ದಿನದ ಸುದ್ದಿ
ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ
ಸುದ್ದಿದಿನ,ಶಿವಮೊಗ್ಗ:ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ )(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ “ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಾಗಿದೆ”.
ಶಿರ ಛೇದನ ಸ್ಮಾರಕ ಶಿಲ್ಪವು ಎರಡು ಪಟ್ಟಿಕೆಗಳಿಂದ ಕೂಡಿದ್ದು ಕೆಳಗಿನ ಪಟ್ಟಿಕೆಯಲ್ಲಿ ವೇಳಾವಳಿ/ ಗರುಡ ಹೋಗುವ ವೀರ ಕುದುರೆಯ ಮೇಲೆ ಕುಳಿತು ಕತ್ತಿಯನ್ನು ಹಿಡಿದಿದ್ದಾನೆ, ಇವನಿಗೆ ಹಿಂಭಾಗದಲ್ಲಿ ಸೇವಕ ಛತ್ರಿಯನ್ನು ಹಿಡಿದಿದ್ದಾನೆ, ಆದ್ದರಿಂದ ಇವನನ್ನು ರಾಜ ಪ್ರಮುಖನೆಂದು ತಿಳಿಯಬಹುದಾಗಿದೆ. ಹಿಂಭಾಗದಲ್ಲಿ ಮಹಿಳೆಯು ಕತ್ತಿಯನ್ನು ಹಿಡಿದು ನಿಂತಿದ್ದಾಳೆ.
ಎರಡನೇ ಪಟ್ಟಕೆಯಲ್ಲಿ ಗರುಡ ಹೊಂದತಹ ವೀರನು ವೀರಾಸನದಲ್ಲಿ ನಿಂತಿದ್ದು ರುಂಡವನ್ನು ಕತ್ತರಿಸಲಾಗಿದ್ದು, ಬಲಗೈಯಲ್ಲಿ ಕತ್ತಿಯನ್ನು ಹಿಡಿದು ಮುಂಡದ ಮೇಲೆ ಹಲಗೆಯ ರೀತಿಯನ್ನು ಹೊತ್ತುಕೊಂಡಿದ್ದು ಇದನ್ನು ಕೈಯಲ್ಲಿ ಹಿಡಿದಿರುವಂತಿದೆ. ಈ ಶಿರ ಛೇದನ ಶಿಲ್ಪದ ಪಕ್ಕದಲ್ಲಿ ಮಹಿಳೆಯು ಶಿರ ಛೇದನವಾದ ರುಂಡವನ್ನು ಕೈಯಲ್ಲಿ ಹಿಡಿದು ನಿಂತಿದ್ದಾಳೆ.
ಮೂರನೇ ಪಟ್ಟಿಕೆಯಲ್ಲಿ ಪಟ್ಟಿಕೆಯ ಶಿಲ್ಪಗಳ ಬದಲು ಲಿಂಗದ ರೀತಿಯಲ್ಲಿ ಇರುವ ಕಂಬವಿದ್ದು ಇದರಲ್ಲಿ ಲಿಂಗದ ಉಬ್ಬು ಶಿಲ್ಪವಿದೆ. ಈ ಲಿಂಗದ/ಕAಬದ ಮೇಲೆ ಸಮತಟ್ಟಾಗಿದೆ.
ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪದ ಮಹತ್ವ: ಆತ್ಮಬಲಿದಾನವು ಹಿಂದೂಗಳ ದೃಷ್ಟಿಯಲ್ಲಿ ಮಹತ್ವಪೂರ್ಣವಾಗಿದ್ದು, ಆತ್ಮ ಬಲಿದಾನ ಮಾಡಿಕೊಳ್ಳಲು ಶುಭ ತಿಥಿಗಳು ಒಳ್ಳೆಯವು ಎಂಬ ನಂಬಿಕೆಯಿದ್ದು, ವ್ಯಕ್ತಿಗಳು ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವಂತಹ ಅಥವಾ ಇನ್ನೊಬ್ಬರ ಸಹಾಯದಿಂದ ಮಾಡಿಕೊಳ್ಳುವಂತಹದ್ದು ಆತ್ಮ ಬಲಿದಾನ(ದೇಹತ್ಯಾಗ) ಎನ್ನಬಹುದಾಗಿದೆ.
ಆತ್ಮಬಲಿದಾನವು ಆತ್ಮಹತ್ಯೆಗಿಂತ ವಿಶೇಷವಾಗಿದ್ದು ಇದು ಸಮಾಜದ ಒಳತಿಗೋಸ್ಕರ ಆಗಿರುವಂತಹದ್ದು ಹಾಗೂ ಪೂರ್ವ ನಿಯೋಜಿತವಾಗಿರುವಂತಹದ್ದು. ಈ ಆತ್ಮ ಬಲಿದಾನದಲ್ಲಿ ಹಲವು ಬಗೆಗಳಿವೆ. ಆತ್ಮಬಲಿದಾನವನ್ನು ಮಾಡಿಕೊಂಡ ವೀರರು ಯಾವುದೇ ಹೋರಾಟದಲ್ಲಿ ಹೋರಾಡಿ ಮಡಿದವರಾಗಿರುವುದಿಲ್ಲ. ಆದರೆ ಇವರು ಯಾವುದೇ ಹೋರಾಟದಲ್ಲಿ ಮಡಿದ ವೀರರಿಗಿಂತ ಕಡಿಮೆಯಿರುವುದಿಲ್ಲ.
ಆತ್ಮ ಬಲಿದಾನದಲ್ಲಿ ಚಿತಾಪ್ರವೇಶ, ಜಲಪ್ರವೇಶ, ಊರ್ಧ್ವಪತನದ ಬಗೆಗಳಿವೆ. ಚಿತಾ ಪ್ರವೇಶ ಎಂದರೆ ಬೆಂಕಿಗೆ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು, ಜಲಪ್ರವೇಶ ಎಂದರೆ ಗಂಗೆ, ವಾರಾಣಾಸಿ, ಪ್ರಯಾಗ, ತುಂಗಭದ್ರೆ ಮೊದಲಾದೆಡೆ ನೀರಿನಲ್ಲಿ ಮುಳುಗಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಹಾಗೂ ಊರ್ಧ್ವ ಬಲಿದಾನವೆಂದರೆ ಬೆಟ್ಟ, ಮರ ಹಾಗೂ ದೇವಾಲಯಗಳ ಶಿಖರಗಳಿಂದ ಕೆಳಗೆ ಬಿದ್ದು ಅಥವಾ ಹಾರಿ ಆತ್ಮಬಲಿದಾನ ಮಾಡಿಕೊಳ್ಳುವಂತಹದ್ದು ಎನ್ನಬಹುದು.
ಈ ಆತ್ಮಬಲಿದಾನದಲ್ಲಿ ಸಹಗಮನ ಪದ್ಧತಿ, ನಿಸಿಧಿ ಶಾಸನ ಶಿಲ್ಪಗಳು, ಸೂರ್ಯಗ್ರಹಣ ಶಾಸನ ಶಿಲ್ಪಗಳು ಇದರಲ್ಲಿ ಉರಿ ಉಯ್ಯಲೆ ಶಿಲ್ಪಗಳು, ಶೂಲ ಬಲಿ, ಶಿರ ಛೇದನ(ಬಲಿ) ಶಿಲ್ಪ, ಸಿಡಿದಲೆ ಶಾಸನ ಶಿಲ್ಪಗಳು, ಇರಿತ ಬಲಿ, ಬೆಂಕಿಬಲಿ ಶಿಲ್ಪ, ಕಿಳ್ಗುಂಟೆ, ಗರುಡ ಪದ್ಧತಿ ಹಾಗೂ ವಿಶೇಷವಾಗಿ ಚಾಟಿ ವಿಟನಿಂದ ಆತ್ಮಬಲಿದಾನ ಮಾಡಿಕೊಂಡಿದ್ದು, ಇವನ ಜೊತೆಯಲ್ಲಿ ಇವನ ಹೆಂಡತಿಯು ಸಹಗಮನ ಮಾಡಿಕೊಂಡಿರುವ ಆತ್ಮಬಲಿದಾನದ ಸ್ಮಾರಕ ಶಿಲ್ಪಮೊದಲಾದ ಆತ್ಮ ಬಲಿದಾನದ ಸ್ಮಾರಕ ಶಾಸನ ಶಿಲ್ಪಗಳು ಕರ್ನಾಟಕಲ್ಲಿ ಕಂಡುಬರುತ್ತವೆ.
ಈ ಸ್ಮಾರಕ ಶಿಲ್ಪವು ಇದುವರೆಗೂ ದೊರೆತಿರುವ ಶಿರ ಛೇದನ ಶಿಲ್ಪಗಳಲ್ಲಿ ತುಂಬಾ ಅಪರೂಪದ್ದು, ಈ ಸ್ಮಾರಕ ಶಿಲ್ಪವನ್ನು ಗರುಡ ಸ್ತಂಭವೆAದು ಕರೆಯಬಹುದು. ಕರ್ನಾಟಕದಲ್ಲಿ ಇದುವರೆಗೂ ಗರುಡರಾಗಿರುವಂತಹ ಎರಡು ಸ್ತಂಭಗಳು ಹಳೇಬೀಡು ಮತ್ತು ಅಗ್ರಹಾರ ಬಾಚಿಹಳ್ಳಿಯಲ್ಲಿ ಮಾತ್ರ ಕಂಡುಬAದಿವೆ. ಇವು ಹೊಯ್ಸಳರ ಕಾಲದ್ದಾಗಿವೆ.
ಆರಗದಲ್ಲಿ ದೊರೆತಿರುವ ಈ ಶಿರ ಛೇದನ ಸ್ಮಾರಕ ಶಿಲ್ಪವು ಶಾಸನರಹಿತವಾಗಿದ್ದು, ಮೇಲ್ಬಾಗದಲ್ಲಿ ಲಿಂಗದ ಆಕೃತಿಯನ್ನು ಹೊಂದಿದ್ದರೂ ಹಳೇಬೀಡಿನಲ್ಲಿ ಕಂಡುಬರುವ ಸ್ತಂಭದ ರೀತಿಯಲ್ಲಿದೆ. ಕೆಳಭಾಗದಲ್ಲಿ ಚೌಕಾಕರಾವಾಗಿದ್ದು ಶಿಲ್ಪಗಳಿಂದ ಕೂಡಿದೆ.
ಲಿಂಗದ ರೀತಿಯ ಸ್ತಂಬದ ಮೇಲ್ಬಾಗದಲ್ಲಿ ಚಪ್ಪಟೆಯಾಗಿದೆ. ಆದ್ದರಿಂದ ಇದನ್ನು ಶಿವಲಿಂಗ ಎಂದು ಹೇಳುವುದು ಕಷ್ಟವಾಗಿದೆ. ಈ ಭಾಗವು ಹಳೆಬೀಡಿನ ಗರುಡಸ್ತಂಭದ ವೃತ್ತಾಕಾರದ ರೀತಿಯಲ್ಲಿದೆ. ಆರಗ ಶಿಲ್ಪದ ವೃತ್ತಾಕಾರದ ಸ್ತಂಭದ ಬುಡದಲ್ಲಿ ಯಾವುದೇ ಚಿಕಣಿ ಶಿಲ್ಪಗಳಿಲ್ಲ ಆದರೆ ಲಿಂಗದ ಉಬ್ಬು ಶಿಲ್ಪವನ್ನು ಕಂಡರಿಸಲಾಗಿದೆ.
ಕೆಳಭಾಗದ ಚೌಕಾಕಾರದ ಭಾಗದಲ್ಲಿ ಕೈಯಲ್ಲಿ ಹಿಡಿದಿರುವ ರುಂಡವನ್ನು ಮಹಿಳೆಯು ದೇವರಿಗೆ ಅರ್ಪಿಸಿ ಸತಿ ಹೊಗಿರಬಹುದು. ಗರುಡ ಹೋಗಿರುವಂತವರು ಶೈವರಾದಕಾರಾಗಿದ್ದು ರುಂಡವನ್ನು ಉಬ್ಬು ಶಿಲ್ಪದ ಲಿಂಗಕ್ಕೆ ಅರ್ಪಿಸಿದ್ದಾರೆ.
ಹೊಯ್ಸಳರ ಕಾಲದವರೆಗೆ ಇದ್ದಂತಹ ಗರುಡ ಪದ್ಧತಿ ವಿಜಯನಗರ ಅರಸರ ಕಾಲದಲ್ಲಿಯೂ ಮುಂದುವರೆಯಿತು ಎಂದು ಈ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆಯಿಂದ ತಿಳಿಯಬಹುದಾಗಿದೆ. ಹಳೇಬೀಡು ಮತ್ತು ಆರಗದ ಸ್ಥಂಬಗಳನ್ನು ಗಮನಿಸಿದಾಗ ಒಟ್ಟಾರೆಯಾಗಿ ಗರುಡ ಪದ್ಧತಿಯಲ್ಲಿ ಇದೇ ರೀತಿಯ ಸ್ತಂಭಳನ್ನು ಸ್ಥಾಪಿಸಿತಿದ್ದಿರಬೇಕು ಎಂಬುದನ್ನು ಊಹಿಸಬಹುದಾಗಿದೆ.
ಈ ಗರುಡ ಪದ್ಧತಿಯ ಸ್ಮಾರಕ ಶಿಲ್ಪದ ಬಗ್ಗೆ ಮಾಹಿತಿಯನ್ನು ಒದಗಿಸಿದ ಡಾ.ದೇವರಾಜಸ್ವಾಮಿ, ಡಾ. ಜಗದೀಶ, ಟಿ.ಎಂ.ಕೇಶವ, ಡಾ.ಗಂಗಾಂಬಿಕೆ ಗೋವರ್ಧನ, ರಮೇಶ ಹಿರೇಜಂಬೂರು, ಶಶಿಧರ ಹಾಗೂ ಮೋಹನ್ ಇವರುಗಳಿಗೆ ಪುರಾತತ್ತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಬಳ್ಳಾರಿ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಧನ್ಯವಾದಗಳನ್ನು ತಿಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ
ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.
ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಕಲಿ ಸೇವಾ ಪ್ರಮಾಣಪತ್ರ : ಅತಿಥಿ ಉಪನ್ಯಾಸಕ ಎಸ್. ಸಿದ್ಧನಗೌಡ ವಿರುದ್ಧ ಎಫ್.ಐ.ಆರ್ ದಾಖಲು
ಸುದ್ದಿದಿನ,ಕೂಡ್ಲಿಗಿ:ಪಟ್ಟಣದ ಎಸ್.ಎ.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಕಲಿ ಸೀಲು ಹಾಗೂ ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದ ಎಸ್.ಸಿದ್ಧನಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ನಾಲ್ಕು ವರ್ಷಗಳ ನಕಲಿ ಸೇವಾ ಪ್ರಮಾಣಪತ್ರ ತಯಾರಿಸಿಕೊಂಡ ಕೂಡ್ಲಿಗಿ ತಾಲ್ಲೂಕಿನ ಸೂಲದಹಳ್ಳಿ ಅಗ್ರಹಾರ ಗ್ರಾಮದ ಎಸ್.ಸಿದ್ಧನಗೌಡ ಎಂಬ ಅತಿಥಿ ಉಪನ್ಯಾಸಕನ ಮೇಲೆ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರು ಕೂಡ್ಲಿಗಿ ನಗರದ ಪೋಲಿಸ್ ಠಾಣೆಯಲ್ಲಿ ಐ.ಪಿಸಿ ಸೆಕ್ಷನ್ 1860 ಕಲಂ 420, 465, 468, 471 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಹಿಂದೆ ಎಸ್.ಸಿದ್ಧನಗೌಡ ಅವರು ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು 2023ನೇ ಸಾಲಿನಲ್ಲಿ ನಡೆದ ಅತಿಥಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕನ್ನಡ ಉಪನ್ಯಾಸಕರಾಗಿ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜನ್ನು ಆಯ್ದುಕೊಂಡು ಸೇವೆಗೆ ವರದಿ ಮಾಡಿಕೊಂಡಿದ್ದರು. ಇವರ ಸೇವೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಕೆ.ಎ.ಓಬಳೇಶ್ ಅವರು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಮಾಹಿತಿ ಪಡೆದು, ಕೂಡ್ಲಿಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರ ವಿರುದ್ಧ ಲೋಕಾಯುಕ್ತಾಗೆ ದೂರು ನೀಡಿದ್ದರು.
ವಿಚಾರಣೆಯನ್ನು ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಾಲಯವು ಪ್ರಾಂಶುಪಾಲರಿಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಕಲಿ ಸೀಲು, ನಕಲಿ ಪ್ರಮಾಣಪತ್ರ ಸಿದ್ಧಪಡಿಸಿಕೊಂಡ ಎಸ್.ಸಿದ್ಧನಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೋಲಿಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕರೆ
ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು 1ಸಾವಿರದ 700 ವಿಶ್ವವಿದ್ಯಾಲಯಗಳು 45 ಸಾವಿರ ಕಾಲೇಜುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.
ಭಾರತವು ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಪಾಲರು ಕರೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ2 days ago
ಸಂತೇಬೆನ್ನೂರು | ಈಶ್ವರೀ ವಿ ವಿ ಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ
-
ದಿನದ ಸುದ್ದಿ6 days ago
ನಕಲಿ ವೈದ್ಯರಿಗೆ ದಂಡ ; ಮೆಡಿಕಲ್ ಸ್ಟೋರ್ ಮುಚ್ಚಲು ಆದೇಶ
-
ದಿನದ ಸುದ್ದಿ6 days ago
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
-
ದಿನದ ಸುದ್ದಿ4 days ago
ದಾವಣಗೆರೆ | ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
-
ದಿನದ ಸುದ್ದಿ3 days ago
ಆತ್ಮಕತೆ | ಮಗು : ಆತಂಕದ ಕ್ಷಣಗಳು
-
ದಿನದ ಸುದ್ದಿ3 days ago
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ2 days ago
ಪುಣೆಯಿಂದ ಹುಬ್ಬಳಿಗೆ ಇಂದಿನಿಂದ ವಂದೇ ಭಾರತ್ ರೈಲು ಸಂಚಾರ
-
ದಿನದ ಸುದ್ದಿ3 days ago
HAL | ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ