ಕ್ರೀಡೆ
ಖೇಲೋ ಇಂಡಿಯಾ ಯೋಜನೆಯಡಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕøಷ್ಟತಾ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ಸ್ಪೋಟ್ರ್ಸ್ ಮಸ್ಸರ್, ಸ್ಪೋಟ್ರ್ಸ್ ನ್ಯೂರ್ಟೀಷಿನಿಸ್ಟ್ಸ್, ಯಂಗ್ ಪ್ರೊಫೆಷನಲ್ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರಿನ ಜಯಪ್ರಕಾಶ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರವನ್ನು ರಾಜ್ಯ ಉತ್ಕøಷ್ಟತಾ ಕೇಂದ್ರ ಎಂದು ಘೋಷಿಸಿ ಮಂಜೂರು ಮಾಡಿದ್ದು, ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ನಮೂನೆಯನ್ನು ಅ.11 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-237480 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಸುದ್ದಿದಿನ ಕನ್ನಡ ಬೆಳಗಿನ ಪ್ರಮುಖ ಸುದ್ದಿಗಳು
- ಇಂದು ಭಾರತದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಹಾರ್ಲಾಲ್ ನೆಹರು ಅವರ ಪುಣ್ಯತಿಥಿ. ಸ್ವಾತಂತ್ರ್ಯ ನಂತರ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ್ದ ಅವರು, 1964ರ ಮೇ 27 ರಂದು ನಿಧನರಾದರು. 16 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ್ದ ಅವರನ್ನು ಇಂದು ದೇಶ ಸ್ಮರಿಸುತ್ತಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಪಂಡಿತ್ ಜವಹಾರ್ಲಾಲ್ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
- ಪರಿಸರ, ಸಾಮಾಜಿಕ ಆಡಳಿತಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಾಗಿದೆ ಎಂದು ವಿಮಾನ ನಿಲ್ದಾಣದ ಪರಿಸರ ಮತ್ತು ಸಾಮಾಜಿಕ ಆಡಳಿತ ವಿಭಾಗದ ಮುಖ್ಯಸ್ಥ ಎಲ್. ಶ್ರೀಧರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ’ದಿ ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ’ ದಿಂದ ಆಯೋಜಿಸಿದ್ದ ಇಎಸ್ಜಿ ಸಮಾವೇಶದಲ್ಲಿ ಮಾತನಾಡಿ, ಶೀಘ್ರದಲ್ಲೇ ವಿಮಾನ ನಿಲ್ದಾಣದಲ್ಲಿ ಮಳೆ ನೀರಿನ ಸಂಗ್ರಹದ ಮೂಲಕ ಶೇಖಡ 100ರಷ್ಟು ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದರು.
- ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಇಂದು ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಳಗಾವಿಯಲ್ಲಿ ರಾಷ್ಟ್ರೀಯ ಸಾಂಪ್ರದಾಯಿಕ ಔಷಧ ಸಂಸ್ಥೆ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕೆಎಲ್ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
- ಜಮ್ಮು-ಕಾಶ್ಮೀರದ ಅನಂತ್ ನಾಗ್-ರಾಜೌರಿ ಲೋಕಸಭಾ ಕ್ಷೇತ್ರದಲ್ಲಿ ದಾಖಲೆ ಮಟ್ಟದ ಮತದಾನವಾಗಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜನರನ್ನು ಅಭಿನಂದಿಸಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗೆ ಜನರ ಪಾಲ್ಗೊಳ್ಳುವಿಕೆ ಪ್ರಮುಖ ಕೊಡುಗೆ ನೀಡಲಿದೆ. ಜಮ್ಮು-ಕಾಶ್ಮೀರದ ನಾಗರಿಕರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂದು ಹೇಳಿದ್ದಾರೆ.
- ಉತ್ತರ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಬೀತಿ ಹಿನ್ನೆಲೆಯಲ್ಲಿ ಸನ್ನದ್ಧತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಮಹತ್ವದ ಸಭೆ ನಡೆಸಿದರು. ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯ ಅಧಿಕಾರಿಗಳು ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
- ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ 8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಹಾಗೂ ಪರಿಹಾರ ಖಾತೆ ರಾಜ್ಯ ಸಚಿವ ಮಹಿಬೂರ್ ರೆಹಮಾನ್ ಮಾತನಾಡಿ, ಜನರ ಸುರಕ್ಷತೆಗಾಗಿ ವ್ಯಾಪಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.
- ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್ನ ತಲಾ 13, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್ನ 3 ಮತ್ತು ಚಂಡೀಗಢ್ ಕೇಂದ್ರಾಡಳಿತ ಪ್ರದೇಶದ 1 ಲೋಕಸಭಾ ಕ್ಷೇತ್ರಗಳಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ.
- ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತು 45 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
- ರಾಜ್ಕೋಟ್ ಅಗ್ನಿ ದುರಂತದಲ್ಲಿ. ಮೃತಪಟ್ಟವರನ್ನು ಗುರುತು ಹಚ್ಚಲು ಡಿಎನ್ಎ ಮಾದರಿಯನ್ನು ಅಗತ್ಯ ಪರಿಕ್ಷೆಗಾಗಿ ಕಳುಹಿಸಲಾಗಿದೆ. ಈ ದುರಂತದ ವಿಚಾರವನ್ನು ಗುಜರಾತ್ ಹೈಕೋರ್ಟ್ ಖುದ್ದಾಗಿ ಪರಿಗಣನೆಗೆ ತೆಗೆದುಕೊಂಡಿದ್ದು, ಈ ಪ್ರಕರಣ ಇಂದು ವಿಚಾರಣೆಗೆ ಬರಲಿದೆ.
- ಹಿರಿಯ ಬಿಜೆಪಿ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಿರ್ಜಾಪುರ್ದಲ್ಲಿ ನಿನ್ನೆ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿ, ಐಎನ್ಡಿಐ ಮೈತ್ರಿಕೂಟ ಜಾತಿವಾದಿ ಹಾಗೂ ಕೋಮುವಾದಿ ಎನ್ನುವುದನ್ನು ದೇಶದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಬಿಜೆಪಿ ಎನ್ಡಿಎ ಬಡವರು, ದುರ್ಬಲರು ಮತ್ತು ಹಿಂದುಳಿದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
- ಹಿರಿಯ ಕಾಂಗ್ರೆಸ್ ಧುರೀಣ ರಾಹುಲ್ ಗಾಂಧಿ ಅವರು, ಹಿಮಾಚಲ ಪ್ರದೇಶದ ಶಿಮ್ಲಾ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಚುನಾವಣಾ ರ್ಯಾಲಿ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಡುತ್ತಿರುವ ಚುನಾವಣೆಯಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ 25.76ರಷ್ಟು ಮತದಾನವಾಗಿದೆ. ಬಿಹಾರದಲ್ಲಿ ಶೇಕಡ 23.67, ಹರಿಯಾಣದ ಶೇಕಡ 22.09, ಜಾರ್ಖಂಡ್ನಲ್ಲಿ ಶೇಕಡ 27.80, ಒಡಿಶಾದ ಶೇಕಡ 21.30, ಉತ್ತರಪ್ರದೇಶದ 27.06, ಪಶ್ಚಿಮಬಂಗಾಳದಲ್ಲಿ 36.88, ದೆಹಲಿಯಲ್ಲಿ 21.69 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 23.11ರಷ್ಟು ಮತದಾನವಾಗಿದೆ.
- ದೆಹಲಿಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಆಪ್ ನಾಯಕಿ ಅತೀಶಿ ಸಿಂಗ್ ಸೇರಿದಂತೆ ಹಲವು ಪ್ರಮುಖರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಿದ್ದಾರೆ.
- ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
- ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್ಐಎ ಬಂಧಿಸಿದೆ. ಹುಬ್ಬಳ್ಳಿಯ 35 ವರ್ಷದ ಶೋಯಬ್ ಅಹಮದ್ ಮಿರ್ಜಾ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯಾಗಿದ್ದು, ಲಷ್ಕರ್ ಎ ತೊಯ್ಬಾದ ಭಯೋತ್ಪಾದನಾ ಸಂಚು ಪ್ರಕರಣದಲ್ಲಿ ಮಾಜಿ ಆರೋಪಿಯಾಗಿದ್ದಾನೆ ಎಂದು ಎನ್ಐಎ ತಿಳಿಸಿದೆ.
- ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ಪಂದ್ಯದಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ವಿಶ್ವದ 20ನೇ ಶ್ರೇಯಾಂಕಿತ ಥೈಲ್ಯಾಂಡ್ನ ಬುಸಾನನ್ ಆಂಗ್ಬಾಮ್ರುಂಗ್ಫಾನ್ ವಿರುದ್ಧ ಫೈನಲ್ಸ್ ಪ್ರವೇಶಿಸಲು ಸೆಣಸಲಿದ್ದಾರೆ.
- ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 36 ರನ್ಗಳ ಗೆಲುವು ದಾಖಲಿಸಿದ್ದು, ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಪ್ರಮುಖ ಸುದ್ದಿಗಳು
- ದೇಶಾದ್ಯಂತ 5 ಹಂತಗಳ ಚುನಾವಣೆ ಪೂರ್ಣಗೊಂಡಿದ್ದು, ಇನ್ನು ಎರಡು ಹಂತಗಳ ಚುನಾವಣೆ ಬಾಕಿ ಉಳಿದಿದೆ. 6ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ.
- ಹರಿಯಾಣದಲ್ಲಿಂದು ವಿವಿಧ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಬಿಜೆಪಿ ಹಿರಿಯ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿ, ಮಹೇಂದ್ರಗರ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಹರಿಯಾಣದ ಸಿರ್ಸಾದಲ್ಲಿ ರೋಡ್ ಶೋ ನಡೆಸಿದರು.
- ಸಂತಾಲಿ ಲೇಖಕ ಪಂಡಿತ್ ರಘುನಾಥ್ ಮುರ್ಮು ಅವರ ಜನ್ಮದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿರುವ ಅವರು, ಓಲ್ ಚಿಕಿ ಲಿಪಿಯನ್ನು ಅಭಿವೃದ್ಧಿಪಡಿಸುವ ಮೂಲಕ ಸಂತಾಲಿ ಭಾಷೆಗೆ ಪಂಡಿತ್ ರಘುನಾಥ್ ಮುರ್ಮು ಹೊಸ ಗುರುತು ನೀಡಿದ್ದಾರೆ ಎಂದು ಹೇಳಿದರು.
- ಭಗವಾನ್ ಬುದ್ಧನ ಜನ್ಮದಿನದ ಅಂಗವಾಗಿ ಬುದ್ಧ ಪೂರ್ಣಿಮೆಯನ್ನು ಪ್ರಪಂಚದಾದ್ಯಂತ ವಿವಿಧ ಭಾಗಗಳಲ್ಲಿ ಇಂದು ಆಚರಿಸಲಾಗುತ್ತಿದೆ. ಭಾರತ, ನೇಪಾಳ, ಭೂತಾನ್, ಬರ್ಮಾ, ಥೈಲ್ಯಾಂಡ್, ಟಿಬೆಟ್, ಕೊರಿಯಾ, ಲಾವೋಸ್, ವಿಯೆಟ್ನಾಂ, ಮಂಗೋಲಿಯಾ, ಕಾಂಬೋಡಿಯಾ, ಸಿಂಗಾಪುರ್, ಇಂಡೋನೇಷ್ಯಾ ಮತ್ತು ಶ್ರೀಲಂಕಾದಂತಹ ದೇಶಗಳಲ್ಲಿ ಇದು ಪ್ರಮುಖ ಹಬ್ಬವಾಗಿದೆ.
- ಜುಲೈ 4 ರಂದು ಬ್ರಿಟನ್ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಘೋಷಿಸಿದ್ದಾರೆ. ಚುನಾವಣೆ ಘೋಷಣೆಯಾಗುವ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ನಿರೀಕ್ಷೆಗಿಂತ ಹಲವಾರು ತಿಂಗಳುಗಳ ಮುಂಚಿತವಾಗಿಯೇ ರಾಷ್ಟ್ರೀಯ ಚುನಾವಣೆಯನ್ನು ಕರೆದಿದ್ದಾರೆ.
- ಬೆಲ್ಜಿಯಂನ ಆಂಟ್ವರ್ಪ್ನಲ್ಲಿ ನಡೆದ ಎಫ್ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್ನಲ್ಲಿ 5-4ಗೋಲುಗಳಿಂದ ಸೋಲಿಸಿತು. ಶೂಟೌಟ್ನಲ್ಲಿ, ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.
- ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಐಪಿಎಲ್ ಟಿ-20 ಟೂರ್ನಿಯ 2ನೇ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ತಂಡ ಮೊದಲನೇ ಕ್ವಾಲಿಫೈಯರ್ ಪಂದ್ಯ ಸೋತ ಹೈದರಾಬಾದ್ ತಂಡದೊಂದಿಗೆ ಫೈನಲ್ ಪ್ರವೇಶಿಸಲು ಸೆಣಸಾಟ ನಡೆಸಲಿದೆ.
- ಇಂದು ಬುದ್ಧ ಪೌರ್ಣಿಮೆಯನ್ನು, ರಾಜ್ಯಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿ, ಕರುಣೆ ಮತ್ತು ಶಾಂತಿಯ ಮಂತ್ರವನ್ನು ಸಾರಿದ ಮಹಾಪುರುಷ ಗೌತಮ ಬುದ್ಧನನ್ನು ನೆನೆಯುತ್ತಾ, ಎಲ್ಲರಿಗೂ ಬುದ್ಧ ಪೂರ್ಣಿಮೆಯ ಶುಭಾಶಯಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
- ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ಮುಂಗಾರು ಹಂಗಾಮಿಗೆ 5 ಲಕ್ಷ 35 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದೆ. ಒಟ್ಟು 8 ಲಕ್ಷದ 98 ಸಾವಿರ ಕ್ವಿಂಟಾಲ್ ಬೀಜಗಳ ಪೂರೈಕೆಗೆ, ವ್ಯವಸ್ಥೆ ಮಾಡಲಾಗಿದೆ ಎಂದು, ಸಾಮಾಜಿಕ ಜಾಲತಾಣದಲ್ಲಿ, ಕೃಷಿ ಖಾತೆ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
- ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯ, ವಿವಿಧ ಗ್ರಾಮಗಳಿಗೆ, ಕುಡಿಯುವ ನೀರು ಪೂರೈಸಲು, ಭದ್ರಾ ಜಲಾಶಯದಿಂದ, ತುಂಗಭದ್ರಾ ನದಿಗೆ, ಇದೇ 28ರ ವರೆಗೆ ಪ್ರತಿ ದಿನ, 2 ಸಾವಿರ ಕ್ಯುಸೆಕ್ಗಳಂತೆ ಒಟ್ಟು, 11 ಸಾವಿರದ 574 ಕ್ಯೂಸೆಕ್ ನೀರು ಹರಿಸಲಾಗುವುದು ಎಂದು, ಭದ್ರಾ ಯೋಜನಾ ವೃತ್ತದ, ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
- ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡ ಬಳ್ಳಾಪುರದ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ, ದ್ರೌಪದಿದೇವಿ ಕರಗ ಮಹೋತ್ಸವ, ಇಂದು ರಾತ್ರಿ ಜರುಗಲಿದೆ.
- ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಆರಂಭಿಕ ವಹಿವಾಟಿನಲ್ಲಿ ಷೇರು ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 42 ಅಂಕ ಏರಿಕೆಯೊಂದಿಗೆ 74 ಸಾವಿರದ 263 ರಲ್ಲಿ ವಹಿವಾಟು ನಡೆಸಿದೆ. ಅಂತೆಯೇ ನಿಫ್ಟಿ ಕೂಡ 20 ಅಂಕ ಏರಿಕೆಯ ನಂತರ 22 ಸಾವಿರದ 618 ರಲ್ಲಿ ವಹಿವಾಟು ನಡೆಸಿದೆ.
- ಬೆಲ್ಜಿಯಂನ ಆಂಟ್ವರ್ಪ್ನಲ್ಲಿ ನಡೆದ ಎಫ್ಐಎಚ್ ಪ್ರೊ ಲೀಗ್ ಪಂದ್ಯದಲ್ಲಿ ಭಾರತೀಯ ಪುರುಷರ ಹಾಕಿ ತಂಡ ಅರ್ಜೆಂಟೀನಾ ತಂಡವನ್ನು ಶೂಟೌಟ್ನಲ್ಲಿ 5-4 ಗೋಲುಗಳಿಂದ ಸೋಲಿಸಿತು. ಶೂಟೌಟ್ನಲ್ಲಿ, ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಸುಖಜೀತ್ ಸಿಂಗ್ ತಲಾ ಎರಡು ಗೋಲು ಗಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
-
ದಿನದ ಸುದ್ದಿ6 days ago
ಆತ್ಮಕತೆ | ವಿಶ್ವವಿದ್ಯಾಲಯದ ವಿರುದ್ಧ ನಡೆಸಿದ ಎರಡು ಧರಣಿಗಳು
-
ದಿನದ ಸುದ್ದಿ6 days ago
ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!
-
ದಿನದ ಸುದ್ದಿ7 days ago
ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ
-
ದಿನದ ಸುದ್ದಿ6 days ago
ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ
-
ದಿನದ ಸುದ್ದಿ6 days ago
ಕವಿತೆ | ಒಂದು ಕಪ್ ಕಾಫಿ
-
ದಿನದ ಸುದ್ದಿ6 days ago
ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ
-
ದಿನದ ಸುದ್ದಿ2 days ago
ಚನ್ನಗಿರಿ | ರಕ್ತದಾನ ಶಿಬಿರ