Connect with us

ಅಂತರಂಗ

ಕಪ್ಪು-ಬಿಳಿ ಅಮೆರಿಕನ್ನರ ನಡುವಿನ ಅಸಮಾನತೆ

Published

on

  • ನಾಗರಾಜ ನಂಜುಂಡಯ್ಯ

1983 ರಿಂದ 2016 ರ ನಡುವೆ, ಕಪ್ಪು ಅಮೆರಿಕನ್ನರ ಕುಟುಂಬದ ಸರಾಸರಿ ಸಂಪತ್ತು ಅರ್ಧಕ್ಕಿಂತಲೂ ಹೆಚ್ಚು ಇಳಿಕೆಯನ್ನು ಕಂಡಿದೆ. ಆದರೆ, ಇದೇ ಸಮಯದಲ್ಲಿ ಬಿಳಿ ಅಮೆರಿಕನ್ ಕುಟುಂಬದ ಸರಾಸರಿ ಸಂಪತ್ತು, ಶೇ.33 ರಷ್ಟು ಹೆಚ್ಚಾಗಿದೆ. 2017ರಲ್ಲಿ ಪ್ಯೂ (ಪಿ.ಇ.ಡಬ್ಲ್ಯೂ) ಅಧ್ಯಯನ ಸರಾಸರಿ ಬಿಳಿಯ ಕುಟುಂಬಗಳ ಆದಾಯ ಕರಿಯ ಕುಟುಂಬಗಳ ಆದಾಯದ 10 ಪಟ್ಟು ಎಂದಿದೆ. ಈ ಹಿನ್ನೆಲೆಯಲ್ಲಿ ಗುಲಾಮಗಿರಿ ಪ್ರಾರಂಭವಾಗಿ 400 ವರ್ಷಗಳ ಆಚರಣೆಯ ಸುತ್ತ ಈ ಕುರಿತು ತೀವ್ರ ರಾಜಕೀಯ ಚರ್ಚೆ ಆರಂಭವಾಗಿದೆ. 2014ರಲ್ಲೇ 250 ವರ್ಷಗಳ ಗುಲಾಮಗಿರಿಗೆ ಕರಿಯರಿಗೆ ಪರಿಹಾರ ಒದಗಿಸಬೇಕು ಎಂದು ವಾದಿಸುವ ತಾ ನೆಹಿಸಿ ಕೋಟ್ಸ್ ಎನ್ನುವವರ ವರದಿ ಪ್ರಕಟವಾಯಿತು. ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಸೆನೆಟರ್ ಕೊರಿ ಬುಕರ್ ಕರಿಯರಿಗೆ ಪರಿಹಾರ ಒದಗಿಸುವ ಬಗ್ಗೆ ಒಂದು ಮಸೂದೆಯನ್ನು ಮಂಡಿಸಿದ್ದಾರೆ. ಇತರ ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಎಲಿಜಬೆತ್ ವಾರೆನ್ ಮತ್ತು ಬರ್ನಿ ಸ್ಯಾಂಡರ್ಸ್ ಅದನ್ನು ಬೆಂಬಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದ್ದಾರೆ.

ನಾನೂರು ವರ್ಷಗಳ ಹಿಂದೆ, ಅಂದರೆ, 1619ರ ಆಗಸ್ಟ್ ತಿಂಗಳಲ್ಲಿ 20 ಸೆರೆಯಾಳುಗಳನ್ನು ಹೊತ್ತ ಹಡಗು ಆಫ್ರ್ರಿಕಾದಿಂದ ವರ್ಜೀನಿಯಾದ ಹಡಗುದಾಣದಲ್ಲಿ ಬಂದು ನಿಂತಿತು. ಮುಂದೆ ಇದೇ ಅಮೆರಿಕಾದ ಗುಲಾಮಗಿರಿಯ ಉಗಮಕ್ಕೆ ಕಾರಣವಾಯಿತು. ಆದರೆ, 1620 ರಲ್ಲಿ “ಮೇ” ಫ್ಲವರ್” ಹಡಗಿನಲ್ಲಿ, ಬಂದಿಳಿದ 102 ಪ್ರಯಾಣಿಕರ ಆಗಮನವನ್ನೇ ಈಗಲೂ ಯುಎಸ್ ನ ಗುಲಾಮಗಿರಿ ಪದ್ದತಿಯ ಆರಂಭವೆಂದೇ ಬಹಳಷ್ಟು ಅಮೆರಿಕನ್ನರಿಗೆ ಪರಿಚಯಿಸಲಾಗಿದೆ. ಆದರೆ, ಇದಕ್ಕೆ ಒಂದು ವರ್ಷದ ಹಿಂದೆಯೇ 20 ಆಪ್ರಿಕನ್ನರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಅಪಹರಿಸಿ ತಂದು, ಅಂದು ಅಮೆರಿಕಾವನ್ನು ವಸಾಹತು ಮಾಡಿಕೊಂಡಿದ್ದ ಬ್ರಿಟಿಷರಿಗೆ ಒಪ್ಪಿಸಿದ್ದೇ ಗುಲಾಮ ಪದ್ದತಿಗೆ ಮೂಲ ಕಾರಣವಾಯಿತು ಎಂಬುದು ವಾಸ್ತವತೆ.

ಅಮೆರಿಕಾದ ಬಂಡವಾಳಶಾಹಿ ಆರ್ಥಿಕತೆಯ ಸೃಷ್ಟಿಗೆ ಗುಲಾಮರ ಶ್ರಮವೇ ಬೆನ್ನೆಲುಬು ಎಂದರೆ ಅತಿಶಯೋಕ್ತಿಯಾಗಲಾರದು. ಇಂದು ಅಮೆರಿಕಾವು ವಿಶ್ವದ ಪ್ರಮುಖ ಆರ್ಥಿಕತೆಯಾಗಿ ಬೆಳೆಯಲು ಮತ್ತು ಉಳಿಯಲು ಅವಕಾಶ ಮಾಡಿಕೊಟ್ಟಿದ್ದೆ ಈ ಗುಲಾಮರ ಶ್ರಮ. ಆದರೆ, ಈ ಆಫ್ರಿಕನ್ ಗುಲಾಮ ಕಾರ್ಮಿಕರಿಗೆ ಅವರ ಪಾಲಿನ ಸಂಪತ್ತನ್ನು ಮಾತ್ರ ಸೂಕ್ತವಾಗಿ ಇಲ್ಲಿಯವರೆವಿಗೂ ಪಾವತಿಸಲೇ ಇಲ್ಲವೆಂಬುದು ಕೂಡ ಅಷ್ಟೆ ಸತ್ಯ. ಆದಾಗ್ಯೂ, ಅಮೆರಿಕದ ಆರ್ಥಿಕತೆ, ಈಗಲೂ ಹೆಚ್ಚಾಗಿ ಇವರ ಕೆಲಸದ ಮೇಲೆಯೇ ಹೆಚ್ಚಾಗಿ ಅವಲಂಬಿತವಾಗಿದೆ ಎಂಬುದು ವಾಸ್ತವ.

ಪ್ರಸ್ತುತ ಸಂಪತ್ತಿನ ವಿಭಜನೆಯಲ್ಲಿ ಅಪಾರ ಜನಾಂಗೀಯ ಅಸಮಾನತೆಯನ್ನು ಕಾಣಬಹುದು. ಕಳೆದ ನಾಲ್ಕು ವರ್ಷಗಳಿಂದೀಚೆಗೆ ಈ ಸಂಪತ್ತಿನ ಜನಾಂಗೀಯ ವ್ಯತ್ಯಾಸ ಮತ್ತಷ್ಟು ಹೆಚ್ಚಾಗಿರುವುದು ಮತ್ತು ಅದರ ಮುಂದುವರಿದ ಪ್ರವೃತ್ತಿಗಳು ಅಸಮಾನತೆಯ ಅಂತರದ ವಿಸ್ತರಣೆಯನ್ನು ಇನ್ನೂ ಪ್ರತಿಬಿಂಬಿಸುತ್ತಲೇ ಇವೆ.

ಶೇ.37 ಕರಿಯ ಕುಟುಂಬಗಳ ಸಂಪತ್ತು ನಕಾರಾತ್ಮಕ !

ಜನವರಿ 15, 2019 ರಂದು ಡಾ. ಮಾರ್ಟಿನ್ ಲೂಥರ್ ಕಿಂಗ್( ಜೂನಿಯರ್)ರವರ 90 ನೇ ಜನ್ಮ ದಿನದ ಪ್ರಯುಕ್ತ “ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್” ನಡೆಸಿದ ಒಂದು ಸಮೀಕ್ಷೆಯ ವರದಿಯು ” ಅಮೆರಿಕದ ಸಂಪತ್ತು ಬಿಳಿ ಅಮೆರಿಕನ್ನರ ಕುಟುಂಬಗಳಲ್ಲಿ ಹೇಗೆ ಹೆಚ್ಚು ಸಾಂದ್ರೀಕರಿಸಿದೆ ಮತ್ತು ಕಪ್ಪು ಆಪ್ರಿಕನ್ ಕುಟುಂಬಗಳ ಸಂಪತ್ತಿನ ಪಾಲನ್ನು ಹೇಗೆ ವಂಚಿಸಲಾಗಿದೆ” ಎಂಬ ವಾಸ್ತವ ಚಿತ್ರಣವನ್ನು ಹೊರ ಹಾಕಿದೆ.

ಮಾರ್ಟಿನ್ ಲೂಥರ್ ಕಿಂಗ್ (ಜೂನಿಯರ್) ಕರಿಯರ ಮಾನವೀಯ ಹಕ್ಕುಗಳಿಗಾಗಿ ಜೀವನ ಪಯರ್ಂತ ಹೋರಾಟ ನಡೆಸಿದವರು. ಕೊನೆಗೆ ಇವರು ಕೊಲ್ಲಲ್ಪಟ್ಟರು. ಕರಿಯರ ವಿರುದ್ದ ಕ್ರೌರ್ಯಕ್ಕೆ ಮಾರ್ಟಿನ್ನರ ಕೊಲೆ ಕನ್ನಡಿ ಹಿಡಿದ ಹಾಗೆ.

ವಸಾಹತುಶಾಹಿಯಿಂದ ವಿಮುಕ್ತಿಗೊಂಡು ಯು.ಎಸ್. ಹೊಸದಾಗಿ ಸ್ಥಾಪನೆಯಾದ ನಂತರ, ಸುಮಾರು 250 ವರ್ಷಗಳ ಕಾಲ ಅವ್ಯಾಹತವಾಗಿ ನಡೆದಿದ್ದ ಗುಲಾಮಗಿರಿಯು ಅಧಿಕೃತವಾಗಿ 1865ರಲ್ಲಿ ಕೊನೆಗೊಂಡಿತು. ಆದರೆ ಕರಿಯರ ವಿರುದ್ಧ ಅಸಮಾನತೆಯ ಆಚರಣೆಯ ಕ್ರೌರ್ಯಗಳನ್ನು – ಜಿಮ್ ಕ್ರೌ ಕಾನೂನು, ರೆಡ್ ಲೈನಿಂಗ್ ಹಾಗೂ ವ್ಯಾಪಕ ಬಂಧÀನಗಳು – ಮುಂತಾದ ಅನೇಕ ಸಾರ್ವಜನಿಕ ನೀತಿಗಳ ಮೂಲಕ ಮುಂದುವರಿಸಲಾಯಿತು.

1983 ರಿಂದ 2016 ರ ನಡುವೆ, ಕಪ್ಪು ಅಮೆರಿಕನ್ನರ ಕುಟುಂಬದ ಸರಾಸರಿ ಸಂಪತ್ತು ಅರ್ಧಕ್ಕಿಂತಲೂ ಹೆಚ್ಚು ಇಳಿಕೆಯನ್ನು ಕಂಡಿದೆ. ಆದರೆ, ಇದೇ ಸಮಯದಲ್ಲಿ ಬಿಳಿ ಅಮೆರಿಕನ್ ಕುಟುಂಬದ ಸರಾಸರಿ ಸಂಪತ್ತು, ಶೇ.33 ರಷ್ಟು ಹೆಚ್ಚಾಗಿರುವುದನ್ನು ಈ ವರದಿ ದಾಖಲಿಸಿದೆ. ಇದು ಆಪ್ರಿಕನ್ ಅಮೆರಿಕನ್ ರಿಂದ ಮತ್ತು ಇತರೆ ದೇಶಗಳಿಂದ ವಲಸೆ ಬಂದು ನೆಲೆಸಿರುವ ಬಡ ಕಾರ್ಮಿಕರ ಶ್ರಮದಿಂದ ಯುಎಸ್ ನ ಆರ್ಥಿಕ ಅಭಿವೃದ್ಧಿ ವೃದ್ದಿಯಾಗುತ್ತಿರುವುದನ್ನು ಪ್ರತಿ ಬಿಂಬಿಸುತ್ತದೆ ಎಂದು ವರದಿಯು ಪ್ರಸ್ತಾಪಿಸಿದೆ. ಕಪ್ಪು ಅಮೆರಿಕನ್ನರ ಸಂಪತ್ತು ಕುಸಿಯುತ್ತಿರುವ ಈ ವರ್ಷಗಳಲ್ಲೇ, ಒಂದು ಕೋಟಿ ಡಾಲರುಗಳಿಗಿಂತ ಹೆಚ್ಚು ಸಂಪತ್ತು ಇರುವ ಕುಟುಂಬಗಳ ಸಂಖ್ಯೆ 8.56 ಪಟ್ಟು ಹೆಚ್ಚಳವಾಗಿದೆ. ಇದರ ಪರಿಣಾಮದಿಂದಾಗಿ, ಇನ್ನೊಂದು ತುದಿಯಲ್ಲಿ ಈಗ ಶೇ.37 ರಷ್ಟು ಕಪ್ಪು ಕುಟುಂಬಗಳ ಸರಾಸರಿ ಸಂಪತ್ತು ಶೂನ್ಯ ಅಥವಾ ನಕಾರಾತ್ಮಕವಾಗಿದೆ (ಅಂದರೆ ಅವರ ಆಸ್ತಿಗಿಂತ ಹೆಚ್ಚು ಸಾಲ ಇದೆ) ಎನ್ನಲಾಗಿದೆ. ಶೇ.15 ರಷ್ಟು ಬಿಳಿ ಅಮೆರಿಕನ್ನರ ಕುಟಂಬಗಳು ಮಾತ್ರ ಈ ಸ್ಥಿತಿಯಲ್ಲಿವೆ.

ಸಂಪತ್ತಿನ ಈ ವಿಷಮ ಜನಾಂಗೀಯ ವಿಭಜನೆಯು ಎಲ್ಲಾ ಅಮೆರಿಕನ್ನರ ಮೇಲೆ ಹಾಗೂ ಒಟ್ಟಾರೆ ಯಾಗಿ ಅಮೆರಿಕಾದ ಆರ್ಥಿಕತೆಯ ಮೇಲೆಯೂ ಗಾಡವಾದ ದುಷ್ಪರಿಣಾಮ ಬೀರಿದೆ. ಕಪ್ಪು ಜನಸಂಖ್ಯೆ ಹೆಚ್ಚಾದಂತೆ ಅಮೆರಿಕದ ಕುಟುಂಬಗಳ ಸರಾಸರಿ ಸಂಪತ್ತು ಕೂಡ ಕುಸಿದಿದೆ. 1983ರಲ್ಲಿ 84,111 ಡಾಲರ್ ಇದ್ದ ಸರಾಸರಿ ಸಂಪತ್ತು 2016ರಲ್ಲಿ 81,704 ಡಾಲರಿಗೆ ಕುಸಿದಿದೆ. 1983ರಲ್ಲಿ 6 ಅಮೆರಿಕನ್ ಕುಟುಂಬಗಳಲ್ಲಿ 1 ಕುಟುಂಬ ನಕಾರಾತ್ಮಕ ಸಂಪತ್ತು ಅನುಭವಿಸುತ್ತಿದ್ದು, 2016ರಲ್ಲಿ 5 ಕುಟುಂಬಗಳಲ್ಲಿ 1 ಕುಟುಂಬ ಆ ಸ್ಥಿತಿಯಲ್ಲಿದೆ. ಹಾಗೆಯೇ, ಕರಿಯರ ಸಂಪತ್ತಿನ ಸವೆತದ ಸುತ್ತ ಅನೇಕ ರೀತಿಯ ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಗಳು ಕರಿಯರ ಸೋಮಾರಿತನ, ಶಿಕ್ಷಣದಲ್ಲಿ ಹಿಂದುಳಿದಿರುವಿಕೆ ಮತ್ತು ನಿರಾಸಕ್ತಿ, ಕೆಲಸದ ಮತ್ತು ಇತರ ನೈತಿಕತೆಯ ಅಭಾವದ ಸುತ್ತ ಗಿರಕಿ ಹೊಡೆಯುತ್ತವೆ. ಅಂದರೆ ಜಗತ್ತಿನ ಎಲ್ಲೆಡೆಗೆ ಆಗುವಂತೆ ದಮನಿತರ ಶೋಚನೀಯ ಪರಿಸ್ಥಿತಿಗೆ ಅವರೇ ಕಾರಣ ಎನ್ನುವ ಸಾಮಾನ್ಯ ಉಳ್ಳವರ ಕಥನ. ಇದು ಮಿಥ್ಯೆ ಎಂದು ಹಲವು ಅಧ್ಯಯನಗಳು ತೋರಿಸುತ್ತವೆ. ಕಾಲೇಜು ಶಿಕ್ಷಣ ಪಡೆದ ಕರಿಯ ಕುಟುಂಬಗಳು ಹೈಸ್ಕೂಲ್ ಶಿಕ್ಷಣ ಪಡೆದ ಬಿಳಿಯ ಕುಟುಂಬಗಳಿಗಿಂತ ಕಡಿಮೆ ಸರಾಸರಿ ಸಂಪತ್ತು ಹೊಂದಿವೆ. ಏಕ-ಪೋಷಕ ಬಿಳಿ ಕುಟುಂಬಗಳು, ಕರಿಯ ದ್ವಿ-ಪೋಷಕ ಕುಟುಂಬಕ್ಕಿಂತ ಎರಡು ಪಟ್ಟು ಹೆಚ್ಚು ಶ್ರೀಮಂತರಾಗಿದ್ದಾರೆ.

ಒಟ್ಟಾರೆಯಾಗಿ, ಕರಿಯ-ಬಿಳಿಯ ಕುಟುಂಬಗಳ ಸಂಪತ್ತಿನ ಅಂತರ ಕರಿಯರ ವೈಯಕ್ತಿಕ ಗುಣಲಕ್ಷಣಗಳಿಂದಾಗಿ ಅಲ್ಲ. ಗುಲಾಮಗಿರಿ ಪ್ರಾರಂಭವಾಗಿ 400 ವರ್ಷಗಳಲ್ಲಿ ಕರಿಯ ಅಮೆರಿಕನ್ನರಿಗೆ ಸಂಪನ್ಮೂಲಗಳನ್ನು ನಿರಂತರವಾಗಿ ನಿರಾಕರಿಸಿರುವುದು ಕಾರಣ ಎಂದು ಈ ವರದಿಯಲ್ಲಿ ಗುರುತಿಸಿಲಾಗಿದೆ. ಮೊದಲ ಗುಲಾಮರನ್ನು ಆಪ್ರಿಕಾದಿಂದ ಒತ್ತಾಯಪೂರ್ವಕವಾಗಿ ಅಪಹರಿಸಿಕೊಂಡು ಬಂದದ್ದು, ಅವರಿಂದ ಅಮ್ಯೂಲ್ಯವಾದ ಶ್ರಮವನ್ನು ಉಚಿತವಾಗಿ ಮಾಡಿಸಿಕೊಳ್ಳಲೆಂದೆ’ ಎಂದು ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್ ತನ್ನ ವರದಿಯಲ್ಲಿ ಒತ್ತಿ ಹೇಳಿದೆ. ಉದ್ಯೋಗ, ಆದಾಯ, ಮನೆ ಮಾಲಿಕತ್ವ, ಷೇರ್ ಮಾಲಿಕತ್ವ, ಉದ್ಯಮ ಶೀಲತೆ ಮತ್ತು ಇತರೆ ಎಲ್ಲಾ ಆರ್ಥಿಕ ಸೂಚಕಗಳು ಸಂಪತ್ತಿನ ವಿಷಮ ಜನಾಂಗೀಯ ವಿಭಜನೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ.

ಈ ಜನಾಂಗೀಯ ವಿಭಜನೆಯನ್ನು ನಿಜವಾದ ಅರ್ಥದಲ್ಲಿ ನಿವಾರಿಸಲು, ಐತಿಹಾಸಿಕವಾಗಿ ಬಿಳಿ ಅಮೆರಿಕನ್ ಸಮುದಾಯಗಳು ಸ್ವಾಧೀನ ಪಡಿಸಿಕೊಂಡಿರುವ ಬೃಹತ್ ಸಂಪತ್ತಿನ್ನಷ್ಟೇ ದೊಡ್ಡ ಪ್ರಮಾಣದಲ್ಲಿ ಕರಿಯ ಸಮುದಾಯಗಳಿಗೆ ಪರಿಹಾರ ಒದಗಿಸಬೇಕು ಅಥವಾ ಸಂಪತ್ತಿನ ವರ್ಗಾವಣೆ/ಹೂಡಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರನ್ನೂ ಒಳಗೊಂಡ ಆಮೂಲಾಗ್ರ ಸಂರಚನಾತ್ಮಕ ಬದಲಾವಣೆಯ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕೆ ದೃಢವಾದ ರಾಜಕೀಯ ಇಚ್ಛಾಶÀಕ್ತಿ ಇರಬೇಕಾಗುತ್ತದೆ. ಆಗ ಮಾತ್ರ ಆಫ್ರಿಕನ್ ಅಮೆರಿಕನ್ ರಿಗೆ ಅಂತಿಮವಾಗಿ ನ್ಯಾಯ ಒದಗಿಸಲು ಸಾಧ್ಯ. 400 ವರ್ಷಗಳ ಗುಲಾಮಗಿರಿಯ ಪರಿಣಾಮಗಳನ್ನು ತಾತ್ಕಾಲಿಕ ಬ್ಯಾಂಡ್-ಏಡ್ ಗಳು ನಿವಾರಿಸಲು ಸಾಧ್ಯವಿಲ್ಲ, ಎಂದು ವರದಿ ಹೇಳುತ್ತದೆ. “ಈ ದೇಶದಲ್ಲಿ ಅಮೆರಿಕನ್ನರು ಎಂದರೆ ಬಿಳಿಯರು ಮಾತ್ರ, ಉಳಿದವರು ಗುಲಾಮರು ಅಷ್ಟೇ” ಎಂಬ ಪ್ರಸಿದ್ಧ ಕರಿಯ ಲೇಖಕಿ ಟೋನಿ ಮಾರಿಸನ್ ಅವರ ಮಾತು ಸದ್ಯಕ್ಕಂತೂ ಸತ್ಯವೆನಿಸುತ್ತದೆ.

ಈ ಹಿನ್ನೆಲೆಯಲ್ಲಿ ಗುಲಾಮಗಿರಿಯ ಪ್ರಾರಂಭವಾಗಿ 400 ವರ್ಷಗಳ ಆಚರಣೆಯ ಸುತ್ತ ಈ ಕುರಿತು ತೀವ್ರ ರಾಜಕೀಯ ಚರ್ಚೆ ಆರಂಭವಾಗಿದೆ. 2014ರಲ್ಲೇ 250 ವರ್ಷಗಳ ಗುಲಾಮಗಿರಿಗೆ ಕರಿಯರಿಗೆ ಪರಿಹಾರ ಒದಗಿಸಬೇಕು ಎಂದು ವಾದಿಸುವ ತಾ ನೆಹಿಸಿ ಕೋಟ್ಸ್ ಎನ್ನುವವರ ವರದಿ ಪ್ರಕಟವಾಯಿತು. 2017ರಲ್ಲಿ ಪ್ಯೂ (ಪಿ.ಇ.ಡಬ್ಲ್ಯೂ) ಅಧ್ಯಯನ ಸರಾಸರಿ ಬಿಳಿಯ ಕುಟುಂಬಗಳ ಆದಾಯ ಕರಿಯ ಕುಟುಂಬಗಳ ಆದಾಯದ 10 ಪಟ್ಟು ಎಂದಿದೆ. ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಸೆನೆಟರ್ ಕೊರಿ ಬುಕರ್ ಕರಿಯರಿಗೆ ಪರಿಹಾರ ಒದಗಿಸುವ ಬಗ್ಗೆ ಒಂದು ಮಸೂದೆಯನ್ನು ಮಂಡಿಸಿದ್ದಾರೆ. ಇತರ ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಎಲಿಜಬೆತ್ ವಾರೆನ್ ಮತ್ತು ಬರ್ನಿ ಸ್ಯಾಂಡರ್ಸ್ ಅದನ್ನು ಬೆಂಬಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದ್ದಾರೆ.

ಅಮೆರಿಕದ ಗುಲಾಮಗಿರಿಯ ಸ್ಥೂಲ ಚರಿತ್ರೆ

1619 : ವರ್ಜೀನಿಯಾಕ್ಕೆ 20 ಆಫ್ರಿಕರನ್ನು ಹೊತ್ತ ಹಡಗಿನ ಆಗಮನ; ಡಚ್ ವ್ಯಾಪಾರಿಯಿಂದ ಅವರನ್ನು ಗುಲಾಮರಾಗಿ ಮಾರಾಟ; ಗುಲಾಮಗಿರಿಯ ಆರಂಭ.

1619-1810 : ಆಫ್ರಿಕನ್ನರನ್ನು ಅಪಹರಿಸಿ ಅಟ್ಲಾಂಟಿಕ್ ಸಾಗರದ ಮೇಲೆ ಹಡಗಿನಲ್ಲಿ ಸಾಗಾಣಿಕೆ ಮಾಡಿ ಗುಲಾಮರಾಗಿ ಅಮೆರಿಕದಲ್ಲಿ ಮಾರಾಟ ಮಾಡುವ ವಾಪಾರ ಮುಂದುವರೆಯಿತು. 1700 ರಲ್ಲಿ ಹತ್ತು ಸಾವಿರದಷ್ಟಿದ್ದ ಗುಲಾಮರ ಸಂಖ್ಯೆ, 1760 ಹೊತ್ತಿಗೆ 2 ಲಕ್ಷಕ್ಕೆ ಹತ್ತಿರವಾಗಿ, 1810ರ ಹೊತ್ತಿಗೆ 3 ಲಕ್ಷ ದಾಟಿತ್ತು.

1661 : ಮೇರಿಲ್ಯಾಂಡಿನಲ್ಲಿ ಕರಿಯ ಗುಲಾಮರು ಮತ್ತು ಬಿಳಿಯರ ನಡುವೆ ಮದುವೆ ನಿಷೇಧಿಸುವ ಮೊದಲ ಕಾನೂನು: ಮುಂದೆ ಇಂತಹ ಕಾನೂನುಗಳು ಹೆಚ್ಚಿನ ಉತ್ತರ ಅಮೆರಿಕದ ಬ್ರ್ರಿಟಿಷ್ ವಸಾಹತುಗಳಲ್ಲಿ ಬಂದವು.

1960ರಲ್ಲೂ ಇನ್ನೂ ಯು.ಎಸ್. ನ 20 ರಾಜ್ಯಗಳಲ್ಲಿ ಇಂತಹ ಕಾನೂನುಗಳು ಇದ್ದವು. 2000ದಲ್ಲಿ ಅಲಬಾಮಾ ಇಂತಹ ಕಾನೂನು ತೆಗೆದು ಹಾಕಿದ ಕೊನೆಯ ರಾಜ್ಯವಾಯಿತು.

1776-1790 : ‘ಮಾನವರೆಲ್ಲ ಹುಟ್ಟಿನಿಂದ ಸಮಾನರು’ ಎಂದ ಅಮೆರಿಕನ್ ಸ್ವಾತಂತ್ರ್ಯ ಘೋಷಣೆ ಕರಿಯ ಗುಲಾಮರಿಗೆ ¯ಗಾವಾಗಲಿಲ್ಲ. ಗುಲಾಮರ ಸಾಗಾಣಿಕೆ ಮುಂದುವರೆಯಿತು, ಅದರಲ್ಲೂ ವಿಶೇಷವಾಗಿ ದಕ್ಷಿಣದ ಹತ್ತಿ ಬೆಳೆಯುವ ಪ್ರಾಂತ್ಯಗಳಲ್ಲಿ ದೊಡ್ಡ ಸಂಖ್ಯೆಯ ಕರಿಯ ಗುಲಾಮರನ್ನು ನೆಲೆಸಲಾಯಿತು. 1790 ಜನಗಣತಿಯ ಪ್ರಕಾರ ಇಂತಹ 3 ಪ್ರಾಂತ್ಯಗ¼ಲ್ಲಿ ಕರಿಯ ಗುಲಾಮರ ಸಂಖ್ಯೆ 18 ಲಕ್ಷ ದಾಟಿತ್ತು. ಆ ಪ್ರಾಂತ್ಯಗಳ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚಿತ್ತು.

1808 : 18ನೇ ಶತಮಾನದಲ್ಲಿ ಬ್ರಿಟಿಷರು ನಡೆಸಿದ ವ್ಯಾಪಕ ಆಫ್ರಿಕನ್ ಗುಲಾಮರ ವ್ಯಾಪಾರದಲ್ಲಿ 6 ಲಕ್ಷ ಕರಿಯರನ್ನು ಅಮೆರಿಕಾಕ್ಕೆ ಸಾಗಿಸಲಾಯತು. 1808ರಲ್ಲಿ ಗುಲಾಮರ ವ್ಯಾಪಾರವನ್ನು (ಗುಲಾಮಗಿರಿಯನ್ನಲ್ಲ, ಗುಲಾಮರ ವ್ಯಾಪಾರವನ್ನು ಮಾತ್ರ) ನಿಷೇಧಿಸುವ ವರೆಗೆ ಅದು ಭಾರಿ ಪ್ರಮಾಣದಲ್ಲಿ ಮುಂದುವರೆಯಿತು.

1860 : ಕರಿಯ ಗುಲಾಮರು ಮತ್ತು ಅವರ ಸಂತತಿಯೆಲ್ಲಾ ಸೇರಿ 1860ರ ಜನಗಣತಿಯ ಹೊತ್ತಿಗೆ ಕರಿಯರ ಸಂಖ್ಯೆ 40 ಲಕ್ಷಕ್ಕೆ (ಒಟ್ಟು ಜನಸಂಖ್ಯೆಯ ಶೇ. 13) ಏರಿತ್ತು.

1865-68 : ಅಮೆರಿಕದ ಆಂತರಿಕ ಯುದ್ಧದಲ್ಲಿ ಗುಲಾಮಗಿರಿ ಸಹ ಒಂದು ವಿಷಯವಾಗಿತ್ತು. ಆದರೆ ಅದೇ ಮುಖ್ಯವಾಗಿರಲಿಲ್ಲ. ದಕ್ಷಿಣದ ಪ್ರಾಂತ್ಯಗಳ ಪ್ರತ್ಯೇಕತೆ ಮುಖ್ಯ ವಿಷಯವಾಗಿತ್ತು. ಆದರೆ ಯುದ್ಧ ನಂತರ ಕರಿಯರ ಮೇಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಲಾಯಿತು. ಅಮೆರಿಕದಲ್ಲಿ ಆಗ ನೆಲೆಸಿದ್ದ ಮತ್ತು ಅಲ್ಲೇ ಹುಟ್ಟಿದ್ದ ಕರಿಯರಿಗೆ ನಾಗರಿಕ ಹಕ್ಕು ಕೊಡಲಾಯಿತು.

1870–1964 : ಜಿಮ್ ಕ್ರೋ ಕಾನೂನುಗಳು ಎಂದು ಕರೆಯಲಾಗುವ ಕಾನೂನುಗಳು ಹೆಚ್ಚಿನ ದಕ್ಷಿಣದ ಪ್ರಾಂತ್ಯಗಳಲ್ಲಿ ಜಾರಿಗೆ ಬಂತು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕರಿಯರು ಮತ್ತು ಬಿಳಿಯರು ಒಟ್ಟಿಗೆ ಇರುವಂತಿಲ್ಲ ಎಂಬುದು ಈ ಕಾನೂನುಗಳ ಸಾರಾಂಶ. ಇದರ ಪ್ರಕಾರವೇ ಸಾರ್ವಜನಿಕ ಸಾರಿಗೆಯಲ್ಲಿ, ಹೊಟೆಲುಗಳಲ್ಲಿ ಎಲ್ಲೆಲ್ಲೂ ಕರಿಯರನ್ನು ಪ್ರತ್ಯೇಕಿಸಲಾಗಿತ್ತು. ಇಂತಹ ಒಂದಲ್ಲ ಒಂದು ಕಾನೂನು ಒಂದಲ್ಲ ಒಂದು ಪ್ರಾಂತ್ಯದಲ್ಲಿ 1964ರವರೆಗೂ ಜಾರಿಯಲ್ಲಿದ್ದವು. 1958ರಲ್ಲಷ್ಟೇ ಯು.ಎಸ್. ಮಿಲಿಟರಿಯಲ್ಲಿ ಕರಿಯರ ಪ್ರತ್ಯೇಕ ಘಟಕಗಳನ್ನು ವಿಸರ್ಜಿಸಲಾಯಿತು. ಹಲವು ದಕ್ಷಿಣದ ಪ್ರಾಂತ್ಯಗಳಲ್ಲಿ ಒಂದಲ್ಲ ಒಂದು ಕಾರಣ ಕೊಟ್ಟು ಕರಿಯರ ಮತದಾನದ ಹಕ್ಕನ್ನು ಮೊಟಕುಗೊಳಿಸಲಾಗುತ್ತಿತ್ತು. ಈಗಲೂ ಅದು ಕೆಲವು ಪ್ರಾಂತ್ಯಗಳಲ್ಲಿ ಹೊಸ ರೂಪಗಳಲ್ಲಿ ಮುಂದುವರೆದಿದೆ.

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading
Advertisement

Title

ದಿನದ ಸುದ್ದಿ1 day ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ1 day ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ2 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ2 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ2 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ4 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ5 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ5 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ6 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ1 week ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

Trending