Connect with us

ದಿನದ ಸುದ್ದಿ

ಶ್ರವಣದೋಷವುಳ್ಳ ವಿಶೇಷಚೇತನರ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಪಂಚಾಯತ್ ಅನಿರ್ಬಂಧಿತ ಅನುದಾನದಡಿ ಶ್ರವಣದೋಷವುಳ್ಳ ವ್ಯಕ್ತಿಗಳು ಸ್ವಯಂ ಉದ್ಯೋಗ ನಡೆಸಲು ಹೊಲಿಗೆ ಯಂತ್ರ 80, ಟಾಕಿಂಗ್ ಲ್ಯಾಪ್‍ಟಾಪ್ 1, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ಮಾರ್ಟ್ ಫೆÇೀನ್ 2 ಮತ್ತು ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ನೀಡಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹೊಲಿಗೆ ಯಂತ್ರ ಬಯಸುವವರು : ಟೈಲರಿಂಗ್ ವರ್ಗ ಪ್ರಮಾಣ ಪತ್ರ ಮತ್ತು ಸಾಕ್ಷರತೆ ಪ್ರಮಾಣ ಪತ್ರ, ವಿಕಲಚೇತನರ ಗುರುತಿನ ಚೀಟಿ (ಯು.ಡಿ.ಐ.ಡಿ) & ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ಸ್ವಯಂ ಘೋಷಣೆ ಪತ್ರ, ಉದ್ಯೋಗದಲ್ಲಿಲ್ಲದ ಬಗ್ಗೆ ಪ್ರಮಾಣ ಪತ್ರ, ಇತರೆ ಇಲಾಖೆ, ಸಂಸ್ಥಗಳಿಂದ ಹೊಲಿಗೆ ಯಂತ್ರ ಪಡೆದಿಲ್ಲದಿರುವ ಬಗ್ಗೆ ದೃಢೀಕರಣ ಪತ್ರ, ರೂ.20 ಸ್ಟಾಂಪ್ ಪೇಪರ್ ನಲ್ಲಿ ಹೊಲಿಗೆ ಯಂತ್ರ ಮಾರಾಟ ಮಾಡುವುದಿಲ್ಲ ಎಂದು ಸ್ವಯಂ ಘೋಷಣೆ ಪ್ರಮಾಣ ಪತ್ರ, ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ,

ಲ್ಯಾಪ್‍ಟಾಪ್ : ವಿಕಲಚೇತನರ ಗುರುತಿನ ಚೀಟಿ ಯು.ಡಿ.ಐ.ಡಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದ ಅಂಕಪಟ್ಟಿ (ಪ್ರಸ್ತುತ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿ, ಉತ್ತಿರ್ಣರಾದ ಅಂಕ ಪಟ್ಟಿ), ಸಕ್ಷಮ ಪ್ರಾಧಿಕಾರದಿಂದ ನೀಡಿದ ವಾಸಸ್ಥಳ ದೃಢೀಕರಣ ಪತ್ರ, ಇತರೆ ಇಲಾಖೆ, ಸಂಸ್ಥೆ, ವಿಶ್ವವಿದ್ಯಾಲಯಗಳಿಂದ ಟಾಕಿಂಗ್ ಲ್ಯಾಪ್‍ಟಾಪ್ ಪಡೆದಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ ಪತ್ರ, ಶಾಲೆ, ಕಾಲೇಜಿನಿಂದ ಶಿಫಾರಸ್ಸು ಪತ್ರ, ಲ್ಯಾಪ್‍ಟಾಪ್ ಪರಭಾರೆಯಾಗದಿರುವ ಬಗ್ಗೆ ಸ್ವಯಂ ಘೋಷಣೆ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಸೈಜ್ ಫೋಟೋ.

ಸ್ಮಾರ್ಟ್ ಫೋನ್ ; ವಿಕಲಚೇತನರ ಗುರುತಿನ ಚೀಟಿ ಯು.ಡಿ.ಐ.ಡಿ, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ವಾಸಸ್ಥಳ ದೃಢೀಕರಣ ಪತ್ರ, ಇತರೆ ಇಲಾಖೆ, ಸಂಸ್ಥೆ, ವಿಶ್ವವಿದ್ಯಾಲಯಗಳಿಂದ ಸ್ಮಾರ್ಟ್ ಫೋನ್ ಪಡೆದಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ ಪತ್ರ, ಪಾಸ್‍ಪೋರ್ಟ್ ಸೈಜ್ ಫೋಟೋದೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರಾದ ನಾಗರಾಜ್ ಡಿಳ್ಳೆಪ್ಪನರ್ 9901738353, ಶೈಲಜಾ ಕೆ.ಎಂ.9482158005 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹೊನ್ನಾಳಿ, ಕೆ ಸುಬ್ರಮಣ್ಯಂ 9945738141ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಚನ್ನಗಿರಿ,ಎಂ.ಕೆ.ಶಿವನಗೌಡ 9902105734 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಜಗಳೂರು, ಶಶಿಕಲಾ ಟಿ. 9945458058, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹರಿಹರ, ಚನ್ನಪ್ಪ.ಬಿ 9590829024 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ದಾವಣಗೆರೆ ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಧಿಕಾರಿ ಕೆ.ಕೆ.ಪ್ರಕಾಶ್ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending