ದಿನದ ಸುದ್ದಿ
ವಸತಿ ಶಾಲೆಗಳಲ್ಲಿ ಖಾಲಿ ಉಳಿದ ಸೀಟುಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಂತ ಕಟ್ಟಡ ಹೊಂದಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀಮತಿ ಇಂದಿರಾಗಾಂಧಿ/ಡಾ.ಬಿ.ಆರ್.ಅಂಬೇಡ್ಕರ್/ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಲ್ಲಿ 7,8 ಮತ್ತು 9ಏ ತರಗತಿಯಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಪ್ರ.ವರ್ಗ-1 ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಮತ್ತು 2ಎ, 3ಎ, 3ಬಿ ವಿದ್ಯಾರ್ಥಿಗಳಿಗೆ ರೂ.1.00 ಲಕ್ಷ ಆದಾಯ ಮಿತಿ ಇರುತ್ತದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ತಮ್ಮ ಜಿಲ್ಲೆ ವಸತಿ ಶಾಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಡಿ.1 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ವಿದ್ಯಾರ್ಥಿಗಳು ತಮ್ಮ ಹತ್ತಿರದ ವಸತಿ ಶಾಲೆಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅಲ್ಲಿಯೇ ಸಲ್ಲಿಸಬಹುದಾಗಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶಿವಾನಂದ ಕುಂಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243