ದಿನದ ಸುದ್ದಿ
ಮೀಸಲಾತಿಯ ಜನಕ ‘ಛತ್ರಪತಿ ಶಾಹು ಮಹರಾಜ್’ ಬಗ್ಗೆ ನಿಮಗೆಷ್ಟು ಗೊತ್ತು ?
ಅದು ಒಂದು ಪುರೋಹಿತಶಾಹಿಗಳ ಕಾಲ, ಚಾತುರ್ವರ್ಣ ಪದ್ದತಿಗಳು ಶ್ರೇಣೆಕೃತ ಜಾತಿ ವ್ಯವಸ್ಥೆಗಳು ತಾಂಡವವಾಡುತ್ತಿದ್ದಂತಹ ಕಾಲ, ಪುರೋಹಿತಶಾಹಿಗಳು ಬಹುಜನರನ್ನು ಮೂಡನಂಬಿಕೆಗಳಿಗೆ ತಲ್ಲಲ್ಪಟ್ಟಂತಹ ಕಾಲ, ಬಹುಜನರನ್ನು ಬ್ರಾಹ್ಮಣರ ಸೇವಕರಾಗಿ, ಗುಲಾಮರನ್ನಾಗಿ ಮಾಡಿಕೊಂಡಿದ್ದಂತಹ ಕಾಲ, ಅಸ್ಪೃಶ್ಯರನ್ನು ಹಂದಿ ನಾಯಿಗಳನ್ನು ಹೊಡೆದೋಡಿಸುತ್ತಿದ್ದ ಆಗೆ ಹೊಡೆದೋಡಿಸುತ್ತಿದ್ದಂತಹ ಕಾಲ, ಇಂತಹ ಕಾಲದಲ್ಲಿ ಬಹುಜನರಿಗಾಗಿ ಅವರ ರಕ್ಷಣೆಗಾಗಿ, ಏಳಿಗೆಗಾಗಿ ಒಬ್ಬ ಮಹಾ ಮೇಧಾವಿ ಪುರುಷನೊಬ್ಬ ಹುಟ್ಟುತ್ತಾರೆ ಅವರೇ “ಛತ್ರಪತಿ ಶಾಹು ಮಹಾರಾಜ್”. ಶಾಹುರವರು ಹುಟ್ಟಿದ್ದು 26, ಜೂನ್ 1874 ರಂದು. ಶಾಹು ರವರ ಮೊದಲ ಹೆಸರು ಯಶ್ವಂತರಾವ್ ಘಟ್ಗೆ ಇವರ ತಂದೆಯ ಹೆಸರು ಜಯಸಿಂಹರಾವ್ ಘಟ್ಗೆ, ತಾಯಿ ರಾಧಬಾಯಿ ಇವರು ಮೂಲತಃ ಕೊಲ್ಲಾಪುರದ ಮಹಾರಾಣಿ ಆನಂಧಿಬಾಯಿರವರು ಮಾರ್ಚ್ 11, 1884ರಂದು ಶಾಹುರವರನ್ನು ದತ್ತು ಸ್ವೀಕಾರ ಮಾಡಿಕೊಳ್ಳುತ್ತಾರೆ.
ಶಾಹುರವರಿಗೆ ಏಪ್ರಿಲ್ 2, 1894ರಂದು ಮಹರಾಜರಾಗಿ ಪಟ್ಟಾಭಿಷೇಕವಾಗುತ್ತದೆ.
ಕ್ರಿ.ಶ.1900ರಲ್ಲಿ ಒಂದು ಘಟನೆ ನಡೆಯುತ್ತದೆ ಅದೇನೆಂದರೆ ರಾಜನಾದವನು ಗಂಗಾ ಘಾಟ್ ಎಂಬಲ್ಲಿ ಸ್ನಾನ ಮಾಡಬೇಕಾಗಿರುತ್ತದೆ ಆ ಸಂದರ್ಭದಲ್ಲಿ ರಾಜನಿಗೆ ಬ್ರಾಹ್ಮಣರು ಮಂತ್ರಗಳನ್ನು ಪಟಿಸಬೇಕಾಗಿರುತ್ತದೆ ಆದರೆ ಬ್ರಾಹ್ಮಣರು ರಾಜನಿಗೆ ಪಟಿಸಬೇಕಾಗಿರುವ ಮಂತ್ರಗಳನ್ನು ಹೇಳುತ್ತಿರುವುದಿಲ್ಲ ಬದಲಾಗಿ ಶೂದ್ರ ಮಂತ್ರಗಳನ್ನು ಹೇಳುತ್ತಿರುತ್ತಾರೆ ಇದನ್ನರಿತ ರಾಜರ ಆಪ್ತರೊಬ್ಬರು ಈ ವಿಚಾರವನ್ನು ಮಹಾರಾಜರಿಗೆ ತಿಳಿಸುತ್ತಾರೆ. ಕೂಡಲೇ ಶಾಹುರವರು ಪುರೋಹಿತರನ್ನು ಪ್ರಶ್ನಿಸುತ್ತಾರೆ. ಆದರೆ ಪುರೋಹಿತರು ನೀವು ಶೂದ್ರರಾಗಿರುವ ಕಾರಣದಿಂದ ನಾವು ಶೂದ್ರ ಮಂತ್ರಗಳನ್ನೆ ಹೇಳಬೇಕಾಗುತ್ತದೆ ಎಂದು ಬಹಳ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಾರೆ. ಆಗ ಶಾಹುರವರು “ಒಬ್ಬ ಮಹಾರಾಜನಾಗಿ ನನಗೆ ಈ ಬ್ರಾಹ್ಮಣರಿಂದ ಅವಮಾನವಾಗುತ್ತಿದೆ ಜಾತಿ ಶೋಷಣೇಯಾಗುತ್ತಿದೆ ಎಂದರೆ ಇನ್ನು ಸಾಮನ್ಯ ಜನರಿಗೆ ಇವರಿಂದ ಇನ್ನೇಷ್ಟು ಶೋಷಣೆಯಾಗುತ್ತಿರಬಹುದು ಇವರಿಂದ ನಮ್ಮ ಬಹುಜನರು ಇನ್ನೇಷ್ಟು ಅವಮಾನ ಅಪಮಾನಗಳಿಗೆ ಗುರಿಯಾಗುತ್ತಿರಬಹುದು ಇದಕ್ಕೇನಾದರು ಪರಿಹಾರ ಹುಡುಕಬೇಕು” ಎಂದು ಮನಸ್ಸಿನಲ್ಲಿಯೇ ಮರುಕ ಪಡುತ್ತಾರೆ.
ರಾಜರ ಆಸ್ಥಾನದಲ್ಲಿ ರಾಜೋಪಾಧ್ಯೆ ಎಂಬ ಪ್ರಧಾನ ಪುರೋಹಿತನಿರುತ್ತಾನೆ. ಇವನಿಗೆ ಬಾಲಗಂಗಾದರ್ ತಿಲಕರ ನೆರವಿರುತ್ತದೆ. ಒಂದು ದಿನ ಮಹಾರಾಜರು ಅಡುಗೆ ಮನೆ ಪರಿಶೀಲನೆ ಮಾಡಲೆಂದು ಅರಮನೆಯ ಅಡುಗೆ ಮನೆಯೊಳಗೆ ಹೋಗಲು ಮುಂದಾಗುತ್ತರೆ ಆದರೆ ರಾಜೋಪಾಧ್ಯೆ ಎಂಬ ಪುರೋಹಿತನು ಶಾಹು ಮಹಾರಜರನ್ನು ನೀವು ಶೂದ್ರರು ಅಡುಗೆ ಮನೆಯೊಳಗೆ ಬರಕೂಡದು ಬಂದರೆ ಅಡುಗೆ ಮನೆಯೆಲ್ಲಾ ಮೈಲಿಗೆಯಾಗುತ್ತದೆ ದಯವಿಟ್ಟು ಒಳಗೆ ಬರಬೇಡಿ ಎಂದು ಮಹಾರಜರನ್ನು ತಡೆಯುತ್ತಾನೆ. ಆಗ ಮಹಾರಜರು ಕೆಂಡಾಮಂಡಲವಾಗುತ್ತಾರೆ ಮಹರಾಜನಾದ ನನಗೆ ಜಾತಿನಿಂದನೆ ಮಾಡುತ್ತೀರ? ನಿಮಗೆ ಕೆಲಸ ಕೊಟ್ಟು, ಹಣಕೊಟ್ಟು, ಇರೋದಕ್ಕೆ ಮನೆಕೊಟ್ಟು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿರುವ ನನಗೆ ಜಾತಿನಿಂದನೆಯೇ? ಈ ಕ್ಷಣದಿಂದ ನೀನು ನನ್ನ ಆಸ್ಥಾನದಲ್ಲಿರಕೂಡದೆಂದು 06 ಮೇ1902 ರಂದು ಅವನನ್ನು ಸ್ಥಾನದಿಂದ ವಜಾ ಮಾಡುತ್ತಾರೆ.
ಶಾಹುರವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಲಂಡನ್ನಿಗೆ ತೆರಲಿರುತ್ತಾರೆ ಅಲ್ಲಿ ಅವರಿಗೆ ತಾವು ಅನುಭವಿಸಿದ ಕೆಲವು ಘಟನೆಗಳು ನೆನಪಿಗೆ ಬರುತ್ತವೆ ಅದಕ್ಕೆ ಅವರು ಒಂದು ತೀರ್ಮಾನ ಮಾಡುತ್ತಾರೆ ಅಲ್ಲಿಂದ ಒಂದು ಸುದ್ಧಿಯನ್ನು ಕಳುಹಿಸುತ್ತಾರೆ ಅದೇನೆಂದರೆ “ಶೂದ್ರರಿಗೆ 50% ಮೀಸಲಾತಿ” ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಮೀಸಲಾತಿಯೆಂಬ ಯೋಜನೆಯನ್ನು ಕಂಡುಹಿಡಿದ ಕೀರ್ತಿ ಶಾಹು ಮಹಾರಾಜರಿಗೆ ಸಲ್ಲಬೇಕು.
ಶಾಹು ಮಹಾರಾಜರು ಕಳುಹಿಸಿಕೊಟ್ಟ ಮೀಸಲಾತಿಯ ಸುದ್ಧಿ ಕೇಳಿ ಬ್ರಾಹ್ಮಣರಿಗೆ ಹೃದಯ ಬಡಿತವೇ ನಿಂತಂತಾಯಿತು, ಬಾಲಗಂಗಾದರ್ ತಿಲಕರಿಗಂತೂ ಅಥೀವಾ ಆತಂಕ ಉಂಟಾಯಿತು ಆದ್ದರಿಂದ ಮೀಸಲಾತಿ ವಿಷಯಕ್ಕೆ ಸಂಬಂದಿಸಿದಂತೆ ತಿಲಕರು ವಿರೋದವನ್ನು ವ್ಯಕ್ತಪಡಿಸುತ್ತಾರೆ.
ಮಹಾರಾಜರ ಮೀಸಲಾತಿಯ ವಿಚಾರವನ್ನು ಬಹುತೇಕ ಬ್ರಾಹ್ಮಣರು ವಿರೋಧ ಮಾಡುತ್ತಿರುತ್ತಾರೆ, ಬೇಸೆತ್ತ ಕೆಲವು ಗೂಂಡಗಳಿಂದ ಮಹಾರಾಜರನ್ನು ಕೊಲೆ ಮಾಡುವ ಪ್ರಯತ್ನವು ನಡೆಯುತ್ತದೆ. ಶಾಹುರವರಿದ್ದ ರೈಲಿಗೆ ಬಾಂಬನ್ನು ಸಹ ಇಡಲಾಗುತ್ತದೆ ಆದರೆ ಆ ಕೊಲೆಯ ಪ್ರಯತ್ನವು ವಿಫಲವಾಗಿಬಿಡುತ್ತದೆ.
ಒಮ್ಮೆ ಮಹಾರಾಜರು ಅರಮನೆಯ ಆವರಣದಲ್ಲಿ ಗಾಳಿ ಸಂಚಾರ (walking) ಮಾಡುತ್ತಿರುತ್ತಾರೆ ಆ ಸಮಯದಲ್ಲಿ ಗಣಪತಿರಾವ್ ಎಂಬ ಬ್ರಾಹ್ಮಣ ವಕೀಲ ಶಾಹುರವರನ್ನು ಕಾಣಲು ಬರುತ್ತಾರೆ ಮೀಸಲಾತಿಯ ಬಗ್ಗೆ ಚರ್ಚೆ ಮಾಡುತ್ತಾ ಅರ್ಹತೆಯಿಲ್ಲದವರಿಗೆಲ್ಲಾ ಉದ್ಯೋಗದಲ್ಲಿ, ಶಿಕ್ಷಣದಲ್ಲಿ ಹಾಗೂ ಎಲ್ಲಾ ರಂಗಗಳಲ್ಲೂ ನೀವು ಮೀಸಲಾತಿ ಕೊಟ್ಟರೆ ಪ್ರತಿಭೆಗೆ ದಕ್ಕೆಯುಂಟಾಗುವುದಿಲ್ಲವೇ? ಎಂದು ಮಹಾರಾಜರನ್ನು ಪ್ರಶ್ನಿಸುತ್ತಾನೆ. ಆಗ ಶಾಹು ಮಹಾರಾಜರು ಓ.. ನಿಮಗೆ ಆ ರೀತಿ ಅರ್ಥವಾಗಿದೆಯೇ ಬನ್ನಿ ನನ್ನ ಜೊತೆ ಎಂದು ಆ ವಕೀಲನನ್ನು ಕರೆದುಕೊಂಡು ಸಂಚಾರ(walk) ಮಾಡುತ್ತಾ ಮಾಡುತ್ತಾ ಅರಮನೆಯ ಆವರಣದಲ್ಲಿ ಕುದುರೆಗಳನ್ನು ಕಟ್ಟಿರುವ ಜಾಗಕ್ಕೆ ತಲುಪುತ್ತಾರೆ ಅಲ್ಲಿ ಕುದುರೆಗಳನ್ನು ಗುಂಪು ಗುಂಪುಗಳಾಗಿ ಮಾಡಿ ಮೇವನ್ನು ಹಾಕಲಾಗಿರುತ್ತದೆ ಇದನ್ನು ಗಮನಿಸಿದ ಮಹಾರಾಜರು ಯಾರಲ್ಲಿ ಈ ಕುದುರೆಗಳನ್ನು ಕಟ್ಟಿದವರು ಎಂದಾಗ ಸ್ಥಳದಲ್ಲೇ ಇದ್ದ ಕುದುರೆಗಳನ್ನು ನೋಡಿಕೊಳ್ಳುವವನು ನಾನೇ ಪ್ರಭು ಎನ್ನುತ್ತಾನೆ. ಆಗ ಮಹಾರಾಜರು ಅವನನ್ನು “ಏನಯ್ಯ ನಿನಗೆ ಬುದ್ಧಿ ಇದೆಯಾ? ಕುದುರೆಗಳನ್ನು ಏಕೆ ಈ ರೀತಿ ಗುಂಪುಗುಂಪುಗಳನ್ನಾಗಿ ವಿಂಗಡನೆ ಮಾಡಿ ಬೇರೆ ಬೇರೆ ಕಡೆ ಮೇವನ್ನಕಿದ್ದೀಯಾ? ಎಲ್ಲಾ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬಹುದಾಗಿತ್ತಲ್ಲವೇ? ಎಂದು ಪ್ರಶ್ನಿಸಿ ಜೊತೆಯಲ್ಲಿದ್ದ ವಕೀಲನನ್ನು ಕೇಳುತ್ತಾರೆ ಗಣಪತಿರಾವ್ ರವರೇ ನಾನು ಕೇಳಿದ್ದು ಸರಿ ತಾನೆ? ಎಂದಾಗ ಆ ವಕೀಲ ಹೌದು ಮಹಾರಾಜರೇ ನೀವು ಕೇಳಿದ್ದು ಸರಿಯಾಗಿದೆ ಅವನು ಆ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬೇಕಿತ್ತು ಎನ್ನುತ್ತಾನೆ. ಆಗ ಸೇವಕನು ಮಹಾರಾಜರ ಪ್ರಶ್ನೆಗಳನ್ನು ಉದ್ದೇಶಿಸಿ “ಮಹಾರಾಜರೇ ಈ ಕುದುರೆಗಳಲ್ಲಿ ಕೆಲವು ವಯಸ್ಸಾಗಿರುವ ಕುದುರೆಗಳಿವೆ, ಗಾಯಗಳಾಗಿ ಪೆಟ್ಟು ಮಾಡಿಕೊಂಡಿರುವ ಕುದುರೆಗಳಿವೆ, ಸಣ್ಣ ಪ್ರಾಯದ ಕುದುರೆಗಳಿವೆ ಹಾಗೂ ದಷ್ಟಪುಷ್ಟವಾದ ಬಲಿಷ್ಟವಾಗಿರುವ ಕುದುರೆಗಳಿವೆ ಈ ಎಲ್ಲಾ ಕುದುರೆಗಳನ್ನು ಒಂದೇ ಕಡೆ ಸೇರಿಸಿ ಮೇವನ್ನಾಕಿದರೆ ಯಾವ ಕುದುರೆಗಳಿಗೆ ಹೆಚ್ಚು ಶಕ್ತಿ ಇದೆಯೋ ಅಂದರೆ ದಷ್ಟಪುಷ್ಟವಾದ ಕುದುರೆಗಳು ಮೇವೆಲ್ಲಾ ತಿಂದು ಬಿಡುತ್ತವೇ ಆಗ ವಯಸ್ಸಾದ ಕುದುರೆಗಳಿಗೆ, ಗಾಯಗಳಾಗಿರುವ ಕುದುರೆಗಳಿಗೆ, ಸಣ್ಣ ಪ್ರಾಯದ ಕುದುರೆಗಳಿಗೆ ಮೇವು ಸಿಗದೇ ದುರ್ಬಲವಾಗಿ ಹಸಿವಿನಿಂದಲೇ ಸತ್ತು ಹೋಗುತ್ತವೇ ಆದ್ದರಿಂದ ವಯಸ್ಸಾದ ಕುದುರೆಗಳಿಗೆ ಒಂದು ಕಡೆ, ಸಣ್ಣ ಪ್ರಾಯದ ಕುದುರೆಗಳಿಗೆ ಒಂದು ಕಡೆ, ಗಾಯಗೊಂಡಿರುವ ಕುದುರೆಗಳಿಗೆ ಒಂದು ಕಡೆ, ಬಲಿಷ್ಟ ಕುದುರೆಗಳಿಗೊಂದು ಕಡೆ ಮೇವನ್ನಾಕಿದ್ದೇನೆ ಆಗ ಎಲ್ಲಾ ಕುದುರೆಗಳಿಗೂ ಮೇವು ಸಿಗುತ್ತದೆ” ಎಂದು ಉತ್ತರಿಸುತ್ತಾನೆ. ಆಗ ಆ ಬ್ರಾಹ್ಮಣ ವಕೀಲನಿಗೆ ಮೀಸಲಾತಿಯ ಬಗ್ಗೆ ಅರ್ಥವಾಗಿ “ಮಹಾರಾಜರೇ ದಯವಿಟ್ಟು ಕ್ಷಮಿಸಿ ಈಗ ನಿಮ್ಮ ಮೀಸಲಾತಿಯ ಬಗ್ಗೆ ನನಗೆ ಸಂಪೂರ್ಣವಾಗಿ ಅರ್ಥವಾಯಿತೆಂದು” ಅಲ್ಲಿಂದ ಒರಟುಹೋಗುತ್ತಾನೆ.
• ಶಾಹು ಮಹಾರಜರು ಅಸ್ಪೃಶ್ಯರಿಗೋಸ್ಕರ 18 ಪ್ರತ್ಯೇಕ ಶಾಲೆಗಳನ್ನು ಸ್ಥಾಪಿಸುತ್ತಾರೆ.
• 1908ರಲ್ಲಿ ವಿಧ್ಯಾಸಂಸ್ಥೆಯನ್ನು ಪ್ರಾರಂಭ ಮಾಡುತ್ತಾರೆ.
• 1896 ರಿಂದ 1912ರ ಅವಧಿಯಲ್ಲಿ ಶೂದ್ರರಿಗೆ 22, ಅಸ್ಪೃಶ್ಯರಿಗೆ 27 ಶಾಲೆಗಳನ್ನು ಸ್ಥಾಪಿಸುತ್ತಾರೆ.
• 1918 ರಲ್ಲಿ ಶೂದ್ರರಿಗೆ ಅರಿವು ಮತ್ತು ಜಾಗೃತಿ ಮೂಡಿಸಲು “ಮೂಕ ನಾಯಕ್” ಎಂಬ ಪತ್ರಿಕೆಯನ್ನು ಪ್ರಾರಂಭಿಸುತ್ತಾರೆ.
• 1918 ರಲ್ಲಿ ಮಹಾತ್ಮ ಜೋತಿಬಾಫುಲೆ ರವರ ಸತ್ಯಶೋಧಕ ಸಮಾಜವನ್ನು ಮುನ್ನಡೆಸಲು “ಶಾಹು ಸತ್ಯ ಶೋಧಕ ಸಮಾಜ”ವನ್ನು ಸ್ಥಾಪನೆ ಮಾಡುತ್ತಾರೆ.
1920 ಮಾರ್ಚ 27ರಂದು ಕೊಲ್ಲಾಪುರದ ಜನಗಳನ್ನು ಉದ್ದೇಶಿಸಿ ಮಾತನಾಡುತ್ತ ” ಮಹಾ ಜನಗಳೇ ನನ್ನ ಆಸ್ಥಾನ ಎಷ್ಟಿದೆಯೋ ಅಷ್ಟರಲ್ಲಿ ಶೂದ್ರರಿಗಾಗಿ ಅಸ್ಪೃಷ್ಯರಿಗಾಗಿ ಎಲ್ಲಾವನ್ನು ಮಾಡಿದ್ದೇನೆ ಒಂದು ವೇಳೆ ನಾನು ಇಡೀ ಭಾರತಕ್ಕೆ ಮಹಾರಾಜನಾಗಿದ್ದರೆ ದೇಶದಲ್ಲಿರುವ ಎಲ್ಲಾ ಶೋಷಿತರನ್ನು ಉದ್ದರಿಸುತ್ತಿದ್ದೆ ಆದರೆ ನನ್ನ ಆಸ್ಥಾನ ಕೇವಲ ಕೊಲ್ಲಾಪುರಕ್ಕೆ ಮಾತ್ರ ಸೀಮಿತವಾಗಿರುವ ಕಾರಣದಿಂದ ಅದು ಅಸಾಧ್ಯವಾಗಿದೆ”. ಆದರೆ, ಇನ್ನುಮುಂದೆ “ಅಖಿಲ ಭಾರತ ಮಟ್ಟದಲ್ಲಿ ಬಡವರನ್ನು, ಶೋಷಿತರನ್ನು, ಅಸ್ಪೃಷ್ಯರನ್ನು ಉದ್ದರಿಸಲು ಒಬ್ಬ ಮಹಾನ್ ನಾಯಕ, ದೇಶ-ವಿದೇಶಗಳಲ್ಲಿ ಶಿಕ್ಷಣವನ್ನು ಪಡೆದ ವಿಧ್ಯಾವಂತ, ಬುದ್ಧಿವಂತ, ಮುಂದಿನ ರಾಷ್ಟ್ರೀಯ ನಾಯಕನನ್ನು ಈ ದಿನ ನಿಮಗೆಲ್ಲಾ ಪರಿಚಯಿಸುತ್ತೇನೆ ನೀವೆಲ್ಲಾ ಅವರಿಗೆ ಬೆಂಬಲಕೊಟ್ಟರೆ ಇಡೀ ದೇಶವನ್ನೇ ಬದಲಾಯಿಸತ್ತಾರೆ, ಬಹುಜನರಿಗೋಸ್ಕರ ಹೊಸ ಚರಿತೆಯನ್ನೇ ಸೃಷ್ಟಿಸುತ್ತಾರೆ” ಎಂದು ಆ ವ್ಯಕ್ತಿಯನ್ನು ಪರಿಚಯಿಸುತ್ತಾರೆ ಆ ವ್ಯಕ್ತಿಯೇ ಮಹಾ ಮಾನವತವಾದಿ, ವಿಶ್ವ ಮಾನವ, ರಾಷ್ತ್ರೀಯತಾವಾದಿ, ಕಾನೂನು ತಜ್ನ, ರಾಜಕೀಯ ನೇತಾರ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತ, ಶ್ರೇಷ್ಟ ಇತಿಹಾಸಗಾರ, ಮಹಾದಾರ್ಶನಿಕ, ಅಪ್ರತಿಮ ಚಿಂತಕ, ಮಾನವಶಾಸ್ತ್ರಜ್ನ, ಖ್ಯಾತ ಅರ್ಥಶಾಸ್ತ್ರಜ್ನ, ಸಮೃದ್ದ ಬರಹಗಾರ, ಕ್ರಾಂತಿಕಾರಿ, ಅಸಾಮಾನ್ಯ ವಾಕ್ಪಟು, ಅಪ್ರತಿಮ ನಾಯಕ, ಬೌದ್ಧ ಧರ್ಮದ ಪುನರುಜ್ಜೀವಕ, ಭಾರತ ರತ್ನ, ಸಂವಿಧಾನ ಶಿಲ್ಪಿ, ಪರಮಪೂಜ್ಯ “ಡಾ. ಬಾಬಾ ಸಾಹೇಬ್ ಅಂಬೇಡ್ಕರ್” ರವರು.
-ಅಜೀತ ಮಾದರ
ಸುದ್ದಿದಿನ.ಕಾಂ|ವಾಟ್ಸಾಪ್|998675401

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್


