Connect with us

ದಿನದ ಸುದ್ದಿ

ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಸೇನಾ ದಾಳಿ ; ಭಾರತೀಯ ಸೇನೆಯಿಂದ ಅಪರೇಷನ್ ಸಿಂಧೂರ

Published

on

ಸುದ್ದಿದಿನಡೆಸ್ಕ್:ಭಾರತೀಯ ಸಶಸ್ತ್ರ ಪಡೆಗಳು ಮಧ್ಯರಾತ್ರಿಯ ನಂತರ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ. ಒಟ್ಟು ಒಂಬತ್ತು ತಾಣಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ತನ್ನ ಕ್ರಮಗಳು ಕೇಂದ್ರೀಕೃತವಾಗಿವೆ ಎಂದು ಸಚಿವಾಲಯ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿದರು.ಇದೇ ವೇಳೆ ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಲಾಗಿಲ್ಲ. ಗುರಿಗಳ ಆಯ್ಕೆ ಮತ್ತು ಕಾರ್ಯಗತಗೊಳಿಸುವ ವಿಧಾನದಲ್ಲಿ ಭಾರತವು ಸಾಕಷ್ಟು ಸಂಯಮವನ್ನು ಪ್ರದರ್ಶಿಸಿದೆ ಎಂದು ಸಚಿವಾಲಯ ತಿಳಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 25ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಬದ್ಧತೆಗೆ ಸಶಸ್ತ್ರ ಪಡೆಗಳು ಬದ್ಧವಾಗಿವೆ ಎಂದು ಸಚಿವಾಲಯ ಹೇಳಿದೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಳಗೆ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಉಭಯ ದೇಶಗಳ ಗಡಿಯಲ್ಲಿ ಏನಾದರೂ ಸಂಭವಿಸಲಿದೆ ಎಂದು ಜನರಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಉಭಯ ದೇಶಗಳ ನಡುವಿನ ಉದ್ವಿಗ್ನತೆ ಶೀಘ್ರದಲ್ಲೇ ಕೊನೆಗೊಳ್ಳುತ್ತದೆ ಎಂದು ಆಶಿಸಿದ್ದಾರೆ. ಏತನ್ಮಧ್ಯೆ, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ವೈಮಾನಿಕ ದಾಳಿ ನಡೆಸಿದ ನಂತರ ದೇಶದ ಉತ್ತರ ಭಾಗದ ಹಲವಾರು ವಿಮಾನ ನಿಲ್ದಾಣಗಳಲ್ಲಿ ವಾಣಿಜ್ಯ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಧರ್ಮಶಾಲಾ, ಲೇಹ್, ಜಮ್ಮು, ಶ್ರೀನಗರ ಮತ್ತು ಅಮೃತಸರ ವಿಮಾನ ನಿಲ್ದಾಣಗಳನ್ನು ಮುಂದಿನ ಸೂಚನೆ ಬರುವವರೆಗೆ ಮುಚ್ಚಲಾಗಿದೆ ಎಂದು ಸ್ಪೈಸ್ ಜೆಟ್ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ಹೇಳಿಕೊಂಡಿದೆ.

ಈ ವಿಮಾನ ನಿಲ್ದಾಣಗಳಿಂದ ವಿಮಾನ ಸಂಚಾರದ ಸ್ಥಿತಿಗತಿಯನ್ನು ಪರಿಶೀಲಿಸಲು ಇಂಡಿಗೊ ತನ್ನ ಪ್ರಯಾಣಿಕರಿಗೆ ಸಲಹೆ ನೀಡಿದೆ. ಇದಲ್ಲದೆ, ಏರ್ ಇಂಡಿಯಾ ಜಮ್ಮು, ಶ್ರೀನಗರ, ಲೇಹ್, ಜೋಧಪುರ, ಅಮೃತಸರ, ಭುಜ್, ಜಾಮ್ನಗರ್, ಚಂಡೀಗಢ ಮತ್ತು ರಾಜ್ಕೋಟ್ ನಿಂದ ತನ್ನ ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ಇಂದು ಮಧ್ಯಾಹ್ನ 12 ಗಂಟೆಯವರೆಗೆ ರದ್ದುಗೊಳಿಸಲಾಗಿತ್ತು. ಹೆಚ್ಚಿನ ವಾಣಿಜ್ಯ ವಿಮಾನ ಕಂಪನಿಗಳು ಪ್ರಯಾಣವನ್ನು ಪ್ರಾರಂಭಿಸುವ ಮೊದಲು ವಿಮಾನ ಸಂಚಾರದ ಸ್ಥಿತಿಯನ್ನು ಪರಿಶೀಲಿಸಲು ತಮ್ಮ ಪ್ರಯಾಣಿಕರಿಗೆ ಸಲಹೆ ನೀಡಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980347243

 

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Published

on

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.

ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending