Connect with us

ದಿನದ ಸುದ್ದಿ

ಪ್ಲೀಸ್ ಸಿದ್ದರಾಮೋತ್ಸವ ಅನ್ನಬೇಡಿ : ಸಿದ್ದರಾಮಯ್ಯರ 75 ನೇ ವರ್ಷದ ಅಮೃತ ಮಹೋತ್ಸವ ಇದು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಆಗಸ್ಟ್ 3ರಂದು ಏರ್ಪಡಿಸಿರುವುದು ಸಿದ್ದರಾಮೋತ್ಸವ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ 75 ನೇ ಜನುಮದಿನದ ಅಮೃತ ಮಹೋತ್ಸವ. ನಾವು ಯಾರೂ ಸಿದ್ದರಾಮೋತ್ಸವವೆಂದು ಎಲ್ಲಿಯೂ ಹೇಳಿಲ್ಲ. ಇಂಥ ಐತಿಹಾಸಿಕ ಸಮಾರಂಭದ ಬಗ್ಗೆ ಏನೆನೆಲ್ಲಾ ಬರುತ್ತಿದೆ. ಇದು ಸತ್ಯಕ್ಕೆ ದೂರವಾದದ್ದು. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಗಿದ್ದು, ಅಮೃತ ಮಹೋತ್ಸವದ ಸಮಯ. ಸಿದ್ದರಾಮಯ್ಯರು ಈ ನಾಡು ಕಂಡ ಶ್ರೇಷ್ಠ ರಾಜಕಾರಣಿ. ಇಲ್ಲಸಲ್ಲದ ವದಂತಿ ಹಬ್ಬಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.

ನಗರದ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ನಾಯಕರಾದ ಹೆಚ್. ಸಿ. ಮಹಾದೇವಪ್ಪ, ಬಸವರಾಜ ರಾಯರೆಡ್ಡಿ, ಬಿ. ಎಲ್. ಶಂಕರ್, ಕೆ. ಎನ್. ರಾಜಣ್ಣ, ಎಸ್. ಎಸ್.
ಮಲ್ಲಿಕಾರ್ಜುನ್, ಹನುಮಂತರಾಯ ಸೇರಿದಂತೆ ಬಹುತೇಕ ನಾಯಕರು ಇದು ಪಕ್ಷದ ವತಿಯಿಂದ ಏರ್ಪಡಿಸಿರುವ ಕಾರ್ಯಕ್ರಮ ಅಲ್ವೇ ಅಲ್ಲ. ಆಗಸ್ಟ್ 3 ರಂದು ದಾವಣಗೆರೆ – ಹರಿಹರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ
ಶಾಮನೂರು ಶಿವಶಂಕರಪ್ಪರ ಒಡೆತನದ ಸುಮಾರು 50 ಎಕರೆ ಜಾಗವಾದ ಶಾಮನೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ಘಾಟನೆ
ನೆರವೇರಿಸಲಿದ್ದಾರೆ. ಸುಮಾರು ಆರರಿಂದ ಏಳು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಬಿ. ಎಲ್. ಶಂಕರ್ ಮಾತನಾಡಿ ಸಿದ್ದರಾಮಯ್ಯರ ಹುಟ್ಟು ಹಬ್ಬ ನೆಪವಾಗಿದ್ದರೂ, ಕಾಂಗ್ರೆಸ್ ಪಕ್ಷವು ದೇಶಕ್ಕೆ ನೀಡಿರುವ ಕೊಡುಗೆ, ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು ನೀಡಿರುವ ಕೊಡುಗೆಗೆಳು, ಜಾತ್ಯಾತೀತತೆಗೆ ಬಂದ
ಅಪಾಯ, ಸಂವಿಧಾನ ಅಡಿ ಸ್ವಾಯತ್ತ ಸಂಸ್ಥೆಗಳ ದುರುಪಯೋಗ, ಸಂವಿಧಾನಕ್ಕೆ ಆಗುತ್ತಿರುವ ಅಪಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ಬೃಹತ್ ಸಮಾವೇಶದಲ್ಲಿ ಚಿಂಥನ ಮಂಥನ ನಡೆಯಲಿದೆ. ಪಕ್ಷದ ಬಾವುಟ ಇರುವುದಿಲ್ಲ. ಆದ್ರೆ, ಶೇಕಡಾ 90 ರಷ್ಟು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಬರಲಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೊತೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಯಾವುದೇ
ಗೊಂದಲ ಇಲ್ಲ. ಇನ್ನೆರಡು ದಿನಗಳಲ್ಲಿ ನಾವೆಲ್ಲರೂ ಸೇರಿ ಶಿವಕುಮಾರ್ ಅವರಿಗೆ ಆಹ್ವಾನ ನೀಡುತ್ತೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯರ 75 ನೇ ಅಮೃತ ಮಹೋತ್ಸವ ಬೇರೆ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವುದಿಲ್ಲ. ವ್ಯಕ್ತಿ ವೈಭವೀಕರಣ, ವಿಜೃಂಭಣೆ ಮಾಡುವ ಉದ್ದೇಶ ಇಲ್ಲ. ಸುಮಾರು 40 ವರ್ಷಗಳ ಕಾಲ ರಾಜಕಾರಣದಲ್ಲಿ
ಅನುಭವ ಹೊಂದಿರುವ ಸಿದ್ದರಾಮಯ್ಯರು ನೀಡಿರುವ ಕೊಡುಗೆ ಅಪಾರ. ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಜನಪರ ಕಾರ್ಯಕ್ರಮಗಳು, ಸಾಧನೆಗಳು, ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ
ವರ್ಗದವರಿಗೆ ನ್ಯಾಯ ನೀಡಿದ ಶ್ರೇಯ ಸಿದ್ದರಾಮಯ್ಯರಿಗೆ ಸಲ್ಲುತ್ತದೆ ಎಂದು ಹೇಳಿದರು.

ಇನ್ನು ಸಮಿತಿಯ ಅಧ್ಯಕ್ಷ ಕೆ. ಎನ್. ರಾಜಣ್ಣ ಮಾತನಾಡಿ, ಸಿದ್ದರಾಮಯ್ಯರು ಎಂದಿಗೂ ಅದ್ಧೂರಿಯಾಗಿ ಜನುಮದಿನ ಆಚರಿಸಿಕೊಂಡವರಲ್ಲ. ಶುಭ ಸಂದರ್ಭದಲ್ಲಿ ಪಕ್ಷದ ಯಶಸ್ಸು, ಅವರ ಯಶಸ್ಸಿಗಾಗಿ ಕಾರ್ಯಕ್ರಮ
ಮಾಡುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲಾ, ಕೆ. ಸಿ. ವೇಣುಗೋಪಾಲ್, ಹರಿಪ್ರಸಾದ್ ಅವರು ಭಾಗವಹಿಸಲಿದ್ದಾರೆ ಎಂದು
ಹೇಳಿದರು.

ಜುಲೈ 13 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕಿಂಗ್ಸ್ ಕೋರ್ಟ್ ನಲ್ಲಿ ಸಮಿತಿಯ ಗೌರವಾಧ್ಯಕ್ಷ ಆರ್. ವಿ. ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸಭೆ ಕರೆದಿದ್ದೇವೆ. ಈ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿ ನಿರ್ಧಾರಕ್ಕೆ ಬರುತ್ತೇವೆ. ರಾಜ್ಯದ ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರನ್ನು ಆಹ್ವಾನ ಮಾಡಿದ್ದೇವೆ. ಈ ಸಭೆಯಲ್ಲಿ ಸಿದ್ದರಾಮಯ್ಯ, ಬಿ. ಕೆ. ಹರಿಪ್ರಸಾದ್, ಶಿವಕುಮಾರ್ ಸೇರಿದಂತೆ ಎಲ್ಲರೂ ಉಪಸ್ಥಿತರಿರಲಿದ್ದಾರೆ. ಯಶಸ್ಸಿಗೆ ಮತ್ತು ಯಾವ ರೀತಿ ಇರಬೇಕು ಎಂಬ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ಮಾಡುತ್ತಿದ್ದೇವೆ. ಸಿದ್ದರಾಮೋತ್ಸವ ಎಂಬುದು ಮಾಧ್ಯಮದ, ಇನ್ನೊಬ್ಬರು ಮಾಡಿರುವುದು ಎಂದರು.

ಬಸವರಾಜ ರಾಯರೆಡ್ಡಿ ಮಾತನಾಡಿ, ಇದು ವ್ಯಕ್ತಿ ಪೂಜೆ ಅಲ್ಲ, ಯಾರೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದರೆ ಅದನ್ನು ಯಾರೂ ನಂಬಬಾರದು. 60 ವರ್ಷ ಆದರೆ ಷಷ್ಠಾಬ್ದಿ ಅಂತಾ ಕರೆಯುತ್ತಾರೆ. ಸಿದ್ದರಾಮಯ್ಯರ
ಆತ್ಮೀಯ ಸ್ನೇಹಿತರು, ಕಾಂಗ್ರೆಸ್ ಮುಖಂಡರು, ಅಭಿಮಾನಿಗಳು ಸೇರಿ ಮಾಡುತ್ತಿರುವ ಕಾರ್ಯಕ್ರಮ. ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಜನಪರವಾದ ನಾಯಕ. ಎಲ್ಲಾ ವರ್ಗದವರು ಅಭಿಮಾನಿಗಳಿದ್ದಾರೆ. ಕೆಲ ವರ್ಗದವರು, ಜನರು ಹುಟ್ಟುಹಬ್ಬ ಆಚರಣೆಗೆ ಮುಂದಾಗಿದ್ದರು. ಅದಕ್ಕೆ ನಾವೇ ಬೇಡ ಎಂದೆವು. ಎಲ್ಲಾ ವರ್ಗದ ಜನನಾಯಕ ಆದ ಕಾರಣ ಎಲ್ಲಾ ಸಮುದಾಯದವರೂ ಸೇರಿಕೊಂಡಿದ್ದೇವೆ. ಅಭಿಮಾನದಿಂದ ಮಾಡುತ್ತಿದ್ದೇವೆ. ಆರ್. ವಿ. ದೇಶಪಾಂಡೆ ಅವರು ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿದ್ದಾರೆ. ಮಹಾದೇವಪ್ಪ ಅವರು ಸ್ವಾಗತ ಸಮಿತಿ ಅಧ್ಯಕ್ಷ, ಕಾರ್ಯಾಧ್ಯಕ್ಷರಾಗಿ ಶಾಮನೂರು ಶಿವಶಂಕರಪ್ಪ ಅವರು ಇದ್ದಾರೆ ಎಂದು ವಿವರಿಸಿದರು.

ಹೆಚ್. ಸಿ. ಮಹಾದೇವಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಒಬ್ಬ ನಾಯಕನ ಹುಟ್ಟುಹಬ್ಬ ಆಚರಣೆ ಮಾಡಿದ ನಿದರ್ಶನ ಇಲ್ಲ. ಸಾರ್ವಜನಿಕ ಜೀವನಕ್ಕೆ ಬರುವ ಮೊದಲೇ ಯುವಜನ ಸಮಾಜವಾದಿ ಸಮಾಜದ ರಾಜ್ಯ
ಮುಖಂಡರಾಗಿ, ಸಮಾಜವಾದದ ಸಿದ್ಧಾಂತವನ್ನು ಜನರಲ್ಲಿ ಬಿತ್ತಲು ಶ್ರಮಿಸಿದರು. ಪ್ರೊ. ನಂಜುಂಡಸ್ವಾಮಿ ಅವರ ಜೊತೆ ರೈತ ಚಳವಳಿಯಲ್ಲಿ ಪಾಲ್ಗೊಂಡವರು. ಸಮಗ್ರ ಬದಲಾವಣೆಗೆ ಕರೆಕೊಟ್ಟ ಜಯಪ್ರಕಾಶ್ ನಾರಾಯಣ್ ರ
ಜೊತೆ ಸಕ್ರಿಯವಾಗಿ ಭಾಗಿಯಾದವರು. ಸಮಸಮಾಜದ ನಿರ್ಮಾಣ ಮಾಡಿ ಸಮೃದ್ಧ ಕರ್ನಾಟಕ ಕಟ್ಟಲು ಹೋರಾಡಿದವರು. ಸಾಮಾಜಿಕ ಕಾಳಜಿ ಮೂಲಕ ಎಲ್ಲರ ಜನಪ್ರಿಯ ನಾಯಕರಾದವರು ಸಿದ್ದರಾಮಯ್ಯ ಅವರು ಎಂದು ಹೇಳಿದರು.

ಎಸ್. ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಸಿದ್ದರಾಮಯ್ಯರ 75 ನೇ ವರ್ಷದ ಅಮೃತ ಮಹೋತ್ಸವದ ಯಶಸ್ಸಿಗೆ ಮಾಜಿ ಸಚಿವರು, ರಾಜ್ಯಮಟ್ಟದ ನಾಯಕರೆಲ್ಲರೂ ಸೇರಿ ಈ ಸಮಾರಂಭ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರಿಗೆ ಇಷ್ಟ ಇರಲಿಲ್ಲ. ಅವರಿಗೆ ಸಲ್ಲಬೇಕಾದ ನಮ್ಮ ಕಡೆಯ ಸಣ್ಣದಾದ ಕೆಲಸ. ಸಿಎಂ ಆದಾಗ ಮತ್ತು ಇದಕ್ಕಿಂತ ಮುಂಚೆ ಯಾವ ರೀತಿಯ ರಾಜಕೀಯ ಮಾಡಬೇಕೆಂದು ತೋರಿಸಿಕೊಟ್ಟವರು. ಎಲ್ಲಾ ವರ್ಗದವರ ಏಳಿಗೆಗೆ ಶ್ರಮಿಸಿದ ನಾಯಕ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending