ದಿನದ ಸುದ್ದಿ
ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!
ಸುದ್ದಿದಿನ ಡೆಸ್ಕ್: ನೋಟು ರದ್ದತಿ ಸಮಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ನ ಬ್ಯಾಂಕ್ವೊಂದರಲ್ಲಿಅತಿ ಹೆಚ್ಚು ನೋಟುಗಳು ಹೊಸ ನೋಟುಗಳಿಗೆ ಬದಲಾವಣೆಯಾಗಿರುವ ಸುದ್ದಿಯನ್ನು ದೇಶದ ಪ್ರಮುಖ ಪತ್ರಿಕೆಗಳ ವೆಬ್ ಪೋರ್ಟಲ್ಗಳು ಈಗ ಅದನ್ನು ಡಿಲಿಟ್ ಮಾಡಿವೆ.
ಈ ಕುರಿತು ಬೂಮ್ ನ್ಯೂಸ್ ಪೋರ್ಟಲ್ ವರದಿಮಾಡಿದ್ದು, ಈಗ ಆ ಪೋಸ್ಟ್ ವೈರಲ್ ಆಗುತ್ತಿದೆ.
ಫಸ್ಟ್ ಪೋಸ್ಟ್, ನ್ಯೂಸ್ 18 ಡಾಟ್ ಕಾಂ, ಟೈಮ್ಸ್ ನೌ ಹಾಗೂ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣಗಳು ಶಾ ಅವರ ಹೆಸರು ತಳಕುಹಾಕಿಕೊಂಡಿರುವ ಈ ಸುದ್ದಿಯನ್ನು ಡಿಲಿಟ್ ಮಾಡಿದ್ದು, ಎಕನಾಮಿಕ್ ಟೈಮ್ಸ್ ಸುದ್ದಿ ತಾಣವು ಒಂದು ಹೆಜ್ಜೆ ಮುಂದೆ ಹೋಗಿ ಅಮಿತ್ ಶಾ ಹೆಸರನ್ನು ಮಾತ್ರ ತೆಗೆದುಹಾಕಿದೆ.
ಇಟಿ ವೆಬ್ ಪೋರ್ಟಲ್ನಲ್ಲಿರುವ ಈ ಸುದ್ದಿಯಲ್ಲಿರುವ ರೀಡ್ ಮೋರ್ ಬಟನ್ಅನ್ನು ಕ್ಲಿಕ್ ಮಾಡಿದಾಗ ಅಲ್ಲಿ ಬಿಜೆಪಿ ನಾಯಕ ಎಂದಷ್ಟೇ ಉಲ್ಲೇಖವಾಗಿದೆ. ಮೊದಲ ಪ್ಯಾರಾದಲ್ಲಿ ದಾಖಲಾಗಿದ್ದ ಅಮಿತ್ ಶಾ ಅವರ ಹೆಸರನ್ನು ಉದ್ದೇಶಪೂರ್ವಕವಾಗಿಯೇ ಡಿಲಿಟ್ ಮಾಡಲಾಗಿದೆ ಎಂಬುದು ಇದರ ಅರ್ಥ.
ಈ ಕುರಿತು ಹೆಚ್ಚಿನ ಮಾಹಿತಿಪಡೆಯುವ ಸಲುವಾಗಿ ಬೂಮ್ ಪತ್ರಿಕೆ ವರದಿಗಾರ ಇಟಿ ವೆಬ್ ತಾಣದ ಮುಖ್ಯಸ್ಥ ದೀಪಕ್ ಅಜ್ವಾನಿ ಅವರನ್ನು ಸಂಪರ್ಕಿಸಿದ್ದು, ಇದರ ಬಗ್ಗೆ ಪ್ರತಿಕ್ರಿಯಿಸಲು ಅವರು ಒಪ್ಪಿಲ್ಲ.
ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣದಲ್ಲಿ ಜೂ.21ರಂದು ಸುದ್ದಿ ಅಪ್ಲೋಡ್ ಮಾಡಲಾಗಿದ್ದು, ನಾಲ್ಕು ಗಂಟೆಗಳ ಕಾಲ ಇದು ಆನ್ಲೈನ್ನಲ್ಲಿ ಲಭ್ಯವಿತ್ತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
“ಐಎಎನ್ಎಸ್ ಸುದ್ದಿಸಂಸ್ಥೆಯ ಸುದ್ದಿಗಳನ್ನು ಡೆಸ್ಕ್ ವಿಭಾಗದವರು ಪರಿಶೀಲಿಸಿ ಅಪ್ಲೋಡ್ ಮಾಡುತ್ತಾರೆ. ಹಿರಿಯರ ಸೂಚನೆ ಮೇರೆಗಷ್ಟೆ ಸುದ್ದಿಗಳನ್ನು ಡಿಲಿಟ್ ಮಾಡಲಾಗುತ್ತದೆ,’ ಎಂದು ಎಕ್ಸ್ಪ್ರೆಸ್ ಮೂಲಗಳು ಬೂಮ್ ಸುದ್ದಿತಾಣಕ್ಕೆ ತಿಳಿಸಿದ್ದಾರೆ.
ಬೂಮ್ ಸುದ್ದಿ ತಾಣವು ಎಕ್ಸ್ಪ್ರೆಸ್ ಸುದ್ದಿ ತಾಣದ ಮುಖ್ಯಸ್ಥ ಸುರೇಶ್ ಇವಾತುರಿ ಅವರನ್ನು ಸಂಪರ್ಕಿಸಿದ್ದು ಈ ಕುರಿತು ಸದ್ಯದಲ್ಲೇ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಫಸ್ಟ್ಪೋಸ್ಟ್ ಪ್ರಕಟಿಸಿದ್ದ ಸುದ್ದಿಯ ಆರ್ಕೈವ್ಅನ್ನು ಬೂಮ್ ತಾಣವು ಪತ್ತೆ ಮಾಡಿದ್ದು, ಈ ಸುದಿಯಲ್ಲಿ ಅಮಿತ್ ಶಾ ಅವರ ಹೆಸರಿರುವುದು ಪಕ್ಕಾ ಆಗಿದೆ. ಆದರೆ, ದೇಶದ ಬಹುತೇಕ ವಾಹಿನಿಗಳು, ಪತ್ರಿಕೆಗಳು ಈ ಸುದ್ದಿಯನ್ನು ಏಕೆ ಪ್ರಕಟಿಸಿಲ್ಲ. ಹಾಗೂ ವೆಬ್ ತಾಣದಲ್ಲಿ ಸುದ್ದಿಯನ್ನು ಡಿಲಿಟ್ ಮಾಡಿದ್ದು ಏಕೆ ಎಂಬುದು ಈವರೆಗೂ ಗೊತ್ತಾಗಿಲ್ಲ.
ಸುದ್ದಿಯಲ್ಲಿ ಏನಿತ್ತು?
ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ ಸಹಕಾರ ಬ್ಯಾಂಕ್ನಲ್ಲಿ 745.59 ಕೋಟಿ ರೂ. ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಟ್ಟಿರುವುದು ಆರ್ಟಿಐ ಅರ್ಜಿ ಮೂಲಕ ಬೆಳಕಿಗೆ ಬಂದಿರುವುದು ಫಸ್ಟ್ಪೋಸ್ಟ್ನ ಆರ್ಕೈವ್ ವರ್ಷನ್ನಲ್ಲಿಸಿಕ್ಕಿದೆ.
ಈ ಕುರಿತು ಐಎಎನ್ಎಸ್ ಸುದ್ದಿಸಂಸ್ಥೆಯು ಜೂ.21ರಂದು ಸುದ್ದಿಯೊಂದನ್ನು ಪ್ರಕಟಿಸಿದೆ ಮನೋರಂಜನ್ ರೈ ಎಂಬುವವರು ಸಲ್ಲಿಸಿದ್ದ ಆರ್ಟಿಐ ಅರ್ಜಿಯೊಂದರಿಂದ ಈ ಮಾಹಿತಿ ಸ್ಪಷ್ಟವಾಗಿದೆ.
ಸಹಕಾರಿ ಬ್ಯಾಂಕ್ನ ವೆಬ್ ತಾಣದಲ್ಲಿರುವ ಮಾಹಿತಿಗಳ ಪ್ರಕಾರ ಹಲವು ವರ್ಷಗಳಿಂದ ಈ ಬ್ಯಾಂಕ್ನ ನಿರ್ದೇಶಕರಾಗಿ ಅಮಿತ್ ಶಾ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 31 , 2017ರ ಹೊತ್ತಿಗೆ ಈ ಬ್ಯಾಂಕ್ನ ಒಟ್ಟು ಡೆಪಾಸಿಟ್ 5,050 ಕೋಟಿ ರೂ ತಲುಪಿತ್ತು. 2016-17ನೇ ಸಾಲಿನಲ್ಲಿ ಈ ಬ್ಯಾಂಕ್ನ ನಿವ್ವಳ ಲಾಭ 14.31 ಕೋಟಿ ರೂ.ಗಳಾಗಿದ್ದವು ಎಂಬುದನ್ನು ಆರ್ಟಿಐ ಮಾಹಿತಿ ಸ್ಪಷ್ಟವಾಗಿ ಹೇಳಿದೆ.
ಸುದ್ದಿ ನಿಜ ಎಂದ ಐಎಎನ್ಎಸ್
ಐಎಎನ್ಎಸ್ ತಾನು ಈ ಸುದ್ದಿ ಪ್ರಕಟಿಸಿರುವುದಾಗಿ ಒಪ್ಪಿಕೊಂಡಿದೆ. ಬೂಮ್ ಸುದ್ದಿತಾಣವು ಐಎಎನ್ಎಸ್ ಸುದ್ದಿಸಂಸ್ಥೆ ಮುಖ್ಯಸ್ಥ ಹರ್ದೇವ್ ಸನೊತ್ರಾ ಅವರನ್ನು ಸಂಪರ್ಕಿಸಿದಾಗ, ಇಲ್ಲಿ ಮುಚ್ಚಿಡುವುದು ಏನೂ ಇಲ್ಲ. ಆರ್ಟಿಐ ಅರ್ಜಿಯೊಂದಕ್ಕೆ ಸಿಕ್ಕಿರುವ ಮಾಹಿತಿಯನ್ನು ನಾವು ಸುದ್ದಿ ರೂಪದಲ್ಲಿ ಕೊಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದ್ದಾರೆ.

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ


