ದಿನದ ಸುದ್ದಿ
ಮೀಸಲಾತಿಯ ಜನಕ ‘ಛತ್ರಪತಿ ಶಾಹು ಮಹರಾಜ್’ ಬಗ್ಗೆ ನಿಮಗೆಷ್ಟು ಗೊತ್ತು ?
ಅದು ಒಂದು ಪುರೋಹಿತಶಾಹಿಗಳ ಕಾಲ, ಚಾತುರ್ವರ್ಣ ಪದ್ದತಿಗಳು ಶ್ರೇಣೆಕೃತ ಜಾತಿ ವ್ಯವಸ್ಥೆಗಳು ತಾಂಡವವಾಡುತ್ತಿದ್ದಂತಹ ಕಾಲ, ಪುರೋಹಿತಶಾಹಿಗಳು ಬಹುಜನರನ್ನು ಮೂಡನಂಬಿಕೆಗಳಿಗೆ ತಲ್ಲಲ್ಪಟ್ಟಂತಹ ಕಾಲ, ಬಹುಜನರನ್ನು ಬ್ರಾಹ್ಮಣರ ಸೇವಕರಾಗಿ, ಗುಲಾಮರನ್ನಾಗಿ ಮಾಡಿಕೊಂಡಿದ್ದಂತಹ ಕಾಲ, ಅಸ್ಪೃಶ್ಯರನ್ನು ಹಂದಿ ನಾಯಿಗಳನ್ನು ಹೊಡೆದೋಡಿಸುತ್ತಿದ್ದ ಆಗೆ ಹೊಡೆದೋಡಿಸುತ್ತಿದ್ದಂತಹ ಕಾಲ, ಇಂತಹ ಕಾಲದಲ್ಲಿ ಬಹುಜನರಿಗಾಗಿ ಅವರ ರಕ್ಷಣೆಗಾಗಿ, ಏಳಿಗೆಗಾಗಿ ಒಬ್ಬ ಮಹಾ ಮೇಧಾವಿ ಪುರುಷನೊಬ್ಬ ಹುಟ್ಟುತ್ತಾರೆ ಅವರೇ “ಛತ್ರಪತಿ ಶಾಹು ಮಹಾರಾಜ್”. ಶಾಹುರವರು ಹುಟ್ಟಿದ್ದು 26, ಜೂನ್ 1874 ರಂದು. ಶಾಹು ರವರ ಮೊದಲ ಹೆಸರು ಯಶ್ವಂತರಾವ್ ಘಟ್ಗೆ ಇವರ ತಂದೆಯ ಹೆಸರು ಜಯಸಿಂಹರಾವ್ ಘಟ್ಗೆ, ತಾಯಿ ರಾಧಬಾಯಿ ಇವರು ಮೂಲತಃ ಕೊಲ್ಲಾಪುರದ ಮಹಾರಾಣಿ ಆನಂಧಿಬಾಯಿರವರು ಮಾರ್ಚ್ 11, 1884ರಂದು ಶಾಹುರವರನ್ನು ದತ್ತು ಸ್ವೀಕಾರ ಮಾಡಿಕೊಳ್ಳುತ್ತಾರೆ.
ಶಾಹುರವರಿಗೆ ಏಪ್ರಿಲ್ 2, 1894ರಂದು ಮಹರಾಜರಾಗಿ ಪಟ್ಟಾಭಿಷೇಕವಾಗುತ್ತದೆ.
ಕ್ರಿ.ಶ.1900ರಲ್ಲಿ ಒಂದು ಘಟನೆ ನಡೆಯುತ್ತದೆ ಅದೇನೆಂದರೆ ರಾಜನಾದವನು ಗಂಗಾ ಘಾಟ್ ಎಂಬಲ್ಲಿ ಸ್ನಾನ ಮಾಡಬೇಕಾಗಿರುತ್ತದೆ ಆ ಸಂದರ್ಭದಲ್ಲಿ ರಾಜನಿಗೆ ಬ್ರಾಹ್ಮಣರು ಮಂತ್ರಗಳನ್ನು ಪಟಿಸಬೇಕಾಗಿರುತ್ತದೆ ಆದರೆ ಬ್ರಾಹ್ಮಣರು ರಾಜನಿಗೆ ಪಟಿಸಬೇಕಾಗಿರುವ ಮಂತ್ರಗಳನ್ನು ಹೇಳುತ್ತಿರುವುದಿಲ್ಲ ಬದಲಾಗಿ ಶೂದ್ರ ಮಂತ್ರಗಳನ್ನು ಹೇಳುತ್ತಿರುತ್ತಾರೆ ಇದನ್ನರಿತ ರಾಜರ ಆಪ್ತರೊಬ್ಬರು ಈ ವಿಚಾರವನ್ನು ಮಹಾರಾಜರಿಗೆ ತಿಳಿಸುತ್ತಾರೆ. ಕೂಡಲೇ ಶಾಹುರವರು ಪುರೋಹಿತರನ್ನು ಪ್ರಶ್ನಿಸುತ್ತಾರೆ. ಆದರೆ ಪುರೋಹಿತರು ನೀವು ಶೂದ್ರರಾಗಿರುವ ಕಾರಣದಿಂದ ನಾವು ಶೂದ್ರ ಮಂತ್ರಗಳನ್ನೆ ಹೇಳಬೇಕಾಗುತ್ತದೆ ಎಂದು ಬಹಳ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಾರೆ. ಆಗ ಶಾಹುರವರು “ಒಬ್ಬ ಮಹಾರಾಜನಾಗಿ ನನಗೆ ಈ ಬ್ರಾಹ್ಮಣರಿಂದ ಅವಮಾನವಾಗುತ್ತಿದೆ ಜಾತಿ ಶೋಷಣೇಯಾಗುತ್ತಿದೆ ಎಂದರೆ ಇನ್ನು ಸಾಮನ್ಯ ಜನರಿಗೆ ಇವರಿಂದ ಇನ್ನೇಷ್ಟು ಶೋಷಣೆಯಾಗುತ್ತಿರಬಹುದು ಇವರಿಂದ ನಮ್ಮ ಬಹುಜನರು ಇನ್ನೇಷ್ಟು ಅವಮಾನ ಅಪಮಾನಗಳಿಗೆ ಗುರಿಯಾಗುತ್ತಿರಬಹುದು ಇದಕ್ಕೇನಾದರು ಪರಿಹಾರ ಹುಡುಕಬೇಕು” ಎಂದು ಮನಸ್ಸಿನಲ್ಲಿಯೇ ಮರುಕ ಪಡುತ್ತಾರೆ.
ರಾಜರ ಆಸ್ಥಾನದಲ್ಲಿ ರಾಜೋಪಾಧ್ಯೆ ಎಂಬ ಪ್ರಧಾನ ಪುರೋಹಿತನಿರುತ್ತಾನೆ. ಇವನಿಗೆ ಬಾಲಗಂಗಾದರ್ ತಿಲಕರ ನೆರವಿರುತ್ತದೆ. ಒಂದು ದಿನ ಮಹಾರಾಜರು ಅಡುಗೆ ಮನೆ ಪರಿಶೀಲನೆ ಮಾಡಲೆಂದು ಅರಮನೆಯ ಅಡುಗೆ ಮನೆಯೊಳಗೆ ಹೋಗಲು ಮುಂದಾಗುತ್ತರೆ ಆದರೆ ರಾಜೋಪಾಧ್ಯೆ ಎಂಬ ಪುರೋಹಿತನು ಶಾಹು ಮಹಾರಜರನ್ನು ನೀವು ಶೂದ್ರರು ಅಡುಗೆ ಮನೆಯೊಳಗೆ ಬರಕೂಡದು ಬಂದರೆ ಅಡುಗೆ ಮನೆಯೆಲ್ಲಾ ಮೈಲಿಗೆಯಾಗುತ್ತದೆ ದಯವಿಟ್ಟು ಒಳಗೆ ಬರಬೇಡಿ ಎಂದು ಮಹಾರಜರನ್ನು ತಡೆಯುತ್ತಾನೆ. ಆಗ ಮಹಾರಜರು ಕೆಂಡಾಮಂಡಲವಾಗುತ್ತಾರೆ ಮಹರಾಜನಾದ ನನಗೆ ಜಾತಿನಿಂದನೆ ಮಾಡುತ್ತೀರ? ನಿಮಗೆ ಕೆಲಸ ಕೊಟ್ಟು, ಹಣಕೊಟ್ಟು, ಇರೋದಕ್ಕೆ ಮನೆಕೊಟ್ಟು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿರುವ ನನಗೆ ಜಾತಿನಿಂದನೆಯೇ? ಈ ಕ್ಷಣದಿಂದ ನೀನು ನನ್ನ ಆಸ್ಥಾನದಲ್ಲಿರಕೂಡದೆಂದು 06 ಮೇ1902 ರಂದು ಅವನನ್ನು ಸ್ಥಾನದಿಂದ ವಜಾ ಮಾಡುತ್ತಾರೆ.
ಶಾಹುರವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಲಂಡನ್ನಿಗೆ ತೆರಲಿರುತ್ತಾರೆ ಅಲ್ಲಿ ಅವರಿಗೆ ತಾವು ಅನುಭವಿಸಿದ ಕೆಲವು ಘಟನೆಗಳು ನೆನಪಿಗೆ ಬರುತ್ತವೆ ಅದಕ್ಕೆ ಅವರು ಒಂದು ತೀರ್ಮಾನ ಮಾಡುತ್ತಾರೆ ಅಲ್ಲಿಂದ ಒಂದು ಸುದ್ಧಿಯನ್ನು ಕಳುಹಿಸುತ್ತಾರೆ ಅದೇನೆಂದರೆ “ಶೂದ್ರರಿಗೆ 50% ಮೀಸಲಾತಿ” ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಮೀಸಲಾತಿಯೆಂಬ ಯೋಜನೆಯನ್ನು ಕಂಡುಹಿಡಿದ ಕೀರ್ತಿ ಶಾಹು ಮಹಾರಾಜರಿಗೆ ಸಲ್ಲಬೇಕು.
ಶಾಹು ಮಹಾರಾಜರು ಕಳುಹಿಸಿಕೊಟ್ಟ ಮೀಸಲಾತಿಯ ಸುದ್ಧಿ ಕೇಳಿ ಬ್ರಾಹ್ಮಣರಿಗೆ ಹೃದಯ ಬಡಿತವೇ ನಿಂತಂತಾಯಿತು, ಬಾಲಗಂಗಾದರ್ ತಿಲಕರಿಗಂತೂ ಅಥೀವಾ ಆತಂಕ ಉಂಟಾಯಿತು ಆದ್ದರಿಂದ ಮೀಸಲಾತಿ ವಿಷಯಕ್ಕೆ ಸಂಬಂದಿಸಿದಂತೆ ತಿಲಕರು ವಿರೋದವನ್ನು ವ್ಯಕ್ತಪಡಿಸುತ್ತಾರೆ.
ಮಹಾರಾಜರ ಮೀಸಲಾತಿಯ ವಿಚಾರವನ್ನು ಬಹುತೇಕ ಬ್ರಾಹ್ಮಣರು ವಿರೋಧ ಮಾಡುತ್ತಿರುತ್ತಾರೆ, ಬೇಸೆತ್ತ ಕೆಲವು ಗೂಂಡಗಳಿಂದ ಮಹಾರಾಜರನ್ನು ಕೊಲೆ ಮಾಡುವ ಪ್ರಯತ್ನವು ನಡೆಯುತ್ತದೆ. ಶಾಹುರವರಿದ್ದ ರೈಲಿಗೆ ಬಾಂಬನ್ನು ಸಹ ಇಡಲಾಗುತ್ತದೆ ಆದರೆ ಆ ಕೊಲೆಯ ಪ್ರಯತ್ನವು ವಿಫಲವಾಗಿಬಿಡುತ್ತದೆ.
ಒಮ್ಮೆ ಮಹಾರಾಜರು ಅರಮನೆಯ ಆವರಣದಲ್ಲಿ ಗಾಳಿ ಸಂಚಾರ (walking) ಮಾಡುತ್ತಿರುತ್ತಾರೆ ಆ ಸಮಯದಲ್ಲಿ ಗಣಪತಿರಾವ್ ಎಂಬ ಬ್ರಾಹ್ಮಣ ವಕೀಲ ಶಾಹುರವರನ್ನು ಕಾಣಲು ಬರುತ್ತಾರೆ ಮೀಸಲಾತಿಯ ಬಗ್ಗೆ ಚರ್ಚೆ ಮಾಡುತ್ತಾ ಅರ್ಹತೆಯಿಲ್ಲದವರಿಗೆಲ್ಲಾ ಉದ್ಯೋಗದಲ್ಲಿ, ಶಿಕ್ಷಣದಲ್ಲಿ ಹಾಗೂ ಎಲ್ಲಾ ರಂಗಗಳಲ್ಲೂ ನೀವು ಮೀಸಲಾತಿ ಕೊಟ್ಟರೆ ಪ್ರತಿಭೆಗೆ ದಕ್ಕೆಯುಂಟಾಗುವುದಿಲ್ಲವೇ? ಎಂದು ಮಹಾರಾಜರನ್ನು ಪ್ರಶ್ನಿಸುತ್ತಾನೆ. ಆಗ ಶಾಹು ಮಹಾರಾಜರು ಓ.. ನಿಮಗೆ ಆ ರೀತಿ ಅರ್ಥವಾಗಿದೆಯೇ ಬನ್ನಿ ನನ್ನ ಜೊತೆ ಎಂದು ಆ ವಕೀಲನನ್ನು ಕರೆದುಕೊಂಡು ಸಂಚಾರ(walk) ಮಾಡುತ್ತಾ ಮಾಡುತ್ತಾ ಅರಮನೆಯ ಆವರಣದಲ್ಲಿ ಕುದುರೆಗಳನ್ನು ಕಟ್ಟಿರುವ ಜಾಗಕ್ಕೆ ತಲುಪುತ್ತಾರೆ ಅಲ್ಲಿ ಕುದುರೆಗಳನ್ನು ಗುಂಪು ಗುಂಪುಗಳಾಗಿ ಮಾಡಿ ಮೇವನ್ನು ಹಾಕಲಾಗಿರುತ್ತದೆ ಇದನ್ನು ಗಮನಿಸಿದ ಮಹಾರಾಜರು ಯಾರಲ್ಲಿ ಈ ಕುದುರೆಗಳನ್ನು ಕಟ್ಟಿದವರು ಎಂದಾಗ ಸ್ಥಳದಲ್ಲೇ ಇದ್ದ ಕುದುರೆಗಳನ್ನು ನೋಡಿಕೊಳ್ಳುವವನು ನಾನೇ ಪ್ರಭು ಎನ್ನುತ್ತಾನೆ. ಆಗ ಮಹಾರಾಜರು ಅವನನ್ನು “ಏನಯ್ಯ ನಿನಗೆ ಬುದ್ಧಿ ಇದೆಯಾ? ಕುದುರೆಗಳನ್ನು ಏಕೆ ಈ ರೀತಿ ಗುಂಪುಗುಂಪುಗಳನ್ನಾಗಿ ವಿಂಗಡನೆ ಮಾಡಿ ಬೇರೆ ಬೇರೆ ಕಡೆ ಮೇವನ್ನಕಿದ್ದೀಯಾ? ಎಲ್ಲಾ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬಹುದಾಗಿತ್ತಲ್ಲವೇ? ಎಂದು ಪ್ರಶ್ನಿಸಿ ಜೊತೆಯಲ್ಲಿದ್ದ ವಕೀಲನನ್ನು ಕೇಳುತ್ತಾರೆ ಗಣಪತಿರಾವ್ ರವರೇ ನಾನು ಕೇಳಿದ್ದು ಸರಿ ತಾನೆ? ಎಂದಾಗ ಆ ವಕೀಲ ಹೌದು ಮಹಾರಾಜರೇ ನೀವು ಕೇಳಿದ್ದು ಸರಿಯಾಗಿದೆ ಅವನು ಆ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬೇಕಿತ್ತು ಎನ್ನುತ್ತಾನೆ. ಆಗ ಸೇವಕನು ಮಹಾರಾಜರ ಪ್ರಶ್ನೆಗಳನ್ನು ಉದ್ದೇಶಿಸಿ “ಮಹಾರಾಜರೇ ಈ ಕುದುರೆಗಳಲ್ಲಿ ಕೆಲವು ವಯಸ್ಸಾಗಿರುವ ಕುದುರೆಗಳಿವೆ, ಗಾಯಗಳಾಗಿ ಪೆಟ್ಟು ಮಾಡಿಕೊಂಡಿರುವ ಕುದುರೆಗಳಿವೆ, ಸಣ್ಣ ಪ್ರಾಯದ ಕುದುರೆಗಳಿವೆ ಹಾಗೂ ದಷ್ಟಪುಷ್ಟವಾದ ಬಲಿಷ್ಟವಾಗಿರುವ ಕುದುರೆಗಳಿವೆ ಈ ಎಲ್ಲಾ ಕುದುರೆಗಳನ್ನು ಒಂದೇ ಕಡೆ ಸೇರಿಸಿ ಮೇವನ್ನಾಕಿದರೆ ಯಾವ ಕುದುರೆಗಳಿಗೆ ಹೆಚ್ಚು ಶಕ್ತಿ ಇದೆಯೋ ಅಂದರೆ ದಷ್ಟಪುಷ್ಟವಾದ ಕುದುರೆಗಳು ಮೇವೆಲ್ಲಾ ತಿಂದು ಬಿಡುತ್ತವೇ ಆಗ ವಯಸ್ಸಾದ ಕುದುರೆಗಳಿಗೆ, ಗಾಯಗಳಾಗಿರುವ ಕುದುರೆಗಳಿಗೆ, ಸಣ್ಣ ಪ್ರಾಯದ ಕುದುರೆಗಳಿಗೆ ಮೇವು ಸಿಗದೇ ದುರ್ಬಲವಾಗಿ ಹಸಿವಿನಿಂದಲೇ ಸತ್ತು ಹೋಗುತ್ತವೇ ಆದ್ದರಿಂದ ವಯಸ್ಸಾದ ಕುದುರೆಗಳಿಗೆ ಒಂದು ಕಡೆ, ಸಣ್ಣ ಪ್ರಾಯದ ಕುದುರೆಗಳಿಗೆ ಒಂದು ಕಡೆ, ಗಾಯಗೊಂಡಿರುವ ಕುದುರೆಗಳಿಗೆ ಒಂದು ಕಡೆ, ಬಲಿಷ್ಟ ಕುದುರೆಗಳಿಗೊಂದು ಕಡೆ ಮೇವನ್ನಾಕಿದ್ದೇನೆ ಆಗ ಎಲ್ಲಾ ಕುದುರೆಗಳಿಗೂ ಮೇವು ಸಿಗುತ್ತದೆ” ಎಂದು ಉತ್ತರಿಸುತ್ತಾನೆ. ಆಗ ಆ ಬ್ರಾಹ್ಮಣ ವಕೀಲನಿಗೆ ಮೀಸಲಾತಿಯ ಬಗ್ಗೆ ಅರ್ಥವಾಗಿ “ಮಹಾರಾಜರೇ ದಯವಿಟ್ಟು ಕ್ಷಮಿಸಿ ಈಗ ನಿಮ್ಮ ಮೀಸಲಾತಿಯ ಬಗ್ಗೆ ನನಗೆ ಸಂಪೂರ್ಣವಾಗಿ ಅರ್ಥವಾಯಿತೆಂದು” ಅಲ್ಲಿಂದ ಒರಟುಹೋಗುತ್ತಾನೆ.
• ಶಾಹು ಮಹಾರಜರು ಅಸ್ಪೃಶ್ಯರಿಗೋಸ್ಕರ 18 ಪ್ರತ್ಯೇಕ ಶಾಲೆಗಳನ್ನು ಸ್ಥಾಪಿಸುತ್ತಾರೆ.
• 1908ರಲ್ಲಿ ವಿಧ್ಯಾಸಂಸ್ಥೆಯನ್ನು ಪ್ರಾರಂಭ ಮಾಡುತ್ತಾರೆ.
• 1896 ರಿಂದ 1912ರ ಅವಧಿಯಲ್ಲಿ ಶೂದ್ರರಿಗೆ 22, ಅಸ್ಪೃಶ್ಯರಿಗೆ 27 ಶಾಲೆಗಳನ್ನು ಸ್ಥಾಪಿಸುತ್ತಾರೆ.
• 1918 ರಲ್ಲಿ ಶೂದ್ರರಿಗೆ ಅರಿವು ಮತ್ತು ಜಾಗೃತಿ ಮೂಡಿಸಲು “ಮೂಕ ನಾಯಕ್” ಎಂಬ ಪತ್ರಿಕೆಯನ್ನು ಪ್ರಾರಂಭಿಸುತ್ತಾರೆ.
• 1918 ರಲ್ಲಿ ಮಹಾತ್ಮ ಜೋತಿಬಾಫುಲೆ ರವರ ಸತ್ಯಶೋಧಕ ಸಮಾಜವನ್ನು ಮುನ್ನಡೆಸಲು “ಶಾಹು ಸತ್ಯ ಶೋಧಕ ಸಮಾಜ”ವನ್ನು ಸ್ಥಾಪನೆ ಮಾಡುತ್ತಾರೆ.
1920 ಮಾರ್ಚ 27ರಂದು ಕೊಲ್ಲಾಪುರದ ಜನಗಳನ್ನು ಉದ್ದೇಶಿಸಿ ಮಾತನಾಡುತ್ತ ” ಮಹಾ ಜನಗಳೇ ನನ್ನ ಆಸ್ಥಾನ ಎಷ್ಟಿದೆಯೋ ಅಷ್ಟರಲ್ಲಿ ಶೂದ್ರರಿಗಾಗಿ ಅಸ್ಪೃಷ್ಯರಿಗಾಗಿ ಎಲ್ಲಾವನ್ನು ಮಾಡಿದ್ದೇನೆ ಒಂದು ವೇಳೆ ನಾನು ಇಡೀ ಭಾರತಕ್ಕೆ ಮಹಾರಾಜನಾಗಿದ್ದರೆ ದೇಶದಲ್ಲಿರುವ ಎಲ್ಲಾ ಶೋಷಿತರನ್ನು ಉದ್ದರಿಸುತ್ತಿದ್ದೆ ಆದರೆ ನನ್ನ ಆಸ್ಥಾನ ಕೇವಲ ಕೊಲ್ಲಾಪುರಕ್ಕೆ ಮಾತ್ರ ಸೀಮಿತವಾಗಿರುವ ಕಾರಣದಿಂದ ಅದು ಅಸಾಧ್ಯವಾಗಿದೆ”. ಆದರೆ, ಇನ್ನುಮುಂದೆ “ಅಖಿಲ ಭಾರತ ಮಟ್ಟದಲ್ಲಿ ಬಡವರನ್ನು, ಶೋಷಿತರನ್ನು, ಅಸ್ಪೃಷ್ಯರನ್ನು ಉದ್ದರಿಸಲು ಒಬ್ಬ ಮಹಾನ್ ನಾಯಕ, ದೇಶ-ವಿದೇಶಗಳಲ್ಲಿ ಶಿಕ್ಷಣವನ್ನು ಪಡೆದ ವಿಧ್ಯಾವಂತ, ಬುದ್ಧಿವಂತ, ಮುಂದಿನ ರಾಷ್ಟ್ರೀಯ ನಾಯಕನನ್ನು ಈ ದಿನ ನಿಮಗೆಲ್ಲಾ ಪರಿಚಯಿಸುತ್ತೇನೆ ನೀವೆಲ್ಲಾ ಅವರಿಗೆ ಬೆಂಬಲಕೊಟ್ಟರೆ ಇಡೀ ದೇಶವನ್ನೇ ಬದಲಾಯಿಸತ್ತಾರೆ, ಬಹುಜನರಿಗೋಸ್ಕರ ಹೊಸ ಚರಿತೆಯನ್ನೇ ಸೃಷ್ಟಿಸುತ್ತಾರೆ” ಎಂದು ಆ ವ್ಯಕ್ತಿಯನ್ನು ಪರಿಚಯಿಸುತ್ತಾರೆ ಆ ವ್ಯಕ್ತಿಯೇ ಮಹಾ ಮಾನವತವಾದಿ, ವಿಶ್ವ ಮಾನವ, ರಾಷ್ತ್ರೀಯತಾವಾದಿ, ಕಾನೂನು ತಜ್ನ, ರಾಜಕೀಯ ನೇತಾರ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತ, ಶ್ರೇಷ್ಟ ಇತಿಹಾಸಗಾರ, ಮಹಾದಾರ್ಶನಿಕ, ಅಪ್ರತಿಮ ಚಿಂತಕ, ಮಾನವಶಾಸ್ತ್ರಜ್ನ, ಖ್ಯಾತ ಅರ್ಥಶಾಸ್ತ್ರಜ್ನ, ಸಮೃದ್ದ ಬರಹಗಾರ, ಕ್ರಾಂತಿಕಾರಿ, ಅಸಾಮಾನ್ಯ ವಾಕ್ಪಟು, ಅಪ್ರತಿಮ ನಾಯಕ, ಬೌದ್ಧ ಧರ್ಮದ ಪುನರುಜ್ಜೀವಕ, ಭಾರತ ರತ್ನ, ಸಂವಿಧಾನ ಶಿಲ್ಪಿ, ಪರಮಪೂಜ್ಯ “ಡಾ. ಬಾಬಾ ಸಾಹೇಬ್ ಅಂಬೇಡ್ಕರ್” ರವರು.
-ಅಜೀತ ಮಾದರ
ಸುದ್ದಿದಿನ.ಕಾಂ|ವಾಟ್ಸಾಪ್|998675401

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ಅಂತರಂಗ5 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ20 hours agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್


