ಲೈಫ್ ಸ್ಟೈಲ್
ಸೇಬುಹಣ್ಣುತಿನ್ನಿ ಡಾಕ್ಟರ್ ರಿಂದ ದೂರವಿರಿ..!

‘An apple a day keeps you away from doctor‘ ಎಂಬ ಇಂಗ್ಲೀಷ್ ವಾಕ್ಯ ನಮಗೆ ಗೊತ್ತಿದೆ. ಏಕೆ ಹಾಗೆ ಹೇಳುತ್ತಾರೆ? ಅದರಿಂದ ಎನ್ನು ಉಪಯೋಗಗಳು ಇವೇ ಎಂಬ ಪುಟ್ಟ ಮಾಹಿತಿ ಇಲ್ಲಿದೆ.
- ಸೇಬು ಹಣ್ಣನ್ನು ಹಲ್ಲಿನಿಂದಲೇ ಕಚ್ಚಿ ಸಿಪ್ಪೆ ಸಹಿತ ಊಟವಾದ ನಂತರವೇ ತಿನ್ನಬೇಕು. ಅದರಿಂದ ದೈಹಿಕ ಬೆಳವಣಿಗೆ ಚನ್ನಗಿ ಆಗುತ್ತದೆ, ಜ್ಞಾಪಕಶಕ್ತಿ ಹೆಚ್ಚುತ್ತದೆ.
- ಹಲ್ಲುಗಳಿಂದ ಸೇಬನ್ನು ಕಚ್ಚಿ ತಿನ್ನುವುದರಿಂದ ಹಲ್ಲುಗಳ ಹೊಳಪು ಹೆಚ್ಚಿ ವಸಡುಗಳು ಸಹ ಗಟ್ಟಿಯಾಗುತ್ತವೆ.
- ಎ.ಬಿ.ಸಿ. ಮೂರು ಜೀವಸತ್ವಗಳು ತುಂಬಿರುವ ಸೇಬಿನಹಣ್ಣನ್ನು ಸೇವಿಸುವುದರಿಂದ ದೇಹಬಲ ಹೆಚ್ಚಿ ದಣಿದ ನರಗಳಲ್ಲಿ ಶಕ್ತಿ ಸಂಚಾರವಾಗುವುದು.
- ಊಟವಾದ ನಂತರ ನಿರಂತರವಾಗಿ 44 ದಿನಗಳವರಿಗೆ ಸೇಬಿನಹಣ್ಣನ್ನು ಭಕ್ಷಿಸಿದರೆ ಕಫ ಕಟ್ಣವ ಸಾಧ್ಯತೆ ಇರುವುದಿಲ್ಲ.
- ಸೇಬಿನ ಹೋಳುಗಳನ್ನು ಉಪ್ಪು ಸಹಿತ ನಿರಂತರ ಇಪ್ಪತ್ತು ದಿನಗಳ ಕಾಲ ತಿಂದರೆ ಅರ್ಧ ತಲೆನೋವು ಹೋಗುವುದು.
- ಸೇಬಿನ ಹಣ್ಣನ್ನು ಹಾಗೂ ನಿಂಬೆಹಣ್ಣಿನ ಸಿಪ್ಪೆಗಳನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿದ ನಂತರ ನುಣ್ಣಗೆ ಅರೆದು ಚೂರ್ಣವನ್ನು ತಯಾರಿಸಿ ಕೊಂಡು ಅದನ್ನು ಹಾಲಿನಲ್ಲಿ ಕಲಸಿ ಮೊಡವೆಗಳಿಗೆ ಹಚ್ಚಿದರೆ ಮೊಡವೆಗಳೂ ಮಾಯವಾಗಿ ಹೋಗುವವು.
- ಮೊಲೆಹಾಲನ್ನು ಸೇವಿಸುತ್ತಿರುವ ಮಗುವಿಗೆ ಭೇದಿಯಾದರೆ ಮೊಲೆ ಹಾಲು ಕೊಡುವುದನ್ನು ನಿಲ್ಲಿಸಿ ಸಿಪ್ಪೆ ತೆಗೆದ ಹೋಳು ಮಾಡಿದ ಸೇಬಿನ ಹಣ್ಣುಗಳನ್ನು ಚೆನ್ನಾಗಿ ಬೇಯಿಸಿ ನಂತರ ಅದನ್ನು ಚೆನ್ನಾಗಿ ಕಿವುಚಿ ಸೋಸಿದ ನಂತರ ಹಾಲಿನ ಬದಲಿಗೆ ಅದನ್ನು ಕುಡಿಸಿದರೆ ಆಗ ತಕ್ಷಣ ಭೇದಿ ನಿಂತು ಹೋಗಿ ಆರೋಗ್ಯ ಸುಧಾರಿಸುವುದು.
- ಅಲ್ಸರ್ ನಿಂದ ನರಳುತ್ತಿರುವ ರೋಗಿಗಳು ಸೇಬಿನ ಹಣ್ಣಿನ ರಸವನ್ನು ದೀರ್ಘಕಾಲ ಸೇವಿಸುತ್ತಾ ಬಂದರೆ ಖಾಯಿಲೆ ಮಾಯವಾಗುವುದು.
- ಮೊಡವೆ ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚಿಸಲು ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಳ್ಳಬೇಕು.
- ಸೇಬಿನ ಹಣ್ಣಿನ ಹೋಳುಗಳನ್ನು ಹೆಚ್ಚಿ ಶುದ್ಧವಾದ ಜೇನುತುಪ್ಪದಲ್ಲಿ 24 ಗಂಟೆಗಳ ಕಾಲ ನೆನೆ ಹಾಕಬೇಕು. ನಂತರ ಅದಕ್ಕೆ ಗುಲಾಬಿಯ ದಳಗಳನ್ನು ಸೇರಿಸಿ ಬಿಸಿಲಿನಲ್ಲಿ ಒಣಗಿಸಬೇಕು. ಒಂದು ವಾರದ ನಂತರ ಈ ರಸಾಯನವನ್ನು ಹಾಲಿನ ಜೊತೆಗೆ ಕುಡಿಯಬೇಕು. ಮೂರು ವೇಳೆ ಒಂದು ಚಮಚದಷ್ಟು ಪ್ರತಿನಿತ್ಯ ಸೇವಿಸುವುದರಿಂದ ನರಗಳಲ್ಲಿ ನವಚೈತನ್ಯ ತುಂಬಿಕೊಂಡು ನರಗಳ ದೌರ್ಬಲ್ಯದ ಖಾಯಿಲೆ ಇಲದಲವಾಗುವುವು.
- ಯಕೃತ್ತಿನ ತೊಂದರೆ, ಸಂಧಿವಾತ ಮತ್ತು ಮಲಕಟ್ಟು ರೋಗಗಳ ಸುಧಾರಿಸಲು ಸೇಬನ್ನು ಸಿಪ್ಪೆಯ ಸಹಿತ ಪ್ರತಿನಿತ್ಯ ತಿನ್ನುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು.
- ಸೇಬನ್ನು ದಿನನಿತ್ಯ ಸೇವಿಸಿದರೆ ದಾಹ ನಾಶವಾಗುತ್ತದೆ. ಜೀರ್ಣಶಕ್ತಿ ಹೆಚ್ಚುತ್ತದೆ. ಸ್ಮರಣಶಕ್ತಿಯು ಕುಂದಿದ್ದರೆ ಇದನ್ನು ಸೇವಿಸಿದರೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.
ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ5 days ago
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ7 days ago
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ
-
ದಿನದ ಸುದ್ದಿ2 days ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
-
ದಿನದ ಸುದ್ದಿ5 days ago
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ
-
ದಿನದ ಸುದ್ದಿ2 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ2 days ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ4 days ago
ಕವಿತೆ | ಮತ್ತಿನ ಕುಣಿಕೆ