Connect with us

ದಿನದ ಸುದ್ದಿ

ಮೀಸಲಾತಿಯ ಜನಕ ‘ಛತ್ರಪತಿ ಶಾಹು ಮಹರಾಜ್’ ಬಗ್ಗೆ ನಿಮಗೆಷ್ಟು ಗೊತ್ತು ?

Published

on

ದು ಒಂದು ಪುರೋಹಿತಶಾಹಿಗಳ ಕಾಲ, ಚಾತುರ್ವರ್ಣ ಪದ್ದತಿಗಳು ಶ್ರೇಣೆಕೃತ ಜಾತಿ ವ್ಯವಸ್ಥೆಗಳು ತಾಂಡವವಾಡುತ್ತಿದ್ದಂತಹ ಕಾಲ, ಪುರೋಹಿತಶಾಹಿಗಳು ಬಹುಜನರನ್ನು ಮೂಡನಂಬಿಕೆಗಳಿಗೆ ತಲ್ಲಲ್ಪಟ್ಟಂತಹ ಕಾಲ, ಬಹುಜನರನ್ನು ಬ್ರಾಹ್ಮಣರ ಸೇವಕರಾಗಿ, ಗುಲಾಮರನ್ನಾಗಿ ಮಾಡಿಕೊಂಡಿದ್ದಂತಹ ಕಾಲ, ಅಸ್ಪೃಶ್ಯರನ್ನು ಹಂದಿ ನಾಯಿಗಳನ್ನು ಹೊಡೆದೋಡಿಸುತ್ತಿದ್ದ ಆಗೆ ಹೊಡೆದೋಡಿಸುತ್ತಿದ್ದಂತಹ ಕಾಲ, ಇಂತಹ ಕಾಲದಲ್ಲಿ ಬಹುಜನರಿಗಾಗಿ ಅವರ ರಕ್ಷಣೆಗಾಗಿ, ಏಳಿಗೆಗಾಗಿ ಒಬ್ಬ ಮಹಾ ಮೇಧಾವಿ ಪುರುಷನೊಬ್ಬ ಹುಟ್ಟುತ್ತಾರೆ ಅವರೇ “ಛತ್ರಪತಿ ಶಾಹು ಮಹಾರಾಜ್”. ಶಾಹುರವರು ಹುಟ್ಟಿದ್ದು 26, ಜೂನ್ 1874 ರಂದು. ಶಾಹು ರವರ ಮೊದಲ ಹೆಸರು ಯಶ್ವಂತರಾವ್ ಘಟ್ಗೆ ಇವರ ತಂದೆಯ ಹೆಸರು ಜಯಸಿಂಹರಾವ್ ಘಟ್ಗೆ, ತಾಯಿ ರಾಧಬಾಯಿ ಇವರು ಮೂಲತಃ ಕೊಲ್ಲಾಪುರದ ಮಹಾರಾಣಿ ಆನಂಧಿಬಾಯಿರವರು ಮಾರ್ಚ್ 11, 1884ರಂದು ಶಾಹುರವರನ್ನು ದತ್ತು ಸ್ವೀಕಾರ ಮಾಡಿಕೊಳ್ಳುತ್ತಾರೆ.

ಶಾಹುರವರಿಗೆ ಏಪ್ರಿಲ್ 2, 1894ರಂದು ಮಹರಾಜರಾಗಿ ಪಟ್ಟಾಭಿಷೇಕವಾಗುತ್ತದೆ.
ಕ್ರಿ.ಶ.1900ರಲ್ಲಿ ಒಂದು ಘಟನೆ ನಡೆಯುತ್ತದೆ ಅದೇನೆಂದರೆ ರಾಜನಾದವನು ಗಂಗಾ ಘಾಟ್ ಎಂಬಲ್ಲಿ ಸ್ನಾನ ಮಾಡಬೇಕಾಗಿರುತ್ತದೆ ಆ ಸಂದರ್ಭದಲ್ಲಿ ರಾಜನಿಗೆ ಬ್ರಾಹ್ಮಣರು ಮಂತ್ರಗಳನ್ನು ಪಟಿಸಬೇಕಾಗಿರುತ್ತದೆ ಆದರೆ ಬ್ರಾಹ್ಮಣರು ರಾಜನಿಗೆ ಪಟಿಸಬೇಕಾಗಿರುವ ಮಂತ್ರಗಳನ್ನು ಹೇಳುತ್ತಿರುವುದಿಲ್ಲ ಬದಲಾಗಿ ಶೂದ್ರ ಮಂತ್ರಗಳನ್ನು ಹೇಳುತ್ತಿರುತ್ತಾರೆ ಇದನ್ನರಿತ ರಾಜರ ಆಪ್ತರೊಬ್ಬರು ಈ ವಿಚಾರವನ್ನು ಮಹಾರಾಜರಿಗೆ ತಿಳಿಸುತ್ತಾರೆ. ಕೂಡಲೇ ಶಾಹುರವರು ಪುರೋಹಿತರನ್ನು ಪ್ರಶ್ನಿಸುತ್ತಾರೆ. ಆದರೆ ಪುರೋಹಿತರು ನೀವು ಶೂದ್ರರಾಗಿರುವ ಕಾರಣದಿಂದ ನಾವು ಶೂದ್ರ ಮಂತ್ರಗಳನ್ನೆ ಹೇಳಬೇಕಾಗುತ್ತದೆ ಎಂದು ಬಹಳ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಾರೆ. ಆಗ ಶಾಹುರವರು “ಒಬ್ಬ ಮಹಾರಾಜನಾಗಿ ನನಗೆ ಈ ಬ್ರಾಹ್ಮಣರಿಂದ ಅವಮಾನವಾಗುತ್ತಿದೆ ಜಾತಿ ಶೋಷಣೇಯಾಗುತ್ತಿದೆ ಎಂದರೆ ಇನ್ನು ಸಾಮನ್ಯ ಜನರಿಗೆ ಇವರಿಂದ ಇನ್ನೇಷ್ಟು ಶೋಷಣೆಯಾಗುತ್ತಿರಬಹುದು ಇವರಿಂದ ನಮ್ಮ ಬಹುಜನರು ಇನ್ನೇಷ್ಟು ಅವಮಾನ ಅಪಮಾನಗಳಿಗೆ ಗುರಿಯಾಗುತ್ತಿರಬಹುದು ಇದಕ್ಕೇನಾದರು ಪರಿಹಾರ ಹುಡುಕಬೇಕು” ಎಂದು ಮನಸ್ಸಿನಲ್ಲಿಯೇ ಮರುಕ ಪಡುತ್ತಾರೆ.

ಕೊಲ್ಲಾಪುರ್-ಶಾಹುಮಹಾರಾಜರ ಪ್ಯಾಲೇಸ್

ರಾಜರ ಆಸ್ಥಾನದಲ್ಲಿ ರಾಜೋಪಾಧ್ಯೆ ಎಂಬ ಪ್ರಧಾನ ಪುರೋಹಿತನಿರುತ್ತಾನೆ. ಇವನಿಗೆ ಬಾಲಗಂಗಾದರ್ ತಿಲಕರ ನೆರವಿರುತ್ತದೆ. ಒಂದು ದಿನ ಮಹಾರಾಜರು ಅಡುಗೆ ಮನೆ ಪರಿಶೀಲನೆ ಮಾಡಲೆಂದು ಅರಮನೆಯ ಅಡುಗೆ ಮನೆಯೊಳಗೆ ಹೋಗಲು ಮುಂದಾಗುತ್ತರೆ ಆದರೆ ರಾಜೋಪಾಧ್ಯೆ ಎಂಬ ಪುರೋಹಿತನು ಶಾಹು ಮಹಾರಜರನ್ನು ನೀವು ಶೂದ್ರರು ಅಡುಗೆ ಮನೆಯೊಳಗೆ ಬರಕೂಡದು ಬಂದರೆ ಅಡುಗೆ ಮನೆಯೆಲ್ಲಾ ಮೈಲಿಗೆಯಾಗುತ್ತದೆ ದಯವಿಟ್ಟು ಒಳಗೆ ಬರಬೇಡಿ ಎಂದು ಮಹಾರಜರನ್ನು ತಡೆಯುತ್ತಾನೆ. ಆಗ ಮಹಾರಜರು ಕೆಂಡಾಮಂಡಲವಾಗುತ್ತಾರೆ ಮಹರಾಜನಾದ ನನಗೆ ಜಾತಿನಿಂದನೆ ಮಾಡುತ್ತೀರ? ನಿಮಗೆ ಕೆಲಸ ಕೊಟ್ಟು, ಹಣಕೊಟ್ಟು, ಇರೋದಕ್ಕೆ ಮನೆಕೊಟ್ಟು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿರುವ ನನಗೆ ಜಾತಿನಿಂದನೆಯೇ? ಈ ಕ್ಷಣದಿಂದ ನೀನು ನನ್ನ ಆಸ್ಥಾನದಲ್ಲಿರಕೂಡದೆಂದು 06 ಮೇ1902 ರಂದು ಅವನನ್ನು ಸ್ಥಾನದಿಂದ ವಜಾ ಮಾಡುತ್ತಾರೆ.

ಶಾಹುರವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಲಂಡನ್ನಿಗೆ ತೆರಲಿರುತ್ತಾರೆ ಅಲ್ಲಿ ಅವರಿಗೆ ತಾವು ಅನುಭವಿಸಿದ ಕೆಲವು ಘಟನೆಗಳು ನೆನಪಿಗೆ ಬರುತ್ತವೆ ಅದಕ್ಕೆ ಅವರು ಒಂದು ತೀರ್ಮಾನ ಮಾಡುತ್ತಾರೆ ಅಲ್ಲಿಂದ ಒಂದು ಸುದ್ಧಿಯನ್ನು ಕಳುಹಿಸುತ್ತಾರೆ ಅದೇನೆಂದರೆ “ಶೂದ್ರರಿಗೆ 50% ಮೀಸಲಾತಿ” ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಮೀಸಲಾತಿಯೆಂಬ ಯೋಜನೆಯನ್ನು ಕಂಡುಹಿಡಿದ ಕೀರ್ತಿ ಶಾಹು ಮಹಾರಾಜರಿಗೆ ಸಲ್ಲಬೇಕು.

ಶಾಹು ಮಹಾರಾಜರು ಕಳುಹಿಸಿಕೊಟ್ಟ ಮೀಸಲಾತಿಯ ಸುದ್ಧಿ ಕೇಳಿ ಬ್ರಾಹ್ಮಣರಿಗೆ ಹೃದಯ ಬಡಿತವೇ ನಿಂತಂತಾಯಿತು, ಬಾಲಗಂಗಾದರ್ ತಿಲಕರಿಗಂತೂ ಅಥೀವಾ ಆತಂಕ ಉಂಟಾಯಿತು ಆದ್ದರಿಂದ ಮೀಸಲಾತಿ ವಿಷಯಕ್ಕೆ ಸಂಬಂದಿಸಿದಂತೆ ತಿಲಕರು ವಿರೋದವನ್ನು ವ್ಯಕ್ತಪಡಿಸುತ್ತಾರೆ.

ಮಹಾರಾಜರ ಮೀಸಲಾತಿಯ ವಿಚಾರವನ್ನು ಬಹುತೇಕ ಬ್ರಾಹ್ಮಣರು ವಿರೋಧ ಮಾಡುತ್ತಿರುತ್ತಾರೆ, ಬೇಸೆತ್ತ ಕೆಲವು ಗೂಂಡಗಳಿಂದ ಮಹಾರಾಜರನ್ನು ಕೊಲೆ ಮಾಡುವ ಪ್ರಯತ್ನವು ನಡೆಯುತ್ತದೆ. ಶಾಹುರವರಿದ್ದ ರೈಲಿಗೆ ಬಾಂಬನ್ನು ಸಹ ಇಡಲಾಗುತ್ತದೆ ಆದರೆ ಆ ಕೊಲೆಯ ಪ್ರಯತ್ನವು ವಿಫಲವಾಗಿಬಿಡುತ್ತದೆ.

ಒಮ್ಮೆ ಮಹಾರಾಜರು ಅರಮನೆಯ ಆವರಣದಲ್ಲಿ ಗಾಳಿ ಸಂಚಾರ (walking) ಮಾಡುತ್ತಿರುತ್ತಾರೆ ಆ ಸಮಯದಲ್ಲಿ ಗಣಪತಿರಾವ್ ಎಂಬ ಬ್ರಾಹ್ಮಣ ವಕೀಲ ಶಾಹುರವರನ್ನು ಕಾಣಲು ಬರುತ್ತಾರೆ ಮೀಸಲಾತಿಯ ಬಗ್ಗೆ ಚರ್ಚೆ ಮಾಡುತ್ತಾ ಅರ್ಹತೆಯಿಲ್ಲದವರಿಗೆಲ್ಲಾ ಉದ್ಯೋಗದಲ್ಲಿ, ಶಿಕ್ಷಣದಲ್ಲಿ ಹಾಗೂ ಎಲ್ಲಾ ರಂಗಗಳಲ್ಲೂ ನೀವು ಮೀಸಲಾತಿ ಕೊಟ್ಟರೆ ಪ್ರತಿಭೆಗೆ ದಕ್ಕೆಯುಂಟಾಗುವುದಿಲ್ಲವೇ? ಎಂದು ಮಹಾರಾಜರನ್ನು ಪ್ರಶ್ನಿಸುತ್ತಾನೆ. ಆಗ ಶಾಹು ಮಹಾರಾಜರು ಓ.. ನಿಮಗೆ ಆ ರೀತಿ ಅರ್ಥವಾಗಿದೆಯೇ ಬನ್ನಿ ನನ್ನ ಜೊತೆ ಎಂದು ಆ ವಕೀಲನನ್ನು ಕರೆದುಕೊಂಡು ಸಂಚಾರ(walk) ಮಾಡುತ್ತಾ ಮಾಡುತ್ತಾ ಅರಮನೆಯ ಆವರಣದಲ್ಲಿ ಕುದುರೆಗಳನ್ನು ಕಟ್ಟಿರುವ ಜಾಗಕ್ಕೆ ತಲುಪುತ್ತಾರೆ ಅಲ್ಲಿ ಕುದುರೆಗಳನ್ನು ಗುಂಪು ಗುಂಪುಗಳಾಗಿ ಮಾಡಿ ಮೇವನ್ನು ಹಾಕಲಾಗಿರುತ್ತದೆ ಇದನ್ನು ಗಮನಿಸಿದ ಮಹಾರಾಜರು ಯಾರಲ್ಲಿ ಈ ಕುದುರೆಗಳನ್ನು ಕಟ್ಟಿದವರು ಎಂದಾಗ ಸ್ಥಳದಲ್ಲೇ ಇದ್ದ ಕುದುರೆಗಳನ್ನು ನೋಡಿಕೊಳ್ಳುವವನು ನಾನೇ ಪ್ರಭು ಎನ್ನುತ್ತಾನೆ. ಆಗ ಮಹಾರಾಜರು ಅವನನ್ನು “ಏನಯ್ಯ ನಿನಗೆ ಬುದ್ಧಿ ಇದೆಯಾ? ಕುದುರೆಗಳನ್ನು ಏಕೆ ಈ ರೀತಿ ಗುಂಪುಗುಂಪುಗಳನ್ನಾಗಿ ವಿಂಗಡನೆ ಮಾಡಿ ಬೇರೆ ಬೇರೆ ಕಡೆ ಮೇವನ್ನಕಿದ್ದೀಯಾ? ಎಲ್ಲಾ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬಹುದಾಗಿತ್ತಲ್ಲವೇ? ಎಂದು ಪ್ರಶ್ನಿಸಿ ಜೊತೆಯಲ್ಲಿದ್ದ ವಕೀಲನನ್ನು ಕೇಳುತ್ತಾರೆ ಗಣಪತಿರಾವ್ ರವರೇ ನಾನು ಕೇಳಿದ್ದು ಸರಿ ತಾನೆ? ಎಂದಾಗ ಆ ವಕೀಲ ಹೌದು ಮಹಾರಾಜರೇ ನೀವು ಕೇಳಿದ್ದು ಸರಿಯಾಗಿದೆ ಅವನು ಆ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬೇಕಿತ್ತು ಎನ್ನುತ್ತಾನೆ. ಆಗ ಸೇವಕನು ಮಹಾರಾಜರ ಪ್ರಶ್ನೆಗಳನ್ನು ಉದ್ದೇಶಿಸಿ “ಮಹಾರಾಜರೇ ಈ ಕುದುರೆಗಳಲ್ಲಿ ಕೆಲವು ವಯಸ್ಸಾಗಿರುವ ಕುದುರೆಗಳಿವೆ, ಗಾಯಗಳಾಗಿ ಪೆಟ್ಟು ಮಾಡಿಕೊಂಡಿರುವ ಕುದುರೆಗಳಿವೆ, ಸಣ್ಣ ಪ್ರಾಯದ ಕುದುರೆಗಳಿವೆ ಹಾಗೂ ದಷ್ಟಪುಷ್ಟವಾದ ಬಲಿಷ್ಟವಾಗಿರುವ ಕುದುರೆಗಳಿವೆ ಈ ಎಲ್ಲಾ ಕುದುರೆಗಳನ್ನು ಒಂದೇ ಕಡೆ ಸೇರಿಸಿ ಮೇವನ್ನಾಕಿದರೆ ಯಾವ ಕುದುರೆಗಳಿಗೆ ಹೆಚ್ಚು ಶಕ್ತಿ ಇದೆಯೋ ಅಂದರೆ ದಷ್ಟಪುಷ್ಟವಾದ ಕುದುರೆಗಳು ಮೇವೆಲ್ಲಾ ತಿಂದು ಬಿಡುತ್ತವೇ ಆಗ ವಯಸ್ಸಾದ ಕುದುರೆಗಳಿಗೆ, ಗಾಯಗಳಾಗಿರುವ ಕುದುರೆಗಳಿಗೆ, ಸಣ್ಣ ಪ್ರಾಯದ ಕುದುರೆಗಳಿಗೆ ಮೇವು ಸಿಗದೇ ದುರ್ಬಲವಾಗಿ ಹಸಿವಿನಿಂದಲೇ ಸತ್ತು ಹೋಗುತ್ತವೇ ಆದ್ದರಿಂದ ವಯಸ್ಸಾದ ಕುದುರೆಗಳಿಗೆ ಒಂದು ಕಡೆ, ಸಣ್ಣ ಪ್ರಾಯದ ಕುದುರೆಗಳಿಗೆ ಒಂದು ಕಡೆ, ಗಾಯಗೊಂಡಿರುವ ಕುದುರೆಗಳಿಗೆ ಒಂದು ಕಡೆ, ಬಲಿಷ್ಟ ಕುದುರೆಗಳಿಗೊಂದು ಕಡೆ ಮೇವನ್ನಾಕಿದ್ದೇನೆ ಆಗ ಎಲ್ಲಾ ಕುದುರೆಗಳಿಗೂ ಮೇವು ಸಿಗುತ್ತದೆ” ಎಂದು ಉತ್ತರಿಸುತ್ತಾನೆ. ಆಗ ಆ ಬ್ರಾಹ್ಮಣ ವಕೀಲನಿಗೆ ಮೀಸಲಾತಿಯ ಬಗ್ಗೆ ಅರ್ಥವಾಗಿ “ಮಹಾರಾಜರೇ ದಯವಿಟ್ಟು ಕ್ಷಮಿಸಿ ಈಗ ನಿಮ್ಮ ಮೀಸಲಾತಿಯ ಬಗ್ಗೆ ನನಗೆ ಸಂಪೂರ್ಣವಾಗಿ ಅರ್ಥವಾಯಿತೆಂದು” ಅಲ್ಲಿಂದ ಒರಟುಹೋಗುತ್ತಾನೆ.

• ಶಾಹು ಮಹಾರಜರು ಅಸ್ಪೃಶ್ಯರಿಗೋಸ್ಕರ 18 ಪ್ರತ್ಯೇಕ ಶಾಲೆಗಳನ್ನು ಸ್ಥಾಪಿಸುತ್ತಾರೆ.

• 1908ರಲ್ಲಿ ವಿಧ್ಯಾಸಂಸ್ಥೆಯನ್ನು ಪ್ರಾರಂಭ ಮಾಡುತ್ತಾರೆ.

• 1896 ರಿಂದ 1912ರ ಅವಧಿಯಲ್ಲಿ ಶೂದ್ರರಿಗೆ 22, ಅಸ್ಪೃಶ್ಯರಿಗೆ 27 ಶಾಲೆಗಳನ್ನು ಸ್ಥಾಪಿಸುತ್ತಾರೆ.

• 1918 ರಲ್ಲಿ ಶೂದ್ರರಿಗೆ ಅರಿವು ಮತ್ತು ಜಾಗೃತಿ ಮೂಡಿಸಲು “ಮೂಕ ನಾಯಕ್” ಎಂಬ ಪತ್ರಿಕೆಯನ್ನು ಪ್ರಾರಂಭಿಸುತ್ತಾರೆ.

• 1918 ರಲ್ಲಿ ಮಹಾತ್ಮ ಜೋತಿಬಾಫುಲೆ ರವರ ಸತ್ಯಶೋಧಕ ಸಮಾಜವನ್ನು ಮುನ್ನಡೆಸಲು “ಶಾಹು ಸತ್ಯ ಶೋಧಕ ಸಮಾಜ”ವನ್ನು ಸ್ಥಾಪನೆ ಮಾಡುತ್ತಾರೆ.

1920 ಮಾರ್ಚ 27ರಂದು ಕೊಲ್ಲಾಪುರದ ಜನಗಳನ್ನು ಉದ್ದೇಶಿಸಿ ಮಾತನಾಡುತ್ತ ” ಮಹಾ ಜನಗಳೇ ನನ್ನ ಆಸ್ಥಾನ ಎಷ್ಟಿದೆಯೋ ಅಷ್ಟರಲ್ಲಿ ಶೂದ್ರರಿಗಾಗಿ ಅಸ್ಪೃಷ್ಯರಿಗಾಗಿ ಎಲ್ಲಾವನ್ನು ಮಾಡಿದ್ದೇನೆ ಒಂದು ವೇಳೆ ನಾನು ಇಡೀ ಭಾರತಕ್ಕೆ ಮಹಾರಾಜನಾಗಿದ್ದರೆ ದೇಶದಲ್ಲಿರುವ ಎಲ್ಲಾ ಶೋಷಿತರನ್ನು ಉದ್ದರಿಸುತ್ತಿದ್ದೆ ಆದರೆ ನನ್ನ ಆಸ್ಥಾನ ಕೇವಲ ಕೊಲ್ಲಾಪುರಕ್ಕೆ ಮಾತ್ರ ಸೀಮಿತವಾಗಿರುವ ಕಾರಣದಿಂದ ಅದು ಅಸಾಧ್ಯವಾಗಿದೆ”. ಆದರೆ, ಇನ್ನುಮುಂದೆ “ಅಖಿಲ ಭಾರತ ಮಟ್ಟದಲ್ಲಿ ಬಡವರನ್ನು, ಶೋಷಿತರನ್ನು, ಅಸ್ಪೃಷ್ಯರನ್ನು ಉದ್ದರಿಸಲು ಒಬ್ಬ ಮಹಾನ್ ನಾಯಕ, ದೇಶ-ವಿದೇಶಗಳಲ್ಲಿ ಶಿಕ್ಷಣವನ್ನು ಪಡೆದ ವಿಧ್ಯಾವಂತ, ಬುದ್ಧಿವಂತ, ಮುಂದಿನ ರಾಷ್ಟ್ರೀಯ ನಾಯಕನನ್ನು ಈ ದಿನ ನಿಮಗೆಲ್ಲಾ ಪರಿಚಯಿಸುತ್ತೇನೆ ನೀವೆಲ್ಲಾ ಅವರಿಗೆ ಬೆಂಬಲಕೊಟ್ಟರೆ ಇಡೀ ದೇಶವನ್ನೇ ಬದಲಾಯಿಸತ್ತಾರೆ, ಬಹುಜನರಿಗೋಸ್ಕರ ಹೊಸ ಚರಿತೆಯನ್ನೇ ಸೃಷ್ಟಿಸುತ್ತಾರೆ” ಎಂದು ಆ ವ್ಯಕ್ತಿಯನ್ನು ಪರಿಚಯಿಸುತ್ತಾರೆ ಆ ವ್ಯಕ್ತಿಯೇ ಮಹಾ ಮಾನವತವಾದಿ, ವಿಶ್ವ ಮಾನವ, ರಾಷ್ತ್ರೀಯತಾವಾದಿ, ಕಾನೂನು ತಜ್ನ, ರಾಜಕೀಯ ನೇತಾರ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತ, ಶ್ರೇಷ್ಟ ಇತಿಹಾಸಗಾರ, ಮಹಾದಾರ್ಶನಿಕ, ಅಪ್ರತಿಮ ಚಿಂತಕ, ಮಾನವಶಾಸ್ತ್ರಜ್ನ, ಖ್ಯಾತ ಅರ್ಥಶಾಸ್ತ್ರಜ್ನ, ಸಮೃದ್ದ ಬರಹಗಾರ, ಕ್ರಾಂತಿಕಾರಿ, ಅಸಾಮಾನ್ಯ ವಾಕ್ಪಟು, ಅಪ್ರತಿಮ ನಾಯಕ, ಬೌದ್ಧ ಧರ್ಮದ ಪುನರುಜ್ಜೀವಕ, ಭಾರತ ರತ್ನ, ಸಂವಿಧಾನ ಶಿಲ್ಪಿ, ಪರಮಪೂಜ್ಯ “ಡಾ. ಬಾಬಾ ಸಾಹೇಬ್ ಅಂಬೇಡ್ಕರ್” ರವರು.

-ಅಜೀತ ಮಾದರ

ಸುದ್ದಿದಿನ.ಕಾಂ|ವಾಟ್ಸಾಪ್|998675401

ದಿನದ ಸುದ್ದಿ

ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

Published

on

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

ದಿನದ ಸುದ್ದಿ23 hours ago

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ...

ದಿನದ ಸುದ್ದಿ1 day ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ1 day ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ2 days ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ2 days ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

ದಿನದ ಸುದ್ದಿ2 days ago

ಗೃಹಜ್ಯೋತಿ ಯೋಜನೆ | ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯ : ಸಚಿವ ಕೆ.ಜೆ. ಜಾರ್ಜ್

ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....

ದಿನದ ಸುದ್ದಿ2 days ago

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ...

ದಿನದ ಸುದ್ದಿ2 days ago

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ...

ದಿನದ ಸುದ್ದಿ2 days ago

ಮೀಸಲಾತಿ ಹೆಚ್ಚಳ ; ಸಂವಿಧಾನದ 9ನೇ ಶೆಡ್ಯುಲ್‌ನಲ್ಲಿ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್‌ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ...

Trending