Connect with us

ದಿನದ ಸುದ್ದಿ

ಕೋವಿಡ್ ಪರಿಣಾಮಕಾರಿ ನಿರ್ವಹಣೆಗೆ ಸೂಕ್ತ ಕ್ರಮಗಳು ಅಧಿಕಾರಿಗಳ ತಂಡ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಉತ್ತಮ ಫಲಿತಾಂಶ ನೀಡಬೇಕು : ಡಿಸಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗೆರೆ: ಕೋವಿಡ್‍ಗೆ ಸಕಾಲದಲ್ಲಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ತಜ್ಞರ ಸಮಿತಿಯಿಂದ ನಿಯಮಿತ ಸಭೆ, ಡೆತ್ ಆಡಿಟ್ ಸಮಿತಿ ಪುನಾರಚನೆ, ಔಷಧಗಳ ಉಸ್ತುವಾರಿಗಾಗಿ ಫ್ಲೈಯಿಂಗ್ ಸ್ಕ್ವಾಡ್ ರಚನೆ ಹಾಗೂ ವಿವಿಧ ವ್ಯವಸ್ಥೆಗಳನ್ನು ನಿರ್ವಹಿಸಲು ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲು ಇಂದು ತುರ್ತು ಸಭೆ ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಡಿಹೆಚ್‍ಓ, ಡಿಎಸ್, ಡಿಎಸ್‍ಓ ಮತ್ತು ಎರಡು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ತುರ್ತು ಸಭೆ ನಡೆಸಿ ಕೋವಿಡ್ ಪರಿಣಾಮಕಾರಿ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ಅಗತ್ಯವಾದ ನಿರ್ಧಾರಗಳನ್ನು ಕೈಗೊಂಡು, ವಿವಿಧ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದರು.

ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸಿ ಆದಿಯಾಗಿ ಎಲ್ಲರೂ ಒಂದು ತಂಡದಲ್ಲಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸಬೇಕು. ಮೊದಲನೆಯದಾಗಿ ಜಿಲ್ಲೆಯಲ್ಲಿ ಸಂಭವಿಸುವ ಕೋವಿಡ್ ಅಥವಾ ನಾನ್ ಕೋವಿಡ್ ಸಾವು ಕುರಿತು ವಿಶ್ಲೇಷಣೆ ನಡೆಸಲು ಈ ಹಿಂದೆ ರಚಿಸಲಾಗಿದ್ದ ಡೆತ್ ಆಡಿಟ್ ಸಮಿತಿಯನ್ನು ತಕ್ಷಣವೇ ಮರು ರಚಿಸಿ, ಇಂದಿನಿಂದಲೇ ಸಂಭವಿಸುವ ಯಾವುದೇ ಸಾವಿನ ವರದಿಯನ್ನು ನೀಡಬೇಕೆಂದು ಡಿಹೆಚ್‍ಓ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ಇದನ್ನೂ ಓದಿ | ರಾಜ್ಯದಲ್ಲಿಂದು 29,438 ಕೊರೋನಾ ಪ್ರಕರಣ ಪತ್ತೆ ; 208 ಮಂದಿ ಸಾವು

ತಜ್ಞರ ಸಮಿತಿ ಸಭೆ

ವೈದ್ಯಕೀಯ ತಜ್ಞರ ಸಮಿತಿಯ ಸದಸ್ಯರು ಪ್ರತಿ ಎರಡು ದಿನಗಳಿಗೆ ಒಮ್ಮೆ ಸಭೆಯನ್ನು ನಡೆಸಿ, ಆಸ್ಪತ್ರೆಯ ಸಕ್ರಿಯ ಪ್ರಕರಣಗಳು, ಆಕ್ಸಿಜನ್ ಬೆಡ್‍ಗಳಲ್ಲಿ ಎಷ್ಟು ಜನ ರೋಗಿಗಳು ಯಾವ ಸ್ಥಿತಿಯಲ್ಲಿದ್ದಾರೆ, ಯಾರಿಗೆ ಏನು ಅವಶ್ಯಕತೆ ಇದೆ ಹಾಗೂ ಮುಂದಿನ ಹತ್ತು ದಿನಗಳ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಿ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಫ್ಲೈಯಿಂಗ್ ಸ್ಕ್ವಾಡ್ ರಚನೆ

ಜಿಲ್ಲಾಸ್ಪತ್ರೆ ಉಗ್ರಾಣ ಹಾಗೂ ಇತರೆ ಕೋವಿಡ್ ನಿರ್ವಹಿಸುತ್ತಿರುವ ಆಸ್ಪತ್ರೆಗಳ ಫಾರ್ಮಸಿಗಳಲ್ಲಿ ಔಷಧಗಳ ಲಭ್ಯತೆ ಹಾಗೂ ಔಷಧಗಳ ಬಳಕೆ, ಹೆಚ್ಚಿನ ಬಳಕೆ ಮತ್ತು ದುರ್ಬಳಕೆ ಕುರಿತು ಉಸ್ತುವಾರಿ ನೋಡಿಕೊಳ್ಳಲು ಫ್ಲೈಯಿಂಗ್ ಸ್ಕ್ವಾಡ್ ರಚಿಸಲಾಗುವುದು. ಈ ಫ್ಲೈಯಿಂಗ್ ಸ್ಕ್ವಾಡ್ ಪೊಲೀಸರ ಸಹಾಯ ಪಡೆದುಕೊಂಡು ಉಗ್ರಾಣ, ಫಾರ್ಮಸಿಗಳಿಗೆ ಭೇಟಿ ನೀಡಿ ಕೋವಿಡ್‍ಗೆ ಸಂಬಂಧಿಸಿದ ಯಾವುದೇ ಔಷಧಿ, ಲಸಿಕೆ ಕುರಿತು ಪರಿಶೀಲಿಸಿ ಔಷಧ ಲಭ್ಯತೆ ಮತ್ತು ಬಳಕೆ ಬಗ್ಗೆ ವಿವರವಾದ ವರದಿ ನೀಡಬೇಕೆಂದರು.

ಹಾಗೂ ಕೆಪಿಎಂಇ ಅಡಿಯಲ್ಲಿ ಕಳೆದ ಬಾರಿ ರಚಿಸಲಾಗಿದ್ದ ತಂಡಗಳನ್ನು ಪುನಾರಚಿಸಲಾಗುವುದು. ಈ ತಂಡಗಳು ಮೆಡಿಕಲ್ ಶಾಪ್‍ಗಳ ವರದಿ ಮತ್ತು ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ರೆಮಿಡಿಸಿವಿರ್ ಸೇರಿದಂತೆ ಇತರೆ ಲಸಿಕೆ ಮಾರಾಟ ಮಾಡುತ್ತಿದ್ದರೆ ಅಂತಹ ಆಸ್ಪತ್ರೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


  • ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲಾ ಸಿಜಿ ಆಸ್ಪತ್ರೆ ದಾವಣಗೆರೆಯ ಕನ್ನಡಿ ಇದ್ದಂತೆ.. ರೋಗಿಗಳು, ಬೆಡ್‍ಗಳು, ಆಕ್ಸಿಜನ್, ಪರೀಕ್ಷೆಗಳು, ಬಿಡುಗಡೆ ಕುರಿತಾಗಿ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಪ್ರತಿಯೊಂದು ವಿಭಾಗಕ್ಕೂ ಒಬ್ಬೊಬ್ಬ ನುರಿತ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದೆ. ಹಾಗೂ ಡೆತ್ ಆಡಿಟ್ ಸಮಿತಿ ಪುನಾರಚನೆ, ತಜ್ಞರ ಸಭೆ, ಸಿಸಿಸಿ ಸ್ಥಾಪನೆ, ಅಗತ್ಯ ಸಿಬ್ಬಂದಿ ನೇಮಕ, ಆಂಬುಲೆನ್ಸ್ ಖರೀದಿ ಹಾಗೂ ಅಗತ್ಯ ಔಷಧ ಮತ್ತು ಇತರೆ ಸುರಕ್ಷತಾ ಪರಿಕರಗಳು ಸೇರಿದಂತೆ ಕೋವಿಡ್‍ನ್ನು ಅತ್ಯಂತ ಪರಿಣಾಮಕಾರಿಯಾಗಿ ಎದುರಿಸಲು ಎಲ್ಲ ರೀತಿಯ ಸಿದ್ದತೆಯನ್ನು ವ್ಯವಸ್ಥಿತವಾಗಿ ಮಾಡಲು ಈ ತುರ್ತು ಸಭೆಯಲ್ಲಿ ನಿರ್ಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.

    | ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ


ಆಕ್ಸಿಜನ್ ನಿರ್ವಹಣೆಗೆ ಪ್ರತ್ಯೇಕ ನೋಡಲ್ ಅಧಿಕಾರಿ : ಕೋವಿಡ್ ರೋಗಿಗಳಿಗೆ ಅಗತ್ಯವಿರುವ ಆಕ್ಸಿಜನ್ ಸರಬರಾಜು ಮಾಡಲು ಪ್ರತಿ ವಾರ್ಡುಗಳಿಗೆ ತೆರಳಿ ಯಾರಿಗೆ ಯಾವ ರೀತಿಯ ಆಕ್ಸಿಜನ್ ಅಗತ್ಯವಿದೆ ಎಂದು ವಿಶ್ಲೇಷಿಸಿ ನಿರ್ಧರಿಸಿ ಕ್ರಮ ಕೈಗೊಳ್ಳಲು ಪ್ರತ್ಯೇಕವಾಗಿ ಒಬ್ಬ ತಜ್ಞರನ್ನು ಆಕ್ಸಿಜನ್ ನಿರ್ವಹಣಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ ಎಂದರು.

ಆರ್‍ಟಿಪಿಸಿಆರ್ ಲ್ಯಾಬ್ ನಿರ್ವಹಣೆಗೆ ನೋಡಲ್ ಅಧಿಕಾರಿ : ಪ್ರತಿ ದಿನ ಎಷ್ಟು ಪರೀಕ್ಷೆಗಳು ನಡೆಯುತ್ತಿವೆ. ಹಾಗೂ ಸಂಪೂರ್ಣ ಲ್ಯಾಬ್‍ನ ಕಾರ್ಯವೈಖರಿಯನ್ನು ವಿಶ್ಲೇಷಿಸಿ ಕ್ರಮ ವಹಿಸಲು ಡಾ.ಗಂಗಾಧರ್ ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು ಎಂದರು.

ಪ್ರಸ್ತುತ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದ ಪರೀಕ್ಷೆಗಳು ಸಾಕಷ್ಟು ಆಗುತ್ತಿದ್ದರೂ ಡಾಟಾ ಎಂಟ್ರಿಯಲ್ಲಿ ಅದು ಸರಿಯಾಗಿ ಅಪ್‍ಡೇಟ್ ಮಾಡದೇ ಇರುವ ಕಾರಣ ರಾಜ್ಯ ವರದಿಯಲ್ಲಿ ಕಡಿಮೆ ತೋರಿಸುತ್ತಿದೆ. ಆದ ಕಾರಣ ಟಿಹೆಚ್‍ಓ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಡಾಟಾ ಎಂಟ್ರಿ ಸಮರ್ಪಕವಾಗಿ ಮಾಡಿಸಲು ಕ್ರಮ ಕೈಗೊಳ್ಳಬೇಕು.

ಸಿಜಿ ಆಸ್ಪತ್ರೆಯಲ್ಲಿ ಪ್ರಸ್ತುತ 2000 ಪೂಲಿಂಗ್ ಪರೀಕ್ಷೆ ಮಾಡಿಸುವ ಸಾಮಥ್ರ್ಯ ಇದೆ. ಸಕ್ರಿಯ ಪ್ರಕರಣದ 10 ಪಟ್ಟು ಟೆಸ್ಟ್ ಆಗಬೇಕಿದ್ದು, ಈ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಹಾಗೂ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಅಗತ್ಯ ಔಷಧಿಗಳು ಮತ್ತು ಸುರಕ್ಷತಾ ಪರಿಕರ ಖರೀದಿಗೆ ಕ್ರಮ ವಹಿಸಲಾಗಿದೆ ಎಂದರು.

ಇಂದು ಕೋವಿಡ್ ಲಸಿಕೆಯ ಗುರಿ 13000 ಸಾವಿರ ಇದ್ದು 7000 ಲಸಿಕೆ ಸರಬರಾಜಾಗಿದ್ದು ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 03 ಆಂಬುಲೆನ್ಸ್ ಖರೀದಿ ಹಾಗೂ ಶವ ವಾಹನ ಸಿದ್ದಪಡಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೋತಿವೀರಪ್ಪ ಕಾಲೇಜಿನಲ್ಲಿ ಲಸಿಕೆ

ಪ್ರಸ್ತುತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಯನ್ನು ಸಿಜಿ ಆಸ್ಪತ್ರೆ ಬದಲಾಗಿ ನಗರದ ಮೋತಿ ವೀರಪ್ಪ ಕಾಲೇಜಿನಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು.

ಮೇ 1 ರ ನಂತರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಇನ್ನೂ ಮಾರ್ಗಸೂಚಿಗಳು ಬಂದಿಲ್ಲ. ಆದರೂ ಈ ಲಸಿಕೆ ನೀಡಲು ಯುದ್ದದ ರೀತಿಯಲ್ಲಿ ಸನ್ನದ್ದರಾಗಬೇಕಿದ್ದು, ಮೈಕ್ರೋ ಪ್ಲಾನ್ ಸಿದ್ದಪಡಿಸಲಾಗುವುದು ಎಂದರು.

ಬೆಂಗಳೂರಿನ ರೋಗಿಗಳ ದಾಖಲು

ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚಾಗಿ ಬೆಡ್ ಸಿಗದೇ ಇರುವ ಕಾರಣಕ್ಕೆ ದಾವಣಗೆರೆಗೆ ಕೆಲವರು ಬಂದು ಖಾಸಗಿ ಮತ್ತು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇನ್ನು ಮುಂದೆ ವೈದ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದು ದಾಖಲು ಮಾಡಿಕೊಳ್ಳಬೇಕು. ಮೊದಲು ಜಿಲ್ಲೆಯ ಅವಶ್ಯಕತೆಗಳನ್ನು ಪರಿಗಣಿಸಿ ನಂತರ ದಾಖಲಾತಿ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್‍ಗೆ ಉತ್ತಮ ಚಿಕಿತ್ಸೆ ನೀಡಲು ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಅಧಿಕಾರಿಗಳ ತಂಡಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡಲಾಗುತ್ತಿದ್ದು ಉತ್ತಮ ಫಲಿತಾಂಶ ಬರುವಂತೆ ಎಲ್ಲರೂ ಕೆಲಸ ಮಾಡಬೇಕು. ತಾಲ್ಲೂಕು ನೋಡಲ್ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದ ಅವರು ಸಾರ್ವಜನಿಕರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದರು.

ಸ್ವಯಂಪ್ರೇರಿತ ವೈದ್ಯರಿಗೆ ಸ್ವಾಗತ

ಕೋವಿಡ್ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕೋವಿಡ್‍ಗೆ ಸ್ವಯಂಪ್ರೇರಿತವಾಗಿ ಸೇವೆ ಸಲ್ಲಿಸಲು ಇಚ್ಚಿಸುವ ವೈದ್ಯರನ್ನು ಜಿಲ್ಲಾಡಳಿತ ಸ್ವಾಗತಿಸುತ್ತದೆ ಎಂದು ತಿಳಿಸಿದರು.

ಸಿಜಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಎಂಐಸಿಯು ನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸುತ್ತಿದ್ದು, ರೂಂ ನಂ.65 ಮತ್ತು 66 ರಲ್ಲಿ ಸ್ಟೆಪ್ ಡೌನ್ ಎಂಐಸಿಯು ಸ್ಥಾಪಿಸಲು ಎಲ್ಲ ರೀತಿಯ ಕ್ರಮ ವಹಿಸಲಾಗುತ್ತಿದೆ. ಅಗತ್ಯ ಸಿಬ್ಬಂದಿ ನೇಮಕ ಅಥವಾ ನಿಯೋಜನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಾಪೂಜಿ ಮತ್ತು ಎಸ್‍ಎಸ್ ಮೆಡಿಕಲ್ ಕಾಲೇಜುಗಳಿಂದ ತಲಾ ಒಬ್ಬರು ಮೈಕ್ರೋಬಯಾಲಜಿಸ್ಟ್‍ಗಳನ್ನು ತಾತ್ಕಾಲಿಕವಾಗಿ 2 ಅಥವಾ 3 ತಿಂಗಳ ಕಾಲ ಸಿಜಿ ಆಸ್ಪತ್ರೆಗೆ ನಿಯೋಜಿಸುವಂತೆ ಕಾಲೇಜುಗಳ ಮುಖ್ಯಸ್ಥರುಗಳಿಗೆ ಡಿಸಿ ಮನವಿ ಮಾಡಿದರು.

ಸಭೆಯಲ್ಲಿ ಎಸ್‍ಎಸ್ ಆಸ್ಪತ್ರೆಯ ಡಾ.ಕಾಳಪ್ಪನವರ್ ಮಾತನಾಡಿ, ರೋಗಿಗಳಿಗೆ ಲಿಕ್ವಿಡ್ ಆಕ್ಸಿಜನ್ ಉತ್ತಮವಾಗಿದ್ದು, ಇದರ ಲಭ್ಯತೆ ಹೆಚ್ಚಿಸಬೇಕೆಂದರು. ಬಾಪೂಜಿ ಆಸ್ಪತ್ರೆಯ ಡಾ.ರವಿ ಮಾತನಾಡಿ, ಲಿಕ್ವಿಡ್ ಆಕ್ಸಿಜನ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸುವುದು ಸೂಕ್ತ ಎಂದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್ ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಎಂಡಿ ರವೀಂದ್ರ ಮಲ್ಲಾಪುರ, ವಿಶ್ವನಾಥ ಮುದಜ್ಜಿ, ಜಿ.ಪಂ ಉಪ ಕಾರ್ಯದರ್ಶಿ ಆನಂದ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓ ರೇಷ್ಮಾ ಹಾನಗಲ್, ಡಿಹೆಚ್‍ಓ ಡಾ.ನಾಗರಾಜ್, ಡಿಎಸ್‍ಓ ಡಾ.ರಾಘವನ್, ಡಿಎಸ್ ಡಾ.ಜಯಪ್ರಕಾಶ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ, ಜಿಲ್ಲಾ ಮಲೇರಿಯಾಧಿಕಾರಿ ಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಮುರಳೀಧರ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending