Connect with us

ಅಂತರಂಗ

ಸಕಲರಿಗೂ ಲೇಸನ್ನೇ ಬಯಸುವ ಸುರಪುರ ಹಿರೇಮಠ

Published

on

ಸುರಪುರ ಹಿರೇಮಠ್ ಅವರೊಂದಿಗೆ ಲೇಖಕ ಗಂಗಾಧರ ಬಿ.ಎಲ್. ನಿಟ್ಟೂರ್

ಭಕ್ತರ ಪಾಲಿನ ಬೆಳಕಿಂಡಿ 

ಸಂಖ್ಯೆಗಾಗಿ ಎಣಿಸುತ್ತಾ ಕೂತರೆ ಮಠ-ಮಂದಿರಗಳ ಸಂಖ್ಯೆ ಅಗಣಿತವೇ ಸರಿ. ಆದರೆ ಧರ್ಮ, ದೇವರು ಮತ್ತು ಧಾರ್ಮಿಕತೆಯ ನಿಜ ಮರ್ಮವನ್ನು ಅರಿತು ಮನುಕುಲದ ಸೇವೆಯಲ್ಲಿ ತೊಡಗಿರುವ ಮಠ-ಮಾನ್ಯಗಳ ಸಂಖ್ಯೆ ಅತಿ ವಿರಳವೇ ಎನ್ನಬಹುದು. ಕೆಲವು ಸದ್ದು ಮಾಡುತ್ತಲೇ ಸುದ್ದಿಯಲ್ಲಿದ್ದರೆ, ಕೆಲವು ಸದ್ದಿಲ್ಲದೆ ಸೇವೆ ಗೈಯುತ್ತಾ ಮನುಕುಲದ ಸರ್ವೋನ್ನತಿಗಾಗಿ ಶ್ರಮಿಸುತ್ತಿವೆ. ಕಾಯಕ ಒಂದನ್ನೇ ಗುರಿಯಾಗಿಸಿಕೊಂಡು ಭಕ್ತ ಜನರ ಕಲ್ಯಾಣಕ್ಕಾಗಿ ತಮ್ಮ ಪಾಡಿಗೆ ತಾವು ನಿಸ್ವಾರ್ಥ ಪಾರಮಾರ್ಥಿಕ ಸೇವೆಯಲ್ಲಿ ತೊಡಗಿರುವ ಮಠಗಳ ಸಾಲಿನಲ್ಲಿ ಬೆಳಕಿಂಡಿಯಾಗಿ ನಿಲ್ಲುತ್ತದೆ ಸುರಪುರ ಹಿರೇಮಠ.

ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಕಡತಿ ಕ್ಯಾಂಪ್‍ನ ರೇಣುಕಾ ನಗರದಲ್ಲಿ ನೆಲೆಸಿರುವ ಶ್ರೀಮದ್ ಕಾಶೀ ಪೀಠದ ಶಾಖಾಮಠವಾಗಿರುವ ಸುರಪುರ ಹಿರೇಮಠವು ಭಕ್ತ ಜನರ ಉದ್ಧಾರಕ್ಕಾಗಿಯೇ ಜನ್ಮ ತಾಳಿದಂತಿದೆ. ದಾವಣಗೆರೆಯಿಂದ ಸುಮಾರು 30 ಕಿ.ಮೀ., ಹರಿಹರದಿಂದ ಸುಮಾರು 20 ಕಿ.ಮೀ. ಹಾಗೂ ಹರಪನಹಳ್ಳಿಯಿಂದ 25-30 ಕಿ.ಮೀ. ದೂರದಲ್ಲಿರುವ ಈ ಮಠ ಹೆಸರೇ ಸೂಚಿಸುವಂತೆ ಭಕ್ತರ ಪಾಲಿನ ಸುರಪುರವೇ ಸರಿ.

ಆತ್ಮೋದ್ಧಾರದ ಅಡಿಗಲ್ಲು

ದಿನಾಂಕ : 17-10-1994 ರಂದು ಕಡತಿ ಗ್ರಾಮದ ರೇಣುಕಾ ನಗರಕ್ಕೆ ಸಂಭ್ರಮದ ದಿನ. ಆತ್ಮೋದ್ಧಾರಕ್ಕೆ ಅಡಿಗಲ್ಲು ಹಾಕಿದ ದಿನವಿದು. ಶ್ರೀಮದ್ ಕಾಶಿಪೀಠದ 1008 ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಅಮೃತ ಹಸ್ತದಿಂದ ಶ್ರೀಮಠದ ಕಟ್ಟಡಕ್ಕೆ ಅಡಿಗಲ್ಲು ಹಾಕಲಾಯಿತು.

ದಿನಾಂಕ : 20-10-1996 ರಂದು ಶ್ರೀಮದ್ ಉಜ್ಜಯಿನಿ ಸದ್ಧರ್ಮ ಪೀಠದ 1008 ಜಗದ್ಗುರು ಶ್ರೀ ಮರುಳಸಿದ್ಧ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಅಮೃತಹಸ್ತದಿಂದ ಶ್ರೀಮಠದಲ್ಲಿ ಜಗದ್ಗುರು ಶ್ರೀ ವಿಶ್ವಾರಾಧ್ಯ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಆ ಮೂಲಕ ಆತ್ಮೋದ್ಧಾರ ಕಾರ್ಯಕ್ಕೆ ಮುನ್ನಡಿ ಇಡಲಾಯಿತು. ಅಂದಿನಿಂದ ಈವರೆಗೂ ಶ್ರೀಮಠದಲ್ಲಿ ಧಾರ್ಮಿಕಸೇವೆ ನಿರಂತರ ಸಾಗುತ್ತಲಿದೆ.

ಅಡ್ಡಪಲ್ಲಕ್ಕಿ ಮಹೋತ್ಸವದ ಹೆಗ್ಗಳಿಕೆ

ಶ್ರೀಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳ ಜೊತೆ ಪಂಚಪೀಠಾಧೀಶ್ವರರನ್ನು ಬರಮಾಡಿಕೊಂಡು ಅಡ್ಡಪಲ್ಲಕ್ಕಿ ಉತ್ಸವ ನೆರವೇರಿಸಿರುವ ಕಾರ್ಯ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಆಧ್ಯಾತ್ಮಿಕ ಶಕ್ತಿಯ ಔನತ್ಯಕ್ಕೆ ಮೇಲ್ಪಂಕ್ತಿ ಒದಗಿಸಿದೆ.
1996ರಲ್ಲಿ ಶ್ರೀ1008 ಜಗದ್ಗುರು ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರರಾದ ಶ್ರೀ ಮರುಳಸಿದ್ಧ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಅಡ್ಡಪಲ್ಲಕ್ಕಿ ಮಹೋತ್ಸವ, 2006ರಲ್ಲಿ ಶ್ರೀ 1008 ಜಗದ್ಗುರು ಶ್ರೀಮದ್ ಕಾಶೀಪೀಠದ ಸಿಂಹಾಸನಾಧೀಶ್ವರರಾದ ಶ್ರೀ ಡಾ||ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ ಅಡ್ಡಪಲ್ಲಕ್ಕಿ, 2010ರಲ್ಲಿ ಶ್ರೀ1008 ಜಗದ್ಗುರು ಶ್ರೀಶೈಲ ಶ್ರೀಮದ್‍ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರರಾದ ಶ್ರೀ ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದ ಮಹಸ್ವಾಮಿಗಳವರ ಅಡ್ಡಪಲ್ಲಕ್ಕಿ, 2012ರಲ್ಲಿ ಶ್ರೀ 1008 ಜಗದ್ಗುರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರರಾದ ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಅಡ್ಡಪಲ್ಲಕ್ಕಿ ಹಾಗೂ 2014 ರಲ್ಲಿ ಶ್ರೀ 1008 ಜಗದ್ಗುರು ಶ್ರೀಮದ್ ರೇಣುಕ ವೈರಾಗ್ಯ ಸಿಂಹಾಸನಾಧೀಶ್ವರರಾದ ರಾಮ್ ಪದ ವಿಭೂಷಿತ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯುವ ಮೂಲಕ ಶ್ರೀ ಕ್ಷೇತ್ರಕ್ಕೆ ಅಪಾರ ಆಧ್ಯಾತ್ಮಿಕ ಶಕ್ತಿಯ ಸಿಂಚನ ಉಂಟಾಗಿದೆ.ಶ್ರೀಮಠದಲ್ಲಿ ಪ್ರತಿನಿತ್ಯವೂ ಬೆಳಿಗ್ಗೆ ಮತ್ತು ಸಂಜೆ ಪೂಜಾ ಕಾರ್ಯಗಳು ಸಾಂಗವಾಗಿ ನೆರವೇರುತ್ತಿವೆ. ಅಲ್ಲದೆ ಭಕ್ತರ ಸಮಸ್ಯೆ ಮತ್ತು ಸಂಕಷ್ಟಗಳಿಗೆ ಪರಿಹಾರ ಒದಗಿಸುವ ಕಾರ್ಯ ಕೂಡ ನಿರಂತರ ನಡೆಯುತ್ತಿದೆ. ಈ ಪರಿಹಾರ ಸೇವೆಯ ಮೂಲಕರ್ತೃ ವೇದಮೂರ್ತಿ ಶ್ರೀ ಅಜ್ಜಯ್ಯ ಶಿವಾಚಾರ್ಯ ಸ್ವಾಮಿಗಳು.

ವಿಶೇಷ ಕಾರ್ಯಕ್ರಮಗಳು

ಪ್ರತಿ ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಶ್ರೀಮಠದಲ್ಲಿ ವಿಶೇಷ ಪೂಜಾ, ಅರ್ಚನ ಕಾರ್ಯಕ್ರಮಗಳು ನಡೆಯುತ್ತವೆ. ರುದ್ರಾಭಿಷೇಕ, ಶಾಂತಿ ಇತ್ಯಾದಿ ವಿಶೇಷ ಸೇವೆ ಮೂಲಕ ಬರುವ ಭಕ್ತರ ಸಂಕಷ್ಟ ನಿವಾರಣೆಗಾಗಿ ಸಂಕಲ್ಪ ಮಾಡಲಾಗುತ್ತದೆ. ಪ್ರತಿ ವರ್ಷ ಶಿವರಾತ್ರಿಯಂದು ಕಾಶಿ ಪೀಠದ ಜಗದ್ಗುರು ವಿಶ್ವಾರಾಧ್ಯ ಸ್ವಾಮಿಯ ಜಯಂತ್ಯುತ್ಸವ ಅಂಗವಾಗಿ ಜಂಗಮ ವಟುಗಳಿಗೆ ಶಿವದೀಕ್ಷೆ ನೀಡಲಾಗುವುದು. ಅಲ್ಲದೆ ಸರ್ವಧರ್ಮದವರಿಗೂ ಉಚಿತ ಸಾಮೂಹಿಕ ವಿವಾಹಗಳು ಜರುಗುತ್ತವೆ.
ಪ್ರತಿ ವರ್ಷ ಡಿಸೆಂಬರ್ ಮಾರ್ಗಶಿರ ಮಾಸದ 3ನೇ ಸೋಮವಾರ 1008 ದೀಪಗಳ ದೀಪೆÇೀತ್ಸವ ಅಥವಾ ಕಾರ್ತಿಕೋತ್ಸವ ಜರುಗುತ್ತದೆ. ಶ್ರದ್ಧಾ ಭಕ್ತಿಯಿಂದ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧನ್ಯತಾ ಭಾವ ಮೆರೆಯುತ್ತಾರೆ.

ಶ್ರೀ ಮಠದ ಆದರ್ಶ

ಇಲ್ಲಿ ನಡೆಯುವ ಯಾವುದೇ ಸೇವಾ ಕಾರ್ಯಕ್ಕೆ ಯಾರಿಂದಲೂ ದೇಣಿಗೆ ಪಡೆಯುವುದಿಲ್ಲ. ಉಚಿತ ಸೇವೆಯ ಈ ಪರಂಪರೆ ಹಿಂದಿನ ಪೀಳಿಗೆಯಿಂದಲೇ ನಡೆದುಕೊಂಡು ಬಂದಿದೆ. ಶ್ರೀಮಠಕ್ಕೆ ಬರುವ ಭಕ್ತರು ತಾವಾಗಿಯೇ ತಿಳಿದು ಹಾಕುವ ಕಾಣಿಕೆ ಹಣದಿಂದಲೇ ಶ್ರೀಮಠದ ಸರ್ವ ಧಾರ್ಮಿಕ ಸೇವಾ ಕಾರ್ಯಗಳು ಜರುಗುತ್ತಿವೆ ಎಂಬುದು ಅಚ್ಚರಿಯ ಸಂಗತಿ. ಯಾವುದೇ ಜಾತಿ, ಜನಾಂಗ ಅಥವಾ ಧರ್ಮಕ್ಕೆ ಸೀಮಿತವಾಗದೆ ಮನುಕುಲದ ಕಲ್ಯಾಣವನ್ನೇ ಮುಖ್ಯ ಗುರಿಯನ್ನಾಗಿಸಿ ಕೊಂಡು ಧಾರ್ಮಿಕ ಸೇವೆಗೈಯುತ್ತಿರುವ ಈ ಶ್ರೀಮಠದ ಕಾರ್ಯ ಆದರ್ಶ ಪ್ರಾಯ ಹಾಗೂ ಅನುಕರಣೀಯವೇ ಸರಿ.

ಬಡತನದ ಬೇಗೆಯಲ್ಲಿ ಅರಳಿದ ದೈವಭಕ್ತಿ 

ಪ್ರಸ್ತುತ ಶ್ರೀಮಠದ ಗುರುಗಳಾದ ಶ್ರೀ ವೇ.ಮೂ. ಅಜ್ಜಯ್ಯ ಸ್ವಾಮಿಗಳ ಕುಟುಂಬ ಬಡತನದ ಬೇಗೆಯನ್ನು ಅನುಭವಿಸಿದೆ. ಆದರೆ ಸರ್ವರಿಗೂ ಹಿತವನ್ನು ಬಯಸುವ ಶ್ರೇಷ್ಠ ಸಂಸ್ಕಾರವು ಈ ಕುಟುಂಬಕ್ಕೆ ಹೃದಯ ಶ್ರೀಮಂತಿಕೆ ಮತ್ತು ಶ್ರೇಷ್ಠತೆಯನ್ನು ತಂದು ಕೊಟ್ಟಿದೆ. ಅಜ್ಜಯ್ಯ ಸ್ವಾಮಿಗಳ ತಂದೆ ಲಿಂಗೈಕ್ಯ ವೇ|ಮೂ| ಬಸಪ್ಪಯ್ಯ ಶಾಸ್ತ್ರಿ ಹಾಗೂ ತಾಯಿಯವರಾದ ಲಿಂಗೈಕ್ಯ ಶ್ರೀಮತಿ ಕೊಟ್ರಮ್ಮ ದಂಪತಿಗಳು ಅಪಾರ ದೈವಭಕ್ತರು.
ಬಸಪ್ಪಯ್ಯ ಶಾಸ್ತ್ರಿಗಳು ಮೂಲತಃ ಗುಲ್ಬರ್ಗಾ ಜಿಲ್ಲಾ ಸುರಪುರ ಬಿಲ್ವಂ ಕೊಂಡಿಮಠದ ವಂಶಸ್ಥರು. ಕಡುಬಡತನದಲ್ಲಿಯೂ ಸದಾ ಸಚ್ಛಾರಿತ್ರ್ಯ, ಶುದ್ಧ ಸಂಸ್ಕಾರ, ಪರೋಪಕಾರ, ಸಹಬಾಳ್ವೆಯಂತಹ ಉದಾತ್ತ ಚಿಂತನೆಗಳನ್ನು ಬೆಳೆಸಿಕೊಂಡು ಬಂದಂತಹ ಕುಟುಂಬವಿದು. ರಾಜ ವೆಂಕಟಪ್ಪ ನಾಯಕ ಕೂಡ ಈ ಮಠದ ಶಿಷ್ಯರಾಗಿದ್ದರಂತೆ. ಈಗಲೂ ವೆಂಕಟಪ್ಪ ನಾಯಕನ ಕುಟುಂಬದವರು ಈ ಮಠಕ್ಕೆ ಶಿಷ್ಯರಾಗಿ ನಡೆದುಕೊಳ್ಳುತ್ತಿದ್ದಾರೆ. ಬಡತನದ ಪರಿಣಾಮ ಬರಗಾಲದ ಸಂದರ್ಭದಲ್ಲಿ ಒಮ್ಮೆ ಬಸಪ್ಪ ಶಾಸ್ತ್ರಿಗಳು ಅನಿವಾರ್ಯವಾಗಿ ಹರಪನಹಳ್ಳಿ ತಾಲ್ಲೂಕು ಹೊಂಬಳಗಟ್ಟಿಗೆ ವಲಸೆ ಬಂದು ನೆಲೆಸಿದರು. ಯಾವುದೇ ಆಸ್ತಿ ಪಾಸ್ತಿ ಇರದ ಅವರು ಶಾಸ್ತ್ರ ಮತ್ತು ಜ್ಯೋತಿಷ್ಯ ಸೇವೆ ಮೂಲಕ ಭಕ್ತರಿಂದ ಬಂದ ಕಾಣಿಕೆಯಿಂದಲೇ ಜೀವನ ನಿರ್ವಹಣೆ ಮಾಡುವ ಜೊತೆಗೆ ತಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಸಹ ಕೊಡಿಸಿದ್ದುದು ಅವರ ಆತ್ಮಶಕ್ತಿಗೆ ಸಾಕ್ಷಿಯಾಗಿದೆ.
ಇವರ ಗರ್ಭಾಂಬುದಿಯಲ್ಲಿ 5ನೇ ಪುತ್ರರಾಗಿ ಜನಿಸಿದವರೇ ಶ್ರೀ ವೇ| ಮೂ| ಅಜ್ಜಯ್ಯ ಸ್ವಾಮಿಗಳು. ಅಂತರಂಗದಲ್ಲಿ ಬಾಲ್ಯದಿಂದಲೇ ವಿಶ್ವ ಪ್ರೇಮ, ಮಾನವ ಕಲ್ಯಾಣ, ಆತ್ಮೋದ್ಧಾರ ಸೇವೆಯಂತಹ ಉತ್ಕøಷ್ಟ-ಉನ್ನತ ವಿಚಾರಧಾರೆಗಳು ಒಡಮೂಡಿ ಬಂದ ಕಾರಣ ತಮ್ಮ ಜೀವನವನ್ನು ಶುದ್ಧ ಆಧ್ಯಾತ್ಮಿಕ ಸೇವೆ ಹಾಗೂ ಮಾನವ ಕಲ್ಯಾಣಕ್ಕಾಗಿ ಮುಡುಪಾಗಿಟ್ಟಿದ್ದಾರೆ.

ಅನ್ನದಾಸೋಹ : ಪ್ರತಿ ಭಾನುವಾರ, ಸೋಮವಾರ, ಗುರುವಾರ ಹಾಗೂ ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಶ್ರೀ ಮಠದಲ್ಲಿ ಜನಜಾತ್ರೆ ನಡೆಯುತ್ತದೆ. ದೈವದರ್ಶನದ ಜೊತೆ ತಮ್ಮ ಕಷ್ಟ, ನಷ್ಟ, ನೋವು ನಿವಾರಣೆಗಾಗಿ ಭಕ್ತರು ಪರಿಹಾರ ಪಡೆದು ಸಾಗುತ್ತಾರೆ. ಈ ದಿನಗಳಲ್ಲಿ ಬರುವ ಎಲ್ಲಾ ಭಕ್ತರಿಗೂ ಬೆಳಿಗ್ಗೆ ಮತ್ತು ಸಂಜೆ ಸೇರಿದಂತೆ ಎರಡೂ ಹೊತ್ತು ಅನ್ನದಾಸೋಹ ಸದಾ ನಡೆಯುತ್ತಿದೆ.ಸಕಲರಿಗೂ ಲೇಸನ್ನೇ ಬಯಸುವ ಶ್ರೀ ವೇ| ಮೂ| ಅಜ್ಜಯ್ಯ ಶಿವಾಚಾರ್ಯ ಸ್ವಾಮಿಗಳು,1-7-1946ರಲ್ಲಿ ಜನಿಸಿದ ಅಜ್ಜಯ್ಯ ಸ್ವಾಮಿಗಳು ಬಾಲ್ಯದಿಂದಲೇ ಶಿಸ್ತು, ಸಮಯ ಪ್ರಜ್ಞೆ , ಆಚಾರ -ವಿಚಾರ, ಮಡಿ-ಉಡಿ ಮತ್ತು ಧರ್ಮಕ್ಕೆ ಪ್ರಾಧಾನ್ಯತೆ ನೀಡುತ್ತಾ ಬೆಳೆದವರು. ಶ್ರೀ ಅಜ್ಜಯ್ಯ ಸ್ವಾಮಿಗಳು ಮೂಲತಃ ಶಿಕ್ಷಕರು. ಹರಪನಹಳ್ಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮುಗಿಸಿ ಮಲ್ಲಾಡಹಳ್ಳಿ ಶ್ರೀ ರಾಘವೇಂದ್ರ ಆಶ್ರಮದಲ್ಲಿ ಟಿಸಿಹೆಚ್. ತರಬೇತಿ ಪಡೆದು ಸರ್ಕಾರಿ ನೌಕರಿಗೆ ನೇಮಕಗೊಂಡು ಹರಪನಹಳ್ಳಿ ತಾಲ್ಲೂಕು, ಆಲದಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಮೊದಲನೇ ವೃತ್ತಿ ಸೇವೆ ಆರಂಭಿಸಿದರು. ನಂತರ ಯಲ್ಲಾ ಪುರ, ನಂದಿಯಾಲ, ಕಡತಿ ಮುಂತಾದ ಕಡೆ ಮುಖ್ಯ ಗುರುಗಳಾಗಿ ಸರ್ಕಾರಿ ಶಿಕ್ಷಕ ವೃತ್ತಿಯ ಸೇವೆ ಸಲ್ಲಿಸಿ 2004ರ ಜೂ.30 ರಂದು ನಿವೃತ್ತರಾದರು. ಶಿಕ್ಷಣ ಕ್ಷೇತ್ರ ಮತ್ತು ಸಾರ್ವಜನಿಕ ರಂಗಗಳೆರಡರಲ್ಲೂ ಶ್ರೀ ಅಜ್ಜಯ್ಯ ಸ್ವಾಮಿಗಳು ಸಮಯ ಪ್ರಜ್ಞೆ, ಶಿಸ್ತು, ಸಂಘಟನೆ, ಸೇವೆ, ವಾಕ್ಯ ಪರಿಪಾಲನೆ ಮೂಲಕವೇ ಹೆಸರಾಗಿದ್ದಾರೆ. ಹಿಂದೊಮ್ಮೆ ನಂದಿಯಾಲ ಗ್ರಾಮದಲ್ಲಿ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಕಟ್ಟಡವಿರದ ಕಾರಣ ಕಡತಿ, ನಿಟ್ಟೂರು, ನಂದಿಯಾಲ, ಅಲಗಿಲವಾಡ, ಮುತ್ತೂರು, ಯರಬಾಳು, ವಟ್ಲಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮದ ತಮ್ಮ ಹಳೆಯ ವಿದ್ಯಾರ್ಥಿಗಳನ್ನೇ ಸಂಘಟಿಸಿ ಸರ್ಕಾರಿ ಶಾಲೆಗೊಂದು ಕಟ್ಟಡ ನಿರ್ಮಾಣ ಮಾಡಿದ್ದುದು ಅವರ ಸಾಮಾಜಿಕ ಕಳಕಳಿ, ನಿಷ್ಕಲ್ಮಶ ಸೇವಾ ಭಾವನೆ ಮತ್ತು ಸಂಕಲ್ಪ ಶಕ್ತಿಗೆ ಹಿಡಿದ ಕನ್ನಡಿಯಾಗಿದೆ. ಈ ಘಟನೆ ಇಂದಿಗೂ ಇತಿಹಾಸವಾಗಿ ಉಳಿದಿದೆ.

ಅಪಾರವಾದ ಆಧ್ಯಾತ್ಮಿಕ ಒಲವು ಮೂಡಿಸಿಕೊಂಡು ಶ್ರದ್ಧಾ, ಭಕ್ತಿಯ ಮೈದಳೆದಂತಿರುವ ಶ್ರೀ ಅಜ್ಜಯ್ಯ ಸ್ವಾಮಿಗಳು ಶಿಕ್ಷಕ ವೃತ್ತಿಯ ಜೊತೆ ಬಿಡುವಿನ ವೇಳೆಯಲ್ಲಿ, ಸಂಕಟದಲ್ಲಿರುವವರಿಗೆ ಶಾಸ್ತ್ರ ಹೇಳುವ ಮೂಲಕ ಪರಿಹಾರ ಒದಗಿಸುವ ಕಾರ್ಯವನ್ನು ರೂಢಿಸಿ ಕೊಂಡಿದ್ದರು. ನಿವೃತ್ತಿಯ ನಂತರ ತಮಗೆ ಬಂದ ಪಿಂಚಣಿ ಹಣ ಹಾಗೂ ಸದ್ಭಕ್ತರ ಸಹಕಾರದೊಂದಿಗೆ ಕಡತಿ ಗ್ರಾಮದ ಶ್ರೀ ರೇಣುಕ ನಗರದಲ್ಲಿ ಶ್ರೀಮಠದ ಸ್ಥಾಪನೆ ಮಾಡಿ, ತಮ್ಮ ಸಂಪೂರ್ಣ ಜೀವನವನ್ನು ಆಧ್ಯಾತ್ಮಿಕ ಸೇವೆ ಹಾಗೂ ಭಕ್ತೋದ್ಧಾರ ಕಾರ್ಯಕ್ಕಾಗಿಯೇ ಮುಡುಪಾಗಿಟ್ಟಿದ್ದಾರೆ. ಯಾವುದೇ ದೇಣಿಗೆ ಇಲ್ಲದೆ ತಮ್ಮ ಪಿಂಚಣಿ ಹಣ ಹಾಗೂ ಭಕ್ತರ ಕಾಣಿಕೆಯನ್ನೇ ಸಂಗ್ರಹಿಸಿ ಶ್ರೀ ಮಠದ ಸ್ಥಾಪನೆ ಮಾಡಿರುವ ಶ್ರೀ ಅಜ್ಜಯ್ಯನವರ ಮನೋಬಲಕ್ಕೆ ಸಾಟಿಯಿಲ್ಲ. ಮನೆಯ ನಿರ್ವಹಣೆಗೆ ಶ್ರೀ ಮಠದ ಯಾವುದೇ ಹಣವನ್ನು ಖರ್ಚು ಮಾಡುವಂತಿಲ್ಲ ಎಂಬ ಷರತ್ತನ್ನು ಕೂಡ ಕುಟುಂಬದವರಿಗೆ ವಿಧಿಸಿದ್ದಾರೆ. ಶ್ರೀಗಳ ಮಕ್ಕಳು ತಾವು ದುಡಿದು ತಂದ ಹಣದಿಂದ ತಮ್ಮ ಕುಟುಂಬದ ನಿರ್ವಹಣೆ ನಡೆಯುತ್ತಿದೆ. ನಿಜಕ್ಕೂ ಇದು ಇತರರಿಗೆ ಮಾದರಿಯಾದ ಕಾರ್ಯ ಎನ್ನಬಹುದು.

ದೈವೀ ಪರಿವಾರ : ಮೂಲತಃ ಅಜ್ಜಯ್ಯನವರದು ಸಾತ್ವಿಕ ಮತ್ತು ದೈವಿಕ ಕುಟುಂಬ. ಸದಾ ಪರರಿಗೆ ಲೇಸನ್ನೇ ಬಯಸುತ್ತಾ ಸರ್ವರ ಏಳ್ಗೆಗಾಗಿ ಶ್ರಮಿಸುವ ಕುಟುಂಬ. ಅಂತೆಯೇ ಪ್ರಸ್ತುತ ಶ್ರೀ ಮಠದ ಸೇವಾ ಕಾರ್ಯಾದಿಗಳಲ್ಲಿ ಅಜ್ಜಯ್ಯನವರ ಕುಟುಂಬದ ಸರ್ವ ಸದಸ್ಯರು ಶ್ರದ್ಧಾಭಕ್ತಿಯಿಂದ ಭಾಗವಹಿಸುತ್ತಿದ್ದಾರೆ.ಅಜ್ಜಯ್ಯನವರ ಹಿರಿಯ ಮಗ ಶ್ರೀ ವಿಶ್ವನಾಥ ಸ್ವಾಮಿಯವರು ದಾವಣಗೆರೆ ವಿ.ಆರ್.ಎಲ್‍ನಲ್ಲಿ ನೌಕರಿ ಮಾಡುತ್ತಿದ್ದಾರೆ. ಎರಡನೇ ಮಗ ಡಾ. ಕೊಟ್ರೇಶ್ವರಸ್ವಾಮಿ ಸುರಪುರಮಠ ರವರು ಬೆಂಗಳೂರಿನ ಖಾಸಗಿ ಎಂ.ಇಡಿ. ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಹಾಗೂ ಮಗಳು ಸಿದ್ಧಮ್ಮ ಬಳ್ಳಾರಿ ಜಿಲ್ಲಾ, ಹಡಗಲಿ ತಾಲ್ಲೂಕು, ಹರವಿ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಶ್ರೀ ಅಜ್ಜಯ್ಯನವರ ಮೊಮ್ಮಗ ಹಾಗೂ ಶ್ರೀ ವಿಶ್ವನಾಥ ಸ್ವಾಮಿಯವರ ಪುತ್ರನಾದ ಶ್ರೀ ಕಾಶಿನಾಥ ಸ್ವಾಮಿ ಸುರಪುರಮಠ್ ಅವರು ತಮ್ಮ ಅಜ್ಜನವರ ಬಳಿ ವೇದಾಧ್ಯಯನ, ಶಾಸ್ತ್ರ, ಪಂಚಾಂಗ, ಪೌರೋಹಿತ್ಯ ಇತ್ಯಾದಿ ಅಧ್ಯಯನ ಮಾಡುತ್ತಿದ್ದು, ಶ್ರೀಮಠದ ಸರ್ವ ಧಾರ್ಮಿಕ ಸೇವೆಯಲ್ಲಿ ಅಜ್ಜಯ್ಯನವರಿಗೆ ಸಾಥಿಯಾಗಿ ಧಾರ್ಮಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಸೇವಾ ಶಿರೋಮಣಿ ಲಿ|| ಕೊಟ್ರಮ್ಮ :   ಕಡತಿ ಗ್ರಾಮದ ಗುರುದೇವರ ಮಠದ ಶ್ರೀಮತಿ ಹಾಲಮ್ಮ ಮತ್ತು ಶ್ರೀ ಕೊಟ್ರಯ್ಯ ದಂಪತಿಗಳ ಸುಪುತ್ರಿಯಾದ ಕೊಟ್ರಮ್ಮನವರು ಸೇವೆಯಿಂದಲೇ ಹೆಸರಾದವರು. ಭಕ್ತರ ಪಾಲಿಗೆ ಅವರು ಸಾದ್ವಿ-ಸೇವಾ ಶಿರೋಮಣಿ. ಅಜ್ಜಯ್ಯನವರ ಧರ್ಮಪತ್ನಿಯಾದ ಕೊಟ್ರಮ್ಮನವರು ಸದಾ ಪತಿಯ ಸೇವೆ, ಕುಟುಂಬ ಸೇವೆ ಹಾಗೂ ಶ್ರೀಮಠದ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟು ಸಾರ್ಥಕ ಜೀವನ ನಡೆಸಿ ಲಿಂಗೈಕ್ಯರಾಗಿದ್ದಾರೆ. ಇಂದಿಗೂ ಶ್ರೀಮಠದಲ್ಲಿ ಅವರ ಸೇವೆ ಸ್ಮರಣೀಯವಾಗಿದೆ.

ಗುರುಸ್ಮರಣೆ – ವಾಕ್ಯ ಪರಿಪಾಲನೆ :  ಅಜ್ಜಯ್ಯ ಸ್ವಾಮಿಗಳು ಸದಾ ತಮ್ಮ ಗುರುಗಳನ್ನು ಸ್ಮರಿಸುತ್ತಾರೆ. ಅಜ್ಜಯ್ಯನವರ ಗುರುಗಳಾದ ಹಡಗಲಿ ತಾ|| ಶ್ರೀ ಸಿದ್ಧಾಪುರ ಮಠದ ಶ್ರೀ ಷ.ಬ್ರ. ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಅಖಂಡ ತಪಸ್ವಿಗಳು. ಅವರ ತಪೋಬಲ ಒಂದು ಪವಾಡವೇ ಸರಿ. ಇಂತಹ ಸದ್ಗುರುವಿನ ಕೃಪಾಶೀರ್ವಾದದಿಂದ ಪ್ರಸಾದಿಕರಾದ ಅಜ್ಜಯ್ಯ ಸ್ವಾಮಿಗಳು ಸತ್ಯ, ನ್ಯಾಯ, ನಿಷ್ಠೆ, ಆಚಾರ-ವಿಚಾರ, ಪ್ರಾಮಾಣಿಕತೆ – ಪರಿಶುದ್ಧತೆಗೆ ಅತಿ ಮಹತ್ವ ನೀಡುವ ಸಾದ್ವಿ ಪುರುಷರು. ತಮ್ಮ ಗುರುವಿನ ವಾಕ್ಯಗಳನ್ನು ಅಜ್ಜಯ್ಯನವರು ಸದಾ ಪರಿಪಾಲಿಸುತ್ತಾರೆ. ಈ ಜಗತ್ತಿನಲ್ಲಿ ಈಶ್ವರನೊಬ್ಬನನ್ನು ಬಿಟ್ಟು ಯಾರನ್ನೂ ದಾನಿಯೆನ್ನಕೂಡದು, ಸ್ತ್ರೀ-ಪುರುಷ ಮಾನವರಿಬ್ಬರೂ ಹಣೆಯಲ್ಲಿ ವಿಭೂತಿ ಧರಿಸಿಕೊಂಡು ಕೊರಳಲ್ಲಿ ಇಷ್ಟಲಿಂಗ ಧರಿಸಬೇಕು, ಪ್ರತಿನಿತ್ಯ ಶಿವಪೂಜೆ ಮಾಡಬೇಕು. ಲಿಂಗಕ್ಕೆ ಪ್ರಸಾದ ನೈವೇದ್ಯ ಮಾಡಿದ ನಂತರವೇ ಆಹಾರ ಸೇವಿಸಬೇಕು. ಮಾಡದಿದ್ದರೆ ಮುಕ್ತಿ ದೊರಕುವುದಿಲ್ಲ, ಗುರುಕೃಪೆ, ಶಿವಕೃಪೆ ಆಗುವುದಿಲ್ಲ. ಆದ್ದರಿಂದ ಆಚಾರ ವಿಚಾರಗಳಲ್ಲಿ ಕಟ್ಟು ನಿಟ್ಟಿನ ಪಾಲನೆ ಇರಬೇಕು ಎಂಬ ತಮ್ಮ ಗುರುವಿನ ವಾಕ್ಯಗಳನ್ನು ಅಜ್ಜಯ್ಯನವರು ಸದಾ ಪರಿಪಾಲಿಸುತ್ತಾ ಇತರರಿಗೂ ಬೋಧಿಸುತ್ತಿದ್ದಾರೆ. ತಮ್ಮ ಗುರುಗಳ ಅಮೃತ ಹಸ್ತದ ಮೂಲಕವೇ ಶ್ರೀ ಮಠಕ್ಕೆ ಶ್ರೀ ಜಗದ್ಗುರು ವಿಶ್ವಾರಾಧ್ಯ ಮೂರ್ತಿಯನ್ನು ಅರ್ಪಿಸಿ ಸಂತುಷ್ಠಿಯ ಭಾವ ತಳೆದಿದ್ದಾರೆ.

ಕಾಯಕ ಯೋಗಿ:ಸದಾ ಕ್ರಿಯಾಶೀಲರಾಗಿರುವ ಶ್ರೀ ಅಜ್ಜಯ್ಯ ಸ್ವಾಮಿಯವರು ಶಿಕ್ಷಕ ವೃತ್ತಿಯಲ್ಲೂ ಸಹ ಸೇವಾನಿಷ್ಠೆಯಿಂದ ಹೆಸರು ಗಳಿಸಿರುವುದಲ್ಲದೇ ಆಧ್ಯಾತ್ಮಿಕ ಕ್ಷೇತ್ರದಲ್ಲೂ ಸರ್ವ ಭಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಸದಾ ಹಸನ್ಮುಖತೆ, ಲವಲವಿಕೆಯಿಂದ ಎಲ್ಲರೊಡನೆ ಪ್ರೀತಿಯಿಂದ ಮಾತನಾಡುವ ಇವರಿಗೆ ದಣಿವೆಯ ಅನುಭವವೇ ಎಂದಿಗೂ ಆಗಿಲ್ಲ. ತಮ್ಮ70ರ ಈ ವಯಸ್ಸಿನಲ್ಲೂ ಅವರು ಇಷ್ಟೊಂದು ಕ್ರಿಯಾಶೀಲರಾಗಿರುವುದನ್ನು ಕಂಡರೆ ಎಲ್ಲರಿಗೂ ಆಶ್ಚರ್ಯವೇ ಸರಿ. ಅವರ ನಿಷ್ಕಲ್ಮಶ ಪ್ರೀತಿ ಬೆರೆತ ಮುಗುಳ್ನಗೆಯೇ ಭಕ್ತರಿಗೆ ಒಂದು ದಿವ್ಯ ಔಷದವಾಗಿದೆ. ಪ್ರತಿ ಭಾನುವಾರ-ಸೋಮವಾರ ಹಾಗೂ ಗುರುವಾರ ಮತ್ತು ಹುಣ್ಣಿಮೆ, ಅಮಾವಾಸ್ಯೆಯಂತಹ ವಿಶೇಷ ದಿನಗಳಲ್ಲಿ ನೂರಾರು ಭಕ್ತರು ಶ್ರೀಮಠಕ್ಕೆ ಬರುತ್ತಾರೆ. ತಮ್ಮ ಕಷ್ಟ -ಸುಖ- ಸಮಸ್ಯೆಗಳನ್ನು ಅಜ್ಜಯ್ಯನವರ ಬಳಿ ಹೇಳಿಕೊಂಡು ಪರಿಹಾರ ಪಡೆದು ಕೊಳ್ಳುತ್ತಿದ್ದಾರೆ. ಈ ದಿನಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ಅವರು ಒಂದಿನಿತು ಕೂಡ ದಣಿವು, ಸುಸ್ತು, ಆಯಾಸ ತೋರಿಸದಂತೆ ಸದಾ ಹಸನ್ಮುಖತೆ ಯಿಂದಲೇ ಭಕ್ತರ ಸಮಸ್ಯೆಗಳಿಗೆ ಪರಿಹಾರ ನೀಡಿ ಕಳುಹಿಸುತ್ತಾರೆ. ಅಜ್ಜಯ್ಯನವರ ಈ ಲವಲವಿಕೆ ಇತರರಿಗೆ ಮಾದರಿಯೇ ಸರಿ. ಅಜ್ಜಯ್ಯನವರ ನಿಷ್ಕಲ್ಮಶ ಪ್ರೀತಿಯ ನುಡಿಗಳೇ ನಮಗೆ ಸಾಕಷ್ಟು ಪರಿಹಾರ ಒದಗಿಸುತ್ತಿವೆ ಎಂಬುದು ಭಕ್ತರ ಅಂಬೋಣ. ಸರಳತೆ ಮತ್ತು ಸಜ್ಜನಿಕೆಯ ಸಾಕಾರ ಮೂರ್ತಿಯಂತಿರುವ ಅಜ್ಜಯ್ಯನವರು ಸದಾ ನಿಷ್ಠೆ ಮತ್ತು ಪ್ರಾಮಾಣಿಕತೆಯ ಜೀವನಕ್ಕೆ ಬದ್ಧತೆ ನೀಡಿದವರು. ಹಾಗಾಗಿ ತಮ್ಮ ಗುರುವಾಕ್ಯ ನುಡಿಯ ಪರಿಣಾಮದಿಂದ ಪರಿಹಾರ ಪಡೆದ ಕೆಲ ಭಕ್ತರು ದುಬಾರಿ ಬೆಲೆಯ ವಸ್ತುಗಳು, ಬೆಳ್ಳಿ, ಬಂಗಾರ, ಕಾರು ಇತ್ಯಾದಿ ದೊಡ್ಡ ದೊಡ್ಡ ಉಡುಗೊರೆ ಅಥವಾ ಐಷಾರಾಮಿ ಕೊಡುಗೆ ನೀಡಲು ಬಂದಾಗಲೂ ನಯವಾಗಿ ತಿರಸ್ಕರಿಸಿದ ಖ್ಯಾತಿಗೆ ಭಾಜನರಾಗಿದ್ದಾರೆ.

ಕೊನೆಯ ಮಾತು:ಒಟ್ಟಾರೆ ಭಕ್ತರಿಗೆ ಸರಳ, ಸುಂದರ, ಸಚ್ಚಾರಿತ್ರ್ಯ ಸುಖ ಜೀವನಕ್ಕೆ ಕರೆ ನೀಡುತ್ತಾ, ಮೋಕ್ಷ ಸಾಧನೆಯ ಸಂದೇಶ ನೀಡುತ್ತಾ, ಶುದ್ಧ-ಸುಸಂಸ್ಕøತ ಬದುಕಿಗೆ ಬೋಧೆಗೈಯುತ್ತ, ಸಕಲರ ಸಮಸ್ಯೆಗಳಿಗೂ ಪರಿಹಾರ ಒದಗಿಸುತ್ತಾ, ಲೋಕ ಕಲ್ಯಾಣಾರ್ಥ ಆಧ್ಯಾತ್ಮಿಕ ಸೇವೆ ಸಲ್ಲಿಸುತ್ತಿರುವ ಈ ಶ್ರೀಮಠವು ದೈವ ದರ್ಶನದ ಕೇಂದ್ರವೇ ಆಗಿದೆ ಎಂದರೂ ಅತಿಶಯೋಕ್ತಿಯೇನಲ್ಲ. ಅಂತೆಯೇ, ಈ ಶ್ರೀಮಠದ ಮೂಲಕ ನೊಂದವರ ನೆರಳಾಗಿರುವ ಶ್ರೀ ಅಜ್ಜಯ್ಯ ಸ್ವಾಮೀಜಿಯವರ ಸೇವಾಕಾರ್ಯವೂ ಪ್ರಶಂಸನಾರ್ಹವೇ ಸರಿ. ನಾವೆಲ್ಲಾ ಅವರಿಗೆ ( ಮೊ.ಸಂ – 9901198400 ) ಅಭಿನಂದಿಸಿ, ಒಂದಷ್ಟು ಗೌರವಿಸಿ – ಪ್ರೋತ್ಸಾಹಿಸೋಣ.

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ | 9986715401

ಅಂತರಂಗ

ಮರೆಯಾದ ಅಪೂರ್ವ ಚಿತ್ರಕಲಾ ಪ್ರತಿಭೆ ‘ಶೋಭಾ ಕರಣಿಕ್’

Published

on

ಶೋಭಾ ಕರಣಿಕ್
  • ಡಾ.ಎನ್.ಕೆ.ಪದ್ಮನಾಭ, ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ

ವರು ಬಿಡಿಸುತ್ತಿದ್ದ ರೇಖೆಗಳು ನಮ್ಮ ದೇಶೀ ಸಂಸ್ಕೃತಿಯ ವಕ್ತಾರಿಕೆಯ ಪಾತ್ರ ನಿರ್ವಹಿಸುತ್ತಿದ್ದವು. ಕನ್ನಡದ್ದೇ ಆದ ಕಲಾತ್ಮಕ ಪರಂಪರೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದ ಅವರ ಚಿತ್ರಗಳು ಜೀವಂತಿಕೆಯ ಗುಣಲಕ್ಷಣದೊಂದಿಗೆ ಕಂಗೊಳಿಸುತ್ತಿದ್ದವು.

ಸಾಂಪ್ರದಾಯಿಕ ಚಿತ್ರಶೈಲಿಯನ್ನು ಆಧುನಿಕ ಅಗತ್ಯಗಳಿಗೆ ತಕ್ಕಂತೆ ಮಣಿಸಿ ಪರಂಪರೆಯೊಳಗೇ ಅಡಗಿದ್ದ ಮೌಲಿಕ ಮಾದರಿಗಳನ್ನು ಮನಗಾಣಿಸುವ ಶ್ರದ್ಧೆಯೊಂದಿಗೇ ಅವರು ಚಿತ್ರವಿನ್ಯಾಸ ರೂಪಿಸುತ್ತಿದ್ದರು. ಇನ್ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಮಾಧ್ಯಮಗಳ ಮೂಲಕ ತಮ್ಮ ಚಿತ್ರಗಳನ್ನು ಕಾಣಿಸುತ್ತಿದ್ದರು. ಪರಂಪರೆ ಮತ್ತು ವರ್ತಮಾನವನ್ನು ಬೆಸೆದು ಹೊಸ ಬಗೆಯ ಚಿತ್ರಪ್ರಯೋಗಗಳನ್ನು ನಡೆಸುವ ಹುಮ್ಮಸ್ಸಿನೊಂದಿಗೆ ಚಿತ್ರಕಲಾಯಾನ ಮುಂದುವರೆಸಿದ್ದರು. ಅವರ ಹೆಸರು ಶೋಭಾ ಕರಣಿಕ್.

ಇತ್ತೀಚೆಗಷ್ಟೇ ಅವರ ಚಿತ್ರಕಲಾಯಾನ ನಿಂತಿತು. ಅವರ ನಿಧನವು ವಿನೂತನವಾದ ಪ್ರಯೋಗಶೀಲ ಚಿತ್ರಕಲಾ ಸಾಧ್ಯತೆಗಳನ್ನು ತಡೆದು ನಿಲ್ಲಿಸಿತು. ಪುರಾಣದ ಕಥನ ಪ್ರಸಂಗಗಳಲ್ಲಿ ಉಲ್ಲೇಖಿತ ದೇವರು-ದೇವತೆಗಳ ಅಸ್ಮಿತೆ ಮತ್ತು ದೇಸೀ ಸಂಸ್ಕೃತಿಯನ್ನು ಬಿಂಬಿಸುವ ವಿನ್ಯಾಸಗಳನ್ನು ಸಮನ್ವಯಗೊಳಿಸಿ ಚಿತ್ರಕಲೆಗೆ ಹೊಸ ಆಯಾಮ ತಂದುಕೊಟ್ಟ ಪ್ರತಿಭೆಯಾಗಿ ಶೋಭಾ ಕರಣಿಕ್ ಅವರದ್ದು ವಿಶೇಷ ವ್ಯಕ್ತಿತ್ವವಾಗಿತ್ತು. ಮ್ಯೂರಲ್ ಪೇಂಟಿಂಗ್‌ನಲ್ಲಿ ಅವರಿಗಿದ್ದ ಪರಿಣತಿ, ಉತ್ತರ ಕನ್ನಡದ ಕಾವಿ ಕಲೆಯ ಕುರಿತಾದ ವಿಸ್ತೃತ ಜ್ಞಾನವು ಚಿತ್ರಕಲೆಯನ್ನು ಉನ್ನತೀಕರಿಸುವುದಕ್ಕೆ ಅವರಿಗೆ ನೆರವಾಗಿತ್ತು.

ಕಲೆಯ ಜೊತೆಗಿನ ಅನುಸಂಧಾನದ ಕ್ಷಣಗಳು ಅಪೂರ್ವ. ಒಂದು ನಿರ್ದಿಷ್ಟ ನಿರ್ಣಾಯಕ ಸಂದರ್ಭ, ಸಮಯದಲ್ಲಿ ಕಲೆಯೊಂದು ವ್ಯಕ್ತಿತ್ವವನ್ನು ಪ್ರಭಾವಿಸಿ ಸೃಜನಶೀಲತೆಯ ಹಸಿವನ್ನು ನೆಲೆಗೊಳಿಸುವುದಕ್ಕೆ ಪ್ರೇರಣೆಯಾಗುತ್ತದೆ. ಕಲೆಯ ಪ್ರಭಾವ ಎರಡು ಬಗೆಯದ್ದು. ಸಹೃದಯರನ್ನು ತನ್ನ ಕಲಾತ್ಮಕ ಮಾದರಿಗಳಿಂದ ಸೆಳೆದು ಅವರೊಳಗೆ ವಿಶೇಷ ಅನುಭೂತಿ ಧಾರೆ ಎರೆಯುವಂಥದ್ದು ಒಂದು ಬಗೆಯಾದರೆ ಹೀಗೆ ಸೆಳೆದುಕೊಂಡು ಮತ್ತೆ ಮತ್ತೆ ಪ್ರಭಾವಿಸುತ್ತಾ ಸಹೃದಯರನ್ನೇ ಕಲಾವಿದರನ್ನಾಗಿಸುವ ಸಾಧ್ಯತೆ ಮತ್ತೊಂದು ತೆರನಾದದ್ದು.

ಈ ಕಾರಣಕ್ಕಾಗಿಯೇ ಕಲಾತ್ಮಕ ಸಂಭವನೀಯತೆಯು ಅನನ್ಯವೆನ್ನಿಸಿಕೊಂಡಿದೆ. ಇಂಥ ಅನನ್ಯತೆಯೊಂದಿಗೇ ಶೋಭಾ ಕರಣಿಕ್ ಗುರುತಿಸಿಕೊಂಡಿದ್ದರು. ಅವರು ಓದಿದ್ದು ತಾಂತ್ರಿಕ ವಿಜ್ಞಾನ. ಆದರೆ, ಅವರ ನಿಜದ ಪ್ರತಿಭೆ ಅಭಿವ್ಯಕ್ತವಾದದ್ದು ಚಿತ್ರಕಲೆಯ ಮೂಲಕ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರಿಸರದಲ್ಲಿ ಬೆಳೆದ ಶೋಭಾ ಕರಣಿಕ್ ಮೊದಲಿನಿಂದಲೂ ದೇಶೀ ಕಲೆಯ ಕುರಿತು ವಿಶೇಷ ಆಸಕ್ತಿಯನ್ನು ಬೆಳೆಸಿಕೊಂಡು ಬಂದಿದ್ದರು. ಹೈಸ್ಕೂಲ್ ಓದುತ್ತಿರುವಾಗಲೇ ಕಾವಿಕಲೆಯ ವಿನ್ಯಾಸ ಅವರನ್ನು ಸೆಳೆದಿತ್ತು. ಇವುಗಳನ್ನು ಮತ್ತೆ ಮತ್ತೆ ನೋಡುತ್ತಾ ಹೋದಂತೆಲ್ಲಾ ಕಾವಿ ಕಲೆಯ ಕುರಿತ ಆಕರ್ಷಣೆ ಕಲಿಕೆಯ ಹಂಬಲವಾಗಿ ಮಾರ್ಪಟ್ಟಿತು. ಉತ್ತರ ಕನ್ನಡದ ಟೆಂಪಲ್ ರ‍್ಟ್ ಪ್ರಕಾರದ ಭಾಗವಾಗಿ ಕಾವಿ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ ಅವರು ರಚಿಸಿದ್ದ ತರಹೇವಾರಿ ವಿನ್ಯಾಸಗಳು ವಿವಿಧ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮಗಳಲ್ಲಿ ಗಮನ ಸೆಳೆದಿದ್ದವು.

ಕಾವಿ ಕಲೆಯೂ ಸೇರಿದಂತೆ ನಮ್ಮ ಸಾಂಪ್ರದಾಯಿಕ ಕಲೆಗಳು ಈ ಹಿಂದಿನ ಕಾಲದ ತಲೆಮಾರನ್ನಷ್ಟೇ ಪ್ರಭಾವಿಸಿದ್ದಲ್ಲದೇ ನಂತರದ ಹೊಸ ಪೀಳಿಗೆಯನ್ನೂ ಆಕರ್ಷಿಸುವ ಗುಣ ಹೊಂದಿವೆ. ಮೂಲ ಅಂತಃಸತ್ವಕ್ಕೆ ಧಕ್ಕೆಯೊದಗದ ಹಾಗೆ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಈ ಸಾಂಪ್ರದಾಯಿಕ ಚಿತ್ರಕಲಾ ವಿನ್ಯಾಸಗಳನ್ನು ಮರುರೂಪಿಸಬಹುದು. ಹೊಸ ಕಾಲದಲ್ಲಿ ಅವುಗಳ ಮಹತ್ವವನ್ನು ಮನಗಾಣಿಸಬಹುದು ಎಂಬುದು ಅವರ ಆಶಯವಾಗಿತ್ತು.

ಕಲೆಯೊಂದು ಒಂದು ಕಾಲದಿಂದ ಮತ್ತೊಂದು ಕಾಲಕ್ಕೆ ದಾಟಿಕೊಳ್ಳುವಾಗ ಪಲ್ಲಟಗಳು ಸಹಜ. ಈ ಪಲ್ಲಟಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಕಲೆಗಳಿಗೆ ಹೊಸಕಾಲದಲ್ಲೂ ಜೀವಂತಿಕೆಯನ್ನು ತಂದುಕೊಡುವ ಪ್ರಯತ್ನದ ಅಗತ್ಯವನ್ನು ಮನಗಾಣಿಸುವುದಕ್ಕಾಗಿಯೇ ಶೋಭಾ ಕರಣಿಕ್ ಅವರು ಚಿತ್ರಕಲಾ ರಚನೆಯ ವೈವಿಧ್ಯಮಯ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು.

ಅವರ ನಿಧನದಿಂದ ಈ ಪ್ರಯೋಗಶೀಲ ಹೆಜ್ಜೆಗಳು ನಿಂತಂತಾಗಿವೆ. ಆದರೆ, ಅವರು ಪರಂಪರೆ ಮತ್ತು ವರ್ತಮಾನವನ್ನು ಸಮನ್ವಯಗೊಳಿಸಿ ಸಾಬೀತುಪಡಿಸಿದ ಅಪೂರ್ವ ಚಿತ್ರಕಲಾ ಪ್ರಯೋಗಶೀಲತೆಯ ಜೀವಂತಿಕೆ ಹೊಸ ಪೀಳಿಗೆಗೆ ಸದಾ ಸ್ಫೂರ್ತಿಯ ಸೆಲೆಯಾಗಿರುತ್ತದೆ. ಅವರ ಹೆಸರಿನ ಇನಸ್ಟಾಗ್ರಾಂನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳು ಇಂಥ ಸ್ಫೂರ್ತಿಯ ಪ್ರಭೆಯನ್ನು ದಾಟಿಸುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಹೊಸತನದ ಹೊಸ್ತಿಲಲ್ಲಿ..!

Published

on

ಬರಹ : ಮೀನಾಕ್ಷಿ. ಬಿ
  • ಮೀನಾಕ್ಷಿ .ಬಿ, ಎಂ. ಎ ವಿದ್ಯಾರ್ಥಿನಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ದಾವಣಗೆರೆ ವಿಶ್ವವಿದ್ಯಾಲಯ

ಹೊಸವರ್ಷ ವೆಂಬುದು ಪ್ರತಿಯೊಬ್ಬರ ಬಾಳಲ್ಲಿ ವರ್ಷಕ್ಕೊಮ್ಮೆ ಬರುವ ಹೊಸದಿನಗಳ ಆಗಮನ ಯಾಕೆಂದರೆ ಹೊಸತನವನ್ನು ತರುತ್ತಾ ಇರುವ ಹೊಸವರ್ಷ ಕೂಡ ಒಂದು ಜೀವನದ ಭರವಸೆ, ನಿರೀಕ್ಷೆ ಕನಸುಗಳ ಬಂಡಿಯ ಮೇಲೆ ಸಾಗುವ ಪ್ರಯಾಣ ನಮ್ಮ ಜೀವನ.

ವ್ಯಕ್ತಿಯ ನಂಬಿಕೆಯ ಆಧಾರದ ಮೇಲೆಯೇ ಜೀವನ ಸಾಗುಸುತ್ತಿರುವುದು.ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿಯೂ ಕೂಡ ಕಷ್ಟ -ಸುಖ ದುಃಖದ ಸಂಗತಿಗಳು ಇದ್ದೆ ಇರುತ್ತದೆ. ಕೆಲವೊಂದು ಬಾರಿ ಹತಾಶೆಯನ್ನು ಹೊಂದಿ ಜೀವನದಲ್ಲಿ ಜಿಗುಪ್ಸೆ ಒಂದು ಕೆಟ್ಟ ನಿರ್ಧಾರಕ್ಕೆ ಮನಸ್ಸು ದಾರಿ ಮಾಡಿಕೊಡುತ್ತದೆ. ಹಾಗೆಯೇ ಕಷ್ಟ ಇದ್ದಲ್ಲಿ ಸುಖವಿರುವುದುಂಟು ಅನ್ನುವ ಹಾಗೇ ಇವತ್ತಲ್ಲ ನಾಳೆ ಒಳ್ಳೆಯ ದಿನಗಳು ನಮ್ಮ ಜೀವನದಲ್ಲಿ ಬರಬಹುದೆಂಬ ಭರವಸೆ,ಆತ್ಮವಿಶ್ವಾಸವನ್ನು ಇಟ್ಟುಕೊಂಡು ಜೀವನ ನಡೆಸುತ್ತಲೇ ಇದ್ದೇವೆ.

ಈ ವರ್ಷ ಒಳ್ಳೆಯದಾಗಿಲ್ಲ ಅಂದರೆ ಏನು ಮುಂದಿನ ವರ್ಷ ಆದರೂ ನನ್ನ ಬದುಕು ಬದಲಾಗಬಹುದು ಎಂಬ ಹೊಸತನವನ್ನು ನಮ್ಮಲ್ಲಿ ಭರವಸೆ,ನಂಬಿಕೆಯ ಬೇರಿನೊಂದಿಗೆ ಬೆರೆಸಿಕೊಂಡು ಬದುಕಬೇಕು.ನಾಳೆಯ ದಿನಗಳ ಮೇಲಿನ ಅನಿರೀಕ್ಷಿತ ತೀರಿವಿನಿಂದಾಗುವ ಬದುಕಿನಲ್ಲಾಗುವ ಬದಲಾವಣೆ ಹೊಸತನದ ಚಾಪನ್ನು ಮೂಡಿಸುತ್ತದೆ.
ಎಂಥ ಹತಾಶ ಮನಸ್ಥಿತಿಯವರಲ್ಲೂ ಹೊಸವರ್ಷ ಭರವಸೆಯ ಅಭಯ ಹಸ್ತವನ್ನು ಚಾಚುತ್ತದೆ. ಅದೆಲ್ಲಿಂದಲೇ ಆತ್ಮ ವಿಶ್ವಾಸದ ಬೆಳಕಿನ ಕಿಡಿಯೊಂದು ಕಾಣಿಸಿಕೊಳ್ಳುತ್ತದೆ.

ಹೊಸವರ್ಷವೆಂಬುದು ಕೇವಲ ಸಂಭ್ರಮದ ಕಾಲ ಮಾತ್ರವಲ್ಲ. ಕಳೆದ ದಿನಗಳತ್ತ ಹಿಂತಿರುಗಿ ನೋಡುವ ಸಮಯ ಕೂಡ ಹಿಂದಿನ ದಿನಗಳ ಪುಟಗಳನ್ನು ತೆಗೆದು ನೋಡಿದರೆ. ಉತ್ಸಾಹದ ಗಳಿಗೆಗಳು ಮುಂದಿನ ಕೆಲಸಗಳಿಗೆ ಚೈತನ್ಯ, ಉತ್ಸಾಹ ನೀಡಬಲ್ಲದು.ನಮ್ಮ ದಿಕ್ಕಿಲ್ಲದ ದಾರಿಗೆ ಖಚಿತ ದಿಕ್ಕು ದಾರಿಯನ್ನು ತೋರಬಲ್ಲದು.

ಜೀವನದ ಪ್ರಯಾಣಕ್ಕೆ ಒಂದು ನಿಲ್ದಾಣವಾಗಿದೆ. ನಾವು ಕಾಣುವ ಕನಸಗಳು ಕನಸಾಗಿಯೇ ಉಳಿದಿದೆ ಯಾಕೆಂದರೆ ನಮ್ಮಲ್ಲಿನ ಬೇಜವಾಬ್ದಾರಿ, ನಿರ್ಲಕ್ಷತನ ಆಮೇಲೆ ಮಾಡಿದರೆ ಆಯ್ತು ಅನ್ನೋ ಮನೋಭಾವನೆ ಯಾವುದರ ಬಗ್ಗೆಯೂ ಆಸಕ್ತಿ ಕೊಡದೆ ಇರೋದು ಎಲ್ಲವು ನಮ್ಮ ಕನಸಿನ ಜೀವನ ರೂಪಿಸಿಕೊಳ್ಳುವಲ್ಲಿ ಸಫಲರಾಗದೆ ಉಳಿಯಲು ಕಾರಣ.

ಮೊದಲು ಆತ್ಮವಿಶ್ವಾಸ ಬೇಕು ನಾನು ಈ ಕೆಲಸವನ್ನು ಮಾಡುವೆ ಎಂಬ ಒಂದು ನಿರ್ಧಿಷ್ಟ ಗುರಿ ಇರಬೇಕು ಅಂಗಿದ್ರೆ ಅಷ್ಟೇ ಜೀವನದ ಪಯಣದ ಹಾದಿಯಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಇಲ್ಲವಾದಲ್ಲಿ ಸೋಲನ್ನು ಅನುಭವಿಸುವ ಪರಿಸ್ಥಿತಿ ಎದುರಾಗುತ್ತದೆ. ಮುಂದಿನ ದಿನಗಳ ಆಗಮನದೊಂದಿಗೆ ನಾವು ಕಂಡ ಕನಸನ್ನು ಈಡೇರಿಸಿಕೊಳ್ಳುವ ಸತತ ಪ್ರಯತ್ನದೊಂದಿಗೆ ಬರುವ ದಿನವನ್ನು ಸ್ವಾಗತಿಸಿಕೊಳ್ಳೋಣ.
ಎಲ್ಲರ ಬಾಳಲಿ ಹರುಷ ,ಸಂತೋಷ ಮನೆಮಾಡಲಿ ಎಂದು ಆಶಿಸುತ್ತಾ ಎಲ್ಲರಿಗೂ ಹೊಸವರ್ಷದ ಶುಭಾಶಯಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕಾಮರೂಪದ ಪ್ರಭಾಕರ

Published

on

  • ಪ್ರೊ.ರಹಮತ್ ತರೀಕೆರೆ

ನಾನು ಕೋಲಾರಕ್ಕೆ ಹೋದಾಗೆಲ್ಲ ಎರಡು ಜಾಗಗಳಿಗೆ ತಪ್ಪದೆ ಭೇಟಿ ಕೊಡುತ್ತೇನೆ. ಒಂದು-ಕೆ.ರಾಮಯ್ಯ ಮತ್ತವರ ಸಂಗಾತಿಗಳು ಸೇರಿ ತೇರುಹಳ್ಳಿ ಬೆಟ್ಟದ ಮೇಲೆ ಕಟ್ಟಿರುವ `ಆದಿಮ’ಕ್ಕೆ; ಇನ್ನೊಂದು-`ಕಾಮರೂಪಿ’ ಎಂಬ ಹೆಸರಲ್ಲಿ ಬರೆಯುತ್ತಿದ್ದ ಕನ್ನಡ ಲೇಖಕ ಡಾ. ಎಂ.ಎಸ್. ಪ್ರಭಾಕರ ಅವರಿರುವ ಕಠಾರಿಪಾಳ್ಯದ ಮನೆಗೆ. 50ರ ದಶಕದ ಕೊನೆಯಲ್ಲಿ ಕರ್ನಾಟಕ ಬಿಟ್ಟುಹೋದ ಪ್ರಭಾಕರ, ‘ಹಿಂದೂ’ ಪತ್ರಿಕೆಯ ವರದಿಗಾರರಾಗಿ ಆಫ್ರಿಕಾ ಅಮೇರಿಕ ಬಾಂಗ್ಲಾದೇಶ ಈಶಾನ್ಯ ಭಾರತವನ್ನೆಲ್ಲ ಅಲೆದಾಡಿ, ಕಡೆಗೆ ಕಾಮರೂಪದಲ್ಲಿ (ಅಸ್ಸಾಮಿನ ಪುರಾತನ ಹೆಸರಿದು) ನೆಲೆಸಿಬಿಟ್ಟರು.

`ಕಾಮರೂಪ’ ಶಬ್ದಕ್ಕೆ ಬಯಸಿದ ರೂಪಧಾರಣೆ ಮಾಡುವ ಮಾಯಾವಿ ವಿದ್ಯೆ ಎಂಬರ್ಥವೂ ಇದೆ. ಎಂಬತ್ತರ ಪ್ರಾಯದಲ್ಲಿ ಕರ್ನಾಟಕಕ್ಕೆ ಮರಳಿ ಬಂದಿರುವ ಪ್ರಭಾಕರ ಅವರು, ತಾವು ಹುಟ್ಟಿಬೆಳೆದ ಮನೆಯಲ್ಲಿ ಬಿಡಾರ ಹೂಡಿದ್ದಾರೆ. ಹಿರೀಕರು ಕಟ್ಟಿದ ದೊಡ್ಡಮನೆ. ಮನೆಯೊಳಗೊಂದೇ ಜೀವ; ಮನೆ ತುಂಬ ಪುಸ್ತಕದ ರಾಶಿ (ಹೆಚ್ಚಿನವು ಇಂಗ್ಲೀಶ್ ಬಂಗಾಳಿ ಅಸ್ಸಾಮಿ). ನಟ್ಟನಡುವಿರುವ ಹಾಲಿನ ಮೂಲೆಯಲ್ಲಿ ಬೀದಿಗೆ ಬೆನ್ನುಕೊಟ್ಟಂತೆ ಕೂತು, ಲ್ಯಾಪ್‌ಟಾಪಿನಲ್ಲಿ ಬರೆಯುತ್ತ, ವೆಬ್‌ಸೈಟುಗಳನ್ನು ಜಾಲಾಡುತ್ತ, ಬ್ಲಾಗುಗಳನ್ನೋದುತ್ತ ಪ್ರಭಾಕರ ಕುಳಿತಿರುತ್ತಾರೆ.

ಅವರ ಮನಗೆ ಹೋದಾಗಲೆಲ್ಲ ನನಗೆ ರಾಗಿಮುದ್ದೆ ಸೊಪ್ಪಿನ ಸಾರಿನ ಊಟ ಸಿಗುತ್ತದೆ. ಅವರು ಉಣ್ಣುವುದೊಂದು ಅಪೂರ್ವ ದೃಶ್ಯ. ತಣಿಗೆಯ ನಡುವೆ ಹದವಾಗಿ ಬೆಂದು ಕಂಪು ಬೀರುವ ಗೋಂದಿನಂತಹ ಕೆಂಗಪ್ಪು ಬಣ್ಣದ ಬಿಸಿಮುದ್ದೆಯನ್ನಿಟ್ಟು, ಅದರ ತಲೆಯ ಮೇಲೆ ಶಿಖರವನ್ನು ಹಿಮವು ಅಲಂಕರಿಸುವಂತೆ ಬೆಣ್ಣೆಯ ಚೂರನ್ನಿಡುತ್ತಾರೆ; ಬೆಣ್ಣೆಯು ಮುದ್ದೆ ಕಾವಿಗೆ ಕರಗಿ ಇಡೀ ಚೆಂಡನ್ನು ಆವರಿಸಿ ಅಭಿಷೇಕ ಮಾಡಿಸಿಕೊಂಡ ಮೂರುತಿಯಂತೆ ಥಳಥಳ ಹೊಳೆಯುತ್ತದೆ. ಆಗ ಘಮಿಸುವ ಮುದ್ದೆಯನ್ನು ಚೆನ್ನಾಗಿ ಮಿದ್ದು, ಒಂದು ಬದಿಯಿಂದ ಇಷ್ಟಿಷ್ಟೇ ಮುರಿದು ತುತ್ತು ಮಾಡಿ, ಸೊಪ್ಪಿನ ಗಟ್ಟಿಸಾರಲ್ಲಿ ಹೊರಳಾಡಿಸಿ ಗುಕ್ಕನೆ ನುಂಗಿ ಕಣ್ಮುಚ್ಚಿ ಕೊಳ್ಳುತ್ತಾರೆ. ತರುವಾಯ ಶ್ರೀಯುತರು ಜ್ಞಾನೋದಯವಾದ ಸಿದ್ಧನಂತೆ ಅವರ ಮುಖದಲ್ಲಿ ಪರಮಾನಂದದ ಒಂದು ಕಳೆ ಆವಿರ್ಭವಿಸುತ್ತದೆ. ಇದನ್ನೆಲ್ಲ ಕಾಣುವಾಗ, ಲೋಕವನ್ನೆಲ್ಲ ಸುತ್ತಾಡಿರುವ ಇವರು ಕೋಲಾರಕ್ಕೆ ಮುದ್ದೆಸುಖಕ್ಕಾಗಿಯೆ ಬಂದರೇನೊ ಎಂದು ಶಂಕೆ ಬರುತ್ತದೆ. ಪ್ರಭಾಕರ ಅವರಿಗೆ ಆಧುನಿಕ ಕನ್ನಡ ಸಾಹಿತ್ಯದ ಮೇಲೆ ಅನೇಕ ದೂರುಗಳಿವೆ. ಅವುಗಳಲ್ಲಿ ಆಹಾರ ತಯಾರಿಕೆ ಮತ್ತು ಸೇವನೆ ಕುರಿತು ಅದರಲ್ಲಿ ವಿವರಗಳೇ ಇಲ್ಲ ಎಂಬುದೂ ಒಂದು.

ಕನ್ನಡದ ಅತಿಹಿರಿಯ ಮತ್ತು ಹೆಚ್ಚು ಬರೆಯದ ಲೇಖಕರಲ್ಲಿ ಪ್ರಭಾಕರ ಅವರೂ ಒಬ್ಬರು. ನಾನು ಅವರ ‘ಕುದುರೆಮೊಟ್ಟೆ’ ಕಾದಂಬರಿಯನ್ನೂ ‘ಒಂದು ತೊಲ ಪುನುಗು ಮತ್ತು ಇತರ ಕತೆಗಳು’ ಸಂಕಲನವನ್ನೂ ಓದಿದ್ದೆ. ಇವುಗಳಲ್ಲಿ ‘ಕುದುರೆ ಮೊಟ್ಟೆ’ ಈಗಲೂ ಪ್ರಿಯವಾದ ಪುಸ್ತಕ. ಅದರಲ್ಲಿರುವ ಕೆಲವು ಪಾತ್ರಗಳು ಕೊಂಚ ವಿಕ್ಷಿಪ್ತವಾಗಿವೆ; ಅಲ್ಲಿನ ಬಾಳಿನ ಸನ್ನಿವೇಶಗಳೂ ಅನಿರೀಕ್ಷಿತವಾಗಿವೆ. ಆದರೆ ಎಲ್ಲಿಯೂ ಹುಸಿ ಅನಿಸದಂತೆ, ಒಂದೇ ಶಬ್ದ ಅಪವ್ಯಯವಾಗದಂತೆ ಅದನ್ನು ಬರೆಯಲಾಗಿದೆ. ಪಾತ್ರಗಳನ್ನು ತಮ್ಮ ಸಿದ್ಧಾಂತಕ್ಕೆ ತಕ್ಕಂತೆ ಮಣಿಸಿ ಕೈಗೊಂಬೆಯಂತೆ ಆಡಿಸುತ್ತ, ಕೆಲವನ್ನು ಮುದ್ದಾಮಾಗಿ ದುರುಳಗೊಳಿಸಿ ಕಲೆಯ ಜಾಣಮುಸುಕಿನಲ್ಲಿ ಅಡಗಿಸುತ್ತ, ಕೆಲವು ಕಾದಂಬರಿಗಳು ಕನ್ನಡದಲ್ಲಿ ಪ್ರಕಟವಾಗುತ್ತಿವೆ. ಇಂತಹ ಹೊತ್ತಲ್ಲಿ ಅರ್ಧ ಶತಮಾನದ ಹಿಂದೆ ಪ್ರಕಟವಾದ ಈ ಕಾದಂಬರಿ, ಬಾಳನ್ನು ಕುರಿತು ತೋರುವ ಕಕ್ಕುಲಾತಿ ಕಂಡು ಖುಶಿಯಾಗುತ್ತದೆ. ಕತೆಗಾರರಿಗೆ ತಾವು ಸೃಷ್ಟಿಸುವ ಕೆಲವು ಪಾತ್ರಗಳ ಮೇಲೆ ಕೊಂಚ ಭಾವ ಪಕ್ಷಪಾತವಿರುತ್ತದೆ. ಆದರೆ ತಾವು ಸೃಜಿಸುವ ಎಲ್ಲ ಪಾತ್ರಗಳನ್ನು ತಾಯಿಯಂತೆ ನೋಡುವುದು ಬರೆಹದ ನೈತಿಕತೆ. ಈ ಸಂಗತಿ ಕುವೆಂಪು ಮತ್ತು ಟಾಲ್ ಸ್ಟಾಯ್ ಕಾದಂಬರಿ ಓದಿದವರಿಗೆ ಗೊತ್ತಿದೆ.

ಕಾಮವನ್ನು ಇಟ್ಟುಕೊಂಡು ಜೀವನದ ಸತ್ಯಗಳನ್ನು ಶೋಧಿಸುವ ವಿಷಯದಲ್ಲಿ ಕಾಮರೂಪಿಯವರು, ಒಬ್ಬ ಟಿಪಿಕಲ್ ನವ್ಯಲೇಖಕರೇ. ಆದರೆ ನವ್ಯದ ಕೆಲವು ಲೇಖಕರಲ್ಲಿ ಕಾಣುವಂತೆ, ಅದಕ್ಕವರು ಅನಗತ್ಯ ಪ್ರಾಮುಖ್ಯ ಕೊಡುವುದಿಲ್ಲ. ಅದನ್ನು ಚಪ್ಪರಿಸುವುದಿಲ್ಲ. ವೈಭವೀಕರಿಸುವುದಿಲ್ಲ. ಬದಲಿಗೆ, ಮನುಷ್ಯರಾದವರು ಜೀವನದ ಇಕ್ಕಟ್ಟುಗಳಲ್ಲಿ ಸಿಲುಕಿ ಅನಿವಾರ್ಯವಾಗಿ ವರ್ತಿಸುವ ಪರಿಯನ್ನು ತಣ್ಣಗೆ ವ್ಯಂಗ್ಯವಾಗಿ ಚಿತ್ರಿಸುತ್ತಾ ಹೋಗುತ್ತಾರೆ. ಸತ್ಯಕ್ಕಿರುವ ಹಲವು ಮುಖಗಳನ್ನು ಹಿಡಿಯುವಂತಹ ಕುರುಸೋವಾನ ‘ರಶೋಮನ್’ ಸಿನಿಮಾ ನೆನಪಿಸುವ ಈ ಕಾದಂಬರಿ, ಮತ್ತೆಮತ್ತೆ ಓದಬೇಕು ಎನಿಸುವಷ್ಟು ತಾಜಾ ಆಗಿದೆ. ‘ಉಪಪತ್ತಿಯೋಗ’ ಎಂಬುದನ್ನು ಬಿಟ್ಟರೆ, ಉಳಿದಂತೆ ವ್ಯಕ್ತಿವಾದವನ್ನು ಅತಿಯಾಗಿ ಬಿಂಬಿಸುವ ತಂತ್ರದ ಬಿಗಿತದಲ್ಲಿರುವ ಅವರ ಕತೆಗಳು ಅಷ್ಟು ಆಪ್ತವೆನಿಸಿಲ್ಲ.

ನನಗೆ ಪ್ರಭಾಕರ್ ಕುರಿತು ಆಸಕ್ತಿ ಮೂಡಿಸಿದವರು ಮಾರ್ಕ್ಸ್‌ವಾದಿ ಚಿಂತಕ ಕೆ.ರಾಘವೇಂದ್ರರಾವ್ ಅವರು. ಅಮೆರಿಕೆಯ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ಎ.ಕೆ.ರಾಮಾನುಜನರ ಹೊಂದಾಣಿಕೆಯ ಗುಣವನ್ನು ಕಟುವಾಗಿ ವಿಮರ್ಶಿಸುತ್ತ, ಅಲ್ಲಿನ ಶೈಕ್ಷಣಿಕ ಕ್ಷೇತ್ರದಲ್ಲಿರುವ ಬಿಳಿಯರ ಯಜಮಾನಿಕೆಗೆ ಬಾಗದೆ ಹೊರಬಂದ ಪ್ರಭಾಕರ ಅವರ ದಿಟ್ಟ ಸ್ವಭಾವವನ್ನು ಅವರು ತಮ್ಮ ಸಂದರ್ಶನದಲ್ಲಿ ಪ್ರಸ್ತಾಪಿಸಿದ್ದರು. ಪ್ರಭಾಕರ ಅವರನ್ನು ಭೇಟಿಯಾಗಬೇಕು ಎಂದು ಅನಿಸುತ್ತಿತ್ತು. ಅದರಲ್ಲೂ ಭಾರತದ ಶಾಕ್ತಪೀಠಗಳಲ್ಲಿ ಮುಖ್ಯವಾಗಿರುವ ಅಸ್ಸಾಮಿನ ಕಾಮಾಖ್ಯಕ್ಕೆ ಹೋಗಲು ಯತ್ನಿಸುತ್ತಿದ್ದ ನಾನು, ಅಲ್ಲೇ ಸಮೀಪದ ಗೌಹಾತಿಯಲ್ಲಿರುವ ಅವರನ್ನು ಕಾಣಲು ಹವಣಿಕೆ ಮಾಡಿಕೊಂಡಿದ್ದೆ. ಆದರೆ ಸಾರ್ವಜನಿಕ ವ್ಯಕ್ತಿಯಾಗಲು ನಿರಾಕರಿಸಿ ಅಜ್ಞಾತವಾಗಿಯೇ ಬಾಳುವ ಅವರು ಸುಲಭವಾಗಿ ಸಿಗುತ್ತಿರಲಿಲ್ಲ.

ನನ್ನ ತವಕವನ್ನರಿತಿದ್ದ ಕೆ.ರಾಮಯ್ಯ, ‘ಪ್ರಭಾಕರ್ ಕರ್ನಾಟಕಕ್ಕೆ ಬಂದಿದ್ದಾರೆ. ಬನ್ನಿ’ ಎಂದು ಅವರ ಮನೆಗೆ ಕರೆದುಕೊಂಡು ಹೋದರು. ಮಧ್ಯಾಹ್ನದ ಸುಡುಹೊತ್ತು. ಪ್ರಭಾಕರ ಪ್ರೀತಿಯಿಂದ ಬರಮಾಡಿಕೊಂಡು ನೊರೆ ತುಂಬಿದ ಒಗರು ಬೀರಿನ ಮಗ್ಗನ್ನು ಕೈಗೆ ಕೊಟ್ಟು, ಕಾಮಾಖ್ಯದ ಬಗ್ಗೆಯೂ ತಂತ್ರ ಪಂಥದ ಬಗ್ಗೆಯೂ ಇರುವ ಕೃತಿಗಳನ್ನು ತೋರಿಸುತ್ತ, ಗಂಟೆಗಟ್ಟಳೆ ಮಾತಾಡಿದರು. ಅರಿವಿನ ಕಿಡಿಗಳು ಹಾರುವ ಅದೊಂದು ವಿದ್ವತ್‌ಪೂರ್ಣ ಹರಟೆ.

ನಾನು ಅವರಲ್ಲಿ ಶಿಷ್ಯವೃತ್ತಿ ಸ್ವೀಕರಿಸಿ ಹಲವಾರು ಸಲ ಕೋಲಾರಕ್ಕೆ ಹೋಗಿ ಬಂದಿದ್ದೇನೆ. ಅವರ ಮಾತುಕತೆಗಳಲ್ಲಿ ನನಗೆ ಮುಖ್ಯವಾಗಿ ಕಂಡಿದ್ದು, ಜಾತ್ಯತೀತವಾದ ಮನಸ್ಸು; ಸಣ್ಣಪುಟ್ಟ ಸಂಗತಿಗಳ ಮೇಲೂ ಕಾಳಜಿಯಿಂದ ಸೂಕ್ಷ್ಮವಾಗಿ ಚಿಂತಿಸುವ ಮಾನವೀಯತೆ; ಗತಕಾಲದ ಬಗ್ಗೆ ಹಳಹಳಿಕೆಯಿಲ್ಲದೆ ವರ್ತಮಾನದ ಸಮಸ್ಯೆಗಳನ್ನು ಕುರಿತು ಚಿಂತಿಸುವ ಪ್ರಖರವೂ ನಿಷ್ಠುರವೂ ಆದ ರಾಜಕೀಯ ಪ್ರಜ್ಞೆ. ಸಾರ್ವಜನಿಕ ಬದುಕಿನಲ್ಲಿ ಜಾತಿಪದ್ಧತಿ ಎಲ್ಲೆಮೀರಿ ನಿರತವಾಗಿರುವ ಕುರಿತ ಹೇವರಿಕೆ. ಹಿರಿಯ ಲೇಖಕರಲ್ಲಿ ಸಾಮಾನ್ಯವಾಗಿ ಎರಡು ಸ್ವಭಾವಗಳಿರುತ್ತವೆ. ಒಂದು- ಕಳೆದುಹೋದ ಕಾಲದ ಬಗ್ಗೆ ಭಾವುಕ ಮರುಕಳಿಕೆ. ಎರಡು-ವರ್ತಮಾನದ ಸಾಮಾಜಿಕ ರಾಜಕೀಯ ವೈರುಧ್ಯಗಳನ್ನು ಉದಾರವಾಗಿ ನೋಡುತ್ತ, ಚಿಂತನೆಯ ಮೊನಚನ್ನು ಕಳೆದುಕೊಳ್ಳುವುದು. ಆದರೆ ಆತ್ಮಕ್ಕೆ ಸದಾ ಬೆಂಕಿ ಹತ್ತಿಸಿಕೊಂಡಂತೆ ಉರಿಯುವ ಕೆಲವರಿದ್ದಾರೆ. ಕೋಚೆ, ಕುಸುಮಾಕರ ದೇವರಗೆಣ್ಣೂರ, ಎಂ.ಡಿ. ನಂಜುಂಡಸ್ವಾಮಿ, ನೀಲಗಂಗಯ್ಯ ಪೂಜಾರ, ಕೆ.ರಾಘವೇಂದ್ರರಾವ್, ಅಬ್ಬಿಗೇರಿ ವಿರೂಪಾಕ್ಷಪ್ಪ, ಸಾರಾ ಅಬೂಬಕರ್, ಕಾಮರೂಪಿ ಪ್ರಭಾಕರ-ಇವರೆಲ್ಲ ಇಂತಹವರು. ಈ ಹಿರಿಯರ ಜತೆ ಮಾತಾಡುವಾಗ ಇವರ ಹಠಮಾರಿತನ, ಜಗಳಗಂಟಿತನ, ಆದರ್ಶವಾದ, ನೈತಿಕ ಪ್ರಜ್ಞೆ ಹಾಗೂ ಭಿನ್ನಮತ ಇಷ್ಟವಾಗುತ್ತದೆ.

ಕರ್ನಾಟಕದಿಂದ ಬಹುಕಾಲ ದೂರವಿದ್ದ ಕಾರಣದಿಂದ ಏರ್ಪಟ್ಟಿರುವ ಅಪರಿಚಿತತೆಯಿಂದಲೊ ಅಥವಾ ಕರ್ನಾಟಕದ ಒಳಗೇ ಇದ್ದೂಇದ್ದೂ ನಮಗೆ ಕಾಣದಂತಾಗಿರುವ ವೈರುಧ್ಯಗಳು ‘ಹೊರಗಿನಿಂದ’ ಬಂದಿರುವ ಅವರಿಗೆ ಒಡೆದು ಕಾಣುತ್ತಿರುವುದರಿಂದಲೊ, ಪ್ರಭಾಕರ ಕರ್ನಾಟಕದ ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ವೈರುಧ್ಯಗಳ ಬಗ್ಗೆ ತೀಕ್ಷ್ಣವಾದ ಟಿಪ್ಪಣಿ ಮಾಡುತ್ತಿರುತ್ತಾರೆ; ಕನ್ನಡಿಗರ ಸ್ವಭಾವದಲ್ಲೇ ವ್ಯಕ್ತಿನಿಷ್ಠೆಗಾಗಿ ವಿಮರ್ಶೆಯ ನಿಷ್ಠುರತೆ ಬಿಟ್ಟುಕೊಡುವ, ಸಜ್ಜನಿಕೆಯ ಭಾಷೆಯಲ್ಲಿ ವಾಸ್ತವವನ್ನು ಅಡಗಿಸುವ ಪ್ರವೃತ್ತಿಯಿದೆ ಎಂದು ಹೇಳುತ್ತಿರುತ್ತಾರೆ. ಸಂಘಟಕರೊಬ್ಬರು ಕಾರ್ಯಕ್ರಮವೊಂದಕ್ಕೆ ಕರೆಸಿಕೊಂಡು ಪರಿಚಯ ಭಾಷಣದಲ್ಲಿ ತಮ್ಮನ್ನು ಅತಿಯಾಗಿ ಹೊಗಳಿದ್ದನ್ನು ನೆನೆಯುತ್ತ ಅವರೊಮ್ಮೆ ಹೇಳಿದರು: “ಏನ್ ಸ್ವಾಮಿ ಕನ್ನಡಿಗರು? ಎಷ್ಟು ಉದಾರತೆ! ನನ್ನ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ನಾನು ಎಲ್ಲ ಸೇರಿದರೆ ನೂರೈವತ್ತು ಪುಟಗಳನ್ನೂ ಬರೆದಿಲ್ಲ. ಕನ್ನಡಕ್ಕೆ ದೊಡ್ಡ ಕೊಡುಗೆಯನ್ನು ಕೊಟ್ಟಿಲ್ಲ. ಆದರೂ ವಾಚಾಮಗೋಚರ ಹೊಗಳಿಬಿಟ್ಟರು. ಕರ್ನಾಟಕದಲ್ಲಿ ಮಾತಿಗೆ ಬೆಲೆಯೇ ಇದ್ದಂತಿಲ್ಲ.’’

ಇದನ್ನು ಕೇಳುವಾಗ ಈಚೆಗೆ ಕಲ್ಕತ್ತಾದಲ್ಲಿ ನಾನು ಕಂಡ, ಹಿರಿಯ ಲೇಖಕ ರುದ್ರಪ್ರತಾಪ ಸೇನರ ಸನ್ಮಾನ ಕಾರ್ಯಕ್ರಮ ನೆನಪಾಯಿತು. ಸೇನರಿಗೆ 75ವರ್ಷ ತುಂಬಿದ ನೆಪದಲ್ಲಿ ಇರಿಸಿಕೊಂಡಿದ್ದ ಆ ಕಾರ್ಯಕ್ರಮ ಎಷ್ಟು ವಿಮರ್ಶಾತ್ಮಕವಾಗಿತ್ತು ಎಂದರೆ, ಅವರ ಶಿಷ್ಯರು ತಮ್ಮ ಗುರುವಿನ ಜತೆ ಕೋರ್ಟ್ಮಾರ್ಶಲ್ ನಡೆಸುವವರ ಹಾಗೆ ಪ್ರಶ್ನೆ ಕೇಳುತ್ತಿದ್ದರು. ಸೇನರು ಆ ಕಟುತರ ಪ್ರಶ್ನೆಗಳಿಗೆಲ್ಲ ಪ್ರಾಮಾಣಿಕವಾಗಿ ದ್ವಂದ್ವವಿಲ್ಲದೆ ಉತ್ತರಿಸುತ್ತಿದ್ದರು. ಹಿರಿಯರ ತಲೆಗೆ ಅಭಿನಂದನ ಗ್ರಂಥಗಳ ಸರಮಾಲೆಯನ್ನು ತಂದು ಕಟ್ಟಿ, ಎಗ್ಗಿಲದೆ ಹೊಗಳಿ ವೈಭವೀಕರಿಸುವ ಪದ್ಧತಿಯಿರುವ ಕರ್ನಾಟಕದಲ್ಲಿ, ಈ ಪರಿಯ ನಿಷ್ಠುರತೆ ಕಲ್ಪಿಸಿಕೊಳ್ಳುವುದೇ ಕಷ್ಟ.

ತೋರುಗಾಣಿಕೆಯನ್ನು ಸದಾ ನಿರಾಕರಿಸುವ ಪ್ರಭಾಕರ ಅವರಲ್ಲಿ, ಅವರ ಖಂಡಿತವಾದಿ ನಿಲುವಿಗೆ ಅಷ್ಟೊಂದು ತಾಳೆಯಾಗದ ಇನ್ನೊಂದು ಮುಖವಿದೆ. ಅದೆಂದರೆ, ಜೀವನಪ್ರೀತಿಯ ಸಂಕೇತದಂತಿರುವ ತಮಾಶೆ ಮತ್ತು ಪೋಲಿತನ. ಈ ತಮಾಶೆಯ ಗುಣ ಅದ್ಭುತ ನಾಟಕೀಯ ಶೈಲಿಯಾಗಿ ಅವರ ಕಥೆ ಕಾದಂಬರಿಗಳಲ್ಲೆಲ್ಲ ಆವರಿಸಿಕೊಂಡಿದೆ. ತಮಗೆ ಪಾಠ ಹೇಳಿದ ಗುರುಗಳ ವೈಯಕ್ತಿಕ ಬದುಕಿನಲ್ಲಿದ್ದ ಸನಾತನವಾದ ಮತ್ತು ತರಗತಿಗಳಲ್ಲಿ ಕನ್ನಡ ಬಳಸದ ಅವರ ಇಂಗ್ಲಿಷಿನ ವ್ಯಾಮೋಹ ಕುರಿತಂತೆ, ಅವರಲ್ಲಿ ಸ್ವಾರಸ್ಯಕರ ಮಾಹಿತಿಗಳಿವೆ. ಪ್ರಭಾಕರ ಅವರು ಆಪ್ತರ ಎದುರು ತಾವು ಬರೆದಿರುವ ಅಪ್ರಕಟಿತ ಪೋಲಿ ಪದ್ಯಗಳನ್ನು ವಾಚಿಸುವುದುಂಟು. ಬಹುಶಃ ಇದು ಅವರ ಗೆಳೆಯರಾಗಿದ್ದ ಎಚ್.ಎಸ್. ಬಿಳಿಗಿರಿಯವರ ಸಹವಾಸ ಫಲವಿರಬೇಕು.

ಒಂದೇ ವ್ಯಕ್ತಿತ್ವದಲ್ಲಿ ಒಟ್ಟಿಗೇ ಇರಲು ಕಷ್ಟವೆನಿಸಬಹುದಾದ ಇನ್ನೂ ಅನೇಕ ಸಂಗತಿಗಳು ಅವರಲ್ಲಿ ಸಹಜವಾಗಿ ನಿರಾಳವಾಗಿ ಇವೆ. ಉದಾ.ಗೆ, ಬಹುಭಾಷಿಕರಾದ ಅವರ ಮನೆಮಾತು ತಮಿಳುಗನ್ನಡ; ಬರವಣಿಗೆ ಕನ್ನಡ ಮತ್ತು ಇಂಗ್ಲೀಶಿನಲ್ಲಿ; ಸಂಸ್ಕೃತ ಅಸ್ಸಾಮಿ ಬಂಗಾಳಿ ಭಾಷೆಗಳಲ್ಲಿ ದೊಡ್ಡ ವಿದ್ವತ್ತು. (ಅವರ ಅಸ್ಸಾಮಿ ಬಂಗಾಳಿ ತಿಳಿವಳಿಕೆಯಿಂದ ಕನ್ನಡಕ್ಕೆ ಪ್ರಯೋಜನವಿನ್ನೂ ಆಗಿಲ್ಲ). ಪಂಪ ಅವರ ಇಷ್ಟದ ಕವಿ. ಮೂಲತಃ ಇಂಗ್ಲೀಶ್ ಸಾಹಿತ್ಯದ ವಿದ್ಯಾರ್ಥಿಯಾದರೂ ಸಾಹಿತ್ಯಕ್ಕಿಂತ ಹೆಚ್ಚಾಗಿ ಅಂತರಾಷ್ಟ್ರೀಯ ರಾಷ್ಟ್ರೀಯ ರಾಜಕಾರಣದ ಮೇಲೆ ಹೆಚ್ಚು ಬರೆವಣಿಗೆ. ಅದರಲ್ಲೂ ಈಶಾನ್ಯ ಭಾರತದ ರಾಜಕಾರಣ ಭಾಷೆ ಧರ್ಮ ಸಂಸ್ಕೃತಿ ಕುರಿತ ಅವರ ತಿಳಿವಳಿಕೆ ಅಪರೂಪದ್ದು. ಇವನ್ನೆಲ್ಲ ಒಟ್ಟಿಗೆ ಹೇಗೆ ಕಲ್ಪಿಸಿಕೊಳ್ಳುವುದು? ಪ್ರಭಾಕರ ತಮ್ಮ ಕಾದಂಬರಿಯ ಒಂದು ಪಾತ್ರದ ಹಾಗೇ ಬದುಕಿದ್ದಾರೆ.

ಅವರು ಈಚೆಗೆ ಮಾತಾಡುತ್ತ ಕೊಂಚ ದಣಿದ ದನಿಯಲ್ಲಿ “ಸ್ವಾಮಿ, ಕರ್ನಾಟಕ ನನಗೆ ಸಾಕಾಗಿದೆ. ಗೌಹಾಟಿಗೆ ಹೋಗಬೇಕು ಅನಿಸುತ್ತಿದೆ’ ಎಂದು ಗೊಣಗಿದರು. “ಹೋಗಿ. ಆದರೆ ಮತ್ತೆಬನ್ನಿ’’ ಎಂದೆ. ಅವರಲ್ಲಿ ಕೋಲಾರ-ಗೌಹಾತಿಗಳ ನಡುವೆ ವಿಚಿತ್ರವಾದ ಆಕರ್ಷಣೆ ವಿಕರ್ಷಣೆಯಿದೆ. ಇದು ಬಹುಕಾಲ ಬೇರೆಡೆ ಬೆಳೆದ ಮರ ತನ್ನ ಮೂಲನೆಲಕ್ಕೆ ಬಂದು ನಾಟಿಗೊಂಡರೆ ಬೇರೂರುವ ಕಷ್ಟ. ಮರಳಿ ಹುಟ್ಟಿದೂರಿಗೆ ಬರುವಿಕೆ ಬಾಲ್ಯದ ನೆನಪುಗಳನ್ನು ಎಚ್ಚರಿಸಿ ಸುಖ ಕೊಡುತ್ತದೆ; ಆದರೆ ಹೊಚ್ಚ ಹೊಸತೆೆನಿಸುವಷ್ಟು ಬದಲಾಗಿರುವ ಪರಿಸರವು, ಕಾಡುವ ಏಕಾಂಗಿತನವನ್ನೂ ತಂದಿಡುತ್ತದೆ. ಯಾರ ಮರುಕವನ್ನೂ ಬಯಸದೆ ಏಕಾಂತದಲ್ಲಿ ಘನತೆಯಿಂದ ಕೊನೆಯ ದಿನಗಳನ್ನು ಕಳೆಯ ಬಯಸುವ ಇಂತಹ ಹಠಮಾರಿ ಜೀವಗಳು, ಒಳಗೇ ಮೃದ್ವಂಗಿಗಳಾಗಿ ಆಪ್ತಸಂಗಾತಕ್ಕೆ ಹಾತೊರೆಯುತ್ತಿರುತ್ತವೆ.

ಆ ಸಂಗಾತದ ಸ್ವರೂಪ ಎಂತಹುದು ಎಂದು ಸ್ಪಷ್ಟವಾಗುವುದಿಲ್ಲ. ನಾನು ‘ಕಾಮರೂಪಕ್ಕೆ ಯಾವಾಗ ಹೋಗುತ್ತೀರಿ’ ಎಂದು ಕೇಳಿದೆ: ‘ಆದಿಮದ 50ನೇ ಬೆಳುದಿಂಗಳ ಕಾರ್ಯಕ್ರಮ ಮುಗಿಸಿಕೊಂಡು’ ಎಂದರು.
ಪ್ರತಿಯೊಬ್ಬರಿಗೂ ಬಾಳಿನಲ್ಲಿ ಬಹುರೂಪಧಾರಣೆ ಮಾಡಬೇಕಾದ ಒತ್ತಡಗಳು ಎದುರಾಗಬಹುದು. ಆದರೆ ಈ ರೂಪಧಾರಣೆಗೆ ಕಾರಣ, ನಮ್ಮ ಇಚ್ಛಾನಿಚ್ಛೆಗಳು ಮಾತ್ರವಲ್ಲ, ಬಾಳಿನ ಅನೂಹ್ಯ ಒತ್ತಡಗಳು ಸಹ. ಈ ಒತ್ತಡಗಳು ಬರೆಹ ಇಲ್ಲವೇ ಮಾತಿನ ವ್ಯಾಖ್ಯಾನಕ್ಕೆ ಕೆಲವೊಮ್ಮೆ ನಿಲುಕುವಂತೆ ಇರುವುದಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ...

ದಿನದ ಸುದ್ದಿ2 weeks ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ2 weeks ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ2 weeks ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ2 weeks ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ2 weeks ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ3 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ3 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ3 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ3 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

Trending