Connect with us

ಬಹಿರಂಗ

ಕೇಸರಿ ಶಾಲು ಹಿಡಿದ ವಿದ್ಯಾರ್ಥಿ ಸೋದರರಿಗೆ ಒಂದು ಬಹಿರಂಗ ಪತ್ರ

Published

on

ಸಾಂದರ್ಭಿಕ ಚಿತ್ರ
  • ಹರ್ಷಕುಮಾರ್ ಕುಗ್ವೆ

ಕೇಸರಿ ಶಾಲು, ಕೇಸರಿ ಮುಂಡಾಸು ಹಾಕಿಕೊಂಡು ಮುಸ್ಲಿಂ ಹೆಣ್ಣುಮಕ್ಕಳ ‘ಹಿಜಾಬ್’ ವಿರುದ್ಧ ಬೀದಿಗೆ ಇಳಿದಿರುವ ನನ್ನ ಹಿಂದುಳಿದ ವರ್ಗಗಳ ಮತ್ತು ದಲಿತ ಸಮುದಾಯಗಳ ತಮ್ಮಂದಿರೆ, ನಿಮ್ಮೊಂದಿಗೆ ಕೆಲವು ವಿಷಯಗಳನ್ನು ಹಂಚಿಕೊಳ್ಳಬೇಕು ಎನಿಸಿ ಈ ಬಹಿರಂಗ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಎರಡು ನಿಮಿಷ ಸಮಾಧಾನದಿಂದ ಓದಿ. ನಂತರ ಆಲೋಚಿಸಿ, ತೀರ್ಮಾನಕ್ಕೆ ಬನ್ನಿ. ನಿಮ್ಮೆಲ್ಲರ ಮೇಲಿನ ಪ್ರೀತಿ, ಕಾಳಜಿಯಿಂದ ನಿಮ್ಮ ಒಬ್ಬ ಅಣ್ಣನಾಗಿ ನಾನು ಬರೆಯುತ್ತಿರುವ ಪತ್ರ.

ನೀವು ಯಾರದೋ ಮಾತು ಕೇಳಿಯೋ ಅಥವಾ ಮೀಡಿಯಾಗಳಲ್ಲಿ ಬಂದ ಸುದ್ದಿಗಳನ್ನು ನೋಡಿಯೋ ‘ಹಿಜಾಬ್ ವಿರುದ್ಧ” ಬೀದಿಗೆ ಇಳಿದಿದ್ದೀರಿ. ಮುಸ್ಲಿಂ ಹೆಣ್ಣುಮಕ್ಕಳು ಯೂನಿಫಾರಂ ಧರಿಸಿಕೊಂಡು ತಮ್ಮ ವೇಲ್ಗಳನ್ನು ಹಿಜಾಬ್ ಆಗಿ ತಲೆಗೆ ಸುತ್ತಿಕೊಂಡು ತರಗತಿಗಳಲ್ಲಿ ಕುಳಿತುಕೊಳ್ಳುವುದು ಸರಿಯೋ ತಪ್ಪೋ ಅಥವಾ ಅದಕ್ಕೆ ಅವಕಾಶ ಇದೆಯೇ ಇಲ್ಲವೇ ಎಂದು ನಂತರ ನೋಡೋಣ. ಈಗ ನಿಮ್ಮ ಜೀವನದ ಬಗ್ಗೆ ಕೆಲವು ಮುಖ್ಯ ವಿಷಯ ಹೇಳಬೇಕಿದೆ.

ನಿಮ್ಮಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ನಿಮ್ಮ ಕುಟುಂಬದಲ್ಲಿ ಶಿಕ್ಷಣ ಪಡೆಯುತ್ತಿರುವ ಮೊದಲ ತಲೆಮಾರಿನವರು. ಬಹುಶಃ ನಿಮ್ಮ ಅಪ್ಪನಾಗಲೀ ಅವ್ವನಾಗಲೀ ಕಾಲೇಜು ಮೆಟ್ಟಿಲು ಹತ್ತಿರಲಿಕ್ಕಿಲ್ಲ. ಅವರು ಹೊಲಗಳಲ್ಲೋ, ಫ್ಯಾಕ್ಟರಿಗಳಲ್ಲೋ ದುಡಿದು ದಣಿದು ನಿಮ್ಮ ಬಗ್ಗೆ ಅಪಾರ ಕನಸು ಕಟ್ಟಿಕೊಂಡು ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ನಿಮ್ಮನ್ನು ಶಾಲೇ ಕಾಲೇಜು ಓದಲು ಕಳಿಸಿದ್ದಾರೆ ಎಂದು ನಾನು ಬಲ್ಲೆ. ನೀವು ಚನ್ನಾಗಿ ಓದಿ ಒಳ್ಳೆಯ ಅಂಕ ಗಳಿಸಿ, ಮುಂದೆ ಉದ್ಯೋಗಗಳನ್ನು ಪಡೆಯಲು ಸಾಕಷ್ಟು ಕಷ್ಟ ಪಡಬೇಕಾಗಿದೆ. ಉದ್ಯೋಗಗಳೇ ಗಗನ ಕುಸುಮವಾಗಿರುವ ಈ ದಿನಗಳಲ್ಲಿ ಒಂದು ಉದ್ಯೋಗ ಪಡೆದು ಜೀವನ ಕಟ್ಟಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ.

ಸ್ವಲ್ಪ ಯೋಚಿಸಿ, ನಿಮ್ಮ ತಂದೆ ತಾಯಿಗಳಿಗೆ ಕಳೆದ 20-30 ವರ್ಷಗಳ ಹಿಂದೆ ಈ ಅವಕಾಶಗಳೂ ಇರಲಿಲ್ಲ. ಯಾಕೆಂದರೆ ಅವರ ತಂದೆ ತಾಯಿಗಳು ಮತ್ತು ಅಜ್ಜ ಅಜ್ಜಿಯಂದಿರು ಯಾರದೋ ದೊಡ್ಡ ಜಮೀನುದಾರರ ಮನೆಗಳಲ್ಲಿ ಗೇಣಿದಾರರಾಗಿಯೋ ಇಲ್ಲವೇ ಬಿಟ್ಟಿ ಚಾಕರಿ ಮಾಡಿಕೊಂಡೋ ಕಾಲ ಕಳೆಯುವ ಸ್ಥಿತಿ ಇತ್ತು.

ಆದರೆ ನಮ್ಮ ದೇಶದ ಸಂವಿಧಾನ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಮತ್ತು ಸಾಮಾಜಿಕ ನ್ಯಾಯಗಳನ್ನು ಹೇಳಿದ ಕಾರಣದಿಂದ ಗೇಣಿದಾರರಾಗಿದ್ದ ನಮ್ಮ ಹೀರೀಕರು ಜಮೀನಿಗೆ ಒಡೆಯರಾದರು ಮತ್ತು ಸಂವಿಧಾನದ ಮೂಲಕ ಬಂದ OBC, SC/ST ಮೀಸಲಾತಿಗಳ ಕಾರಣದಿಂದ ಹಿಂದುಳಿದ ಜಾತಿಗಳ ಮತ್ತು ದಲಿತ ಸಮುದಾಯಗಳ ವಿದ್ಯಾವಂತರಿಗೆ ನೌಕರಿಗಳು ಸಿಕ್ಕಿದವು. ನನ್ನ ಮಾತು ನಿಜವೋ ಸುಳ್ಳೋ ಎಂದು ನಿಮ್ಮ ಕುಟುಂಬದ ಹಿರಿಯರನ್ನೇ ಕೇಳಿ ನೋಡಿ. ನಿಮಗೇ ತಿಳಿಯುತ್ತದೆ.

ಸೋದರರೆ ಈಗ ನಿಮ್ಮ ಎದುರಿಗೆ ಇರುವ ಜೀವನದ ಸವಾಲುಗಳು ಎಷ್ಟು ಕಷ್ಟದವು ಎಂದು ಯೋಚಿಸಿ. ಒಂದು ಕಡೆ ಸರ್ಕಾರಗಳು ಹೆಚ್ಚು ನೌಕರಿಗಳನ್ನು ಒದಗಿಸುತ್ತಿಲ್ಲ. 100 ಉದ್ಯೋಗ ನೇಮಕಾತಿಗೆ ಸರ್ಕಾರ ಕಾಲ್ಫಾರ್ ಮಾಡಿದರೆ 1 ಲಕ್ಷ ಜನರು ಅರ್ಜಿ ಸಲ್ಲಿಸುತ್ತಾರೆ. ವಿಪರೀತ ಸ್ಪರ್ಧೆ. ಮತ್ತೆ ಅದರಲ್ಲಿ ಒಳ್ಳೆಯ ಅಂಕವಿರುವುದರ ಜೊತೆಗೆ ಯಾರು ಲಕ್ಷ ಲಕ್ಷ ರೂಪಾಯಿ ಲಂಚ ಕೊಡುತ್ತಾರೋ ಅವರಿಗೆ ಜಾಬ್ಗಳು ಸಿಗುವ ಸ್ಥಿತಿ ಇದೆ.

ಹೀಗಿರುವಾಗ ನಿಮ್ಮಂತಹ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಮೇಲೆ ಎಷ್ಟು ಗಮನ ಹರಿಸಬೇಕು ಎಂದು ಯೋಚಿಸಿ. ನಿಮ್ಮ ತಂದೆ ತಾಯಿಗಳ ಕನಸು ನನಸು ಮಾಡುವ ಹೊಣೆ ಹೊತ್ತಿರುವ ನೀವು ಹಗಲು ರಾತ್ರಿ ಓದಬೇಕಾಗಿತ್ತು. ಅದೂ ಈಗ ಕೊರೊನಾ ಕಾರಣದಿಂದ ಸರಿಯಾಗಿ ತರಗತಿಗಳೇ ನಡೆಯದೇ ಇರುವಾಗ ಹತ್ತಿರ ಬಂದಿರುವ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಲು ನೀವು ಎಷ್ಟೊಂದು ಕಷ್ಟಪಡಬೇಕಿದೆ.

ನಮ್ಮ ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಈ ಮಾತನ್ನು ಗಮನವಿಟ್ಟು ಓದಿ.
‘ಭಾರತದಲ್ಲಿ ಬಡವರಿಗೂ ಶ್ರೀಮಂತರಿಗೂ, ದಲಿತ ಹಿಂದುಳಿದವರಿಗೂ ಮೇಲ್ಜಾತಿಗಳಿಗೂ ನಡುವೆ ಸಮಾನತೆ ಸಾಧ್ಯವಾಗಬೇಕು ಎಂದರೆ ದಲಿತ-ಹಿಂದುಳಿದ ವರ್ಗಗಳು ಉನ್ನತ ಶಿಕ್ಷಣ ಪಡೆಯುವುದರ ಮೂಲಕ ಮಾತ್ರ ಸಾಧ್ಯ.

ಉನ್ನತ ವರ್ಗಗಳಿಗೂ ಕೆಳ ವರ್ಗಗಳಿಗೂ ಹುಟ್ಟಿನ ಆಧಾರದ ಮೇಲೆ ಉಂಟಾಗಿರುವ ಕೃತಕ ತಾರತಮ್ಯವು ಆದಷ್ಟು ಬೇಗ ಕೊನೆಗೊಳ್ಳಬೇಕು. ಆದರೆ ಕೆಳ ವರ್ಗಗಳು ಶಿಕ್ಷಣದಲ್ಲಿ ಉನ್ನತ ವರ್ಗಗಳಿಗೆ ಸರಿಸಮ ಮಟ್ಟಕ್ಕೆ ಏರುವವರೆಗೂ ಇದು ಸಾಧ್ಯವಾಗುವುದಿಲ್ಲ” (ಅಂಬೇಡ್ಕರ್ ಬರೆಹಗಳು ಮತ್ತು ಭಾಷಣಗಳು ಸಂಪುಟ 17, ಭಾಗ 1, ಪುಟ 389-90)
ಇಲ್ಲಿ ಬಾಬಾಸಾಹೇಬರು ದಲಿತ-ಹಿಂದುಳಿದ ವರ್ಗಗಳು ಉನ್ನತ ಶಿಕ್ಷಣ ಪಡೆಯುವುದು ಎಷ್ಟು ಮುಖ್ಯ ಎಂದು ತಿಳಿಸಿದ್ದಾರೆ. ನಿಮ್ಮಲ್ಲಿ ಅನೇಕರು ಇನ್ನೂ ಪಿಯುಸಿ, ಪದವಿ ತರಗತಿಗಳಲ್ಲಿ ಓದುತ್ತಿದ್ದೀರಿ. ನಿಮ್ಮಲ್ಲಿ ಎಷ್ಟು ಮಂದಿ ಉನ್ನತ ಶಿಕ್ಷಣ ಅಂದರೆ ಎಂಎ, ಎಂಎಸ್ಸಿ, ಎಂಕಾಂ, ಮೆಡಿಕಲ್, ಇಂಜಿನಿಯರಿಂಗ್ ಇತ್ಯಾದಿ ಓದಲು ಶಕ್ತರಿದ್ದೀರಿ ಆಲೋಚಿಸಿ. ಇದಕ್ಕಾಗಿ ನೀವೇನು ಮಾಡುತ್ತಿದ್ದೀರಿ ಎಂದೂ ಯೋಚಿಸಿ.

ಈಗ ಹಿಜಾಬ್’ ವಿಷಯ ಬಂದಿದೆ. ಇದಕ್ಕೆ ಮೊದಲು ಮತ್ತೂ ಒಂದು ವಿಷಯ ಹೇಳಿಬಿಡುತ್ತೇನೆ. ಈಗ ಕೇವಲ 200 ವರ್ಷಗಳ ಹಿಂದೆ ಈ ದೇಶದಲ್ಲಿ ಹಿಂದುಳಿದ ವರ್ಗಗಳ ಹೆಣ್ಣುಮಕ್ಕಳಾಗಲೀ, ದಲಿತ ಹೆಣ್ಣುಮಕ್ಕಳಾಗಲೀ, ಬ್ರಾಹ್ಮಣ ಹೆಣ್ಣುಮಕ್ಕಳಾಗಲೀ ಶಾಲೆಗೆ ಹೋಗುವಂತಿರಲಿಲ್ಲ. ಶಿಕ್ಷಣ ಎನ್ನುವುದು ಸಮಾಜದ ಕೆಲವೇ ಉನ್ನತ ಜಾತಿ ವರ್ಗಗಳ ಸೊತ್ತಾಗಿದ್ದ ಕಾಲ ಅದು. ಆ ಹೊತ್ತಿನಲ್ಲಿ ಈ ಮೂರೂ ಸಮುದಾಯಗಳ ಹೆಣ್ಣುಮಕ್ಕಳ ಶಿಕ್ಷಣದ ಪರವಾಗಿ ಮೊದಲು ದನಿ ಎತ್ತಿದ್ದ ಮೂವರು ಮಹಾನ್ ವ್ಯಕ್ತಿಗಳೆಂದರೆ ಸಾವಿತ್ರಿ ಬಾ ಫುಲೆ, ಫಾತಿಮಾ ಶೇಖ್ ಮತ್ತು ಜ್ಯೋತಿಬಾ ಫುಲೆ.

ಇವರಲ್ಲಿ ಫಾತಿಮಾ ಶೇಖ್ ಎಂಬ ಧೀಮಂತ ಮಹಿಳೆಯ ಮನೆಯಲ್ಲೇ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿ ಬಾ ಫುಲೆ ವಸತಿ ಪಡೆದಿರುತ್ತಾರೆ. ನಂತರ ಸಾವಿತ್ರಿ ಬಾ ಫುಲೆ ಈ ದೇಶದ ಮೊತ್ತ ಮೊದಲ ಶಿಕ್ಷಕಿಯಾಗುತ್ತಾರೆ. ಅವರು ತೆರೆದ ಐದು ಶಾಲೆಗಳಲ್ಲೂ ಫಾತಿಮಾ ಶೇಕ್ ಶಿಕ್ಷಕಿಯಾಗುವ ಮೂಲಕ ಭಾರತದ ಮೊಟ್ಟಮೊದಲ ಮುಸ್ಲಿಂ ಶಿಕ್ಷಕಿ ಎನಿಸಿಕೊಳ್ಳುತ್ತಾರೆ. ಆ ಶಾಲೆಗಳಲ್ಲಿ ಫಾತಿಮಾ ಶೇಖ್ ಅವರು ಸಾವಿರಾರು ಬಡ ದಲಿತ, ಹಿಂದುಳಿದ ಹಾಗೂ ಬ್ರಾಹ್ಮಣ ಹೆಣ್ಣುಮಕ್ಕಳಿಗೆ ಪಾಠ ಹೇಳಿಕೊಡುತ್ತಾರೆ. ನಿಮಗೆ ಗೊತ್ತಿರಲಿಕ್ಕಿಲ್ಲ.

ಅಂದು ಸಾವಿತ್ರಿ ಬಾ ಫುಲೆ ದಲಿತರಿಗೆ ಮತ್ತು ಹಿಂದುಳಿದವರಿಗಾಗಿ ಈ ಶಾಲೆಗಳನ್ನು ತೆರೆದಾಗ ಅವರ ಮೈಮೇಲೆ ಸೆಗಣಿ ಎರಚುವ ಕೆಲಸವನ್ನು ಮೇಲ್ಜಾತಿಗಳ ಜನರು ಮಾಡುತ್ತಾರೆ. ಯಾಕೆಂದರೆ ಯಕಶ್ಚಿತ್ ಶೂದ್ರ ದಲಿತರಿಗೆ ಶಿಕ್ಷಣ ನೀಡುವುದೇ ಅಪರಾಧ ಎಂದು ಮೇಲ್ಜಾತಿಗಳ ಜನರು ಭಾವಿಸಿದ್ದ ಕಾಲದಲ್ಲಿ ಸಾವಿತ್ರಿ ಬಾ ಮತ್ತು ಫಾತಿಮಾ ಶೇಖ್ ಮಾಡುತ್ತಿದ್ದ ಕೆಲಸ ಧರ್ಮದ್ರೋಹದ ಕೆಲಸವಾಗಿ ಅವರಿಗೆ ಕಾಣುತ್ತದೆ. ಇಲ್ಲಿ ಫಾತಿಮಾ ಶೇಖ್ ಅವರ ವಿಷಯ ಯಾಕೆ ಪ್ರಸ್ತಾಪಿಸಿದೆ ಎಂದರೆ, ನೀವೆಲ್ಲಾ ಮುಸ್ಲಿಂ ಹೆಣ್ಣುಮಕ್ಕಳ ಹಿಜಾಬ್ ವಿರುದ್ಧ ಬೀದಿಗೆ ಇಳಿದಿರುವಾಗ ಈ ದೇಶದ ಹಿಂದುಳಿದ, ದಲಿತ ಮತ್ತು ಬ್ರಾಹ್ಮಣ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ ಜೀವ ತೆತ್ತಿದ್ದವಳೂ ಅದೇ ಹಿಜಾಬ್ ತೊಟ್ಟಿದ್ದ ಒಬ್ಬ ಮುಸ್ಲಿಂ ಹೆಣ್ಣುಮಗಳು ಎಂದು ನೆನಪಿಸಲು.

ಸ್ವಲ್ಪ ಯೋಚಿಸಿ ಸೋದರರೆ, ಅವರೆಲ್ಲರೂ ನಡೆಸಿದ ಹೋರಾಟಗಳಿಂದಲೇ ಅಲ್ಲವೆ ಇಂದು ನಾವೆಲ್ಲಾ ಶಿಕ್ಷಣ ಪಡೆಯಲು ಸಾಧ್ಯವಾಗಿರುವುದು? ಅವರು ನಡೆಸಿದ ಹೋರಾಟವನ್ನು ಡಾ.ಬಿ.ಆರ್, ಅಂಬೇಡ್ಕರ್, ಶಾಹು ಮಹಾರಾಜ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು, ಪ್ರೊ.ಬಿ. ಕೃಷ್ಣಪ್ಪ ಮೊದಲಾದವರು ಮುಂದುವರೆಸಿದ್ದರ ಪ್ರತಿಫಲವೇ ಇಂದು ಲಕ್ಷಾಂತರ ಸಂಖ್ಯೆಯಲ್ಲಿ ದಲಿತ-ಹಿಂದುಳಿದ ವರ್ಗಗಳ ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗಿರುವುದು. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ರಾಜ್ಯದಾದ್ಯಂತ ವಿದ್ಯಾರ್ಥಿ ನಿಲಯಗಳನ್ನು ತೆರೆಯದೇ ಇದ್ದರೆ, ನಂತರ ದೇವೇಗೌಡರು ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯದೇ ಇದ್ದರೆ ಇಂದು ಲಕ್ಷಾಂತರ ಹಿಂದುಳಿದ ಮತ್ತು ದಲಿತ ವರ್ಗಗಳ ವಿದ್ಯಾರ್ಥಿಗಳು ಹಾಸ್ಟೆಲುಗಳಲ್ಲಿ ಇದ್ದು ವಿದ್ಯಾಭ್ಯಾಸ ಪಡೆಯಲು ಸಾಧ್ಯವಿತ್ತೆ? ಯೋಚಿಸಿ.

ಒಂದು ಮಾತು ನಿಮಗೆ ಕಹಿ ಎನಿಸಿದರೂ ಪರವಾಗಿಲ್ಲ. ಇಂದು ಭಾರತದಲ್ಲಿ ಕೋಟ್ಯಂತರ ಹಿಂದುಳಿದ ಜಾತಿಗಳ ಮತ್ತು ದಲಿತ ಜಾತಿಗಳ ಜನರು ಶಿಕ್ಷಣ ಪಡೆಯಲು ಸಾದ್ಯವಾಗಿದೆ ಎಂದರೆ ಅದಕ್ಕೆ ಕಾರಣ ಯಾವುದೇ ಧರ್ಮವಾಗಲೀ, ಧರ್ಮ ಗ್ರಂಥವಾಗಲೀ ಅಲ್ಲ. ಇದಕ್ಕೆ ಕಾರಣ ಮೇಲೆ ಹೇಳಿದ ಮಹನೀಯರು ತಮ್ಮ ಬದುಕನ್ನೇ ಮುಡುಪಾಗಿಟ್ಟು ನಡೆಸಿದ ಹೋರಾಟ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ನಾಯಕತ್ವದಲ್ಲಿ ರಚನೆಯಾದ ಭಾರತದ ಸಂವಿಧಾನ.

ಈಗ ಏನು ನಡೆಯುತ್ತಿದೆ? ಯಾವ ವರ್ಗಗಳು ಶತ ಶತಮಾನಗಳಿಂದಲೂ ಒಬಿಸಿ ಹಿಂದುಳಿದ ಜಾತಿಗಳನ್ನು, ದಲಿತ ಜಾತಿಗಳನ್ನು ಅಕ್ಷರ ಕಲಿಕೆಯಿಂದ ದೂರ ಇಟ್ಟಿದ್ದರೋ ಅವರೇ ಈಗ ನಿಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಇಂದು ಸಾವಿರಾರು ಉದ್ಯೋಗಗಳು ಹಿಂದುಳಿದವರ ಮತ್ತು ದಲಿತರ ಪಾಲಾಗುತ್ತಿರುವುದನ್ನು ಸಹಿಸದ ಕೆಲವು ಶಕ್ತಿಗಳು ಹೇಗಾದರೂ ಮಾಡಿ ಹಿಂದುಳಿದ ಮತ್ತು ದಲಿತ ವರ್ಗಗಳ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ನೋಡುತ್ತಿದ್ದಾರೆ.

ಇದಕ್ಕೆ ಅವರಿಗೆ ಇರುವ ಒಂದು ಸಾಧನ- ಧರ್ಮ- ಧರ್ಮ ರಕ್ಷಣೆ!! ಯೋಚಿಸಿ ನೋಡಿ. ಯಾರೆಲ್ಲಾ ಧರ್ಮ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಮಾತು ಆಡುತ್ತಿದ್ದಾರೋ ಅವರ ಮಕ್ಕಳು ಯಾರೂ ಬೀದಿಯಲ್ಲಿ ಕೇಸರಿ ಶಾಲು ಹೊದ್ದು ಜೈ ಶ್ರೀ ರಾಮ್ ಘೋಷಣೆ ಕೂಗುತ್ತಲೇ ಇಲ್ಲ. ಅವರ ಮಕ್ಕಳೇನಿದ್ದರೂ ಪ್ರತಿಷ್ಠಿತ ಕ್ರಿಶ‍್ಚಿಯನ್ ಕಾನ್ವೆಂಟುಗಳಲ್ಲಿ, ದೊಡ್ಡ ದೊಡ್ಡ ನಗರಗಳ ಪ್ರತಿಷ್ಠಿತ ಬೋರ್ಡಿಂಗ್ ಶಾಲೆಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಇಂಗ್ಲಿಷ್ ಭಾಷೆಯ ಮೂಲಕವೇ ಒಳ್ಳೆಯ ಶಿಕ್ಷಣ ಪಡೆಯುತ್ತಿದ್ದಾರೆ.

ಹಾಗೆ ಶಿಕ್ಷಣ ಪಡೆದ ಎಷ್ಟೋ ಜನರು ದೊಡ್ಡ ದೊಡ್ಡ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ಉದ್ಯೋಗ ಪಡೆದು ಅಮೆರಿಕ, ಬ್ರಿಟನ್, ಫ್ರಾನ್ಸ್, ಕೆನಡಾ ಮುಂತಾದ ದೇಶಗಳಲ್ಲಿ ಹಾಯಾಗಿದ್ದಾರೆ. ಇಲ್ಲವೇ ಬೆಂಗಳೂರಿನಂತ ಕಡೆ ಮುಸ್ಲಿಮರು ನಡೆಸುವ ವಿಪ್ರೋದಂತಹ ಐಟಿ ಕಂಪನಿಗಳಲ್ಲಿ ಒಳ್ಳೆಯ ಉದ್ಯೋಗ ಪಡೆದು ಬಿಂದಾಸ್ ಜೀವನ ನಡೆಸುತ್ತಾರೆ.

ಹೀಗಿರುವಾಗ ನಿಮ್ಮಂತಹ ಬಡ ದಲಿತ-ಹಿಂದುಳಿದವರನ್ನು ಧರ್ಮ ರಕ್ಷಣೆಯ ಹೆಸರಲ್ಲಿ ಕೇಸರಿ ಶಾಲು ಕೊಟ್ಟು, ಕೈಗೆ ತ್ರಿಶೂಲ, ತಲವಾರ್ ಕೊಟ್ಟು “ಮುಸ್ಲಿಂ ಹಿಜಾಬ್” ಭೂತ ತೋರಿಸಿ ನಿಮ್ಮ ಜೀವನಗಳನ್ನು ಬರ್ಬಾದ್ ಮಾಡಲು ಸಂಚು ನಡೆಸಿದ್ದಾರೆ. ಇದಕ್ಕೆ ಬಲಿಯಾಗುವ ಬಲಿಕುರಿಗಳಾಗುತ್ತೀರೋ ಅಥವಾ ಡಾ.ಬಿ.ಆರ್, ಅಂಬೇಡ್ಕರ್ ಹೇಳಿದ ಮಾರ್ಗದಲ್ಲಿ ನಡೆಯುತ್ತೀರೋ ನಿಮಗೇ ಬಿಟ್ಟಿದ್ದು.

ಇನ್ನು ಮುಸ್ಲಿಂ ಹೆಣ್ಣುಮಕ್ಕಳ ಹಿಜಾಬ್ ಕುರಿತು. ನೋಡಿ ಇಷ್ಟು ವರ್ಷ ಯಾರಿಗೂ ಸಮಸ್ಯೆ ಆಗದಿದ್ದ ವಿಷಯ ಈಗ ದೊಡ್ಡ ಸಮಸ್ಯೆಯಾಗಿದೆ. ಶಾಲೇ ಕಾಲೇಜುಗಳಿಗೆ ಎಲ್ಲಾ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಹಾಕುತ್ತಿರಲಿಲ್ಲ. ಕೆಲವರು ಹಾಕಿಕೊಂಡು ತರಗತಿಯಲ್ಲಿ ಕೂರುತ್ತಿದ್ದರು. ಉಡುಪಿ ಕಾಲೇಜಿನ ಮುಸ್ಲಿಂ ಹೆಣ್ಣು ಮಕ್ಕಳು ತಮ್ಮ ಯೂನಿಫಾರಂ ವೇಲ್ ನ್ನೇ ತಲೆಗೆ ಸುತ್ತಿಕೊಂಡು ಕೂರುತ್ತಿದ್ದರು.

ಇದರಿಂದ ಯಾರಿಗೆ ಸಮಸ್ಯೆ ಇತ್ತು? ಅವರೇನೂ ಸಮವಸ್ತ್ರ ಬೇಡ ಎಂದು ಹೇಳಿದ್ದರೆ? ಇಲ್ಲವಲ್ಲ? ನಮ್ಮ ಹಿಂದೂ ಹೆಣ್ಣುಮಕ್ಕಳೂ ಸಮವಸ್ತ್ರದ ಜೊತೆಗೆ ಹಿಂದೂ ಧರ್ಮದ ಸಂಕೇತಗಳಾದ ಹಣೆಕುಂಕುಮ/ಬಿಂದಿ ಇಟ್ಟುಕೊಂಡು, ಹೂ ಮುಡಿದುಕೊಂಡು, ಹಾಗೆಯೇ ನಮ್ಮ ಸರ್ಕಾರಿ, ಖಾಸಗಿ ಕಾಲೇಜುಗಳ ಹಿಂದೂ ಮಹಿಳಾ ಉಪನ್ಯಾಸಕರು ತಮ್ಮ ಧರ್ಮ ಸಂಪ್ರದಾಯದಂತೆ ಮಾಂಗಲ್ಯಸರ, ಕಾಲುಂಗುರ ಹಾಕಿಕೊಂಡೇ ಬರುತ್ತಿದ್ದಾರೆ. ಕ್ರೈಸ್ತರು ಕ್ರಾಸ್ ಸಂಕೇತ ಇಟ್ಟುಕೊಂಡು ಬರುತ್ತಾರೆ.

ವಿದ್ಯಾಭ್ಯಾಸ ಮಾಡಲು ಕಾಲೇಜಿಗೆ ಬರುವ ನಮಗೆ ಇವು ಮುಖ್ಯವಲ್ಲ. ಹಾಗೆ ನೋಡಿದರೆ ಇವೆಲ್ಲಾ ಭಾರತದ ಬಹುಸಂಸ್ಕೃತಿ ಪರಂಪರೆಗೆ ಅನುಗುಣವಾಗಿಯೇ ನಮ್ಮ ಶಾಲೇಕಾಲೇಜುಗಳನ್ನು “ಸರ್ವಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ” ವಾಗಿ ಮಾಡಿದೆ. ಇದು ಸಂವಿಧಾನ ಹೇಳುವ ಸರ್ವಧರ್ಮ ಸಮನ್ವಯ ತತ್ವಕ್ಕೆ ಅನುಗುಣವಾಗಿದೆ. ಕಾಲೇಜಿನ ಸಮವಸ್ತ್ರದ ಜೊತೆಗೆ ಅವರವರು ತಮ್ಮ ತಮ್ಮ ಸಂಪ್ರದಾಯದಂತೆ ಬಂದರೆ ಅದರಿಂದ ಯಾರಿಗೂ ನಷ್ಟವಿಲ್ಲ. ಹೀಗಿದ್ದರೂ ಇದನ್ನು ವಿವಾದ ಮಾಡಲಾಗಿದೆ. ಈಗ ವಿಷಯ ಕೋರ್ಟಿನ ಮೆಟ್ಟಿಲನ್ನೂ ಏರಿದೆ.

ಪ್ರೀತಿಯ ದಲಿತ-ಹಿಂದುಳಿದ ಸಮುದಾಯಗಳ ಸೋದರರೆ, ಮೇಲಿನ ಎಲ್ಲಾ ವಿಷಯಗಳನ್ನು ಓದಿಕೊಂಡು, ನಿಮ್ಮನ್ನೇ ನೀವು ಕೇಳಿಕೊಳ್ಳಿ. ನಿಮ್ಮ ಮತ್ತು ನಿಮ್ಮ ಕುಟುಂಬ, ಸಮುದಾಯಗಳ ಉತ್ತಮ ಭವಿಷ್ಯಕ್ಕೆ ಯಾವುದು ಮುಖ್ಯ? ನಿಮ್ಮ ಓದು, ವಿದ್ಯಾಭ್ಯಾಸ, ನಿಮ್ಮ ಪಠ್ಯಪುಸ್ತಕ, ಪೆನ್ನು, ಪರೀಕ್ಷೆ ಇವು ನಿಮಗೆ ಮುಖ್ಯವೋ ಅಥವಾ ನಿಮ್ಮ ಬದುಕನ್ನೇ ಬರ್ಬಾದು ಮಾಡಬಲ್ಲ ಕೆಲವರ ಹಿಡನ್ ಅಜೆಂಡಾವೋ? ಆಲೋಚಿಸಿ ತೀರ್ಮಾನ ತೆಗೆದುಕೊಳ್ಳಿ.

ನಿಮ್ಮ ಅಣ್ಣನಾಗಿ
ಹರ್ಷಕುಮಾರ್ ಕುಗ್ವೆ
ಪತ್ರಕರ್ತ, ಸಂಶೋಧಕ, ಸಾಮಾಜಿಕ ಕಾರ್ಯಕರ್ತ


( ಹರ್ಷಕುಮಾರ್ ಕುಗ್ವೆ ಅವರು ಫೆ.8ರಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಮಾಡಿದ ಬರಹವಿದು.)


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending