Connect with us

ದಿನದ ಸುದ್ದಿ

ಮಹಿಳಾ ಮಿಲಟರಿ ಪಡೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ,: ಭಾರತೀಯ ಸೇನೆಯಲ್ಲಿ ಮಹಿಳಾ ಮಿಲಿಟರಿ ಪೊಲೀಸ್ ಹುದ್ದೆಗಳನ್ನು ಭರ್ತಿಮಾಡಲು ಬರುವ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ಬೆಳಗಾವಿ ನಗರದಲ್ಲಿ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್‍ನಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ.

ಹೆಸರು ನೊಂದಾಯಿಸಲು ಜೂನ್- 8 ಕೊನೆಯ ದಿನಾಂಕವಾಗಿದ್ದು ನೊಂದಾಣಿ ಕಾರ್ಡ್ ಹಾಗೂ ರ್ಯಾಲಿಯ ನಿಖರ ದಿನಾಂಕವನ್ನು ಅಭ್ಯರ್ಥಿಗಲ ಇ-ಮೇಲ್‍ಗೆ ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-255293, 8861890866, 9482023412 ಕ್ಕೆ ಸಂಪರ್ಕಿಸುವಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Published

on

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.

ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ3 hours ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ5 days ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ1 week ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ1 week ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ1 week ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ1 week ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ2 weeks ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

Trending