Connect with us

ದಿನದ ಸುದ್ದಿ

ದಾವಣಗೆರೆ | ಅಂಜುಂ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Published

on

ಸುದ್ದಿದಿನ, ದಾವಣಗೆರೆ: ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಹೊದಗಿಸಿಕೊಟ್ಟರೆ ಅವರಲ್ಲಿ ಅಡಕವಾಗಿರುವ ಪ್ರತಿಭೆಗಳು ಹೊರಬರುತ್ತವೆ ಎಂದು ದಾವಣಗೆರೆ ತಾ ದಕ್ಷಿಣ ವಲಯದ ಬಿ.ಇ.ಓ.ಆದ ಶ್ರೀ ನಿರಂಜನ್ ಮೂರ್ತಿ ಅವರು ಅಭಿಪ್ರಾಯಪಟ್ಟರು.

ಅವರು ಅಂಜುಂ ಪ್ರಾಥಮಿಕ ಮತ್ತು ಪ್ರೌಢ ಶಾಲೆ ( ಕನ್ನಡ ಮತ್ತು ಉರ್ದು ಮಾದ್ಯಮ) ಯವರು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಂಜುಂ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಇಂಗ್ಲಿಷ್ ಮಾದ್ಯಮದ ವಸ್ತು ಪ್ರದರ್ಶನವನ್ನು ಅಂಜುಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಮೊಹಮ್ಮದ್ ಉಮರ್ ಹೆಚ್.ಜೆ. ಅವರು ಉದ್ಘಾಟಿಸಿ ಮಕ್ಕಳ ಸರ್ವೋತ್ತಮವಾದ ಬೆಳವಣಿಗೆಗೆ ಸಹಾಕಾರಿಯಾಗುವ ಯಾವುದೇ ಕಾರ್ಯಕ್ರಮಗಳಿಗೆ ತುಂಬು ಹೃದಯದ ಸಹಾಕಾರವನ್ನು ಸಂಸ್ಥೆಯ ಪರವಾಗಿ ನೀಡಲಾಗುವುದು ಎಂದು ಹೇಳಿದರು.

ಕನ್ನಡ ಮತ್ತು ಉರ್ದು ಮಾದ್ಯಮ ವಿದ್ಯಾರ್ಥಿಗಳಿಂದ ಒಟ್ಟು 50 ಮತ್ತು ಇಂಗ್ಲಿಷ್ ಮಾದ್ಯಮದ ವಿದ್ಯಾರ್ಥಿಗಳಿಂದ ಒಟ್ಟು 50 ವಿಜ್ಞಾನದ ಮಾದರಿಗಳನ್ನು ತಯಾರಿಸಲಾಗಿತ್ತು. ಈ ವಿಜ್ಞಾನ ಪ್ರದರ್ಶನವನ್ನು ಸಾವಿರಾರು ಪೋಷಕರು,ವಿದ್ಯಾರ್ಥಿಗಳು ವೀಕ್ಷಿಸಿ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಇವರಷ್ಟೇ ಅಲ್ಲದೇ ಸುತ್ತಮುತ್ತಲಿನ ಶಾಲೆಗಳ ವಿದ್ಯಾರ್ಥಿಗಳೂ ಪ್ರದರ್ಶನವನ್ನು ವೀಕ್ಷಿಸಿ, ಸಂತೋಷವನ್ನು ಪಟ್ಟರು. ಕೋವಿಡ್ ಕಾರಣದಿಂದ ಹೆಚ್ಚು ಸಮಯ ಮನೆಯಲ್ಲಿಯೇ ಕಳೆದ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿತ್ತು. ಹಿಡೀ ವಸ್ತು ಪ್ರದರ್ಶನದಲ್ಲಿ ಎಳೆಯ ಮಕ್ಕಳು ಜಾತ್ರೆಯಲ್ಲಿ ಓಡಾಡುವ ರೀತಿ ಓಡಾಡಿ ಸಂಭ್ರಮ ಪಟ್ಟರು.

ಪೋಷಕರೂ ಭೇಟಿ ನೀಡಿ ತಮ್ಮ ಮಕ್ಕಳ ಮಾದರಿಗಳನ್ನು ವೀಕ್ಷಿಸಿದರು. ಅಲ್ಲದೇ ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾದರಿಗಳನ್ನು ಶ್ರೀ ಲಕ್ಷ್ಮಣ್ ಸಹಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ ಹಿರೇಬಿದ್ರಿ ಮತ್ತು ಶ್ರೀಮತಿ ದಿಲ್‌ಶಾದ್ ಸಹಶಿಕ್ಷಕಿ, ಬಾಲಕರ ಸರ್ಕಾರಿ ಪ್ರೌಢ ಶಾಲೆ ಹೈಸ್ಕೂಲ್ ಮೈದಾನ ದಾವಣಗೆರೆ ಇವರುಗಳು ತೀರ್ಪುಗಾರಾಗಿ ಭಾಗವಹಿಸಿ ಉತ್ತಮವಾದ ತೀರ್ಪುನ್ನು ನೀಡಿದರು.

ಆಂಜುಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀ ಜಾವೀದ್ ಅಹಮದ್ ಕೆ., ಅಂಜುಂ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಶ್ರೀ ಲತೀಫ್ ಎನ್.ಎ. ಮತ್ತು ಅಂಜುಂ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಿಯಾಜ್ ಅಹಮದ್ ಎಸ್. ರವರು ವಸ್ತು ಪ್ರದರ್ಶನವನ್ನು ನೋಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಅಲ್ಲದೇ ಪ್ರೌಢಶಾಲಾ ಮುಖ್ಯೋಪಾದ್ಯಯರಾದ ಶ್ರೀ ಕರೀಂ ಉಲ್ಲಾ ಪಿ. ಹಾಗೂ ಶ್ರೀಮತಿ ಮೀರಾಂ ಬೀ ಎಸ್.. ಪ್ರಾಥಮಿಕ ಶಾಲೆಗಳ ಮುಖ್ಯೋಪಾದ್ಯಯರಾದ ಶ್ರೀ ಅಫ್ರೋಜ್ ಖಾನ್, ಶ್ರೀಮತಿ ಸಭೀಹಾ ಖಾತೂನ್ ರವರೂ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending