ಪ್ರವೇಶಿಸುತ್ತಿದ್ದೇವೆ. ರಾಜ ಕೀಯ ಜೀವನದಲ್ಲಿ ನಾವು ಸಮಾನತೆಯನ್ನು ಹೊಂದಿದ್ದೇವೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ನಾವು ಅಸಮಾನತೆಯನ್ನು ಹೊಂದಲಿದ್ದೇವೆ. ರಾಜಕೀಯದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಮತ್ತು ಒಂದು ಮತದ ಮೌಲ್ಯ ಒಂದು ಎಂಬ ತತ್ವವನ್ನು ಸ್ವೀಕರಿಸಿದ್ದೇವೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆುಂದಾಗಿ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಮತ, ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸಿದ್ದೇವೆ.

ಸಮಾಜದಲ್ಲಿ ಇಂತಹ ವೈರುಧ್ಯಗಳನ್ನು ಒಳಗೊಂಡ ಜೀವನವನ್ನು ನಾವು ಎಲ್ಲಿಯ ವರೆಗೆ ಮುಂದುವರೆಸಲು ಸಾಧ್ಯ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಎಲ್ಲಿಯ ವರೆಗೂ ನಾವು ಸಮಾನತೆಯನ್ನು ನಿರಾಕರಿಸಲು ಸಾಧ್ಯ? ನಾವು ಈ ನಿರಾಕರಣೆಯನ್ನು ಹೀಗೆಯೇ ಮುಂದುವರೆಸಿದ್ದಾ ದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ಡಿದಂತಾಗುತ್ತದೆ. ನಾವು ಈ ವೈರುಧ್ಯಗಳನ್ನು ಆದಷ್ಟು ಬೇಗ ನಿವಾರಿಸಬೇಕಿರುತ್ತದೆ. ಇಲ್ಲವಾದರೆ ಯಾರು ಅಸಮಾನತೆಯಿಂದ ನರಳುತ್ತಿರುವರೋ ಅವರು, ಯಾವ ಪ್ರಜಾಪ್ರಭುತ್ವಕ್ಕಾಗಿ ಈ ಸಂವಿಧಾನ ಸಭೆ ಪ್ರಯತ್ನಿಸಿತೋ, ಆ ರಾಜಕೀಯ ಪ್ರಜಾಪ್ರಭುತ್ವದ ಕಟ್ಟಡವನ್ನೇ ಧ್ವಂಸಗೊಳಿಸುತ್ತಾರೆ.

ನಾವು ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಒಂದು ರಾಷ್ಟ್ರವಾಗಿಲ್ಲ ಎಂಬುದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳು ತ್ತೇವೆಯೋ ಅಷ್ಟೂ ಒಳ್ಳೆಯದು. ಆಗ ಮಾತ್ರ ನಾವು ರಾಷ್ಟ್ರವಾಗುವ ಅಗತ್ಯತೆಯನ್ನು ಕಂಡುಕೊಳ್ಳುತ್ತೇವೆ ಹಾಗೂ ಅಂತಹ ಒಂದು ಉದ್ದೇಶದ ಈಡೇರಿಕೆಗಾಗಿ ನಾವು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಗಂಭೀರವಾಗಿ ಯೋಚಿಸುತ್ತೇವೆ. ಈ ಗುರಿಯ ಈಡೇರಿಕೆಯು ಅಷ್ಟು ಸುಲಭದ್ದಾಗಿರುವುದಿಲ್ಲ. ಅಮೇರಿಕಾ ಸಂಸ್ಥಾನಕ್ಕಿಂತ ಭಾರತದಲ್ಲಿ ಅಸಂಖ್ಯಾತ ಜಾತಿಗಳು ಇವೆ. ಜಾತಿಗಳು ರಾಷ್ಟ್ರದ ಕಲ್ಪನೆಗೆ ವಿರೋಧ ವಾದವುಗಳು. ಮೊದಲನೆಯದಾಗಿ ಸಾಮಾಜಿಕ ಜೀವನದಲ್ಲಿ ಇವು ಪ್ರತ್ಯೇಕತೆಯನ್ನು ತರುತ್ತವೆ. ಇವು ರಾಷ್ಟ್ರ ವಿರೋಧಿಗಳೂ ಕೂಡ. ಯಾಕೆಂದರೆ ಜಾತಿ ಮತ್ತು ಜಾತಿಗಳ ನಡುವೆ ಅಸೂಯೆ ಮತ್ತು ದ್ವೇಷ ಭಾವನೆಗಳನ್ನು ಉಂಟು ಮಾಡುತ್ತವೆ.

ನಾವು ವಾಸ್ತವವಾಗಿ ಒಂದು ರಾಷ್ಟ್ರವಾಗಬೇಕೆಂದು ಬಯಸುವುದಾದರೆ ಈ ಎಲ್ಲಾ ತೊಂದರೆಗಳನ್ನು ನಿವಾರಿಸಿಕೊಳ್ಳಬೇಕಾಗುತ್ತದೆ. ಯಾಕೆಂದರೆ, ಒಂದು ರಾಷ್ಟ್ರ ಎಂಬುದು ಅಸ್ತಿತ್ವದಲ್ಲಿದ್ದರೆ, ಭ್ರಾತೃತ್ವವು ವಾಸ್ತವವಾಗುತ್ತದೆ. ಭ್ರಾತೃತ್ವವಿಲ್ಲದೆ ಸಮಾನತೆ ಮತ್ತು ಸ್ವಾತಂತ್ರ್ಯ ಎಂಬುವುದು ಕೇವಲ ಬಣ್ಣ ಬಳಿದಂತೆಯೇ.

ನಮ್ಮ ಮುಂದಿರುವ ಕರ್ತವ್ಯಗಳ ಸಂಬಂಧದಲ್ಲಿ ಇವು ನನ್ನ ಚಿಂತನೆಗಳಾಗಿರುತ್ತವೆ ಅಷ್ಟೇ. ಕೆಲವರಿಗೆ, ಇವಾವು ಸಂತೋಷವನ್ನು ಉಂಟು ಮಾಡಿರಲಿಕ್ಕಿಲ್ಲ. ಆದರೆ ನಮ್ಮ ದೇಶದಲ್ಲಿ ರಾಜಕೀಯ ಅಧಿಕಾರ ಬಹಳ ಕಾಲದಿಂದ ಕೆಲವರ ಸ್ವತ್ತಾಗಿದ್ದು ಬಹುಸಂಖ್ಯಾತರು ಪ್ರಾಣಿಗಳಂತೆ ಹಾಗೂ ಪಶುಗಳಂತೆ ಜೀವಿಸುತ್ತಿದ್ದಾರೆ ಎಂಬುವುದನ್ನು ಒತ್ತಿ ಹೇಳಬೇಕಿಲ್ಲ. ಅಧಿಕಾರವು ಕೆಲವೇ ಕೆಲವರ ಸ್ವತ್ತಾಗಿರುವ ಕಾರಣ ಬಹು ಸಂಖ್ಯಾತರಿಗೆ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವ ಅವಕಾಶವು ಇಲ್ಲದಂತಾಗಿದೆ. ಇಷ್ಟೇ ಅಲ್ಲದೇ ಜೀವನದ ಮಹತ್ವದ ಬಗೆಗಿನ ಅವರ ಆಸಕ್ತಿಯು ಉಡುಗಿ ಹೋಗುವಂತಾಗಿದೆ.

ತುಳಿತಕ್ಕೆ ಒಳಗಾದ ಈ ಜನರು ಇವರ ಆಡಳಿತಕ್ಕೆ ಬೇಸತ್ತಿದ್ದಾರೆ ಮತ್ತು ತಮ್ಮನ್ನು ತಾವೇ ಆಳಿಕೊಳ್ಳುವ ತವಕದಲ್ಲಿದ್ದಾರೆ. ದಲಿತ ವರ್ಗಗಳಲ್ಲಿ ಆತ್ಮಾವಲೋಕನದ ಸಲುವಾಗಿ ಉಮ್ಮಳಿಸುತ್ತಿರುವ ಉತ್ಕಟವಾದ ಆಕಾಂಕ್ಷೆಯು ವರ್ಗ ಸಂಘರ್ಷದಲ್ಲಿ ಪರಿಣಮಿಸದಂತೆ ನಾವು ಎಚ್ಚರ ವಹಿಸಬೇಕಾಗುತ್ತದೆ. ಹಾಗೇನಾದರೂ ಆಗಿದ್ದೆ ಆದರೆ, ರಾಷ್ಟ್ರ ಇಬ್ಬಾಗವಾದಂತೆಯೇ. ಅಂತಹದೊಂದು ದಿನ ಬಂದಿದ್ದೇ ಆದರೆ ಅದು ಘೋರ ದುರಂತ ದಿನವಾಗುತ್ತದೆ. ಯಾಕೆಂದರೆ ಅಬ್ರಹಾಂ ಲಿಂಕನ್ ಹೇಳಿರುವ ಹಾಗೆ ಯಾವ ಮನೆ ಇಬ್ಭಾಗವಾಗುತ್ತದೋ ಆ ಮನೆಗೆ ಉಳಿಗಾಲವಿಲ್ಲ.

ಸ್ವಾತಂತ್ರ್ಯವು ವಾಸ್ತವಾಗಿ ಸಂತೋಷ ಉಂಟು ಮಾಡುವ ಸಂಗತಿ. ಆದರೆ ಈ ಸ್ವಾತಂತ್ರ್ಯವು ನಮ್ಮ ಮೇಲೆ ಹೆಚ್ಚು ಜವಾಬ್ದಾರಿಗ ಳನ್ನು ಹೊರೆಸಿದೆ ಎಂಬುವುದನ್ನು ಮರೆಯದಿರೋಣ. ಸ್ವಾತಂತ್ರ್ಯದ ಮೂಲಕ, ಪ್ರತಿಯೊಂದು ತಪ್ಪು ಎಸಗಿದಾಗ ಬ್ರಿಟೀಷರ ಕಡೆಗೆ ಬೆರಳು ಮಾಡಿ ತೋರಿಸುತ್ತಿದ್ದಂತಹ ಅವಕಾಶವನ್ನು ಕಳೆದುಕೊಂಡಿದ್ದೇವೆ. ಇನ್ನು ಮುಂದೆ ಏನಾದರೂ ತಪ್ಪಾದಾಗ ನಾವು ನಮ್ಮನ್ನು ಬಿಟ್ಟು ಬೇರೆ ಯಾರನ್ನೂ ಆಪಾದಿಸಿ ಹೇಳುವಂತಿಲ್ಲ. ತಪ್ಪುಗಳು ಸಂಭವಿಸುವ ಬಹು ದೊಡ್ಡ ಅಪಾಯವಿದೆ.

ಡಾ. ಬಿ.ಆರ್.ಅಂಬೇಡ್ಕರ್

(ಸಂವಿಧಾನ ಸಭೆಯಲ್ಲಿ ಡಾ. ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣದ ಆಯ್ದ ಭಾಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ2 days ago

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

~ ಯೋಗೇಶ್ ಮಾಸ್ಟರ್ ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು. ಈಗ...

ದಿನದ ಸುದ್ದಿ3 days ago

ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3...

ದಿನದ ಸುದ್ದಿ6 days ago

ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ....

ಅಂತರಂಗ6 days ago

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

~ಯೋಗೇಶ್ ಮಾಸ್ಟರ್, ಚಿಂತಕರು ಆಪ್ತ ಸಮಾಲೋಚಕ ಮತ್ತು ಮನೋವೈದ್ಯ ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ...

ದಿನದ ಸುದ್ದಿ1 week ago

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ

ಸುದ್ದಿದಿನ,ಚನ್ನಗಿರಿ: ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ”...

ಅಂತರಂಗ1 week ago

ದಿಮಾಗಿ ನಕ್ಸಲ್-ನಗರ ನಕ್ಸಲ್

~ರಹಮತ್ ತರೀಕೆರೆ, ಚಿಂತಕರು ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ...

ದಿನದ ಸುದ್ದಿ1 week ago

ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು...

ದಿನದ ಸುದ್ದಿ1 week ago

ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು....

ದಿನದ ಸುದ್ದಿ1 week ago

ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು...

ದಿನದ ಸುದ್ದಿ2 weeks ago

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ...

Trending