ದಿನದ ಸುದ್ದಿ
ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!
ಸುದ್ದಿದಿನ ಡೆಸ್ಕ್: ನೋಟು ರದ್ದತಿ ಸಮಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ನ ಬ್ಯಾಂಕ್ವೊಂದರಲ್ಲಿಅತಿ ಹೆಚ್ಚು ನೋಟುಗಳು ಹೊಸ ನೋಟುಗಳಿಗೆ ಬದಲಾವಣೆಯಾಗಿರುವ ಸುದ್ದಿಯನ್ನು ದೇಶದ ಪ್ರಮುಖ ಪತ್ರಿಕೆಗಳ ವೆಬ್ ಪೋರ್ಟಲ್ಗಳು ಈಗ ಅದನ್ನು ಡಿಲಿಟ್ ಮಾಡಿವೆ.
ಈ ಕುರಿತು ಬೂಮ್ ನ್ಯೂಸ್ ಪೋರ್ಟಲ್ ವರದಿಮಾಡಿದ್ದು, ಈಗ ಆ ಪೋಸ್ಟ್ ವೈರಲ್ ಆಗುತ್ತಿದೆ.
ಫಸ್ಟ್ ಪೋಸ್ಟ್, ನ್ಯೂಸ್ 18 ಡಾಟ್ ಕಾಂ, ಟೈಮ್ಸ್ ನೌ ಹಾಗೂ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣಗಳು ಶಾ ಅವರ ಹೆಸರು ತಳಕುಹಾಕಿಕೊಂಡಿರುವ ಈ ಸುದ್ದಿಯನ್ನು ಡಿಲಿಟ್ ಮಾಡಿದ್ದು, ಎಕನಾಮಿಕ್ ಟೈಮ್ಸ್ ಸುದ್ದಿ ತಾಣವು ಒಂದು ಹೆಜ್ಜೆ ಮುಂದೆ ಹೋಗಿ ಅಮಿತ್ ಶಾ ಹೆಸರನ್ನು ಮಾತ್ರ ತೆಗೆದುಹಾಕಿದೆ.
ಇಟಿ ವೆಬ್ ಪೋರ್ಟಲ್ನಲ್ಲಿರುವ ಈ ಸುದ್ದಿಯಲ್ಲಿರುವ ರೀಡ್ ಮೋರ್ ಬಟನ್ಅನ್ನು ಕ್ಲಿಕ್ ಮಾಡಿದಾಗ ಅಲ್ಲಿ ಬಿಜೆಪಿ ನಾಯಕ ಎಂದಷ್ಟೇ ಉಲ್ಲೇಖವಾಗಿದೆ. ಮೊದಲ ಪ್ಯಾರಾದಲ್ಲಿ ದಾಖಲಾಗಿದ್ದ ಅಮಿತ್ ಶಾ ಅವರ ಹೆಸರನ್ನು ಉದ್ದೇಶಪೂರ್ವಕವಾಗಿಯೇ ಡಿಲಿಟ್ ಮಾಡಲಾಗಿದೆ ಎಂಬುದು ಇದರ ಅರ್ಥ.
ಈ ಕುರಿತು ಹೆಚ್ಚಿನ ಮಾಹಿತಿಪಡೆಯುವ ಸಲುವಾಗಿ ಬೂಮ್ ಪತ್ರಿಕೆ ವರದಿಗಾರ ಇಟಿ ವೆಬ್ ತಾಣದ ಮುಖ್ಯಸ್ಥ ದೀಪಕ್ ಅಜ್ವಾನಿ ಅವರನ್ನು ಸಂಪರ್ಕಿಸಿದ್ದು, ಇದರ ಬಗ್ಗೆ ಪ್ರತಿಕ್ರಿಯಿಸಲು ಅವರು ಒಪ್ಪಿಲ್ಲ.
ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣದಲ್ಲಿ ಜೂ.21ರಂದು ಸುದ್ದಿ ಅಪ್ಲೋಡ್ ಮಾಡಲಾಗಿದ್ದು, ನಾಲ್ಕು ಗಂಟೆಗಳ ಕಾಲ ಇದು ಆನ್ಲೈನ್ನಲ್ಲಿ ಲಭ್ಯವಿತ್ತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
“ಐಎಎನ್ಎಸ್ ಸುದ್ದಿಸಂಸ್ಥೆಯ ಸುದ್ದಿಗಳನ್ನು ಡೆಸ್ಕ್ ವಿಭಾಗದವರು ಪರಿಶೀಲಿಸಿ ಅಪ್ಲೋಡ್ ಮಾಡುತ್ತಾರೆ. ಹಿರಿಯರ ಸೂಚನೆ ಮೇರೆಗಷ್ಟೆ ಸುದ್ದಿಗಳನ್ನು ಡಿಲಿಟ್ ಮಾಡಲಾಗುತ್ತದೆ,’ ಎಂದು ಎಕ್ಸ್ಪ್ರೆಸ್ ಮೂಲಗಳು ಬೂಮ್ ಸುದ್ದಿತಾಣಕ್ಕೆ ತಿಳಿಸಿದ್ದಾರೆ.
ಬೂಮ್ ಸುದ್ದಿ ತಾಣವು ಎಕ್ಸ್ಪ್ರೆಸ್ ಸುದ್ದಿ ತಾಣದ ಮುಖ್ಯಸ್ಥ ಸುರೇಶ್ ಇವಾತುರಿ ಅವರನ್ನು ಸಂಪರ್ಕಿಸಿದ್ದು ಈ ಕುರಿತು ಸದ್ಯದಲ್ಲೇ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಫಸ್ಟ್ಪೋಸ್ಟ್ ಪ್ರಕಟಿಸಿದ್ದ ಸುದ್ದಿಯ ಆರ್ಕೈವ್ಅನ್ನು ಬೂಮ್ ತಾಣವು ಪತ್ತೆ ಮಾಡಿದ್ದು, ಈ ಸುದಿಯಲ್ಲಿ ಅಮಿತ್ ಶಾ ಅವರ ಹೆಸರಿರುವುದು ಪಕ್ಕಾ ಆಗಿದೆ. ಆದರೆ, ದೇಶದ ಬಹುತೇಕ ವಾಹಿನಿಗಳು, ಪತ್ರಿಕೆಗಳು ಈ ಸುದ್ದಿಯನ್ನು ಏಕೆ ಪ್ರಕಟಿಸಿಲ್ಲ. ಹಾಗೂ ವೆಬ್ ತಾಣದಲ್ಲಿ ಸುದ್ದಿಯನ್ನು ಡಿಲಿಟ್ ಮಾಡಿದ್ದು ಏಕೆ ಎಂಬುದು ಈವರೆಗೂ ಗೊತ್ತಾಗಿಲ್ಲ.
ಸುದ್ದಿಯಲ್ಲಿ ಏನಿತ್ತು?
ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ ಸಹಕಾರ ಬ್ಯಾಂಕ್ನಲ್ಲಿ 745.59 ಕೋಟಿ ರೂ. ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಟ್ಟಿರುವುದು ಆರ್ಟಿಐ ಅರ್ಜಿ ಮೂಲಕ ಬೆಳಕಿಗೆ ಬಂದಿರುವುದು ಫಸ್ಟ್ಪೋಸ್ಟ್ನ ಆರ್ಕೈವ್ ವರ್ಷನ್ನಲ್ಲಿಸಿಕ್ಕಿದೆ.
ಈ ಕುರಿತು ಐಎಎನ್ಎಸ್ ಸುದ್ದಿಸಂಸ್ಥೆಯು ಜೂ.21ರಂದು ಸುದ್ದಿಯೊಂದನ್ನು ಪ್ರಕಟಿಸಿದೆ ಮನೋರಂಜನ್ ರೈ ಎಂಬುವವರು ಸಲ್ಲಿಸಿದ್ದ ಆರ್ಟಿಐ ಅರ್ಜಿಯೊಂದರಿಂದ ಈ ಮಾಹಿತಿ ಸ್ಪಷ್ಟವಾಗಿದೆ.
ಸಹಕಾರಿ ಬ್ಯಾಂಕ್ನ ವೆಬ್ ತಾಣದಲ್ಲಿರುವ ಮಾಹಿತಿಗಳ ಪ್ರಕಾರ ಹಲವು ವರ್ಷಗಳಿಂದ ಈ ಬ್ಯಾಂಕ್ನ ನಿರ್ದೇಶಕರಾಗಿ ಅಮಿತ್ ಶಾ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 31 , 2017ರ ಹೊತ್ತಿಗೆ ಈ ಬ್ಯಾಂಕ್ನ ಒಟ್ಟು ಡೆಪಾಸಿಟ್ 5,050 ಕೋಟಿ ರೂ ತಲುಪಿತ್ತು. 2016-17ನೇ ಸಾಲಿನಲ್ಲಿ ಈ ಬ್ಯಾಂಕ್ನ ನಿವ್ವಳ ಲಾಭ 14.31 ಕೋಟಿ ರೂ.ಗಳಾಗಿದ್ದವು ಎಂಬುದನ್ನು ಆರ್ಟಿಐ ಮಾಹಿತಿ ಸ್ಪಷ್ಟವಾಗಿ ಹೇಳಿದೆ.
ಸುದ್ದಿ ನಿಜ ಎಂದ ಐಎಎನ್ಎಸ್
ಐಎಎನ್ಎಸ್ ತಾನು ಈ ಸುದ್ದಿ ಪ್ರಕಟಿಸಿರುವುದಾಗಿ ಒಪ್ಪಿಕೊಂಡಿದೆ. ಬೂಮ್ ಸುದ್ದಿತಾಣವು ಐಎಎನ್ಎಸ್ ಸುದ್ದಿಸಂಸ್ಥೆ ಮುಖ್ಯಸ್ಥ ಹರ್ದೇವ್ ಸನೊತ್ರಾ ಅವರನ್ನು ಸಂಪರ್ಕಿಸಿದಾಗ, ಇಲ್ಲಿ ಮುಚ್ಚಿಡುವುದು ಏನೂ ಇಲ್ಲ. ಆರ್ಟಿಐ ಅರ್ಜಿಯೊಂದಕ್ಕೆ ಸಿಕ್ಕಿರುವ ಮಾಹಿತಿಯನ್ನು ನಾವು ಸುದ್ದಿ ರೂಪದಲ್ಲಿ ಕೊಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದ್ದಾರೆ.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!