ದಿನದ ಸುದ್ದಿ
ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!
ಸುದ್ದಿದಿನ ಡೆಸ್ಕ್: ನೋಟು ರದ್ದತಿ ಸಮಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ನ ಬ್ಯಾಂಕ್ವೊಂದರಲ್ಲಿಅತಿ ಹೆಚ್ಚು ನೋಟುಗಳು ಹೊಸ ನೋಟುಗಳಿಗೆ ಬದಲಾವಣೆಯಾಗಿರುವ ಸುದ್ದಿಯನ್ನು ದೇಶದ ಪ್ರಮುಖ ಪತ್ರಿಕೆಗಳ ವೆಬ್ ಪೋರ್ಟಲ್ಗಳು ಈಗ ಅದನ್ನು ಡಿಲಿಟ್ ಮಾಡಿವೆ.
ಈ ಕುರಿತು ಬೂಮ್ ನ್ಯೂಸ್ ಪೋರ್ಟಲ್ ವರದಿಮಾಡಿದ್ದು, ಈಗ ಆ ಪೋಸ್ಟ್ ವೈರಲ್ ಆಗುತ್ತಿದೆ.
ಫಸ್ಟ್ ಪೋಸ್ಟ್, ನ್ಯೂಸ್ 18 ಡಾಟ್ ಕಾಂ, ಟೈಮ್ಸ್ ನೌ ಹಾಗೂ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣಗಳು ಶಾ ಅವರ ಹೆಸರು ತಳಕುಹಾಕಿಕೊಂಡಿರುವ ಈ ಸುದ್ದಿಯನ್ನು ಡಿಲಿಟ್ ಮಾಡಿದ್ದು, ಎಕನಾಮಿಕ್ ಟೈಮ್ಸ್ ಸುದ್ದಿ ತಾಣವು ಒಂದು ಹೆಜ್ಜೆ ಮುಂದೆ ಹೋಗಿ ಅಮಿತ್ ಶಾ ಹೆಸರನ್ನು ಮಾತ್ರ ತೆಗೆದುಹಾಕಿದೆ.
ಇಟಿ ವೆಬ್ ಪೋರ್ಟಲ್ನಲ್ಲಿರುವ ಈ ಸುದ್ದಿಯಲ್ಲಿರುವ ರೀಡ್ ಮೋರ್ ಬಟನ್ಅನ್ನು ಕ್ಲಿಕ್ ಮಾಡಿದಾಗ ಅಲ್ಲಿ ಬಿಜೆಪಿ ನಾಯಕ ಎಂದಷ್ಟೇ ಉಲ್ಲೇಖವಾಗಿದೆ. ಮೊದಲ ಪ್ಯಾರಾದಲ್ಲಿ ದಾಖಲಾಗಿದ್ದ ಅಮಿತ್ ಶಾ ಅವರ ಹೆಸರನ್ನು ಉದ್ದೇಶಪೂರ್ವಕವಾಗಿಯೇ ಡಿಲಿಟ್ ಮಾಡಲಾಗಿದೆ ಎಂಬುದು ಇದರ ಅರ್ಥ.
ಈ ಕುರಿತು ಹೆಚ್ಚಿನ ಮಾಹಿತಿಪಡೆಯುವ ಸಲುವಾಗಿ ಬೂಮ್ ಪತ್ರಿಕೆ ವರದಿಗಾರ ಇಟಿ ವೆಬ್ ತಾಣದ ಮುಖ್ಯಸ್ಥ ದೀಪಕ್ ಅಜ್ವಾನಿ ಅವರನ್ನು ಸಂಪರ್ಕಿಸಿದ್ದು, ಇದರ ಬಗ್ಗೆ ಪ್ರತಿಕ್ರಿಯಿಸಲು ಅವರು ಒಪ್ಪಿಲ್ಲ.
ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣದಲ್ಲಿ ಜೂ.21ರಂದು ಸುದ್ದಿ ಅಪ್ಲೋಡ್ ಮಾಡಲಾಗಿದ್ದು, ನಾಲ್ಕು ಗಂಟೆಗಳ ಕಾಲ ಇದು ಆನ್ಲೈನ್ನಲ್ಲಿ ಲಭ್ಯವಿತ್ತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
“ಐಎಎನ್ಎಸ್ ಸುದ್ದಿಸಂಸ್ಥೆಯ ಸುದ್ದಿಗಳನ್ನು ಡೆಸ್ಕ್ ವಿಭಾಗದವರು ಪರಿಶೀಲಿಸಿ ಅಪ್ಲೋಡ್ ಮಾಡುತ್ತಾರೆ. ಹಿರಿಯರ ಸೂಚನೆ ಮೇರೆಗಷ್ಟೆ ಸುದ್ದಿಗಳನ್ನು ಡಿಲಿಟ್ ಮಾಡಲಾಗುತ್ತದೆ,’ ಎಂದು ಎಕ್ಸ್ಪ್ರೆಸ್ ಮೂಲಗಳು ಬೂಮ್ ಸುದ್ದಿತಾಣಕ್ಕೆ ತಿಳಿಸಿದ್ದಾರೆ.
ಬೂಮ್ ಸುದ್ದಿ ತಾಣವು ಎಕ್ಸ್ಪ್ರೆಸ್ ಸುದ್ದಿ ತಾಣದ ಮುಖ್ಯಸ್ಥ ಸುರೇಶ್ ಇವಾತುರಿ ಅವರನ್ನು ಸಂಪರ್ಕಿಸಿದ್ದು ಈ ಕುರಿತು ಸದ್ಯದಲ್ಲೇ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಫಸ್ಟ್ಪೋಸ್ಟ್ ಪ್ರಕಟಿಸಿದ್ದ ಸುದ್ದಿಯ ಆರ್ಕೈವ್ಅನ್ನು ಬೂಮ್ ತಾಣವು ಪತ್ತೆ ಮಾಡಿದ್ದು, ಈ ಸುದಿಯಲ್ಲಿ ಅಮಿತ್ ಶಾ ಅವರ ಹೆಸರಿರುವುದು ಪಕ್ಕಾ ಆಗಿದೆ. ಆದರೆ, ದೇಶದ ಬಹುತೇಕ ವಾಹಿನಿಗಳು, ಪತ್ರಿಕೆಗಳು ಈ ಸುದ್ದಿಯನ್ನು ಏಕೆ ಪ್ರಕಟಿಸಿಲ್ಲ. ಹಾಗೂ ವೆಬ್ ತಾಣದಲ್ಲಿ ಸುದ್ದಿಯನ್ನು ಡಿಲಿಟ್ ಮಾಡಿದ್ದು ಏಕೆ ಎಂಬುದು ಈವರೆಗೂ ಗೊತ್ತಾಗಿಲ್ಲ.
ಸುದ್ದಿಯಲ್ಲಿ ಏನಿತ್ತು?
ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ ಸಹಕಾರ ಬ್ಯಾಂಕ್ನಲ್ಲಿ 745.59 ಕೋಟಿ ರೂ. ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಟ್ಟಿರುವುದು ಆರ್ಟಿಐ ಅರ್ಜಿ ಮೂಲಕ ಬೆಳಕಿಗೆ ಬಂದಿರುವುದು ಫಸ್ಟ್ಪೋಸ್ಟ್ನ ಆರ್ಕೈವ್ ವರ್ಷನ್ನಲ್ಲಿಸಿಕ್ಕಿದೆ.
ಈ ಕುರಿತು ಐಎಎನ್ಎಸ್ ಸುದ್ದಿಸಂಸ್ಥೆಯು ಜೂ.21ರಂದು ಸುದ್ದಿಯೊಂದನ್ನು ಪ್ರಕಟಿಸಿದೆ ಮನೋರಂಜನ್ ರೈ ಎಂಬುವವರು ಸಲ್ಲಿಸಿದ್ದ ಆರ್ಟಿಐ ಅರ್ಜಿಯೊಂದರಿಂದ ಈ ಮಾಹಿತಿ ಸ್ಪಷ್ಟವಾಗಿದೆ.
ಸಹಕಾರಿ ಬ್ಯಾಂಕ್ನ ವೆಬ್ ತಾಣದಲ್ಲಿರುವ ಮಾಹಿತಿಗಳ ಪ್ರಕಾರ ಹಲವು ವರ್ಷಗಳಿಂದ ಈ ಬ್ಯಾಂಕ್ನ ನಿರ್ದೇಶಕರಾಗಿ ಅಮಿತ್ ಶಾ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 31 , 2017ರ ಹೊತ್ತಿಗೆ ಈ ಬ್ಯಾಂಕ್ನ ಒಟ್ಟು ಡೆಪಾಸಿಟ್ 5,050 ಕೋಟಿ ರೂ ತಲುಪಿತ್ತು. 2016-17ನೇ ಸಾಲಿನಲ್ಲಿ ಈ ಬ್ಯಾಂಕ್ನ ನಿವ್ವಳ ಲಾಭ 14.31 ಕೋಟಿ ರೂ.ಗಳಾಗಿದ್ದವು ಎಂಬುದನ್ನು ಆರ್ಟಿಐ ಮಾಹಿತಿ ಸ್ಪಷ್ಟವಾಗಿ ಹೇಳಿದೆ.
ಸುದ್ದಿ ನಿಜ ಎಂದ ಐಎಎನ್ಎಸ್
ಐಎಎನ್ಎಸ್ ತಾನು ಈ ಸುದ್ದಿ ಪ್ರಕಟಿಸಿರುವುದಾಗಿ ಒಪ್ಪಿಕೊಂಡಿದೆ. ಬೂಮ್ ಸುದ್ದಿತಾಣವು ಐಎಎನ್ಎಸ್ ಸುದ್ದಿಸಂಸ್ಥೆ ಮುಖ್ಯಸ್ಥ ಹರ್ದೇವ್ ಸನೊತ್ರಾ ಅವರನ್ನು ಸಂಪರ್ಕಿಸಿದಾಗ, ಇಲ್ಲಿ ಮುಚ್ಚಿಡುವುದು ಏನೂ ಇಲ್ಲ. ಆರ್ಟಿಐ ಅರ್ಜಿಯೊಂದಕ್ಕೆ ಸಿಕ್ಕಿರುವ ಮಾಹಿತಿಯನ್ನು ನಾವು ಸುದ್ದಿ ರೂಪದಲ್ಲಿ ಕೊಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.



