Connect with us

ದಿನದ ಸುದ್ದಿ

‘ಏರ್ ಸ್ಟ್ರೈಕ್‍‌’ ನಲ್ಲಿ ನಿಜಕ್ಕೂ ಉಗ್ರರು ಸತ್ತಿದ್ದಾರ? : ಸಾಕ್ಷಿ ಕೇಳಿದ ವಿಪಕ್ಷ ನಾಯಕರು

Published

on

ಸುದ್ದಿದಿನ ಡೆಸ್ಕ್ : ಭಾರತೀಯ ವಾಯುಪಡೆಯ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ಮೂಡಿದ್ದು, 300 ಉಗ್ರರು ಸತ್ತಿದ್ದಾರೆ ಎಂದು ಹೇಳಿದವರಾರು? ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್​ ಹಿರಿಯ ನಾಯಕ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.

ಏರ್​ ಚೀಫ್ ಮಾರ್ಷಲ್​ ಸಾವಿನ ಸಂಖ್ಯೆ ಹೇಳಲು ನಿರಾಕರಿಸಿದ್ದಾರೆ. ಯಾವುದೇ ಹಾನಿ ಉಂಟಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.ಹೀಗಿರುವಾಗ 300-350 ಜನ ಸತ್ತಿದ್ದಾರೆ ಎನ್ನುವ ಲೆಕ್ಕ ಹೇಳಿದವರಾರು? ಎಂದು ಗುಡುಗಿದ್ದಾರೆ.

ದಿಗ್ವಿಜಯ್ ಸಿಂಗ್

ಏರ್ ಸ್ಟ್ರೈಕ್‍ ಪುರಾವೆ ಎಲ್ಲಿ? ಉಗ್ರರ ಮೇಲಿನ ದಾಳಿಯ ಬಗ್ಗೆ ಪ್ರತಿಪಕ್ಷಗಳು ಪುರಾವೆ ಕೇಳ್ತಿವೆ ಎಂದು ಕೇಂದ್ರ ಸರ್ಕಾರಕ್ಕೆ ‘ಏರ್ ಸ್ಟ್ರೈಕ್‍’ ಸಾಕ್ಷಿ ಕೇಳಿದ್ದಾರೆ ದಿಗ್ವಿಜಯ್‍ ಸಿಂಗ್. ಬಿನ್‍ ಲಾಡೆನ್‍ ಹತ್ಯೆಗೈದ ಅಮೆರಿಕಾ ಜಗತ್ತಿನ ಮುಂದೆ ಸಾಕ್ಷಿ ಇಟ್ಟಿತ್ತು,‌ನಾವು ಕೂಡಾ ದಾಳಿಯ ಬಗ್ಗೆ ಜಗತ್ತಿಗೆ ಸಾಕ್ಷಿ ತೋರಿಸಬೇಕು ಎಂದಿದ್ದಾರೆ.

ನವಜೋತ್ ಸಿಂಗ್ ಸಿದ್ದು

ನೆಲಸಮ ಮಾಡಿದ್ದು ಉಗ್ರರನ್ನೋ? ಮರಗಳನ್ನೋ? ನೀವು ನೆಲಸಮ ಮಾಡಿರುವುದು ಉಗ್ರರನ್ನೋ ಅಥವಾ ಮರಗಳನ್ನೋ? ದಾಳಿಯಲ್ಲಿ ಮೃತಪಟ್ಟಿರುವವರ ಸಂಖ್ಯೆ ಎಷ್ಟು? ಕೇಂದ್ರ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದರ ಉದ್ದೇಶವೇನು? ಇದು ಚುನಾವಣಾ ಗಿಮಿಕ್ ಅಲ್ಲವೇ? ಶತ್ರುಗಳ ವಿರುದ್ಧ ಹೋರಾಡುವಲ್ಲಿ ನಮ್ಮ ನಾಡಿಗೆ ಮೋಸವಾಗಿದೆ. ಸೈನ್ಯವನ್ನು ರಾಜಕೀಯಕ್ಕೆ ಒಳಪಡಿಸುವುದನ್ನು ನಿಲ್ಲಿಸಿ.ಸಿದ್ದು ಟ್ವೀಟ್ ನಲ್ಲಿ ಯಡಿಯೂರಪ್ಪ, ಅಹ್ಲುವಾಲಿಯಾ ಹೇಳಿಕೆ ಪ್ರಸ್ತಾಪಿಸಿದ್ದಾರೆ.

ಕಪಿಲ್ ಸಿಬಲ್

ವೆಬ್ ಸೈಟ್ ಗಳು ಸುಳ್ಳು ಹೇಳ್ತಾವಾ?
ಉಗ್ರಗಾಮಿ ಸತ್ತಿಲ್ಲ ಎಂದು ಕೆಲ ವೆಬ್ ಸೈಟ್ ಗಳು ವರದಿ ಮಾಡಿದ್ದು,ಉಗ್ರರು ಸತ್ತಿರುವ ಯಾವುದೇ ಪುರಾವೆ ಇಲ್ಲವೆಂದು ಹೇಳಿವೆ.
ಅಂತರಾಷ್ಟ್ರೀಯ ವೆಬ್ ಸೈಟ್ ಸುಳ್ಳು ಹೇಳುತ್ತವೆಯೆ?‌ ಎಂದು ಸಾಕ್ಷಿ ಕೇಳಿದ್ದಾರೆ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್.

ನೀವು ಭಯೋತ್ಪಾದನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದೀರಿ. ಉಗ್ರರ ಸಾವಿನ ಪುರಾವೆ ನೀಡುವಂತೆ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.

ಮನೋಜ್ ತಿವಾರಿ

ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?
ಏರ್ ಚೀಫ್ ಮಾರ್ಷಲ್ ಸಾವಿನ ಸಂಖ್ಯೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಅಮಿತ್ ಶಾ ಸಾವಿನ ಸಂಖ್ಯೆ 250 ಅಂತಾ ಹೇಳಿದ್ದಾರೆ.ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?ಕಾಂಗ್ರೆಸ್ ಮುಖಂಡ ಮನೋಜ್ ತಿವಾರಿ ಪ್ರಶ್ನೆ
ಬಿಜೆಪಿ ರಾಷ್ಟ್ರಧ್ಯಕ್ಷರು ಈ ಬಗ್ಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ

ಎಲ್ಲಿ,ಎಷ್ಟು ಬಾಂಬ್‍ಗಳನ್ನು ಹಾಕಲಾಗಿದೆ?
ಏರ್‌ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಕೊಡುವಂತೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ? ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ? ಏರ್ ಸ್ಟ್ರೈಕ್ ನಲ್ಲಿ ಎಷ್ಟು ಉಗ್ರರು ಸಾವನ್ನಪ್ಪಿದ್ದಾರೆ? ವಿದೇಶಿ ಮಾಧ್ಯಮಗಳಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿ ಎಂದಿದ್ದಾರೆ ಮಮತಾ ಬ್ಯಾನರ್ಜಿ.

ಮೆಹಬೂಬ

ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು
ಏರ್‌ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣವಾದ ಮಾಹಿತಿ ಕೊಡಿ. ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು. ಏರ್‌ಸ್ಟ್ರೈಕ್ ಮಾಹಿತಿ ನೀಡಿ ಎಂದಿದ್ದಾರೆ ಮುಫ್ತಿ ,ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ.

ಗುಂಡೂರಾವ್

ಸೂಕ್ಷ್ಮತಾ ವಿಚಾರಗಳನ್ನು ಬಿಟ್ಟು ಉಳಿದ ವಿಷಯ ಬಹಿರಂಗಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ನಮ್ಮ ಸೈನಿಕರ ಕಾರ್ಯ ವೈಖರಿ ಬಗ್ಗೆ ಹೆಮ್ಮೆಯಿದೆ,ಗೌರವವಿದೆ.ಏರ್ ಸ್ಟ್ರೈಕ್ ಕುರಿತು ಮಾಧ್ಯಮಗಳಲ್ಲಿ ಹಲವು ಪ್ರಶ್ನೆಗಳು ಎದ್ದಿವೆ.
ಉಗ್ರರ ಮೇಲಿನ ದಾಳಿ ಬಗ್ಗೆ ಪ್ರಶ್ನೆ ಕೇಳುವುದರಲ್ಲಿ ತಪ್ಪಿಲ್ಲ.ಕುತೂಹಲದಿಂದ ಈ ಪ್ರಶ್ನೆ ಕೇಳಲಾಗುತ್ತಿದೆ‌ ಎಂದಿದ್ದಾರೆ.

ಈ ಎಲ್ಲ ವಿದ್ಯಾಮಾನಗಳ ಹಿನ್ನೆಲೆಯಲ್ಲಿ, ನಾವು ನಮ್ಮ ಗುರಿ ತಲುಪಿದ್ದೀವಿ.ನಿಗದಿ ಪಡಿಸಿದ್ದ ಗುರಿಗಳ ಮೇಲೆ ನಾವು ನಿಖರವಾಗಿ ದಾಳಿ ಮಾಡಿದ್ದೇವೆ‌ ಎಂದು
ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಸ್ಪಷ್ಟನೆ ನೀಡಿದೆ.

ಸಾವು-ನೋವುಗಳ ಲೆಕ್ಕಾಚಾರ ನಮ್ಮ ಕೆಲಸವಲ್ಲ. ಸಾವು-ನೋವುಗಳ ಲೆಕ್ಕಾಚಾರ ಕೇಂದ್ರ ಸರ್ಕಾರ ನೀಡುತ್ತದೆ. ‌ಅರಣ್ಯದ ಖಾಲಿ ಜಾಗದಲ್ಲಿ ಬಾಂಬ್ ಹಾಕಿಲ್ಲ. ಖಾಲಿ ಜಾಗದಲ್ಲಿ ಬಾಂಬ್ ಹಾಕಿದ್ದರೆ ಅವರೇಕೆ ಇಷ್ಟು ಗಂಭೀರವಾಗುತ್ತಿದ್ರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!

Published

on

ಮಳೆಗಾಲದ ನೀರು ನಿರ್ವಹಣೆಗೆ ಮಹತ್ವದ ಯೋಜನೆ; ರೈಲು ಸಂಚಾರಕ್ಕೂ ಹೊಸ ಸುರಕ್ಷತಾ ಕ್ರಮ

ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ನೀರಿನ ಹರಿವನ್ನು ನಿಯಂತ್ರಿಸುವ ವಿಶೇಷ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಸುಮಾರು 65 ಕಿ.ಮೀ. ಉದ್ದದ ನೀರಿನ ಮಾರ್ಗ ನಿರ್ಮಿಸುವ ಚಿಂತನೆ ನಡೆದಿದೆ.

ನಗರದಲ್ಲಿ ಮಳೆ ಸುರಿದಾಗ ರಸ್ತೆಗಳು ಜಲಾವೃತವಾಗುವುದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಹಾಗೂ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನೀರಿನ ಹರಿವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಪ್ರಮುಖ ಗುರಿಯಾಗಿದೆ.

http://Visit : www.suddidina.com

ಮೆಟ್ರೋ ಮಾರ್ಗದ ಸಮೀಪ ವಿಶೇಷ ವ್ಯವಸ್ಥೆ

ಬಿನ್ನಿಗಾನಹಳ್ಳಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ಮಧ್ಯದಲ್ಲಿರುವ ಓಲ್ಡ್‌ ಮದ್ರಾಸ್‌ ಗರ್ದನ್‌ಸೇತುವೆಯಲ್ಲಿ ಪ್ರಸಕ್ತ ನೀರು ಹರಿವಿಗೆ ಸಂಬಂಧಿಸಿದ ನಿಯಂತ್ರಣ ಕಾಮಗಾರಿ ನಡೆಯುತ್ತಿದೆ. ತಾಂತ್ರಿಕ ತಂಡದ ಪರಿಶೀಲನೆ ಬಳಿಕ ಗರ್ದನ್‌ಸೇತುವೆ ಸುರಕ್ಷತಾ ತಪಾಸಣೆ ನಡೆಸಲಾಗಿದ್ದು, ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಭಾಗದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸುವುದರಿಂದ ಜಲಾವೃತ ಸಮಸ್ಯೆಯನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ನಗರದಲ್ಲಿ ಮಳೆಗಾಲದ ಸಂದರ್ಭದಲ್ಲಿ ನೀರು ನಿಂತು ಉಂಟಾಗುವ ಸಮಸ್ಯೆಗಳಿಗೆ ಇದು ಪ್ರಮುಖ ಪರಿಹಾರ ಕ್ರಮವಾಗಬಹುದು.

ರೈಲು ಸಂಚಾರಕ್ಕೂ ಸುರಕ್ಷತೆ

ರೈಲು ಸುರಕ್ಷತಾ ನಿಯಮಗಳ ಪ್ರಕಾರ ತಾಂತ್ರಿಕ ಮೇಲ್ವಿಚಾರಣೆ ನಡೆಸಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ನಿರಂತರ ಮಳೆ ಸುರಿದ ಸಂದರ್ಭದಲ್ಲೂ ರೈಲು ಸಂಚಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಲಾಗಿದೆ.

ರೈಲು ಸಂಪರ್ಕ ಇರುವ ಪ್ರದೇಶಗಳಲ್ಲಿ ನೀರು ಸಂಗ್ರಹವಾಗುವುದರಿಂದ ಹಳಿಗಳ ಸುರಕ್ಷತೆ ಹಾಗೂ ರೈಲು ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ನೀರು ಹರಿವಿನ ವ್ಯವಸ್ಥೆಯನ್ನು ಸುಧಾರಿಸುವುದರ ಜೊತೆಗೆ ರೈಲು ಮೂಲಸೌಕರ್ಯದ ಸುರಕ್ಷತೆಯನ್ನೂ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಲಾಗುತ್ತಿದೆ.

ಮುಂದಿನ ಹಂತದಲ್ಲಿ ದೊಡ್ಡ ಯೋಜನೆ

ಈ ನೀರಿನ ನಿರ್ವಹಣಾ ಕಾಮಗಾರಿಯ ಆಚ್ಚೋಬಲದಂದೇ ವಾರದೊಳಗೆ ಪೂರ್ಣಗೊಳಿಸುವ ನಿರೀಕ್ಷೆ ಇದೆ. ಕಾಮಗಾರಿ ಮುಗಿದ ಬಳಿಕ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ. ಮುಂದಿನ ಹಂತದಲ್ಲಿ ಮಳೆ ನೀರು ಸಂಗ್ರಹಣೆ ಹಾಗೂ ನೀರಿನ ಹರಿವಿನ ನಿರ್ವಹಣೆಯನ್ನು ಇನ್ನಷ್ಟು ಬಲಪಡಿಸುವ ಯೋಜನೆಗಳೂ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ನಗರದ ವೇಗದ ಬೆಳವಣಿಗೆಗೆ ತಕ್ಕಂತೆ ಮೂಲಸೌಕರ್ಯ ವಿಸ್ತರಣೆ ನಡೆಯುತ್ತಿರುವ ಸಂದರ್ಭದಲ್ಲಿ ಮಳೆ ನೀರು ನಿರ್ವಹಣೆ ಬೆಂಗಳೂರಿಗೆ ಅತ್ಯಂತ ಅಗತ್ಯವಾಗಿದೆ. 65 ಕಿ.ಮೀ. ನೀರು ಮಾರ್ಗದ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾದರೆ, ಮಳೆಗಾಲದ ಜಲಾವೃತ ಸಮಸ್ಯೆ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆಯಾಗಲಿದೆ.

Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading
Advertisement

Title

ದಿನದ ಸುದ್ದಿ9 hours ago

ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!

ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ...

bengaluru-koodlugate-snn-raj-eternia-18-floor-building-demolition bengaluru-koodlugate-snn-raj-eternia-18-floor-building-demolition
ದಿನದ ಸುದ್ದಿ10 hours ago

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ...

kalaburagi-municipal-corporation-mayor-deputy-mayor-election-congress-win kalaburagi-municipal-corporation-mayor-deputy-mayor-election-congress-win
ದಿನದ ಸುದ್ದಿ10 hours ago

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್...

ravichandran-political-entry-dk-shivakumar-mlc-nomination ravichandran-political-entry-dk-shivakumar-mlc-nomination
ದಿನದ ಸುದ್ದಿ10 hours ago

ರಾಜಕೀಯಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ? ಡಿಕೆಶಿ ಭೇಟಿಯ ಹಿಂದೆ ಇದೆ ‘ಕೈ’ ಲೆಕ್ಕ!

ಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೆಚ್ಚಿದ ಕುತೂಹಲ; ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ ಸುದ್ದಿದಿನ,ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕ್ರೇಜಿಸ್ಟಾರ್ ರವಿಚಂದ್ರನ್...

ದಿನದ ಸುದ್ದಿ10 hours ago

ರಸ್ತೆ ನಿಯಮ ಉಲ್ಲಂಘನೆಗೆ ಬ್ರೇಕ್ ಯಾವಾಗ? 4 ವರ್ಷದಲ್ಲಿ 5.67 ಕೋಟಿ ಪ್ರಕರಣ, ₹2,361 ಕೋಟಿ ದಂಡ ಸಂಗ್ರಹ!

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ದಾಖಲಾಗುತ್ತಿವೆ. ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆಗೆ...

janardhana-reddy-attacks-b-nagendra-valmiki-scam-ballari-political-war janardhana-reddy-attacks-b-nagendra-valmiki-scam-ballari-political-war
ದಿನದ ಸುದ್ದಿ10 hours ago

ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್‌ಗೆ ರಾಜೀನಾಮೆ ಸವಾಲು!

ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ...

bengaluru-strr-ring-road-traffic-relief-40-percent-reduction bengaluru-strr-ring-road-traffic-relief-40-percent-reduction
ದಿನದ ಸುದ್ದಿ13 hours ago

ಬೆಂಗಳೂರಿನ ಟ್ರಾಫಿಕ್‌ಗೆ ಬಿಗ್ ರಿಲೀಫ್‌! ವರ್ಷಾಂತ್ಯಕ್ಕೆ STRR ಸಂಚಾರ ಮುಕ್ತ: ನಗರ ದಟ್ಟಣೆ ಶೇ.40ರಷ್ಟು ಇಳಿಕೆ ನಿರೀಕ್ಷೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ನಗರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವಂತೆ ವಾಹನ ದಟ್ಟಣೆಯ ಸಮಸ್ಯೆಯೂ ಹೆಚ್ಚುತ್ತಿದೆ. ಅದರಲ್ಲೂ ಹೊರರಾಜ್ಯಗಳಿಂದ ನಗರವನ್ನು ದಾಟಿ ಸಾಗುವ ಭಾರಿ ವಾಹನಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದ...

toxic-movie-kichcha-sudeepa-supports-yash-negative-reviews toxic-movie-kichcha-sudeepa-supports-yash-negative-reviews
ದಿನದ ಸುದ್ದಿ14 hours ago

ವಿಭಿನ್ನ ಪ್ರಯೋಗಕ್ಕೆ ಸುದೀಪ್‌ ಫಿದಾ; ‘ಟಾಕ್ಸಿಕ್’ ವಿರುದ್ಧದ ಟೀಕೆಗಳ ನಡುವೆ ಯಶ್‌ಗೆ ಭರ್ಜರಿ ಬೆಂಬಲ

ಸುದ್ದಿದಿನ,ಸಿನಿಮಾ: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಯಾದ ಬಳಿಕ ನಿರೀಕ್ಷೆಗಿಂತ ಹೆಚ್ಚಾಗಿ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು...

ದಿನದ ಸುದ್ದಿ14 hours ago

ಶನಿವಾರ ಕಲಬುರಗಿ ಪಾಲಿಕೆಯ ಹೊಸ ಮೇಯರ್‌, ಉಪ ಮೇಯರ್‌ ಆಯ್ಕೆ: ಯಾರಿಗೆ ಒಲಿಯಲಿದೆ ಅಧಿಕಾರದ ಪಟ್ಟ?

ಸುದ್ದಿದಿನ, ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಮೇಯರ್‌ ಸ್ಥಾನವನ್ನು ಬಿಸಿಎ ವರ್ಗಕ್ಕೆ...

ದಿನದ ಸುದ್ದಿ14 hours ago

ಹೆದ್ದಾರಿಯಲ್ಲಿ ಹಾಲಿನ ಹೊಳೆ! ಪಲ್ಟಿಯಾದ ನಂದಿನಿ ಟ್ಯಾಂಕರ್‌ನಿಂದ 21 ಸಾವಿರ ಲೀಟರ್ ಹಾಲು ರಸ್ತೆಗೆ

ತುಮಕೂರು: ಸಾಮಾನ್ಯವಾಗಿ ಮಳೆ ಬಂದಾಗ ರಸ್ತೆಯಲ್ಲಿ ನೀರು ಹರಿಯುವುದನ್ನು ನೋಡುತ್ತೇವೆ. ಆದರೆ ತುಮಕೂರಿನ ಶಿರಾ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದ ಘಟನೆ ಮಾತ್ರ ವಿಭಿನ್ನ. ಇಲ್ಲಿ ನೀರಿನ ಬದಲು...

Trending