Connect with us

ದಿನದ ಸುದ್ದಿ

ಮೀಸಲಾತಿಯ ಜನಕ ‘ಛತ್ರಪತಿ ಶಾಹು ಮಹರಾಜ್’ ಬಗ್ಗೆ ನಿಮಗೆಷ್ಟು ಗೊತ್ತು ?

Published

on

ದು ಒಂದು ಪುರೋಹಿತಶಾಹಿಗಳ ಕಾಲ, ಚಾತುರ್ವರ್ಣ ಪದ್ದತಿಗಳು ಶ್ರೇಣೆಕೃತ ಜಾತಿ ವ್ಯವಸ್ಥೆಗಳು ತಾಂಡವವಾಡುತ್ತಿದ್ದಂತಹ ಕಾಲ, ಪುರೋಹಿತಶಾಹಿಗಳು ಬಹುಜನರನ್ನು ಮೂಡನಂಬಿಕೆಗಳಿಗೆ ತಲ್ಲಲ್ಪಟ್ಟಂತಹ ಕಾಲ, ಬಹುಜನರನ್ನು ಬ್ರಾಹ್ಮಣರ ಸೇವಕರಾಗಿ, ಗುಲಾಮರನ್ನಾಗಿ ಮಾಡಿಕೊಂಡಿದ್ದಂತಹ ಕಾಲ, ಅಸ್ಪೃಶ್ಯರನ್ನು ಹಂದಿ ನಾಯಿಗಳನ್ನು ಹೊಡೆದೋಡಿಸುತ್ತಿದ್ದ ಆಗೆ ಹೊಡೆದೋಡಿಸುತ್ತಿದ್ದಂತಹ ಕಾಲ, ಇಂತಹ ಕಾಲದಲ್ಲಿ ಬಹುಜನರಿಗಾಗಿ ಅವರ ರಕ್ಷಣೆಗಾಗಿ, ಏಳಿಗೆಗಾಗಿ ಒಬ್ಬ ಮಹಾ ಮೇಧಾವಿ ಪುರುಷನೊಬ್ಬ ಹುಟ್ಟುತ್ತಾರೆ ಅವರೇ “ಛತ್ರಪತಿ ಶಾಹು ಮಹಾರಾಜ್”. ಶಾಹುರವರು ಹುಟ್ಟಿದ್ದು 26, ಜೂನ್ 1874 ರಂದು. ಶಾಹು ರವರ ಮೊದಲ ಹೆಸರು ಯಶ್ವಂತರಾವ್ ಘಟ್ಗೆ ಇವರ ತಂದೆಯ ಹೆಸರು ಜಯಸಿಂಹರಾವ್ ಘಟ್ಗೆ, ತಾಯಿ ರಾಧಬಾಯಿ ಇವರು ಮೂಲತಃ ಕೊಲ್ಲಾಪುರದ ಮಹಾರಾಣಿ ಆನಂಧಿಬಾಯಿರವರು ಮಾರ್ಚ್ 11, 1884ರಂದು ಶಾಹುರವರನ್ನು ದತ್ತು ಸ್ವೀಕಾರ ಮಾಡಿಕೊಳ್ಳುತ್ತಾರೆ.

ಶಾಹುರವರಿಗೆ ಏಪ್ರಿಲ್ 2, 1894ರಂದು ಮಹರಾಜರಾಗಿ ಪಟ್ಟಾಭಿಷೇಕವಾಗುತ್ತದೆ.
ಕ್ರಿ.ಶ.1900ರಲ್ಲಿ ಒಂದು ಘಟನೆ ನಡೆಯುತ್ತದೆ ಅದೇನೆಂದರೆ ರಾಜನಾದವನು ಗಂಗಾ ಘಾಟ್ ಎಂಬಲ್ಲಿ ಸ್ನಾನ ಮಾಡಬೇಕಾಗಿರುತ್ತದೆ ಆ ಸಂದರ್ಭದಲ್ಲಿ ರಾಜನಿಗೆ ಬ್ರಾಹ್ಮಣರು ಮಂತ್ರಗಳನ್ನು ಪಟಿಸಬೇಕಾಗಿರುತ್ತದೆ ಆದರೆ ಬ್ರಾಹ್ಮಣರು ರಾಜನಿಗೆ ಪಟಿಸಬೇಕಾಗಿರುವ ಮಂತ್ರಗಳನ್ನು ಹೇಳುತ್ತಿರುವುದಿಲ್ಲ ಬದಲಾಗಿ ಶೂದ್ರ ಮಂತ್ರಗಳನ್ನು ಹೇಳುತ್ತಿರುತ್ತಾರೆ ಇದನ್ನರಿತ ರಾಜರ ಆಪ್ತರೊಬ್ಬರು ಈ ವಿಚಾರವನ್ನು ಮಹಾರಾಜರಿಗೆ ತಿಳಿಸುತ್ತಾರೆ. ಕೂಡಲೇ ಶಾಹುರವರು ಪುರೋಹಿತರನ್ನು ಪ್ರಶ್ನಿಸುತ್ತಾರೆ. ಆದರೆ ಪುರೋಹಿತರು ನೀವು ಶೂದ್ರರಾಗಿರುವ ಕಾರಣದಿಂದ ನಾವು ಶೂದ್ರ ಮಂತ್ರಗಳನ್ನೆ ಹೇಳಬೇಕಾಗುತ್ತದೆ ಎಂದು ಬಹಳ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಾರೆ. ಆಗ ಶಾಹುರವರು “ಒಬ್ಬ ಮಹಾರಾಜನಾಗಿ ನನಗೆ ಈ ಬ್ರಾಹ್ಮಣರಿಂದ ಅವಮಾನವಾಗುತ್ತಿದೆ ಜಾತಿ ಶೋಷಣೇಯಾಗುತ್ತಿದೆ ಎಂದರೆ ಇನ್ನು ಸಾಮನ್ಯ ಜನರಿಗೆ ಇವರಿಂದ ಇನ್ನೇಷ್ಟು ಶೋಷಣೆಯಾಗುತ್ತಿರಬಹುದು ಇವರಿಂದ ನಮ್ಮ ಬಹುಜನರು ಇನ್ನೇಷ್ಟು ಅವಮಾನ ಅಪಮಾನಗಳಿಗೆ ಗುರಿಯಾಗುತ್ತಿರಬಹುದು ಇದಕ್ಕೇನಾದರು ಪರಿಹಾರ ಹುಡುಕಬೇಕು” ಎಂದು ಮನಸ್ಸಿನಲ್ಲಿಯೇ ಮರುಕ ಪಡುತ್ತಾರೆ.

ಕೊಲ್ಲಾಪುರ್-ಶಾಹುಮಹಾರಾಜರ ಪ್ಯಾಲೇಸ್

ರಾಜರ ಆಸ್ಥಾನದಲ್ಲಿ ರಾಜೋಪಾಧ್ಯೆ ಎಂಬ ಪ್ರಧಾನ ಪುರೋಹಿತನಿರುತ್ತಾನೆ. ಇವನಿಗೆ ಬಾಲಗಂಗಾದರ್ ತಿಲಕರ ನೆರವಿರುತ್ತದೆ. ಒಂದು ದಿನ ಮಹಾರಾಜರು ಅಡುಗೆ ಮನೆ ಪರಿಶೀಲನೆ ಮಾಡಲೆಂದು ಅರಮನೆಯ ಅಡುಗೆ ಮನೆಯೊಳಗೆ ಹೋಗಲು ಮುಂದಾಗುತ್ತರೆ ಆದರೆ ರಾಜೋಪಾಧ್ಯೆ ಎಂಬ ಪುರೋಹಿತನು ಶಾಹು ಮಹಾರಜರನ್ನು ನೀವು ಶೂದ್ರರು ಅಡುಗೆ ಮನೆಯೊಳಗೆ ಬರಕೂಡದು ಬಂದರೆ ಅಡುಗೆ ಮನೆಯೆಲ್ಲಾ ಮೈಲಿಗೆಯಾಗುತ್ತದೆ ದಯವಿಟ್ಟು ಒಳಗೆ ಬರಬೇಡಿ ಎಂದು ಮಹಾರಜರನ್ನು ತಡೆಯುತ್ತಾನೆ. ಆಗ ಮಹಾರಜರು ಕೆಂಡಾಮಂಡಲವಾಗುತ್ತಾರೆ ಮಹರಾಜನಾದ ನನಗೆ ಜಾತಿನಿಂದನೆ ಮಾಡುತ್ತೀರ? ನಿಮಗೆ ಕೆಲಸ ಕೊಟ್ಟು, ಹಣಕೊಟ್ಟು, ಇರೋದಕ್ಕೆ ಮನೆಕೊಟ್ಟು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿರುವ ನನಗೆ ಜಾತಿನಿಂದನೆಯೇ? ಈ ಕ್ಷಣದಿಂದ ನೀನು ನನ್ನ ಆಸ್ಥಾನದಲ್ಲಿರಕೂಡದೆಂದು 06 ಮೇ1902 ರಂದು ಅವನನ್ನು ಸ್ಥಾನದಿಂದ ವಜಾ ಮಾಡುತ್ತಾರೆ.

ಶಾಹುರವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಲಂಡನ್ನಿಗೆ ತೆರಲಿರುತ್ತಾರೆ ಅಲ್ಲಿ ಅವರಿಗೆ ತಾವು ಅನುಭವಿಸಿದ ಕೆಲವು ಘಟನೆಗಳು ನೆನಪಿಗೆ ಬರುತ್ತವೆ ಅದಕ್ಕೆ ಅವರು ಒಂದು ತೀರ್ಮಾನ ಮಾಡುತ್ತಾರೆ ಅಲ್ಲಿಂದ ಒಂದು ಸುದ್ಧಿಯನ್ನು ಕಳುಹಿಸುತ್ತಾರೆ ಅದೇನೆಂದರೆ “ಶೂದ್ರರಿಗೆ 50% ಮೀಸಲಾತಿ” ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಮೀಸಲಾತಿಯೆಂಬ ಯೋಜನೆಯನ್ನು ಕಂಡುಹಿಡಿದ ಕೀರ್ತಿ ಶಾಹು ಮಹಾರಾಜರಿಗೆ ಸಲ್ಲಬೇಕು.

ಶಾಹು ಮಹಾರಾಜರು ಕಳುಹಿಸಿಕೊಟ್ಟ ಮೀಸಲಾತಿಯ ಸುದ್ಧಿ ಕೇಳಿ ಬ್ರಾಹ್ಮಣರಿಗೆ ಹೃದಯ ಬಡಿತವೇ ನಿಂತಂತಾಯಿತು, ಬಾಲಗಂಗಾದರ್ ತಿಲಕರಿಗಂತೂ ಅಥೀವಾ ಆತಂಕ ಉಂಟಾಯಿತು ಆದ್ದರಿಂದ ಮೀಸಲಾತಿ ವಿಷಯಕ್ಕೆ ಸಂಬಂದಿಸಿದಂತೆ ತಿಲಕರು ವಿರೋದವನ್ನು ವ್ಯಕ್ತಪಡಿಸುತ್ತಾರೆ.

ಮಹಾರಾಜರ ಮೀಸಲಾತಿಯ ವಿಚಾರವನ್ನು ಬಹುತೇಕ ಬ್ರಾಹ್ಮಣರು ವಿರೋಧ ಮಾಡುತ್ತಿರುತ್ತಾರೆ, ಬೇಸೆತ್ತ ಕೆಲವು ಗೂಂಡಗಳಿಂದ ಮಹಾರಾಜರನ್ನು ಕೊಲೆ ಮಾಡುವ ಪ್ರಯತ್ನವು ನಡೆಯುತ್ತದೆ. ಶಾಹುರವರಿದ್ದ ರೈಲಿಗೆ ಬಾಂಬನ್ನು ಸಹ ಇಡಲಾಗುತ್ತದೆ ಆದರೆ ಆ ಕೊಲೆಯ ಪ್ರಯತ್ನವು ವಿಫಲವಾಗಿಬಿಡುತ್ತದೆ.

ಒಮ್ಮೆ ಮಹಾರಾಜರು ಅರಮನೆಯ ಆವರಣದಲ್ಲಿ ಗಾಳಿ ಸಂಚಾರ (walking) ಮಾಡುತ್ತಿರುತ್ತಾರೆ ಆ ಸಮಯದಲ್ಲಿ ಗಣಪತಿರಾವ್ ಎಂಬ ಬ್ರಾಹ್ಮಣ ವಕೀಲ ಶಾಹುರವರನ್ನು ಕಾಣಲು ಬರುತ್ತಾರೆ ಮೀಸಲಾತಿಯ ಬಗ್ಗೆ ಚರ್ಚೆ ಮಾಡುತ್ತಾ ಅರ್ಹತೆಯಿಲ್ಲದವರಿಗೆಲ್ಲಾ ಉದ್ಯೋಗದಲ್ಲಿ, ಶಿಕ್ಷಣದಲ್ಲಿ ಹಾಗೂ ಎಲ್ಲಾ ರಂಗಗಳಲ್ಲೂ ನೀವು ಮೀಸಲಾತಿ ಕೊಟ್ಟರೆ ಪ್ರತಿಭೆಗೆ ದಕ್ಕೆಯುಂಟಾಗುವುದಿಲ್ಲವೇ? ಎಂದು ಮಹಾರಾಜರನ್ನು ಪ್ರಶ್ನಿಸುತ್ತಾನೆ. ಆಗ ಶಾಹು ಮಹಾರಾಜರು ಓ.. ನಿಮಗೆ ಆ ರೀತಿ ಅರ್ಥವಾಗಿದೆಯೇ ಬನ್ನಿ ನನ್ನ ಜೊತೆ ಎಂದು ಆ ವಕೀಲನನ್ನು ಕರೆದುಕೊಂಡು ಸಂಚಾರ(walk) ಮಾಡುತ್ತಾ ಮಾಡುತ್ತಾ ಅರಮನೆಯ ಆವರಣದಲ್ಲಿ ಕುದುರೆಗಳನ್ನು ಕಟ್ಟಿರುವ ಜಾಗಕ್ಕೆ ತಲುಪುತ್ತಾರೆ ಅಲ್ಲಿ ಕುದುರೆಗಳನ್ನು ಗುಂಪು ಗುಂಪುಗಳಾಗಿ ಮಾಡಿ ಮೇವನ್ನು ಹಾಕಲಾಗಿರುತ್ತದೆ ಇದನ್ನು ಗಮನಿಸಿದ ಮಹಾರಾಜರು ಯಾರಲ್ಲಿ ಈ ಕುದುರೆಗಳನ್ನು ಕಟ್ಟಿದವರು ಎಂದಾಗ ಸ್ಥಳದಲ್ಲೇ ಇದ್ದ ಕುದುರೆಗಳನ್ನು ನೋಡಿಕೊಳ್ಳುವವನು ನಾನೇ ಪ್ರಭು ಎನ್ನುತ್ತಾನೆ. ಆಗ ಮಹಾರಾಜರು ಅವನನ್ನು “ಏನಯ್ಯ ನಿನಗೆ ಬುದ್ಧಿ ಇದೆಯಾ? ಕುದುರೆಗಳನ್ನು ಏಕೆ ಈ ರೀತಿ ಗುಂಪುಗುಂಪುಗಳನ್ನಾಗಿ ವಿಂಗಡನೆ ಮಾಡಿ ಬೇರೆ ಬೇರೆ ಕಡೆ ಮೇವನ್ನಕಿದ್ದೀಯಾ? ಎಲ್ಲಾ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬಹುದಾಗಿತ್ತಲ್ಲವೇ? ಎಂದು ಪ್ರಶ್ನಿಸಿ ಜೊತೆಯಲ್ಲಿದ್ದ ವಕೀಲನನ್ನು ಕೇಳುತ್ತಾರೆ ಗಣಪತಿರಾವ್ ರವರೇ ನಾನು ಕೇಳಿದ್ದು ಸರಿ ತಾನೆ? ಎಂದಾಗ ಆ ವಕೀಲ ಹೌದು ಮಹಾರಾಜರೇ ನೀವು ಕೇಳಿದ್ದು ಸರಿಯಾಗಿದೆ ಅವನು ಆ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬೇಕಿತ್ತು ಎನ್ನುತ್ತಾನೆ. ಆಗ ಸೇವಕನು ಮಹಾರಾಜರ ಪ್ರಶ್ನೆಗಳನ್ನು ಉದ್ದೇಶಿಸಿ “ಮಹಾರಾಜರೇ ಈ ಕುದುರೆಗಳಲ್ಲಿ ಕೆಲವು ವಯಸ್ಸಾಗಿರುವ ಕುದುರೆಗಳಿವೆ, ಗಾಯಗಳಾಗಿ ಪೆಟ್ಟು ಮಾಡಿಕೊಂಡಿರುವ ಕುದುರೆಗಳಿವೆ, ಸಣ್ಣ ಪ್ರಾಯದ ಕುದುರೆಗಳಿವೆ ಹಾಗೂ ದಷ್ಟಪುಷ್ಟವಾದ ಬಲಿಷ್ಟವಾಗಿರುವ ಕುದುರೆಗಳಿವೆ ಈ ಎಲ್ಲಾ ಕುದುರೆಗಳನ್ನು ಒಂದೇ ಕಡೆ ಸೇರಿಸಿ ಮೇವನ್ನಾಕಿದರೆ ಯಾವ ಕುದುರೆಗಳಿಗೆ ಹೆಚ್ಚು ಶಕ್ತಿ ಇದೆಯೋ ಅಂದರೆ ದಷ್ಟಪುಷ್ಟವಾದ ಕುದುರೆಗಳು ಮೇವೆಲ್ಲಾ ತಿಂದು ಬಿಡುತ್ತವೇ ಆಗ ವಯಸ್ಸಾದ ಕುದುರೆಗಳಿಗೆ, ಗಾಯಗಳಾಗಿರುವ ಕುದುರೆಗಳಿಗೆ, ಸಣ್ಣ ಪ್ರಾಯದ ಕುದುರೆಗಳಿಗೆ ಮೇವು ಸಿಗದೇ ದುರ್ಬಲವಾಗಿ ಹಸಿವಿನಿಂದಲೇ ಸತ್ತು ಹೋಗುತ್ತವೇ ಆದ್ದರಿಂದ ವಯಸ್ಸಾದ ಕುದುರೆಗಳಿಗೆ ಒಂದು ಕಡೆ, ಸಣ್ಣ ಪ್ರಾಯದ ಕುದುರೆಗಳಿಗೆ ಒಂದು ಕಡೆ, ಗಾಯಗೊಂಡಿರುವ ಕುದುರೆಗಳಿಗೆ ಒಂದು ಕಡೆ, ಬಲಿಷ್ಟ ಕುದುರೆಗಳಿಗೊಂದು ಕಡೆ ಮೇವನ್ನಾಕಿದ್ದೇನೆ ಆಗ ಎಲ್ಲಾ ಕುದುರೆಗಳಿಗೂ ಮೇವು ಸಿಗುತ್ತದೆ” ಎಂದು ಉತ್ತರಿಸುತ್ತಾನೆ. ಆಗ ಆ ಬ್ರಾಹ್ಮಣ ವಕೀಲನಿಗೆ ಮೀಸಲಾತಿಯ ಬಗ್ಗೆ ಅರ್ಥವಾಗಿ “ಮಹಾರಾಜರೇ ದಯವಿಟ್ಟು ಕ್ಷಮಿಸಿ ಈಗ ನಿಮ್ಮ ಮೀಸಲಾತಿಯ ಬಗ್ಗೆ ನನಗೆ ಸಂಪೂರ್ಣವಾಗಿ ಅರ್ಥವಾಯಿತೆಂದು” ಅಲ್ಲಿಂದ ಒರಟುಹೋಗುತ್ತಾನೆ.

• ಶಾಹು ಮಹಾರಜರು ಅಸ್ಪೃಶ್ಯರಿಗೋಸ್ಕರ 18 ಪ್ರತ್ಯೇಕ ಶಾಲೆಗಳನ್ನು ಸ್ಥಾಪಿಸುತ್ತಾರೆ.

• 1908ರಲ್ಲಿ ವಿಧ್ಯಾಸಂಸ್ಥೆಯನ್ನು ಪ್ರಾರಂಭ ಮಾಡುತ್ತಾರೆ.

• 1896 ರಿಂದ 1912ರ ಅವಧಿಯಲ್ಲಿ ಶೂದ್ರರಿಗೆ 22, ಅಸ್ಪೃಶ್ಯರಿಗೆ 27 ಶಾಲೆಗಳನ್ನು ಸ್ಥಾಪಿಸುತ್ತಾರೆ.

• 1918 ರಲ್ಲಿ ಶೂದ್ರರಿಗೆ ಅರಿವು ಮತ್ತು ಜಾಗೃತಿ ಮೂಡಿಸಲು “ಮೂಕ ನಾಯಕ್” ಎಂಬ ಪತ್ರಿಕೆಯನ್ನು ಪ್ರಾರಂಭಿಸುತ್ತಾರೆ.

• 1918 ರಲ್ಲಿ ಮಹಾತ್ಮ ಜೋತಿಬಾಫುಲೆ ರವರ ಸತ್ಯಶೋಧಕ ಸಮಾಜವನ್ನು ಮುನ್ನಡೆಸಲು “ಶಾಹು ಸತ್ಯ ಶೋಧಕ ಸಮಾಜ”ವನ್ನು ಸ್ಥಾಪನೆ ಮಾಡುತ್ತಾರೆ.

1920 ಮಾರ್ಚ 27ರಂದು ಕೊಲ್ಲಾಪುರದ ಜನಗಳನ್ನು ಉದ್ದೇಶಿಸಿ ಮಾತನಾಡುತ್ತ ” ಮಹಾ ಜನಗಳೇ ನನ್ನ ಆಸ್ಥಾನ ಎಷ್ಟಿದೆಯೋ ಅಷ್ಟರಲ್ಲಿ ಶೂದ್ರರಿಗಾಗಿ ಅಸ್ಪೃಷ್ಯರಿಗಾಗಿ ಎಲ್ಲಾವನ್ನು ಮಾಡಿದ್ದೇನೆ ಒಂದು ವೇಳೆ ನಾನು ಇಡೀ ಭಾರತಕ್ಕೆ ಮಹಾರಾಜನಾಗಿದ್ದರೆ ದೇಶದಲ್ಲಿರುವ ಎಲ್ಲಾ ಶೋಷಿತರನ್ನು ಉದ್ದರಿಸುತ್ತಿದ್ದೆ ಆದರೆ ನನ್ನ ಆಸ್ಥಾನ ಕೇವಲ ಕೊಲ್ಲಾಪುರಕ್ಕೆ ಮಾತ್ರ ಸೀಮಿತವಾಗಿರುವ ಕಾರಣದಿಂದ ಅದು ಅಸಾಧ್ಯವಾಗಿದೆ”. ಆದರೆ, ಇನ್ನುಮುಂದೆ “ಅಖಿಲ ಭಾರತ ಮಟ್ಟದಲ್ಲಿ ಬಡವರನ್ನು, ಶೋಷಿತರನ್ನು, ಅಸ್ಪೃಷ್ಯರನ್ನು ಉದ್ದರಿಸಲು ಒಬ್ಬ ಮಹಾನ್ ನಾಯಕ, ದೇಶ-ವಿದೇಶಗಳಲ್ಲಿ ಶಿಕ್ಷಣವನ್ನು ಪಡೆದ ವಿಧ್ಯಾವಂತ, ಬುದ್ಧಿವಂತ, ಮುಂದಿನ ರಾಷ್ಟ್ರೀಯ ನಾಯಕನನ್ನು ಈ ದಿನ ನಿಮಗೆಲ್ಲಾ ಪರಿಚಯಿಸುತ್ತೇನೆ ನೀವೆಲ್ಲಾ ಅವರಿಗೆ ಬೆಂಬಲಕೊಟ್ಟರೆ ಇಡೀ ದೇಶವನ್ನೇ ಬದಲಾಯಿಸತ್ತಾರೆ, ಬಹುಜನರಿಗೋಸ್ಕರ ಹೊಸ ಚರಿತೆಯನ್ನೇ ಸೃಷ್ಟಿಸುತ್ತಾರೆ” ಎಂದು ಆ ವ್ಯಕ್ತಿಯನ್ನು ಪರಿಚಯಿಸುತ್ತಾರೆ ಆ ವ್ಯಕ್ತಿಯೇ ಮಹಾ ಮಾನವತವಾದಿ, ವಿಶ್ವ ಮಾನವ, ರಾಷ್ತ್ರೀಯತಾವಾದಿ, ಕಾನೂನು ತಜ್ನ, ರಾಜಕೀಯ ನೇತಾರ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತ, ಶ್ರೇಷ್ಟ ಇತಿಹಾಸಗಾರ, ಮಹಾದಾರ್ಶನಿಕ, ಅಪ್ರತಿಮ ಚಿಂತಕ, ಮಾನವಶಾಸ್ತ್ರಜ್ನ, ಖ್ಯಾತ ಅರ್ಥಶಾಸ್ತ್ರಜ್ನ, ಸಮೃದ್ದ ಬರಹಗಾರ, ಕ್ರಾಂತಿಕಾರಿ, ಅಸಾಮಾನ್ಯ ವಾಕ್ಪಟು, ಅಪ್ರತಿಮ ನಾಯಕ, ಬೌದ್ಧ ಧರ್ಮದ ಪುನರುಜ್ಜೀವಕ, ಭಾರತ ರತ್ನ, ಸಂವಿಧಾನ ಶಿಲ್ಪಿ, ಪರಮಪೂಜ್ಯ “ಡಾ. ಬಾಬಾ ಸಾಹೇಬ್ ಅಂಬೇಡ್ಕರ್” ರವರು.

-ಅಜೀತ ಮಾದರ

ಸುದ್ದಿದಿನ.ಕಾಂ|ವಾಟ್ಸಾಪ್|998675401

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ2 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ3 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ3 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ3 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ3 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ5 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ5 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ5 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ7 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ1 week ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending