Connect with us

ದಿನದ ಸುದ್ದಿ

ಕೊರೋನಾ ರೋಗ ನಿರೋಧಕ ಶಕ್ತಿವರ್ಧನೆ ತಂತ್ರಗಳು

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ರೋಗನಿರೋಧಕ ಶಕ್ತಿವರ್ಧನೆ ಮತ್ತು ಸದೃಢ ಆರೋಗ್ಯಕ್ಕಾಗಿ ಆಯುರ್ವೇದ ಸಲಹಾ ಸೂಚಿಯಲ್ಲಿ ತಿಳಿಸಿರುವಂತೆ ಕೋವಿಡ್-19 ವೈರಸ್ ತಡೆಗಟ್ಟುವ ಹಂತ-ಎರಡು ತಂತ್ರವನ್ನು ಅನುಸರಿಸಲು ಸೂಚಿಸಲಾಗಿದೆ.

  • ಹಾಟ್ ಸ್ಪಾಟ್ ಮತ್ತು ಬಫರ್ ಝೋನ್ ವಲಯದಲ್ಲಿ ವಾಸಿಸುವ ಜನರು.
  • 60 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯವಂತ ವೃದ್ಧರು.
  • ಬೇರೆ ಖಾಯಿಲೆಗಳಿಂದ ಬಳಲುತ್ತಿರುವ 50 ವರ್ಷಕ್ಕಿಂತ ಮೇಲ್ಪಟ್ಟವರು.

ಆಗಾಗ್ಗೆ ಉಸಿರಾಟದ ಕಾಯಿಲೆಯ ಇತಿಹಾಸ ಹೊಂದಿರುವ ಯಾವುದೇ ವಯಸ್ಸಿನ ಜನರು, ಸುತ್ತುವರಿದ ಗಾಳಿ ಕಲುಷಿತ ಪ್ರದೇಶದಲ್ಲಿ ವಾಸಿಸುವ ಜನರು ಮತ್ತುಧೂಮಪಾನಿಗಳು (ಸಕ್ರಿಯ ಮತ್ತು ನಿಷ್ಕ್ರಿಯ) ಆರೋಗ್ಯ ಸೇವೆ ಕಾರ್ಯಕರ್ತರು ಈ ಮೇಲ್ಕಂಡ ವರ್ಗದವರು ಈ ಕೆಳಕಂಡ ಕಾರ್ಯತಂತ್ರಗಳನ್ನು ಅನುಸರಿಸಿ ರೋಗನಿರೋಧಕ ಶಕ್ತಿಯನ್ನು ವರ್ಧಿಸಿಕೊಂಡು ಸದೃಢ ಆರೋಗ್ಯವನ್ನು ಉತ್ತೇಜಿಸಿಕೊಳ್ಳಬಹುದಾಗಿರುತ್ತದೆ.

ನಿರೋಧಕ ಕಾರ್ಯತಂತ್ರ – 2ನೇ ಹಂತ
ಗುರಿ

  • ಉತ್ತಮ ಹಸಿವು, ಉತ್ತಮ ನಿದ್ರೆ, ಮಾನಸಿಕ ಶಾಂತಿಯನ್ನು ಕಾಪಾಡಲು ಮತ್ತು ಪೋಷಕಾಂಶವುಳ್ಳ ಆಹಾರವನ್ನು ಒದಗಿಸುವುದರ ಜೊತೆಗೆ ಅಲ್ಪ ಪ್ರಮಾಣದ ಔಷಧಿಯೊಂದಿಗೆ ರೋಗ ನಿರೋಧಕ ಶಕ್ತಿಯನ್ನು ವರ್ಧಿಸುವುದು.
  • ಆರೋಗ್ಯವಂತ ವೃದ್ಧರು, ಬೇರೆ ಖಾಯಿಲೆಗಳಿಂದ ಬಳಲುತ್ತಿರುವ 50 ವರ್ಷಕ್ಕಿಂತ ಮೇಲ್ಪಟ್ಟವರು ಆರೋಗ್ಯ ಸೇವೆ ಕಾರ್ಯಕರ್ತರು, ಆಗಾಗ್ಗೆ ಉಸಿರಾಟದ ಕಾಯಿಲೆಯ ಇತಿಹಾಸ ಹೊಂದಿರುವ ಯಾವುದೇ ವಯಸ್ಸಿನ ಜನರು, ಸುತ್ತುವರಿದ ಗಾಳಿ ಕಲುಷಿತ ಪ್ರದೇಶದಲ್ಲಿ ವಾಸಿಸುವ ಜನರು ಮತ್ತು ಧೂಮಪಾನಿಗಳು(ಸಕ್ರಿಯ ಮತ್ತು ನಿಷ್ಕ್ರಿಯ), ಆಯುರ್ವೇದದಿಂದ ತಡೆಗಟ್ಟುವ ಚಿಕಿತ್ಸೆಯನ್ನು ತೆಗೆದುಕೊಳ್ಳಲು ಸಿದ್ಧರಿರುವವರು.

ಕಾರ್ಯತಂತ್ರಗಳು

  1. ಬೇಗನೆ ಮಲಗುವುದು, ಬೇಗನೆ ಏಳುವುದು.
  2. ಹಲ್ಲುಜ್ಜಿದ ನಂತರ, 2 ಹನಿ ಅಣುತೈಲ ಅಥವಾ ಎಳ್ಳೆಣ್ಣೆಯನ್ನು ಮೂಗಿನ ಎರಡು ಹೊಳ್ಳೆಗಳಲ್ಲಿ ಹಾಕುವುದು (ಪ್ರತಿಮರ್ಷ ನಸ್ಯ)
  3. ತದನಂತರ 50 ಮಿಲೀ ತ್ರಿಫಲಾ ಕಷಾಯವನ್ನು (ನೆಲ್ಲಿಕಾಯಿ, ಅಳಲೆಕಾಯಿ, ತಾರೆಕಾಯಿ) 3-5 ನಿಮಿಷಗಳ ಕಾಲ ಮೌಖಿಕ ಕುಳಿಯಲ್ಲಿ (ಬಾಯಿಯಲ್ಲಿ) ಒಂದು ಚಿಟಿಕೆ ಟಂಕಣ ಭಸ್ಮ (ಶುದ್ಧೀಕರಿಸಿದ ಬೋರಕ್ಸ್) ದೊಂದಿಗೆ ಹಿಡಿದಿಟ್ಟುಕೊಳ್ಳುವುದು ಅಥವಾ 1 ಟೇಬಲ್ ಸ್ಪೂನ್ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು 3-5 ನಿಮಿಷಗಳ ಕಾಲ ಬಾಯಲ್ಲಿ ತಿರುಗಾಡಿಸಿ ಉಗಳಬೇಕು ನಂತರ ಬಿಸಿ ನೀರಿನಿಂದ ಬಾಯಿ ಮುಕ್ಕಳಿಸುವುದು ಇದನ್ನು ದಿನಕ್ಕೆ ಎರಡು ಬಾರಿ ಮಾಡುವುದು.
  4. ಪುದೀನ ಎಲೆಗಳು ಹಾಗೂ ಅಜವಾಯನದೊಂದಿಗೆ ಕುದಿಸಿದ ನೀರಿನಿಂದ ಹಬೆ ತೆಗೆದುಕೊಳ್ಳುವುದು.
  5. ಮೂವತ್ತು ನಿಮಿಷಗಳ ಕಾಲ ದೇಹ ಸಡಿಲಗೊಳಿಸುವ ವ್ಯಾಯಾಮ, ಸೂರ್ಯ ನಮಸ್ಕಾರ (6 ಸುತ್ತು) ಯಾವುದಾದರೂ ನಾಲ್ಕು ಆಸನಗಳು, ಪ್ರಾಣಾಯಾಮ ಮತ್ತು ಧ್ಯಾನ.
  6. 4 ತುಳಸಿ ಎಲೆಗಳು, ನಿಂಬೆರಸ, ಒಣ ದ್ರಾಕ್ಷಿಯೊಂದಿಗೆ ಈ ಕೆಳಗೆ ಹೇಳಿರುವ ಯಾವುದಾದರೊಂದು ಮೂಲಿಕೆಯನ್ನು ಅರ್ಧ ಗ್ರಾಂ ನಂತೆ ಸೇರಿಸಿ(ಪ್ರತಿದಿನ ಒಂದು ಮೂಲಿಕೆ) ಗಿಡಮೂಲಿಕೆ ಚಹಾವನ್ನು ತಯಾರಿಸಿ ದಿನಕ್ಕೆ ಒಂದರಿಂದ ಎರಡು ಭಾರಿ ಸೇವಿಸುವುದು.
    1) ದಾಲ್ಚಿನಿ
    2) ಕರಿಮೆಣಸು
    3) ಶುಂಠಿ
  7. ಅರಿಶಿನ, ಜೀರಿಗೆ, ಕೊತ್ತಂಬರಿ ಹಾಗೂ ಬೆಳ್ಳುಳ್ಳಿಯನ್ನು ದಿನನಿತ್ಯದ ಅಡಿಗೆಯಲ್ಲಿ ಉಪಯೋಗಿಸುವುದು.
  8. ಒಂದು ಲೀಟರ್ ಕುದಿಯುವ ನೀರಿಗೆ 8 ತುಳಸಿ ಎಲೆಗಳು ಅಥವಾ ಶುಂಠಿ, ಲಾವಂಚ ಸೇರಿಸಿ 2-3 ನಿಮಿಷಗಳ ಕಾಲ ಮತ್ತೆ ಕುದಿಸಿ ಸೋಸಿ ಕುಡಿಯುವುದು.
  9. ಪ್ರತಿದಿನ ಸಂಜೆ 10 ಗ್ರಾಂ ಅಮೃತಬಳ್ಳಿ ಕಾಂಡ ಅಥವಾ ಷಡಂಗ ಪಾನೀಯ ಕಷಾಯ ಚೂರ್ಣವನ್ನು 640 ಮಿ.ಲೀ. ನೀರಿಗೆ ಸೇರಿಸಿ 320 ಮಿ.ಲೀ. ಆಗುವವರೆಗು ಕುದಿಸಿ ಸೋಸಿ ತಯಾರಿಸಿದ ಅಮೃತಬಳ್ಳಿ ಪಾನೀಯ ಅಥವಾ ಷಡಂಗ ಪಾನೀಯವನ್ನು ಕುಡಿಯುವುದು.
  10. ಸಂಶಮನಿವಟಿ, 2 ಮಾತ್ರೆಗಳು, ದಿನಕ್ಕೆ ಎರಡು ಬಾರಿ, ಊಟದ ನಂತರ, 15 ದಿವಸಗಳ ಕಾಲ.
  11. 2 ಟೀ ಚಮಚ ಅಗಸ್ತ್ಯ ರಸಾಯನವನ್ನು ಬಿಸಿ ನೀರಿನೊಂದಿಗೆ ಸೇವಿಸುವುದು.
  12. ಒಂದು ಲೋಟ ಕುದಿಯುವ ಹಾಲಿಗೆ 1/3 ಟೀ ಚಮಚ ಅರಿಶಿನ ಪುಡಿ, 1/3 ಟೀ ಚಮಚ ಅಶ್ವಗಂಧ ಚೂರ್ಣವನ್ನು ಸೇರಿಸಿ, ನಂತರ ಹಾಲನ್ನು 2 ನಿಮಿಷ ಕುದಿಸಿ, ಸೋಸಿ ತಯಾರಿಸಿದ ಗೋಲ್ಡನ್ ಮಿಲ್ಕ್‍ನ್ನು ಪ್ರತಿದಿನ ರಾತ್ರಿ ಮಲಗುವ ಮುನ್ನ ಸೇವಿಸುವುದು.

ನಿಗದಿಪಡಿಸಿದ ಸಮಯ ವೈದ್ಯರ ಹೆಸರು ಮತ್ತು ತಜ್ಞತೆ ಮೊಬೈಲ್ ಸಂಖ್ಯೆ,ಆಯುರ್ವೇದ ವೈದ್ಯಾಧಿಕಾರಿಗಳು

  • ಬೆಳಗ್ಗೆ 08:00 ರಿಂದ ಮಧ್ಯಾಹ್ನ 12:00
  1. ಡಾ|| ಶಾಂತ ಮೂರ್ತಿ.ಎ. ಬಿ.ಎ.ಎಂ.ಎಸ್. 9448346798
  2. ಡಾ|| ಮಲ್ಲಿಕಾರ್ಜುನ.ಬಿ.ಎಸ್. ಬಿ.ಎ.ಎಂ.ಎಸ್. 9448415175
  3. ಡಾ|| ಕಿಶೋರಿ.ಕೆ.ಎಸ್. ಬಿ.ಎ.ಎಂ.ಎಸ್. 8197719498
  4. ಡಾ|| ಅನುರಾಧ.ಎಸ್.ಎಸ್. ಬಿ.ಎ.ಎಂ.ಎಸ್. 9986743079
  5. ಡಾ|| ಸಯ್ಯುದ್ ಶಂಷುದ್ದೀನ್. ಬಿ.ಎ.ಎಂ.ಎಸ್. 9448567574
  6. ಡಾ|| ಸುಧಾ.ಹೆಚ್.ಎಂ. ಬಿ.ಎ.ಎಂ.ಎಸ್., ಎಂ.ಎಸ್. (ಶಲ್ಯತಂತ್ರ). 9880132397
  7. ಡಾ|| ಸಿದ್ದೇಶ್.ಈ.ಬಿಸನಳ್ಳಿ. ಬಿ.ಎ.ಎಂ.ಎಸ್. 9663666426
  • ಮಧ್ಯಾಹ್ನ 12:00 ರಿಂದ ಸಂಜೆ 04:00
  1. ಡಾ|| ರೇವ್ಯಾ ನಾಯ್ಕ.ಟಿ. ಬಿ.ಎ.ಎಂ.ಎಸ್. 9886145132
  2. ಡಾ|| ಸುಚಿತ್ರಾ.ಎಸ್.ಎಸ್. ಬಿ.ಎ.ಎಂ.ಎಸ್., ಎಂ.ಡಿ. (ಕಾಯಚಿಕಿತ್ಸ). 9844428797
  3. ಡಾ|| ಸುರೇಶ್.ಎಂ.ಸಿ. ಬಿ.ಎ.ಎಂ.ಎಸ್. 9448423933
  4. ಡಾ|| ಸದಾಶಿವ.ಕೆ. ಬಿ.ಎ.ಎಂ.ಎಸ್. 9902183131
  5. ಡಾ|| ಶಾಲಿನಿ.ಡಿ. ಬಿ.ಎ.ಎಂ.ಎಸ್. 8762294359
  6. ಡಾ|| ದ್ಯಾವನ್ ಗೌಡ.ಬಿ.ಹೆಚ್. ಬಿ.ಎ.ಎಂ.ಎಸ್. 9448534506
  • ಸಂಜೆ 04:00 ರಿಂದ ರಾತ್ರಿ 08:00
  1. ಡಾ|| ಚಂದ್ರಕಾಂತ್.ಎಸ್.ನಾಗಸಮುದ್ರ. ಬಿ.ಎ.ಎಂ.ಎಸ್. 9449361108
  2. ಡಾ|| ಪ್ರೀತಿ.ಡಿ.ಎಸ್. ಬಿ.ಎ.ಎಂ.ಎಸ್. 9731155440
  3. ಡಾ|| ಲಿಂಗರಾಜೇಂದ್ರ.ಎನ್.ಕೆ. ಬಿ.ಎ.ಎಂ.ಎಸ್. 9448414906
  4. ಡಾ|| ಶಿಲ್ಪ.ಎಸ್.ಟಿ. ಬಿ.ಎ.ಎಂ.ಎಸ್. 9986081977

ಹೆಚ್ಚಿನ ಮಾಹಿತಿಗಾಗಿ ಈ ಮೇಲ್ಕಂಡ ಆಯುರ್ವೇದ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರ್‌ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ

Published

on

1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಂದ ಸ್ಥಳ ಪರಿಶೀಲನೆ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಸುದ್ದಿದಿನ,ಬಳ್ಳಾರಿ:ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.

ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವಷÀð ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು.

2024-25 ನೇ ಸಾಲಿನಲ್ಲಿ 3,71,000 ಕೋಟಿ ರೂ. ಬಜೆಟ್ ಗಾತ್ರವಿತ್ತು. 2025-26 ನೇ ಸಾಲಿನಲ್ಲಿ ಬಜೆಟ್ ನ ಗಾತ್ರವನ್ನು 4,09,000 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಅಂದರೆ ಸುಮಾರು 38,000 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ನುಡಿದಂತೆ ನಡೆದ ಸರ್ಕಾರ ನಮ್ಮದು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಕೆಆರ್‌ಡಿಬಿ ಗೆ 5 ಸಾವಿರ ಕೋಟಿ ರೂ

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ. ಈ ಭಾಗದ 371 (ಜೆ) ವಿಶೇಷ ಸ್ಥಾನಮಾನವನ್ನು ನಮ್ಮ ಸರ್ಕಾರವೇ ಜಾರಿಗೊಳಿಸಿದ್ದು ಎಂದು ಮನನ ಮಾಡಿದ ಅವರು, ಕೇಂದ್ರ ಸರ್ಕಾರವು ತಿದ್ದುಪಡಿ ಬಳಿಕ ವಿಶೇಷ ಸ್ಥಾನಮಾನ ನೀಡಲು ಪ್ರತಿಬಿಂಬಿಸಿತ್ತು, ಆದರೆ ಈವರೆಗೆ ಒಂದು ರೂ. ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು.

1.03 ಲಕ್ಷ ಹಕ್ಕುಪತ್ರ ವಿತರಣೆ

ನಮ್ಮ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಇನ್ನುಮುಂದೆಯೂ ನಡೆಯುತ್ತೇವೆ ಎಂದು ಜನರಿಗೆ ತಿಳಿಯಪಡಿಸಲು ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಈ.ತುಕಾರಾಮ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಎಂ.ಪಿ.ಲತಾ, ಶ್ರೀನಿವಾಸ ನಾಯ್ಕ ಮತ್ತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮೊಹಮದ್ ನೊಂಗ್ಜಾಯ್ ಅಕ್ರಂ ಅಲಿ ಪಾಷಾ, ಎಸ್ಪಿಗಳಾದ ಡಾ.ಶೋಭರಾಣಿ.ವಿ.ಜೆ., ಶ್ರೀಹರಿಬಾಬು ಸೇರಿದಂತೆ ಅನೇಕರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ

Published

on

  • ಗಿರೀಶ್ ಕುಮಾರ್ ಗೌಡ

ಸುದ್ದಿದಿನ,ವಿಜಯನಗರ:ಚುನಾವಣೆ ಸಂದರ್ಭದಲ್ಲಿ ನೀಡಿದ ಪ್ರಣಾಳಿಕೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು ಕಳೆದೆರಡು ವರ್ಷಗಳಿಂದ 90 ಸಾವಿರ ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದೆ. ಇದರಿಂದ ರಾಜ್ಯದ ಆರ್ಥಿಕ ಅಭಿವೃದ್ದಿಯಲ್ಲಿ ಗಣನೀಯ ಸಾಧನೆ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ಅವರು ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ, ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮವನ್ನು ಮೇ.20 ರಂದು ಸರ್ಕಾರದಿಂದ ಏರ್ಪಡಿಸಲಾಗಿದ್ದು, ಇದರ ಪೂರ್ವಸಿದ್ದತೆ ಪರಿಶೀಲನೆಗೆ ಆಗಮಿಸಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, 2023 ರ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಪಕ್ಷ ಸರ್ಕಾರ ರಚನೆ ಮಾಡಿತು. ಮೊದಲ ಸಂಪುಟ ಸಭೆಯಲ್ಲಿಯೇ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತೀರ್ಮಾನಿಸಲಾಯಿತು. ಆದರೆ ವಿರೋಧ ಪಕ್ಷದವರು ಇದರಿಂದ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅನೇಕ ಟೀಕೆಯನ್ನು ಮಾಡಿದವು. ಅಂದು ಟೀಕೆ ಮಾಡಿದವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಇಂದು ನಕಲು ಮಾಡುವಂತಾಗಿದೆ. ಈಗ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ್ದು, ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳವಾಗಿದೆ. ಇದಕ್ಕೆ ನಿದರ್ಶನ 2024-25 ರಲ್ಲಿ ಸರ್ಕಾರದ ಬಜೆಟ್ ಗಾತ್ರ ರೂ.3,71,000 ಕೋಟಿ, 2025-26 ರಲ್ಲಿ ಇದು ರೂ.4,09,000 ಕೋಟಿರೂಗಳಿಗೆ ಏರಿಕೆಯಾಗಿರುವುದು ಒಂದು ವರ್ಷದಲ್ಲಿ 38,000 ಸಾವಿರ ಕೋಟಿ ರೂಗಳು ಸರ್ಕಾರದ ಹೆಚ್ಚುವರಿ ಆದಾಯವಾಗಿದೆ. ಬಜೆಟ್ ಮಂಡನೆಯನ್ನು ಸಂಗ್ರಹವಾಗುವ ತೆರಿಗೆ ಮತ್ತು ಆದಾಯವನ್ನು ಆಧರಿಸಿ ಬಜೆಟ್ ಸಿದ್ದಪಡಿಸಲಾಗುತ್ತದೆ. ಆದಾಯ ಇಲ್ಲದೇ ಬಜೆಟ್ ಗಾತ್ರ ಹೆಚ್ಚುತ್ತಿರಲಿಲ್ಲ ಎಂದರು.

ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಅನುದಾನ ನೀಡಿದ್ದು ಅನೇಕ ಕ್ಷೇತ್ರಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇನ್ನೂರು, ಮುನ್ನೂರು ಮತ್ತು ಏಳುನೂರು ಕೋಟಿವರೆಗೆ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ ರೂ.90,000 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಲಾಗಿದೆ. ವಿರೋಧ ಪಕ್ಷದವರು ಅಭಿವೃದ್ದಿಗೆ ಹಣವಿಲ್ಲ ಎಂದು ಹೇಳುತ್ತಿದ್ದು, 2024-25 ರಲ್ಲಿ ಆಸ್ತಿ ಸೃಜನೆಗಾಗಿ ರೂ.51,000 ಕೋಟಿ ವೆಚ್ಚ ಮಾಡಲಾಗಿದೆ. 2025-26 ರಲ್ಲಿ ಆಸ್ತಿ ಸೃಜನೆಗಾಗಿ ರೂ.83,000 ಕೋಟಿ ವರೆಗೆ ವೆಚ್ಚ ಮಾಡುತ್ತಿದ್ದು ಗ್ಯಾರಂಟಿಗೆ ರೂ.50,018 ಕೋಟಿ ಮೀಸಲಿರಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನವನ್ನೂ ಸಹ ಪೂರಕ ಬಜೆಟ್‌ಲ್ಲಿ ನೀಡಲಾಗುತ್ತದೆ. ಆದರೆ ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದೆ ಎಂದರು.

ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಬದ್ದ

ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ಕೆಕೆಆರ್‌ಡಿಬಿಗೆ ಕಳೆದ ಬಜೆಟ್‌ನಲ್ಲಿ ರೂ.5,000 ಕೋಟಿ ರೂಗಳು ನೀಡಿದ್ದು, ಈ ವರ್ಷವೂ ಅಷ್ಟೇ ಅನುದಾನ ನೀಡಲಾಗಿದೆ. ಆದರೆ ಹಿಂದಿನ ಸರ್ಕಾರ ಕೊನೆ ವರ್ಷ ರೂ.3,000 ಕೋಟಿ ರೂಗಳನ್ನು ಕೆಕೆಆರ್‌ಡಿಬಿಗೆ ನೀಡಿತ್ತು. 371ಜೆ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು ಇದರ ಅಭಿವೃದ್ದಿಗೆ ಕೇಂದ್ರ ಅನುದಾನ ನೀಡಬೇಕಿತ್ತು. ಆದರೆ ಒಂದು ಬಿಡಿಗಾಸು, ಒಂದೇ ಒಂದು ರೂಪಾಯಿಯನ್ನು ನೀಡಿಲ್ಲ ಎಂದರು. ಮೇ.20 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ 1,03,000 ಜನರಿಗೆ ಕಂದಾಯ ಇಲಾಖೆಯಿಂದ ಆಸ್ತಿಯ ಹಕ್ಕುಪತ್ರಗಳನ್ನು ನೀಡಲಾಗುತ್ತದೆ. ಕಳೆದೆರಡು ವರ್ಷಗಳಲ್ಲಿ ಸರ್ಕಾರ ಜನರಿಗಾಗಿ ಮಾಡಿದ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಜನರು ಬರಲಿದ್ದಾರೆ. ಅಂದಾಜು ಮೂರು ಲಕ್ಷಕ್ಕಿಂತ ಹೆಚ್ಚಿನ ಜನರು ಈ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಭಾಗವಹಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು ವಿರೋಧ ಪಕ್ಷದ ನಾಯಕರನ್ನು ಸಹ ಅಹ್ವಾನಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳ ಸಮನ್ವಯತೆಯಿಂದ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಕ್ಫ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್, ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಸಚಿವ ಎನ್.ಎಸ್.ಭೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಯೋಜನಾ ಸಚಿವರಾದ ಡಿ.ಸುಧಾಕರ್, ಸಂಸದ ಈ.ತುಕಾರಾಂ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಕಂಪ್ಲಿ ಶಾಸಕ ಗಣೇಶ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ, ಮೊಣಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ಮೊಹಮ್ಮದ್ ನೋಂಗ್ಜಾಯ್ ಅಕ್ರಮ್ ಷಾ ಅಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರೀಹರಿಬಾಬು.ಬಿ.ಎಲ್, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಇತರರಿದ್ದರು.

www.suddidina.com | contact : watsapp 9980346243
Continue Reading

ದಿನದ ಸುದ್ದಿ

ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರಾಜ್ಯಾದ್ಯಂತ 161 ಉಗ್ರಾಣ ಕೇಂದ್ರಗಳ ಮೂಲಕ ರೈತರಿಗೆ, ರೈತ ಉತ್ಪಾದಕ ಸಂಸ್ಥೆ, ಸರ್ಕಾರಿ ಸಂಸ್ಥೆಗಳಿಗೆ ಹಾಗೂ ವ್ಯಾಪಾರಸ್ಥರಿಗೆ, ಇತರೆ ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳನ್ನು ಬಾಡಿಗೆಗೆ ನೀಡಲು ಇಚ್ಚಿಸಿದ್ದು, ಕೃಷಿ ಉತ್ಪನ್ನಗಳನ್ನು ವೈಜ್ಞಾನಿಕ ಸರಕು ಸಂಗ್ರಹಣಾ ಸೌಲಭ್ಯ ಒದಗಿಸುತ್ತಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದಾರೆ.

ಅದರಂತೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಾಗರಪೇಟೆಯಲ್ಲಿ 3 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 7 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯ ಮತ್ತು ಹೊಸಹಳ್ಳಿಯಲ್ಲಿ 2 ಗೋದಾಮುಗಳನ್ನು ಸ್ಥಾಪಿಸಿದ್ದು, ಒಟ್ಟಾರೆ 10108 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮುಗಳನ್ನು ನಿರ್ಮಿಸಲಾಗದೆ. ಆಸಕ್ತಿಯುಳ್ಳವರು ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಪ್ರಾದೇಶಿಕ ವ್ಯವಸ್ಥಾಪಕರು ದೂರವಾಣಿ ಸಂಖ್ಯೆ 7760966953 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

www.suddidina.com ಸುದ್ದಿದಿನ.ಕಾಂ|ವಾಟ್ಸಾಪ್|9980346243
Continue Reading

Trending