ಅಂತರಂಗ
ಕಪ್ಪು-ಬಿಳಿ ಅಮೆರಿಕನ್ನರ ನಡುವಿನ ಅಸಮಾನತೆ
- ನಾಗರಾಜ ನಂಜುಂಡಯ್ಯ
1983 ರಿಂದ 2016 ರ ನಡುವೆ, ಕಪ್ಪು ಅಮೆರಿಕನ್ನರ ಕುಟುಂಬದ ಸರಾಸರಿ ಸಂಪತ್ತು ಅರ್ಧಕ್ಕಿಂತಲೂ ಹೆಚ್ಚು ಇಳಿಕೆಯನ್ನು ಕಂಡಿದೆ. ಆದರೆ, ಇದೇ ಸಮಯದಲ್ಲಿ ಬಿಳಿ ಅಮೆರಿಕನ್ ಕುಟುಂಬದ ಸರಾಸರಿ ಸಂಪತ್ತು, ಶೇ.33 ರಷ್ಟು ಹೆಚ್ಚಾಗಿದೆ. 2017ರಲ್ಲಿ ಪ್ಯೂ (ಪಿ.ಇ.ಡಬ್ಲ್ಯೂ) ಅಧ್ಯಯನ ಸರಾಸರಿ ಬಿಳಿಯ ಕುಟುಂಬಗಳ ಆದಾಯ ಕರಿಯ ಕುಟುಂಬಗಳ ಆದಾಯದ 10 ಪಟ್ಟು ಎಂದಿದೆ. ಈ ಹಿನ್ನೆಲೆಯಲ್ಲಿ ಗುಲಾಮಗಿರಿ ಪ್ರಾರಂಭವಾಗಿ 400 ವರ್ಷಗಳ ಆಚರಣೆಯ ಸುತ್ತ ಈ ಕುರಿತು ತೀವ್ರ ರಾಜಕೀಯ ಚರ್ಚೆ ಆರಂಭವಾಗಿದೆ. 2014ರಲ್ಲೇ 250 ವರ್ಷಗಳ ಗುಲಾಮಗಿರಿಗೆ ಕರಿಯರಿಗೆ ಪರಿಹಾರ ಒದಗಿಸಬೇಕು ಎಂದು ವಾದಿಸುವ ತಾ ನೆಹಿಸಿ ಕೋಟ್ಸ್ ಎನ್ನುವವರ ವರದಿ ಪ್ರಕಟವಾಯಿತು. ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಸೆನೆಟರ್ ಕೊರಿ ಬುಕರ್ ಕರಿಯರಿಗೆ ಪರಿಹಾರ ಒದಗಿಸುವ ಬಗ್ಗೆ ಒಂದು ಮಸೂದೆಯನ್ನು ಮಂಡಿಸಿದ್ದಾರೆ. ಇತರ ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಎಲಿಜಬೆತ್ ವಾರೆನ್ ಮತ್ತು ಬರ್ನಿ ಸ್ಯಾಂಡರ್ಸ್ ಅದನ್ನು ಬೆಂಬಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದ್ದಾರೆ.
ನಾನೂರು ವರ್ಷಗಳ ಹಿಂದೆ, ಅಂದರೆ, 1619ರ ಆಗಸ್ಟ್ ತಿಂಗಳಲ್ಲಿ 20 ಸೆರೆಯಾಳುಗಳನ್ನು ಹೊತ್ತ ಹಡಗು ಆಫ್ರ್ರಿಕಾದಿಂದ ವರ್ಜೀನಿಯಾದ ಹಡಗುದಾಣದಲ್ಲಿ ಬಂದು ನಿಂತಿತು. ಮುಂದೆ ಇದೇ ಅಮೆರಿಕಾದ ಗುಲಾಮಗಿರಿಯ ಉಗಮಕ್ಕೆ ಕಾರಣವಾಯಿತು. ಆದರೆ, 1620 ರಲ್ಲಿ “ಮೇ” ಫ್ಲವರ್” ಹಡಗಿನಲ್ಲಿ, ಬಂದಿಳಿದ 102 ಪ್ರಯಾಣಿಕರ ಆಗಮನವನ್ನೇ ಈಗಲೂ ಯುಎಸ್ ನ ಗುಲಾಮಗಿರಿ ಪದ್ದತಿಯ ಆರಂಭವೆಂದೇ ಬಹಳಷ್ಟು ಅಮೆರಿಕನ್ನರಿಗೆ ಪರಿಚಯಿಸಲಾಗಿದೆ. ಆದರೆ, ಇದಕ್ಕೆ ಒಂದು ವರ್ಷದ ಹಿಂದೆಯೇ 20 ಆಪ್ರಿಕನ್ನರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಅಪಹರಿಸಿ ತಂದು, ಅಂದು ಅಮೆರಿಕಾವನ್ನು ವಸಾಹತು ಮಾಡಿಕೊಂಡಿದ್ದ ಬ್ರಿಟಿಷರಿಗೆ ಒಪ್ಪಿಸಿದ್ದೇ ಗುಲಾಮ ಪದ್ದತಿಗೆ ಮೂಲ ಕಾರಣವಾಯಿತು ಎಂಬುದು ವಾಸ್ತವತೆ.
ಅಮೆರಿಕಾದ ಬಂಡವಾಳಶಾಹಿ ಆರ್ಥಿಕತೆಯ ಸೃಷ್ಟಿಗೆ ಗುಲಾಮರ ಶ್ರಮವೇ ಬೆನ್ನೆಲುಬು ಎಂದರೆ ಅತಿಶಯೋಕ್ತಿಯಾಗಲಾರದು. ಇಂದು ಅಮೆರಿಕಾವು ವಿಶ್ವದ ಪ್ರಮುಖ ಆರ್ಥಿಕತೆಯಾಗಿ ಬೆಳೆಯಲು ಮತ್ತು ಉಳಿಯಲು ಅವಕಾಶ ಮಾಡಿಕೊಟ್ಟಿದ್ದೆ ಈ ಗುಲಾಮರ ಶ್ರಮ. ಆದರೆ, ಈ ಆಫ್ರಿಕನ್ ಗುಲಾಮ ಕಾರ್ಮಿಕರಿಗೆ ಅವರ ಪಾಲಿನ ಸಂಪತ್ತನ್ನು ಮಾತ್ರ ಸೂಕ್ತವಾಗಿ ಇಲ್ಲಿಯವರೆವಿಗೂ ಪಾವತಿಸಲೇ ಇಲ್ಲವೆಂಬುದು ಕೂಡ ಅಷ್ಟೆ ಸತ್ಯ. ಆದಾಗ್ಯೂ, ಅಮೆರಿಕದ ಆರ್ಥಿಕತೆ, ಈಗಲೂ ಹೆಚ್ಚಾಗಿ ಇವರ ಕೆಲಸದ ಮೇಲೆಯೇ ಹೆಚ್ಚಾಗಿ ಅವಲಂಬಿತವಾಗಿದೆ ಎಂಬುದು ವಾಸ್ತವ.
ಪ್ರಸ್ತುತ ಸಂಪತ್ತಿನ ವಿಭಜನೆಯಲ್ಲಿ ಅಪಾರ ಜನಾಂಗೀಯ ಅಸಮಾನತೆಯನ್ನು ಕಾಣಬಹುದು. ಕಳೆದ ನಾಲ್ಕು ವರ್ಷಗಳಿಂದೀಚೆಗೆ ಈ ಸಂಪತ್ತಿನ ಜನಾಂಗೀಯ ವ್ಯತ್ಯಾಸ ಮತ್ತಷ್ಟು ಹೆಚ್ಚಾಗಿರುವುದು ಮತ್ತು ಅದರ ಮುಂದುವರಿದ ಪ್ರವೃತ್ತಿಗಳು ಅಸಮಾನತೆಯ ಅಂತರದ ವಿಸ್ತರಣೆಯನ್ನು ಇನ್ನೂ ಪ್ರತಿಬಿಂಬಿಸುತ್ತಲೇ ಇವೆ.
ಶೇ.37 ಕರಿಯ ಕುಟುಂಬಗಳ ಸಂಪತ್ತು ನಕಾರಾತ್ಮಕ !
ಜನವರಿ 15, 2019 ರಂದು ಡಾ. ಮಾರ್ಟಿನ್ ಲೂಥರ್ ಕಿಂಗ್( ಜೂನಿಯರ್)ರವರ 90 ನೇ ಜನ್ಮ ದಿನದ ಪ್ರಯುಕ್ತ “ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್” ನಡೆಸಿದ ಒಂದು ಸಮೀಕ್ಷೆಯ ವರದಿಯು ” ಅಮೆರಿಕದ ಸಂಪತ್ತು ಬಿಳಿ ಅಮೆರಿಕನ್ನರ ಕುಟುಂಬಗಳಲ್ಲಿ ಹೇಗೆ ಹೆಚ್ಚು ಸಾಂದ್ರೀಕರಿಸಿದೆ ಮತ್ತು ಕಪ್ಪು ಆಪ್ರಿಕನ್ ಕುಟುಂಬಗಳ ಸಂಪತ್ತಿನ ಪಾಲನ್ನು ಹೇಗೆ ವಂಚಿಸಲಾಗಿದೆ” ಎಂಬ ವಾಸ್ತವ ಚಿತ್ರಣವನ್ನು ಹೊರ ಹಾಕಿದೆ.
ಮಾರ್ಟಿನ್ ಲೂಥರ್ ಕಿಂಗ್ (ಜೂನಿಯರ್) ಕರಿಯರ ಮಾನವೀಯ ಹಕ್ಕುಗಳಿಗಾಗಿ ಜೀವನ ಪಯರ್ಂತ ಹೋರಾಟ ನಡೆಸಿದವರು. ಕೊನೆಗೆ ಇವರು ಕೊಲ್ಲಲ್ಪಟ್ಟರು. ಕರಿಯರ ವಿರುದ್ದ ಕ್ರೌರ್ಯಕ್ಕೆ ಮಾರ್ಟಿನ್ನರ ಕೊಲೆ ಕನ್ನಡಿ ಹಿಡಿದ ಹಾಗೆ.
ವಸಾಹತುಶಾಹಿಯಿಂದ ವಿಮುಕ್ತಿಗೊಂಡು ಯು.ಎಸ್. ಹೊಸದಾಗಿ ಸ್ಥಾಪನೆಯಾದ ನಂತರ, ಸುಮಾರು 250 ವರ್ಷಗಳ ಕಾಲ ಅವ್ಯಾಹತವಾಗಿ ನಡೆದಿದ್ದ ಗುಲಾಮಗಿರಿಯು ಅಧಿಕೃತವಾಗಿ 1865ರಲ್ಲಿ ಕೊನೆಗೊಂಡಿತು. ಆದರೆ ಕರಿಯರ ವಿರುದ್ಧ ಅಸಮಾನತೆಯ ಆಚರಣೆಯ ಕ್ರೌರ್ಯಗಳನ್ನು – ಜಿಮ್ ಕ್ರೌ ಕಾನೂನು, ರೆಡ್ ಲೈನಿಂಗ್ ಹಾಗೂ ವ್ಯಾಪಕ ಬಂಧÀನಗಳು – ಮುಂತಾದ ಅನೇಕ ಸಾರ್ವಜನಿಕ ನೀತಿಗಳ ಮೂಲಕ ಮುಂದುವರಿಸಲಾಯಿತು.
1983 ರಿಂದ 2016 ರ ನಡುವೆ, ಕಪ್ಪು ಅಮೆರಿಕನ್ನರ ಕುಟುಂಬದ ಸರಾಸರಿ ಸಂಪತ್ತು ಅರ್ಧಕ್ಕಿಂತಲೂ ಹೆಚ್ಚು ಇಳಿಕೆಯನ್ನು ಕಂಡಿದೆ. ಆದರೆ, ಇದೇ ಸಮಯದಲ್ಲಿ ಬಿಳಿ ಅಮೆರಿಕನ್ ಕುಟುಂಬದ ಸರಾಸರಿ ಸಂಪತ್ತು, ಶೇ.33 ರಷ್ಟು ಹೆಚ್ಚಾಗಿರುವುದನ್ನು ಈ ವರದಿ ದಾಖಲಿಸಿದೆ. ಇದು ಆಪ್ರಿಕನ್ ಅಮೆರಿಕನ್ ರಿಂದ ಮತ್ತು ಇತರೆ ದೇಶಗಳಿಂದ ವಲಸೆ ಬಂದು ನೆಲೆಸಿರುವ ಬಡ ಕಾರ್ಮಿಕರ ಶ್ರಮದಿಂದ ಯುಎಸ್ ನ ಆರ್ಥಿಕ ಅಭಿವೃದ್ಧಿ ವೃದ್ದಿಯಾಗುತ್ತಿರುವುದನ್ನು ಪ್ರತಿ ಬಿಂಬಿಸುತ್ತದೆ ಎಂದು ವರದಿಯು ಪ್ರಸ್ತಾಪಿಸಿದೆ. ಕಪ್ಪು ಅಮೆರಿಕನ್ನರ ಸಂಪತ್ತು ಕುಸಿಯುತ್ತಿರುವ ಈ ವರ್ಷಗಳಲ್ಲೇ, ಒಂದು ಕೋಟಿ ಡಾಲರುಗಳಿಗಿಂತ ಹೆಚ್ಚು ಸಂಪತ್ತು ಇರುವ ಕುಟುಂಬಗಳ ಸಂಖ್ಯೆ 8.56 ಪಟ್ಟು ಹೆಚ್ಚಳವಾಗಿದೆ. ಇದರ ಪರಿಣಾಮದಿಂದಾಗಿ, ಇನ್ನೊಂದು ತುದಿಯಲ್ಲಿ ಈಗ ಶೇ.37 ರಷ್ಟು ಕಪ್ಪು ಕುಟುಂಬಗಳ ಸರಾಸರಿ ಸಂಪತ್ತು ಶೂನ್ಯ ಅಥವಾ ನಕಾರಾತ್ಮಕವಾಗಿದೆ (ಅಂದರೆ ಅವರ ಆಸ್ತಿಗಿಂತ ಹೆಚ್ಚು ಸಾಲ ಇದೆ) ಎನ್ನಲಾಗಿದೆ. ಶೇ.15 ರಷ್ಟು ಬಿಳಿ ಅಮೆರಿಕನ್ನರ ಕುಟಂಬಗಳು ಮಾತ್ರ ಈ ಸ್ಥಿತಿಯಲ್ಲಿವೆ.
ಸಂಪತ್ತಿನ ಈ ವಿಷಮ ಜನಾಂಗೀಯ ವಿಭಜನೆಯು ಎಲ್ಲಾ ಅಮೆರಿಕನ್ನರ ಮೇಲೆ ಹಾಗೂ ಒಟ್ಟಾರೆ ಯಾಗಿ ಅಮೆರಿಕಾದ ಆರ್ಥಿಕತೆಯ ಮೇಲೆಯೂ ಗಾಡವಾದ ದುಷ್ಪರಿಣಾಮ ಬೀರಿದೆ. ಕಪ್ಪು ಜನಸಂಖ್ಯೆ ಹೆಚ್ಚಾದಂತೆ ಅಮೆರಿಕದ ಕುಟುಂಬಗಳ ಸರಾಸರಿ ಸಂಪತ್ತು ಕೂಡ ಕುಸಿದಿದೆ. 1983ರಲ್ಲಿ 84,111 ಡಾಲರ್ ಇದ್ದ ಸರಾಸರಿ ಸಂಪತ್ತು 2016ರಲ್ಲಿ 81,704 ಡಾಲರಿಗೆ ಕುಸಿದಿದೆ. 1983ರಲ್ಲಿ 6 ಅಮೆರಿಕನ್ ಕುಟುಂಬಗಳಲ್ಲಿ 1 ಕುಟುಂಬ ನಕಾರಾತ್ಮಕ ಸಂಪತ್ತು ಅನುಭವಿಸುತ್ತಿದ್ದು, 2016ರಲ್ಲಿ 5 ಕುಟುಂಬಗಳಲ್ಲಿ 1 ಕುಟುಂಬ ಆ ಸ್ಥಿತಿಯಲ್ಲಿದೆ. ಹಾಗೆಯೇ, ಕರಿಯರ ಸಂಪತ್ತಿನ ಸವೆತದ ಸುತ್ತ ಅನೇಕ ರೀತಿಯ ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಗಳು ಕರಿಯರ ಸೋಮಾರಿತನ, ಶಿಕ್ಷಣದಲ್ಲಿ ಹಿಂದುಳಿದಿರುವಿಕೆ ಮತ್ತು ನಿರಾಸಕ್ತಿ, ಕೆಲಸದ ಮತ್ತು ಇತರ ನೈತಿಕತೆಯ ಅಭಾವದ ಸುತ್ತ ಗಿರಕಿ ಹೊಡೆಯುತ್ತವೆ. ಅಂದರೆ ಜಗತ್ತಿನ ಎಲ್ಲೆಡೆಗೆ ಆಗುವಂತೆ ದಮನಿತರ ಶೋಚನೀಯ ಪರಿಸ್ಥಿತಿಗೆ ಅವರೇ ಕಾರಣ ಎನ್ನುವ ಸಾಮಾನ್ಯ ಉಳ್ಳವರ ಕಥನ. ಇದು ಮಿಥ್ಯೆ ಎಂದು ಹಲವು ಅಧ್ಯಯನಗಳು ತೋರಿಸುತ್ತವೆ. ಕಾಲೇಜು ಶಿಕ್ಷಣ ಪಡೆದ ಕರಿಯ ಕುಟುಂಬಗಳು ಹೈಸ್ಕೂಲ್ ಶಿಕ್ಷಣ ಪಡೆದ ಬಿಳಿಯ ಕುಟುಂಬಗಳಿಗಿಂತ ಕಡಿಮೆ ಸರಾಸರಿ ಸಂಪತ್ತು ಹೊಂದಿವೆ. ಏಕ-ಪೋಷಕ ಬಿಳಿ ಕುಟುಂಬಗಳು, ಕರಿಯ ದ್ವಿ-ಪೋಷಕ ಕುಟುಂಬಕ್ಕಿಂತ ಎರಡು ಪಟ್ಟು ಹೆಚ್ಚು ಶ್ರೀಮಂತರಾಗಿದ್ದಾರೆ.
ಒಟ್ಟಾರೆಯಾಗಿ, ಕರಿಯ-ಬಿಳಿಯ ಕುಟುಂಬಗಳ ಸಂಪತ್ತಿನ ಅಂತರ ಕರಿಯರ ವೈಯಕ್ತಿಕ ಗುಣಲಕ್ಷಣಗಳಿಂದಾಗಿ ಅಲ್ಲ. ಗುಲಾಮಗಿರಿ ಪ್ರಾರಂಭವಾಗಿ 400 ವರ್ಷಗಳಲ್ಲಿ ಕರಿಯ ಅಮೆರಿಕನ್ನರಿಗೆ ಸಂಪನ್ಮೂಲಗಳನ್ನು ನಿರಂತರವಾಗಿ ನಿರಾಕರಿಸಿರುವುದು ಕಾರಣ ಎಂದು ಈ ವರದಿಯಲ್ಲಿ ಗುರುತಿಸಿಲಾಗಿದೆ. ಮೊದಲ ಗುಲಾಮರನ್ನು ಆಪ್ರಿಕಾದಿಂದ ಒತ್ತಾಯಪೂರ್ವಕವಾಗಿ ಅಪಹರಿಸಿಕೊಂಡು ಬಂದದ್ದು, ಅವರಿಂದ ಅಮ್ಯೂಲ್ಯವಾದ ಶ್ರಮವನ್ನು ಉಚಿತವಾಗಿ ಮಾಡಿಸಿಕೊಳ್ಳಲೆಂದೆ’ ಎಂದು ಇನ್ಸ್ಟಿಟ್ಯೂಟ್ ಫಾರ್ ಪಾಲಿಸಿ ಸ್ಟಡೀಸ್ ತನ್ನ ವರದಿಯಲ್ಲಿ ಒತ್ತಿ ಹೇಳಿದೆ. ಉದ್ಯೋಗ, ಆದಾಯ, ಮನೆ ಮಾಲಿಕತ್ವ, ಷೇರ್ ಮಾಲಿಕತ್ವ, ಉದ್ಯಮ ಶೀಲತೆ ಮತ್ತು ಇತರೆ ಎಲ್ಲಾ ಆರ್ಥಿಕ ಸೂಚಕಗಳು ಸಂಪತ್ತಿನ ವಿಷಮ ಜನಾಂಗೀಯ ವಿಭಜನೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ.
ಈ ಜನಾಂಗೀಯ ವಿಭಜನೆಯನ್ನು ನಿಜವಾದ ಅರ್ಥದಲ್ಲಿ ನಿವಾರಿಸಲು, ಐತಿಹಾಸಿಕವಾಗಿ ಬಿಳಿ ಅಮೆರಿಕನ್ ಸಮುದಾಯಗಳು ಸ್ವಾಧೀನ ಪಡಿಸಿಕೊಂಡಿರುವ ಬೃಹತ್ ಸಂಪತ್ತಿನ್ನಷ್ಟೇ ದೊಡ್ಡ ಪ್ರಮಾಣದಲ್ಲಿ ಕರಿಯ ಸಮುದಾಯಗಳಿಗೆ ಪರಿಹಾರ ಒದಗಿಸಬೇಕು ಅಥವಾ ಸಂಪತ್ತಿನ ವರ್ಗಾವಣೆ/ಹೂಡಿಕೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲರನ್ನೂ ಒಳಗೊಂಡ ಆಮೂಲಾಗ್ರ ಸಂರಚನಾತ್ಮಕ ಬದಲಾವಣೆಯ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕೆ ದೃಢವಾದ ರಾಜಕೀಯ ಇಚ್ಛಾಶÀಕ್ತಿ ಇರಬೇಕಾಗುತ್ತದೆ. ಆಗ ಮಾತ್ರ ಆಫ್ರಿಕನ್ ಅಮೆರಿಕನ್ ರಿಗೆ ಅಂತಿಮವಾಗಿ ನ್ಯಾಯ ಒದಗಿಸಲು ಸಾಧ್ಯ. 400 ವರ್ಷಗಳ ಗುಲಾಮಗಿರಿಯ ಪರಿಣಾಮಗಳನ್ನು ತಾತ್ಕಾಲಿಕ ಬ್ಯಾಂಡ್-ಏಡ್ ಗಳು ನಿವಾರಿಸಲು ಸಾಧ್ಯವಿಲ್ಲ, ಎಂದು ವರದಿ ಹೇಳುತ್ತದೆ. “ಈ ದೇಶದಲ್ಲಿ ಅಮೆರಿಕನ್ನರು ಎಂದರೆ ಬಿಳಿಯರು ಮಾತ್ರ, ಉಳಿದವರು ಗುಲಾಮರು ಅಷ್ಟೇ” ಎಂಬ ಪ್ರಸಿದ್ಧ ಕರಿಯ ಲೇಖಕಿ ಟೋನಿ ಮಾರಿಸನ್ ಅವರ ಮಾತು ಸದ್ಯಕ್ಕಂತೂ ಸತ್ಯವೆನಿಸುತ್ತದೆ.
ಈ ಹಿನ್ನೆಲೆಯಲ್ಲಿ ಗುಲಾಮಗಿರಿಯ ಪ್ರಾರಂಭವಾಗಿ 400 ವರ್ಷಗಳ ಆಚರಣೆಯ ಸುತ್ತ ಈ ಕುರಿತು ತೀವ್ರ ರಾಜಕೀಯ ಚರ್ಚೆ ಆರಂಭವಾಗಿದೆ. 2014ರಲ್ಲೇ 250 ವರ್ಷಗಳ ಗುಲಾಮಗಿರಿಗೆ ಕರಿಯರಿಗೆ ಪರಿಹಾರ ಒದಗಿಸಬೇಕು ಎಂದು ವಾದಿಸುವ ತಾ ನೆಹಿಸಿ ಕೋಟ್ಸ್ ಎನ್ನುವವರ ವರದಿ ಪ್ರಕಟವಾಯಿತು. 2017ರಲ್ಲಿ ಪ್ಯೂ (ಪಿ.ಇ.ಡಬ್ಲ್ಯೂ) ಅಧ್ಯಯನ ಸರಾಸರಿ ಬಿಳಿಯ ಕುಟುಂಬಗಳ ಆದಾಯ ಕರಿಯ ಕುಟುಂಬಗಳ ಆದಾಯದ 10 ಪಟ್ಟು ಎಂದಿದೆ. ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಸೆನೆಟರ್ ಕೊರಿ ಬುಕರ್ ಕರಿಯರಿಗೆ ಪರಿಹಾರ ಒದಗಿಸುವ ಬಗ್ಗೆ ಒಂದು ಮಸೂದೆಯನ್ನು ಮಂಡಿಸಿದ್ದಾರೆ. ಇತರ ಡೆಮೊಕ್ರಾಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳಾದ ಎಲಿಜಬೆತ್ ವಾರೆನ್ ಮತ್ತು ಬರ್ನಿ ಸ್ಯಾಂಡರ್ಸ್ ಅದನ್ನು ಬೆಂಬಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದ್ದಾರೆ.
ಅಮೆರಿಕದ ಗುಲಾಮಗಿರಿಯ ಸ್ಥೂಲ ಚರಿತ್ರೆ
1619 : ವರ್ಜೀನಿಯಾಕ್ಕೆ 20 ಆಫ್ರಿಕರನ್ನು ಹೊತ್ತ ಹಡಗಿನ ಆಗಮನ; ಡಚ್ ವ್ಯಾಪಾರಿಯಿಂದ ಅವರನ್ನು ಗುಲಾಮರಾಗಿ ಮಾರಾಟ; ಗುಲಾಮಗಿರಿಯ ಆರಂಭ.
1619-1810 : ಆಫ್ರಿಕನ್ನರನ್ನು ಅಪಹರಿಸಿ ಅಟ್ಲಾಂಟಿಕ್ ಸಾಗರದ ಮೇಲೆ ಹಡಗಿನಲ್ಲಿ ಸಾಗಾಣಿಕೆ ಮಾಡಿ ಗುಲಾಮರಾಗಿ ಅಮೆರಿಕದಲ್ಲಿ ಮಾರಾಟ ಮಾಡುವ ವಾಪಾರ ಮುಂದುವರೆಯಿತು. 1700 ರಲ್ಲಿ ಹತ್ತು ಸಾವಿರದಷ್ಟಿದ್ದ ಗುಲಾಮರ ಸಂಖ್ಯೆ, 1760 ಹೊತ್ತಿಗೆ 2 ಲಕ್ಷಕ್ಕೆ ಹತ್ತಿರವಾಗಿ, 1810ರ ಹೊತ್ತಿಗೆ 3 ಲಕ್ಷ ದಾಟಿತ್ತು.
1661 : ಮೇರಿಲ್ಯಾಂಡಿನಲ್ಲಿ ಕರಿಯ ಗುಲಾಮರು ಮತ್ತು ಬಿಳಿಯರ ನಡುವೆ ಮದುವೆ ನಿಷೇಧಿಸುವ ಮೊದಲ ಕಾನೂನು: ಮುಂದೆ ಇಂತಹ ಕಾನೂನುಗಳು ಹೆಚ್ಚಿನ ಉತ್ತರ ಅಮೆರಿಕದ ಬ್ರ್ರಿಟಿಷ್ ವಸಾಹತುಗಳಲ್ಲಿ ಬಂದವು.
1960ರಲ್ಲೂ ಇನ್ನೂ ಯು.ಎಸ್. ನ 20 ರಾಜ್ಯಗಳಲ್ಲಿ ಇಂತಹ ಕಾನೂನುಗಳು ಇದ್ದವು. 2000ದಲ್ಲಿ ಅಲಬಾಮಾ ಇಂತಹ ಕಾನೂನು ತೆಗೆದು ಹಾಕಿದ ಕೊನೆಯ ರಾಜ್ಯವಾಯಿತು.
1776-1790 : ‘ಮಾನವರೆಲ್ಲ ಹುಟ್ಟಿನಿಂದ ಸಮಾನರು’ ಎಂದ ಅಮೆರಿಕನ್ ಸ್ವಾತಂತ್ರ್ಯ ಘೋಷಣೆ ಕರಿಯ ಗುಲಾಮರಿಗೆ ¯ಗಾವಾಗಲಿಲ್ಲ. ಗುಲಾಮರ ಸಾಗಾಣಿಕೆ ಮುಂದುವರೆಯಿತು, ಅದರಲ್ಲೂ ವಿಶೇಷವಾಗಿ ದಕ್ಷಿಣದ ಹತ್ತಿ ಬೆಳೆಯುವ ಪ್ರಾಂತ್ಯಗಳಲ್ಲಿ ದೊಡ್ಡ ಸಂಖ್ಯೆಯ ಕರಿಯ ಗುಲಾಮರನ್ನು ನೆಲೆಸಲಾಯಿತು. 1790 ಜನಗಣತಿಯ ಪ್ರಕಾರ ಇಂತಹ 3 ಪ್ರಾಂತ್ಯಗ¼ಲ್ಲಿ ಕರಿಯ ಗುಲಾಮರ ಸಂಖ್ಯೆ 18 ಲಕ್ಷ ದಾಟಿತ್ತು. ಆ ಪ್ರಾಂತ್ಯಗಳ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚಿತ್ತು.
1808 : 18ನೇ ಶತಮಾನದಲ್ಲಿ ಬ್ರಿಟಿಷರು ನಡೆಸಿದ ವ್ಯಾಪಕ ಆಫ್ರಿಕನ್ ಗುಲಾಮರ ವ್ಯಾಪಾರದಲ್ಲಿ 6 ಲಕ್ಷ ಕರಿಯರನ್ನು ಅಮೆರಿಕಾಕ್ಕೆ ಸಾಗಿಸಲಾಯತು. 1808ರಲ್ಲಿ ಗುಲಾಮರ ವ್ಯಾಪಾರವನ್ನು (ಗುಲಾಮಗಿರಿಯನ್ನಲ್ಲ, ಗುಲಾಮರ ವ್ಯಾಪಾರವನ್ನು ಮಾತ್ರ) ನಿಷೇಧಿಸುವ ವರೆಗೆ ಅದು ಭಾರಿ ಪ್ರಮಾಣದಲ್ಲಿ ಮುಂದುವರೆಯಿತು.
1860 : ಕರಿಯ ಗುಲಾಮರು ಮತ್ತು ಅವರ ಸಂತತಿಯೆಲ್ಲಾ ಸೇರಿ 1860ರ ಜನಗಣತಿಯ ಹೊತ್ತಿಗೆ ಕರಿಯರ ಸಂಖ್ಯೆ 40 ಲಕ್ಷಕ್ಕೆ (ಒಟ್ಟು ಜನಸಂಖ್ಯೆಯ ಶೇ. 13) ಏರಿತ್ತು.
1865-68 : ಅಮೆರಿಕದ ಆಂತರಿಕ ಯುದ್ಧದಲ್ಲಿ ಗುಲಾಮಗಿರಿ ಸಹ ಒಂದು ವಿಷಯವಾಗಿತ್ತು. ಆದರೆ ಅದೇ ಮುಖ್ಯವಾಗಿರಲಿಲ್ಲ. ದಕ್ಷಿಣದ ಪ್ರಾಂತ್ಯಗಳ ಪ್ರತ್ಯೇಕತೆ ಮುಖ್ಯ ವಿಷಯವಾಗಿತ್ತು. ಆದರೆ ಯುದ್ಧ ನಂತರ ಕರಿಯರ ಮೇಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಲಾಯಿತು. ಅಮೆರಿಕದಲ್ಲಿ ಆಗ ನೆಲೆಸಿದ್ದ ಮತ್ತು ಅಲ್ಲೇ ಹುಟ್ಟಿದ್ದ ಕರಿಯರಿಗೆ ನಾಗರಿಕ ಹಕ್ಕು ಕೊಡಲಾಯಿತು.
1870–1964 : ಜಿಮ್ ಕ್ರೋ ಕಾನೂನುಗಳು ಎಂದು ಕರೆಯಲಾಗುವ ಕಾನೂನುಗಳು ಹೆಚ್ಚಿನ ದಕ್ಷಿಣದ ಪ್ರಾಂತ್ಯಗಳಲ್ಲಿ ಜಾರಿಗೆ ಬಂತು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕರಿಯರು ಮತ್ತು ಬಿಳಿಯರು ಒಟ್ಟಿಗೆ ಇರುವಂತಿಲ್ಲ ಎಂಬುದು ಈ ಕಾನೂನುಗಳ ಸಾರಾಂಶ. ಇದರ ಪ್ರಕಾರವೇ ಸಾರ್ವಜನಿಕ ಸಾರಿಗೆಯಲ್ಲಿ, ಹೊಟೆಲುಗಳಲ್ಲಿ ಎಲ್ಲೆಲ್ಲೂ ಕರಿಯರನ್ನು ಪ್ರತ್ಯೇಕಿಸಲಾಗಿತ್ತು. ಇಂತಹ ಒಂದಲ್ಲ ಒಂದು ಕಾನೂನು ಒಂದಲ್ಲ ಒಂದು ಪ್ರಾಂತ್ಯದಲ್ಲಿ 1964ರವರೆಗೂ ಜಾರಿಯಲ್ಲಿದ್ದವು. 1958ರಲ್ಲಷ್ಟೇ ಯು.ಎಸ್. ಮಿಲಿಟರಿಯಲ್ಲಿ ಕರಿಯರ ಪ್ರತ್ಯೇಕ ಘಟಕಗಳನ್ನು ವಿಸರ್ಜಿಸಲಾಯಿತು. ಹಲವು ದಕ್ಷಿಣದ ಪ್ರಾಂತ್ಯಗಳಲ್ಲಿ ಒಂದಲ್ಲ ಒಂದು ಕಾರಣ ಕೊಟ್ಟು ಕರಿಯರ ಮತದಾನದ ಹಕ್ಕನ್ನು ಮೊಟಕುಗೊಳಿಸಲಾಗುತ್ತಿತ್ತು. ಈಗಲೂ ಅದು ಕೆಲವು ಪ್ರಾಂತ್ಯಗಳಲ್ಲಿ ಹೊಸ ರೂಪಗಳಲ್ಲಿ ಮುಂದುವರೆದಿದೆ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243



