Connect with us

ಬಹಿರಂಗ

ಸಂವಿಧಾನ ಸಭೆಯಲ್ಲಿ ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣ

Published

on

ಭಾರತದ ಸ್ವಾತಂತ್ರ್ಯಕ್ಕೆ ಏನಾಗಲಿದೆ? 26ನೇ ಜನವರಿ 1950ರಂದು, ಭಾರತವು ಸಂಪೂರ್ಣ ಸ್ವತಂತ್ರ ರಾಷ್ಟ್ರವಾಗಲಿದೆ. ಆದರೆ ಅದರ ಸ್ವಾತಂತ್ರ್ಯಕ್ಕೆ ಏನಾಗಲಿದೆ? ಅದು ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲಿದೆಯೇ? ಅಥವಾ ಅದು ತನ್ನ ಸ್ವಾತಂತ್ರ್ಯವನ್ನು ಮತ್ತೊಮ್ಮೆ ಕಳೆದುಕೊಳ್ಳಲಿದೆಯೇ? ಇದು ನನ್ನ ಮನಸ್ಸಿನಲ್ಲಿ ಮೂಡಿದ ಮೊದಲ ವಿಷಯವಾಗಿರುತ್ತದೆ.

ಭಾರತವು ಹಿಂದೆಂದೂ ಸ್ವತಂತ್ರವಾಗಿರಲಿಲ್ಲವೆಂದು ಇದರ ಅರ್ಥವಲ್ಲ. ಅದು ತನ್ನ ಸ್ವಾತಂತ್ರ್ಯವನ್ನು ಮಧ್ಯೆ ಕಳೆದುಕೊಂಡಿತ್ತು. ಅದು ಎರಡನೆಯ ಬಾರಿಗೆ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತದೆಯೇ?
ಈ ಆಲೋಚನೆಯೇ ಭವಿಷ್ಯದ ಬಗ್ಗೆ ನನ್ನನ್ನು ಕಳವಳಗೊಳ್ಳು ವಂತೆ ಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯವನ್ನು ಹಿಂದೊಮ್ಮೆ ಕಳೆದುಕೊಂಡಿತ್ತೆಂಬ ಸಂಗತಿಯು ನನ್ನ ಮನಸ್ಸಿನ ಕ್ಷೋಭೆಗೆ ಕಾರಣ. ತನ್ನವರದೇ ಆದ ವಿಶ್ವಾಸಘಾತುಕದಿಂದ ಹಾಗೂ ದೇಶದ್ರೋಹಿಗಳಿಂದ ಸ್ವಾತಂತ್ರ್ಯವನ್ನು ಕಳೆದುಕೊಂಡಿತು ಎಂಬುವುದು ನನ್ನ ಮನಸ್ಸಿನ ಕ್ಷೋಭೆಗೆ ಮುಖ್ಯ ಕಾರಣವಾಗಿದೆ.

ಸಿಂಧ್ ಪ್ರಾಂತ್ಯದ ಮೇಲೆ ಮೊಹಮ್ಮದ್ ಬಿನ್ ಖಾಸಿಂ ದಂಡೆತ್ತಿ ಬಂದಾಗ ಅವನ ವಿರುದ್ಧ ಯುದ್ಧ ಘೋಷಣೆ ಮಾಡಬೇಕಿದ್ದ ಧಾರ್ ಅರಸನ ಸೈನಿಕ ಕಮಾಂಡರುಗಳು ಮೊಹಮದ್ ಬಿನ್ ಖಾಸಿಂ ಕಡೆಯ ಏಜೆಂಟರುಗಳು ಕೊಟ್ಟ ಲಂಚವನ್ನು ಸ್ವೀಕರಿಸಿ ರಾಜನ ಪರವಾಗಿ ಯುದ್ಧ ಮಾಡದೆ ಹೋದ ಉದಾಹರಣೆ ನನ್ನ ಮುಂದೆ ಇದೆ. ಭಾರತದ ಮೇಲೆ ಯುದ್ಧ ಮಾಡಲು ಮೊಹಮ್ಮದ್ ಘೋರಿ ಯನ್ನು ಭಾರತೀಯನೇ ಆಗಿದ್ದ ಜೈಚಂದರ್ ಎಂಬುವವನು ಸ್ವಾಗತಿ ಸಿದ್ದು, ಮತ್ತು ಪೃಥ್ವಿರಾಜನ ವಿರುದ್ಧ ಯುದ್ಧ ಮಾಡುವಂತೆ ಪ್ರೇರೇಪಿ ಸಿದ್ದು ಮತ್ತು ಆ ಯುದ್ಧದಲ್ಲಿ ತಾನು ಹಾಗೂ ಸೋಲಂಕಿಯ ರಾಜರು ಗಳು ಸಹಾಯ ಮಾಡುವುದಾಗಿ ಹೇಳಿದಂತಹ ಉದಾಹರಣೆಗಳು ನನ್ನ ಮುಂದೆ ಇವೆ.

ಶಿವಾಜಿ ಮಹಾರಾಜನು ಹಿಂದೂಗಳ ವಿಮೋಚನೆ ಗಾಗಿ ಯುದ್ಧ ಮಾಡುತ್ತಿದ್ದಾಗ, ಇತರೆ ಮರಾಠಾ ರಾಜರುಗಳು ಮತ್ತು ರಜಪೂತ್ ರಾಜರುಗಳು ಮೊಘಲ್ ಚಕ್ರವರ್ತಿಗಳ ಪರವಾಗಿ ಯುದ್ಧ ಮಾಡುತ್ತಿದ್ದರು. ಬ್ರಿಟಿಷರು ಸಿಖ್ ರಾಜರುಗಳ ಆಡಳಿತವನ್ನು ಧ್ವಂಸ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾಗ, ಸಿಖ್ ರಾಜರುಗಳ ಸೇನೆಯ ಮುಖ್ಯ ಕಮಾಂಡರ್ ಆದ ಗುಲಾಬ್‍ಸಿಂಗನು ಪ್ರೇಕ್ಷಕನಂತೆ ಮೌನ ವಹಿಸಿ ಕುಳಿತಿದ್ದನು. ಅವನು ಸಿಖ್ ಸಾಮ್ರಾಜ್ಯದ ರಕ್ಷಣೆಗಾಗಿ ಕಿಂಚಿತ್ತೂ ಸಹಾಯ ಮಾಡಲಿಲ್ಲ.

1857ರಲ್ಲಿ ಭಾರತದಾದ್ಯಂತ, ಬ್ರಿಟೀಷರ ವಿರುದ್ಧ, ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ಘೋಸಿದಾಗ, ಸಿಖ್ ಸಮುದಾಯ ಆ ಘಟನೆಯನ್ನು ಕೇವಲ ಪ್ರೇಕ್ಷಕರಂತೆ ನಿಂತು ನೋಡಿದ ಉದಾಹರಣೆ ನನ್ನ ಮುಂದೆ ಇದೆ.

ಇತಿಹಾಸ ಮರುಕಳಿಸುತ್ತದೆಯೇ? ಈ ವಿಷಯವೇ ನನ್ನ ಕಳವಳಕ್ಕೆ ಮುಖ್ಯ ಕಾರಣವಾಗಿದೆ. ನಮ್ಮ ಹಿಂದಿನ ವೈರಿಗಳಾದ ಜಾತಿ-ಪಂಗಡ ಗಳ ಜೊತೆಗೆ ಇನ್ನು ಮುಂದೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಗಡಗಳು ಸೇರಿಕೊಳ್ಳಲಿವೆ. ಭಾರತೀಯರು ತಮ್ಮ ಜಾತಿ, ಪಂಗಡಗ ಳನ್ನು ಬದಿಗೊತ್ತಿ ರಾಷ್ಟ್ರ ಮುಖ್ಯ ಎನ್ನುವರೋ, ಅಥವಾ ರಾಷ್ಟ್ರವನ್ನು ಬದಿಗೊತ್ತಿ ಜಾತಿ-ಪಂಗಡಗಳು ಮುಖ್ಯ ಎನ್ನುವರೋ, ನನಗೆ ಗೊತ್ತಿಲ್ಲ. ಆದರೆ ಇಷ್ಟಂತೂ ಸತ್ಯ. ದೇಶದಲ್ಲಿನ ರಾಜಕೀಯ ಪಕ್ಷಗಳು ಜಾತಿ ಪಂಗಡಗಳನ್ನೇ ಪ್ರಧಾನವಾಗಿ ಮಾಡಿಕೊಂಡರೆ ದೇಶದ ಸ್ವಾತಂತ್ರ್ಯಕ್ಕೆ ಗಂಡಾಂತರ ಒದಗುತ್ತದೆ ಮತ್ತು ನಮ್ಮ ಸ್ವಾತಂತ್ರ್ಯವನ್ನು ಎರಡನೆಯ ಬಾರಿಗೆ ಮತ್ತು ಶಾಶ್ವತವಾಗಿ ಕಳೆದುಕೊಳ್ಳುವ ಪ್ರಸಂಗ ಒದಗಬಹುದು.

ಇಂತಹ ಸಂಭಾವ್ಯ ಘಟನೆಯ ವಿರುದ್ಧ ನಾವು ದೃಢಸಂಕಲ್ಪದಿಂದ ಎಚ್ಚರ ವಹಿಸಬೇಕು. ನಮ್ಮ ಕಟ್ಟ ಕಡೆಯ ರಕ್ತದ ತೊಟ್ಟನ್ನು ಹರಿಸಿಯಾ ದರೂ, ದೇಶದ ಸ್ವಾತಂತ್ರ್ಯವನ್ನು ರಕ್ಷಿಸುತ್ತೇವೆ, ಎಂದು ನಾವು ಪ್ರತಿಜ್ಞೆಯನ್ನು ಕೈಗೊಳ್ಳಬೇಕಿದೆ.
26 ನೇ ಜನವರಿ 1950ರಂದು ಭಾರತವು ಸ್ವತಂತ್ರ ಗಣರಾಜ್ಯ ವಾಗಲಿದೆ. ಅಂದರೆ ಅದರ ಅರ್ಥ, ಆ ದಿನದಿಂದ ಭಾರತವು ತನ್ನ ಜನತೆುಂದ, ತನ್ನ ಜನರಿಗಾಗಿ, ತನ್ನ ಜನರಿಗೋಸ್ಕರ ಸರ್ಕಾರವನ್ನು ರೂಪಿಸಿಕೊಳ್ಳಲಿದೆ. ಇದೇ ವಿಷಯ ಮತ್ತೊಮ್ಮೆ ನನ್ನ ಮನಸ್ಸಿಗೆ ಬರುತ್ತಿದೆ. ಸಂವಿಧಾನವು ತನ್ನ ಪ್ರಜಾಸತ್ತಾತ್ಮಕ ಲಕ್ಷಣಗಳನ್ನು ಉಳಿಸಿ ಕೊಳ್ಳುತ್ತದೆಯೇ? ಅದು ಉಳಿಸಿಕೊಳ್ಳುತ್ತದೆಯೇ ಅಥವಾ ಮತ್ತೊಮ್ಮೆ ಕಳೆದುಕೊಳ್ಳುತ್ತದೆಯೇ? ಈ ಎರಡನೆಯ ವಿಚಾರವು ನನ್ನ ಮೊದಲನೆಯ ಪ್ರಶ್ನೆಯಷ್ಟೇ ನನಗೆ ಕಳವಳಕಾರಿಯಾಗಿದೆ.

ಭಾರತಕ್ಕೆ `ಪ್ರಜಾಪ್ರಭುತ್ವ’ ಎಂದರೆ ಏನು ಎಂಬುದು ತಿಳಿದಿರಲಿಲ್ಲ ಎಂದು ಹೇಳಲು ಬರುವುದಿಲ್ಲ. ಭಾರತವು ಒಂದಾನೊಂದು ಕಾಲಕ್ಕೆ ಅನೇಕ ಗಣರಾಜ್ಯಗಳನ್ನು ಹಾಗೂ ಅನೇಕ ರಾಜ-ಮಹಾರಾಜರುಗಳನ್ನು ಹೊಂದಿತ್ತು. ಇಂತಹ ಮಹಾರಾಜರುಗಳಲ್ಲಿ ಕೆಲವರು ಚುನಾಯಿತರಾಗು ತ್ತಿದ್ದರು ಅಥವಾ ಅವರು ಸೀಮಿತ ಅಧಿಕಾರ ಹೊಂದಿರುತ್ತಿದ್ದರು. ಆದರೆ ಅವರು ಎಂದೂ ನಿರಂಕುಶ ಪ್ರಭುಗಳಾಗಿರಲಿಲ್ಲ. ಭಾರತಕ್ಕೆ ಸಂಸತ್ತುಗಳು ಅಥವಾ ಸಂಸತ್ತುಗಳಲ್ಲಿ ನಡೆಯಬೇಕಾದ ವಿಧಿ ವಿಧಾನ ಗಳು ತಿಳಿದಿರಲಿಲ್ಲ ಎಂದಲ್ಲ.

ಬೌದ್ಧ ಭಿಕ್ಷು ಸಂಘಗಳ ರಚನೆಯನ್ನು ಅಧ್ಯಯನ ಮಾಡಿದರೆ, ನಮ್ಮಲ್ಲಿ ಸಂಘಗಳಿಗೆ ಪರ್ಯಾಯವಾಗಿ ಸಂಸತ್ತುಗಳು ಇದ್ದವು ಮತ್ತು ಅಂತಹ ಸಂಘಗಳು ಎಂದರೆ ಸಂಸತ್ತುಗಳೇ ಅಲ್ಲದೆ ಬೇರೆ ಏನೂ ಅಲ್ಲ ಎಂಬುದು ವೇದ್ಯವಾಗುತ್ತದೆ. ಅಂತಹ ಸಂಘಗಳು ಆಧುನಿಕ ಯುಗದಲ್ಲಿನ ಸಂಸತ್ತುಗಳು ಯಾವ ವಿಧಿ-ವಿಧಾನಗಳನ್ನು ಅನುಸರಿಸಿಕೊಂಡು ರಚನೆಯಾಗಿವೆಯೋ ಅಂತಹ ವಿಧಿ-ವಿಧಾನಗಳ ಮೇಲೆ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದವು. ಅವುಗಳಲ್ಲಿ ಆಸನಗಳ ಏರ್ಪಾಡು, ನಿರ್ಣಯಗಳನ್ನು ಕೈಗೊಳ್ಳಲು ಇದ್ದ ನಿಯಮಗಳು, ಕೋರಮ್, ಸಚೇತಕರು, ಮತಗಳ ಎಣಿಕೆ, ಮತ ಚೀಟಿಗಳ ಮೂಲಕ ಮತದಾನ, ಛೀಮಾರಿ ನಿರ್ಣಯ, ನಿಯಂತ್ರಿ ಸುವ ವಿಧಾನ, ಪೂರ್ವ ನ್ಯಾಯ ಇತ್ಯಾದಿ ಇದ್ದುದನ್ನು ನೋಡ ಬಹುದು. ಬುದ್ಧನು ಸಂಘಗಳ ಸಭೆಗಳ ನಿರ್ವಹಣೆಗಾಗಿ ಅನುಸರಿಸುತ್ತಿದ್ದ ಈ ಸಂಸದೀಯ ವಿಧಿ ವಿಧಾನಗಳನ್ನು, ತನ್ನ ಕಾಲಕ್ಕೆ ತನ್ನ ದೇಶದಲ್ಲಿದ್ದ ರಾಜಕೀಯ ಸಭೆಗಳಿಂದ ಅಥವಾ ರಾಜಕೀಯ ಪರಿಷತ್‍ಗಳಿಂದ, ತೆಗೆದುಕೊಂಡಿರಬೇಕೆಂದು ಕಂಡುಬರುತ್ತದೆ.

ಈ ಪ್ರಜಾಪ್ರಭುತ್ವ ಪದ್ದತಿಯನ್ನು ಭಾರತವು ಕಳೆದುಕೊಂಡಿತು. ಅದು ಎರಡನೇ ಬಾರಿಗೆ ಕಳೆದುಕೊಳ್ಳಲಿದೆಯೇ? ನನಗೆ ಗೊತ್ತಿಲ್ಲ. ಆದರೆ ಭಾರತದಂತಹ ದೇಶದಲ್ಲಿ ಪ್ರಜಾಪ್ರಭುತ್ವ ಪದ್ಧತಿಯು ಬಹಳ ಕಾಲದಿಂದ ಬಳಕೆಯಲ್ಲಿ ಇಲ್ಲದಿದ್ದ ಕಾರಣ ಈ ಪ್ರಜಾಪ್ರಭುತ್ವ ವ್ಯವಸ್ಥೆ ಹೊಸದೆನಿಸಬಹುದು ಮತ್ತು ಪ್ರಜಾಪ್ರಭುತ್ವ ಮರೆಯಾಗಿ ಸರ್ವಾಧಿಕಾರಕ್ಕೆ ಎಡೆ ಮಾಡಿಕೊಡುವ ಅಪಾಯವುಂಟು. ಈಗ ಹೊಸದಾಗಿ ಜನ್ಮ ತಳೆದ ಪ್ರಜಾಪ್ರಭುತ್ವ ತನ್ನ ಸ್ವರೂಪವನ್ನು ಉಳಿಸಿಕೊಳ್ಳದೇ ಅದರ ಜಾಗದಲ್ಲಿ ಸರ್ವಾಧಿಕಾರಕ್ಕೆ ಅವಕಾಶ ಮಾಡಿಕೊಡುವ ಸಂಭವ ವುಂಟು. ರಾಜಕೀಯದಲ್ಲಿ ಇಂಥÀ ಭೂಕಂಪವೇನಾದರೂ ನಡೆದಿದ್ದೆಯಾ ದರೆ ನನ್ನ ಎರಡನೇ ಅನುಮಾನವು ವಾಸ್ತವವಾಗುವ ಸಾಧ್ಯತೆಯುಂಟು.

ಪ್ರಜಾಪ್ರಭುತ್ವವನ್ನು ಅದರ ಸ್ವರೂಪವನ್ನಷ್ಟೇ ಅಲ್ಕದೆ, ಅದರ ತತ್ವವನ್ನು ಉಳಿಸಿಕೊಳ್ಳಬೇಕಾದರೆ ನಾವು ಏನು ಮಾಡಬೇಕು? ನನ್ನ ಅಭಿಪ್ರಾಯದ ಪ್ರಕಾರ, ನಮ್ಮ ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗ ಳನ್ನು ಈಡೇರಿಸಿಕೊಳ್ಳಲು ಸಂವಿಧಾನದ ವಿಧಾನಗಳನ್ನೇ ಅನುಸರಿಸ ಬೇಕಾಗುತ್ತದೆ. ಅಂದರೆ ನಾವು ಕ್ರಾಂತೀಯ ರಕ್ತಪಾತ ಮಾರ್ಗವನ್ನು ಕೈಬಿಡಬೇಕಾಗುತ್ತದೆ. ಅಂದರೆ ನಾವು ಶಿಸ್ತುಭಂಗ, ಅಸಹಕಾರ ಮತ್ತು ಸತ್ಯಾಗ್ರಹ ಈ ಮಾರ್ಗಗಳನ್ನು ಬಿಡಬೇಕಾಗುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗಳ ಈಡೇರಿಕೆಗೆ ಸಂವಿಧಾನ ಸಮ್ಮತ ಮಾರ್ಗಗಳ ಅವಕಾಶವಿಲ್ಲದಿದ್ದ ಸಂದರ್ಭದಲ್ಲಿ ಸಂವಿಧಾನ ಬಾಹಿರವಾದ ಮಾರ್ಗ ಗಳನ್ನು ಅನುಸರಿಸುವುದು ಬಹಳಷ್ಟು ಸಮರ್ಥನೀಯವಾಗಿತ್ತು.

ಆದರೆ ಎಲ್ಲಿ ಸಂವಿಧಾನದ ಸಮ್ಮತ ಮಾರ್ಗಗಳಿಗೆ ಅವಕಾಶವಿರುತ್ತದೆಯೋ, ಅಲ್ಲಿ ಸಂವಿಧಾನ ಬಾಹಿರವಾದ ಮಾರ್ಗಗಳಿಗೆ ಸಮರ್ಥನೆ ಇರುವು ದಿಲ್ಲ. ಈ ಮಾರ್ಗಗಳು ಅರಾಜಕತೆಯ ಧರ್ಮಗ್ರಂಥದ ನೀತಿ ಸೂತ್ರ ಗಳಾಗಿದ್ದು, ಇವುಗಳನ್ನು ಎಷ್ಟು ಬೇಗ ತೊರೆಯುತ್ತೇವೆಯೋ, ರಾಷ್ಟ್ರಕ್ಕೆ ಅಷ್ಟೂ ಕ್ಷೇಮ.
ಎರಡನೆಯದಾಗಿ ಜಾನ್ ಸ್ಪೋರಟ್ ಮಿಲ್ ಪ್ರಜಾಪ್ರಭುತ್ವವನ್ನು ಕುರಿತು ಹೇಳಿದ್ದ ಎಚ್ಚರಿಕೆ ಮಾತನ್ನು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಇರುವವರೆಲ್ಲರೂ ಗಮನಿಸಬೇಕಾಗುತ್ತದೆ. ಅಂದರೆ “ಎಂತಹ ಮಹಾನ್ ವ್ಯಕ್ತಿಯೇ ಆಗಿದ್ದರೂ ಅವನ ಪಾದದಡಿಯಲ್ಲಿ ತಮ್ಮ ಸ್ವಾತಂತ್ರ್ಯವನ್ನು ಎಸೆಯಬಾರದು. ಅಥವಾ ತಮ್ಮ ಯಾವುದೇ ಸಂಸ್ಥೆಗಳನ್ನು ಬುಡ ಮೇಲು ಮಾಡಲು ಅನುಕೂಲವಾಗುವ ಹಾಗೆ, ಅವರಿಗೆ ಅಧಿಕಾರವನ್ನು ಕೊಡಲೂಬಾರದು” ದೇಶಕ್ಕೆ ಜೀವಮಾನವೆಲ್ಲಾ ಸೇವೆ ಸಲ್ಲಿಸಿದ ಯಾವುದೇ ಮಹಾನ್ ವ್ಯಕ್ತಿಗೆ ಋಣಿಯಾಗಿರುವುದರಲ್ಲಿ ತಪ್ಪೇನೂ ಇಲ್ಲ, ಆದರೆ ಋಣಿಯಾಗಿರುವುದಕ್ಕೂ ಕೆಲವು ಮಿತಿಗಳಿರುತ್ತವೆ.

ಐರಿಷ್ ರಾಷ್ಟ್ರಪ್ರೇಮಿಯಾದ ಡೇನಿಲ್ ಓ ಕನ್ನೋಲ್ ಎಂಬುವವನು ಹೇಳಿ ದಂತೆ, “ಯಾವೊಬ್ಬ ವ್ಯಕ್ತಿಯು ತನ್ನ ಗೌರವವನ್ನು ಕಳೆದು ಕೊಂಡು ಮತ್ತೊಬ್ಬನಿಗೆ ಋಣಿ ಯಾಗಿರಬಾರದು. ಯಾವೊಬ್ಬ ಮಹಿಳೆಯು ತನ್ನ ಪಾವಿತ್ರ್ಯತೆ ಯನ್ನು ಬಲಿಗೊಟ್ಟು ಕೃತಜ್ಞತೆಯನ್ನು ತೋರಿಸಬೇಕಿಲ್ಲ. ಅದೇ ರೀತಿಯಲ್ಲಿ ಯಾವ ರಾಷ್ಟ್ರವೂ ತನ್ನ ಸ್ವಾತಂತ್ರ್ಯವನ್ನು ಬಲಿಗೊಟ್ಟು ಕೃತಜ್ಞವಾಗಿರ ಬೇಕಿಲ್ಲ”. ಈ ಎಚ್ಚರಿಕೆಯ ಮಾತು, ಇತರೆ ಯಾವುದೇ ದೇಶಕ್ಕಿಂತ ಭಾರತದ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿರುತ್ತದೆ.

ಭಾರತದಲ್ಲಿ ಭಕ್ತಿಪಂಥ ಅಥವಾ ವ್ಯಕ್ತಿಪೂಜೆ ರಾಜಕೀಯದಲ್ಲಿ ಮಹತ್ವದ ಪಾತ್ರಗಳನ್ನು ವಹಿಸುತ್ತಿವೆ. ಈ ವಿಷಯದಲ್ಲಿ ಪ್ರಪಂಚದ ಯಾವುದೇ ರಾಷ್ಟ್ರವು ಇದಕ್ಕೆ ಸರಿಸಾಟಿಯಾಗಲಾರದು. ಧಾರ್ಮಿಕವಾಗಿ ಭಕ್ತಿಯು ಆತ್ಮದ ಮೋಕ್ಷಕ್ಕೆ ದಾರಿ ಮಾಡಿಕೊಡಬಹುದು. ಆದರೆ ರಾಜಕೀಯದಲ್ಲಿನ ಭಕ್ತಿ ಅಥವಾ ವ್ಯಕ್ತಿ ಪೂಜೆಯು, ಖಂಡಿತವಾಗಿಯೂ, ಅವನತಿಗೆ ಮತ್ತು ನಿರಂಕುಶ ಪ್ರಭುತ್ವದ ಉದಯಕ್ಕೆ, ದಾರಿ ಮಾಡಿ ಕೊಡುತ್ತದೆ.

ಮೂರನೆಯದಾಗಿ ನಾವು ಮಾಡಬೇಕಾದುದು ಎಂದರೆ, ಕೇವಲ ರಾಜಕೀಯ ಪ್ರಜಾಪ್ರಭುತ್ವದಿಂದ ತೃಪ್ತಿ ಹೊಂದಿ ಸಮ್ಮನಾಗ ಬಾರದು. ನಾವು ನಮಗೆ ದೊರೆತ ಈ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾ ಜಿಕ ಪ್ರಜಾಪ್ರಭುತ್ವವನ್ನಾಗಿಯೂ ಮಾಡಬೇಕು. ರಾಜಕೀಯ ಪ್ರಜಾಪ್ರಭು ತ್ವಕ್ಕೆ ಸಾಮಾಜಿಕ ಪ್ರಜಾಪ್ರಭುತ್ವವು ಬುನಾದಿಯಾಗಿರದಿದ್ದರೆ ರಾಜಕೀಯ ಪ್ರಭುತ್ವಕ್ಕೆ ಉಳಿಗಾಲವಿಲ್ಲ. ಹಾಗಾದರೆ, ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಏನು? ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಅದೊಂದು ಜೀವನ ಪದ್ಧತಿ. ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತೃತ್ವ ಆದ ಈ ತ್ರಿವಳಿಗಳಲ್ಲಿ ಒಂದೊಂದನ್ನು ಪ್ರತ್ಯೇಕವೆಂದು ಪರಿಗಣಿಸು ವಂತಿಲ್ಲ. ಅವು ಒಂದಕ್ಕೊಂದು ಪೂರಕವಾಗಿರುತ್ತವೆ. ಅವುಗಳನ್ನು ಪ್ರತ್ಯೇಕಿಸುವು ದೆಂದರೆ ಪ್ರಜಾಪ್ರಭುತ್ವದ ಉದ್ದೇಶವು ವಿಫಲವಾಗುತ್ತದೆ.

ಸ್ವಾತಂತ್ರ್ಯ ವನ್ನು, ಸಮಾನತೆಯಿಂದ ಪ್ರತ್ಯೇಕಿಸಲು ಬರುವುದಿಲ್ಲ. ಸಮಾನತೆಯನ್ನು ಸ್ವಾತಂತ್ರ್ಯದಿಂದ ಪ್ರತ್ಯೇಕಿಸಲು ಬರುವುದಿಲ್ಲ. ಹಾಗೆಯೇ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು, ಭ್ರಾತೃತ್ವದಿಂದ ಪ್ರತ್ಯೇಕಿಸಲೂ ಬರುವುದಿಲ್ಲ. ಸ್ವಾತಂತ್ರ್ಯತೆ ಇಲ್ಲದ ಸಮಾನತೆಯು ವ್ಯಕ್ತಿಗತ ಸ್ವಾತಂತ್ರ್ಯವನ್ನು ನಾಶ ಗೊಳಿಸುತ್ತದೆ.
ಭ್ರಾತೃತ್ವವಿಲ್ಲದೆ ಸ್ವಾತಂತ್ರ್ಯ ಮತ್ತು ಸಮಾನತೆಗಳು ಸುಸೂತ್ರವಾಗಿ ನಡೆಯುವಂತಿಲ್ಲ. ಇವುಗಳನ್ನು ಜಾರಿಗೆ ತರಲು ಬಲಪ್ರಯೋಗ ಅಗತ್ಯವಾದೀತು! ಭಾರತೀಯ ಸಮಾಜದಲ್ಲಿ ಈ ಎರಡೂ ಸಂಗತಿಗಳು ಸಂಪೂರ್ಣ ಅಭಾವವಿದೆ ಎಂಬ ವಾಸ್ತವವನ್ನು ನಾವು ಒಪ್ಪಿಕೊಳ್ಳ ಬೇಕು. ಅಂತಹ ಎರಡು ಸಂಗತಿಗಳಲ್ಲಿ ಸಮಾನತೆ ಎಂಬುವುದೂ ಒಂದು. ಸಾಮಾಜಿಕ ಸ್ಥರದ ಮಟ್ಟಿಗೆ ಹೇಳಬೇಕಾದರೆ, ಭಾರತದಲ್ಲಿ ಸಾಮಾಜಿಕ ವ್ಯವಸ್ಥೆಯು ಅಸಮಾನತೆಯ ಶ್ರೇಣಿಗಳ ಮೇಲೆ ನಿಂತಿದೆ. ಅಂದರೆ ಕೆಲವರು ಮೇಲು ಮತ್ತು ಕೆಲವರು ಕೀಳು ಎಂಬ ಅರ್ಥದಲ್ಲಿ. ಆರ್ಥಿಕ ಸ್ಥರದಲ್ಲಿ ಹೇಳಬೇಕೆಂದರೆ, ನಮ್ಮ ಸಮಾಜದಲ್ಲಿ ಹೆಚ್ಚಿನ ಜನ ಕಡು ಬಡತನದಲ್ಲಿದ್ದರೆ, ಕೆಲವರಲ್ಲಿ ಮಾತ್ರ ಶ್ರೀಮಂತಿಕೆ ತುಂಬಿದೆ.

ಜನೆವರಿ 26, 1950ರಂದು ನಾವು ಇಂತಹ ಪರಸ್ಪರ ವೈರುಧ್ಯಗಳಿರುವ ಒಂದು ಹೊಸ ವ್ಯವಸ್ಥೆಗೆ ಪ್ರವೇಶಿಸುತ್ತಿದ್ದೇವೆ. ರಾಜ ಕೀಯ ಜೀವನದಲ್ಲಿ ನಾವು ಸಮಾನತೆಯನ್ನು ಹೊಂದಿದ್ದೇವೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ನಾವು ಅಸಮಾನತೆಯನ್ನು ಹೊಂದಲಿದ್ದೇವೆ. ರಾಜಕೀಯದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಮತ್ತು ಒಂದು ಮತದ ಮೌಲ್ಯ ಒಂದು ಎಂಬ ತತ್ವವನ್ನು ಸ್ವೀಕರಿಸಿದ್ದೇವೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆುಂದಾಗಿ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಮತ, ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸಿದ್ದೇವೆ.

ಸಮಾಜದಲ್ಲಿ ಇಂತಹ ವೈರುಧ್ಯಗಳನ್ನು ಒಳಗೊಂಡ ಜೀವನವನ್ನು ನಾವು ಎಲ್ಲಿಯ ವರೆಗೆ ಮುಂದುವರೆಸಲು ಸಾಧ್ಯ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಎಲ್ಲಿಯ ವರೆಗೂ ನಾವು ಸಮಾನತೆಯನ್ನು ನಿರಾಕರಿಸಲು ಸಾಧ್ಯ? ನಾವು ಈ ನಿರಾಕರಣೆಯನ್ನು ಹೀಗೆಯೇ ಮುಂದುವರೆಸಿದ್ದಾ ದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ಡಿದಂತಾಗುತ್ತದೆ. ನಾವು ಈ ವೈರುಧ್ಯಗಳನ್ನು ಆದಷ್ಟು ಬೇಗ ನಿವಾರಿಸಬೇಕಿರುತ್ತದೆ. ಇಲ್ಲವಾದರೆ ಯಾರು ಅಸಮಾನತೆಯಿಂದ ನರಳುತ್ತಿರುವರೋ ಅವರು, ಯಾವ ಪ್ರಜಾಪ್ರಭುತ್ವಕ್ಕಾಗಿ ಈ ಸಂವಿಧಾನ ಸಭೆ ಪ್ರಯತ್ನಿಸಿತೋ, ಆ ರಾಜಕೀಯ ಪ್ರಜಾಪ್ರಭುತ್ವದ ಕಟ್ಟಡವನ್ನೇ ಧ್ವಂಸಗೊಳಿಸುತ್ತಾರೆ.

ನಾವು ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಒಂದು ರಾಷ್ಟ್ರವಾಗಿಲ್ಲ ಎಂಬುದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳು ತ್ತೇವೆಯೋ ಅಷ್ಟೂ ಒಳ್ಳೆಯದು. ಆಗ ಮಾತ್ರ ನಾವು ರಾಷ್ಟ್ರವಾಗುವ ಅಗತ್ಯತೆಯನ್ನು ಕಂಡುಕೊಳ್ಳುತ್ತೇವೆ ಹಾಗೂ ಅಂತಹ ಒಂದು ಉದ್ದೇಶದ ಈಡೇರಿಕೆಗಾಗಿ ನಾವು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಗಂಭೀರವಾಗಿ ಯೋಚಿಸುತ್ತೇವೆ. ಈ ಗುರಿಯ ಈಡೇರಿಕೆಯು ಅಷ್ಟು ಸುಲಭದ್ದಾಗಿರುವುದಿಲ್ಲ. ಅಮೇರಿಕಾ ಸಂಸ್ಥಾನಕ್ಕಿಂತ ಭಾರತದಲ್ಲಿ ಅಸಂಖ್ಯಾತ ಜಾತಿಗಳು ಇವೆ. ಜಾತಿಗಳು ರಾಷ್ಟ್ರದ ಕಲ್ಪನೆಗೆ ವಿರೋಧ ವಾದವುಗಳು. ಮೊದಲನೆಯದಾಗಿ ಸಾಮಾಜಿಕ ಜೀವನದಲ್ಲಿ ಇವು ಪ್ರತ್ಯೇಕತೆಯನ್ನು ತರುತ್ತವೆ. ಇವು ರಾಷ್ಟ್ರ ವಿರೋಧಿಗಳೂ ಕೂಡ. ಯಾಕೆಂದರೆ ಜಾತಿ ಮತ್ತು ಜಾತಿಗಳ ನಡುವೆ ಅಸೂಯೆ ಮತ್ತು ದ್ವೇಷ ಭಾವನೆಗಳನ್ನು ಉಂಟು ಮಾಡುತ್ತವೆ.

ನಾವು ವಾಸ್ತವವಾಗಿ ಒಂದು ರಾಷ್ಟ್ರವಾಗಬೇಕೆಂದು ಬಯಸುವುದಾದರೆ ಈ ಎಲ್ಲಾ ತೊಂದರೆಗಳನ್ನು ನಿವಾರಿಸಿಕೊಳ್ಳಬೇಕಾಗುತ್ತದೆ. ಯಾಕೆಂದರೆ, ಒಂದು ರಾಷ್ಟ್ರ ಎಂಬುದು ಅಸ್ತಿತ್ವದಲ್ಲಿದ್ದರೆ, ಭ್ರಾತೃತ್ವವು ವಾಸ್ತವವಾಗುತ್ತದೆ. ಭ್ರಾತೃತ್ವವಿಲ್ಲದೆ ಸಮಾನತೆ ಮತ್ತು ಸ್ವಾತಂತ್ರ್ಯ ಎಂಬುವುದು ಕೇವಲ ಬಣ್ಣ ಬಳಿದಂತೆಯೇ.

ನಮ್ಮ ಮುಂದಿರುವ ಕರ್ತವ್ಯಗಳ ಸಂಬಂಧದಲ್ಲಿ ಇವು ನನ್ನ ಚಿಂತನೆಗಳಾಗಿರುತ್ತವೆ ಅಷ್ಟೇ. ಕೆಲವರಿಗೆ, ಇವಾವು ಸಂತೋಷವನ್ನು ಉಂಟು ಮಾಡಿರಲಿಕ್ಕಿಲ್ಲ. ಆದರೆ ನಮ್ಮ ದೇಶದಲ್ಲಿ ರಾಜಕೀಯ ಅಧಿಕಾರ ಬಹಳ ಕಾಲದಿಂದ ಕೆಲವರ ಸ್ವತ್ತಾಗಿದ್ದು ಬಹುಸಂಖ್ಯಾತರು ಪ್ರಾಣಿಗಳಂತೆ ಹಾಗೂ ಪಶುಗಳಂತೆ ಜೀವಿಸುತ್ತಿದ್ದಾರೆ ಎಂಬುವುದನ್ನು ಒತ್ತಿ ಹೇಳಬೇಕಿಲ್ಲ. ಅಧಿಕಾರವು ಕೆಲವೇ ಕೆಲವರ ಸ್ವತ್ತಾಗಿರುವ ಕಾರಣ ಬಹು ಸಂಖ್ಯಾತರಿಗೆ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವ ಅವಕಾಶವು ಇಲ್ಲದಂತಾಗಿದೆ. ಇಷ್ಟೇ ಅಲ್ಲದೇ ಜೀವನದ ಮಹತ್ವದ ಬಗೆಗಿನ ಅವರ ಆಸಕ್ತಿಯು ಉಡುಗಿ ಹೋಗುವಂತಾಗಿದೆ.

ತುಳಿತಕ್ಕೆ ಒಳಗಾದ ಈ ಜನರು ಇವರ ಆಡಳಿತಕ್ಕೆ ಬೇಸತ್ತಿದ್ದಾರೆ ಮತ್ತು ತಮ್ಮನ್ನು ತಾವೇ ಆಳಿಕೊಳ್ಳುವ ತವಕದಲ್ಲಿದ್ದಾರೆ. ದಲಿತ ವರ್ಗಗಳಲ್ಲಿ ಆತ್ಮಾವಲೋಕನದ ಸಲುವಾಗಿ ಉಮ್ಮಳಿಸುತ್ತಿರುವ ಉತ್ಕಟವಾದ ಆಕಾಂಕ್ಷೆಯು ವರ್ಗ ಸಂಘರ್ಷದಲ್ಲಿ ಪರಿಣಮಿಸದಂತೆ ನಾವು ಎಚ್ಚರ ವಹಿಸಬೇಕಾಗುತ್ತದೆ. ಹಾಗೇನಾದರೂ ಆಗಿದ್ದೆ ಆದರೆ, ರಾಷ್ಟ್ರ ಇಬ್ಬಾಗವಾದಂತೆಯೇ. ಅಂತಹದೊಂದು ದಿನ ಬಂದಿದ್ದೇ ಆದರೆ ಅದು ಘೋರ ದುರಂತ ದಿನವಾಗುತ್ತದೆ. ಯಾಕೆಂದರೆ ಅಬ್ರಹಾಂ ಲಿಂಕನ್ ಹೇಳಿರುವ ಹಾಗೆ ಯಾವ ಮನೆ ಇಬ್ಭಾಗವಾಗುತ್ತದೋ ಆ ಮನೆಗೆ ಉಳಿಗಾಲವಿಲ್ಲ.

ಸ್ವಾತಂತ್ರ್ಯವು ವಾಸ್ತವಾಗಿ ಸಂತೋಷ ಉಂಟು ಮಾಡುವ ಸಂಗತಿ. ಆದರೆ ಈ ಸ್ವಾತಂತ್ರ್ಯವು ನಮ್ಮ ಮೇಲೆ ಹೆಚ್ಚು ಜವಾಬ್ದಾರಿಗ ಳನ್ನು ಹೊರೆಸಿದೆ ಎಂಬುವುದನ್ನು ಮರೆಯದಿರೋಣ. ಸ್ವಾತಂತ್ರ್ಯದ ಮೂಲಕ, ಪ್ರತಿಯೊಂದು ತಪ್ಪು ಎಸಗಿದಾಗ ಬ್ರಿಟೀಷರ ಕಡೆಗೆ ಬೆರಳು ಮಾಡಿ ತೋರಿಸುತ್ತಿದ್ದಂತಹ ಅವಕಾಶವನ್ನು ಕಳೆದುಕೊಂಡಿದ್ದೇವೆ. ಇನ್ನು ಮುಂದೆ ಏನಾದರೂ ತಪ್ಪಾದಾಗ ನಾವು ನಮ್ಮನ್ನು ಬಿಟ್ಟು ಬೇರೆ ಯಾರನ್ನೂ ಆಪಾದಿಸಿ ಹೇಳುವಂತಿಲ್ಲ. ತಪ್ಪುಗಳು ಸಂಭವಿಸುವ ಬಹು ದೊಡ್ಡ ಅಪಾಯವಿದೆ.

ಡಾ. ಬಿ.ಆರ್.ಅಂಬೇಡ್ಕರ್

(ಸಂವಿಧಾನ ಸಭೆಯಲ್ಲಿ ಡಾ. ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣದ ಆಯ್ದ ಭಾಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ1 week ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending