ದಿನದ ಸುದ್ದಿ
ಭಯೋತ್ಪಾದಕ ವಿರೋಧಿ ದಿನಾಚರಣೆ | ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ
![](https://suddidina.com/wp-content/uploads/2024/05/terrorism_suddidina.jpg)
ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೇ 21 ರಂದು ಭಯೋತ್ಪಾದಕ ವಿರೋಧಿ ದಿನದ ಪ್ರಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಈ ವೇಳೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಪ್ರತಿಜ್ಞಾವಿಧಿ ಬೋಧಿಸಿ ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ, ಸಾಮಥ್ರ್ಯದಿಂದ ಎದುರಿಸುತ್ತೇವೆ. ಹಾಗೂ ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ಧತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು, ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ದ ಹೋರಾಡಲು ಪಣ ತೊಡುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು.
ಇದನ್ನೂ ಓದಿ |ಪಂಚಾಯಿತಿ ಗ್ರಂಥಾಲಯಗಳಲ್ಲಿ ಡಿಜಿಟಲೀಕರಣ
ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಸಿದ್ದರಾಮ್ ಮರಿಹಾಳ್, ಡಿಡಿಎಲ್ಆರ್ ಭಾವನಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ | ವಾಟ್ಸಾಪ್ | 9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ
![](https://suddidina.com/wp-content/uploads/2024/05/parliament_india_suddidina.jpg)
ಸುದ್ದಿದಿನಡೆಸ್ಕ್:18ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರ ಪ್ರಮಾಣ ವಚನ ನಡೆಯಲಿದೆ.
ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹ್ತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ 26 ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಜ್ಯಸಭೆಯ ಅಧಿವೇಶನ ಇದೇ 27ರಂದು ಆರಂಭವಾಗಲಿದೆ. ಜುಲೈ 3 ರಂದು ಸಂಸತ್ ಅಧಿವೇಶನ ಮುಕ್ತಾಯವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ
![](https://suddidina.com/wp-content/uploads/2024/06/Darshan_pavitra_Gouda_suddidina.jpg)
- ರಾಜೇಂದ್ರ ಬುರಡಿಕಟ್ಟಿ
ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.
ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.
ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.
ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.
ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
SC-ST ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:ಗದಗ ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂತಿಮ ವರ್ಷದ ಕಾನೂನು ಪದವಿ ಅಂಕಪಟ್ಟಿ, ಆದಾಯ ಪ್ರಮಾಣ ಪತ್ರ, ಬಾರ್ ಕೌನ್ಸಿಲ್ನಲ್ಲಿ ಹೆಸರು ನೋಂದಣಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಆಗಸ್ಟ್ 1 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ
-
ದಿನದ ಸುದ್ದಿ4 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ದಿನದ ಸುದ್ದಿ4 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ6 days ago
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?
-
ದಿನದ ಸುದ್ದಿ6 days ago
ಕೊಲೆಕೇಸ್ | ನಟ ಚಿಕ್ಕಣ್ಣ ಆಯ್ತು ; ಈಗ ಮತ್ತೊಬ್ಬ ನಟ..!
-
ದಿನದ ಸುದ್ದಿ4 days ago
ಕಲಾವಿದರಿಗೆ ಗುರುತಿನ ಚೀಟಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ವಯನಾಡ್ ಸಂಸದ ಸ್ಥಾನ ತ್ಯಜಿಸಲು ನಿರ್ಧರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ; ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ
-
ದಿನದ ಸುದ್ದಿ6 days ago
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ