ದಿನದ ಸುದ್ದಿ
ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
&description=ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
Warning: Trying to access array offset on value of type bool in /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
&description=ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್: ನೋಟು ರದ್ದತಿ ಸಮಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ನ ಬ್ಯಾಂಕ್ವೊಂದರಲ್ಲಿಅತಿ ಹೆಚ್ಚು ನೋಟುಗಳು ಹೊಸ ನೋಟುಗಳಿಗೆ ಬದಲಾವಣೆಯಾಗಿರುವ ಸುದ್ದಿಯನ್ನು ದೇಶದ ಪ್ರಮುಖ ಪತ್ರಿಕೆಗಳ ವೆಬ್ ಪೋರ್ಟಲ್ಗಳು ಈಗ ಅದನ್ನು ಡಿಲಿಟ್ ಮಾಡಿವೆ.
ಈ ಕುರಿತು ಬೂಮ್ ನ್ಯೂಸ್ ಪೋರ್ಟಲ್ ವರದಿಮಾಡಿದ್ದು, ಈಗ ಆ ಪೋಸ್ಟ್ ವೈರಲ್ ಆಗುತ್ತಿದೆ.
ಫಸ್ಟ್ ಪೋಸ್ಟ್, ನ್ಯೂಸ್ 18 ಡಾಟ್ ಕಾಂ, ಟೈಮ್ಸ್ ನೌ ಹಾಗೂ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣಗಳು ಶಾ ಅವರ ಹೆಸರು ತಳಕುಹಾಕಿಕೊಂಡಿರುವ ಈ ಸುದ್ದಿಯನ್ನು ಡಿಲಿಟ್ ಮಾಡಿದ್ದು, ಎಕನಾಮಿಕ್ ಟೈಮ್ಸ್ ಸುದ್ದಿ ತಾಣವು ಒಂದು ಹೆಜ್ಜೆ ಮುಂದೆ ಹೋಗಿ ಅಮಿತ್ ಶಾ ಹೆಸರನ್ನು ಮಾತ್ರ ತೆಗೆದುಹಾಕಿದೆ.
ಇಟಿ ವೆಬ್ ಪೋರ್ಟಲ್ನಲ್ಲಿರುವ ಈ ಸುದ್ದಿಯಲ್ಲಿರುವ ರೀಡ್ ಮೋರ್ ಬಟನ್ಅನ್ನು ಕ್ಲಿಕ್ ಮಾಡಿದಾಗ ಅಲ್ಲಿ ಬಿಜೆಪಿ ನಾಯಕ ಎಂದಷ್ಟೇ ಉಲ್ಲೇಖವಾಗಿದೆ. ಮೊದಲ ಪ್ಯಾರಾದಲ್ಲಿ ದಾಖಲಾಗಿದ್ದ ಅಮಿತ್ ಶಾ ಅವರ ಹೆಸರನ್ನು ಉದ್ದೇಶಪೂರ್ವಕವಾಗಿಯೇ ಡಿಲಿಟ್ ಮಾಡಲಾಗಿದೆ ಎಂಬುದು ಇದರ ಅರ್ಥ.
ಈ ಕುರಿತು ಹೆಚ್ಚಿನ ಮಾಹಿತಿಪಡೆಯುವ ಸಲುವಾಗಿ ಬೂಮ್ ಪತ್ರಿಕೆ ವರದಿಗಾರ ಇಟಿ ವೆಬ್ ತಾಣದ ಮುಖ್ಯಸ್ಥ ದೀಪಕ್ ಅಜ್ವಾನಿ ಅವರನ್ನು ಸಂಪರ್ಕಿಸಿದ್ದು, ಇದರ ಬಗ್ಗೆ ಪ್ರತಿಕ್ರಿಯಿಸಲು ಅವರು ಒಪ್ಪಿಲ್ಲ.
ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣದಲ್ಲಿ ಜೂ.21ರಂದು ಸುದ್ದಿ ಅಪ್ಲೋಡ್ ಮಾಡಲಾಗಿದ್ದು, ನಾಲ್ಕು ಗಂಟೆಗಳ ಕಾಲ ಇದು ಆನ್ಲೈನ್ನಲ್ಲಿ ಲಭ್ಯವಿತ್ತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
“ಐಎಎನ್ಎಸ್ ಸುದ್ದಿಸಂಸ್ಥೆಯ ಸುದ್ದಿಗಳನ್ನು ಡೆಸ್ಕ್ ವಿಭಾಗದವರು ಪರಿಶೀಲಿಸಿ ಅಪ್ಲೋಡ್ ಮಾಡುತ್ತಾರೆ. ಹಿರಿಯರ ಸೂಚನೆ ಮೇರೆಗಷ್ಟೆ ಸುದ್ದಿಗಳನ್ನು ಡಿಲಿಟ್ ಮಾಡಲಾಗುತ್ತದೆ,’ ಎಂದು ಎಕ್ಸ್ಪ್ರೆಸ್ ಮೂಲಗಳು ಬೂಮ್ ಸುದ್ದಿತಾಣಕ್ಕೆ ತಿಳಿಸಿದ್ದಾರೆ.
ಬೂಮ್ ಸುದ್ದಿ ತಾಣವು ಎಕ್ಸ್ಪ್ರೆಸ್ ಸುದ್ದಿ ತಾಣದ ಮುಖ್ಯಸ್ಥ ಸುರೇಶ್ ಇವಾತುರಿ ಅವರನ್ನು ಸಂಪರ್ಕಿಸಿದ್ದು ಈ ಕುರಿತು ಸದ್ಯದಲ್ಲೇ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಫಸ್ಟ್ಪೋಸ್ಟ್ ಪ್ರಕಟಿಸಿದ್ದ ಸುದ್ದಿಯ ಆರ್ಕೈವ್ಅನ್ನು ಬೂಮ್ ತಾಣವು ಪತ್ತೆ ಮಾಡಿದ್ದು, ಈ ಸುದಿಯಲ್ಲಿ ಅಮಿತ್ ಶಾ ಅವರ ಹೆಸರಿರುವುದು ಪಕ್ಕಾ ಆಗಿದೆ. ಆದರೆ, ದೇಶದ ಬಹುತೇಕ ವಾಹಿನಿಗಳು, ಪತ್ರಿಕೆಗಳು ಈ ಸುದ್ದಿಯನ್ನು ಏಕೆ ಪ್ರಕಟಿಸಿಲ್ಲ. ಹಾಗೂ ವೆಬ್ ತಾಣದಲ್ಲಿ ಸುದ್ದಿಯನ್ನು ಡಿಲಿಟ್ ಮಾಡಿದ್ದು ಏಕೆ ಎಂಬುದು ಈವರೆಗೂ ಗೊತ್ತಾಗಿಲ್ಲ.
ಸುದ್ದಿಯಲ್ಲಿ ಏನಿತ್ತು?
ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ ಸಹಕಾರ ಬ್ಯಾಂಕ್ನಲ್ಲಿ 745.59 ಕೋಟಿ ರೂ. ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಟ್ಟಿರುವುದು ಆರ್ಟಿಐ ಅರ್ಜಿ ಮೂಲಕ ಬೆಳಕಿಗೆ ಬಂದಿರುವುದು ಫಸ್ಟ್ಪೋಸ್ಟ್ನ ಆರ್ಕೈವ್ ವರ್ಷನ್ನಲ್ಲಿಸಿಕ್ಕಿದೆ.
ಈ ಕುರಿತು ಐಎಎನ್ಎಸ್ ಸುದ್ದಿಸಂಸ್ಥೆಯು ಜೂ.21ರಂದು ಸುದ್ದಿಯೊಂದನ್ನು ಪ್ರಕಟಿಸಿದೆ ಮನೋರಂಜನ್ ರೈ ಎಂಬುವವರು ಸಲ್ಲಿಸಿದ್ದ ಆರ್ಟಿಐ ಅರ್ಜಿಯೊಂದರಿಂದ ಈ ಮಾಹಿತಿ ಸ್ಪಷ್ಟವಾಗಿದೆ.
ಸಹಕಾರಿ ಬ್ಯಾಂಕ್ನ ವೆಬ್ ತಾಣದಲ್ಲಿರುವ ಮಾಹಿತಿಗಳ ಪ್ರಕಾರ ಹಲವು ವರ್ಷಗಳಿಂದ ಈ ಬ್ಯಾಂಕ್ನ ನಿರ್ದೇಶಕರಾಗಿ ಅಮಿತ್ ಶಾ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 31 , 2017ರ ಹೊತ್ತಿಗೆ ಈ ಬ್ಯಾಂಕ್ನ ಒಟ್ಟು ಡೆಪಾಸಿಟ್ 5,050 ಕೋಟಿ ರೂ ತಲುಪಿತ್ತು. 2016-17ನೇ ಸಾಲಿನಲ್ಲಿ ಈ ಬ್ಯಾಂಕ್ನ ನಿವ್ವಳ ಲಾಭ 14.31 ಕೋಟಿ ರೂ.ಗಳಾಗಿದ್ದವು ಎಂಬುದನ್ನು ಆರ್ಟಿಐ ಮಾಹಿತಿ ಸ್ಪಷ್ಟವಾಗಿ ಹೇಳಿದೆ.
ಸುದ್ದಿ ನಿಜ ಎಂದ ಐಎಎನ್ಎಸ್
ಐಎಎನ್ಎಸ್ ತಾನು ಈ ಸುದ್ದಿ ಪ್ರಕಟಿಸಿರುವುದಾಗಿ ಒಪ್ಪಿಕೊಂಡಿದೆ. ಬೂಮ್ ಸುದ್ದಿತಾಣವು ಐಎಎನ್ಎಸ್ ಸುದ್ದಿಸಂಸ್ಥೆ ಮುಖ್ಯಸ್ಥ ಹರ್ದೇವ್ ಸನೊತ್ರಾ ಅವರನ್ನು ಸಂಪರ್ಕಿಸಿದಾಗ, ಇಲ್ಲಿ ಮುಚ್ಚಿಡುವುದು ಏನೂ ಇಲ್ಲ. ಆರ್ಟಿಐ ಅರ್ಜಿಯೊಂದಕ್ಕೆ ಸಿಕ್ಕಿರುವ ಮಾಹಿತಿಯನ್ನು ನಾವು ಸುದ್ದಿ ರೂಪದಲ್ಲಿ ಕೊಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದ್ದಾರೆ.

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ


