ದಿನದ ಸುದ್ದಿ
‘ಏರ್ ಸ್ಟ್ರೈಕ್’ ನಲ್ಲಿ ನಿಜಕ್ಕೂ ಉಗ್ರರು ಸತ್ತಿದ್ದಾರ? : ಸಾಕ್ಷಿ ಕೇಳಿದ ವಿಪಕ್ಷ ನಾಯಕರು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/03/Congress-suddidina-777.jpg&description=‘ಏರ್ ಸ್ಟ್ರೈಕ್’ ನಲ್ಲಿ ನಿಜಕ್ಕೂ ಉಗ್ರರು ಸತ್ತಿದ್ದಾರ? : ಸಾಕ್ಷಿ ಕೇಳಿದ ವಿಪಕ್ಷ ನಾಯಕರು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/03/Congress-suddidina-777.jpg&description=‘ಏರ್ ಸ್ಟ್ರೈಕ್’ ನಲ್ಲಿ ನಿಜಕ್ಕೂ ಉಗ್ರರು ಸತ್ತಿದ್ದಾರ? : ಸಾಕ್ಷಿ ಕೇಳಿದ ವಿಪಕ್ಷ ನಾಯಕರು', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್ : ಭಾರತೀಯ ವಾಯುಪಡೆಯ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ಮೂಡಿದ್ದು, 300 ಉಗ್ರರು ಸತ್ತಿದ್ದಾರೆ ಎಂದು ಹೇಳಿದವರಾರು? ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.
ಏರ್ ಚೀಫ್ ಮಾರ್ಷಲ್ ಸಾವಿನ ಸಂಖ್ಯೆ ಹೇಳಲು ನಿರಾಕರಿಸಿದ್ದಾರೆ. ಯಾವುದೇ ಹಾನಿ ಉಂಟಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.ಹೀಗಿರುವಾಗ 300-350 ಜನ ಸತ್ತಿದ್ದಾರೆ ಎನ್ನುವ ಲೆಕ್ಕ ಹೇಳಿದವರಾರು? ಎಂದು ಗುಡುಗಿದ್ದಾರೆ.
ದಿಗ್ವಿಜಯ್ ಸಿಂಗ್
ಏರ್ ಸ್ಟ್ರೈಕ್ ಪುರಾವೆ ಎಲ್ಲಿ? ಉಗ್ರರ ಮೇಲಿನ ದಾಳಿಯ ಬಗ್ಗೆ ಪ್ರತಿಪಕ್ಷಗಳು ಪುರಾವೆ ಕೇಳ್ತಿವೆ ಎಂದು ಕೇಂದ್ರ ಸರ್ಕಾರಕ್ಕೆ ‘ಏರ್ ಸ್ಟ್ರೈಕ್’ ಸಾಕ್ಷಿ ಕೇಳಿದ್ದಾರೆ ದಿಗ್ವಿಜಯ್ ಸಿಂಗ್. ಬಿನ್ ಲಾಡೆನ್ ಹತ್ಯೆಗೈದ ಅಮೆರಿಕಾ ಜಗತ್ತಿನ ಮುಂದೆ ಸಾಕ್ಷಿ ಇಟ್ಟಿತ್ತು,ನಾವು ಕೂಡಾ ದಾಳಿಯ ಬಗ್ಗೆ ಜಗತ್ತಿಗೆ ಸಾಕ್ಷಿ ತೋರಿಸಬೇಕು ಎಂದಿದ್ದಾರೆ.
ನವಜೋತ್ ಸಿಂಗ್ ಸಿದ್ದು
ನೆಲಸಮ ಮಾಡಿದ್ದು ಉಗ್ರರನ್ನೋ? ಮರಗಳನ್ನೋ? ನೀವು ನೆಲಸಮ ಮಾಡಿರುವುದು ಉಗ್ರರನ್ನೋ ಅಥವಾ ಮರಗಳನ್ನೋ? ದಾಳಿಯಲ್ಲಿ ಮೃತಪಟ್ಟಿರುವವರ ಸಂಖ್ಯೆ ಎಷ್ಟು? ಕೇಂದ್ರ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಇದರ ಉದ್ದೇಶವೇನು? ಇದು ಚುನಾವಣಾ ಗಿಮಿಕ್ ಅಲ್ಲವೇ? ಶತ್ರುಗಳ ವಿರುದ್ಧ ಹೋರಾಡುವಲ್ಲಿ ನಮ್ಮ ನಾಡಿಗೆ ಮೋಸವಾಗಿದೆ. ಸೈನ್ಯವನ್ನು ರಾಜಕೀಯಕ್ಕೆ ಒಳಪಡಿಸುವುದನ್ನು ನಿಲ್ಲಿಸಿ.ಸಿದ್ದು ಟ್ವೀಟ್ ನಲ್ಲಿ ಯಡಿಯೂರಪ್ಪ, ಅಹ್ಲುವಾಲಿಯಾ ಹೇಳಿಕೆ ಪ್ರಸ್ತಾಪಿಸಿದ್ದಾರೆ.
300 terrorist dead, Yes or No?
What was the purpose then? Were you uprooting terrorist or trees? Was it an election gimmick?
Deceit possesses our land in guise of fighting a foreign enemy.
Stop politicising the army, it is as sacred as the state.
ऊंची दुकान फीका पकवान| pic.twitter.com/HiPILADIuW
— Navjot Singh Sidhu (@sherryontopp) March 4, 2019
ಕಪಿಲ್ ಸಿಬಲ್
ವೆಬ್ ಸೈಟ್ ಗಳು ಸುಳ್ಳು ಹೇಳ್ತಾವಾ?
ಉಗ್ರಗಾಮಿ ಸತ್ತಿಲ್ಲ ಎಂದು ಕೆಲ ವೆಬ್ ಸೈಟ್ ಗಳು ವರದಿ ಮಾಡಿದ್ದು,ಉಗ್ರರು ಸತ್ತಿರುವ ಯಾವುದೇ ಪುರಾವೆ ಇಲ್ಲವೆಂದು ಹೇಳಿವೆ.
ಅಂತರಾಷ್ಟ್ರೀಯ ವೆಬ್ ಸೈಟ್ ಸುಳ್ಳು ಹೇಳುತ್ತವೆಯೆ? ಎಂದು ಸಾಕ್ಷಿ ಕೇಳಿದ್ದಾರೆ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್.
ನೀವು ಭಯೋತ್ಪಾದನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದೀರಿ. ಉಗ್ರರ ಸಾವಿನ ಪುರಾವೆ ನೀಡುವಂತೆ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.
Modiji :
Is international media :
1) New York Times
2) London based Jane's Information Group
3) Washinton Post
4) Daily Telegraph
5) The Guardian
6) Reutersreporting no proof of militant losses at Balakot pro-Pakistan ?
You are guilty of politicising terror ?
— Kapil Sibal (@KapilSibal) March 4, 2019
ಮನೋಜ್ ತಿವಾರಿ
ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?
ಏರ್ ಚೀಫ್ ಮಾರ್ಷಲ್ ಸಾವಿನ ಸಂಖ್ಯೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಅಮಿತ್ ಶಾ ಸಾವಿನ ಸಂಖ್ಯೆ 250 ಅಂತಾ ಹೇಳಿದ್ದಾರೆ.ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?ಕಾಂಗ್ರೆಸ್ ಮುಖಂಡ ಮನೋಜ್ ತಿವಾರಿ ಪ್ರಶ್ನೆ
ಬಿಜೆಪಿ ರಾಷ್ಟ್ರಧ್ಯಕ್ಷರು ಈ ಬಗ್ಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ
ಎಲ್ಲಿ,ಎಷ್ಟು ಬಾಂಬ್ಗಳನ್ನು ಹಾಕಲಾಗಿದೆ?
ಏರ್ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಕೊಡುವಂತೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ? ಎಷ್ಟು ಬಾಂಬ್ಗಳನ್ನು ಉಗ್ರರ ಮೇಲೆ ಹಾಕಲಾಗಿದೆ? ಏರ್ ಸ್ಟ್ರೈಕ್ ನಲ್ಲಿ ಎಷ್ಟು ಉಗ್ರರು ಸಾವನ್ನಪ್ಪಿದ್ದಾರೆ? ವಿದೇಶಿ ಮಾಧ್ಯಮಗಳಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿ ಎಂದಿದ್ದಾರೆ ಮಮತಾ ಬ್ಯಾನರ್ಜಿ.
ಮೆಹಬೂಬ
ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು
ಏರ್ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣವಾದ ಮಾಹಿತಿ ಕೊಡಿ. ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು. ಏರ್ಸ್ಟ್ರೈಕ್ ಮಾಹಿತಿ ನೀಡಿ ಎಂದಿದ್ದಾರೆ ಮುಫ್ತಿ ,ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ.
ಗುಂಡೂರಾವ್
ಸೂಕ್ಷ್ಮತಾ ವಿಚಾರಗಳನ್ನು ಬಿಟ್ಟು ಉಳಿದ ವಿಷಯ ಬಹಿರಂಗಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ನಮ್ಮ ಸೈನಿಕರ ಕಾರ್ಯ ವೈಖರಿ ಬಗ್ಗೆ ಹೆಮ್ಮೆಯಿದೆ,ಗೌರವವಿದೆ.ಏರ್ ಸ್ಟ್ರೈಕ್ ಕುರಿತು ಮಾಧ್ಯಮಗಳಲ್ಲಿ ಹಲವು ಪ್ರಶ್ನೆಗಳು ಎದ್ದಿವೆ.
ಉಗ್ರರ ಮೇಲಿನ ದಾಳಿ ಬಗ್ಗೆ ಪ್ರಶ್ನೆ ಕೇಳುವುದರಲ್ಲಿ ತಪ್ಪಿಲ್ಲ.ಕುತೂಹಲದಿಂದ ಈ ಪ್ರಶ್ನೆ ಕೇಳಲಾಗುತ್ತಿದೆ ಎಂದಿದ್ದಾರೆ.
ಈ ಎಲ್ಲ ವಿದ್ಯಾಮಾನಗಳ ಹಿನ್ನೆಲೆಯಲ್ಲಿ, ನಾವು ನಮ್ಮ ಗುರಿ ತಲುಪಿದ್ದೀವಿ.ನಿಗದಿ ಪಡಿಸಿದ್ದ ಗುರಿಗಳ ಮೇಲೆ ನಾವು ನಿಖರವಾಗಿ ದಾಳಿ ಮಾಡಿದ್ದೇವೆ ಎಂದು
ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಸ್ಪಷ್ಟನೆ ನೀಡಿದೆ.
ಸಾವು-ನೋವುಗಳ ಲೆಕ್ಕಾಚಾರ ನಮ್ಮ ಕೆಲಸವಲ್ಲ. ಸಾವು-ನೋವುಗಳ ಲೆಕ್ಕಾಚಾರ ಕೇಂದ್ರ ಸರ್ಕಾರ ನೀಡುತ್ತದೆ. ಅರಣ್ಯದ ಖಾಲಿ ಜಾಗದಲ್ಲಿ ಬಾಂಬ್ ಹಾಕಿಲ್ಲ. ಖಾಲಿ ಜಾಗದಲ್ಲಿ ಬಾಂಬ್ ಹಾಕಿದ್ದರೆ ಅವರೇಕೆ ಇಷ್ಟು ಗಂಭೀರವಾಗುತ್ತಿದ್ರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.
ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.
ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.
ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ6 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ3 days agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ23 hours agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ2 days agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ
-
ದಿನದ ಸುದ್ದಿ23 hours agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ2 days agoನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

