Connect with us

ದಿನದ ಸುದ್ದಿ

ಕೋವಿಡ್ ಪರಿಣಾಮಕಾರಿ ನಿರ್ವಹಣೆಗೆ ಸೂಕ್ತ ಕ್ರಮಗಳು ಅಧಿಕಾರಿಗಳ ತಂಡ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಉತ್ತಮ ಫಲಿತಾಂಶ ನೀಡಬೇಕು : ಡಿಸಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗೆರೆ: ಕೋವಿಡ್‍ಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯಿಂದ ನಿಯಮಿತ ಸಭೆ, ಡೆತ್ ಆಡಿಟ್ ಸಮಿತಿ ಪುನಾರಚನೆ, ಔಷಧಗಳ ಉಸ್ತುವಾರಿಗಾಗಿ ಫ್ಲೈಯಿಂಗ್ ಸ್ಕ್ವಾಡ್ ರಚನೆ ಹಾಗೂ ವಿವಿಧ ವ್ಯವಸ್ಥೆಗಳನ್ನು ನಿರ್ವಹಿಸಲು ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲು ಇಂದು ತುರ್ತು ಸಭೆ ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಡಿಹೆಚ್‍ಓ, ಡಿಎಸ್, ಡಿಎಸ್‍ಓ ಮತ್ತು ಎರಡು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ತುರ್ತು ಸಭೆ ನಡೆಸಿ ಕೋವಿಡ್ ಪರಿಣಾಮಕಾರಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ಅಗತ್ಯವಾದ ನಿರ್ಧಾರಗಳನ್ನು ಕೈಗೊಂಡು, ವಿವಿಧ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದರು.

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸಿ ಆದಿಯಾಗಿ ಎಲ್ಲರೂ ಒಂದು ತಂಡದಲ್ಲಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸಬೇಕು. ಮೊದಲನೆಯದಾಗಿ ಜಿಲ್ಲೆಯಲ್ಲಿ ಸಂಭವಿಸುವ ಕೋವಿಡ್ ಅಥವಾ ನಾನ್ ಕೋವಿಡ್ ಸಾವು ಕುರಿತು ವಿಶ್ಲೇಷಣೆ ನಡೆಸಲು ಈ ಹಿಂದೆ ರಚಿಸಲಾಗಿದ್ದ ಡೆತ್ ಆಡಿಟ್ ಸಮಿತಿಯನ್ನು ತಕ್ಷಣವೇ ಮರು ರಚಿಸಿ, ಇಂದಿನಿಂದಲೇ ಸಂಭವಿಸುವ ಯಾವುದೇ ಸಾವಿನ ವರದಿಯನ್ನು ನೀಡಬೇಕೆಂದು ಡಿಹೆಚ್‍ಓ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ಇದನ್ನೂ ಓದಿ | ರಾಜ್ಯದಲ್ಲಿಂದು 29,438 ಕೊರೋನಾ ಪ್ರಕರಣ ಪತ್ತೆ ; 208 ಮಂದಿ ಸಾವು

ತಜ್ಞರ ಸಮಿತಿ ಸಭೆ

ವೈದ್ಯಕೀಯ ತಜ್ಞರ ಸಮಿತಿಯ ಸದಸ್ಯರು ಪ್ರತಿ ಎರಡು ದಿನಗಳಿಗೆ ಒಮ್ಮೆ ಸಭೆಯನ್ನು ನಡೆಸಿ, ಆಸ್ಪತ್ರೆಯ ಸಕ್ರಿಯ ಪ್ರಕರಣಗಳು, ಆಕ್ಸಿಜನ್ ಬೆಡ್‍ಗಳಲ್ಲಿ ಎಷ್ಟು ಜನ ರೋಗಿಗಳು ಯಾವ ಸ್ಥಿತಿಯಲ್ಲಿದ್ದಾರೆ, ಯಾರಿಗೆ ಏನು ಅವಶ್ಯಕತೆ ಇದೆ ಹಾಗೂ ಮುಂದಿನ ಹತ್ತು ದಿನಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಿ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಫ್ಲೈಯಿಂಗ್ ಸ್ಕ್ವಾಡ್ ರಚನೆ

ಜಿಲ್ಲಾಸ್ಪತ್ರೆ ಉಗ್ರಾಣ ಹಾಗೂ ಇತರೆ ಕೋವಿಡ್ ನಿರ್ವಹಿಸುತ್ತಿರುವ ಆಸ್ಪತ್ರೆಗಳ ಫಾರ್ಮಸಿಗಳಲ್ಲಿ ಔಷಧಗಳ ಲಭ್ಯತೆ ಹಾಗೂ ಔಷಧಗಳ ಬಳಕೆ, ಹೆಚ್ಚಿನ ಬಳಕೆ ಮತ್ತು ದುರ್ಬಳಕೆ ಕುರಿತು ಉಸ್ತುವಾರಿ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗುವುದು. ಈ ಫ್ಲೈಯಿಂಗ್ ಸ್ಕ್ವಾಡ್ ಪೊಲೀಸರ ಸಹಾಯ ಪಡೆದುಕೊಂಡು ಉಗ್ರಾಣ, ಫಾರ್ಮಸಿಗಳಿಗೆ ಭೇಟಿ ನೀಡಿ ಕೋವಿಡ್‍ಗೆ ಸಂಬಂಧಿಸಿದ ಯಾವುದೇ ಔಷಧಿ, ಲಸಿಕೆ ಕುರಿತು ಪರಿಶೀಲಿಸಿ ಔಷಧ ಲಭ್ಯತೆ ಮತ್ತು ಬಳಕೆ ಬಗ್ಗೆ ವಿವರವಾದ ವರದಿ ನೀಡಬೇಕೆಂದರು.

ಹಾಗೂ ಕೆಪಿಎಂಇ ಅಡಿಯಲ್ಲಿ ಕಳೆದ ಬಾರಿ ರಚಿಸಲಾಗಿದ್ದ ತಂಡಗಳನ್ನು ಪುನಾರಚಿಸಲಾಗುವುದು. ಈ ತಂಡಗಳು ಮೆಡಿಕಲ್ ಶಾಪ್‍ಗಳ ವರದಿ ಮತ್ತು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ರೆಮಿಡಿಸಿವಿರ್ ಸೇರಿದಂತೆ ಇತರೆ ಲಸಿಕೆ ಮಾರಾಟ ಮಾಡುತ್ತಿದ್ದರೆ ಅಂತಹ ಆಸ್ಪತ್ರೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


  • ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲಾ ಸಿಜಿ ಆಸ್ಪತ್ರೆ ದಾವಣಗೆರೆಯ ಕನ್ನಡಿ ಇದ್ದಂತೆ.. ರೋಗಿಗಳು, ಬೆಡ್‍ಗಳು, ಆಕ್ಸಿಜನ್, ಪರೀಕ್ಷೆಗಳು, ಬಿಡುಗಡೆ ಕುರಿತಾಗಿ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಪ್ರತಿಯೊಂದು ವಿಭಾಗಕ್ಕೂ ಒಬ್ಬೊಬ್ಬ ನುರಿತ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದೆ. ಹಾಗೂ ಡೆತ್ ಆಡಿಟ್ ಸಮಿತಿ ಪುನಾರಚನೆ, ತಜ್ಞರ ಸಭೆ, ಸಿಸಿಸಿ ಸ್ಥಾಪನೆ, ಅಗತ್ಯ ಸಿಬ್ಬಂದಿ ನೇಮಕ, ಆಂಬುಲೆನ್ಸ್ ಖರೀದಿ ಹಾಗೂ ಅಗತ್ಯ ಔಷಧ ಮತ್ತು ಇತರೆ ಸುರಕ್ಷತಾ ಪರಿಕರಗಳು ಸೇರಿದಂತೆ ಕೋವಿಡ್‍ನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಲು ಎಲ್ಲ ರೀತಿಯ ಸಿದ್ದತೆಯನ್ನು ವ್ಯವಸ್ಥಿತವಾಗಿ ಮಾಡಲು ಈ ತುರ್ತು ಸಭೆಯಲ್ಲಿ ನಿರ್ಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

    | ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ


ಆಕ್ಸಿಜನ್ ನಿರ್ವಹಣೆಗೆ ಪ್ರತ್ಯೇಕ ನೋಡಲ್ ಅಧಿಕಾರಿ : ಕೋವಿಡ್ ರೋಗಿಗಳಿಗೆ ಅಗತ್ಯವಿರುವ ಆಕ್ಸಿಜನ್ ಸರಬರಾಜು ಮಾಡಲು ಪ್ರತಿ ವಾರ್ಡುಗಳಿಗೆ ತೆರಳಿ ಯಾರಿಗೆ ಯಾವ ರೀತಿಯ ಆಕ್ಸಿಜನ್ ಅಗತ್ಯವಿದೆ ಎಂದು ವಿಶ್ಲೇಷಿಸಿ ನಿರ್ಧರಿಸಿ ಕ್ರಮ ಕೈಗೊಳ್ಳಲು ಪ್ರತ್ಯೇಕವಾಗಿ ಒಬ್ಬ ತಜ್ಞರನ್ನು ಆಕ್ಸಿಜನ್ ನಿರ್ವಹಣಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ ಎಂದರು.

ಆರ್‍ಟಿಪಿಸಿಆರ್ ಲ್ಯಾಬ್ ನಿರ್ವಹಣೆಗೆ ನೋಡಲ್ ಅಧಿಕಾರಿ : ಪ್ರತಿ ದಿನ ಎಷ್ಟು ಪರೀಕ್ಷೆಗಳು ನಡೆಯುತ್ತಿವೆ. ಹಾಗೂ ಸಂಪೂರ್ಣ ಲ್ಯಾಬ್‍ನ ಕಾರ್ಯವೈಖರಿಯನ್ನು ವಿಶ್ಲೇಷಿಸಿ ಕ್ರಮ ವಹಿಸಲು ಡಾ.ಗಂಗಾಧರ್ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು ಎಂದರು.

ಪ್ರಸ್ತುತ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದ ಪರೀಕ್ಷೆಗಳು ಸಾಕಷ್ಟು ಆಗುತ್ತಿದ್ದರೂ ಡಾಟಾ ಎಂಟ್ರಿಯಲ್ಲಿ ಅದು ಸರಿಯಾಗಿ ಅಪ್‍ಡೇಟ್ ಮಾಡದೇ ಇರುವ ಕಾರಣ ರಾಜ್ಯ ವರದಿಯಲ್ಲಿ ಕಡಿಮೆ ತೋರಿಸುತ್ತಿದೆ. ಆದ ಕಾರಣ ಟಿಹೆಚ್‍ಓ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಡಾಟಾ ಎಂಟ್ರಿ ಸಮರ್ಪಕವಾಗಿ ಮಾಡಿಸಲು ಕ್ರಮ ಕೈಗೊಳ್ಳಬೇಕು.

ಸಿಜಿ ಆಸ್ಪತ್ರೆಯಲ್ಲಿ ಪ್ರಸ್ತುತ 2000 ಪೂಲಿಂಗ್ ಪರೀಕ್ಷೆ ಮಾಡಿಸುವ ಸಾಮಥ್ರ್ಯ ಇದೆ. ಸಕ್ರಿಯ ಪ್ರಕರಣದ 10 ಪಟ್ಟು ಟೆಸ್ಟ್ ಆಗಬೇಕಿದ್ದು, ಈ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಹಾಗೂ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಅಗತ್ಯ ಔಷಧಿಗಳು ಮತ್ತು ಸುರಕ್ಷತಾ ಪರಿಕರ ಖರೀದಿಗೆ ಕ್ರಮ ವಹಿಸಲಾಗಿದೆ ಎಂದರು.

ಇಂದು ಕೋವಿಡ್ ಲಸಿಕೆಯ ಗುರಿ 13000 ಸಾವಿರ ಇದ್ದು 7000 ಲಸಿಕೆ ಸರಬರಾಜಾಗಿದ್ದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 03 ಆಂಬುಲೆನ್ಸ್ ಖರೀದಿ ಹಾಗೂ ಶವ ವಾಹನ ಸಿದ್ದಪಡಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ

ಪ್ರಸ್ತುತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಯನ್ನು ಸಿಜಿ ಆಸ್ಪತ್ರೆ ಬದಲಾಗಿ ನಗರದ ಮೋತಿ ವೀರಪ್ಪ ಕಾಲೇಜಿನಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು.

ಮೇ 1 ರ ನಂತರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಇನ್ನೂ ಮಾರ್ಗಸೂಚಿಗಳು ಬಂದಿಲ್ಲ. ಆದರೂ ಈ ಲಸಿಕೆ ನೀಡಲು ಯುದ್ದದ ರೀತಿಯಲ್ಲಿ ಸನ್ನದ್ದರಾಗಬೇಕಿದ್ದು, ಮೈಕ್ರೋ ಪ್ಲಾನ್ ಸಿದ್ದಪಡಿಸಲಾಗುವುದು ಎಂದರು.

ಬೆಂಗಳೂರಿನ ರೋಗಿಗಳ ದಾಖಲು

ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚಾಗಿ ಬೆಡ್ ಸಿಗದೇ ಇರುವ ಕಾರಣಕ್ಕೆ ದಾವಣಗೆರೆಗೆ ಕೆಲವರು ಬಂದು ಖಾಸಗಿ ಮತ್ತು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇನ್ನು ಮುಂದೆ ವೈದ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದು ದಾಖಲು ಮಾಡಿಕೊಳ್ಳಬೇಕು. ಮೊದಲು ಜಿಲ್ಲೆಯ ಅವಶ್ಯಕತೆಗಳನ್ನು ಪರಿಗಣಿಸಿ ನಂತರ ದಾಖಲಾತಿ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್‍ಗೆ ಉತ್ತಮ ಚಿಕಿತ್ಸೆ ನೀಡಲು ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಅಧಿಕಾರಿಗಳ ತಂಡಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡಲಾಗುತ್ತಿದ್ದು ಉತ್ತಮ ಫಲಿತಾಂಶ ಬರುವಂತೆ ಎಲ್ಲರೂ ಕೆಲಸ ಮಾಡಬೇಕು. ತಾಲ್ಲೂಕು ನೋಡಲ್ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದ ಅವರು ಸಾರ್ವಜನಿಕರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದರು.

ಸ್ವಯಂಪ್ರೇರಿತ ವೈದ್ಯರಿಗೆ ಸ್ವಾಗತ

ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕೋವಿಡ್‍ಗೆ ಸ್ವಯಂಪ್ರೇರಿತವಾಗಿ ಸೇವೆ ಸಲ್ಲಿಸಲು ಇಚ್ಚಿಸುವ ವೈದ್ಯರನ್ನು ಜಿಲ್ಲಾಡಳಿತ ಸ್ವಾಗತಿಸುತ್ತದೆ ಎಂದು ತಿಳಿಸಿದರು.

ಸಿಜಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಎಂಐಸಿಯು ನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸುತ್ತಿದ್ದು, ರೂಂ ನಂ.65 ಮತ್ತು 66 ರಲ್ಲಿ ಸ್ಟೆಪ್ ಡೌನ್ ಎಂಐಸಿಯು ಸ್ಥಾಪಿಸಲು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಅಗತ್ಯ ಸಿಬ್ಬಂದಿ ನೇಮಕ ಅಥವಾ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಾಪೂಜಿ ಮತ್ತು ಎಸ್‍ಎಸ್ ಮೆಡಿಕಲ್ ಕಾಲೇಜುಗಳಿಂದ ತಲಾ ಒಬ್ಬರು ಮೈಕ್ರೋಬಯಾಲಜಿಸ್ಟ್‍ಗಳನ್ನು ತಾತ್ಕಾಲಿಕವಾಗಿ 2 ಅಥವಾ 3 ತಿಂಗಳ ಕಾಲ ಸಿಜಿ ಆಸ್ಪತ್ರೆಗೆ ನಿಯೋಜಿಸುವಂತೆ ಕಾಲೇಜುಗಳ ಮುಖ್ಯಸ್ಥರುಗಳಿಗೆ ಡಿಸಿ ಮನವಿ ಮಾಡಿದರು.

ಸಭೆಯಲ್ಲಿ ಎಸ್‍ಎಸ್ ಆಸ್ಪತ್ರೆಯ ಡಾ.ಕಾಳಪ್ಪನವರ್ ಮಾತನಾಡಿ, ರೋಗಿಗಳಿಗೆ ಲಿಕ್ವಿಡ್ ಆಕ್ಸಿಜನ್ ಉತ್ತಮವಾಗಿದ್ದು, ಇದರ ಲಭ್ಯತೆ ಹೆಚ್ಚಿಸಬೇಕೆಂದರು. ಬಾಪೂಜಿ ಆಸ್ಪತ್ರೆಯ ಡಾ.ರವಿ ಮಾತನಾಡಿ, ಲಿಕ್ವಿಡ್ ಆಕ್ಸಿಜನ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತ ಎಂದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ, ವಿಶ್ವನಾಥ ಮುದಜ್ಜಿ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓ ರೇಷ್ಮಾ ಹಾನಗಲ್, ಡಿಹೆಚ್‍ಓ ಡಾ.ನಾಗರಾಜ್, ಡಿಎಸ್‍ಓ ಡಾ.ರಾಘವನ್, ಡಿಎಸ್ ಡಾ.ಜಯಪ್ರಕಾಶ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ, ಜಿಲ್ಲಾ ಮಲೇರಿಯಾಧಿಕಾರಿ ಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಮುರಳೀಧರ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending